Author: editor.udayarashmi@gmail.com

ಬಸವನಬಾಗೇವಾಡಿ: ವಿದ್ಯಾರ್ಥಿ ದೆಸೆಯಿಂದಲೇ ಸಾಮಾಜಿಕ ಸೇವೆಯ ಮನೋಭಾವ ಮತ್ತು ಸಹಬಾಳ್ವೆಯ ಜೀವನ ಶೈಲಿಯನ್ನು ರೂಪಿಸಿಕೊಳ್ಳುವಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರವು ಮಹತ್ವದ ಪಾತ್ರ ವಹಿಸುತ್ತದೆ ಎಂದು ನಿವೃತ್ತ ಪ್ರಾಂಶುಪಾಲ ಎಸ್.ಎಸ್.ಬಿರಾದಾರ ಹೇಳಿದರು.ತಾಲೂಕಿನ ಕರಿಭಂಟನಾಳ ಗ್ರಾಮದ ಅರುಣೋದಯ ಪ್ರೌಢಶಾಲೆಯಲ್ಲಿ ಶನಿವಾರ ಬಸವನಬಾಗೇವಾಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಮ್ಮಿಕೊಂಡಿರುವ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಏಳು ದಿನಗಳ ಕಾಲ ನಡೆಯಲಿರುವ ಎನ್ಎಸ್ಎಸ್ ಶಿಬಿರದಲ್ಲಿ ವಿದ್ಯಾರ್ಥಿಗಳು ಕ್ರಿಯಾಶೀಲವಾಗಿ ಪ್ರತಿಯೊಂದು ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸುವಂತಾಗಬೇಕು. ಇದರಿಂದ ಪರಿವರ್ತನೆ ಹೊಂದಲು ಅವಕಾಶ ಸಿಗಲಿದೆ. ಈ ಶಿಬಿರದಲ್ಲಿ ಶ್ರಮದಾನದ ಮಹತ್ವವನ್ನು ತಿಳಿದುಕೊಳ್ಳಬಹುದಾಗಿದೆ. ಶಿಬಿರಾರ್ಥಿಗಳು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದರು.ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ನೀಲಪ್ಪ ಹೊಸಮನಿ ಮಾತನಾಡಿ, ಪಠ್ಯದ ಜೊತೆಗೆ ಸೇವಾ ಮನೋಭಾವ ಬರುವ ಉದ್ದೇಶದಿಂದ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ಹಮ್ಮಿಕೊಳ್ಳಲಾಗುತ್ತದೆ. ನಮ್ಮ ಕಾಲೇಜಿನಿಂದ ಜು.೬ ರಿಂದ ೧೨ ರವರೆಗೆ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರವನ್ನು…

Read More

ವಿಜಯಪುರ: ನಾಗಠಾಣ ಮತಕ್ಷೇತ್ರದ ಶಾಸಕರಾದ ವಿಠ್ಠಲ ಕಟಕದೊಂಡ ಹಾಗೂ ಮಹಾನಗರ ಪಾಲಿಕೆ ಮಹಾಪೌರರಾದ ಶ್ರೀಮತಿ ಮಹೇಜಬಿನ ಹೊರ್ತಿ, ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ಅಧಿಕಾರಿಗಳನ್ನೊಳಗೊಂಡ ತಂಡ ಸೋಮವಾರ ನಗರದ ವಿವಿಧೆಡೆ ಭೇಟಿ ನೀಡಿ ಸ್ವಚ್ಛತೆ ಹಾಗೂ ವಿವಿಧ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿತು.ವಿಜಯಪುರ ನಗರದ ತ್ಯಾಜ್ಯ ನೀರು ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿ ಸುರಕ್ಷತೆ ದೃಷ್ಟಿಯಿಂದ ಘಟಕದ ಸುತ್ತಲೂ ಕಂಪೌಂಡ್ ಗೋಡೆ ನಿರ್ಮಿಸಬೇಕು. ಇತ್ತೀಚಿಗೆ ಎಸ್‌ಟಿಪಿ ಲಗೂನ್‌ನಲ್ಲಿ ಬಿದ್ದು ಸಾವನ್ನಪ್ಪಿರುವ ಮಕ್ಕಳ ಕುಟುಂಬಸ್ಥರಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು. ಘಟಕದ ಸುತ್ತಲೂ ದುರ್ವಾಸನೆ ತಡೆಗಟ್ಟಲು ತ್ಯಾಜ್ಯ ನೀರು ಸಂಸ್ಕರಣೆ ಕಾರ್ಯ ವೈಜ್ಞಾನಿಕವಾಗಿ ಹಾಗೂ ಪರಿಣಾಮಕಾರಿಯಾಗಿ ಕೈಗೊಳ್ಳುವಂತೆ ಪಾಲಿಕೆ ಆಯುಕ್ತರಿಗೆ ಸೂಚಿಸಲಾಯಿತು.ನಗರದ ಜ್ಞಾನಯೋಗಾಶ್ರಮಕ್ಕೆ ಸಾವಿರಾರು ಭಕ್ತರು ಗುರು ಪೂರ್ಣಿಮಾ ಕಾರ್ಯಕ್ರಮಕ್ಕೆ ಆಗಮಿಸಲಿರುವುದರಿಂದ ಆಶ್ರಮಕ್ಕೆ ಕೂಡುವ ಎಲ್ಲ ಮುಖ್ಯ ರಸ್ತೆಗಳಲ್ಲಿರುವ ತಗ್ಗು ಗುಂಡಿಗಳನ್ನು ಮುಚ್ಚುವುದು, ಬೀದಿ ದೀಪಗಳನ್ನು ದುರಸ್ತಿಗೊಳಿಸಿ ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಲಾಯಿತು.ಈ ಸಂದರ್ಭದಲ್ಲಿ ಪಾಲಿಕೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ವಿಜಯಪುರ: ಮುಂಗಾರು ಹಂಗಾಮಿನಲ್ಲಿ ಕೃಷಿ ಬೆಳೆಗಳಿಗೆ ಬೆಳೆ ವಿಮೆ ನೊಂದಣಿ ಮಾಡಿಸಲು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ ಬಿಮಾ ಯೋಜನೆ ಅಧಿಸೂಚಿಸಲಾಗಿದ್ದು, ಜಿಲ್ಲೆಯಲ್ಲಿ ಓರಿಯೆಂಟಲ್ ಜನರಲ್ ಇನ್ಸೂರೆನ್ಸ ಕಂಪನಿ ಮೂಲಕ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಡಿ ರೈತರು ತಮ್ಮ ಬೆಳೆ ವಿಮೆಗೆ ನೊಂದಾಯಿಸಿಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕರಾದ ಡಾ. ಡಿ.ಡಬ್ಲೂ ರಾಜಶೇಖರ ಅವರು ಮನವಿ ಮಾಡಿಕೊಂಡಿದ್ದಾರೆ.ಗ್ರಾಮ ಪಂಚಾಯತ್ ಮಟ್ಟಕ್ಕೆ ಅಧಿಸೂಚಿಸಲಾದ ಮಳೆಯಾಶ್ರಿತ ಬೆಳೆಗಳಾದ ತೊಗರಿ, ಸಜ್ಜೆ ಹಾಗೂ ನೀರಾವರಿ ಮುಸುಕಿನ ಜೋಳ ಮತ್ತು ತೊಗರಿ ಬೆಳೆಗಳಿಗೆ ವಿಮಾ ನೊಂದಣಿಗೆ ದಿನಾಂಕ : ೩೧-೦೭-೨೦೨೪ ಕೊನೆಯ ದಿನವಾಗಿರುತ್ತದೆ.ಹೋಬಳಿ ಮಟ್ಟಕ್ಕೆ ಅಧಿಸೂಚಿತ ಬೆಳೆಗಳಾದ ಮಳೆಯಾಶ್ರಿತ ಉದ್ದು, ಹೆಸರು ಬೆಳೆಗಳಿಗೆ ದಿನಾಂಕ : ೧೫-೦೭-೨೦೨೪ರವರೆಗೆ ಅವಕಾಶ ಕಲ್ಪಿಸಲಾಗಿದೆ. ನೀರಾವರಿ ಈರುಳ್ಳಿ ಹಾಗೂ ಕೆಂಪು ಮೆಣಸಿನಕಾಯಿ ಮತ್ತು ಮಳೆಯಾಶ್ರಿತ ಹತ್ತಿ ಬೆಳೆಗೆ ದಿನಾಂಕ : ೧೬-೦೮-೨೦೨೪ ಕೊನೆಯ ದಿನವಾಗಿದೆ. ನೀರಾವರಿ ಶೇಂಗಾ ಹಾಗೂ ಇನ್ನುಳಿದ ಹೋಬಳಿ ಮಟ್ಟದ ಬೆಳೆಗಳಿಗೆ ದಿನಾಂಕ : ೩೧-೦೭-೨೦೨೪ ಕೊನೆಯ ದಿನವಾಗಿದೆ.ರೈತರು ನೊಂದಣಿಗಾಗಿ…

Read More

ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ’ಪತ್ರಿಕಾ ದಿನಾಚರಣೆ’ ವಿಜಯಪುರ: ಪತ್ರಕರ್ತರು ಆಧುನಿಕ ಸಮಾಜದ ಕೈಗನ್ನಡಿಯಾಗಿದ್ದು ಸಮಾಜದ ಅಭಿವೃದ್ಧಿಯಲ್ಲಿ ಅವರ ಪಾತ್ರ ಪ್ರಮುಖವಾಗಿದೆ ಎಂದು ಹಿರಿಯ ಪತ್ರಕರ್ತ ಹಾಗೂ ಕಾರ್ಯನಿರತ ಪರ್ತಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷ ಇಂದುಶೇಖರ ಮಣೂರ ಹೇಳಿದರು.ಸೋಮವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ.ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಮತ್ತು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ’ಪತ್ರಿಕಾ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು “ಪತ್ರಕರ್ತರ ಜವಾಬ್ದಾರಿ ಮತ್ತು ಸವಾಲುಗಳು” ವಿಷಯ ಕುರಿತು ಉಪನ್ಯಾಸ ನೀಡಿದರು.ಬರವಣಿಗೆಯ ಗುಣಮಟ್ಟವೇ ಪತ್ರಕರ್ತರ ಶಕ್ತಿ. ಅದಕ್ಕಾಗಿ ಸತತ ಅಧ್ಯಯಶೀಲರಾಗಿರಬೇಕು. ಸಂಕೀರ್ಣ ಸಮಸ್ಯೆಗಳನ್ನು ಸರಳಗೊಳಿಸಿ ಸ್ಪಷ್ಠತೆಯೊಂದಿಗೆ ಪ್ರಸ್ತುತಪಡಿಸಬೇಕು. ಮಾನವೀಯ ಮತ್ತು ಸಾಮಾಜಿಕ ಕಳಕಳಿಯ ವರದಿಗಳಿಗೆ ಆದ್ಯತೆ ನೀಡಬೇಕೆಂದು ಸಲಹೆ ನೀಡಿದರು.ಪತ್ರಿಕೆ ಮತ್ತು ಮಾಧ್ಯಮಗಳು ಸಮಾಜ ಪರಿವರ್ತನೆಯ ಪ್ರಮುಖ ಅಂಗವಾಗಿವೆ. ನಮ್ಮ ಕೆಲಸದ ಜೊತೆಗೆ ಇತರರ ಸಮಸ್ಯೆಗಳಿಗೆ ಸ್ಪಂದಿಸಬೇಕು. ನಮ್ಮ ಸೇವೆಯ ಮೂಲಕವೇ ಸಮಾಜ ತಿದ್ದುವ ಕೆಲಸ…

Read More

“ವೀಣಾಂತರಂಗ”- ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ-ಗದಗ್ ತಾಯಿ ಮತ್ತು ಮಗುವಿನ ಸಂಬಂಧದ ಸ್ವರೂಪವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪೂರ್ಣಾವಧಿ ಕಾರ್ಯಕರ್ತರಾಗಿದ್ದ ವಿದ್ಯಾನಂದ್ ಶೆಣೈಯವರು ‘ಭಾರತ ದರ್ಶನ’ ಎಂಬ ತಮ್ಮ ಧ್ವನಿಸುರುಳಿಯಲ್ಲಿ ತಾಯಿ ಮಗುವಿಗೆ ಸಂಸ್ಕಾರಗಳನ್ನು ಹೇಗೆ ಕಲಿಸುತ್ತಾಳೆ ಎಂಬುದರ ಕುರಿತು ಹೇಳುವಾಗ ತಾಯಿ ತನ್ನ ಮಗುವಿಗೆ ನೋಟ್ ಬುಕ್ ತೆಗೆದುಕೊಂಡು ಏನು ಮಾಡಬೇಕು ಏನು ಮಾಡಬಾರದು ಎಂಬುದನ್ನು ಬರೆದುಕೋ ಎಂದು ಯಾವಾಗಲೂ ಹೇಳುವುದಿಲ್ಲ. ಆಕೆ ತನ್ನ ದೈನಂದಿನ ಬದುಕಿನ ಕ್ರಿಯೆಯ ಮೂಲಕ ಮಕ್ಕಳಿಗೆ ಮಾದರಿಯಾಗಿ ನಿಲ್ಲುತ್ತಾಳೆ.ನಮ್ಮ ಗ್ರಾಮೀಣ ಹೆಣ್ಣು ಮಕ್ಕಳು ಮುಂಜಾನೆ ಎದ್ದೊಡನೆ ಬೆಳಗಾಗಿ ನಾನೆದ್ದು ಯಾರ್ಯಾರ ನೆನೆಯಲಿಎಳ್ಳು ಜೀರಿಗೆ ಬೆಳೆಯೋಳ / ಎಳ್ಳು ಜೀರಿಗೆ ಬೆಳೆಯೋಳ ಭೂಮ್ತಾಯಿ ಎದ್ದೊಂದು ಘಳಿಗೆ ನೆನೆದೇನ ಎಂದು ಹಾಡಿಕೊಳ್ಳುತ್ತಾ ಭೂಮಿ ತಾಯಿಗೆ ನಮಿಸಿ ಮೇಲೇಳುತ್ತಾಳೆ. ತಾಯಿಯನ್ನು ಅನುಕರಿಸುವ ಮಗು ಕೂಡ ಅಮ್ಮನಂತೆ ನೆಲಕ್ಕೆ ಪೊಡಮೊಡುತ್ತದೆ.ಈ ಮೂಲಕ ನಮಗೆ ಅನ್ನ ನೀಡುವ, ಆಶ್ರಯ ನೀಡುವ, ಈ ಭೂಮಿ ತಾಯಿಗೆ ನಾವು ಚಿರಋಣಿಯಾಗಿರಬೇಕು ಎಂಬ ಪಾಠವನ್ನು…

Read More

ಕೆಂಭಾವಿ: “ಬದ್ಮಾಷ ಭಾಡ್ಯಾಗೊಳ್” ಎಂಬ ಕನ್ನಡ ಯುಟ್ಯೂಬ್ ಚಾನೆಲ್ 1ಸಾವಿರ ಚಂದಾದಾರರು ಹೊಂದಿದ ಹಾಗೂ ಚಾನೆಲ್ ಮಾನಿಟೈಜ ಆದ ಪ್ರಯುಕ್ತ ಪಟ್ಟಣದ ಬಾಲಕಿಯರ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಚಾನೆಲ್ ಕಲಾವಿದರಿಂದ ಗಿಡ ನೆಡೆವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ತದನಂತರ ಸಸಿಗೆ ನೀರುಣಿಸುವ ಮೂಲಕ ಮಾತನಾಡಿದ ಚಲನಚಿತ್ರದ ನಿರ್ದೇಶಕ ಲೆಮನ್ ಪರಶುರಾಮ ಇಂದಿನ ಯುವಕರು ಹುಟ್ಟುಹಬ್ಬ, ಮದುವೆ ಸಮಾರಂಭ, ತಾವು ಮಾಡುವಂತಹ ಕೆಲಸಗಳಲ್ಲಿ ಯಶಸ್ಸು ಕಂಡಾಗ ಪಾರ್ಟಿ ಪಬ್ಬು, ಅಂತ ತಮ್ಮ ಸಮಾರಂಭಗಳು ಮಾಡಿ ಖುಷಿ ಪಡುವುದಕ್ಕಿಂತ, ಸಸಿ ನೆಡಿಸುವ ಮೂಲಕ ಆಚರಣೆ, ಸಮಾರಂಭಗಳನ್ನು ಮಾಡಿದಾಗ ಒಂದು ಉತ್ತಮ ಸಮಾಜ ಹಾಗೂ ಪರಿಸರ ನಿರ್ಮಾಣ ಮಾಡಬಹುದು ಎಂದು ಹೇಳಿದರು.ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಚಲನಚಿತ್ರದ ನಾಯಕ ನಟ ರಾಘವೇಂದ್ರ ಮಾಚಗುಂಡಾಳ ಮಾತನಾಡಿ, ನಮ್ಮ ಉತ್ತರ ಕರ್ನಾಟಕ ಭಾಗದಲ್ಲಿ ಹಲವಾರು ಕಲಾವಿದರು ಇದ್ದಾರೆ, ತಮ್ಮಲ್ಲಿ ಇರುವ ಕಲೆಯನ್ನು ಹೊರ ಹಾಕಲು ಯೌಟ್ಯೂಬ್ ಒಂದು ಒಳ್ಳೆಯ ವೇದಿಕೆಯಾಗಿದೆ, ನಾವು ಸರಿಯಾಗಿ ಯೌಟ್ಯೂಬ್ ವನ್ನು ಸದ್ಭಳಕೆ ಮಾಡಿ ನಮ್ಮಲ್ಲಿರುವ…

Read More

ವಿಜಯಪುರ: ಪ್ರತಿಷ್ಠಿತ ಬಿ. ಎಲ್. ಡಿ. ಇ ಸಂಸ್ಥೆಯ ಎರಡು ಫಾರ್ಮಸಿ ಕಾಲೇಜುಗಳ ಐದು ವಿದ್ಯಾರ್ಥಿಗಳು ಇತ್ತೀಚೆಗೆ ನಡೆದ ಡಿ. ಫಾರ್ಮ್ ಅಂತಿಮ ವರ್ಷದ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಐದು ರ್ಯಾಂಕ್ ಗಳನ್ನು ಪಡೆಯುವ ಮೂಲಕ ಗಮನ ಸಂಸ್ಥೆಗೆ ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.ಬಸವನ ಬಾಗೇವಾಡಿ ಬಿ.ಎಲ್.ಡಿ.ಇ ಫಾರ್ಮಸಿ ಕಾಲೇಜಿನ ಅಕ್ಷತಾ ವಿರುಪಾಕ್ಷಿ ಮನಗೂಳಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದರೆ, ಇದೇ ಕಾಲೇಜಿನ ಪವಿತ್ರ ಜಗದೀಶ ನಿಡಗುಂದಿ 7ನೇ ಹಾಗೂ ಲಕ್ಷ್ಮಿ ಯಶವಂತ ಬಿರಾದಾರ 8ನೇ ರ್ಯಾಂಕ್ ಪಡೆದಿದ್ದಾರೆ.ವಿಜಯಪುರ ನಗರದಲ್ಲಿರುವ ಎಸ್.ಎಸ್.ಎಂ ಕಾಲೇಜ್ ಆಫ್ ಫಾರ್ಮಸಿ ಆ್ಯಂಡ್ ರಿಸರ್ಚ್ ಸೆಂಟರ್ ನ ಮೇಘಶ್ರೀ ಹಟ್ಟಿ ರಾಜ್ಯಕ್ಕೆ 4ನೇ ರ್ಯಾಂಕ್ ಗಳಿಸಿದ್ದರೆ, ವಿನೀತಾ ಉಳ್ಳಾಗಡ್ಡಿ 5ನೇ ರ್ಯಾಕ್ ಪಡೆದಿದ್ದಾರೆ.ಫಾರ್ಮಸಿ ಬೋರ್ಡ್ ಘೋಷಿಸುವ 10 ರ್ಯಾಂಕ್ ಗಳಲ್ಲಿ ಬಿ.ಎಲ್.ಡಿ.ಇ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳು 5 ರ್ಯಾಂಕುಗಳನ್ನು ಗಳಿಸುವ ಮೂಲಕ ಸಂಸ್ಥೆ ಮತ್ತು ಜಿಲ್ಲೆಗೆ ಹೆಮ್ಮೆ ತಂದಿರುವುದಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ, ಪ್ರಧಾನ…

Read More

ಚಡಚಣ: ಸಮೀಪದ ನಿವರಗಿ ಗ್ರಾಮದಲ್ಲಿ ಗಡಿನಾಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವಿಜಯಪುರ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಚಡಚಣ ಇವರ ಸಂಯುಕ್ತ ಆಶ್ರಯದಲ್ಲಿ ಜಾನಪದ ಗೋಷ್ಠಿ ಕಾರ್ಯಕ್ರಮ ಉದ್ಘಾಟಿಸಿ ಕರ್ನಾಟಕ ಸಮೃದ್ಧ ಜಾನಪದ ಸಾಹಿತ್ಯದ ಆಗರ, ಜನಪದ ಸಾಹಿತ್ಯ ಶ್ರೀಮಂತಿಕೆಗೆ ಅಪಾರವಾದದ್ದು , ಅದು ನಮ್ಮ ದೇಶದಲ್ಲಿ ಅಷ್ಟೇ ಅಲ್ಲ, ಅಮೆರಿಕದಲ್ಲಿ ಸಹ ತನ್ನ ಚಾಪು ಮೂಡಿಸಿದೆ. ಕನ್ನಡ ಅಂದರೆ ಅದೊಂದು ಸಂಸ್ಕೃತಿ, ಅಸ್ಮಿತೆ ನಮ್ಮ ಉಸಿರು. ಕನ್ನಡದ ಕೆಲಸಕ್ಕೆ ಎಲ್ಲರೂ ಒಂದಾಗಿ ಇರಬೇಕು. ಈ ನಿಟ್ಟಿನಲ್ಲಿ ಗಡಿ ಪ್ರಾಧಿಕಾರ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ‌ ಶ್ಲಾಘನೀಯ ಎಂದರು.ಮುಖ್ಯ ಅತಿಥಿಯಾಗಿ ಆಗಮಿಸಿದ ತಾಳಿಕೋಟೆಯ ಜಾನಪದ ವಿದ್ವಾಂಸೆ ಶಿವಲೀಲಾ ಮುರಾಳ ಮಾತನಾಡುತ್ತ, ಜಾನಪದವು ದಿನನಿತ್ಯ ಬೆಳಸುವ ಬದುಕಿನ ಸಂಸ್ಕೃತಿ ಅಂಗವಾಗಿದೆ. ಜನಪದ ಸಾಹಿತ್ಯವು ತಾಯಂದಿರು ಹಾಡುವ ಲಾಲಿಗಳಿಂದ ಪ್ರಾರಂಭವಾಗಿ ಹಾಡುವಾಗ, ಬೀಸುವಾಗ, ಕುಟ್ಟುವಾಗ ಹಾಡುವ ಹಾಡಿನಿಂದ ಈ ಜಾನಪದ ಹುಟ್ಟುತ್ತದೆ.ಮೊಬೈಲ್ ಯುಗದಲ್ಲಿ ಜನಪದ ಹಾಡುಗಳು ನಶಿಸಿ…

Read More

ವಿಜಯಪುರದ ಫ್ರೆಂಡ್ಸ್ ಟೆನಿಕಾಯಿಟ್ ಅಸೋಸಿಯೇಷನ್ ಕ್ಲಬ್ ಆಯೋಜನೆ ವಿಜಯಪುರ: ಜಿಲ್ಲಾ ಯುವಜನ ಕ್ರೀಡಾ ಇಲಾಖೆ ಸಹಯೋಗದೊಂದಿಗೆ ರಾಜ್ಯಮಟ್ಟದ ಡಬಲ್ಸ್ ಟೆನಿಕ್ವೈಟ್ ಪಂದ್ಯಾವಳಿಯು ನಗರದ ಡಾ. ಬಿ ಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜು.7 ರಂದು ರವಿವಾರ ನಡೆಯಿತು.ನಗರದ ಫ್ರೆಂಡ್ಸ್ ಟೆನಿಕಾಯಿಟ್ ಅಸೋಸಿಯೇಷನ್ ಕ್ಲಬ್ ಸಂಘಟಿಸಿದ ಈ ಪಂದ್ಯಾವಳಿಯಲ್ಲಿ ಗುಳೇದ್ಗುಡ್ಡ, ಕೋಲಾರ್, ಮುದ್ದೇಬಿಹಾಳ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಪ್ರಖ್ಯಾತ ಕ್ರೀಡಾಪಟುಗಳ ಒಟ್ಟು 36 ತಂಡಗಳು ಭಾಗವಹಿಸಿದ್ದವು.ಪಂದ್ಯಾವಳಿಯಲ್ಲಿ ಅಂತಿಮವಾಗಿ ರಾಮ್ ಮತ್ತು ಅಬ್ದುಲ್ ರಜಾಕ್ ಪೆಂಡಾರಿ ಗುಳೇದಗುಡ್ ಪ್ರಥಮ ಸ್ಥಾನ, ಚಂದ್ರಶೇಖರ್ ಖಂಡೆಕರ್ ಮತ್ತು ಪರಶುರಾಮ ಜಿಲ್ಲಾ ಕ್ರೀಡಾಂಗಣ ವಿಜಯಪುರ ದ್ವಿತೀಯ ಸ್ಥಾನ, ನಮ್ಮ ವಿಜಯಪುರದ ಹೆಮ್ಮೆಯ ಐಶ್ವರ್ಯ ನಗರದ ವರದಾಂಜನೇಯ ದೇವಸ್ಥಾನದ ಉದ್ಯಾನವನದ ತಂಡದ ಪ್ರಕಾಶ್ ಕೋರಳ್ಳಿ ಹಾಗೂ ಡಾ. ದರ್ಶನ್ ಧರಿ ರೋಮಾಂಚನವಾಗಿ ಆಟವಾಡಿ ವಿರೋಚಿತ ಪ್ರದರ್ಶನದೊಂದಿಗೆ ತೃತೀಯ ಸ್ಥಾನ ಗಿಟ್ಟಿಸಿಕೊಂಡು ಪಾರಿತೋಷಕ ಹಾಗೂ ನಗದು ಬಹುಮಾನ ಸ್ವೀಕರಿಸಿದರು.ಅಧಿಕ ಸಂಖ್ಯೆಯಲ್ಲಿ ಕ್ರೀಡಾಭಿಮಾನಿಗಳು ಪಾಲ್ಗೊಂಡು ಪಂದ್ಯಾವಳಿಯನ್ನು ಕಣ್ತುಂಬಿಕೊಂಡರು.

Read More