Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರದ ವಿಜಯಪುರ ರಸ್ತೆಯಲ್ಲಿರುವ ಮಾಂಗಲ್ಯ ಭವನದಲ್ಲಿ ಪ್ರಾತಃಸ್ಮರಣೀಯ ಹೆಚ್.ಟಿ.ಕುಲಕರ್ಣಿ ಗುರುಗಳ ಗುರುಸ್ಮರಣೆ ಕಾರ್ಯಕ್ರಮವನ್ನು ಸೆ.೬ ಭಾನುವಾರ ಬೆಳಿಗ್ಗೆ ೧೦ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ನಿವೃತ್ತ ದೈಹಿಕ ಶಿಕ್ಷಕ ಎಸ್.ಎಸ್.ಮಲ್ಲೇದ ಹೇಳಿದರು.ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸಾರಂಗಮಠದ ಪೂಜ್ಯಶ್ರೀ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ವಹಿಸಲಿದ್ದಾರೆ. ಊರಿನ ಹಿರಿಯಮಠದ ಶಿವಾನಂದ ಶಿವಾಚಾರ್ಯರು ಸಾನಿಧ್ಯ ವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಅಶೋಕ ಮನಗೂಳಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರಾದ ಎಸ್.ಟಿ.ಸುಣಗಾರ, ಅಶೋಕ ಶಾಬಾದಿ, ರಮೇಶ ಭೂಸನೂರ, ಅರುಣ ಶಹಾಪೂರ, ಕುಲಕರ್ಣಿ ಗುರುಗಳ ಸಹೋದರ ಬಿ.ಟಿ.ಕುಲಕರ್ಣಿ, ಸುಪುತ್ರ ಪವನ ಕುಲಕರ್ಣಿ ಸೇರಿದಂತೆ ಹಲವರು ಇರಲಿದ್ದಾರೆ ಎಂದು ತಿಳಿಸಿದ್ದಾರೆ.ಈ ವೇಳೆ ಕಾರ್ಯಕ್ರಮದ ಆಯೋಜಕ ಹಾಗೂ ವಿಜಯಪುರ ಜಿಲ್ಲಾ ಕೈಗಾರಿಕಾ ಇಲಾಖೆ ಉಪನಿರ್ದೇಶಕ ಸುಭಾಸ ಪಾಟೀಲ ಮಾತನಾಡಿ, ಗುರುಸ್ಮರಣೆ ಕಾರ್ಯಕ್ರಮದಂದು ಅವರ ಶಿಷ್ಯರು ಹಾಗೂ ಅನುಯಾಯಿಗಳಿಂದ ದೇಹದಾನ ಮತ್ತು ಅಂಗಾAಗ ದಾನದ ನೋಂದಣಿ ಕಾರ್ಯವನ್ನು ವಿಜಯಪುರ ಬಿಎಲ್ಡಿಇ ವೈದ್ಯಕೀಯ ಮಹಾವಿದ್ಯಾಲಯದವರು ನಿರ್ವಹಿಸಲಿದ್ದಾರೆ. ಇದರ ಜೊತೆಗೆ ರಕ್ತದಾನ ಶಿಬಿರ ಹಾಗೂ…
ಸಣ್ಣ ನೀರಾವರಿ ಸಚಿವರ ಸ್ವಕ್ಷೇತ್ರದಲ್ಲಿಯೇ ಬೃಹತ್ ಪ್ರತಿಭಟನೆ | ಬೆಳೆವಿಮೆ ತಾರತಮ್ಯ ನಿಲ್ಲಿಸಿ, ರೈತರ ಖಾತೆಗೆ ವಿಮೆ ಹಣ ಜಮೆಗೆ ಆಗ್ರಹ ಉದಯರಶ್ಮಿ ದಿನಪತ್ರಿಕೆ ಕಲಬುರ್ಗಿ: ಬರದ ಛಾಯೆಯಲ್ಲಿ ಸಿಲುಕಿ ಬಳಲುತ್ತಿರುವ ಯಡ್ರಾಮಿ ತಾಲೂಕನ್ನು ತಕ್ಷಣ ಬರಪೀಡಿತ ತಾಲೂಕು ಎಂದು ಘೋಷಿಸಿ, ರೈತರ ಸಂಕಷ್ಟಕ್ಕೆ ಸರ್ಕಾರ ಕೂಡಲೇ ಸ್ಪಂದಿಸಬೇಕು ಎಂದು ಆಗ್ರಹಿಸಿ, ವಾಣಿಜ್ಯ ವರ್ತಕರ ಸಹಕಾರದೊಂದಿಗೆ, ತಾಲೂಕಿನ ಸರ್ವ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಯಡ್ರಾಮಿ ಬಂದ್ ನಡೆಸಲಾಯಿತು.ಬಂದ್ ಅಂಗವಾಗಿ ಸರ್ದಾರ ಶರಗೌಡರ ವೃತ್ತದಿಂದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದವರೆಗೆ ಬೃಹತ್ ರ್ಯಾಲಿ ನಡೆಸಲಾಯಿತು. ರೈತರು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಯಡ್ರಾಮಿ ತಾಲೂಕನ್ನು ತಕ್ಷಣ ಬರಪೀಡಿತ ತಾಲೂಕು ಎಂದು ಘೋಷಿಸಬೇಕು. ಸೂಕ್ತ ಬರ ಪರಿಹಾರ ಒದಗಿಸಬೇಕು. ಬೆಳೆವಿಮೆ ಪಾವತಿಯಲ್ಲಿನ ತಾರತಮ್ಯ ಸರಿಪಡಿಸಬೇಕು. ಬಾಕಿ ಇರುವ ಸಂಪೂರ್ಣ ವಿಮೆ ಮೊತ್ತವನ್ನು ತಕ್ಷಣ ಖಾತೆಗಳಿಗೆ ಜಮೆ ಮಾಡಬೇಕು. ತಮ್ಮ ಬೇಡಿಕೆಗಳಿಗೆ ತಕ್ಷಣ ಸ್ಪಂದಿಸದಿದ್ದರೆ ಮುಂದಿನ ಹಂತದಲ್ಲಿ ಇನ್ನಷ್ಟು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಂದು ಮತ್ತು ನಾಳೆ ನಡೆಯಲಿರುವ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ನಗರದ ಕೃಷ್ಣ ವಾದಿರಾಜ ಮಠದಲ್ಲಿ ಪೂರ್ವ ಭಾವಿಯಾಗಿ ಗುರುವಾರ ಸಾಯಂಕಾಲ ಭಕ್ತರು ನೀಡಿದ ಧಾನ್ಯಗಳನ್ನು ಪೂಜಿಸಿ ಶ್ರೀ ಕೃಷ್ಣನಿಗೆ ಸಮರ್ಪಿಸಲಾಯಿತು. ಪೇಜಾವರ ಅಧೋಕ್ಷಜ ಮಠದ ಶಾಖೆಯಾದ ಶ್ರೀಮಠದಲ್ಲಿ ಪೀಠಾಧಿಪತಿ ಶ್ರೀ ವಿಶ್ವಪ್ರಸನ್ನತೀರ್ಥರ ಆದೇಶದಂತೆ ಪ್ರತಿ ಸಲದಂತೆ ಈ ಸಲವೂ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶಾಸ್ತ್ರೋಕ್ತವಾಗಿ ಸಂಪ್ರದಾಯದಂತೆ ಆಚರಿಸಲಾಗುತ್ತಿದೆ.ಶ್ರೀ ಮಠದ ಪರವಾಗಿ ಗೌರವಾಧ್ಯಕ್ಷ ಗೋಪಾಲ ನಾಯಕ, ಮಠದ ಅಧ್ಯಕ್ಷರಾದ ಕಿರಣ ಚಳುಕಿ, ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ ಧಾನ್ಯ ಪೂಜೆಯನ್ನು ನೇರವೇರಿಸಿದರು.ಈ ಸಮಯದಲ್ಲಿ ಸಮಿತಿ ಸದಸ್ಯರಾದ ಡಾ ಆರ್.ಜೆ ಮಂಗಲಗಿ, ಡಾ.ಮಲಘಾಣ, ಉದ್ಯಮಿ ವ್ಹಿ.ಬಿ.ಕುಲಕರ್ಣಿ, ವಿಸಿ ಕುಲಕರ್ಣಿ ಪಿರಾಪುರ್. ಅಶೋಕರಾವ್, ವಿಕಾಸ ಪದಕಿ, ಗೋವಿಂದ ಜೋಶಿ, ವಿಜಯ್ ಜೋಶಿ. ಜಯತೀರ್ಥ ಮಂಗಲಗಿ, ವೇಣುಗೋಪಾಲ ಜೋಶಿ, ಶ್ರೀಕಾಂತ ತಿಕೋಟ್ಕರ್ . ವೆಂಕಟೇಶ್ ಗುಡಿ ಉಪಸ್ಥಿತರಿದ್ದರು. ವ್ಯವಸ್ಥಾಪಕ ಪಂಡಿತ ವಾಸುದೇವಾಚಾರ್ಯ ಪೂಜೆಯ ವಿಧಿವಿಧಾನಗಳನ್ನು ಶಾಸ್ತ್ರೋಕ್ತವಾಗಿ ಭಕ್ತರ ಸಮ್ಮುಖದಲ್ಲಿ ನಡೆಸಿಕೊಟ್ಟರು. ಇದೆ ಸಮಯದಲ್ಲಿ ಶ್ರೀ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಡತನ ಎನ್ನುವುದು ಬಿಂದುವಿನಷ್ಟೇ ಸಣ್ಣದು, ಆ ಸಣ್ಣ ಕಾರಣ ನಿಮ್ಮ ಭವಿಷ್ಯಕ್ಕೆ ಅಡಚಣೆ ಆಗದಿರಲಿ, ಕಸ ಗುಡಿಸುವ ಕೆಲಸ ಸಿಗಬೇಕಾದರೂ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮ ಪರೀಕ್ಷೆಯ ಅವಶ್ಯಕತೆ ಇದೆ, ಹಾಗಾಗಿ ಪದವಿ ಹಂತದಿಂದಲೇ ನೀವು ಸ್ಪರ್ಧಾತ್ಮಕ ಪರೀಕ್ಷೆ ಸಿದ್ದಗೊಳ್ಳಬೇಕು ಎಂದು ಸಾಧನಾ ಅಕಾಡೆಮಿ ನಿರ್ದೇಶಕಿ ಡಾ.ಜ್ಯೋತಿ.ಕೆ.ಸಿ ಹೇಳಿದರು.ನಗರದ ಬಿ.ಎಲ್.ಡಿ.ಇ ಸಂಶ್ಥೆಯ ಎಸ್.ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ, ಕರಿಯರ್ ಗೈಡನ್ಸ್ ಸೆಲ್ ಹಾಗೂ ಬೆಂಗಳೂರಿನ ಸಾಧನಾ ಅಕಾಡೆಮಿ ಐಎಎಸ್ ತರಬೇತಿ ಕೇಂದ್ರದ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಗಳಿಸುವುದು ಹೇಗೆ ? ಕುರಿತಾದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಇಂದು ಯಾವ ಸರ್ಕಾರಿ ಉದ್ಯೋಗವು ಸಣ್ಣದಲ್ಲ, ನೀವು ಪದವಿ ಪಡೆಯುವುದು ದೊಡ್ಡ ವಿಷಯವೇ ಅಲ್ಲ, ದೇಶದ ತುಂಬ ಎಲ್ಲರೂ ಪದವಿ ಪ್ರಮಾಣ ಪತ್ರ ಪಡೆದಿದ್ದಾರೆ. ಅವರಲ್ಲಿ ನೀವು ವಿಶೇಷವಾಗಿ ಇರಬೇಕು ಎನ್ನುವ ಉದ್ದೇಶದಿಂದಲೇ ನಿಮ್ಮನ್ನು ತರಬೇತಿಗೊಳಿಸಲು ಬಿ.ಎಲ್.ಡಿ.ಇ ಸಂಸ್ಥೆ ಹಾಗೂ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಡಿಸೆಂಬರ್ 13ರಂದು ನಗರದಲ್ಲಿ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2026 ಅಂಗವಾಗಿ ಸೆಪ್ಟೆಂಬರ್ 6 ರಂದು ರವಿವಾರ ಮಹಿಳೆಯರಿಗಾಗಿ ಪ್ರೋಮೋ ರನ್ ಆಯೋಜಿಸಲಾಗಿದೆ.ಅಂದು ಬೆಳಿಗ್ಗೆ 6 ಗಂಟೆಗೆ ನಗರದ ಗಗನ್ ಮಹಲ್ ನಿಂದ ಈ ಓಟ ಪ್ರಾರಂಭವಾಗಲಿರುವ ಈ ರನ್ ಉಚಿತವಾಗಿದ್ದು, ಎಲ್ಲ ಮಹಿಳೆಯರೂ ಭಾಗವಹಿಸಬಹುದಾಗಿದೆ. ಗಗಲ್ ಮಹಲ್ ನಿಂದ ಪ್ರಾರಂಭವಾಗಲಿರುವ ಈ ಓಟ ಐತಿಹಾಸಿಕ ಗೋಳಗುಮ್ಮಟವರೆಗೆ ಸಾಗಿ ಮರಳಿ ಗಗನ್ ಮಹಲ್ ನಲ್ಲಿ ಮುಕ್ತಾಯವಾಗಲಿದೆ. ಮಹಿಳೆಯರು ಸಾಂಪ್ರದಾಯಿಕ ಉಡುಗೆ ಮತ್ತು ಫ್ಯಾನ್ಸಿ ಡ್ರೆಸ್ನಲ್ಲಿ ಪಾಲ್ಗೊಳ್ಳಬಹುದು ಎಂದು ವೃಕ್ಷಥಾನ್ ಆಯೋಜಕರು ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಶಿವು ಕುಂಬಾರ- 9972795289, ಅಮಿತ ಬಿರಾದಾರ- 9880107038 ಹಾಗೂ ರಮೇಶ ಬಿರಾದಾರ- 9972025236 ಅವರನ್ನು ಸಂಪರ್ಕಿಸಬಹುದಾಗಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ.ಎಂ.ಪಾಟೀಲ ಸಿಬಿಎಸ್ಇ ಶಾಲೆಯಲ್ಲಿ ಶುಕ್ರವಾರ ಕೃಷ್ಣ ಜನ್ಮಾಷ್ಟಮಿಯನ್ನು ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು.ಕೃಷ್ಣನು ಮಾಡಿದ ಮಹತ್ಕಾರ್ಯಗಳ ಕುರಿತು ಎಂಟನೇ ತರಗತಿಯ ವಿದ್ಯಾರ್ಥಿನಿ ಮೃನ್ಮಯಿ ಪ್ರಾಸ್ತವಿಕ ಮಾತನಾಡಿದಳು.ಎಲ್ಲ ಸದನದ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಮೊಸರಿನ ಗಡಿಗೆ ಒಡೆಯುವ ಸ್ಪರ್ಧೆ ನೋಡುಗರ ಮೈ ನವಿರೇಳಿಸುವಂತ ಮಾಡಿತು. ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಬಾಲ ಗೋಪಾಲ ಮತ್ತು ರಾಧೆಯ ವೇಷಭೂಷಣದಲ್ಲಿ ಬಂದು ಇಡೀ ಶಾಲಾ ಆವರಣವನ್ನು ನಂದಗೋಕುಲವನ್ನಾಗಿ ಮಾಡಿದರು.ಪ್ರೌಢ ಶಾಲಾ ಎಲ್ಲಾ ವಿದ್ಯಾರ್ಥಿಗಳು. ಶಾಲಾ ಮೈದಾನಕ್ಕಿಳಿದು ಕೋಲಾಟ ಆಡಿದರು. ಪ್ರಾಚಾರ್ಯರು ಸೇರಿದಂತೆ ಎಲ್ಲರೂ ಸಮೂಹ ನೃತ್ಯದಲ್ಲಿ ಪಾಲ್ಗೊಂಡರು. ವಿದ್ಯಾರ್ಥಿಗಳ ಹಾಡು ಕುಣಿತ ಕೇಕೆ ಮುಗಿಲು ಮುಟ್ಟುವಂತಿತ್ತು. ಪ್ರಾರ್ಥನಾ ಸಭೆಯ ಮಂತ್ರಿ ಸ್ನೇಹಾ ಪೂಜಾರಿ ನಿರೂಪಿಸಿದರು.ಮಕ್ಕಳ ಈ ಉತ್ಸಾಹ ಮತ್ತು ಕ್ರಿಯಾಶೀಲತೆಯನ್ನು ಪ್ರಾಚಾರ್ಯೆ ವಸುಧಾ ನಾರ್ವೇಕರ ಪ್ರಶಂಸಿಸಿದರು.
ಉದಯರಶ್ಮಿ ದಿನಪತ್ರಿಕೆ ಅಥಣಿ: ಅನಾಥ ಮಕ್ಕಳ ಸಂರಕ್ಷಣೆ ಜೊತೆಗೆ ನಿರ್ಗತಿಕರಿಗೆ ನಿತ್ಯ ಅನ್ನ ಸಂತರ್ಪಣೆ ಹಾಗೂ ಅನೇಕ ಸಮಾಜಮುಖಿಗೆ ಸೇವೆಗಳನ್ನು ಮಾಡುತ್ತಿರುವ ನಿಜಕ್ಕೂ ಹಿರೇಮನಿ ದಂಪತಿಗಳ ಕಾರ್ಯ ಶ್ಲಾಘನೀಯ ಎಂದು ಗಚ್ಚಿನಮಠದ ಶಿವಬಸವ ಸ್ವಾಮೀಜಿ ಹೇಳಿದರು.ಅವರು ಸುಕ್ಷೇತ್ರ ಗಚ್ಚಿನಮಠದಲ್ಲಿ ಶ್ರಾವಣ ಮಾಸದ ನಿಮಿತ್ಯ ಹಮ್ಮಿಕೊಂಡಿರುವ ಬಸವ ಸಂಸ್ಕೃತಿ ಪ್ರವಚನ ಕಾರ್ಯಕ್ರಮದ ಸಾನಿಧ್ಯ ವಹಿಸಿ ಸಮಾಜ ಸೇವಕ ನಿಜಪ್ಪ ಹಿರೇಮನಿ ದಂಪತಿಗೆ ಸನ್ಮಾನಿಸಿ ಮಾತನಾಡಿದರು.ಹಸಿದವರಿಗೆ ಅನ್ನ, ಆಶ್ರಯ ನೀಡುವುದರ ಜೊತೆಗೆ ಅನಾಥ ಮಕ್ಕಳ ಬಾಳಿನಲ್ಲಿ ಬೆಳಕು ಮೂಡಿಸುತ್ತಿರುವ ಅವರ ಕಾಯಕ ಅತ್ಯಂತ ಶ್ರೇಷ್ಠವಾದದ್ದು, ಅವರ ಸಾಮಾಜಿಕ ಸೇವೆ ಅನೇಕರಿಗೆ ಪ್ರೇರಣೆಯಾಗಿದೆ ಎಂದರು.ಬೀದರದ ಬಸವ ಪ್ರಭು ಸ್ವಾಮೀಜಿ ಪ್ರವಚನ ನೀಡಿದರು.ಈ ಸಂದರ್ಭದಲ್ಲಿ ಹಿರಿಯರಾದ ಸಿದ್ದಪ್ಪ ಮಹಾಜನ, ಶಿವಾನಂದ ದಿವಾನಮಳ, ರಾಮನಗೌಡ ಪಾಟೀಲ, ಈರಯ್ಯ ಜಗದಾಳಮಠ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ವಿಜಯಪುರ ಜಿಲ್ಲಾ ಹಾಗೂ ದೇವರಹಿಪ್ಪರಗಿ ತಾಲ್ಲೂಕು ಆಡಳಿತದ ವೈಫಲ್ಯ ಖಂಡಿಸಿ ಹಾಗೂ ನ್ಯಾಯಯುತ ಬೇಡಿಕೆಗಳನ್ನು ಇಡೇರಿಸುವಂತೆ ಆಗ್ರಹಿಸಿ ೧೫ನೇ ದಿನದಂದು ಧರಣಿ ಸತ್ಯಾಗ್ರಹ ಸ್ಥಳದಿಂದ ಮೊಹರೆ ಹಣಮಂತ್ರಾಯ ವೃತ್ತದವರೆಗೆ ಅರೆಬೆತ್ತಲೆ ಪ್ರತಿಭಟನಾ ಮೆರವಣಿಗೆ ಕೈಗೊಂಡರು.ಪಟ್ಟಣದ ಅಂಬೇಡ್ಕರ್ ವೃತ್ತದ ಧರಣಿ ಸ್ಥಳದಿಂದ ಅರೆಬೆತ್ತಲೆ ಪ್ರತಿಭಟನಾ ಮೆರವಣಿಗೆ ಹೊರಟು ರಾಷ್ಟ್ರೀಯ ಹೆದ್ದಾರಿ-೫೦ ರಲ್ಲಿನ ಮೊಹರೆ ಹಣಮಂತ್ರಾಯ ವೃತ್ತದಲ್ಲಿ ಅರ್ಧ ಗಂಟೆಗಳ ಕಾಲ ಧರಣಿ ಕುಳಿತು ಪ್ರತಿಭಟಿಸಿದರು. ಈ ಸಂದರ್ಭದಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಸಾಲುಗಟ್ಟಿ ನಿಲ್ಲುವಂತಾಯಿತು. ನಂತರ ಧರಣಿ ಸ್ಥಳಕ್ಕೆ ಆಗಮಿಸಿ ವೇದಿಕೆಯಲ್ಲಿ ಸಭೆ ಕೈಗೊಂಡರು.ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಸಂಚಾಲಕ ಪ್ರಕಾಶ ಗುಡಿಮನಿ, ಜಿಲ್ಲಾ ಸಂಘಟನಾ ಸಂಚಾಲಕರಾದ ಪರಶುರಾಮ ದಿಂಡವಾರ, ಶರಣು ಸಿಂಧೆ, ಲಕ್ಕಪ್ಪ ಬಡಿಗೇರ, ಮಲ್ಕು ಬಾಗೇವಾಡಿ ಮಾತನಾಡಿ, ಎಸ್ಸಿ, ಎಸ್ಟಿ ಅನುದಾನ ದುರುಪಯೋಗ, ಜಲಧಾರೆ ಯೋಜನೆಯಲ್ಲಿನ ಅವ್ಯವಹಾರ ಖಂಡಿಸಿ ಪಟ್ಟಣದಲ್ಲಿ ಸರ್ಕಾರಿ ಪ್ರೌಢಶಾಲೆ ಮಂಜೂರ ಮಾಡಬೇಕು ಹಾಗೂ ಸಮಗ್ರ…
ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕನ್ನು ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸಬೇಕು ಎಂದು ಆಗ್ರಹಿಸಿ ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ರೈತಮೋರ್ಚಾ ನೇತೃತ್ವದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಅ. ೩೧ ರಿಂದ ಸೆ. ೪ ವರೆಗೆ ಹಮ್ಮಿಕೊಂಡ ಧರಣಿ ಸತ್ಯಾಗ್ರಹ ಶುಕ್ರವಾರ ಮುಕ್ತಾಯಗೊಳಿಸಿದರು.ಈ ವೇಳೆ ಬಿಜೆಪಿ ಪಕ್ಷದ ಜಿಲ್ಲಾ ಅಧ್ಯಕ್ಷ ಗುರಲಿಂಗಪ್ಪ ಅಂಗಡಿ ಮಾತನಾಡಿ, ಇಂಡಿ ತಾಲೂಕಿನಲ್ಲಿ ಮಳೆಯ ಕೊರತೆ ಮತ್ತು ಕೃಷಿ ಪರಿಸ್ಥಿತಿಯನ್ನು ಪ್ರತ್ಯೇಕವಾಗಿ ಮರುಪರಿಶೀಲಿಸುವದು ಅಗತ್ಯವಾಗಿದೆ ಎಂದರು.ಬಿಜೆಪಿಯ ಮಂಡಲ ಅಧ್ಯಕ್ಷ ಹಣಮಂತರಾಯಗೌಡ ಪಾಟೀಲ ಮಾತನಾಡಿ, ಇನ್ನು ಮುಂದೆ ಇಂಡಿ ಬರಗಾಲ ಪ್ರದೇಶವೆಂದು ಘೋಷಣೆ ಮಾಡದೇ ಇದ್ದರೆ ಪಾದಯಾತ್ರೆ ಮಾಡುವುದಾಗಿ ತಿಳಿಸಿದರು.ತಹಸೀಲ್ದಾರ ನಾಗೇಂದ್ರ ಕೋಳಶೆಟ್ಟಿ ಇವರಿಗೆ ಮನವಿ ಸಲ್ಲಿಸಿದರು.ಕಾಸುಗೌಡ ಬಿರಾದಾರ, ಮಲ್ಲಿಕಾರ್ಜುನ ಕಿವಡೆ, ಶೀಲವಂತ ಉಮರಾಣಿ, ದೇವೆಂದ್ರ ಕುಂಬಾರ, ಶಂಕರಗೌಡ ಪಾಟೀಲ, ಅನೀಲ ಜಮಾದಾರ, ಅನೀಲಗೌಡ ಬಿರಾದಾರ, ಸಂತೋಷ ಪಾಟೀಲ, ಬಾಳು ಮುಳಜಿ, ರಾಮಸಿಂಗ ಕನ್ನೊಳ್ಳಿ, ಮಹೇಶ ಹೂಗಾರ, ಮಲ್ಲು ಗುಡ್ಲ, ಪ್ರಶಾಂತ ಗವಳಿ, ಮಂಜು ದೇವರ, ಶ್ರೀಶೈಲಗೌಡ ಪಾಟೀಲ,…
ಉದಯರಶ್ಮಿ ದಿನಪತ್ರಿಕೆ ಇಂಡಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಒಬ್ಬ ಶ್ರೇಷ್ಠ ದೇಶಭಕ್ತ ಅಷ್ಟೇ ಅಲ್ಲ ಕನ್ನಡ ನಾಡಿನ ಕಟ್ಟಾಳು. ಕನ್ನಡ ನಾಡಿನ ಹಿರಿಮೆಯನ್ನು ಇಡೀ ದೇಶದಲ್ಲಿ ಎತ್ತಿಹಿಡಿದ ಕ್ರಾಂತಿಕಾರಿ ಪುರುಷ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.ಅವರು ತಾಲೂಕಿನ ಅಂಜುಟಗಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ ಕಾಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ರಾಯಣ್ಣ ಬ್ರಿಟಿಷರೊಂದಿಗೆ ಸದಾ ಹೋರಾಟ ಮಾಡುವ ಮೂಲಕ ಸಿಂಹ ಸ್ವಪ್ನವಾಗಿದ್ದ. ತಾಯಿ ಚೆನ್ನಮ್ಮಳ ಬಲಗೈ ಬಂಟನಾಗಿ ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಎಂದರು.ಬ್ರಿಟಿಷರಿಂದ ಭಾರತ ದಾಸ್ಯ ಸಂಕೋಲೆ ಮುಕ್ತ ಮಾಡಲು ನೆಲ, ಜಲ, ರಕ್ಷಣೆಗೆ ನಿಸ್ವಾರ್ಥ ಸೇವೆ ಸಲ್ಲಿಸಿದ. ರಾಯಣ್ಣ ಇವರ ಬಲಿದಾನ ವರ್ಣಾತೀತ. ಸಂಗೊಳ್ಳಿ ರಾಯಣ್ಣನ ದೇಶಪ್ರೇಮ, ಶೌರ್ಯ, ಇಂದಿನ ಯುವ ಪೀಳಿಗೆಗೆ ಪ್ರೇರಣೆ ಇವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯೋಣ ಎಂದರು.ಹಾಲುಮತ ಸಮಾಜದ ಹಿರಿಯ ಮುಖಂಡ ಜಟ್ಟೆಪ್ಪ ರವಳಿ, ನಿಲಕಂಠ ರೂಗಿ ಮಾತನಾಡಿದರು.ಕೆಡಿಪಿ ಸದಸ್ಯ ಕೆಂಪೇಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಯೋಗೆಪ್ಪ ಚನಗೊಂಡ, ಮಲ್ಲಕಣ್ಣಗೌಡ ಬಿರಾದಾರ, ಶಿಕ್ಷಕ ಅಂಕಲಗಿ,…
