Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೇ 20, 2024 ರಂದು ವಿಜಯಪುರದ ಸೈಬರ್ ಪೊಲೀಸ್ ಠಾಣೆಯಲ್ಲಿ ಬಬಲೇಶ್ವರ ತಾಲೂಕಿನ ತಿಗಣಿಬಿದರಿ ಗ್ರಾಮದ ಸುರೇಶ್ ಅಥಣಿ ಎಂಬುವವರು ವಂಚನೆ ಪ್ರಕರಣದ ದೂರು ದಾಖಲಿಸಿದ್ದರು.ಆರೋಪಿಯು ಎಸ್.ಪಿ. ಲಕ್ಷ್ಮಣ್ ನಿಂಬರಗಿ ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ಹಾಗೂ ಇಮೇಲ್ ಐಡಿ (nimbargilaxman29@gmail.com) ಸೃಷ್ಟಿಸಿದ್ದನು. ಈ ನಕಲಿ ಐಡಿ ಮೂಲಕ ದೂರುದಾರರಿಗೆ ಸಂಪರ್ಕಿಸಿ, PWD ಇಲಾಖೆಯಲ್ಲಿ SDC ನೌಕರಿ ಕೊಡಿಸುವುದಾಗಿ ನಂಬಿಸಿ ₹5,04,600 ಹಣವನ್ನು ಪಡೆದು ವಂಚಿಸಿದ್ದನು. ಈ ಕುರಿತು ಪ್ರಕರಣ ದಾಖಲಾಗಿತ್ತು, ಪ್ರಕರಣದ ಬೆನ್ನತ್ತಿದ CEN ಪೊಲೀಸರು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ದುರದುಂಡಿ ಗ್ರಾಮದ ನಿವಾಸಿ ಹನುಮಂತ ಭಜಂತ್ರಿ ಎಂಬಾತನನ್ನು ಬಂಧಿಸಿದ್ದಾರೆ.ಆರೋಪಿಯು ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಬಂಧಿತ ಆರೋಪಿಯು ಇದೇ ರೀತಿ ಹುಬ್ಬಳ್ಳಿ, ಶಿವಮೊಗ್ಗ ಮತ್ತು ಇತರೆಡೆಗಳಲ್ಲೂ ನಕಲಿ ಪ್ರೊಫೈಲ್ ಸೃಷ್ಟಿಸಿ ವಂಚಿಸಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ. ಇತರ ಅಧಿಕಾರಿಗಳ ಹೆಸರನ್ನೂ ಬಳಸಿಕೊಂಡು ವಂಚನೆ ಮಾಡಿದ್ದಾನೆಯೇ ಎಂಬ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಪ್ರಾಮಾಣಿಕ, ನಿಷ್ಪಕ್ಷಪಾತ ಹಾಗೂ ಸಮಾಜಮುಖಿ ಸೇವೆ ಸಲ್ಲಿಸುತ್ತಿರುವ ವಿಜಯಪುರದ ಹಿರಿಯ ಪತ್ರಕರ್ತ ದೀಪಕ್ ಶಿಂತ್ರೆ ಅವರಿಗೆ ಸೊಲಾಪುರದ ಸ್ಟಾರ್ ನ್ಯೂಸ್ ಚಾನೆಲ್ ವತಿಯಿಂದ ನೀಡಲಾಗುವ “ಪತ್ರಕರ್ತ ಭೂಷಣ” ಪ್ರಶಸ್ತಿ ಘೋಷಿಸಲಾಗಿದೆ.ದೀಪಕ್ ಶಿಂತ್ರೆ ಅವರು ಹಲವು ವರ್ಷಗಳಿಂದ ಕರ್ನಾಟಕ ರಾಜ್ಯದಲ್ಲಿ ವಾಸವಿದ್ದು, ಮರಾಠಿ ಪತ್ರಿಕೋದ್ಯಮಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ಕರ್ನಾಟಕದ ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಜಿಲ್ಲೆಯ ವಿವಿಧ ವಿಷಯಗಳ ಕುರಿತು ಅವರು ನಿರಂತರವಾಗಿ ವರದಿಗಾರಿಕೆ ನಡೆಸಿದ್ದಾರೆ. ಮರಾಠಿ ದಿನಪತ್ರಿಕೆಗಳಿಗೆ ಸುದ್ದಿಗಳನ್ನು ಪೂರೈಸುವ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಕರ್ನಾಟಕದ ಸ್ವಾಭಿಮಾನಕ್ಕೆ ಸದಾ ಗೌರವ ನೀಡುತ್ತಾ ಕಾರ್ಯನಿರ್ವಹಿಸಿದ್ದಾರೆ.ವಿಶೇಷವಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿ ಭಾಗದ ಸೂಕ್ಷ್ಮ ವಿಚಾರಗಳು, ಭಾಷಾ ಸಂಬಂಧಿತ ವಿಷಯಗಳು ಹಾಗೂ ಜನರ ಸಮಸ್ಯೆಗಳ ಕುರಿತು ವರದಿಗಾರಿಕೆ ಮಾಡುವಾಗ ಅತ್ಯಂತ ಸಂಯಮ, ಸಮತೋಲನ ಮತ್ತು ಜವಾಬ್ದಾರಿಯುತ ನಿಲುವು ತಾಳಿದ್ದಾರೆ.ಅವರ ದೀರ್ಘಕಾಲೀನ ಪತ್ರಿಕೋದ್ಯಮ ಸೇವೆ, ಸಾಮಾಜಿಕ ಕಳಕಳಿ ಹಾಗೂ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ತಾಲೂಕಾ ಛಾಯಾಚಿತ್ರ ಗ್ರಾಹಕರ ಸಂಘ (ರಿ), ಜಮಖಂಡಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಗೃತಿ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಶುಕ್ರವಾರ ಬೆಳಿಗ್ಗೆ 10.30 ಗಂಟೆಗೆ ಹುಲ್ಯಾಳ ಗ್ರಾಮದ ಶ್ರೀ ಗುರು ಶಂಭುಲಿಂಗೇಶ್ವರ ಮಾಧ್ಯಮಿಕ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮವು ರೇಣುಕಸದಾಶಿವ ಶಿವಾಚಾರ್ಯ ಮಹಾಸ್ವಾಮಿಗಳು, ಯೋಗಾಶ್ರಮ ಹುಲ್ಯಾಳ ಅವರ ಸಾನಿಧ್ಯದಲ್ಲಿ ಹಾಗೂ ಹರ್ಷಾನಂದ ಮಹಾಸ್ವಾಮಿಗಳು, ಗುರು ದೇವಾಶ್ರಮ ಹುಲ್ಯಾಳ ಅವರ ಸಾನಿಧ್ಯದಲ್ಲಿ ನಡೆಯಲಿದೆ.ಕಾರ್ಯಕ್ರಮವನ್ನು ವಿಶ್ರಾಂತ ತಹಶೀಲ್ದಾರರಾದ ಬಿ.ಎಲ್. ಗೋಠೆ ಅವರು ಉದ್ಘಾಟಿಸಲಿದ್ದು, ಜಮಖಂಡಿ ತಾಲೂಕಾ ಛಾಯಾಚಿತ್ರಗ್ರಾಹಕರ ಸಂಘದ ಅಧ್ಯಕ್ಷರಾದ ಹಾಸಿಮ್ ಅ. ಜಮಖಂಡಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಶ್ರೀಮತಿ ಎಸ್.ಎಂ. ಆನಿ ಮುಖ್ಯೋಪಾಧ್ಯಾಯರು, ಶ್ರೀ ಗುರು ಶಂಭುಲಿಂಗೇಶ್ವರ ಮಾಧ್ಯಮಿಕ ಶಾಲೆ, ಶಿವಪ್ಪ ಸೋರಗಾಂವಿ ಅಧ್ಯಕ್ಷರು, ಸುರೇಶ ಶಂ. ಕಡಪಳ್ಳಿ ಪಿ.ಡಿ.ಓ. ಹಾಗೂ ಉಪಾಧ್ಯಕ್ಷರಾದ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಶ್ರೀಶೈಲ ಭೂಮಾರ ಅಧ್ಯಕ್ಷರು, ತಾಲೂಕಾ ರೈತ ಸಂಘ, ಗುರುನಾಥ ಸುತಾರ ವಿಶ್ರಾಂತ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ, ಪ್ರಥಮ ಬಾರಿಗೆ ವಿಜಯಪುರಕ್ಕೆ ಆಗಮಿಸುತ್ತಿರುವ ಸಚಿವ ಎಂ. ಬಿ. ಪಾಟೀಲರಿಗೆ ವಿಜಯಪುರ ಜಿಲ್ಲೆಯ ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರ ವತಿಯಿಂದ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ.ದಿ.6 ಶನಿವಾರ ನಗರದ ಪಾಟೀಲ ಗಾರ್ಡೇನಿಯಾದಲ್ಲಿ ಬೆ.೧೧ ಗಂ. ನಡೆಯಲಿರುವ ಸಮಾರಂಭದಲ್ಲಿ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿತೈಷಿಗಳು ಭಾಗವಹಿಸಿ ಸಚಿವ ಎಂ ಬಿ ಪಾಟೀಲ ಅವರನ್ನು ಸನ್ಮಾನಿಸಲಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನ್ಯಾ|| ಬ್ರಿಜೇಶಕುಮಾರ ನೇತೃತ್ವದ ೨ನೇ ನ್ಯಾಯಾಧೀಕರಣದ ತೀರ್ಪಿನಂತೆ ಆಲಮಟ್ಟಿ ಲಾಲ್ ಬಹದ್ದೂರ ಶಾಸ್ತ್ರಿ ಜಲಾಶಯದ ನೀರಿನ ಮಟ್ಟವನ್ನು ೫೧೯.೬೦ಮೀ ದಿಂದ ೫೨೪.೨೫೬ಮೀಗೆ ನೀರು ನಿಲ್ಲಿಸಲು ಗೇಟ್ ಅಳವಡಿಸುವಂತೆ ಹಾಗೂ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸುವದು ನೀರಿನ ಹಂಚಿಕೆಯಲ್ಲಿ ಅವಳಿ ಜಿಲ್ಲೆಯ ರೈತರಿಗೆ ಆದ ಅನ್ಯಾಯದ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ರೈತ ಮುಖಂಡರಾದ ಅರವಿಂದ ಕುಲಕರ್ಣಿ ಹಾಗೂ ಮಹಾದೇವಪ್ಪ ತೇಲಿ ತಿಳಿಸಿದ್ದಾರೆ.ಗುರುವಾರದಂದು ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಕರೆದಿದ್ದ ಮಾಧ್ಯಮ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖಂಡರು, ವಿಜಯಪುರ ಜಲ್ಲೆಯಲ್ಲಿ ಐದು ನದಿಗಳು ಹರಿದಿದ್ದು ಪಂಚನದಿಗಳ ಬೀಡು ೨ನೇ ಪಂಜಾಬ ಎಂದು ಕರೆಯಲಾಗುತ್ತಿದೆ. ಆದರೆ ಇದು ಕೇವಲ ಪ್ರತಿಷ್ಠೆಗೋಸ್ಕರ ಇದೊಂದು ವಿಷಯ ಹೇಳಿಕೊಳ್ಳಲು ಸುಲಭವಾಗಿದೆ. ಆದರೆ ವಾಸ್ತವಿಕವಾಗಿ ಜಿಲ್ಲೆಯ ಇನ್ನು ಕೆಲವು ಭಾಗಗಳಲ್ಲಿ ಕುಡಿಯಲು ಕೂಡಾ ನೀರು ಇಲ್ಲದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಕೃಷಿಗೆ ನೀರು ಕೊಡುವುದಂತು ದೂರದ ಮಾತು, ಕುಡಿಯಲು ಹಾಗೂ ಬೆಳೆಗಳಿಗೆ…

Read More

ಉದಯರಶ್ಮಿ ದಿನಪತ್ರಿಕೆ ​ವಿಜಯಪುರ: ೨೦೨೬-೨೭ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಗಳ ೬ನೇ ತರಗತಿಯಿಂದ ೯ನೇ ತರಗತಿಯವರೆಗೆ ಪ್ರವೇಶಾತಿಗಾಗಿ ಜೂನ್ ೭ರಂದು ಪರೀಕ್ಷೆ ನಡೆಯಲಿದೆ. ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಮೌಲಾನಾ ಆಜಾದ್ ಮಾದರಿ ಶಾಲೆ ನಂ-೦೧, ಕುಂಬಾರ ಗಲ್ಲಿ, ಹಾಗೂ ಮೌಲಾನಾ ಆಜಾದ್ ಮಾದರಿ ಶಾಲೆ ನಂ-೦೨, ಟೇಕಡೆ ಗಲ್ಲಿ, ಶಾಲೆಗಳಿಂದಲೇ ನೇರವಾಗಿ ಪ್ರವೇಶ ಪತ್ರಗಳನ್ನು ಪಡೆದುಕೊಳ್ಳಬಹುದಾಗಿದೆ​ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೦೮೩೫೨-೨೯೫೫೨೩ ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ವಿವಿಧ ಸಾಂಸ್ಕೃತಿಕ ಉತ್ಸವ ಹಾಗೂ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಕಲಾ ತಂಡಗಳು ಮತ್ತು ಕಲಾವಿದರನ್ನು ಎಂಪೆನ್ನೆಲ್ ಮಾಡುವ ಸಲುವಾಗಿ ಜಿಲ್ಲೆಯ ಕಲಾವಿದರು ನಿಗದಿತ ಅರ್ಜಿ ನಮೂನೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಅರ್ಜಿ ಸಲ್ಲಿಸಬಹುದಾಗಿದೆ.ಭಾರತೀಯ ಸಂಸ್ಕೃತಿ ಸಂಬಂಧಗಳ ಇಂಡಿಯನ್ ಕೌನ್ಸಿಲ್ ಕಲ್ಚರಲ್ ರಿಲೇಶನ್ಸ್ (ಐಸಿಸಿಆರ್) ಹಾಗೂ ಕರ್ನಾಟಕ ಸರ್ಕಾರದ ನಡುವೆ ಸಂಸ್ಕೃತಿ,ಕಲೆ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದಂತೆ ಒಡಂಬಡಿಕೆಯನ್ನು ಮಾಡಿಕೊಳ್ಳಲಾಗಿದೆ.ಹಾಗಾಗಿ ಐಸಿಸಿಆರ್ ಸಂಸ್ಥೆಯ ವತಿಯಿಂದ ರಾಜ್ಯ ಸರ್ಕಾರದ ಸಾಂಸ್ಕೃತಿಕ ಕಲಾತಂಡಗಳು ಹಾಗೂ ಕಲಾವಿದರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ವಿವಿಧ ಸಾಂಸ್ಕೃತಿಕ ಉತ್ಸವ ಹಾಗೂ ಕಾರ್ಯಕ್ರಮಗಳಿಗೆ ಕಳುಹಿಸಿಕೊಡಲಾಗುವುದು. ಅದಕ್ಕಾಗಿ ಜಿಲ್ಲೆಯ ಕಲಾತಂಡಗಳು ಹಾಗೂ ಕಲಾವಿದರನ್ನು ಎಂಪೆನ್ನೆಲ್ ಮಾಡುವುದರೊಂದಿಗೆ ಅವರ ಪ್ರತಿಭೆಯನ್ನು ಪ್ರಚುರಪಡಿಸಲಾಗುವುದು. ಹಾಗಾಗಿ ಜಿಲ್ಲೆಯ ಕಲಾವಿದರು ಹಾಗೂ ಕಲಾತಂಡಗಳು ನಿಗದಿತ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ, ಸ್ಟೇಷನ್ ರಸ್ತೆ, ವಿಜಯಪುರ…

Read More

ಎಸ್‌ಐಆರ್ ಪ್ರಕ್ರಿಯೆ ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಲು ಸಕಲ ಸಿದ್ಧತೆ | ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ. ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಶೇ.೯೦ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣಗೊಳಿಸಲಾಗಿದೆ. ಜಿಲ್ಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ಅವರು ಹೇಳಿದರು.ನಗರದ ಜಿಲ್ಲಾ ಪಂಚಾಯತಿಯ ಮಿನಿ ಸಭಾಂಗಣದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಸಾರ್ವಜನಿಕರಲ್ಲಿ ಯಾವುದೇ ಗೊಂದಲಗಳಾಗದಂತೆ ಪಾರದರ್ಶಕವಾಗಿ ಎಸ್.ಐ.ಆರ್ ಪ್ರಕ್ರಿಯೆ ನಡೆಲಾಗುವುದು. ಅರ್ಹ ಯಾವೊಬ್ಬ ಮತದಾರನೂ ಪಟ್ಟಿಯಿಂದ ಹೊರಗುಳಿಯಬಾರದು. ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎಂದು ಜಿಲ್ಲಾಧಿಕಾರಿ ಹೇಳಿದರು. ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ೨೦೦೨ರ ಮತದಾರರ ಪಟ್ಟಿಯನ್ನು ಮಾನದಂಡವಾಗಿಟ್ಟುಕೊಂಡು ಪ್ರಸ್ತುತ ಇರುವ ೨೦೨೫ರ ಮತದಾರರ ಪಟ್ಟಿಯೊಂದಿಗೆ ಹೋಲಿಕೆ ಹಾಗೂ ಮ್ಯಾಪಿಂಗ್ ಪ್ರಕ್ರಿಯೆ ನಡೆಸಲಾಗಿದೆ ಎಂದರು.ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜಿಲ್ಲೆಯಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ಎಚ್.ಡಿ.ಕೋಟೆ: ಮಣ್ಣು, ನೀರು, ರೈತ ಉಳಿಯಬೇಕು. ಮನುಷ್ಯನಿಗೆ ಉತ್ತಮ ಆರೋಗ್ಯ ಸಿಗಬೇಕೆಂಬ ನಿಟ್ಟಿನಲ್ಲಿ ಸಿರಿಧಾನ್ಯ ಪೌಡರ್ ನ ಮಹತ್ವವನ್ನು ಜನರಿಗೆ ತಿಳಿಸುವ ಕೆಲಸವನ್ನು ಮಾಡುತ್ತಿದ್ದೆವೆ ಎಂದು ಉದ್ಯಮಿ ಮಿಲ್ ನಾಗರಾಜ್ ಹೇಳಿದರು.ತಾಲೂಕಿನ ಪಡುಕೋಟೆಯಲ್ಲಿ (ಇಂದಿರಾನಗರ) ಸಮತಾ ಟ್ರಸ್ಟ್ (ರಿ), ನಂಬಿಕೆ ಫುಡ್ ಪ್ರಾಡಕ್ಟ್ ಪ್ರೈವೇಟ್ (ಲಿ), ಸ್ವಾರಲಯ ಮ್ಯೂಸಿಕಲ್ ಟ್ರಸ್ಟ್, ಗಾನವಿ ಮೆಡಿಕಲ್ ಅಂಡ್ ಜನರಲ್ ಇಂದಿರಾನಗರ ಸಂಯುಕ್ತಾಶ್ರಯದಲ್ಲಿ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನದ ಅಂಗವಾಗಿ ಆರೋಗ್ಯ ತಪಾಸಣೆ ಶಿಬಿರ ಹಾಗೂ ನಂಬಿಕೆ ಸಿರಿಧಾನ್ಯ ಪೌಡರ್ (ಬಾದಾಮಿ ಹಾಲು) ಮಹತ್ವವನ್ನು ಕುರಿತು ಮಾತನಾಡಿದರು.ಮನುಷ್ಯ ದಿನನಿತ್ಯ ಸೇವಿಸುತ್ತಿರುವ ಆಹಾರ ವಿಷಪೂರಿತವಾಗಿದ್ದು ಚಿಕ್ಕ ವಯಸ್ಸಿಗೆ ಹಲವಾರು ರೋಗಗಳು ಬರುತ್ತಿವೆ. ಕಡಿಮೆ ಅವಧಿಯಲ್ಲಿ ಹೆಚ್ಚಿನ ಇಳುವರಿ ಆಸೆಗಾಗಿ ಬಿತ್ತನೆ ಬೀಜಗಳಿಗೆ ರೈತರು ರಾಸಾಯನಿಕ ಗೊಬ್ಬರ ಹಾಗೂ ಔಷಧಿಗಳನ್ನು ಸಿಂಪಡಿಸುತ್ತಿದ್ದಾರೆ. ಆದರೆ ನಮ್ಮ ನಂಬಿಕೆ ಸಿರಿಧಾನ್ಯ ಪೌಡರ್ ನಲ್ಲಿ 9 ತರಹದ ನೈಸರ್ಗಿಕ ಧಾನ್ಯಗಳನ್ನ ಬಳಸಿ ಪೌಡರ್ ಅನ್ನು ತಯಾರಿಸುತ್ತಿದ್ದು ಇದು ಆರೋಗ್ಯದ…

Read More