Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಕೈಗಾರಿಕೆ ತರಬೇತಿ ಸಂಸ್ಥೆ(ಐಟಿಐ)ಯಲ್ಲಿ ಸೋಮವಾರ ಕೋಲಾರದ ಹೋಂಡಾ ಮೋಟಾರ್ ಸೈಕಲ್ ಸ್ಕೂಟರ್ ಇಂಡಿಯಾ ಪ್ರೈ. ಲಿ ಕಂಪನಿ ಅಪ್ರೆಂಟಿಸ್‌ಶಿ ಗಾಗಿ ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ 81 ಜನ ಆಯ್ಕೆಯಾಗಿದ್ದಾರೆ.ಈ ಕ್ಯಾಂಪಸ್ ಡ್ರೈವ್ ನಲ್ಲಿ 122 ತರಬೇತಿದಾರರು ಭಾಗವಹಿಸಿದ್ದರು. ಇವರಲ್ಲಿ 81 ಜನ ಆಯ್ಕೆಯಾಗಿದ್ದು, ಬಿ.ಎಲ್.ಡಿ.ಇ ಕೈಗಾರಿಕೆ ತರಬೇತಿ ಸಂಸ್ಥೆಯ(ಐಟಿಐ)ಗೆ ಸೇರಿದ 75 ವಿದ್ಯಾರ್ಥಿಗಳಲ್ಲಿ 54 ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ.ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ಸುನಿಲಗೌಡ ಪಾಟೀಲ ಹಾಗೂ ಪ್ರಾಚಾರ್ಯರ ಎಂ. ಡಿ. ಪಡಸಲಗಿ ಅಭಿನಂದನೆ ಸಲ್ಲಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಬಸವನ ಬಾಗೇವಾಡಿ: ರಾಜ್ಯದ ಜವಳಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವ ಮೂಲಕ ಉತ್ತರ ಕರ್ನಾಟಕ ಭಾಗಕ್ಕೆ ನ್ಯಾಯ ಒದಗಿಸಬೇಕೆಂದು ಬಸವನಬಾಗೇವಾಡಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಿಹಾನ್ ಆರ್. ಕೆರೂರ್ (ಬಾಗವಾನ್) ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಚಿವ ಶಿವಾನಂದ ಪಾಟೀಲರು ಹಲವು ದಶಕಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ, ಜನಪರ ನಾಯಕರಾಗಿ ಹಾಗೂ ಅಭಿವೃದ್ಧಿ ಪರ ಚಿಂತಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಿಜಯಪುರ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಅವರು ನೀಡಿರುವ ಕೊಡುಗೆ ಅಪಾರವಾಗಿದೆ ಎಂದು ತಿಳಿಸಿದ್ದಾರೆ.ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸುತ್ತಿರುವ ಶಿವಾನಂದ ಪಾಟೀಲರು ರೈತರು, ಕಾರ್ಮಿಕರು, ನೇಕಾರರು ಹಾಗೂ ಸಾಮಾನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜನನಾಯಕರೆಂದು ಗುರುತಿಸಿಕೊಂಡಿದ್ದಾರೆ. ಅವರ ಆಡಳಿತ ಅನುಭವ, ರಾಜಕೀಯ ಪ್ರೌಢಿಮೆ ಮತ್ತು ಜನಸೇವೆಯ ಬದ್ಧತೆಯನ್ನು ಪರಿಗಣಿಸಿ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ…

Read More

ವಿಜಯಪುರದಲ್ಲಿ ನಿವೃತ್ತಿಯಾದ ಡಿಸಿ ಕುರುಬರಗೆ ಬೀಳ್ಕೊಡುಗೆ ಸಮಾರಂಭ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಅವರು ದಕ್ಷ ಪ್ರಾಮಾಣಿಕ ಅಧಿಕಾರಿಯಾಗಿ ತಮ್ಮ ಸೌಮ್ಯ ಸ್ವಭಾವದಿಂದ ಕಾನೂನು ಪರಿಪಾಲಿಸುವುದರೊಂದಿಗೆ ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದು ಮಾಜಿ ಶಾಸಕ ಪ್ರೊ. ರಾಜು ಆಲಗೂರು ಹೇಳಿದರು.ಸೇವಾ ನಿವೃತ್ತಿ ಹೊಂದಿದ ಕಲ್ಯಾಣ ಕರ್ನಾಟ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಜೊತೆಗೆ ನಿವೃತ್ತಿ ಹೊಂದಿದ ಇತರೇ ಸಿಬ್ಬಂದಿಗೆ ಇಲ್ಲಿನ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಅರವಿಂದ ಹಾಗರಗಿ ಮಾತನಾಡಿ, ಸಂಸ್ಥೆಯ ಸಿಬ್ಬಂದಿ ಸಹಕಾರದೊಂದಿಗೆ ನಾರಾಯಣಪ್ಪ ಕುರುಬರ ಅವರು ಸಂಸ್ಥೆ ಕಟ್ಟುವಲ್ಲಿ ಅವಿರತ ಶ್ರಮ ವಹಿಸಿದ್ದಾರೆ. ಖಡಕ್ ಅಧಿಕಾರಿಯಾಗಿದ್ದ ಕುರುಬರ ಅವರು, ಕಾನೂನು ಸೇವಾ ಪ್ರಾಧಿಕಾರದೊಂದಿಗೆ ಸುಮಧುರ ಒಡನಾಟ ಹೊಂದಿದ್ದರು ಎಂದು ಹೇಳಿದರು.ಸೋಮನಾಥ ಕಳ್ಳಿಮನಿ ಮಾತನಾಡಿದರು.ಸನ್ಮಾನ ಸ್ವೀಕರಿಸಿ ಮಾತನಾಡಿದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ,…

Read More

ಪ್ರತಿಭಟನೆ ನಡೆಸಿದ ಎಸೈಆರ್ ವಿರೋಧಿ ಪಕ್ಷಗಳು ಹಾಗೂ ಜನಪರ ಸಂಘಟನೆಗಳ ಒಕ್ಕೂಟ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯದಲ್ಲಿ ಜಾರಿಗೆ ತರಲು ಮುಂದಾಗಿರುವ ಎಸೈಆರ್ ಕ್ರಮವನ್ನು ತಕ್ಷಣ ಹಿಂಪಡೆಯಬೇಕೆಂದು ಆಗ್ರಹಿಸಿ ಎಸೈಆರ್ ವಿರೋಧಿ ಜಾತ್ಯತೀತ ಸಂಘಗಳು ಹಾಗೂ ಜನಪರ ಸಂಘಟನೆಗಳ ಒಕ್ಕೂಟ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಹಾಗೂ ಕರ್ನಾಟಕ ಸರ್ಕಾರಕ್ಕೆ ಮನವಿ ಸಲ್ಲಿಸಿತು.ವಿಜಯಪುರದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಜನಪರ, ಪ್ರಗತಿಪರ ಹಾಗೂ ರಾಜಕೀಯ ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿ, SIR ಕ್ರಮದಿಂದ ಬಡವರು, ಅಲ್ಪಸಂಖ್ಯಾತರು, ರೈತರು, ಕಾರ್ಮಿಕರು ಹಾಗೂ ಹಿಂದುಳಿದ ವರ್ಗಗಳ ಮತದಾನದ ಹಕ್ಕಿಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ ಎಂದು ತೀವ್ರ ಆತಂಕ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ಶ್ರೀನಾಥ ಪೂಜಾರಿ, “ಚುನಾವಣಾ ಪ್ರಕ್ರಿಯೆಯನ್ನು ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ನಡೆಸುವ ಹೆಸರಿನಲ್ಲಿ ಜಾರಿಗೊಳಿಸಲಾಗುತ್ತಿರುವ SIR ಕ್ರಮವು ಸಾಮಾನ್ಯ ಜನರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ. ರಾಜ್ಯ ಸರ್ಕಾರವು…

Read More

ಸಿಎಂ ಸಿದ್ದರಾಮಯ್ಯ ರಿಂದ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪ | ಮಾಜಿ ಗೃಹ ಸಚಿವ ಡಾ. ಜಿ ಪರಮೇಶ್ವರ ಅನುಮೋದನೆ ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ನಂತರ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶನಿವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.ಶನಿವಾರ ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಡಿಕೆ ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸಿದರು. ಅದನ್ನು ಮಾಜಿ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಅನುಮೋದಿಸಿದರು. ನಂತರ ಎಲ್ಲಾ ಶಾಸಕರು ಅದಕ್ಕೆ ಒಪ್ಪಿಗೆ ನೀಡಿದರು.ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಮೇಲ್ವಿಚಾರಣೆಯಲ್ಲಿ ನಡೆದ ಸಭೆಯಲ್ಲಿ, ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಯಜ್ಞ, ಯಾಗಾದಿಗಳು, ಅದ್ದೂರಿ, ಆಡಂಬರದ ಖರ್ಚುಗಳ ಮೂಲಕ ಜನಸಾಮಾನ್ಯರಿಗೆ ನಿಲುಕದ ಗಗನ ಕುಸುಮವಾಗಿದ್ದ ದೇವರ ಅಸ್ತಿತ್ವವನ್ನು ೧೨ ನೇ ಶತಮಾನದ ಬಸವಾದಿ ಶರಣರು ತಮ್ಮ ನಡೆ, ನುಡಿ, ವಚನಗಳ ಮೂಲಕ ಸರಳಗೊಳಿಸಿದರು ಎಂದು ಮಹಾಮನೆ ಬಳಗದ ಅಧ್ಯಕ್ಷರಾದ ಎಸ್.ಎ.ಬೇವಿನಗಿಡದ ಹೇಳಿದರು.ಪಟ್ಟಣದ ವಿಶ್ವಕರ್ಮ ಬಡಾವಣೆಯಲ್ಲಿರುವ ಮಹಾಬಲೇಶ್ವರ ಗಡೇದ ಅವರ ಮನೆಯಲ್ಲಿ ಹಮ್ಮಿಕೊಂಡಿದ್ದ ೧೦೫೭ ನೇ “ಮಹಾಮನೆ” ಕಾರ್ಯಕ್ರಮದಲ್ಲಿ ಶರಣ ಗುರುಪುರದ ಮಲ್ಲಯ್ಯನವರ ವಚನ ವಿಶ್ಲೇಷಿಸಿ ಅವರು ಮಾತನಾಡಿದರು.ಕನ್ನಡದ ನೆಲದಲ್ಲಿ ಅಚ್ಚಳಿಯದ ತಿರುವು ಪಡೆದುಕೊಂಡ ಯುಗ. ಸಾಮಾಜಿಕ, ಧಾರ್ಮಿಕ ಚಿಂತನೆಗಳಿಗೆ ತಿರುವು ಕೊಟ್ಟ ಕಾಲ ೧೨ನೇ ಶತಮಾನ. ಶ್ರೀಮಂತರ ಸ್ವತ್ತಾಗಿದ್ದ ದೇವರು, ಆಚಾರ, ವಿಚಾರ, ಸಂಪ್ರದಾಯ, ಆಧ್ಯಾತ್ಮಿಕ ನೆಲೆಯನ್ನು ಶರಣರು ಬದಲಿಸಿದರು. ಏನೊಂದೂ ಓದದ ಜನ ಸಾಮಾನ್ಯರು, ಮಹಿಳೆಯರು ಶ್ರೇಷ್ಠ ಮಟ್ಟದ ವಚನಗಳನ್ನು ಬರೆದರು. ಬರೆದಂತೆಯೇ ತಮ್ಮ ಜೀವನ ರೂಪಿಸಿಕೊಂಡರು ಎಂದು ಹೇಳಿದರು.ಈ ವೆಳೆ ಶರಣಬಸಪ್ಪ ಗಡೇದ ಮಾತನಾಡಿದರು. “ಕಾಯಕ ಯೋಗಿ” ಪ್ರಶಸ್ತಿ ಪಡೆದ ಮಹಾಬಲೇಶ್ವರ ಗಡೇದ ಅವರನ್ನು ಸನ್ಮಾನಿಸಿ…

Read More

ಉದಯರಶ್ಮಿ ದಿನಪತ್ರಿಕೆ ಅಥಣಿ: ಡಿ.ಕೆ. ಶಿವಕುಮಾರ್ ಅವರ ಸಂಪುಟದಲ್ಲಿ ಹಿರಿಯ ಶಾಸಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ದಲಿತ ಮುಖಂಡ ಮಾಂತೇಶ ಬಾಡಗಿ ಆಗ್ರಹಿಸಿದ್ದಾರೆ.ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಲಕ್ಷ್ಮಣ ಸವದಿ ಅವರು ಈ ಹಿಂದೆ ಉಪ ಮುಖ್ಯಮಂತ್ರಿಯಾಗಿ, ಸಹಕಾರ ಹಾಗೂ ಸಾರಿಗೆ ಸಚಿವರಾಗಿ ಅತ್ಯಂತ ನಿಷ್ಠೆಯಿಂದ ಜನಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಪ್ರಬಲ ನಾಯಕರಾಗಿರುವ ಅವರು, ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ” ಎಂದು ಅಥಣಿಯಲ್ಲಿ ಮಾಧ್ಯಮದವರ ಮೂಲಕ ತಿಳಿಸಿದರು.2023ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಸ್ವಂತ ಕ್ಷೇತ್ರವಷ್ಟೇ ಅಲ್ಲದೆ, ಸುತ್ತಮುತ್ತಲಿನ ಹಲವು ಕ್ಷೇತ್ರಗಳ ಅಭ್ಯರ್ಥಿಗಳ ಗೆಲುವಿಗೆ ಸವದಿ ಅವರು ಶ್ರಮಿಸಿದ್ದಾರೆ. ಅಲ್ಲದೆ, ಇತ್ತೀಚಿನ ಲೋಕಸಭೆ ಚುನಾವಣೆಯಲ್ಲೂ ತಮ್ಮ ಜವಾಬ್ದಾರಿಯಲ್ಲಿದ್ದ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ತಮ್ಮ ಸಂಘಟನಾ ಚತುರತೆಯನ್ನು ಸಾಬೀತುಪಡಿಸಿದ್ದಾರೆ. ಇಂತಹ ಅನುಭವಿ ನಾಯಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿದರೆ ಪಕ್ಷಕ್ಕೆ ಇನ್ನಷ್ಟು ಬಲ ಬರುತ್ತದೆ, ಎಂದು ಮಹಾಂತೆಶ ಬಾಡಗಿ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕಿನ ತೆನೆಹಳ್ಳಿ ಗ್ರಾ.ಪಂ ವ್ಯಾಪ್ತಿಯ ಕಾಲುವೆ ಹೂಳು ತೆಗೆಯುವ ಕಾಮಗಾರಿ ಸ್ಥಳಕ್ಕೆ ತಾ.ಪಂ ಇಒ ಮಹಾದೇವಪ್ಪ ಏವೂರ ಭೇಟಿ ನೀಡಿ ಕಾಮಗಾರಿ ಸ್ಥಳದಲ್ಲಿರುವ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ ಮಾಡಿದರು.ಸದರಿ ಕಾಮಗಾರಿ ಸ್ಥಳದಲ್ಲಿ ೧೮ ಜನ ಮಹಿಳೆಯರು ೪ ಜನ ಪುರುಷರು ಒಟ್ಟು ೨೦ ಜನ ಕೂಲಿಕಾರರು ಹಾಜರಿದ್ದರು.ಇಒ ಮಹಾದೇವಪ್ಪ ಏವೂರ ಮಾತನಾಡಿ ಬೇಸಿಗೆ ಅವಧಿಯಲ್ಲಿ ತಾಪಮಾನ ಹೆಚ್ಚಾಗಿರುವದರಿಂದ ಕೂಲಿಕಾರರ ಹಿತದೃಷ್ಠಿಯಿಂದ ಪ್ರತಿಶತ ೩೦ ರಷ್ಟು ಕಡಿತ ಮಾಡಿ ಅನುಕೂಲ ಮಾಡಲಾಗಿದೆ. ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರಿಗೂ ಕೆಲಸದಲ್ಲಿ ರಿಯಾಯತಿಯನ್ನು ನೀಡಲಾಗಿದೆ. ಹಾಗೂ ಪ್ರತಿನಿತ್ಯ ಕಿಲಸಕ್ಕೆ ಬರುವಂತೆ ತಿಳಿಸಿ ಪ್ರತಿ ಕುಟುಂಬಕ್ಕೆ ೧೦೦ ದಿನಗಳ ಉದ್ಯೋಗವನ್ನು ಪಡೆದುಕೊಳ್ಳಿ ಎಂದು ಮಾಹಿತಿ ನೀಡಲಾಗಿದೆ ಎಂದರು.ಹಾಗೂ ಪ್ರತಿನಿತ್ಯ ಎರಡು ಹೊತ್ತು ಎನ್ ಎಂ ಎಂ ಎಸ್ ಮೂಲಕ ಫೇಸ್ ಅಥೆಂಟಿಫಿಕೇಶನ್ ಮೂಲಕ ಹಾಗರಾತಿ ಪಡೆದು ನಿಮಗೆ ಕೂಲಿ ಮೊತ್ತ ಪಾವತಿಸಲಾಗುವದು ಎಂದರು.ಪಂಚಾಯತ ಎಲ್ಲಾ ಸಿಬ್ಬಂದಿಗಳುಎಲ್ಲಾ ಕೂಲಿಕಾರರು ಪ್ರಧಾನ…

Read More

ಶಾಸಕ ಅನಿಲ್ ಚಿಕ್ಕಮಾದು ಬಳಿ ನಿಯೋಗ ಕರೆದೊಯ್ಯಲು ನಿರ್ಧಾರ ಉದಯರಶ್ಮಿ ದಿನಪತ್ರಿಕೆ ಸರಗೂರು: ತಾಲೂಕಿನ ಶಕ್ತಿದೇವತೆ ಶ್ರೀ ಚಿಕ್ಕದೇವಮ್ಮ ಬೆಟ್ಟದ ತಪ್ಪಲಿನಲ್ಲಿರುವ ಹಾಲುಗಡದ ಗಣೇಶ ದೇವಾಲಯದ ಸಮೀಪ ತಲೆಯೆತ್ತಿರುವ ಮದ್ಯದಂಗಡಿ ತೆರವುಗೊಳಿಸುವ ಸಂಬಂಧ ಶಾಸಕ ಅನಿಲ್ ಚಿಕ್ಕಮಾದು ಬಳಿಗೆ ನಿಯೋಗ ಕರೆದೊಯ್ಯಲು ಸಭೆಯಲ್ಲಿ ಒಕ್ಕೊರಲ ತೀರ್ಮಾನ ಕೈಗೊಳ್ಳಲಾಯಿತು.ತಾಲೂಕಿನ ಹಾಲುಗಡದ ಬಳಿ ನಡೆದ ಸಭೆಯಲ್ಲಿ ಇಟ್ನಾ, ಸರಗೂರು ಟೌನ್, ಚಾಮೇಗೌಡನಹುಂಡಿ, ಶಾಂತಿಪುರ, ಪುರದಕಟ್ಟೆ, ಕುನ್ನಪಟ್ಟಣ , ಮಂಚಹಳ್ಳಿ , ಕೊತ್ತೇಗಾಲ, ಸಾಗರೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು. ಪ್ರಗತಿಪರ ಚಿಂತಕರು, ಮಹಿಳಾ, ರೈತ ಹಾಗೂ ಕನ್ನಡಪರ ಸಂಘಟನೆಗಳು, ಭಕ್ತರು, ಜನಪ್ರತಿನಿಧಿಗಳು ಭಾಗವಹಿಸಿ, ಧಾರ್ಮಿಕ ಕ್ಷೇತ್ರಕ್ಕೆ ಅಪಕೀರ್ತಿ ತರಲು ತಲೆಯೆತ್ತಿರುವ ಬಾರ್ ತೆರವುಗೊಳಿಸುವ ಸಂಬಂಧ ಹೋರಾಟದ ರೂಪುರೇಷೆ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬರು ತಮ್ಮ ಅಭಿಪ್ರಾಯ, ಸಲಹೆ ಸೂಚನೆ ನೀಡಿದರು.ಬಳಿಕ ಮಾತನಾಡಿದ ಹಾಲುಗಡ ಶ್ರೀ ಚಿಕ್ಕದೇವಮ್ಮ ದೇವಸ್ಥಾನ ಜಾತ್ರಾ ಸಮಿತಿ ಅಧ್ಯಕ್ಷ ದೊಡ್ಡವೀರನಾಯಕ, ವರ್ಷದ ಹಿಂದೆಯಷ್ಟೇ ಬಾರ್ ತೆರೆಯುತ್ತಿರುವ ಬಗ್ಗೆ ನನ್ನ…

Read More

ಶಬ್ಬೀರ ಅತ್ತಾರ ಸೇರಿದಂತೆ ನಿರಾಳೆ ಕುಟುಂಬದ ಐವರಿಗೆ ಅಂತಿಮ ವಿದಾಯ | ಕುಟುಂಬಸ್ಥರ ಆಕ್ರಂದನ | ಹತ್ಯೆಗೆ ಸಂಬಂಧಿಸಿದಂತೆ 12 ಜನರ ಮೇಲೆ ಎಫ್‌ಐಆರ್ ದಾಖಲು ಉದಯರಶ್ಮಿ ದಿನಪತ್ರಿಕೆ ಚಡಚಣ: ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಶುಕ್ರವಾರ ನಡೆದ ಭೀಕರ ಸಾಮೂಹಿಕ ಹತ್ಯೆ ಪ್ರಕರಣ ಇಡೀ ಭೀಮಾತೀರ ಪ್ರದೇಶವನ್ನು ಬೆಚ್ಚಿಬೀಳಿಸಿದ್ದು, ಹತ್ಯೆಗೀಡಾದ ನಿರಾಳೆ ಕುಟುಂಬದ ಐವರು ಸದಸ್ಯರ ಅಂತ್ಯಸಂಸ್ಕಾರ ಶನಿವಾರ ಪೊಲೀಸ್ ಬಿಗಿ ಭದ್ರತೆಯಲ್ಲಿ ನೆರವೇರಿತು.ಹತ್ಯೆಗೀಡಾದ ಚಡಚಣ ಪಟ್ಟಣದ ನಿವಾಸಿಗಳಾದ ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಚಂದು ಅಲಿಯಾಸ್ ಚಂದ್ರಶೇಖರ ನಿರಾಳೆ, ಶಿವಪುತ್ರ ನಿರಾಳೆ, ದುಂಡಪ್ಪ ನಿರಾಳೆ, ರಾಹುಲ್ ನಿರಾಳೆ, ಸಮರ್ಥ ನಿರಾಳೆ ಹಾಗೂ ಶಬ್ಬೀರ ಅತ್ತಾರ ಅವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ವಿಜಯಪುರದ ಬಿಎಲ್‌ಡಿಇ ಆಸ್ಪತ್ರೆಗೆ ಶುಕ್ರವಾರ ಸಾಗಿಸಲಾಗಿತ್ತು. ಮರಣೋತ್ತರ ಪರೀಕ್ಷೆ ಪೂರ್ಣಗೊಂಡ ಬಳಿಕ ಶನಿವಾರ ಮೃತದೇಹಗಳನ್ನು ಚಡಚಣಕ್ಕೆ ತರಲಾಯಿತು.ಮಧ್ಯಾಹ್ನ ಸುಮಾರು 2 ಗಂಟೆಗೆ ಪಟ್ಟಣದ ಹಳ್ಳದ ದಂಡೆಯಲ್ಲಿರುವ ಸ್ಮಶಾನ ಭೂಮಿಯಲ್ಲಿ ನಿರಾಳೆ ಕುಟುಂಬದ 5 ಜನರನ್ನು…

Read More