Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ದೇಶದ ಶಕ್ತಿಯಾಗಲಿರುವ ಯುವ ಜನತೆ ದುಶ್ಚಟಗಳಿಂದ ದೂರವಿದ್ದು ದೇಶದ ಪ್ರಗತಿಗೆ ಆಸರೆಯಾಗಬೇಕು ಎಂದು ಮದರ್ ತೆರೆಸಾ ಪಿಯು ಕಾಲೇಜಿನ ಪ್ರಾಚಾರ್ಯ ಶಶಿಕಾಂತ ಪತ್ತಾರ ಹೇಳಿದರು.ಪಟ್ಟಣದ ಮದರ್ ತೆರೆಸಾ ಪದವಿ ಪೂರ್ವ ಕಾಲೇಜಿನಲ್ಲಿ ತಂಬಾಕು ಮುಕ್ತ ಜಾಗೃತಿ ಹಾಗೂ ಪ್ರತಿಜ್ಞಾ ವಿಧಿಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ತಂಬಾಕು ಮುಕ್ತ ಪ್ರತಿಜ್ಞೆ ಬೋಧಿಸಿದ ಬಳಿಕ ಮಾತನಾಡಿದ ಅವರು, ತಂಬಾಕು ಸೇವನೆ ಮಾಡುವುದರಿಂದ ಆರೋಗ್ಯದ ಮೇಲೆ ಅಡ್ಡ ಪರಿಣಾಮಗಳು ಬೀರುತ್ತವೆ. ಜೊತೆಗೆ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು ಹಾಗೂ ಉಸಿರಾಟದ ಸಮಸ್ಯೆಗಳಂತಹ ಮಾರಕ ರೋಗಗಳಿಗೆ ಕಾರಣವಾಗುತ್ತದೆ. ವಿದ್ಯಾರ್ಥಿ ಜೀವನವು ಭವಿಷ್ಯ ರೂಪಿಸುವ ಅಮೂಲ್ಯ ಹಂತವಾಗಿದ್ದು, ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಆರೋಗ್ಯಕರ ಜೀವನವನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ಇಂದಿನ ಯುವಜನರು ಸ್ನೇಹಿತರ ಒತ್ತಡಕ್ಕೆ ತಂಬಾಕು ಸೇವನೆಗೆ ಒಳಗಾಗುವ ಸಂಭವ ಹೆಚ್ಚಿದೆ. ಆದ್ದರಿಂದ ವಿದ್ಯಾರ್ಥಿಗಳು ಉತ್ತಮ ಅಭ್ಯಾಸಗಳನ್ನು ರೂಢಿಸಿಕೊಳ್ಳುವುದರೊಂದಿಗೆ ಕುಟುಂಬ ಮತ್ತು ಸಮಾಜದಲ್ಲಿಯೂ ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದ ಅವರು ತಂಬಾಕು…

Read More

ನಗರ ಹಾಗೂ ತಾಲೂಕು ಕೇಂದ್ರಗಳಲ್ಲಿ ಹಾಲು ಪರೀಕ್ಷಾ ಕೇಂದ್ರಗಳನ್ನು (ಲ್ಯಾಬ್) ಸ್ಥಾಪಿಸಲು ಒತ್ತಾಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಕೆಮಿಕಲ್ ಮಿಶ್ರಿತ ವಿಷಯುಕ್ತ ಹಾಲು ವಿತರಣೆಯಾಗುತ್ತಿದ್ದು, ಅದನ್ನು ತಡೆಗಟ್ಟಲು ಆಗ್ರಹಿಸಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವರು ಗುರುವಾರ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.ಈ ವೇಳೆ ಮಾತನಾಡಿದ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವರು, ಹಲವಾರು ತಿಂಗಳುಗಳಿಂದ ನಮ್ಮ ವಿಜಯಪುರ ಜಿಲ್ಲೆ ಹಾಗೂ ನಗರದಲ್ಲಿ ನೆರೆಯ ಮಹಾರಾಷ್ಟ್ರದಿಂದ ಮತ್ತು ಬೇರೆ ತಾಲೂಕುಗಳಿಂದ ಕೆಮಿಕಲ್ ನಿಂದ ತಯಾರಿಸಿದ ಹಾಲು ಪೂರೈಸುತ್ತಿರುವುದು ಕಂಡು ಬಂದಿದೆ. ಯಾವುದೇ ಕಂಪನಿಯ ಪ್ಯಾಕೇಟ್ ಇಲ್ಲದೆ ಕ್ಯಾನುಗಳಲ್ಲಿ ಇದನ್ನು ತಂದು ಜನಸಾಮಾನ್ಯರ ಮನೆಗಳಿಗೆ ಇಂತಹ ಹಾಲನ್ನು ವಿತರಿಸುತ್ತಿದ್ದಾರೆ. ಇದನ್ನು ತಡೆಗಟ್ಟಲು ವಿಜಯಪುರ ನಗರ ಹಾಗೂ ಸುತ್ತಮುತ್ತಲಿನ ತಾಲೂಕುಗಳಲ್ಲಿ ಹಾಲು ಪರೀಕ್ಷಾ ಕೇಂದ್ರಗಳನ್ನು(ಲ್ಯಾಬ್) ಸ್ಥಾಪಿಸಿ ಹಾಲನ್ನು ವಿತರಿಸುವವರು ಕಡ್ಡಾಯವಾಗಿ ಇಲ್ಲಿ ಪರೀಕ್ಷಿಸಿ ನಂತರ ವಿತರಿಸಬೇಕು ಎಂದು ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಬೇಕು. ನಿರ್ಜನ ಪ್ರದೇಶದಲ್ಲಿ ಇದನ್ನು ತಯಾರಿಸುತ್ತಿದ್ದು, ಈ ಹಾಲನ್ನು ಸೇವಿಸಿದ ಜನರಲ್ಲಿ…

Read More

ದಲಿತ ಸೇನೆ ಚಡಚಣ ತಾಲೂಕು ನೂತನ ಪದಾಧಿಕಾರಿಗಳ ಆಯ್ಕೆ | ಮಹಾದೇವ ಬನಸೋಡೆ ಕರೆ ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕಿನ ಶೋಷಿತರು, ನೊಂದವರು ಹಾಗೂ ಸಮಾಜದ ವಂಚಿತ ವರ್ಗಗಳ ಧ್ವನಿಯಾಗಿ ಕಾರ್ಯನಿರ್ವಹಿಸುವ ಸಂಕಲ್ಪದೊಂದಿಗೆ ದಲಿತ ಸೇನೆ ಚಡಚಣ ತಾಲೂಕು ಘಟಕದ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.ದಲಿತ ಸೇನೆ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ ಅವರ ಆದೇಶದ ಮೇರೆಗೆ ಹಾಗೂ ವಿಜಯಪುರ ಜಿಲ್ಲಾಧ್ಯಕ್ಷ ಖಾಜು ಹೊಸಮನಿ ಅವರ ನೇತೃತ್ವದಲ್ಲಿ ಚಡಚಣ ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ವಿಶೇಷ ಸಭೆಯಲ್ಲಿ ಗುರುವಾರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಹಿರಿಯ ಮುಖಂಡ ಮಹಾದೇವ ಬನಸೋಡೆ, ಸಂಘಟನೆಯಲ್ಲಿ ಜವಾಬ್ದಾರಿ ವಹಿಸಿಕೊಂಡವರು ಹುದ್ದೆಗೆ ಮಾತ್ರ ಸೀಮಿತರಾಗದೆ ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.ನೊಂದವರು ಹಾಗೂ ತುಳಿತಕ್ಕೊಳಗಾದವರ ಪರವಾಗಿ ನಿರಂತರ ಹೋರಾಟ ನಡೆಸುವ ಮನೋಭಾವ ಬೆಳೆಸಿಕೊಳ್ಳಬೇಕು. ಜಾತಿ, ಧರ್ಮದ ಭೇದವಿಲ್ಲದೆ ಎಲ್ಲರನ್ನು ಸಮಾನವಾಗಿ ಕಾಣುವ ಮೂಲಕ ಸಮಾಜದಲ್ಲಿ ಸೌಹಾರ್ದತೆ ಮತ್ತು…

Read More

15 ವರ್ಷಗಳಿಂದ ಹದಗೆಟ್ಟ ರಸ್ತೆ | ಹಲವು ಬಾರಿ ಮನವಿ ಸಲ್ಲಿಸಿದರೂ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕಿನ ಗುಂದವಾನದಿಂದ ಶೀಗಣಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ವಹಿವಾಟು ರಸ್ತೆ ಕಳೆದ ಸುಮಾರು ಹದಿನೈದು ವರ್ಷಗಳಿಂದ ಸಂಪೂರ್ಣ ಹದಗೆಟ್ಟಿದ್ದು, ರೈತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ.ಈ ಕುರಿತು ಹಲವು ಬಾರಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ರೈತ ಮಲ್ಲಿಕಾರ್ಜುನ ತುಪ್ಪದ ಮಾತನಾಡಿ, “ಈ ರಸ್ತೆಯ ದುಸ್ಥಿತಿಯ ಬಗ್ಗೆ ಜಿಲ್ಲಾಧಿಕಾರಿಗಳಿಂದ ಹಿಡಿದು ಗ್ರಾಮ ಪಂಚಾಯತ್ ಅಧಿಕಾರಿಗಳವರೆಗೆ ಎಲ್ಲರ ಗಮನಕ್ಕೆ ತಂದಿದ್ದೇವೆ. ಆದರೆ ಕಣ್ಣಿದ್ದೂ ಕುರುಡರು, ಕಿವಿಯಿದ್ದೂ ಕಿವುಡರಂತೆ ಅಧಿಕಾರಿಗಳು ವರ್ತಿಸುತ್ತಿದ್ದಾರೆ. ಶಾಲಾ ವಿದ್ಯಾರ್ಥಿಗಳ ಹಾಗೂ ರೈತರ ಸಂಕಷ್ಟ ಯಾರಿಗೂ ಕಾಣುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.ರೈತ ತುಕಾರಾಮ ಕರಗಣಿ ಮಾತನಾಡಿ, “ಸುಮಾರು 15 ವರ್ಷಗಳಿಂದ ರಸ್ತೆ ದುರಸ್ತಿಯಾಗಿಲ್ಲ.…

Read More

ವಿಜಯಪುರ ದಲ್ಲಿ ವಿಶ್ವ ಹಾವುಗಳ ದಿನವನ್ನು ಉದ್ಘಾಟಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿದ್ಯಾರ್ಥಿಗಳಿಗೆ ಹಾವುಗಳ ಕುರಿತು ಜಾಗೃತಿ ಮತ್ತು ಹಾವು ರಕ್ಷಕರಿಗೆ ಸ್ನೇಕ್ ಕ್ಯಾಚಿಂಗ್ ಕಿಟ್ ಹಾಗೂ ಆರೋಗ್ಯ ಕಾರ್ಡ್ ವಿತರಿಸುವ ಮೂಲಕ ವಿಶ್ವ ಹಾವುಗಳ ದಿನವನ್ನು ನಗರದಲ್ಲಿ ವಿನೂತನ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಯಿತು.ಗುರುವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜನಿಯರಿಂಗ್ ಕಾಲೇಜಿನಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಮತ್ತು ವಿಜಯಪುರ ಅರಣ್ಯ ಇಲಾಖೆ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು, ಹಾವುಗಳ ಬಗ್ಗೆ ಇರುವ ಮೂಢ ನಂಬಿಕೆಗಳನ್ನು ತೊರೆದು ಅವುಗಳನ್ನು ರಕ್ಷಿಸುವ ಮೂಲಕ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.ಬೆಳಗಾವಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವ್ಹಾಣ ಮಾತನಾಡಿ, ಕಾಡು ಪ್ರಾಣಿಗಳು ಹಾಗೂ ವನ್ಯಜೀವಿಗಳೊಂದಿಗೆ ಸುರಕ್ಷಿತ…

Read More

ವಿಧಾನಸೌಧದಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ ಮತ್ತು ಎಂ.ಬಿ.ಪಾಟೀಲ ನೇತೃತ್ವದಲ್ಲಿ ಸಣ್ಣ ನೀರಾವರಿ ಮತ್ತು ಕೃಷ್ಣಾ ಭಾಗ್ಯ ಜಲ ನಿಗಮದ ಅಧಿಕಾರಿಗಳ ಜತೆ ಸಭೆ | ಸಂಪುಟಕ್ಕೆ ವಿಷಯ ಮಂಡನೆ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ವಿಜಯಪುರ ಜಿಲ್ಲೆ, ಬಬಲೇಶ್ವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಮದಾಪುರ ಕೆರೆಯಲ್ಲಿ ನೀರು ತುಂಬಿದಾಗ ಮುಳುಗಡೆ ಆಗುವ 178 ಎಕರೆ ಜಮೀನನ್ನು ರೈತರ ಕೋರಿಕೆಯ ಮೇರೆಗೆ ಭೂಸ್ವಾಧೀನಕ್ಕೆ ಸಕಾರಾತ್ಮಕ ತೀರ್ಮಾನವಾಗಿದ್ದು ಈ ವಿಷಯವನ್ನು ಸಂಪುಟದ ಮುಂದೆ ತರಲು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು ಅಧಿಕಾರಿಗಳಿಗೆ ಸೂಚಿಸಿದರು.ಈ ಸಂಬಂಧವಾಗಿ ಗುರುವಾರ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಮತ್ತು ಎಂ ಬಿ ಪಾಟೀಲ ಇಬ್ಬರೂ ವಿಧಾನಸೌಧದಲ್ಲಿ ಸಣ್ಣ ನೀರಾವರಿ ಮತ್ತು ಕೃಷ್ಣಾ ಭಾಗ್ಯ ಜಲ ನಿಗಮದ ಅಧಿಕಾರಿಗಳ ಜತೆ ಸಭೆ ನಡೆಸಿದರು.ಮುಳುಗಡೆ ಪ್ರದೇಶದ ರೈತರಿಗೆ ಆಗುತ್ತಿರುವ ಅನಾನುಕೂಲ ಮತ್ತು ನಷ್ಟ ತಪ್ಪಿಸಲು ಸ್ವಾಧೀನದ ಅಗತ್ಯ ಇದ್ದು, ಆದಷ್ಟು ಬೇಗ ಈ ಕುರಿತು ಸಂಪುಟದಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.ಕ್ಷೇತ್ರದ ಶಾಸಕರೂ ಆದ…

Read More

ಬಬಲೇಶ್ವರದಲ್ಲಿ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಯುವಕರು ವೃತ್ತಿಪರ ಕ್ರೀಡಾಪಟುಗಳಾಗಲು ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಬುಧವಾರ ಬಬಲೇಶ್ವರದಲ್ಲಿ ದಿ. ಶ್ರೀ ಬಿ. ಎಂ. ಪಾಟೀಲ ಅವರ ಸ್ಮರಣಾರ್ಥ ಶಾಂತವೀರ ಕ್ರಿಕೆಟ್ ಕ್ಲಬ್ ಮತ್ತು ಶ್ರೀ ಸುನೀಲಗೌಡ ಪಾಟೀಲ ಅಭಿಮಾನಿ ಬಳಗದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ಬಬಲೇಶ್ವರ ಪ್ರೀಮಿಯರ್ ಲೀಗ್ ಸೀಸನ್-2 ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಪ್ರಶಸ್ತಿ ಪ್ರಧಾನ ಮಾಡಿ ಅವರು ಮಾತನಾಡಿದರು.ಯುವಕರು ದೇಶದ ಅಮೂಲ್ಯ ಸಂಪತ್ತು. ಈ ಯುವಕರು ದೈಹಿಕ ಮತ್ತು ಮಾನಸಿಕವಾಗಿ ಸದೃಢರನ್ನಾಗಿ ಮಾಡಿ ಉತ್ತಮ ಆರೋಗ್ಯ ಹೊಂದಲು ಕ್ರೀಡೆಗಳು ಬಹುಪಯೋಗಿಯಾಗಿವೆ. ಹೀಗಾಗಿ ಬಬಲೇಶ್ವರ ಪ್ರೀಮಿಯರ್ ಲೀಗ್ ಕ್ರಿಕೆಟ್ ಸೇರಿದಂತೆ ನಾನಾ ಕ್ರೀಡೆಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಸ್ಪೋರ್ಟ್ಸ್ ಅಕ್ಯಾಡೆಮಿ ಮೂಲಕವೂ ಮಕ್ಕಳಿಗೆ ಬಾಲ್ಯದಿಂದಲೇ ಕ್ರಿಕೆಟ್, ಫುಟಬಾಲ, ಹಾಕಿ, ಬಾಸ್ಕೆಟ್ ಬಾಲ್, ಟೆನಿಕಾಯ್ಟ್, ಬ್ಯಾಡ್ಮಿಂಟನ್, ಟೆನಿಸ್ ಸೇರಿದಂತೆ ನಾನಾ…

Read More

ಲೇಖನ- ಸಂತೋಷ್ ರಾವ್ ಪೆರ್ಮುಡ.ಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ-೫೭೪೧೯೮ದೂ:೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ಮನುಷ್ಯನು ಜೀವನದಲ್ಲಿ ಸದಾ ಖುಷಿಯಾಗಿರುವುದನ್ನೇ ಇಷ್ಟಪಡುತ್ತಾನೆ. ಅಚಾನಕ್ಕಾಗಿ ಏನಾದರೂ ಸಹಿಸಲು ಸಾಧ್ಯವಾಗದಂತಹ ತೊಂದರೆ ಯಾ ಸಮಸ್ಯೆ ಬಂದಲ್ಲಿ ತಕ್ಷಣ ಅದರಿಂದ ವಿಚಲಿತನಾಗುತ್ತಾನೆ ಮತ್ತು ಅದರಿಂದ ಹೊರಬರಲು ಪ್ರಯತ್ನಿಸುತ್ತಾನೆ. ಆದರೆ ಅದೇ ಸಮಸ್ಯೆಯು ತೀರಾ ನಿಧಾನ ಗತಿಯಲ್ಲಿ ಬಂದಾಗ ಮನುಷ್ಯನು ಆ ಸಮಸ್ಯೆಯಿಂದ ಹೊರಬರಲು ಪ್ರಯತ್ನಿಸದೇ ಆ ಸಮಸ್ಯೆಗೆ ನಿಧಾನವಾಗಿ ಹೊಂದಿಕೊಂಡು ಹೋಗಿ ಕೊನೆಗೊಂದು ದಿನ ಆ ಸಮಸ್ಯೆಯ ಸುಳಿಯಲ್ಲಿ ಸಿಲುಕಿಕೊಂಡು ಅದರಲ್ಲೇ ತನ್ನ ಪ್ರಾಣವನ್ನು ಬಿಡುತ್ತಾನೆ. ಇದು ಒಂದು ಕಪ್ಪೆಯನ್ನು ನಿಧಾನವಾಗಿ ಜೀವಂತವಾಗಿ ಕುದಿಸುವುದನ್ನು ವಿವರಿಸುವಂತಹ ಕಥೆಯಾಗಿದೆ. ‘ಒಂದು ಜೀವಂತವಾಗಿರುವ ಕಪ್ಪೆಯನ್ನು ಇದ್ದಕ್ಕಿದ್ದಂತೆ ಕುದಿಯುತ್ತಿರುವ ನೀರಿನೊಳಗೆ ಹಾಕಿದರೆ ಅದು ತಕ್ಷಣವೇ ಅದರಿಂದ ಹಾರಿ ಹೊರಗೆ ಹೋಗುತ್ತದೆ. ಆದರೆ ಅದೇ ಕಪ್ಪೆಯನ್ನು ಶುದ್ಧವಾದ ಮತ್ತು ತಣ್ಣನೆಯ ನೀರಿನಲ್ಲಿ ಹಾಕಿದರೆ ಅದು ಅದರೊಳಗಡೆಯೇ ಹಾಯಾಗಿರುತ್ತದೆ, ಅದು ಸಹಜವೂ ಹೌದು. ಈಗ ಅದೇ ನೀರಿನ ಪಾತ್ರೆಗೆ ಬೆಂಕಿಯನ್ನು ಹಚ್ಚಿ ನೀರನ್ನು…

Read More

ಲೇಖನ- ಸಾವಿತ್ರಿ ಸಿದ್ದರಾಮುತುಮಕೂರು ಉದಯರಶ್ಮಿ ದಿನಪತ್ರಿಕೆ “ಮಾನವನ ಜೀವನಕ್ಕೆ ದೇವರು ನೀಡಿದ ಅತ್ಯಮೂಲ್ಯ ಕೊಡುಗೆ ಈ ಪ್ರಕೃತಿ. ಮನುಷ್ಯನ ಬದುಕಿಗೆ ಪರಿಸರವೇ ಜೀವಾಳ. ಮನುಜನಿಗೆ ಉಸಿರಾಡಲು ಗಾಳಿ ಕೊಟ್ಟುಸಲಹುತ್ತಲೇ ಬರುತ್ತಿದೆ. ಆದರೆ ಮಾನವ ಈಗೀಗ ಪರಿಸರವನ್ನೇ ಹಣದ ಆಸೆ ಹೀನ ಕೃತ್ಯಗಳಿಂದ ದುರುಪಯೋಗ ಪಡಿಸಿಕೊಂಡು ಪ್ರಕೃತಿಯನ್ನೇ ನಾಶ ಪಡಿಸುತ್ತಾ ತನ್ನ ಅಳಿವಿಗೆ ತಾನೇ ಕಾರಣವಾಗುತ್ತಿದ್ದಾನೆ. ಇದು ಹೀಗೆ ಮುಂದುವರೆದರೆ ಮುಂದಿನ ಪೀಳಿಗೆಗೆ ಅತೀ ಕಷ್ಟ ಎದುರಾಗುವ ಸಂದರ್ಭ ಒದಗುತ್ತದೆ.ಮಾನವನ ದುರಾಸೆಯ ಚಟುವಟಿಕೆಗಳಿಂದಾಗಿ ಭೂಮಿಯು ಮಲಿನಗೊಳ್ಳುತ್ತಾ ಜಾಗತಿಕ ತಾಪಮಾನವು ನಿರಂತರವಾಗಿ ಏರಿಕೆಯಾಗುತ್ತಲೇ ಇದೆ. ಇಂಧನಗಳ ಬಳಕೆ, ಕೈಗಾರೀಕರಣ, ಅರಣ್ಯನಾಶಇಂಧನಗಳ ಬಳಕೆ, ಕೈಗಾರೀಕರಣ, ಅರಣ್ಯನಾಶ ಇವುಗಳೇ ಜಾಗತಿಕ ತಾಪಮಾನಕ್ಕೆ ಮುಖ್ಯ ಕಾರಣಗಳಾಗಿವೆ. ಎಣಿಸುತ್ತಾ ಹೋದರೆ ಇನ್ನು ಬಹಳಷ್ಚಿವೆ.ಇವುಗಳನ್ನು ತಡೆಯ ಬೇಕಾದದ್ದು ಮಾನವರಾದ ನಮ್ಮ ಕರ್ತವ್ಯವೇ ಆಗಿದೆ. ಪರಿಸರದ ಮೌಲ್ಯವನ್ನು ಅರಿತು, ಈಗಲಾದರೂ ಜಾಗೃತಗೊಳ್ಳಬೇಕಿದೆ.ಜಾಗತಿಕ ತಾಪಮಾನವನ್ನು ಇನ್ನು ಮುಂದೆಯಾದರೂ ತಕ್ಕ ಮಟ್ಟಿಗೆ ಕಡಿಮೆ ಮಾಡಬಹುದಾಗಿದೆ. ಅವುಗಳೇನೆಂದರೆಪ್ಲಾಸ್ಟಿಕ್ ಬಳಕೆಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುತ್ತಾ ಹೋಗಬಹುದು, ಅವುಗಳ ಬದಲಾಗಿ…

Read More

ಕಾನಿಪ ಸಂಘದ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ, ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯ ಪ್ರಕಾಶ ಬೆಣ್ಣೂರ ಪತ್ರಿಕಾ ಪ್ರಕಟಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ), ವಿಜಯಪುರ ಜಿಲ್ಲಾ ಘಟಕದಿಂದ ಇದೇ ಜುಲೈ 19 ರಂದು ನಗರದ ಶ್ರೀ ಕಂದಗಲ್ ಹನುಮಂತರಾಯ ರಂಗಮಂದಿರಲ್ಲಿ ಬೆಳಿಗ್ಗೆ 11ಗಂಟೆಗೆಪತ್ರಿಕಾ ದಿನಾಚರಣೆಯನ್ನು ಆಯೋಜನೆ ಮಾಡಲಾಗಿದೆ.ಜುಲೈ 19 ರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಉಸ್ತುವಾರಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಕರ್ಯಾಭಿವೃದ್ದಿ ಸಚಿವ ಎಂ ಬಿ ಪಾಟೀಲ್ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಲಿದ್ಧಾರೆ. ಇನ್ನು ಕಾನಿಪ ವಿಜಯಪುರ ಘಟಕದಿಂದ ಕೊಡಮಾಡುವ ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿಯನ್ನು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಪ್ರದಾನ ಮಾಡಲಿದ್ದಾರೆ. ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಸಾಧನೆ ಮಾಡಿದ ಜಿಲ್ಲಾ ಮಟ್ಟದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ನಾಗಠಾಣ ಶಾಸಕ ವಿಠಲ ಕಟಕದೊಂಡ ನೆರವೇರಿಸಲಿದ್ದಾರೆ.ಕಾರ್ಯಕ್ರಮದ…

Read More