Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಇಂಡಿ: ರಾಷ್ಟ್ರ ಕಂಡ ಅಪ್ರತಿಮ ಸಮಾಜ ಸುಧಾರಕ ತತ್ವಜ್ಞಾನಿ ಹಾಗೂ ದಾರ್ಶನಿಕ ಭಕ್ತಿ ಭಂಡಾರಿ ಜಗಜ್ಯೋತಿ ಕ್ರಾಂತಿಯೋಗಿ ಬಸವೇಶ್ವರರು ವಿಶ್ವದ ಮೊದಲ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಎಂದು ಕಂದಾಯ ಉಪವಿಬಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಹೇಳಿದರು.ನಗರದ ತಾಲೂಕಾ ಆಡಳಿತ ವತಿಯಿಂದ ನಡೆದ ಬಸವೇಶ್ವರರ ೮೯೫ ನೆಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ಸಮಾನತೆಯನ್ನು ಎಲ್ಲರಿಗಿಂತ ಮೊದಲು ಪ್ರತಿಪಾದಿಸಿದ ಕ್ರಾಂತಿಕಾರಿ ಬಸವಣ್ಣನವರು ತಮ್ಮ ವಚನಗಳ ಮೂಲಕ ಕಾಯಕದ ಮಹತ್ವ ಆತ್ಮಶುದ್ದಿಯ ಅಗತ್ಯ ನಿರಹಂಕಾರದ ತತ್ವಗಳನ್ನು ಎಲ್ಲರಿಗೂ ತಲುಪಿಸುವ ಮೂಲಕ ಧರ್ಮ ಮತ್ತು ಶ್ರೀಸಾಮಾನ್ಯರ ನಡುವೆ ಇದ್ದ ಅಂತರವನ್ನು ಕರಗಿಸಿದರು ಎಂದರು.ತಹಸೀಲ್ದಾರ ಬಿ.ಎಸ್.ಕಡಕಬಾವಿ ಮಾತನಾಡಿ, ಜಾತಿ ಮತ್ತು ವರ್ಗಾಧರಿತ ಹರಿದು ಹಂಚಿ ಹೋಗಿದ್ದ ಸಮಾಜವನ್ನು ಜಾತಿ ರಹಿತ ವರ್ಗರಹಿತ ಸಮಾಜವನ್ನಾಗಿಸುವ ನಿಟ್ಟಿನಲ್ಲಿ ಅವರ ಹೋರಾಟ ಕ್ರಾಂತಿಕಾರಿಯಾಗಿತ್ತು. ಬಸವಣ್ಣನವರ ಕಾಯಕವೇ ಕೈಲಾಸ ಮತ್ತು ದಾಸೋಹ ಎಂಬ ತತ್ವಗಳು ಸತ್ಯ ನಿಷ್ಠ ಶ್ರಮವನ್ನು ದೈವ ಪೂಜೆಯಂತಲೂ ಹಾಗೂ ಸಮಾಜದಲ್ಲಿ ಸಮಾನತೆಯ ಬಾಂದವ್ಯದ ಮೂಲ ಸೇತುವೆಯಂತೆ ಬಳಸಿಕೊಂಡರು ಎಂದರು.ಕಾರ್ಯಕ್ರಮದಲ್ಲಿ ವೀರಶೈವ…

Read More

ಮುಸ್ಲಿಂ ಕುಟುಂಬದಿಂದ ಕಳೆದ ನಾಲ್ಕು ವರ್ಷಗಳಿಂದ ಬಸವ ಜಯಂತಿ ಆಚರಣೆ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ದಲಿತ ಬಲಿತ ಎಂಬ ಭೇದ ಬೇಡ, ಮನುಜರೆಲ್ಲ ಒಂದೇ ಕುಲ ಎಂಬ ತತ್ವದಡಿ ವಿಶ್ವ ಭ್ರಾತೃತ್ವ ಸಾರಿದ ಮಹಾನ್ ಮಾನವತಾವಾದಿ ಶರಣ ಜಗಜ್ಯೋತಿ ಬಸವಣ್ಣ ಎಂದು ಆರಕ್ಷಕ ಮೌಲಾಲಿ ಆಲಗೂರ ಹೇಳಿದರು.ಬೆಂಗಳೂರಿನ ಆಡುಗೋಡಿ ಪೊಲೀಸ್ ಗೃಹದಲ್ಲಿರುವ ಆರಕ್ಷಕ ಮೌಲಾಲಿ ಶ್ವಾನದಳದಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಧರ್ಮದಲ್ಲಿ ಮುಸ್ಲಿಂನಾದರೂ ಕೂಡ ಪ್ರತಿ ವರ್ಷ ಬಸವ ಜಯಂತಿ ದಿನದಂದು ಬಸವಣ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಗೌರವದಿಂದ ನಮಿಸಿ, ಸಕಲರ ಒಳಿತಿಗಾಗಿ ಪ್ರಾರ್ಥಿಸಿ, ತನ್ನ ಮೂರು ಮಕ್ಕಳಿಗೂ ಬಸವಣ್ಣನ ಸಮಸಮಾಜದ ಚಿಂತನೆ ಕುರಿತು ತಿಳಿಸುತ್ತಾರೆ. ಕಳೆದ 4 ವರ್ಷಗಳಿಂದ ಬಸವ ಜಯಂತಿಯನ್ನು ತಮ್ಮ ಮನೆಯಲ್ಲಿಯೇ ಭಕ್ತಿ, ಭಾವ, ಶ್ರದ್ಧೆಯಿಂದ ಆಚರಿಸುತ್ತಾ ಬರುತ್ತಿದ್ದಾರೆ.12ನೇ ಶತಮಾನದಲ್ಲಿ ಆಳವಾಗಿ ಬೇರೂರಿದ ಜಾತಿ ವ್ಯವಸ್ಥೆ, ಶೋಷಣೆ, ಅಸಮಾನತೆ, ಅಸ್ಪೃಶ್ಯತೆ, ಅನಾಗರಿಕತೆ, ಲಿಂಗ ತಾರತಮ್ಯದ ವಿರುದ್ಧ ವಚನ ಕ್ರಾಂತಿ ಕೈಗೊಂಡ ಬಸವಣ್ಣ, ದಯ, ಕರುಣೆ,…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದಲ್ಲಿ ತಾಲೂಕು ಆಡಳಿತ ಹಾಗೂ ಶರಣ ಸಾಹಿತ್ಯ ಪರಿಷತ್ ವತಿಯಿಂದ ಬಸವಣ್ಣ ಅವರ ೮೯೩ನೇ ಜಯಂತೋತ್ಸವವನ್ನು ಸೋಮವಾರ ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.ಪ್ರಾಸ್ತಾವಿಕವಾಗಿ ಶಿರಸ್ತೇದಾರ್ ಕೃಷ್ಣಾ ಗುಡೂರ ಮಾತನಾಡಿ, ಸಮಾಜದಲ್ಲಿ ಜಾತಿ ವ್ಯವಸ್ಥೆ ಮತ್ತು ಮೂಢನಂಬಿಕೆಗಳನ್ನು ನಿರ್ಮೂಲನೆ ಮಾಡಿ ಸಮಾನತೆಯ ಸಂದೇಶವನ್ನು ತಮ್ಮ ವಚನಗಳ ಮೂಲಕ ಜನರಿಗೆ ತಲುಪಿಸಿದ ಮಹಾನ್ ಚಿಂತಕರಾಗಿದ್ದರು ಎಂದು ಹೇಳಿದರು.ತಾಲ್ಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಬಾಲಗೊಂಡ ಮಾತನಾಡಿ, ನಮ್ಮ ದಿನನಿತ್ಯದ ಕಾಯಕದಲ್ಲಿ ನಿಷ್ಠೆ, ಶ್ರದ್ಧೆ ಮತ್ತು ಭಕ್ತಿ ಇದ್ದರೆ ಅದುವೇ ಕೈಲಾಸವೆಂಬ ಬಸವಣ್ಣನವರ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.ಕಾರ್ಯಕ್ರಮದಲ್ಲಿ ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಮಲ್ಲಪ್ಪ ಗಣಿ ಅವರು ಸ್ವರಚಿತ ಕವನವನ್ನು ಭಜನಾ ಶೈಲಿಯಲ್ಲಿ ಹಾಡಿ ಕಾರ್ಯಕ್ರಮಕ್ಕೆ ಮೆರುಗು ತಂದರು.ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಪಿ.ಎಸ್. ಹುಡೇದ, ಗ್ರಾಮ ಲೆಕ್ಕಾಧಿಕಾರಿ ಬಿ.ಎನ್. ಜಿಡ್ಡಿಮನಿ, ಆನಂದ ಇಂಡಿ, ಸಂಜು ಡೋಣೂರ, ಶಿಕ್ಷಕರಾದ ಕೃಷ್ಣಾ ರಜಪುತ, ಗರಸಂಗಿ ಸರ್ ಹಾಗೂ ಚೈತ್ರಾ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ಬಸವೇಶ್ವರ ದೇವಸ್ಥಾನದಲ್ಲಿ ಅಕ್ಷಯ ತೃತೀಯ ಶುಭದಿನದಂದು ಬಸವ ಜಯಂತಿಯ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಬಸವೇಶ್ವರ ಜಾತ್ರಾ ಮಹೋತ್ಸವ ಭಾರೀ ವಿಜೃಂಭಣೆಯಿಂದ ಜರುಗಿತು.ಮುಂಜಾನೆ ವೇದಮೂರ್ತಿ ಮುರುಘೇಂದ್ರ ಮಹಾಸ್ವಾಮಿಗಳು (ಹಿರೇಮಠ) ಅವರ ಅಮೃತವಾಣಿಯಿಂದ ವೇದಮಂತ್ರಗಳ ಪಠಣದೊಂದಿಗೆ ದೇವಸ್ಥಾನದಲ್ಲಿರುವ ಬಸವೇಶ್ವರ ಶಿಲಾಮೂರ್ತಿಗೆ ರುದ್ರಾಭಿಷೇಕ ಸಹಿತ ಪೂಜಾ ವಿಧಿವಿಧಾನಗಳು ನೆರವೇರಿಸಲಾಯಿತು. ಭಕ್ತರಿಗೆ ಅನ್ನಪ್ರಸಾದದ ವ್ಯವಸ್ಥೆಯೂ ಮಾಡಲಾಗಿತ್ತು.ಸಂಜೆ ಐದು ಗಂಟೆಗೆ ಪಟ್ಟಣದ ರೈತರು ತಮ್ಮ ಎತ್ತುಗಳನ್ನು ಅಲಂಕರಿಸಿಕೊಂಡು ಬಸವೇಶ್ವರ ದೇವಸ್ಥಾನಕ್ಕೆ ಕರೆತಂದರು. ಸುಮಾರು ೧೦೧ಕ್ಕೂ ಅಧಿಕ ಎತ್ತುಗಳೊಂದಿಗೆ ಗೋಮಾತೆಯ ಮೆರವಣಿಗೆ ಮತ್ತು ಪಲ್ಲಕ್ಕಿ ಉತ್ಸವವು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯ ವೈಭವಗಳೊಂದಿಗೆ ನೂರಾರು ರೈತರು ಹಾಗೂ ದೇವಸ್ಥಾನದ ಆಡಳಿತ ಮಂಡಳಿಯವರ ಸಮ್ಮುಖದಲ್ಲಿ ಸಾಂಗೋಪಾಂಗವಾಗಿ ನಡೆಯಿತು.ಗೋಮಾತೆ, ಎತ್ತುಗಳು ಹಾಗೂ ಬಸವೇಶ್ವರ ಮತ್ತು ಅಕ್ಕಮಹಾದೇವಿಯ ಭಾವಚಿತ್ರಗಳ ಮೆರವಣಿಗೆ ದೇವಸ್ಥಾನಕ್ಕೆ ತಲುಪಿದ ಬಳಿಕ ರೈತರಿಗೆ ಉಪಯುಕ್ತವಾಗುವ ಕೃಷಿ ಸಂಬಂಧಿತ ವಿವಿಧ ಬಹುಮಾನಗಳನ್ನು ಆಡಳಿತ ಮಂಡಳಿಯವರು ವಿತರಿಸಿದರು.ತದನಂತರ ಬಸವಣ್ಣನವರ ತೊಟ್ಟಿಲೋತ್ಸವ ಕಾರ್ಯಕ್ರಮವು ನೂರಾರು ಮಹಿಳೆಯರ…

Read More

ವಿಜಯಪುರದಲ್ಲಿ ಜಿಲ್ಲಾಡಳಿತದಿಂದ ಅದ್ದೂರಿ ಬಸವ ಜಯಂತಿ ಕಾರ್ಯಕ್ರಮ | ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೧೨ನೇ ಶತಮಾನದಲ್ಲಿ ಅಣ್ಣ ಬಸವಣ್ಣನವರು ಸೇರಿದಂತೆ ಬಸವಾದಿ ಶರಣರ ವಚನಗಳನ್ನು ಡಾ. ಫ.ಗು ಹಳಕಟ್ಟಿಯಂತವರು ಶರಣರ ವಚನಗಳನ್ನು ಬೆಳಕಿಗೆ ತಂದರು. ಈ ಸಮಾಜಕ್ಕೆ ಶರಣರ ಕೊಡುಗೆ ಅಪಾರ. ಬಸವ ನೆಲದಲ್ಲಿ ಬಸವಣ್ಣನವರ ಚಿಂತನೆಗಳು ಈಗಲೂ, ಎಂದೆಂದಿಗೂ ಪ್ರಸ್ತುತವಾಗಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಂತರಾಯ ರಂಗಮಂದಿರದಲ್ಲಿ ಸೋಮವಾರ ಆಯೋಜಿಸಲಾದ ಬಸವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.೧೨ನೇ ಶತಮಾನದಲ್ಲಿ ಅಸಮಾನತೆ, ಮೇಲು-ಕೀಳು ಅನಿಷ್ಟ ಪದ್ಧತಿ ಮೂಢನಂಬಿಕೆ ತಾಂಡವವಾಡುತ್ತಿತ್ತು. ನಮ್ಮ ನೆಲದಲ್ಲಿ ಜನಿಸಿದ ಬಸವಣ್ಣ ವಚನಗಳ ಮೂಲಕ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಇಷ್ಟಲಿಂಗ ಎಷ್ಟು ಮಹತ್ವ ಹೊಂದಿದೆಯೋ ವಚನ ಸಾಹಿತ್ಯವೂ ಅಷ್ಟೇ ಮಹತ್ವ ಹೊಂದಿದೆ. ಬಸವ ತತ್ವ ಬರೀ ಬಸವಣ್ಣನವರದ್ದಷ್ಟೇ ಅಲ್ಲ, ಅದು ಸಕಲ ಶರಣರ ವಚನಗಳ ಸಾರವಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ ಹೇಳಿದರು.ಸಿಂದಗಿ ನಗರದ ನಾಗೂರ ಬಡಾವಣೆಯಲ್ಲಿರುವ ಎಸ್.ಎಸ್.ವಿ.ವಿ.ವಿ ಸಂಸ್ಥೆಯ ವಿದ್ಯಾನಿಕೇತನ ಪ್ರಾಥಮಿಕ ಶಾಲೆ ಹಾಗೂ ಪ್ರೇರಣಾ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಬಸವಣ್ಣನವರ ೮೯೩ನೇ ಜಯಂತಿಯನ್ನು ಆಚರಿಸಿ ಮಾತನಾಡಿದ ಅವರು, ಲಿಂಗಧಾರಣೆ ಹಾಗೂ ಇಷ್ಟಲಿಂಗ ಪೂಜೆಯು ವೈಜ್ಞಾನಿಕವಾದದ್ದು. ಇದರಿಂದ ಮನಸಿಗೆ ಶಾಂತಿ, ನೆಮ್ಮದಿ ಸಿಗುತ್ತದೆ. ಇಷ್ಟಲಿಂಗ ಪೂಜೆಯಿಂದ ಮನುಷ್ಯನ ವೈಚಾರಿಕತೆ ಹೆಚ್ಚಿಸಲು ಸಾಧ್ಯ ಎಂದರು.ಈ ವೇಳೆ ಸಂಸ್ಥೆಯ ನಿರ್ದೇಶಕ ಪಿ.ಡಿ.ಕುಲಕರ್ಣಿ, ವಿದ್ಯಾನಿಕೇತನ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ, ಪ್ರೇರಣಾ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಎಮ್.ಪಿ.ಬುಕ್ಕಾ ಶಿಕ್ಷಕರಾದ ಸತೀಶ ಕುಲಕರ್ಣಿ, ಅಲ್ತಾಫ್ ತಾಂಬೋಳಿ, ಕುಮಾರ ಕಿರಣ ಕುಲಕರ್ಣಿ, ಸಂತೋಷ ಕುಂಟೋಜಿ, ಅಕ್ಷಯ ಯಲಗಟ್ಟಿ, ಶ್ರೀಕಾಂತ ಹೂನಳ್ಳಿ, ಬಿ.ಎಸ್.ಪಾಟೀಲ, ಎಸ್.ವಿ.ಕಡಣಿ, ಎಮ್.ಎಮ್.ಜುಮನಾಳ, ಎಮ್.ಜಿ.ಧ್ಯಾಮಗೊಂಡ, ವಿ.ಎ.ನಾಯಕ, ಎಮ್. ಜಿ.ಬಳಗಾನೂರ,…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಬಾಬಾಸಾಹೇಬರು ನೀಡಿರುವ ಸಂವಿಧಾನದಡಿಯಲ್ಲಿ ನಾವೆಲ್ಲರೂ ಕಾರ್ಯನಿರ್ವಹಿಸಬೇಕು. ಅಧಿಕಾರ ಯಾವಾಗಲೂ ಜನಪರವಾಗಿರಬೇಕು. ಅಧಿಕಾರ ಎನ್ನುವುದು ಸೇವೆ ಎಂಬ ಮನೋಭಾವದಿಂದ ಕೂಡಿರಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ತಾಲೂಕಿನ ಗಬಸಾವಳಗಿ ಗ್ರಾಮದಲ್ಲಿ ನಡೆದ ೨೦೨೫-೨೬ ಸಾಲಿನ ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಶ್ರೀ ಸಿದ್ರಾಮೇಶ್ವರ ದೇವಸ್ಥಾನ ಹತ್ತಿರ ರೂ.೨೫ಲಕ್ಷ ಮೊತ್ತದ ಸಮುದಾಯ ಭವನದ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದ ಅವರು, ಶರಣರ, ಸಂತರ, ಸ್ವಾತಂತ್ರ್ಯ ಹೋರಾಟಗಾರರ ಹಾಗೂ ದಾರ್ಶನಿಕರ ಆಚಾರ, ವಿಚಾರ, ಸಂಪ್ರದಾಯ ಮತ್ತು ತತ್ವಾದರ್ಶಗಳನ್ನು ಮುಂದಿನ ಯುವ ಪೀಳಿಗೆಗೆ ವರ್ಗಾವಣೆಯಾಗಬೇಕಾದರೆ ಗ್ರಾಮೀಣ ಪ್ರದೇಶಗಳಲ್ಲಿ ಕಾಲಕ್ಕೆ ಅನುಗುಣವಾಗಿ ಪುರಾಣ-ಪ್ರವಚನ, ಉಪನ್ಯಾಸಗಳು ನಡೆಯಬೇಕು. ಗ್ರಾಮದ ಅಭಿವೃದ್ಧಿಗಾಗಿ ಸದಾ ಶ್ರಮಿಸುತ್ತೇನೆ. ಶ್ರೀ ಸಿದ್ರಾಮೇಶ್ವರ ದೇವಸ್ಥಾನ ಜಿರ್ಣೋದ್ಧಾರಕ್ಕೆ ಗ್ರಾಮಸ್ಥರ ಈಗಾಗಲೇ ರೂ.೭೦ಲಕ್ಷ ಹಣವನ್ನು ದೇಣಿಗೆಯ ಮೂಲಕ ಸಂಗ್ರಹಣೆ ಮಾಡಿ ೧೪ ನಿವೇಶನಗಳನ್ನು ಖರೀದಿ ಮಾಡಿದ್ದಾರೆ. ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಶ್ರೀ ಸಿದ್ರಾಮೇಶ್ವರ ದೇವಸ್ಥಾನ ಹತ್ತಿರ…

Read More

ಸಿಂದಗಿಯಲ್ಲಿ ನಡೆದ ಬಸವಣ್ಣನವರ ಜಯಂತ್ಯುತ್ಸವದಲ್ಲಿ ಶಾಸಕ ಅಶೋಕ ಮನಗೂಳಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ೧೨ನೇ ಶತಮಾನದಲ್ಲಿಯೇ ಅನುಭವ ಮಂಟಪವನ್ನು ಸ್ಥಾಪಿಸಿ ಸಾಮಾಜೋದ್ಧಾರ್ಮಿಕ ಸಮಾನತೆಗೆ ಶ್ರಮಿಸಿದ ಬಸವಣ್ಣನವರ ಅಂದಿನ ಅನುಭವ ಮಂಟಪದ ಪರಿಕಲ್ಪನೆಗಳೇ ಇಂದಿನ ಭಾರತದ ಸಂವಿಧಾನಕ್ಕೆ ತಳಹದಿಯಾಗಿವೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ನಗರದ ಬಸವೇಶ್ವರ ವೃತ್ತದಲ್ಲಿ ಹಮ್ಮಿಕೊಂಡ ಬಸವಣ್ಣನವರ ೮೯೩ನೇ ಜಯಂತ್ಯುತ್ಸವದ ಭವ್ಯ ಮೆರವಣಿಗೆಗೆ ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಯುಗಪುರುಷ ಬಸವಣ್ಣನವರು ಮನೆಯಿಂದಲೇ ವೈಚಾರಿಕ ಕ್ರಾಂತಿಯನ್ನು ಆರಂಭಿಸಿದರು. ಬಸವಣ್ಣನವರು ವಿಶ್ವದ ಶ್ರೇಷ್ಠ ದಾರ್ಶನಿಕರಲ್ಲಿ ಮುಂಚೂಣಿಯಲ್ಲಿದ್ದವರು. ಎಲ್ಲ ಧರ್ಮಕ್ಕಿಂತ ಕಾಯಕ ಧರ್ಮ ದೊಡ್ಡದು. ಅಹಿಂಸೆಯೇ ಮಾನವ ಧರ್ಮವನ್ನು ಧೀರ್ಘಕಾಲ ಬಾಳಿಸಬಲ್ಲದು ಎಂಬುದನ್ನು ಜಗತ್ತಿಗೆ ಸಾರಿದ ಬಸವಣ್ಣ ವಿಶ್ವ ಸಾಂಸ್ಕೃತಿಕ ನಾಯಕರು. ಇವರನ್ನು ರಾಜ್ಯ ಸರ್ಕಾರ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವುದು ನಮಗೆಲ್ಲ ಹೆಮ್ಮೆಯ ಸಂಗತಿಯಾಗಿದೆ ಎಂದರು.ಈ ವೇಳೆ ತಹಶೀಲ್ದಾರ ಕರೆಪ್ಪ ಬೆಳ್ಳಿ, ಯೋಜನಾ ಪ್ರಾಧಿಕಾರ ಅಧ್ಯಕ್ಷ ಹಣಮಂತ ಸುಣಗಾರ, ಅಖಿಲ ಭಾರತ ವೀರಶೈವ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ ಜಮಖಂಡಿಯಲ್ಲಿ ಸೋಮವಾರ ಸಾಂಸ್ಕೃತಿಕ ವಿಭಾಗ ಹಾಗೂ ಐ.ಕ್ಯೂ.ಎ.ಸಿ. ಇವರ ಸಂಯುಕ್ತ ಆಶ್ರಯದಲ್ಲಿ “ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 893ನೇ ಬಸವ ಜಯಂತಿ”ಯನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ವೈ. ವೈ. ಕೊಕ್ಕನವರ, ಕನ್ನಡ ಸಹ ಪ್ರಾಧ್ಯಾಪಕರು ಇವರು ಮಾತನಾಡುತ್ತಾ “ವಿಶ್ವಗುರು ಬಸವಣ್ಣನವರು 12ನೇ ಶತಮಾನದ ಮಹಾನ್ ಸಮಾಜ ಸುಧಾರಕರಾಗಿ, ಸಮಾನತೆ, ಶ್ರಮದ ಗೌರವ ಮತ್ತು ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚಿಂತಕರು. ಅವರು ಕಲ್ಯಾಣದಲ್ಲಿ ಅನೇಕ ಸಾಮಾಜಿಕ ಕ್ರಾಂತಿಗಳನ್ನು ಮಾಡಿ ‘ಅನುಭವ ಮಂಟಪ’ದ ಮೂಲಕ ಎಲ್ಲ ವರ್ಗದ ಜನರಿಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ವೇದಿಕೆಯನ್ನು ನಿರ್ಮಿಸಿದರು. ಅವರ ವಚನ ಸಾಹಿತ್ಯವು ಸಮಾಜದ ಅಂಧಶ್ರದ್ಧೆಗಳನ್ನು ನಿವಾರಿಸಿ. ಸತ್ಯ, ಧರ್ಮ ಹಾಗೂ ನೈತಿಕತೆಯ ಮಾರ್ಗವನ್ನು ತೋರಿಸುತ್ತದೆ. ಬಸವಣ್ಣನವರ ಸಾಧನೆಗಳು ಇಂದಿಗೂ ಸಮಾಜಕ್ಕೆ ದೀಪಸ್ತಂಭವಾಗಿವೆ” ಎಂದು ತಿಳಿಸಿದರು.ಅಧ್ಯಕ್ಷತೆಯನ್ನು ವಹಿಸಿದ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಸುನಂದಾ ಎಸ್. ಶಿರೂರ ಮಾತನಾಡುತ್ತಾ “ಬಸವಣ್ಣನವರ…

Read More