Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಮಹಾನಗರ ಪಾಲಿಕೆಯ ೨೧ನೇ ಅವಧಿಯ ವಿವಿಧ ನಾಲ್ಕು ಸ್ಥಾಯಿ ಸಮಿತಿಗಳಿಗೆ ಸದಸ್ಯರ ಆಯ್ಕೆಗಾಗಿ ಜು.೧೫ರಂದು ಚುನಾವಣೆ ನಡೆಸಲು ವಿಜಯಪುರ ಮಹಾನಗರ ಪಾಲಿಕೆ ಅಧ್ಯಕ್ಷಾಧಿಕಾರಿಗಳೂ ಆದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ದಿನಾಂಕ ನಿಗದಿಗೊಳಿಸಿದ್ದಾರೆ.ಚುನಾವಣಾ ವೇಳಾಪಟ್ಟಿಯಂತೆ ವಿಜಯಪುರ ಮಹಾನಗರ ಪಾಲಿಕೆಯ ಸಭಾ ಭವನದಲ್ಲಿ ಜು.೧೫ರಂದು ಮಧ್ಯಾಹ್ನ ೩ ಗಂಟೆಗೆ ಸಮಯ ನಿಗದಿಪಡಿಸಿದ್ದು, ಅಂದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧೨ ಗಂಟೆಯವರೆಗೆ ವಿವಿಧ ನಾಲ್ಕು ಸ್ಥಾಯಿ ಸಮಿತಿಗಳಿಗೆ ನಾಮಪತ್ರಗಳ ಸ್ವೀಕಾರ, ಮಧ್ಯಾಹ್ನ ೩ ಗಂಟೆಗೆ ಚುನಾವಣಾ ಪ್ರಕ್ರಿಯೆ ಆರಂಭವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಮುದ್ದೇಬಿಹಾಳ: ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕಾಮರಾಜ ಬಿರಾದಾರ ಅವರನ್ನ ಪತ್ರಕರ್ತ ಪುಂಡಲೀಕ ಮುರಾಳ ನೇತೃತ್ವದಲ್ಲಿ ತಾಲೂಕಿನ ಪತ್ರಕರ್ತರು ಸನ್ಮಾನಿಸಿ ಗೌರವಿಸಿದರು. ಈ ವೇಳೆ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಿ.ಬಿ.ವಡವಡಗಿ, ಸದಸ್ಯರಾದ ಚೇತನ ಶಿವಶಿಂಪಿ, ಪರಶುರಾಮ ಕೊಣ್ಣೂರ, ಸಿದ್ದು ಚಲವಾದಿ ಕಾನಿಪ ಧ್ವನಿ ಸಂಘದ ಶಂಕರ ಹೆಬ್ಬಾಳ, ಮಾರುತಿ ಹಿಪ್ಪರಗಿ, ಗುಲಾಮ ದಫೇದಾರ ಸೇರಿದಂತೆ ಮತ್ತಿತರರು ಇದ್ದರು.
ಮುದ್ದೇಬಿಹಾಳ: ಮೊಹರಂ ಹಬ್ಬದಲ್ಲಿ ಶೆರೆ ಕುಡಿದು ದಾಂಧಲೆ ಮಾಡುವದು ಕಂಡು ಬಂದರೆ ಅಂಥವರ ಮೇಲೆ ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಇಲ್ಲಿನ ಕ್ರೈಂ ಪಿಎಸ್ಐ ಆರ್.ಎಲ್.ಮನ್ನಾಬಾಯಿ ಹೇಳಿದರು.ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮೊಹರಂ ಹಬ್ಬದ ಕುರಿತು ನಡೆದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.ದೇವರು ಕೂರುವ ದಿನದಿಂದ ಕಳುಹಿಸಿ ಕೊಡುವ ದಿನದವರೆಗೂ ಗ್ರಾಮದ ಮುಖಂಡರು, ಹಿರಿಯರು ಹಬ್ಬವನ್ನು ಶಾಂತಿಯುತ ಮತ್ತು ಸೌಹಾರ್ದಯುತವಾಗಿ ಆಚರಿಸಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ, ಅವಶ್ಯವಿದ್ದಲ್ಲಿ ಪೊಲೀಸ್ ಇಲಾಖೆಯ ಸಹಕಾರ ಕೋರುವಂತೆ ಸಲಹೆ ನೀಡಿದರು. ಹಬ್ಬದ ಕೊನೆಯ ದಿನವಾದ ದಪ್ಪನ ದಿನದಂದು ಸೂಕ್ತ ಬಂದೋಬಸ್ತ ನೀಡಲಿರುವದಾಗಿ ತಿಳಿಸಿದರು.ಈ ವೇಳೆ ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಪುರಸಭೆ ಸದಸ್ಯ ಮಹೆಬೂಬ ಗೊಳಸಂಗಿ, ಎನ್ಎಸ್ಯುಐ ಪ್ರಧಾನ ಕಾರ್ಯದರ್ಶಿ ಸದ್ದಾಂ ಕುಂಟೋಜಿ, ಯುವ ಕಾಂಗ್ರೇಸ್ ಅಧ್ಯಕ್ಷ ರಫೀಕ ಶಿರೋಳ ಮತ್ತೀತರರು ಮಾತನಾಡಿ, ನಮ್ಮ ಪಟ್ಟಣ ಶಾಂತಿ ಮತ್ತು ಸೌಹಾರ್ಧಯುತೆಗೆ ಹೆಸರುವಾಸಿಯಾಗಿದೆ. ಇದುವರೆಗೆ ಯಾವುದೇ ಅಹಿತಕರ ಘಟನೆಗಳು ಸಂಭವಿಸಿಲ್ಲ. ಈ ಬಾರಿಯೂ ನಾವು…
ದೇವರಹಿಪ್ಪರಗಿ: ತಾಲ್ಲೂಕು ಪಂಚಾಯಿತಿಯಲ್ಲಿ ಶನಿವಾರ ಸ್ವಚ್ಛತಾ ಅಭಿಯಾನಕ್ಕೆ ಇಓ ಭಾರತಿ ಚಲುವಯ್ಯ ಚಾಲನೆ ನೀಡಿದರು.ಜಿಲ್ಲಾ ಪಂಚಾಯಿತಿ ಆದೇಶದ ಅನ್ವಯ ತಿಂಗಳ ಮೊದಲನೇ ಶನಿವಾರದಂದು ತಾಲ್ಲೂಕಿನ ಕಚೇರಿ ಒಳಗಡೆ ಮತ್ತು ಹೊರಗಡೆ ಸ್ವಚ್ಛತೆ ಕಾಪಾಡುವ ಹಿನ್ನೆಲೆಯಲ್ಲಿ ಸ್ವತ ಇಓ ಅವರು ಪೊರಕೆ ಹಿಡಿದು ಸಿಬ್ಬಂದಿಯೊಂದಿಗೆ ಕಚೇರಿ ಆವರಣವನ್ನು ಸ್ವಚ್ಛಗೊಳಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಇಓ ಭಾರತಿ ಚಲುವಯ್ಯ, ತಾಲ್ಲೂಕು ಕಚೇರಿ ಒಳಗೊಂಡಂತೆ ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛತೆ ಕಾಪಾಡುವ ದೃಷ್ಟಿಯಿಂದ ಪ್ರತಿತಿಂಗಳ ಮೊದಲ ಶನಿವಾರ ೨ ಗಂಟೆಗಳ ಕಾಲ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ. ಕಾರ್ಯಾಲಯದ ಜನಸ್ನೇಹಿ ಕಚೇರಿ ವಾತಾವರಣ ನಿರ್ಮಿಸುವ ಹಿತದೃಷ್ಟಿಯಲ್ಲಿ ಮಾದರಿ ಕಚೇರಿಯನ್ನು ನಿರ್ಮಿಸುವುದು ಈ ಅಭಿಯಾನದ ಉದ್ದೇಶವಾಗಿದೆ. ಈಗಾಗಲೇ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.ಪಂಚಾಯತ ರಾಜ್ ಸಹಾಯಕ ನಿರ್ದೇಶಕ ಶಿವಾನಂದ ಮೂಲಿಮನಿ, ಗ್ರಾಮೀಣ ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕ ಶಾಂತಗೌಡ ನ್ಯಾಮಣ್ಣವರ, ತಾಲ್ಲೂಕು ಯೋಜನಾಧಿಕಾರಿ ಶ್ರೀನಿವಾಸ ಪವಾರ, ವಿಷಯ ನಿರ್ವಾಹಕ ಜಿ.ಎಸ್.ರೋಡಗಿ, ಲೆಕ್ಕಾಧಿಕಾರಿ ಬೈರು ಮೂಲಿಮನಿ, ಐಇಸಿ ಸಂಯೋಜಕ ಸಿದ್ದು ಕಾಂಬಳೆ, ಕಿರಣ…
ದೇವರಹಿಪ್ಪರಗಿ: ಶಿಕ್ಷಣತಜ್ಞ ಹಾಗೂ ಜನಸಂಘದ ಸ್ಥಾಪಕ ಶ್ಯಾಮ್ಪ್ರಸಾದ್ ಮುಖರ್ಜಿ ಅವರ ಜಯಂತಿ ಅಂಗವಾಗಿ ಬಿಜೆಪಿ ಕಾರ್ಯಕರ್ತರು ಹಾಗೂ ಮಂಡಲ ಯುವಮೋರ್ಚಾ ಪದಾಧಿಕಾರಿಗಳು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಸಸಿಗಳನ್ನು ನೆಟ್ಟು ನೀರುಣಿಸಿದರು.ಪಟ್ಟಣದ ಇಂಡಿ ರಸ್ತೆಯಲ್ಲಿನ ರೇಣುಕಾಚಾರ್ಯ ಮಂದಿರ ಆವರಣದಲ್ಲಿ ಸೇರಿದ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಕಾರ್ಯದರ್ಶಿ ರಮೇಶ ಮಸಬಿನಾಳ ಹಾಗೂ ತಾಲ್ಲೂಕು ಜಂಗಮಾಭಿವೃದ್ಧಿ ಸಂಘದ ಅಧ್ಯಕ್ಷ ಸೋಮಶೇಖರ ಹಿರೇಮಠ ನೇತೃತ್ವದಲ್ಲಿ ಶ್ಯಾಮ್ಸುಂದರ್ ಮುಖರ್ಜಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆಗೈದು ಪೂಜೆ ಸಲ್ಲಿಸಿದರು.ನಂತರ ದೇವಸ್ಥಾನದ ಆವರಣದಲ್ಲಿ ಸಸಿಗಳನ್ನು ನೆಟ್ಟು ನೀರುಣಿಸಿದರು.ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷ ಕಲ್ಮೇಶ ಬುದ್ನಿ, ಪ್ರಧಾನ ಕಾರ್ಯದರ್ಶಿ ಶಿವರಾಜ್ ತಳವಾರ, ಹಿಂದುಳಿದ ವರ್ಗಗಳ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಮೇಶ ಈಳಗೇರ, ರಾವುತ ಅಗಸರ, ಸೋಮು ದೇವೂರ, ಚಂದ್ರಶೇಖರ ದಾನಗೊಂಡ, ಶ್ರೀಶೈಲ ಯಂಭತ್ನಾಳ, ಚಿದಾನಂದ ಕುಂಬಾರ, ಮಹಾಂತೇಶ ಬಿರಾದಾರ, ಬಾಪುಗೌಡ ಪಾಟೀಲ ಇದ್ದರು.
ಕೆಂಭಾವಿ: ಕೆಲಸಕ್ಕೆ ಸೇರಿದ ದಿನವೇ ನಮ್ಮ ವಿಶ್ರಾಂತಿ ದಿನ ನಿಗದಿಯಾಗಿರುತ್ತದೆ. ಸುರಕ್ಷಾಧಿಕಾರಿ ಕಾಶಿಬಾಯಿ ರಾಠೋಡ್ ಅವರ ವಿಶ್ರಾಂತಿ ಜೀವನ ಸುಖಕರವಾಗಿರಲಿ ಎಂದು ವೈದ್ಯಾಧಿಕಾರಿ ಡಾ. ಸಂಜಯ ಚಂದಾನವರ ಹೇಳಿದರು.ಪಟ್ಟಣದ ಸಮೀಪದ ನಗನೂರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಕಾಶಿಬಾಯಿ ರಾಠೋಡ್ ಅವರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮಕ್ಕೆ ಬಸ್ ಸೌಕರ್ಯ ಇಲ್ಲದಂತಹ ಸಂದರ್ಭದಲ್ಲಿ ಕಾಲ್ನಡಿಗೆಯಲ್ಲಿ ಹಳ್ಳಿಗಳಿಗೆ ಹೋಗಿ ಸೇವೆ ಸಲ್ಲಿಸಿದ್ದಾರೆ. ಅವರ ಸೇವೆ ಇತರರಿಗೆ ಮಾದರಿಯಾಗಿದೆ ಎಂದರು.ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಶಂಕ್ರಣ್ಣ ವಣಿಕ್ಯಾಳ ಮಾತನಾಡಿ, ಸೇವೆಯಲ್ಲಿ ಇದ್ದಷ್ಟು ದಿನ ವೃತ್ತಿಗೆ ಧಕ್ಕೆಯುಂಟು ಬಾರದಂತೆ ಕೆಲಸ ಮಾಡಿದಾಗ ಸಮಾಜದಲ್ಲಿ ಗೌರವ ಹೆಚ್ಚುತ್ತದೆ. ಕಾಶಿಬಾಯಿ ರಾಠೋಡ್ ಅವರು ತಮ್ಮ ಸೇವಾ ಅವಧಿಯ 38 ವರ್ಷಗಳ ಕಾಲ ಉತ್ತಮ ಸೇವೆ ಸಲ್ಲಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ಹೇಳಿದರು.ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಳ್ಳೆಪ್ಪ ಹವಲ್ದಾರರೈತ ಕೃಷಿ ಕಾರ್ಮಿಕ ಸಂಘಟನೆಯ ಜಿಲ್ಲಾಧ್ಯಕ್ಷ…
ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮದ ಅಧ್ಯಕ್ಷ ಎನ್.ಜಯದೇವನಾಯ್ಕ ಅಧಿಕಾರಿಗಳಿಗೆ ಸೂಚನೆ ವಿಜಯಪುರ: ಅತಿ ಹೆಚ್ಚು ತಾಂಡಾಗಳನ್ನು ಹೊಂದಿರುವ ವಿಜಯಪುರ ಜಿಲ್ಲೆಯಲ್ಲಿನ ತಾಂಡಾಗಳಲ್ಲಿ ವಾಸಿಸುತ್ತಿರುವ ಜನರ ಜೀವನಮಟ್ಟ, ಶೈಕ್ಷಣಿಕ ಸುಧಾರಣೆಗೆ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಲಾಭ ದೊರಕಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿ ಜನರಿಗೆ ಸವಲತ್ತುಗಳನ್ನು ದೊರಕಿಸುವಂತೆ ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮದ ಅಧ್ಯಕ್ಷ ಎನ್.ಜಯದೇವನಾಯ್ಕ ಅಧಿಕಾರಿಗಳಿಗೆ ಸೂಚನೆ ನೀಡಿದರು.ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತಾಂಡಾಗಳಲ್ಲಿರುವ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಕುರಿತು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ತಾಂಡಾಗಳಲ್ಲಿನ ಜನರ ಆರೋಗ್ಯ ಹಿತದೃಷ್ಟಿಯಿಂದ ಕಾಲಕಾಲಕ್ಕೆ ಆರೋಗ್ಯ- ವೈದ್ಯಕೀಯ ಶಿಬಿರಗಳನ್ನು ಆಯೋಜಿಸಿ ಜಾಗೃತಿ ಮೂಡಿಸಬೇಕು. ಅಧಿಕಾರಿಗಳು ಕಾಲಕಾಲಕ್ಕೆ ತಾಂಡಾಗಳಿಗೆ ಭೇಟಿ ನೀಡಿ, ಗಂಭೀರವಾದಂತಹ ಕಾಯಿಲೆಗಳಿಂದ ರಕ್ಷಿಸಿಕೊಳ್ಳುವ ಕುರಿತು ಜನರಲ್ಲಿ ಸೂಕ್ತ ತಿಳುವಳಿಕೆ ಮೂಡಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಪ್ರಾಥಮಿಕ ಶಿಕ್ಷಣ ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿಯಾಗಿದ್ದು, ಈ ನಿಟ್ಟಿನಲ್ಲಿ ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡಬೇಕು. ಮಕ್ಕಳ ಶೈಕ್ಷಣಿಕ ಭವಿಷ್ಯ ರೂಪಿಸುವಲ್ಲಿ…
ವಿಜಯಪುರ: ಮಹರಾಷ್ಟ್ರದ ಫಂಡರಪುರದಲ್ಲಿ ದಿನಾಂಕ ೧೪-೭-೨೦೨೪ರಿಂದ ೨೭-೦೭-೨೦೨೪ರವರೆಗೆ ನಡೆಯುವ ಜರಗುವ ಆಷಾಢ ಏಕಾದಶಿ ಜಾತ್ರೆಯ ಅಂಗವಾಗಿ ಜಿಲ್ಲೆಯ ಯಾತ್ರಾರ್ಥಿಗಳಿಗೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸುವ ದೃಷ್ಟಿಯಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದ ವಿಜಯಪುರ, ಇಂಡಿ, ಸಿಂದಗಿ, ತಾಳಿಕೋಟೆ, ಮುದ್ದೇಬಿಹಾಳ, ಬಸವನ ಬಾಗೇವಾಡಿ ಘಟಕದ ಕೇಂದ್ರ ನಿಲ್ದಾಣದಿಂದ ವಿಶೇಷ ಸಾರಿಗೆ ಕಾರ್ಯಾಚರಣೆ ಮಾಡಲಾಗುವುದು. ಒಂದೇ ಗುಂಪಿನಿಂದ ಪ್ರಯಾಣಿಸುವ ಕನಿಷ್ಟ ೪೭ ಜನ ಪ್ರಯಾಣಿಕರು ಲಭ್ಯವಾದಲ್ಲಿ ಅವರ ಸ್ವ-ಸ್ಥಳದಿಂದಲೇ ನೇರವಾಗಿ ಫಂಡರಾಪುರಕ್ಕೆ ಬಸ್ಸಿನ ವ್ಯವಸ್ಥೆ ಕಲ್ಪಿಸಲಾಗುವುದು.ಪ್ರಯಾಣಿಕರು ಸಾರಿಗೆ ಸೌಲಭ್ಯ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಭಾಗಿಯ ಸಾರಿಗೆ ಅಧಿಕಾರಿ ೭೭೬೦೯೯೨೨೫೨, ೭೭೬೦೯೯೨೨೬೩(ವಿಜಯಪುರ ಘಟಕ ೧), ೭೭೬೦೯೯೨೨೬೪(ವಿಜಯಪುರ ಘಟಕ ೨), ೭೭೬೦೯೯೨೨೬೫(ಇಂಡಿ), ೭೭೬೦೯೯೨೨೬೭(ಮುದ್ದೇಬಿಹಾಳ), ೭೭೬೦೯೯೨೨೬೯(ಬಸವನ ಬಾಗೇವಾಡಿ), ೭೭೬೦೯೯೨೨೬೬(ಸಿಂದಗಿ), ೭೭೬೦೯೯೨೨೬೮(ತಾಳಿಕೋಟೆ) ಕೇಂದ್ರ ಬಸ್ ನಿಲ್ದಾಣ ವಿಜಯಪುರದ ದೂ. ೦೮೩೫೨-೨೫೧೩೪೪, ಮೊ.೧೧೬೦೯೯೨೨೫೮ಕ್ಕೆ ಮಾಡಬಹುದು ಎಂದು ವಿಜಯಪುರ ಕಕರಸ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ನೋಂದಣಿಯಾಗಿ ಎಂಫಿಲ್ ಹಾಗೂ ಪಿಎಚ್ಡಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಫೆಲೋಶಿಫ್ ಪಡೆಯಲು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ ೩೧ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಂಗೀಕೃತವಾದ ವಿಶ್ವವಿದ್ಯಾಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿಎಚ್ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮೂರು ವರ್ಷಗಳ ಅವಧಿಗೆ ಹಾಗೂ ಎಂ.ಫಿಲ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಜೆ ಆರ್ ಎಫ್ ಜ್ಯೂನಿಯರ್ ರಿಸರ್ಚ್ ಫೆಲೋಶಿಫ್ ಮಾದರಿಯಲ್ಲಿ ಎರಡು ವರ್ಷಗಳ ಅವಧಿಗೆ ಪ್ರತಿ ತಿಂಗಳ ರೂ.೨೫,೦೦೦ ಮತ್ತು ಪ್ರತಿವರ್ಷಕ್ಕೆ ಒಂದು ಬಾರಿ ರೂ.೧೦,೦೦೦ ನಿರ್ವಹಣಾ ವೆಚ್ಚ ನೀಡಲಾಗುತ್ತದೆ.ಅರ್ಹರು ಸೇವಾಸಿಂಧು ಪೋರ್ಟಲ್ ಮೂಲಕ https://sevasindhu.karnataka.gov.in ಆನ್ ಲೈನ್ನಲ್ಲಿ ಅರ್ಜಿ ಸಲ್ಲಿಸಿ, ಅಗತ್ಯ ದಾಖಲಾತಿಗಳನ್ನು ದೃಢೀಕೃತ ಪತ್ರಿಗಳೊಂದಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ವಿಜಯಪುರ ಕಚೇರಿಗೆ ಸಲ್ಲಿಸುವುಂತಯೂ, ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲೆಯ ಅಲ್ಪಸಂಖ್ಯಾತರ ಕಛೇರಿ ದೂ:೦೮೩೫೨-೨೯೫೫೨೩ ಸಂಪರ್ಕಿಸಬಹುದಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸಿಕ್ಯಾಬ್ ಸಂಸ್ಥೆಯ ಮಲಿಕ್ ಸಂದಲ್ ಪಾಲಿಟೆಕ್ನಿಕ್ ಇವರ ಸಹಯೋಗದೊಂದಿಗೆ ಜುಲೈ ೧೧ ರಂದು ಬೆಳಿಗ್ಗೆ ೧೦ ಗಂಟೆಗೆ ಬಾಗಲಕೋಟೆ ರಸ್ತೆಯಲ್ಲಿರುವ ಸಿಕ್ಯಾಬ್ನ ಮಲಿಕ್ ಸಂದಲ್ ಪಾಲಿಟೆಕ್ನಿಕ್ ಕಾಲೇಜಿನ ಆವರಣದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಎಂಎನ್ಸಿ ಕಂಪನಿಗಳು ಹಾಗೂ ಸ್ಥಳೀಯ ಖಾಸಗಿ ಕಂಪನಿಗಳಿಂದ ನೇಮಕಾತಿಗಾಗಿ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.ಉದ್ಯೋಗ ಮೇಳದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಹಾಗೂ ಯಾವುದೇ ಪದವಿ ಪಾಸಾದ ೩೫ ವರ್ಷ ವಯೋಮಾನದ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಶಾಲಾ ದಾಖಲಾತಿಗಳ ಸಹಿತ ಸ್ವವಿವರ, ಆಧಾರ ಕಾರ್ಡಗಳ ಎರಡು ಸೆಟ್ ಝರಾಕ್ಸನೊಂದಿಗೆ ಭಾಗವಹಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ (ಮೊ:೭೭೬೦೯೪೪೨೮೬) ಹಾಗೂ (ಮೊ:೯೯೪೫೦೦೦೭೯೩) ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಂಪರ್ಕಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
