Author: editor.udayarashmi@gmail.com

ವಿಜಯಪುರ: ೨೦೨೪-೨೫ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಗೆ ದ್ರಾಕ್ಷಿ ಬೆಳೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು (ಆರ್‌ಡಬ್ಲುಬಿಸಿಐಎಸ್) ಅನುಷ್ಠಾನಗೊಳಿಸಲು ಅಧಿಸೂಚಿಸಲಾಗಿದ್ದು, ಬೆಳೆ ಸಾಲ ಪಡೆದ ರೈತರು ಹಾಗೂ ಬೆಳೆ ಸಾಲ ಪಡೆಯದೆ ಇರುವ ರೈತರು ತಮ್ಮ ಆಧಾರ ಕಾರ್ಡ ಝರಾಕ್ಸ, ಪಹಣಿ ಪತ್ರಿಕೆ ಹಾಗೂ ಬ್ಯಾಂಕ್ ಪಾಸ್ ಬುಕ್ ಪ್ರತಿಯೊಂದಿಗೆ ಹತ್ತಿರದ ಬ್ಯಾಂಕುಗಳಲ್ಲಿ, ಗ್ರಾಮ ಒನ್ ಕೇಂದ್ರ ಅಥವಾ ಸಿಎಸ್‌ಸಿ ಸೆಂಟರ್‌ಗಳಲ್ಲಿ ವಿಮಾ ಯೋಜನೆಯಡಿ ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕರು ಕೋರಿದ್ದಾರೆ. ದ್ರಾಕ್ಷಿ ಬೆಳೆ ವಿಮೆ ನೋಂದಾಯಿಸಿಕೊಳ್ಳಲು ಜುಲೈ ೧೫ ಕೊನೆಯ ದಿನವಾಗಿದೆ. ರೈತರು ರೂ. ೧೪,೦೦೦ ವಿಮಾ ಕಂತಿನ ಮೊತ್ತ ಪಾವತಿಸಬೇಕಾಗಿದ್ದು, ಕಡ್ಡಾಯವಾಗಿ ಎಫ್‌ಐಡಿ ಹಾಗೂ ಎನ್‌ಪಿಸಿಐ ಸೀಡಿಂಗ್ ಮಾಡಿಸಿರಬೇಕು.ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ, ರೈತ ಸಂಪರ್ಕ ಕೇಂದ್ರದ ಅಧಿಕಾರಿ ಹಾಗೂ ಹತ್ತಿರದ ಬ್ಯಾಂಕ್ ಶಾಖೆ, ಕುಮಾರಿ ಪವಿತ್ರಾ ಅಗ್ರಿಕಲ್ಚರ್ ಇನ್ಸುರೆನ್ಸ್ ಕಂಪನಿ ವಿಮಾ ಸಂಸ್ಥೆಯ ಪ್ರತಿನಿಧಿ ಮೊಬೈಲ್ ನಂ: ೮೮೯೯೮೮೭೮೭೩, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ವಿಜಯಪುರ -…

Read More

– ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ-ಗದಗ ಯಾರೋ ಒಬ್ಬ ಹೆಣ್ಣು ಮಗಳು ರೈಲು ಹಳಿಯ ಬಳಿ ನಿಂತು ಸೆಲ್ಫಿ ತೆಗೆದುಕೊಳ್ಳಲು ಹೋದಾಗ ರೈಲಿನ ಒಂದು ತೆರೆದ ಭಾಗ ಆಕೆಗೆ ಬಡಿದು ಆಕೆ ಕ್ಷಣಮಾತ್ರದಲ್ಲಿ ರೈಲಿನ ಗಾಲಿಗಳಡಿಯಲ್ಲಿ ಸಿಲುಕಿ ಸತ್ತುಹೋದಳು. ಆಕೆಯ ಹತ್ತಿರದ ಸ್ನೇಹಿತೆ ಜೋರಾಗಿ ಕಿರುಚಿ ಅಳುತ್ತಿದ್ದರೆ, ವಿಡಿಯೋ ರೆಕಾರ್ಡಿಂಗ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಲು ಬಂದಿದ್ದ ಸ್ನೇಹಿತರ ಗುಂಪು ಆಕೆಯನ್ನು ರಕ್ಷಿಸಲು ಸಾಧ್ಯವಾಗದೆ ಅಸಹಾಯಕರಾಗಿ ನಿಂತು ನೋಡುತ್ತಿದ್ದರು. ಮತ್ತೊಂದು ಘಟನೆಯಲ್ಲಿ ತನ್ನ ಸ್ನೇಹಿತರೊಂದಿಗೆ ಟ್ರೆಕ್ಕಿಂಗ್ ಹೋಗಿದ್ದ ಮಿಲಿಟರಿ ಯೋಧನೊಬ್ಬ ತನ್ನ ವಿಡಿಯೋ ಮಾಡಲು ಹೇಳಿ ಮಡುವಿನಲ್ಲಿ ಹಾರಿದನು. ಆದರೆ ನೀರಿನ ಆಳ, ಅಗಲ ಮತ್ತು ರಭಸದ ಅರಿವಿಲ್ಲದೆ ಪ್ರವಾಹದೊಂದಿಗೆ ತಳ್ಳಲ್ಪಟ್ಟಾಗ ಬಂಡೆಗಲ್ಲೊಂದನ್ನು ಹಿಡಿಯಲು ಪ್ರಯತ್ನಿಸಿದರೂ ಸಾಧ್ಯವಾಗದೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಜಲ ಸಮಾಧಿಯಾದನು. ಪೊಲೀಸ್ ಇಲಾಖೆಯ ಸತತ ಪ್ರಯತ್ನದಿಂದ ಎರಡು ದಿನಗಳ ನಂತರ ಆತನ ಹೆಣ ದೊರೆಯಿತು. ಮತ್ತೊಬ್ಬರು ಕಡಿದಾದ ಬೆಟ್ಟದ ತುತ್ತ ತುದಿಯಲ್ಲಿ ನಿಂತು…

Read More

ವಿಜಯಪುರ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಜು.೧೩ ರಂದು ನಗರದಲ್ಲಿ ಪತ್ರಿಕಾ ದಿನಾಚರಣೆ, ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಜಿಲ್ಲೆಯ ಹಿರಿಯ ಪತ್ರಕರ್ತರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.ಶನಿವಾರ ನಗರದ ಜಿಪಂ ಕಚೇರಿ ಬಳಿಯ ಪತ್ರಿಕಾ ಭವನದಲ್ಲಿ ಕಾನಿಪ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕಾನಿಪ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.ಸಮಾರಂಭವನ್ನು ಅಚ್ಚುಕಟ್ಟಾಗಿ, ಅರ್ಥಪೂರ್ಣವಾಗಿ ಆಯೋಜಿಸಲು ಸಭೆಯಲ್ಲಿ ನಿರ್ಧರಿಸಲಾಯಿತಲ್ಲದೆ, ಅದಕ್ಕಾಗಿ ವಿವಿಧ ಸಮಿತಿಗಳನ್ನು ರಚಿಸಲಾಯಿತು.ಕಾರ್ಯಕ್ರಮಕ್ಕೆ ಜಿಲ್ಲೆಯ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾಧಿಕಾರಿ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಅವರನ್ನು ಆಹ್ವಾನಿಸಲು ತೀರ್ಮಾನಿಸಲಾಯಿತು.ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ, ಕಾನಿಪ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ಪ್ರಧಾನ ಕಾರ್ಯದರ್ಶಿ ಜೆ.ಸಿ.ಲೋಕೇಶ, ಜಿಲ್ಲಾ ಉಸ್ತುವಾರಿ ಪುಂಡಲೀಕ ಬಾಳೋಜಿ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ಸಭೆ ತೀರ್ಮಾನಿಸಿತು.ಕಾನಿಪ ಸಂಘದ ಜಿಲ್ಲಾ ಉಪಾಧ್ಯಕ್ಷ…

Read More

ಕಾರ್ಯನಿರತ ಪತ್ರಕರ್ತರ ಸಂಘ & ವಿತರಕರ ಸಂಘದಿಂದ ಪತ್ರಿಕಾ ವಿತರಕ ದಿ.ಮಲ್ಲಪ್ಪ ಮಂಗಾನವರ ಶ್ರದ್ಧಾಂಜಲಿ ಸಭೆ ವಿಜಯಪುರ: ಕಳೆದ ಜು.೨ರಂದು ನಿಧನರಾದ ನಗರದ ಹಿರಿಯ ಪತ್ರಿಕಾ ವಿತರಕ ಮಲ್ಲಪ್ಪ ಆರ್.ಮಂಗಾನವರ ಅವರ ಶ್ರದ್ಧಾಂಜಲಿ ಸಭೆಯನ್ನು ನಗರದ ಹೊಸ ಪತ್ರಿಕಾ ಭವನದಲ್ಲಿ ಶನಿವಾರ ಆಚರಿಸಲಾಯಿತು.ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪತ್ರಿಕಾ ವಿತರಕರ ಸಂಘ ಜಂಟಿಯಾಗಿ ಆಯೋಜಿಸಿದ ಈ ಸಭೆಯಲ್ಲಿ ದಿ.ಮಲ್ಲಪ್ಪ ಮಂಗಾನವರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಒಂದು ನಿಮಿಷ ಮೌನ ಆಚರಿಸಲಾಯಿತು.ಈ ವೇಳೆ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ಮಾತನಾಡಿ, ಪತ್ರಿಕೆಯು ಸುದ್ದಿಮನೆಯಿಂದ ಓದುಗರ ಮನೆ ಬಾಗಿಲಿಗೆ ತಲುಪಲು ಪತ್ರಿಕಾ ವಿತರಕರ ಪಾತ್ರ ದೊಡ್ಡದು. ಈ ವೃತ್ತಿಯಲ್ಲಿ ೪೦ವರ್ಷಕ್ಕೂ ಅಧಿಕ ಕಾಲ ದಣಿವರಿಯದ ಸೇವೆ ಸಲ್ಲಿಸಿದವರು ದಿ.ಮಂಗಾನವರ ಅವರು. ಈ ವೃತ್ತಿಯಿಂದಲೂ ಆರ್ಥಿಕವಾಗಿ ಸಬಲರಾಗಬಹುದು ಎಂದು ಅವರು ತೋರಿಸಿಕೊಟ್ಟರು. ಅವರ ಕಾಯಕ ನಿಷ್ಠೆ ವಿತರಕರಿಗೆ ಮಾದರಿಯಾಗಿದೆ ಎಂದು ಹೇಳಿದರು.ವಿಜಯ ಕರ್ನಾಟಕ ಪತ್ರಿಕೆ ಪ್ರಸಾರಾಂಗ ವಿಭಾಗದ ರಮೇಶ ವಿಟ್ಲಾಪೂರ ಮಾತನಾಡಿ,…

Read More

ಚಡಚಣ: ಮಹಿಳೆಯರು ಜೀವನದಲ್ಲಿ ಧೈರ್ಯದಿಂದ ಸಾಗಬೇಕು.ಎಂತಹ ಸಂಕಷ್ಟಗಳು ಸರಾಗವಾಗಿ ಎದುರಿಸುವ ಮನೋಭಾವನೆ ಹೊಂದಬೇಕು. ಅಂದಾಗ ಜೀವನದಲ್ಲಿ ಯಶಸ್ಸು ಕಾಣಬಹುದು ಎಂದು ಕನಕನಾಳ ಭಾಗ್ಯವಂತಿದೇವಿಯ ಧೂಳಿ ರುದ್ರಪ್ಪ ಪೂಜಾರಿ ಹೇಳಿದರು. .ಪಟ್ಟಣದ ಶಂಕರಲಿಂಗ ದೇವಸ್ಥಾನದ ಆವರಣದಲ್ಲಿ ಜರುಗಿದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಇಂಡಿಯವರ ಆಶ್ರಯದಲ್ಲಿ ಚಡಚಣ ಕೇಂದ್ರದ ವಾರ್ಷಿಕೋತ್ಸವದ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿ, ಮಹಿಳೆಯರ ಆರ್ಥಿಕತೆಗೆ ಇಂತಹ ಸಂಘಗಳು ಪೂರಕ. ಈ ಸಂಘವ ಮಹಿಳೆಯರಿಗಾಗಿ ನಾನಾ ಯೋಜನೆಗಳನ್ನು ಕೈಗೊಂಡು ಮಹಿಳೆ ಅಬಲೆಯಲ್ಲ ಸಬಲೆ ಎನ್ನುವುದನ್ನು ಸಾಬೀತು ಮಾಡಿದೆ ಎಂದರು.ಮೇಲ್ವಿಚಾರಕ ಜಗದೀಶ ಕುಂಬಾರ ಮಾತನಾಡಿ, ಸಂಘವು ಅಭಿವೃದ್ಧಿಯಾಗಬೇಕಾದರೆ ನಿಮ್ಮೆಲ್ಲರ ಸಹಕಾರ ಮುಖ್ಯ ಎಂದರು.ಅಖಿಲ ಕರ್ನಾಟಕ ಜ್ಞಾನ ಜಾಗೃತಿ ಜಿಲ್ಲಾ ಸದಸ್ಯ ಶಿವಣ್ಣ ಪಾಂಡ್ರೆ ಮಾತನಾಡಿ, ಧರ್ಮಸ್ಥಳ ಸಂಘ ಸಂಘದಿಂದ ಅನಾಥರಿಗೆ ಬಡವರಿಗೆ ವಸತಿಯೋಜನೆ, ವೃದ್ಧರಿಗೆಮಾಸಾಶನ ಯೋಜನೆ ಮಾಡಿದೆ ಎಂದರು.ಬಣಗಾರ ಸಮಾಜದ ಮುಖಂಡ ಬಸವರಾಜ ಕರಜಗಿ ಮಾತನಾಡಿ, ಸಂಘವು ಉತ್ತರೋತ್ತರ ಅಭಿವೃದ್ಧಿ ಹೊಂದಿ ಮಹಿಳೆಯರ ಬಾಳೆಗೆ ಬೆಳಕಾಗಲಿ ಎಂದು ಶುಭ…

Read More

ವಿಜಯಪುರ: ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯ ಮತ್ತು ಕೇಂದ್ರ ಆಯುಷ್ ಇಲಾಖೆಯ ಹೋಮಿಯೋಪಥಿ ಸಂಶೋಧನೆ ಪರಿಷತ್ತಿನ ಮಧ್ಯೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಸಲಹೆಗಾರ ಮತ್ತು ವಿವಿ ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ ವಿಶ್ವವಿದ್ಯಾಲಯದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ವಿವಿಯ ಕುಲಪತಿ ಡಾ. ಆರ್. ಎಸ್. ಮುಧೋಳ ಮತ್ತು ಕೇಂದ್ರ ಆಯುಷ ವಿಭಾಗದ ಹೋಮಿಯೋಪಥಿ ಸಂಶೋಧನೆ ಪರಿಷತ್ತಿನ ಮಹಾನಿರ್ದೇಶಕ ಡಾ. ಸುಭಾಶ ಕೌಶಿಕ ಅವರು ಒಡಂಬಡಿಕೆಗೆ ಸಹಿ ಹಾಕಿದ್ದಾರೆ ಎಂದು ತಿಳಿಸಿದ್ದಾರೆ.ಈ ಒಡಂಬಡಿಕೆಯಿಂದಾಗಿ ವಿವಿ ಮತ್ತು ಪರಿಷತ್ತಿನ ನಡುವೆ ಪರಸ್ಪರ ಸಹಯೋಗದಲ್ಲಿ ಆರೋಗ್ಯ ವಿಜ್ಞಾನ ಕ್ಷೇತ್ರದ ನಾನಾ ವಿಭಾಗಗಳಲ್ಲಿ ಸಮಗ್ರ ಚಟುವಟಿಕೆ ನಡೆಸಲು ಮತ್ತು ನಾನಾ ಸಾಂಕ್ರಾಮಿಕ ಹಾಗೂ ದೀರ್ಘಕಾಲದ ಕಾಯಿಲೆಗಳನ್ನು ನಿಯಂತ್ರಿಸಲು ಹೊಸ ಸಂಶೋದನೆ ಕೈಗೊಳ್ಳಲು, ವಿಚಾರ ವಿನಿಮಯ ಮಾಡಿಕೊಳ್ಳಲು ಅನುಕೂಲವಾಗಲಿದೆ.ಈ ಒಡಂಬಡಿಕೆ ಸಂದರ್ಭದಲ್ಲಿ ವಿವಿ ಸಮಕುಲಾಧಿಪತಿ ಡಾ. ಆರ್. ಎಂ. ಜಯರಾಜ, ಸಮಕುಲಪತಿ ಡಾ. ಅರುಣ ಚಂ.…

Read More

ವಿಜಯಪುರ: ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಡಾ. ಬಾಬು ಜಗಜೀವನರಾಮ ಅವರ ಪುಣ್ಯತಿಥಿ ಪ್ರಯುಕ್ತ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಡಾ. ಬಾಬು ಜಗಜೀವನರಾಮರವರ ವ್ಯಕ್ತಿತ್ವದ ಕುರಿತು ಕಾಂಗ್ರೆಸ್ ಮುಖಂಡರು ಮಾತನಾಡಿ, ಬಾಬು ಜಗಜೀವನರಾಮರವರ ಜೀವನವು ಹಲವಾರು ಆಯಾಮಗಳ ವ್ಯಕ್ತಿತ್ವವನ್ನು ಹೊಂದಿದೆ. ಸಮಾಜಕ್ಕೆ ಸಮಾನತೆಯ ಸಂದೇಶವನ್ನು ಸಾರಿದ ಸಂಪನ್ನ ರಾಜಕಾರಣಿ ಅವರಾಗಿದ್ದರು. ಸುಮಾರು ೪೦ ವರ್ಷಗಳ ಕಾಲ ಸಂಸತ್ತಿನಲ್ಲಿ ಹಲವಾರು ಇಲಾಖೆಗಳ ನಿರ್ವಹಣೆಯನ್ನು ಮಾಡಿದ ಏಕೈಕ ರಾಜಕಾರಣಿಯಾಗಿದ್ದ ಅವರ ವಿಚಾರಗಳ ಕುರಿತು ಸಂಶೋಧನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮುಖಾಂತರ ಇವರ ತತ್ವಗಳನ್ನು ಪ್ರಸಾರ ಮಾಡುವ ಅಗತ್ಯವಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಚಾಂದಸಾಬ ಗಡಗಲಾವ, ವೈಜನಾಥ ಕರ್ಪೂರಮಠ, ಸುಭಾಸ ಕಾಲೆಬಾಗ, ಡಾ. ಗಂಗಾಧರ ಸಂಭಣ್ಣಿ, ಮಹಾದೇವ ಜಾಧವ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಾಹೇಬಗೌಡ ಬಿರಾದಾರ, ಎಂ. ಎಂ. ಮುಲ್ಲಾ (ದ್ಯಾಬೇರಿ), ವಸಂತ ಹೊನಮೋಡೆ, ಲಾಲಸಾಬ ಕೊರಬು, ಜಮೀರಹ್ಮದ ಬಕ್ಷಿ, ರಿಯಾಜ ನದಾಫ, ತಾಜುದ್ದೀನ ಖಲೀಫಾ, ಫಿರೋಜ ಶೇಖ, ಬಾಬು ಯಾಳವಾರ,…

Read More

ಕಲಕೇರಿ: ಶಿಕ್ಷಕ ಸೇವೆಯಲ್ಲಿ ಕರ್ತವ್ಯನಿಷ್ಠೆಯೊಂದಿಗೆ ಕಾರ್ಯನಿರ್ವಹಿಸಿ, ಸರಳ ವ್ಯಕ್ತಿತ್ವದಿಂದ ಸಾರ್ಥಕತೆ ಕಂಡುಕೊಂಡು ನಿವೃತ್ತಿ ಹೊಂದುತ್ತಿರುವ ಶಿಕ್ಷಕರ ಜೀವನ ಸುಖಮಯವಾಗಿರಲಿ ಎಂದು ಸಿ ಆರ್ ಪಿ ಗುಲಾಬ ನದಾಫ ಹೇಳಿದರು.ಪಟ್ಟಣದ ಶಿಕ್ಷಕರ ಸದನದಲ್ಲಿ ಸರಕಾರಿ ಹಿರಿಯ ಮಾದರಿ ಉರ್ದು ಪ್ರಾಥಮಿಕ ರಾಂಪೂರ ಪಿ.ಟಿ ಶಾಲೆಯ ಮುಖ್ಯ ಶಿಕ್ಷಕ ಆರ್.ಬಿ.ಕಡಿಮನಿ ಅವರು ನಿವೃತ್ತಿ ಹೊಂದಿರುವ ನಿಮಿತ್ಯ ನಡೆದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.ಶಿಕ್ಷಕರ ಹುದ್ದೆ ಬಹಳ ಪವಿತ್ರವಾದದ್ದು. ವಿದ್ಯಾರ್ಥಿಗಳಿಗೆ ಉನ್ನತ ವಿಚಾರ ಧಾರೆಗಳು ಹಾಗೂ ಗುಣ ಮಟ್ಟದ ಶಿಕ್ಷಣ ನೀಡಿದಾಗ ಮಾತ್ರ ಅವರು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಬಾಳಲು ಸಹಕಾರಿಯಾಗುತ್ತದೆ ಎಂದರು.ವಿಶ್ರಾಂತ ಮುಖ್ಯ ಶಿಕ್ಷಕ ಯು.ಆಯ್ ಶೇಖ ಮಾತನಾಡಿ, ಶಿಕ್ಷಕರು ಸೇವಾ ನಿವೃತ್ತಿ ಹೊಂದಿದ ಬಳಿಕ ಆರೋಗ್ಯ ಕಡೆಗೆ ಹೆಚ್ಚು ಗಮನ ಹರಿಸಬೇಕು.ಶಿಕ್ಷಕರಾಗಿ ಸೇವೆ ಸಲ್ಲಿಸಿದವರನ್ನು ಇಲಾಖೆ, ಪಾಲಕರು ಹಾಗೂ ವಿದ್ಯಾರ್ಥಿಗಳು ಎಂದೂ ಮರೆಯುವುದಿಲ್ಲ. ತಮಗೆ ವಹಿಸಿದ ಕೆಲಸವನ್ನು ಶ್ರದ್ಧೆ ಹಾಗೂ ಪ್ರಾಮಾಣಿಕತೆಯಿಂದ ನಿರ್ವಹಿಸಿ, ಅಧಿಕಾರಿಗಳು ಮತ್ತು ಪಾಲಕರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾದ ಕಡಿಮನಿ ಗುರುಗಳ…

Read More

ವಿಜಯಪುರ: ರೈತರು ಮಣ್ಣೆತ್ತಿನ ಅಮವಾಸ್ಯೆಯ ದಿನ ಕುಂಬಾರರು ಮಣ್ಣಿನಿಂದ ತಯಾರಿಸಿದ ಜೋಡಿ ಎತ್ತುಗಳನ್ನು ತಂದು ಪೂಜಿಸುವ ದೃಶ್ಯ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಕಂಡುಬಂತು.ರೈತರಿಗೆ ಎತ್ತುಗಳು ಕಣ್ಣುಗಳಿದ್ದಂತೆ. ಮಣ್ಣು ಕೂಡಾ ದೇವ ಸ್ವರೂಪಿ. ಎತ್ತುಗಳು ಜಮೀನಿನಲ್ಲಿ ರೈತನಿಗಾಗಿ ಹಗಲಿರಳು ದುಡಿದರೆ, ಭೂತಾಯಿ ರೈತನಿಗೆ ಅನ್ನ ನೀಡುತ್ತಾಳೆ. ಹೀಗಾಗಿ ಮಣ್ಣು ಮತ್ತು ಎತ್ತುಗಳನ್ನು ರೈತರು ಪೂಜನೀಯ ಭಾವದಿಂದ ಕಾಣುತ್ತಾರೆ. ಮುಂಗಾರು ಮಳೆ ಪ್ರಾರಂಭದ ನಂತರ ಬರುವ ಕಾರ ಹುಣ್ಣಿಮೆ ಮತ್ತು ಮಣ್ಣೆತ್ತಿನ ಅಮಾವಾಸ್ಯೆಯಂದು ರೈತರು ತಮ್ಮ ನೋವು ನಲಿವುಗಳನ್ನು ಬದಿಗಿಟ್ಟು, ಎತ್ತುಗಳನ್ನು ಪೂಜಿಸಿ, ಸಂಭ್ರಮಿಸುವ ಪದ್ದತಿ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಈಗಲೂ ಚಾಲ್ತಿಯಲ್ಲಿದೆ.ಕಪ್ಪುಎರೆ ಮಣ್ಣಿನಿಂದ ತಯಾರಿಸಿದ ಮಣ್ಣೆತ್ತುಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಕಡಿಮೆಯಾಗಿ, ನಮ್ಮ ಬದುಕು ಕಷ್ಟಕರವಾಗಿದೆ. ಪ್ಲಾಸ್ಟರ್ ಆಫ್ ಪ್ಯಾರಿಸ್, ವೈಟ್ ಸಿಮೆಂಟ್‌ನ ಬಣ್ಣ ಬಣ್ಣದ ವಿವಿಧ ನಮೂನೆಯ ಚಿತ್ತಾಕರ್ಷಕ ಎತ್ತುಗಳ ಬೊಂಬೆಗಳು ಈಗ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ಪರಿಸರ ಸ್ನೇಹಿ ಮಣ್ಣಿನ ಎತ್ತುಗಳಿಗೆ ಬೇಡಿಕೆ ಕಡಿಮೆಯಾಗಿದೆ ಎಂದು ಮಲ್ಲಿಕಾರ್ಜುನ ಕುಂಬಾರ ಅಭಿಪ್ರಾಯ ವ್ಯಕ್ತಪಡಿಸಿದರು.ಮಣ್ಣೆತ್ತಿನ ಅಮಾವಾಸ್ಯೆಯ…

Read More