Author: editor.udayarashmi@gmail.com

ಡಾ.ಶಶಿಕಾಂತ ಪಟ್ಟಣ* ರಾಮದುರ್ಗ – ಪುಣೆ *ಉದಯರಶ್ಮಿ ದಿನಪತ್ರಿಕೆ* ವೀರಶೈವರಿಗೆ ಪರ್ಯಾಯ ಸಂಘಟನೆಯೊಂದೇ ಪರಿಹಾರವಲ್ಲ, ಅಖಿಲ ಭಾರತ ವೀರಶೈವ ಮಹಾಸಭೆ ಸ್ಥಾಪಿತವಾಗಿ 121 ವರ್ಷಗಳು ಕಳೆದಿವೆ . ಅಂದಿನ ಕಾಲಕ್ಕನುಗುಣವಾಗಿ ವೀರಶೈವ ಲಿಂಗಾಯತ ಒಂದೇ ಎನ್ನುವ ಭಾವವಿತ್ತು ಅಭಿಪ್ರಾಯಗಳು ಒಂದೇ ಇದ್ದವು. ಉತ್ತರ ಕನ್ನಡ ಭಾಷೆಯಲ್ಲಿ ಕೇವಲ ಲಿಂಗಾಯತ ಇತ್ತು 1978 ರ ಈಚೆಗೆ ವೀರಶೈವ ದಕ್ಷಿಣದಿಂದ ಉತ್ತರ ಗಂಡು ಕನ್ನಡಿಗರ ಹೆಗಲ ಮೇಲೇರಿತು. ಇಂದು ಪರ್ಯಾಯ ಸಂಘಟನೆ ಮಾಡಿ ಸಂಘರ್ಷಕ್ಕಿಳಿಯುತ್ತೇವೆ ಎಂದೆನ್ನುವುದು ಒಂದು ಭ್ರಾ೦ತಿ ಭ್ರಮೆ. ಎಲ್ಲವೂ ಕೊನೆಗೊಳ್ಳುವುದು ರಾಜಕೀಯ ಲೆಕ್ಕಾಚಾರ. *ನನ್ನ ಕೆಲವು ಪ್ರಶ್ನೆಗಳು ಸಂಬಂಧಿತರು ಉತ್ತರಿಸಲಿ* ನ್ಯಾಯಮೂರ್ತಿ ಶ್ರೀ ನಾಗಮೋಹನದಾಸ ಅವರು ಸಲ್ಲಿಸಿದ ವರದಿ ಆಧಾರದ ಮೇಲೆ ಕರ್ನಾಟಕ ಅಂದಿನ ಸರಕಾರವು ಕೇಂದ್ರ ಮೈನಾರಿಟಿ ಇಲಾಖೆಗೆ ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿದ ಮೇಲೆ ಸಂಬಂಧಿತ ಲಿಂಗಾಯತ ಮಠಗಳು ಸಂಘಟನೆಗಳು ಕಳೆದ ಏಳು ವರ್ಷಗಳಿಂದ ಮತ್ತೆ ಪುಷ್ಠೀಕರಿಸಿದ ಅರ್ಜಿಯನ್ನು ಏಕೆ ಸಲ್ಲಿಸಲಿಲ್ಲ? ಅವತ್ತಿನ ಸಮ್ಮಿಶ್ರ ಸರಕಾರ ಕೇಂದ್ರ ಸರಕಾರಕ್ಕೆ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣ ಬಸವೇಶ್ವರ ವೃತ್ತದಲ್ಲಿ ಕಾಶ್ಮೀರದ ಪೆಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಕ್ಷಿಪಣಿ ದಾಳಿ ಕೈಗೊಂಡಿರುವ ಆಪರೇಷನ್ ಸಿಂಧೂರ ಕಾರ್ಯಾಚರಣೆ ಯಶಸ್ವಿಯಾಗಿದ್ದಕ್ಕೆ ಬುಧವಾರ ರಾಷ್ಟ್ರೀಯ ಬಸವಸೈನ್ಯ ಸಂಘಟನೆಯಿಂದ ವಿಜಯೋತ್ಸವ ಆಚರಣೆ ಮಾಡಲಾಯಿತು.ಭಾರತ ಮಾತಾ ಕೀ ಜೈ, ಭಾರತೀಯ ಸೈನ್ಯಕ್ಕೆ ಜೈ, ಪಾಪಿ ಪಾಕಿಸ್ತಾನಕ್ಕೆ ಧಿಕ್ಕಾರ ಘೋಷಣೆಗಳನ್ನು ಕೂಗುತ್ತಾ ಬಸವೇಶ್ವರ ವೃತ್ತದಲ್ಲಿ ಸೇರಿದ ರಾಷ್ಟ್ರೀಯ ಬಸವಸೈನ್ಯದ ಕಾರ್ಯಕರ್ತರು ನಂತರ ಪಟಾಕಿ ಸಿಡಿಸಿ ಪರಸ್ಪರ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ವಿಜಯೋತ್ಸವದಲ್ಲಿ ರಾಷ್ಟ್ರೀಯ ಬಸವಸೈನ್ಯದ ಕಾರ್ಯಕರ್ತರು ತ್ರಿವರ್ಣ ಧ್ವಜಗಳನ್ನು ಹಿಡಿದು ಸಂಭ್ರಮಿಸಿದರು.ಈ ಸಂದರ್ಭದಲ್ಲಿ ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಮಾತನಾಡಿ, ನಮ್ಮ ಹೆಮ್ಮೆಯ ಭಾರತೀಯ ಸೈನ್ಯದ ಜೊತೆ ನಾವು ಸದಾ ಇದ್ದೇವೆ. ನಿನ್ನೆ ಮದ್ಯರಾತ್ರಿ ಪಾಕಿಸ್ತಾನದ ಭಯೋತ್ಪಾದಕ ಕೇಂದ್ರಗಳ ಮೇಲೆ ಭಾರತೀಯ ಸಶಸ್ತ್ರ ಪಡೆ ಕ್ಷಿಪಣಿ ದಾಳಿ ಮಾಡಿ ಉಗ್ರರ ಅಡುಗು ತಾಣಗಳನ್ನು ನಾಶ ಮಾಡಿ ಅನೇಕ ಉಗ್ರರನ್ನು ಸದೆ ಬಡಿದ ಭಾರತೀಯ ಸೈನ್ಯದ ಅಪರೇಷನ್…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಸಂಸಾರದಲ್ಲಿ ಗಂಡು-ಹೆಣ್ಣು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಇಬ್ಬರು ಸಾಮರಸ್ಯದಿಂದ ಜೀವನ ಮಾಡಿದರೆ ಸಂಸಾರ ಸುಖಮಯವಾಗಿರುತ್ತದೆ ಎಂದು ಬಸವನಬಾಗೇವಾಡಿ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ತಾಲೂಕಿನ ಅರಳಿಚಂಡಿ ಗ್ರಾಮದ ಗ್ರಾಮದೇವತೆ ಆದಿದೇವಿಶಕ್ತಿ ಜಾತ್ರಾಮಹೋತ್ಸವದಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಉಡಿ ತುಂಬುವ ಕಾರ್ಯಕ್ರಮ ಹಾಗೂ ಧರ್ಮಸಭೆಯಲ್ಲಿ ಉಪದೇಶಾಮೃತ ನೀಡಿ ಮಾತನಾಡಿದ ಅವರು, ನಮ್ಮ ದೇಶದಲ್ಲಿ ಮಹಿಳೆಯರಿಗೆ ಅನಾದಿ ಕಾಲದಿಂದಲೂ ಪೂಜನೀಯ ಸ್ಥಾನ ನೀಡಲಾಗಿದೆ. ಜನ್ಮ ನೀಡಿದ ತಾಯಿಯನ್ನು, ಪ್ರತಿಯೊಬ್ಬ ಪತಿ ತನಗಾಗಿ ಜನ್ಮ ಪಡೆದ ಪತ್ನಿಯನ್ನು, ಜನ್ಮ ಪಡೆದ ಮಗಳನ್ನು ಈ ಮೂವರು ಮಹಿಳೆಯನ್ನು ಪ್ರೀತಿಸುವಂತಾದರೆ ಮಹಿಳೆಯರಿಗೆ ನಿಜವಾದ ಗೌರವ ನೀಡಿದಂತೆ. ಪ್ರತಿಯೊಬ್ಬರಿಗೂ ಮಹಿಳೆಯರಿಗೆ ಗೌರವ ನೀಡಿದರೆ ನಮ್ಮ ಸಂಸ್ಕ್ರತಿ ಉಳಿದಂತಾಗುತ್ತದೆ ಎಂದರು.ಭಾರತ ದೇಶದಲ್ಲಿ ದೈವ ಶಕ್ತಿ ಅಪಾರವಾಗಿದೆ. ಪ್ರತಿಯೊಬ್ಬರೂ ತಮಗೆ ಕಷ್ಟ ಬಂದಾಗ ದೇವರ ಮೊರೆ ಹೋಗಿ ಪರಿಹಾರ ಕಾಣುವದು ಸಹಜ. ಅರಳಿಚಂಡಿ ಗ್ರಾಮದಲ್ಲಿರುವ ಗ್ರಾಮದೇವತೆ ಆದಿಶಕ್ತಿದೇವತೆಯು ಅಪಾರ ಶಕ್ತಿಯನ್ನು ಹೊಂದಿದ್ದಾಳೆ. ಈ ದೇವಿಯಲ್ಲಿ ಕಷ್ಟವನ್ನು ಹೇಳಿಕೊಂಡು ಬಂದ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದ ಸಿಂದಗಿ ಮತಕ್ಷೇತ್ರದ ಗುಗಿಹಾಳ ಗ್ರಾಮವನ್ನು ಕಂದಾಯ ಗ್ರಾಮವನ್ನಾಗಿ ಮಾಡಲಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಗುಗಿಹಾಳ ಗ್ರಾಮಸ್ಥರಿಂದ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು, ಕಳೆದ ೨೦೨೩ರ ಸಿಂದಗಿ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಯಲ್ಲಿ ಗುಗಿಹಾಳ ಗ್ರಾಮವನ್ನು ಕಂದಾಯ ಗ್ರಾಮವನ್ನಾಗು ಮಾಡುತ್ತೇನೆ ಎಂದು ಹೇಳಿದ್ದೆ. ಅವರಿಗೆ ಕೊಟ್ಟ ಮಾತಿನಂತೆ ಗುಗಿಹಾಳ ಗ್ರಾಮವನ್ನು ಕಂದಾಯ ಗ್ರಾಮವನ್ನಾಗಿ ಮಾಡಿರುವೆ. ಇದಕ್ಕೆ ಸಹಕರಿಸಿದ ರಾಜ್ಯ ಸರಕಾರದ ಸಿಎಂ, ಡಿಸಿಎಂ, ಕಂದಾಯ ಸಚಿವರಿಗೆ ಹಾಗೂ ಅಧಿಕಾರಿಗಳಿಗೆ ಕೃತಜ್ಞತೆಗಳನ್ನು ತಿಳಿಸುತ್ತೇನೆ ಎಂದರು.ಇದೇ ಸಂದರ್ಭದಲ್ಲಿ ಕಾಂತನಗೌಡ ಪಾಟೀಲ, ಹಮಿದ ಚೌಧರಿ, ಲಕ್ಷ್ಮಣ ಗುಗಿಹಾಳ, ಚಾಂದ ಕಸಾಬ, ಮಾಶ್ಯಾಕ ಕಸಬ್, ಸೈಪಾಂ ಕಸಬ್, ಸೈಪನ ಚೌಧರಿ, ಗುಲಾಮ ಕೊರಬು, ವಜೀರ ಗುಗಿಹಾಳ ಸೇರಿದಂತೆ ಅನೇಕರಿದ್ದರು.

Read More

ಶ್ರೀಶೈಲದ ಜಗದ್ಗುರು ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರ ಅಭಿಮತ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ನಮ್ಮ ದೇಶ ಧರ್ಮಪ್ರಧಾನವಾಗಿರುವ ದೇಶ. ಧರ್ಮ ಮತ್ತು ದೇವರು ಈ ದೇಶದ ತಾಯಿ ಬೇರುಗಳಿದ್ದಂತೆ. ಪ್ರಸಂಗ ಬಂದರೆ ನಮ್ಮ ಜನತೆ ಧರ್ಮ ಮತ್ತು ದೇವರಿಗಾಗಿ ಎಂತಹ ತ್ಯಾಗಕ್ಕೂ ಸನ್ನದ್ಧರಾಗುತ್ತಾರೆ ಎಂದು ಶ್ರೀಶೈಲದ ೧೦೦೮ ಜಗದ್ಗುರು ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು ನುಡಿದರು.ಪಟ್ಟಣದ ವಿನಾಯಕ ನಗರದ ಶ್ರೀ ವಿನಾಯಕ ಹಾಗೂ ಶ್ರೀ ಭದ್ರಕಾಳಿ ಸಮೇತ ಶ್ರೀ ವೀರಭದ್ರೇಶ್ವರರ ನೂತನ ದೇವಸ್ಥಾನ ಲೋಕಾರ್ಪಣೆ ಹಾಗೂ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಧರ್ಮಸಭೆಯಲ್ಲಿ ದಿವ್ಯ ಸಾನಿಧ್ಯವಹಿಸಿ ಅವರು ಆಶೀರ್ವಚನ ನೀಡಿದರು.ಪ್ರಪಂಚದಲ್ಲಿ ಎರಡು ಪ್ರಕಾರದ ದೇವಾಲಯಗಳಿವೆ. ದೇವರು ಬಂದು ನೆಲೆಸಲೆಂದು ಭಕ್ತರೆಲ್ಲ ಕೂಡಿ ನಿರ್ಮಿಸಿದ ದೇವಾಲಯಗಳು ಒಂದು ಪ್ರಕಾರದ್ದಾದರೆ ದೇವರು ಭಕ್ತರ ಕಷ್ಟಗಳನ್ನು ಪರಿಹರಿಸಲು ತಾನೇ ನಿರ್ಮಿಸಿಕೊಂಡ ದೇವಾಲಯಗಳು ಮತ್ತೊಂದು ಪ್ರಕಾರದ್ದಾಗಿವೆ. ಇಲ್ಲಿನ ದೇವಾಲಯ ನಿರ್ಮಿಸಲು ನೀವೆಲ್ಲ ಸಾಕಷ್ಟು ಶ್ರಮ ಪಟ್ಟಿದ್ದೀರಿ ಇದು ಮಾನವ ನಿರ್ಮಿತ ದೇವಾಲಯ. ಇನ್ನು ದೇವ ನಿರ್ಮಿತ ದೇವಾಲಯ ಎಂದರೆ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಪಟ್ಟಣದ ತಾಲೂಕು ಕ್ರೀಡಾಂಗಣದ ಅಭಿವೃದ್ಧಿಗಾಗಿ ಸರಕಾರ ಯುವಜನ ಹಾಗೂ ಕ್ರೀಡಾ ಇಲಾಖೆಯ ಮೂಲಕ ಒಂದು ಕೋಟಿ ರೂಪಾಯಿ ಅನುದಾನ ನೀಡಿದ್ದು ಕ್ರೀಡಾಪಟುಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಅಲ್ಲಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಯಶವಂತರಾಯ ಗೌಡ ಪಾಟೀಲ ತಿಳಿಸಿದರು.ಅವರು ಬುಧವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕ ಕ್ರೀಡಾಂಗಣದ ಅಭಿವೃದ್ಧಿಯ ಕುರಿತು ಹಮ್ಮಿಕೊಂಡ ಸಭೆಯಲ್ಲಿ ಮಾತನಾಡಿದರು,ತಾಲೂಕಿನ ಕ್ರೀಡಾಪಟುಗಳಿಗೆ ಅನುಕೂಲವಾಗುವ ರೀತಿಯಲ್ಲಿ ಯೋಜನೆಗಳನ್ನು ರೂಪಿಸಿ ಎಂದು ಸಲಹೆ ನೀಡಿದರು.ಕ್ರಿಕೆಟ್, ಹಾಕಿ, ಫುಟ್ಬಾಲ್,ವಾಲಿಬಾಲ್, ಸೇರಿದಂತೆ ಇಂಡೋರ್ ಹಾಗೂ ಔಟ್ ಡೋರ್ ಆಟಗಳನ್ನು ಆಡಿಸಲು ಪ್ರಯತ್ನಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.ಅಂಕ ಕ್ರೀಡಾಂಗಣ ಕ್ರೀಡಾಪಟುಗಳಿಗೆ ಅನುಕೂಲವಾಗಬೇಕು ವಿದ್ಯಾರ್ಥಿಗಳು ಹಾಗೂ ಹಿರಿಯರು ಅಲ್ಲಿ ಬಂದು ಕಾಲ ಕಳೆಯುವಂತಹ ವಾತಾವರಣ ನಿರ್ಮಾಣ ಆಗಬೇಕು.ಬೇರೆ ಬೇರೆ ತಾಲೂಕುಗಳು ಜನ ಇಂಡಿ ಕ್ರೀಡಾಂಗಣ ನೋಡಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವಂತೆ ಮಾದರಿ ಕ್ರೀಡಾಂಗಣ ಮಾಡಲು ಸೂಚಿಸಿದರು.ಈ ಸಂದರ್ಭದಲ್ಲಿ ಯುವಜನ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಗಿ, ಪುರಸಭೆ ಮುಖ್ಯ…

Read More

ಶ್ರೀ ಪದ್ಮರಾಜ ಮಹಿಳಾ ಪದವಿ ಕಾಲೇಜು ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಸನ್ಮಾನ ಸಮಾರಂಭ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಓದಿನೊಂದಿಗೆ ಸಾಧನೆ ಮಾಡಲು ಬಡತನ ಎಂಬುದು ಅಡ್ಡಿಯಾಗಲಾರದು. ನನ್ನ ಈ ಸಾಧನೆಗೆ ನನ್ನ ಕುಟುಂಬ ಪಾತ್ರ ಹಿರಿದಾದದ್ದು ಎಂದು ವೈದ್ಯಾಧಿಕಾರಿ ಪ್ರಾ.ಆ.ಕೇಂದ್ರ ಮಡಕೇಶ್ವರ ಹಾಗೂ ಯುಪಿಎಸ್‌ಸಿ ಪರೀಕ್ಷೆಯಲ್ಲಿ ೪೮೨ ರ‍್ಯಾಂಕ್ ಪಡೆದ ಡಾ.ಮಹೇಶ ಆರ್.ಮಡಿವಾಳರ ಹೇಳಿದರು.ಪಟ್ಟಣದ ಶ್ರೀ ಪದ್ಮಾರಜ ಮಹಿಳಾ ಪದವಿ ಮಹಾವಿದ್ಯಾಲಯದ ಸಭಾಭವನದಲ್ಲಿ ಶ್ರೀಪದ್ಮರಾಜ ಮಹಿಳಾ ಪದವಿ ಕಾಲೇಜು ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಸನ್ಮಾನ ಸಮಾರಂಭದ ಮುಖ್ಯ ಅತಿಥಿ ಸ್ಥಾನವನ್ನು ಅಲಂಕರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ದಿಕ್ಕು ಬದಲಾವಣೆ ಮಾಡುವುದೇ ಪದವಿ. ಮನೆಯ ಜವಾಬ್ದಾರಿಯಲ್ಲಿ ಪುರುಷನಷ್ಟೇ ಪಾತ್ರ ಮಹಿಳೆಯದ್ದು ಆಗಿರುತ್ತದೆ. ಮಹಿಳೆ ಹೆಚ್ಚಿನ ಸವಾಲುಗಳನ್ನು ಎದುರಿಸಬೇಕಾದ ಪರಿಸ್ಥಿತಿಯಲ್ಲಿಯೇ ಸಾಧನೆ ಮಾಡಲೇಬೇಕು. ಅಸಮಾನತೆ, ಬಡತನ ಇವೆಲ್ಲವನ್ನು ಮೆಟ್ಟಿನಿಂತು ಸಾಧನೆ ಮಾಡಬೇಕು. ವಿದ್ಯಾರ್ಥಿಗಳು ನಿರಂತರವಾಗಿ ಓದಿನಲ್ಲಿ ತೊಡಗಿಕೊಳ್ಳಬೇಕು. ಶಿಕ್ಷಣ. ಶಾಂತಿ, ಸತ್ಯ, ಅಹಿಂಸೆ ಮಾರ್ಗದಿಂದ ಮೊದಲು ಎಲ್ಲವನ್ನು ಪಾಲಿಸೋಣ. ವಿದ್ಯಾರ್ಥಿಗಳು ಓದಿನಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ೧೧೦/೩೩/೧೧ ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ಸಿಂದಗಿ ಪಟ್ಟಣ, ಯರಗಲ್ ಐಪಿ, ಸುಂಗಠಾಣ ಐಪಿ ಮತ್ತು ಯಂಕಂಚಿ ಐಪಿ ೧೧ ಕೆವ್ಹಿ ಮಾರ್ಗಗಳಲ್ಲಿ ಮೇ.೦೮ರಂದು ಬೆಳಿಗ್ಗೆ ೮ಗಂಟೆಯಿಂದ ಸಾಯಂಕಾಲ ೬ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸದರಿ ಮಾರ್ಗಗಳ ಮೇಲೆ ಬರುವ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಸಿಂದಗಿ ಹೆಸ್ಕಾಂ ಉಪ-ವಿಭಾಗದ ಸಹಾಯಕ ನಿರ್ವಾಹಕ ಅಭಿಯಂತರರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ರಾಷ್ಟ್ರೀಯ ಮೀನುಗಾರರ ಸಂಘದ ರಾಷ್ಟ್ರೀಯ ಉಪಾಧ್ಯಕ್ಷ ಡಾ. ಗೌತಮ್ ಆರ್ ಚೌಧರಿ ಶ್ಲಾಘನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: “ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಭಾರತ ಸರ್ಕಾರದ ದಿಟ್ಟ ನಿರ್ಧಾರವಾಗಿದೆ. ಈಚೆಗೆ ಕಾಶ್ಮೀರದ ಪೆಹೆಲ್ಗಾಮ್ನಲ್ಲಿ ನಡೆದ ಘೋರ ಹತ್ಯಾಕಾಂಡಕ್ಕೆ ಉತ್ತರವಾಗಿ ನಮ್ಮ ಸೇನೆಯಿಂದ ಪಿಓಕೆ ಮತ್ತು ಪಾಕಿಸ್ತಾನದಲ್ಲಿರುವ ೨೧ ಉಗ್ರರ ತಾಣಗಳ ಮೇಲೆ ಧಾಳಿ ನಡೆಸಿ ಧ್ವಂಸಗೊಳಿಸಿ ಉಗ್ರರನ್ನು ಹತ್ಯೆಗೈದಿರುವುದು ನಮ್ಮ ಶಕ್ತಿ ಏನೆಂದು ಹೇಡಿ ಪಾಕಿಸ್ತಾನಕ್ಕೆ ತಿಳಿಸಿದಂತಾಗಿದೆ ಎಂದು ರಾಷ್ಟ್ರೀಯ ಮೀನುಗಾರರ ಸಂಘದ ರಾಷ್ಟ್ರೀಯ ಉಪಾಧ್ಯಕ್ಷರಾದ ಡಾ. ಗೌತಮ್ ಆರ್ ಚೌಧರಿ ಹೇಳಿದ್ದಾರೆ.ಬುಧವಾರ ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು, ಈಚೆಗೆ ಕಾಶ್ಮೀರದ ಪೆಹಲ್ಗಾಮ್ದಲ್ಲಿ ಉಗ್ರರು ಮಾಡಿದ ದಾಳಿಗೆ ಅಮಾಯಕ ಪ್ರವಾಸಿಗರು ಬಲಿಯಾಗಿದ್ದರು. ಇದರಲ್ಲಿ ಅನೇಕ ಮಹಿಳೆಯರು ತಮ್ಮ ಸಿಂಧೂರವನ್ನು ಕಳೆದುಕೊಂಡಿದ್ದರು. ಇದಕ್ಕೆ ಪ್ರತಿಕಾರವಾಗಿ ಕೇಂದ್ರ ಸರ್ಕಾರವು ನಮ್ಮ ಸೈನಿಕರಿಂದ ನಿನ್ನೆ ಮಧ್ಯರಾತ್ರಿ “ಆಪರೇಶನ್ ಸಿಂಧೂರ” ಕಾರ್ಯಾಚರಣೆ ಮಾಡಿ ಮೂಲಕ ನೂರಾರು ಉಗ್ರರನ್ನು ಹತ್ಯೆ ಮಾಡುವ ಮೂಲಕ ಪ್ರತಿಕಾರ ನೀಡಿದೆ. ಇದು ನಾವೆಲ್ಲರೂ…

Read More

ರಾಷ್ಟ್ರೀಯ ಮೀನುಗಾರರ ಸಂಘದ ರಾಷ್ಟ್ರೀಯ ಉಪಾಧ್ಯಕ್ಷ ಡಾ.ಗೌತಮ್ ಚೌಧರಿ ಅವರ ಜನ್ಮದಿನದ ಪ್ರಯುಕ್ತ ಅವರನ್ನು ಸನ್ಮಾನಿಸಿದ “ಉದಯರಶ್ಮಿ” ಪತ್ರಿಕಾ ಬಳಗ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಬಡವರ ಸೇವೆಯಲ್ಲಿ ದೇವರನ್ನು ಕಾಣುತ್ತಿರುವ ಮಾನವೀಯ ಕಳಕಳಿಯ ಡಾ.ಗೌತಮ್ ಚೌಧರಿ ಅವರ ಸೇವೆಯನ್ನು ಇಂದಿನ ಯುವ ವೈದ್ಯರು ಅನುಸರಿಸಬೇಕು ಎಂದು “ಉದಯರಶ್ಮಿ” ಸಂಪಾದಕ ಇಂದುಶೇಖರ ಮಣೂರ ಹೇಳಿದರು.ಬುಧವಾರ ಸಂಜೆ ಬೆಂಗಳೂರಿನ ಅವರ ಆಸ್ಪತ್ರೆಯಲ್ಲಿ “ಉದಯರಶ್ಮಿ” ಪತ್ರಿಕಾ ಬಳಗದೊಂದಿಗೆ ರಾಷ್ಟ್ರೀಯ ಮೀನುಗಾರರ ಸಂಘದ ರಾಷ್ಟ್ರೀಯ ಉಪಾಧ್ಯಕ್ಷರಾದ ಡಾ.ಗೌತಮ್ ಚೌಧರಿ ಅವರ ಜನ್ಮದಿನದ ಪ್ರಯುಕ್ತ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು.ಡಾ.ಗೌತಮ್ ಚೌಧರಿ ಅವರು ಬಸವಾದಿ ಶರಣರ ಹಾದಿಯಲ್ಲಿ ಸಾಗುತ್ತಿದ್ದು, ವಿಜಯಪುರ ಜಿಲ್ಲೆಯ ಗ್ರಾಮಗಳಲ್ಲಿ ಆಗಾಗ ಆರೋಗ್ಯ ಉಚಿತ ಶಿಬಿರಗಳ ಮೂಲಕ ಸದ್ದಿಲ್ಲದೆ, ಪ್ರಚಾರದ ಹಂಗಿಲ್ಲದೇ ಆರೋಗ್ಯ ದಾಸೋಹದಲ್ಲಿ ತಮ್ಮನ್ನು ತೊಡಗಿಸಿಕೊಂಡದ್ದು ಅನುಕರಣೀಯ ನಡೆಯಾಗಿದೆ ಎಂದರು.ಈ ವೇಳೆ ಡಾ.ಗೌತಮ್ ಚೌಧರಿ ಮಾತನಾಡಿ, ಬಡರೋಗಿಗಳ ಸೇವೆಯಲ್ಲಿ ತಾವು ತಮ್ಮ ತಂದೆ ಮಾಜಿ ಸಚಿವ ದಿ. ಡಾ.ಆರ್.ಬಿ.ಚೌಧರಿ ಅವರನ್ನು ಕಾಣುತ್ತಿದ್ದು ಇದನ್ನು ನಿರಂತರ…

Read More