Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ:. ನಗರದ ಅಥಣಿ ರಸ್ತೆಯ ಅಲ್-ಅಮೀನ ಆಸ್ಪತ್ರೆಯ ಎದುರಿಗೆ ಎನ್.ಜಿ,ಓ ಕಾಲನಿಯ ಜೈ ಶ್ರೀ ಆಂಜನೇಯ ದೇವಸ್ಥಾನದ ೬ನೇಯ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ಜ.೧೬ ರಿಂದ ಜ.೨೨ ರವರೆಗೆ ಮುಂಜಾನೆ ೭ ಗಂಟೆಗೆ ನವರಸಪುರದ ಎಲ್ಲ ಬಡಾವಣೆಗಳಲ್ಲಿ ಜಮಖಂಡಿ ಓಲೆಮಠದ ಶ್ರೀ ಆನಂದ ದೇವರು ಇವರಿಂದ (ದುಶ್ಚಟಗಳ ನಿರ್ಮೂಲನೆ) ಸದ್ಭಾವನಾ ಯಾತ್ರೆ ಹಾಗೂ ರುದ್ರಾಕ್ಷಿಧಾರಣ ಕಾರ್ಯಕ್ರಮ ಜರುಗಲಿದೆ.ಪ್ರತಿ ದಿನ ಸಂಜೆ ೬ ಗಂಟೆಗೆ ಜಮಖಂಡಿಯ ಬಸವರಾಜೇಂದ್ರ ಶರಣರು ಇವರಿಂದ “ಬಸವಾದಿ ಶರಣರ ಜೀವನ-ಮೌಲ್ವಿಕ ಸಂದೇಶಗಳು” ಹಾಗೂ ವಿಜಯಪುರದ ಶಾರದಾಮಾತಾ ಆಶ್ರಮದ ಕೃಪಾಮಯಿ ಮಾತೆ ಇವರಿಂದ “ಸಾರ್ಥಕ ಬದುಕಿಗೆ ಅಧ್ಯಾತ್ಮಿಕ ಚಿಂತನೆಗಳು” ವಿಷಯ ಕುರಿತು ಪ್ರವಚನ ನಡೆಯಲಿದೆ.ಈ ಸದ್ಭಾವನಾ ಯಾತ್ರೆ ಮತ್ತು ಪ್ರವಚನದಲ್ಲಿ ನವರಸಪುರದ ವಿವಿಧ ಬಡಾವಣೆಗಳ ಹಿರಿಯರು, ಮಹಿಳೆಯರು, ಮಕ್ಕಳು ಭಾಗವಹಿಸಲಿದ್ದಾರೆ ಎಂದು ಆಂಜನೇಯ ದೇವಸ್ಥಾನದ ಅಧ್ಯಕ್ಷ ಸಂತೋಷ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ರಚನಾತ್ಮಕ ಸಮಾರಂಭಗಳನ್ನು ಏರ್ಪಡಿಸುವ ಮೂಲಕ ಪುಣ್ಯಸ್ಮರಣೋತ್ಸವದ ಮೌಲ್ಯವನ್ನು ಹೆಚ್ಚಿಸಬೇಕೆನ್ನುವ ಉದ್ದೇಶದಿಂದ ಜ೧೯, ೨೦, ೨೧ ರಂದು ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಕುಂಟೋಜಿ ಸಂಸ್ಥಾನ ಭಾವೈಕ್ಯತಾ ಹಿರೇಮಠದ ಡಾ.ಚನ್ನವೀರ ಶಿವಾಚಾರ್ಯರು ನುಡಿದರು.ಪಟ್ಟಣದ ಹುಡ್ಕೋ ಬಡಾವಣೆಯಲ್ಲಿರುವ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಪ್ರಭುಗೌಡ ದೇಸಾಯಿ ಅವರ ನಿವಾಸದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದರು.ಲಿಂ. ಹಾನಗಲ್ಲ ಕುಮಾರಸ್ವಾಮಿಗಳು, ತುಮಕೂರಿನ ಲಿಂ. ಡಾ.ಶಿವಕುಮಾರ ಸ್ವಾಮಿಗಳು, ವಿಜಯಪುರದ ಲಿಂ. ಸಿದ್ದೇಶ್ವರ ಮಹಾಸ್ವಾಮಿಗಳು ಮತ್ತು ಮಡಿಕೇಶ್ವರದ ಲಿಂ. ಚನ್ನಣ್ಣ ದೇಸಾಯಿ ಇವರ ಸ್ಮರಣಾರ್ಥ ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಇಲ್ಲಿ ಯಾವುದೇ ರಾಜಕೀಯ ಹಾಗೂ ಸ್ವ-ಇಚ್ಛಾಸಕ್ತಿ ಇರುವದಿಲ್ಲ. ಬೇರೆ ಯಾರ ವೈಭವೀಕರಣವೂ ಇರಲ್ಲ. ಈ ಕಾರ್ಯಕ್ರಮಗಳು ಧಾರ್ಮಿಕ ಮತ್ತು ಆಧ್ಯಾತ್ಮಿಕತೆಯಿಂದ ಕೂಡಿರಲಿದ್ದು, ಪ್ರತಿಯೊಬ್ಬರೂ ಭಾಗಿಯಾಗಿ ಯಶಸ್ವಿಗೊಳಿಸುವಂತೆ ಕರೆ ನೀಡಿದರು.ಜಿಲ್ಲಾ ಭಾಜಪಾ ನಿಕಟಪೂರ್ವ ಅಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಅವರು ಮಾತನಾಡಿ, ತಮ್ಮ ತಂದೆಯವರ ಪುಣ್ಯಸ್ಮರಣೆಯನ್ನು ಕೇವಲ ಒಂದು ತಾಸು ಅಥವಾ ಒಂದು ದಿನಕ್ಕೆ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಮಹಿಳೆಯರನ್ನು ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ನಿವೃತ್ತ ಶಿಕ್ಷಕಿ ಮಹಾದೇವಿ ಕಂಠಿ ಹೇಳಿದರು.ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರದಲ್ಲಿ ಮಾತೃ ಭಾರತಿ ಮಹಿಳಾ ಘಟಕದಲ್ಲಿ ವಿದ್ಯಾ ಭಾರತಿ ಸೂಚಿಸಿದ ಪ್ರಕಾರ ಆಯೋಜಿಸಿರುವ ಸಪ್ತ ಶಕ್ತಿ ಸಂಗಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಗಿ ಅವರು ಮಾತನಾಡಿದರು.ಭಗವದ್ಗೀತೆಯ ೧೦ನೇ ಅಧ್ಯಾಯದ ೩೪ನೇ ಶ್ಲೋಕದಲ್ಲಿ ಹೇಳಿರುವಂತೆ ಒಬ್ಬ ಮಹಿಳೆಯಲ್ಲಿ ಕೀರ್ತಿ, ಐಶ್ವರ್ಯ, ವಾಕ್ ಶಕ್ತಿ, ಸ್ಮರಣ ಶಕ್ತಿ, ಬುದ್ಧಿಶಕ್ತಿ, ದೃಢತೆ ಮತ್ತು ತಾಳ್ಮೆ ಎಂಬ ಏಳು ಸದ್ಗುಣಗಳು ಅಡಗಿದ್ದು ಅದನ್ನು ಜಾಗ್ರತಗೊಳಿಸುವ ಕೆಲಸವಾಗ ಬೇಕಾಗಿದೆ. ನೂಲಿನಂತೆ ಸೀರೆ, ತಾಯಿಯಂತೆ ಮಗಳು ಎನ್ನುವ ಗಾಧೆಮಾತನ್ನು ನೋಡಿದಾಗ ಸಂಸ್ಕಾರ ಪ್ರವಹಿಸುವಲ್ಲಿ ಮಾತೆಯ ಪಾತ್ರವೆ ಮುಖ್ಯವಾಗಿದೆ. ಸಮಾಜ ವ್ಯವಸ್ಥೆಯಲ್ಲಿ ಸ್ತ್ರೀ ಯು ಪ್ರಧಾನವಾಗಿರುವುದನ್ನು ಪುರಾಣದಿಂದ ಹಿಡಿದು ಇತಿಹಾಸದ ಪುಟಪುಟಗಳನ್ನ ತೆಗೆದುನೋಡುತ್ತಾ ಬಂದರೆ ಸಾಕಷ್ಟು ನಿದರ್ಶನಗಳು ದೊರೆಯುತ್ತದೆ. ಅದನ್ನು ನಾವು ತಿಳಿದುಕೊಂಡು ನಮ್ಮ ಮನೆಯ ಮಕ್ಕಳಿಂದ ಹಿಡಿದು ಸಮಾಜ ತಿದ್ದುವ ಕಾರ್ಯ ಮಾಡಬೇಕಾಗಿದೆ ಎಂದರು.ಆಂಗ್ಲ…
ಇಂಡಿ ಬಂಗಾರ ಆಭರಣಗಳ ತಯಾರಕರು ಹಾಗೂ ಮಾರಾಟಗಾರರ ಸಂಘದ ಅಧ್ಯಕ್ಷ ಸೋಮಶೇಖರ ಬಿರಾದಾರ ಆರೋಪ ಉದಯರಶ್ಮಿ ದಿನಪತ್ರಿಕೆ ಇಂಡಿ: ಕಾನೂನನ್ನು ರಕ್ಷಿಸಬೇಕಾದ ಪೊಲೀಸರೇ ಭಕ್ಷಕರಾಗುತ್ತಿದ್ದಾರೆ, ಸುಖಾ ಸುಮ್ನೆ ಬಂಗಾರ ಅಂಗಡಿಗಳ ಮಾಲೀಕನ ಮೇಲೆ ಸಿಂದಗಿ ಹಾಗೂ ಆಲಮೇಲ ಪೊಲೀಸರು ಹಲ್ಲೆ ನಡೆಸಿ ಯುವಕನ ಹಲ್ಲು ಮುರಿದಿದ್ದಾರೆ. ಮಾಡದ ತಪ್ಪನ್ನು ಮಾಡಿದ್ದೇನೆ ಒಪ್ಪಿಕೋ ಎಂದು ಧಮ್ಕಿ ಹಾಕುತ್ತಿದ್ದಾರೆ ಎಂದು ಇಂಡಿ ಬಂಗಾರ ಆಭರಣಗಳ ತಯಾರಕರು ಹಾಗೂ ಮಾರಾಟಗಾರರ ಸಂಘದ ಅಧ್ಯಕ್ಷ ಸೋಮಶೇಖರ ಬಿರಾದಾರ ಆರೋಪಿಸಿದರು.ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪೊಲೀಸರು ಮಾಹಿತಿ ನೀಡದೆ ನೋಟಿಸ್ ಜಾರಿಗೊಳಿಸದೆ ತಮ್ಮ ಸಮವಸ್ತ್ರದಲ್ಲಿಯೂ ಬರದೆ ಖಾಸಗಿ ವಾಹನದಲ್ಲಿ ಬಂದು ಒಬ್ಬ ಬಂಗಾರ ಅಂಗಡಿಯ ಮಾಲೀಕನನ್ನು ಬಾಯಿಗೆ ಬಂದಂತೆ ಅವಾಚ್ಯ ಶಬ್ದಗಳಿಂದ ನಂಬಿಸಿದ್ದಲ್ಲದೆ ತಮಗೆ ಮನಬಂದಂತೆ ಥಳಿಸಿದ್ದಾರೆ. ಕಳ್ಳತನದ ಬಂಗಾರ ತೆಗೆದುಕೊಂಡಿಲ್ಲ ಎಂದು ತಿಳಿಸಿದರೂ ನೀನು ತೆಗೆದುಕೊಂಡಿಲ್ಲವಾದರೂ ಸಹ ತೆಗೆದುಕೊಂಡಿದ್ದೇನೆ ಎಂದು ಒಪ್ಪಿಕೋ. ಇಲ್ಲವಾದಲ್ಲಿ ನಿನ್ನ ಮೇಲೆ ಪ್ರಕರಣ ದಾಖಲಿಸಿ ಒದ್ದು ಒಳಗೆ ಹಾಕುತ್ತೇವೆ ಎಂದು ಬೆದರಿಕೆ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಸರ್ಕಾರಿ ಆಸ್ಪತ್ರೆಯ ಅಭಿವೃದ್ಧಿ ಮತ್ತು ಸಾರ್ವಜನಿಕ ಆರೋಗ್ಯ ಸೇವೆಗಳ ಗುಣಮಟ್ಟವನ್ನು ಇನ್ನಷ್ಟು ಸುಧಾರಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಅಧ್ಯಕ್ಷ ರಫೀಕ ಶಿರೋಳ ಸೇರಿದಂತೆ ಪ್ರಮುಖರಾದ ವಿಜಯಕುಮಾರ ಗೂಳಿ, ಸದಾಶಿವ ಹಿರೇಮಠ, ಮಾಬೂಬಿ ಬಾಗವಾನ, ನಿರ್ಮಲಾ ರಾಯಗೊಂಡ, ಸವಿತಾ ನಾಲತವಾಡ, ಅಂಬರಿಶ ಬಿರಾದಾರ ಮತ್ತು ಶಿವನಗೌಡ ಪಾಟೀಲ ಇವರನ್ನು ಸರ್ಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆ ಮಾಡಲಾಗಿದೆ.ಈ ಆಯ್ಕೆ ಸಾರ್ವಜನಿಕ ವಲಯದಲ್ಲಿ ಸಂತಸ ಹಾಗೂ ಪ್ರಶಂಸೆಗೂ ಕಾರಣವಾಗಿದ್ದು, ಆರೋಗ್ಯ ಸೇವಾ ವ್ಯವಸ್ಥೆಯನ್ನು ಮತ್ತಷ್ಟು ಪಾರದರ್ಶಕ, ಪರಿಣಾಮಕಾರಿ ಮತ್ತು ಜನಪರವಾಗಿಸಲು ಮಹತ್ವದ ಪಾತ್ರ ವಹಿಸಲಿದೆ ಎಂಬ ಅಭಿಪ್ರಾಯ ಕೇಳಿಬಂದಿದೆ.ರೋಗಿಗಳಿಗೆ ಉತ್ತಮ ಚಿಕಿತ್ಸೆ ಹಾಗೂ ಸೌಲಭ್ಯಗಳ ಲಭ್ಯತೆ ಖಚಿತಪಡಿಸುವುದು, ಆಸ್ಪತ್ರೆಯ ಸ್ವಚ್ಛತೆ, ಶಿಸ್ತು ಮತ್ತು ಮೂಲಸೌಕರ್ಯಗಳ ಮೇಲ್ವಿಚಾರಣೆ, ಔಷಧಿ, ಪರೀಕ್ಷಾ ಸೇವೆ, ವೈದ್ಯರ ಹಾಜರಾತಿ ಸೇರಿದಂತೆ ಸೇವೆಗಳ ಗುಣಮಟ್ಟ ಪರಿಶೀಲನೆ, ಬಡವರಿಗೆ ಸರ್ಕಾರದ ಆರೋಗ್ಯ ಯೋಜನೆಗಳು ಸರಿಯಾಗಿ ತಲುಪುವಂತೆ ನೋಡಿಕೊಳ್ಳುವುದು, ರೋಗಿಗಳ ದೂರು–ಸಲಹೆಗಳನ್ನು ಸ್ವೀಕರಿಸಿ ಪರಿಹಾರಕ್ಕೆ ಕ್ರಮ…
ಉದಯರಶ್ಮಿ ದಿನಪತ್ರಿಕೆ ಹೊನವಾಡ: ಹಲವು ದಶಕಗಳ ಹಿಂದೆ ಹಳ್ಳಿಗಳಲ್ಲಿ ನಡೆಯುತ್ತಿದ್ದ ಸಂಪ್ರದಾಯ, ಬೀಸುವುದು, ಕುಟ್ಟುವುದು ಸೇರಿದಂತೆ ಜಾನಪದ ನೃತ್ಯ, ಬಯಲಾಟಗಳಂತಹ ಮನರಂಜನೆ ಈಗ ನೋಡಲು ಸಿಗುವುದೇ ಅಪರೂಪ. ಅಂಥ ಹಳ್ಳಿ ಸೊಗಡು ಸ್ಥಳೀಯ ತಿಕೋಟಾ ತಾಲ್ಲೂಕಿನ ಹೊನವಾಡ ಬಸವಂತರಾಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಬುಧವಾರ ಮರುಕಳಿಸುವಂತೆ ಮಾಡಿದ್ದು ಸಂಸ್ಕೃತಿ ಹಬ್ಬ.ಮಕರ ಸಂಕ್ರಮಣದ ಪ್ರಯುಕ್ತ ಗುಡಿಸಲು ನಿರ್ಮಾಣ ಮಾಡಿ ಹೂವು, ಕಬ್ಬು, ವಿವಿಧ ಧಾನ್ಯಗಳೊಂದಿಗೆ ಬಸವಂತರಾಯ ಪ್ರೌಢ ಶಾಲೆಯ ಸಮಾರಂಭದ ಬಯಲು ವೇದಿಕೆಯನ್ನು ಅಲಂಕರಿಸಲಾಗಿತ್ತು. ಹಳ್ಳಿಯ ಸಂಸ್ಕೃತಿ ಸೊಗಡು ಎಲ್ಲೆಡೆ ಎದ್ದು ಕಾಣುತ್ತಿತ್ತು.ಶಿಕ್ಷಕರಾದ ಐ ಕೆ ನದಾಫ ಮಾತನಾಡಿ, ಜಗತ್ತನ್ನು ಬೆಳಗುವ ಸೂರ್ಯ ದಕ್ಷಿಣಾಯನದಿಂದ ದಿಕ್ಕು ಬದಲಿಸಿ ಉತ್ತರಾಯಣದಿಂದ ಹುಟ್ಟುತ್ತಾನೆ. ಇದನ್ನು ಭಾರತೀಯ ಸಂಸ್ಕೃತಿಯಲ್ಲಿ ಶುಭದಿನವೆಂದು ಪರಿಗಣಿಸುತ್ತಿದ್ದು, ಈ ಪ್ರಯುಕ್ತ ಮಕರ ಸಂಕ್ರಮಣ ಆಚರಿಸಲಾಗುತ್ತಿದೆ ಎಂದು ಹೇಳಿದರು.ಶಾಲಾ ಆವರಣ ಇಲಕಲ್ ಸೀರೆ, ಹಸಿರು ಬಳೆ, ಮುಡಿತುಂಬ ಮಲ್ಲಿಗೆ ಹೂ ಧರಿಸಿಕೊಂಡು ಓಡಾಡುತ್ತಿದ್ದ ವಿದ್ಯಾರ್ಥಿನಿಯರು, ಧೋತಿ, ಪಂಚೆ, ಶೆಲ್ಲೆ ಧರಿಸಿದ ವಿದ್ಯಾರ್ಥಿಗಳಿಂದ ತುಂಬಿ ತುಳುಕುತ್ತಿತ್ತು.ಸಂಸ್ಥೆಯ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಮಾನವನ ಸ್ವಾರ್ಥಕ ಬದುಕಿಗೆ ಬೇಕಾಗುವ ಸಂಸ್ಕಾರ, ಸಾಮರಸ್ಯ, ಉತ್ತಮ ಆಚಾರ ವಿಚಾರ, ಮೌಲ್ಯಗಳನ್ನು ಪಸರಿಸುವ ೧೨ನೇ ಶತಮಾನದ ಶರಣ ವಚನ ಸಾಹಿತ್ಯ, ಮನುಕುಲಕ್ಕೆ ದಾರೀದೀಪವಾಗಿದೆ ಎಂದು ಗುರುಮಾತೆ ಸರೋಜಿನಿ ಮಾವಿನಮರ ಹೇಳಿದರು.ಅವರು ನಗರದ ಶ್ರೀ ಸತ್ಯಸಾಯಿ ಸೇವಾ ಕೇಂದ್ರ ಬೀರಪ್ಪನಗರದಲ್ಲಿ ಗುರುವಾರ ನಡೆದ ದತ್ತಿ ಉಪನ್ಯಾಸ ಮತ್ತು ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.ಅಧ್ಯಕ್ಷತೆ ವಹಿಸಿದ್ದ ವಿಜಯಲಕ್ಷ್ಮೀ ದೇಸಾಯಿ ಮಾತನಾಡಿ, ಅನ್ನ, ಅಕ್ಷರ, ಹಾಗೂ ಅರಿವು ಮೂಡಿಸುವಲ್ಲಿ ಮಠಗಳ ಕೊಡುಗೆ ಅಪಾರವಾಗಿದೆ. ಅನುಭವ ಮಂಟಪದಲ್ಲಿ ಶರಣರನ್ನು ಗುರುತಿಸಿ, ಅನುಭವ ಮಂಟಪ ಮೂಲಕ ಮನುಷ್ಯ ಸಮಾಜದಲ್ಲಿ ಯಾವ ರೀತಿ ಬದುಕಬೇಕು ಎಂಬದನ್ನು ತೋರಿಸಿದ್ದಾರೆ ಎಂದರು.ಗಂಗಾ ಗಲಗಲಿ ಉಪನ್ಯಾಸಕ ಚಂದುಗೌಡ ಬಿರಾದಾರ, ಪಾರ್ವತಿ ದಳವಾಯಿ, ರಾಜಶ್ರೀ ಕ್ಷತ್ರಿ, ಲತಾ ಕಕ್ಕಳಮೇಲಿ, ಪಾರ್ವತಿ ಸೊನ್ನದ, ರಿಯಾನಾ ಸುತಾರ, ಭವಾನಿ ಗುಳೇದಗುಡ್ಡ ಮಾತನಾಡಿದರು.ಕವಿಯತ್ರಿಗಳಾದ ಸುಮಾ ಸಣ್ಣಕ್ಕಿ, ಪೂಜಾ ಕನ್ನೊಳ್ಳಿ, ಮಂಜುಳಾ ದಳವಾಯಿ, ಪ್ರೀತಿ ಕ್ಷತ್ರಿ, ಪ್ರೀಯಾಂಕಾ ಬೋರಗಿ, ಸನಾ ಅರಳಿಕಟ್ಟಿ, ಸುಧಾ ಬೀಳಗಿ ಕವನ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ವಿದ್ಯಾರ್ಥಿಗಳು ತಂದೆ-ತಾಯಿಗಳಿಗೆ, ಶಿಕ್ಷಣ ಕೊಟ್ಟ ಗುರುಗಳಿಗೆ ಗೌರವವನ್ನು ಸಲ್ಲಿಸುವುದರ ಜೊತೆಗೆ ಆದರ್ಶ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಮಾದರಿಯ ವ್ಯಕ್ತಿಗಳಾಗಿ ರೂಪಗೊಳ್ಳಬೇಕೆಂದು ಹೂವಿನಹಿಪ್ಪರಗಿಯ ಯೋಗೇಶ್ವರ ಮಾತಾ ಕಲಾ ಮತ್ತು ವಾಣಿಜ್ಯ ಪಪೂ ಕಾಲೇಜಿನ ಉಪನ್ಯಾಸಕಿ, ಸಾಹಿತಿ ಶಾಂತಾ ಬಿರಾದಾರ ಹೇಳಿದರು.ಪಟ್ಟಣದ ಬಸವೇಶ್ವರ ಕನ್ನಡ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ತು ಬುಧವಾರ ಹಮ್ಮಿಕೊಂಡಿದ್ದ ಲಿಂ.ಶಾಂತಾಬಾಯಿ ಕೊಟ್ಲಿ, ಲಿಂ.ಮಲ್ಲಪ್ಪ ಕೊಟ್ಲಿ, ಲಿಂ. ಶಿವಮ್ಮ ಕ್ವಾಟಿ ಸ್ಮರಣಾರ್ಥ ದತ್ತಿ ಉಪನ್ಯಾಸ ಹಾಗೂ ಶಿವಯೋಗಿ ಸಿದ್ರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಮಾನವೀಯ ಮೌಲ್ಯಗಳ ಕುರಿತು ಮಾತನಾಡಿದ ಅವರು, ಇಂದಿನ ವಿದ್ಯಾರ್ಥಿಗಳು ನಾಳಿನ ಭವ್ಯ ಭಾರತದ ಪ್ರಜೆಗಳಾಗಿ ನಿರ್ಮಾಣಗೊಳ್ಳುವದಲ್ಲಿ ಯಾವುದೇ ಸಂದೇಹವಿಲ್ಲ. ಮಕ್ಕಳು ಶಾಲಾ ಹಂತದಲ್ಲಿ ಪ್ರಶ್ನಿಸುವ ಗುಣ ಬೆಳೆಸಿಕೊಂಡು ವಿಷಯಗಳನ್ನು ಗ್ರಹಿಸಬೇಕು. ಮಕ್ಕಳು ದೇಶದ ಭವಿಷ್ಯವಾಗಿದ್ದು. ಅವರಿಗೆ ಸುರಕ್ಷಿತ ಪರಿಸರ, ಗುಣಮಟ್ಟದ ಶಿಕ್ಷಣ, ಆರೋಗ್ಯ ಮತ್ತು ಗೌರವಯುತ ಜೀವನ ಒದಗಿಸುವುದು ಸಮಾಜದ ಜವಾಬ್ದಾರಿಯಾಗಿದೆ. ಮಕ್ಕಳು ಬಸವಾದಿ ಶರಣರು ಹಾಕಿಕೊಟ್ಟ ಜೀವನದ…
ಲಿಂಗಾಯತ ಮತ್ತು ಬಸವ ಕಾರ್ಯಕರ್ತರಲ್ಲಿ ರಾಜಕೀಯ ಜಾಗೃತಿ ಮೂಡಿಸಲು ಮತ್ತು ಸಮುದಾಯವನ್ನು ಬಲಪಡಿಸಲು ಈ ಸಮಾವೇಶ ಬೆಂಗಳೂರು: ಲಿಂಗಾಯತ ಮತ್ತು ಬಸವ ಕಾರ್ಯಕರ್ತರು ಯಾವುದೇ ಪಕ್ಷಕ್ಕೆ ಕೇವಲ ಮತಬ್ಯಾಂಕ್ ಆಗಿ ಉಳಿಯಲು ಬಯಸುವುದಿಲ್ಲ, ಮತ್ತು ರಾಜಕೀಯ ಜಾಗೃತಿ ಮೂಡಿಸಲು ಮತ್ತು ಸಮುದಾಯವನ್ನು ಬಲಪಡಿಸಲು ‘ಬಸವ ಶಕ್ತಿ’ ಸಮಾವೇಶ ಎಂಬ ಕಾರ್ಯಕ್ರಮವನ್ನು ಯೋಜಿಸುತ್ತಿದ್ದಾರೆ.ಜೈನ, ಬೌದ್ಧ ಮತ್ತು ಸಿಖ್ ಧರ್ಮದ ಮಾದರಿಯಲ್ಲಿ ಪ್ರತ್ಯೇಕ ಧರ್ಮದ ಸ್ಥಾನಮಾನಕ್ಕಾಗಿ ದೀರ್ಘಕಾಲದಿಂದ ಬಾಕಿ ಉಳಿದಿರುವ ಬೇಡಿಕೆಯೊಂದಿಗೆ, ಲಿಂಗಾಯತ ಸಮುದಾಯದ ಗುರುತನ್ನು ಎತ್ತಿ ತೋರಿಸುವ ಇತ್ತೀಚಿನ ಜನಸಾಮಾನ್ಯರ ಅಭಿಯಾನಗಳ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಲಿಂಗಾಯತ ಮತಗಳನ್ನು ಬಳಸಿಕೊಂಡು ಚುನಾಯಿತರಾಗುವ ಆದರೆ ಸಮುದಾಯದ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಕೆಲಸ ಮಾಡುವ ರಾಜಕಾರಣಿಗಳ ವಿರುದ್ಧ ಕಾರ್ಯಕರ್ತರು ಜಾಗೃತಿ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ.ಕಳೆದ ವರ್ಷ, ರಾಜ್ಯದಾದ್ಯಂತ ಬಸವ ಸಂಸ್ಕೃತಿ ಅಭಿಯಾನ ಸಭೆಗಳ ಸರಣಿಯನ್ನು ನಡೆಸಲಾಯಿತು. ಹಲವಾರು ಜಿಲ್ಲೆಗಳಲ್ಲಿ ಸರಾಸರಿ 50,000 ಜನರು ಭಾಗವಹಿಸಿದ್ದರು. ಈ ಅಭಿಯಾನವು 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ಮೇಲೆ ಕೇಂದ್ರೀಕರಿಸಿತು.…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ರೈತರ ಪಂಪ್ ಸೆಟ್ಟುಗಳಿಗೆ ಅಕ್ರಮ-ಸಕ್ರಮ ಯೋಜನೆಯಡಿಯಲ್ಲಿ ಕೇವಲ 50 ರೂಪಾಯಿ ಪಾವತಿಸಿ ನೋಂದಣಿ ಮಾಡಿಕೊಂಡ ಗ್ರಾಹಕರು ಜನವರಿ 20 ರ ಒಳಗಾಗಿ ಭದ್ರತಾ ಠೇವಣಿ ಮತ್ತು ಸಕ್ರಮೀಕರಣ ಶುಲ್ಕ ಪಾವತಿಸಿ ಸಕ್ರಮ ಮಾಡಿಕೊಳ್ಳಬೇಕು ಎಂದು ನಿಡಗುಂದಿ ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.ಕೊಲ್ಹಾರ ತಾಲೂಕು ವ್ಯಾಪ್ತಿಯಲ್ಲಿ ಬರುವ ರೈತರು ಸನ್ 2018 ರಲ್ಲಿ 50 ರೂ. ಪಾವತಿ ಮಾಡಿ ಆರ್.ಆರ್. ನಂಬರ ಪಡೆದುಕೊಂಡು ಭದ್ರತಾ ಠೇವಣಿ, ಮಾಪಕ ಭದ್ರತಾ ಠೇವಣಿ ಮತ್ತು ಸಕ್ರಮೀಕರಣ ಶುಲ್ಕು ಪಾವತಿಸದೇ ಇರುವವರು ದಿನಾಂಕ: 20.01.2026 ರೊಳಗೆ ಸದರಿ ಶುಲ್ಕವನ್ನು ಉಪ-ವಿಭಾಗ ಕಛೇರಿ ನಿಡಗುಂದಿ ಯಲ್ಲಿ ಪಾವತಿಸಲು ಸೂಚಿಸಲಾಗಿದೆ. ಇಲ್ಲವಾದರೆ ಮೋಟರ್ ಸಂಪರ್ಕವನ್ನು ನಿರ್ದಾಕ್ಷಿಣವಾಗಿ ಕಡಿತಗೊಳಿಸುವುದಾಗಿ ಅವರು ಹೇಳಿದ್ದಾರೆ.
