Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ನಗರದ ಹಿರಿಯ ಪತ್ರಕರ್ತ ಸಂಗಮೇಶ ಚೂರಿಯವರನ್ನು ಆಯ್ಕೆ ಮಾಡಿದೆ ಎಂದು ರಾಜ್ಯ ಪತ್ರಕರ್ತರ ವೇದಿಕೆ ರಾಜ್ಯಾದ್ಯಕ್ಷ ಮಹೇಶಬಾಬು ಸುರ್ವೆ ತಿಳಿಸಿದ್ದಾರೆ.ಜು.೭ರಂದು ರವಿವಾರ ಬೆಳಿಗ್ಗೆ 10 ಘಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ರಾಜ್ಯ ಪತ್ರಕರ್ತರ ವೇದಿಕೆ ಆಯೋಜನೆ ಮಾಡಿರುವ ಪತ್ರಿಕಾ ದಿನಾಚರಣೆಯಲ್ಲಿಗಣ್ಯರಾದ ಸಂತೋಷ ಹೆಗಡೆˌ, ಮನು ಬಳಗಾರ, ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಮುಂತಾದ ಗಣ್ಯರ ಸಮ್ಮುಖದಲ್ಲಿ ಸಂಗಮೇಶ ಚೂರಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸುರ್ವೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿರೋಧ ಪಕ್ಷಗಳ ಆರೋಪದಲ್ಲಿ ಹುರುಳಿಲ್ಲ | ಎಸ್ಸಿಎಸ್ಪಿ-ಟಿಎಸ್ಪಿ ಅನುದಾನ ಆಯಾ ವರ್ಷವೇ ಖರ್ಚು ಮಾಡಬೇಕೆಂದ ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗೆ ದಲಿತರ ಅಭಿವೃದ್ಧಿ ಮೀಸಲಿಟ್ಟಿರುವ SCP, TSP ಅನುದಾನ ಬಳಕೆ ಮಾಡುತ್ತಿದೆ ಎಂಬ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಶುಕ್ರವಾರ ಸ್ಪಷ್ಟನೆ ನೀಡಿದ್ದು, ಆರೋಪದಲ್ಲಿ ಹುರುಳಿಲ್ಲ ಎಂದು ಹೇಳಿದ್ದಾರೆ.ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅನುಸೂಚಿತ ಜಾತಿಗಳ ಉಪ ಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆ ರಾಜ್ಯ ಪರಿಷತ್ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ”ದಲಿತ ಸಮುದಾಯದ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಎಸ್ಸಿಎಸ್ಪಿ-ಟಿಎಸ್ಪಿ ಅಡಿ ಅನುದಾನ ಆಯಾ ವರ್ಷವೇ ಖರ್ಚು ಮಾಡಬೇಕು. ಈ ಸಂಬಂಧ ನಿರ್ಲಕ್ಷ್ಯ ತೋರಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳನ್ನು ಎಚ್ಚರಿಸಿದ್ದಾರೆ.ಅಂತೆಯೇ “ಇಡೀ ದೇಶದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಮೀಸಲಿಡಲು ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಮಾಡಿರುವುದು ನಮ್ಮ ಸರ್ಕಾರ ಮಾತ್ರ. ಇದರಿಂದ 2024-25ನೆ ಸಾಲಿಗೆ ಎಸ್ಸಿಎಸ್ಪಿ-ಟಿಎಸ್ಪಿ ಅಡಿ ಒಟ್ಟಾರೆ 39,121 ಕೋಟಿ ರೂ.ಅನುದಾನ ಒದಗಿಸಲಾಗಿದೆ.…
ಬೆಂಗಳೂರು: ಕಳೆದ ಒಂದು ತಿಂಗಳ ಅವಧಿಯಲ್ಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್ಎಸ್ಎಸ್ಎಐ) ದೇಶಾದ್ಯಂತ 111 ಮಸಾಲೆ ಉತ್ಪಾದಕರ ಉತ್ಪಾದನಾ ಪರವಾನಗಿಯನ್ನು ರದ್ದುಗೊಳಿಸಿದೆ. ತಕ್ಷಣವೇ ಉತ್ಪಾದನೆಯನ್ನು ನಿಲ್ಲಿಸುವಂತೆ ಅವರಿಗೆ ಸೂಚನೆ ನೀಡಲಾಗಿದೆ ಎಂದು ವರದಿಗಳು ಹೇಳಿವೆ.ಕಳೆದ ಎಪ್ರಿಲ್ನಲ್ಲಿ ಸಿಂಗಾಪುರ ಮತ್ತು ಹಾಂಗ್ಕಾಂಗ್ ಜನಪ್ರಿಯ ಭಾರತೀಯ ಬ್ರ್ಯಾಂಡ್ಗಳಾದ ಎಂಡಿಹೆಚ್ ಮತ್ತು ಎವರೆಸ್ಟ್ ಮಸಾಲೆಗಳ ಮಾರಾಟವನ್ನು ನಿಷೇಧಿಸಿದಾಗಿನಿಂದ ಎಫ್ಎಸ್ಎಸ್ಎಐ ದೇಶಾದ್ಯಂತದಿಂದ ಮಸಾಲೆ ಉತ್ಪನ್ನಗಳ ಸ್ಯಾಂಪಲ್ಗಳನ್ನು ಸಂಗ್ರಹಿಸುತ್ತಿದೆ. ಹಲವಾರು ಉತ್ಪನ್ನಗಳಲ್ಲಿ ಕ್ಯಾನ್ಸರ್ಕಾರಕ ಕೀಟನಾಶಕ ಎಥೆಲೀನ್ ಆಕ್ಸೈಡ್ ಪತ್ತೆಯಾದ ಬಳಿಕ ಸಿಂಗಾಪುರ ಮತ್ತು ಹಾಂಗ್ಕಾಂಗ್ ಈ ಬ್ರ್ಯಾಂಡ್ಗಳನ್ನು ನಿಷೇಧಿಸಿವೆ.ಎಫ್ಎಸ್ಎಸ್ಎಐ ಈವರೆಗೆ 4,000 ಸ್ಯಾಂಪಲ್ಗಳನ್ನು ಸಂಗ್ರಹಿಸಿದ್ದು,ಈ ಪೈಕಿ ಸುಮಾರು 2,200 ಸ್ಯಾಂಪಲ್ಗಳನ್ನು ಪರೀಕ್ಷೆಗಳಿಗೆ ಒಳಪಡಿಸಲಾಗಿದೆ. ಎಫ್ಎಸ್ಎಸ್ಎಐ ಇನ್ನಷ್ಟು ಸ್ಯಾಂಪಲ್ಗಳ ಪರೀಕ್ಷೆಯನ್ನು ಮುಂದುವರಿಸಿರುವುದರಿಂದ ಮತ್ತಷ್ಟು ಪರವಾನಿಗೆಗಳು ರದ್ದಾಗುವ ಸಾಧ್ಯತೆಯಿದೆ.ಈವರೆಗೆ ಪರವಾನಿಗೆ ರದ್ದುಗೊಂಡಿರುವ ಮಸಾಲೆ ಉತ್ಪನ್ನಗಳಲ್ಲಿ ಜನಪ್ರಿಯ ಬ್ರ್ಯಾಂಡ್ಗಳಾದ ಎವರೆಸ್ಟ್,ಎಂಡಿಹೆಚ್,ಕ್ಯಾಚ್ ಮತ್ತು ಬಾದಶಾಹ್ ಸೇರಿವೆ.ಪರವಾನಿಗೆಗಳು ರದ್ದುಗೊಂಡಿರುವ ಹೆಚ್ಚಿನ ಕಂಪನಿಗಳು ಕೇರಳ ಮತ್ತು ತಮಿಳುನಾಡಿಗೆ ಸೇರಿವೆ. ಗುಜರಾತ್, ಮಹಾರಾಷ್ಟ್ರ ಮತ್ತು…
ವಿಜಯಪುರ: ಶಿಕ್ಷಣ ಸಾಮಾಜಿಕ ಸೇವೆ ಪರಿಸರ ರಕ್ಷಣೆ.ಗ್ರಾಮೀಣ ಜನರ ಬದುಕಿನ ಜೀವನ ಅರಿವು ಮೂಡಿಸಿ ವಿದ್ಯಾರ್ಥಿಗಳ ಸರ್ವತೋಮುಖ ಉನ್ನತಿಗೆ ರಾಷ್ಟೀಯ ಸೇವಾ ಯೋಜನೆ (ಎನ್ ಎನ್ ಎಸ್) ತುಂಬ ಸಹಕಾರಿ ಎಂದು ನ್ಯಾಯವಾದಿ ದಾನೇಶ ಅವಟಿ ನುಡಿದರು.ನಗರದ ಹೊರವಲಯ ಶ್ರೀ ರಾಮಕೃಷ್ಣ ಆಶ್ರಮದಲ್ಲಿ ವಿದ್ಯಾ ವರ್ಧಕ ಸಂಘದ ದರ್ಬಾರ ಪದವಿ ಮಹಾವಿದ್ಯಾಲಯದ ಎನ್ ಎಸ್ ಎಸ್ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಷ್ಟ್ರೀಯ ಭಾವೈಕ್ಯತೆ ಗ್ರಾಮಗಳ ಉದ್ದಾರ ಸಾಮಾಜಿಕ ಜವಾಬ್ದಾರಿ ಯುವಕರ ಸರ್ವಾಂಗೀಣ ಅಭಿವೃದ್ಧಿಗೆ ಕಾರಣವಾದ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಾರ್ಥಿಗಳು ಇಲ್ಲಿ ಕಲಿತ ಪಾಠಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುಂದೆ ಬರಬೇಕೆಂದು ಕರೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಚಾರ್ಯ ಜಿ. ಹೆಚ್.ಮಣುರ ಮಾತನಾಡಿ, ಸಮಾಜದಲ್ಲಿ ಇಂದು ಮನುಷ್ಯ ವಿದ್ಯೆ, ಉದ್ಯೋಗ, ಕುಟುಂಬ ನಿರ್ವಹಣೆ ಇದರಲ್ಲಿಯೇ ಮೈ ಮರೆತು ಸಂವಿಧಾನಬದ್ಧವಾಗಿ ತನಗೆ ಬರಬೇಕಾದ ಅನುಕೂಲತೆಗಳ ಬಗ್ಗೆ ಮಾತ್ರ ಯೋಚಿಸುತ್ತಾನೆ. ಹಕ್ಕುಗಳ ಬಗ್ಗೆ ಯೋಚಿಸುವ ನಾವು ನಮ್ಮ ಕರ್ತವ್ಯಗಳ…
ವಿಜಯಪುರ: ಜು.೧೫ ರಂದು ಪ್ರಾರಂಭವಾಗಲಿರುವ ವಿಧಾನಸಭಾ ಅಧಿವೇಶನದಲ್ಲಿ ಜಮೀನು ದಾರಿ ವಿಷಯವನ್ನು ಚರ್ಚಿಸಿ ಸೂಕ್ತ ಕಾನೂನು ತಿದ್ದುಪಡಿ ಮಾಡಿ ತಹಶೀಲ್ದಾರುಗಳಿಗೆ ದಾರಿ ಮಾಡಿಕೊಡಬೇಕೆಂದು ಒತ್ತಾಯಿಸಿ ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ. ಖಾದರ ಅವರಿಗೆ ಬರೆದ ಪತ್ರವನ್ನು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿಯವರ ಮುಖಾಂತರ ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರದಂದು ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ರಾಜ್ಯದ ರೈತರು ತಮ್ಮ ತಮ್ಮ ಜಮೀನುಗಳಿಗೆ ಹೋಗಲು ಮುಂದಿನ ರೈತರು ದಾರಿ ಕೊಡದ ಕಾರಣ ಜಮೀನು ಬಿತ್ತನೆ ಮಾಡದೆ ಜಮೀನು ಬೀಳು ಬಿದ್ದು ರೈತ ಕುಟುಂಬಗಳು ಉಪವಾಸ ಬೀಳುವ ಪರಸ್ಥಿತಿ ನಿರ್ಮಾಣವಾಗಿದೆ ಈ ವಿಷಯವಾಗಿ ಕಳೆದ ೧೦ ವರ್ಷಗಳಿಂದ ಹೋರಾಟ ಮಾಡಿ ಸರಕಾರ ಗಮನ ಸೆಳೆಯಲಾಗಿತ್ತು ನಂತರ ಸರಕಾರ ಕಾಟಾಚಾರಕ್ಕೆ ಎಂಬಂತೆ ಸುತ್ತೋಲೆ ಹೊರಡಿಸಿದೆ. ಆದರೆ ರಾಜ್ಯದ ಯಾವೊಬ್ಬ ತಹಶೀಲ್ದಾರಗಳು ದಾರಿ ಮಾಡಿಕೊಟ್ಟ ಉದಾಹರಣೆ ಇಲ್ಲ ತಹಶೀಲ್ದಾರಗಳನ್ನು…
ಸಿಂದಗಿ: ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಜು.೧೦ರಂದು ಸುಂಬಡದ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ಅವರ ೧೪೪ನೆಯ ಜಯಂತ್ಯೋತ್ಸವ ಪ್ರಯುಕ್ತ ಹಮ್ಮಿಕೊಳ್ಳುವ ಕಾರ್ಯಕ್ರಮದಲ್ಲಿ ಸಿಂದಗಿಯ ಬಿಎನ್ಬಿ ಫೌಂಡೇಶನ್ ಅಧ್ಯಕ್ಷರಾದ ಶ್ರೀಶೈಲಗೌಡ ಬಿರಾದಾರ ಅವರ ಸೇವೆಯನ್ನು ಗುರುತಿಸಿ ತವನಿಧಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕಸಾಪ ತಾಲೂಕಾಧ್ಯಕ್ಷ ನಾಗಪ್ಪ ಸಜ್ಜನ ತಿಳಿಸಿದ್ದಾರೆ.
ಸಿಂದಗಿ: ಪಟ್ಟಣದ ವಿದ್ಯಾಚೇತನ ಪ್ರಕಾಶದಿಂದ ಕೊಡಮಾಡುವ ರಾಜ್ಯ ಮಟ್ಟದ ಪ್ರಶಸ್ತಿಗೆ ಪುರಸ್ಕಾರಕ್ಕೆ ಬೆಂಗಳೂರಿನ ಡಾ.ಲಲಿತಾ ಹೊರಪ್ಯಾಟಿ ಅವರ “ಬ್ಯೂಟಿ ಬೆಳ್ಳಕ್ಕಿ” ಕಥಾ ಸಂಕಲನ, ವಿಜಯಪುರದ ಜಂಬುನಾಥ ಕಂಚ್ಯಾಣಿಯವರ “ಮತ್ತೆ ಅವತರಿಸಿದ ದೈತರು” ವೈಜ್ಞಾನಿಕ ಕಾದಂಬರಿ, ಬೆಳಗಾವಿ ಜಿಲ್ಲೆಯ ಹುನಶಿಕಟ್ಟೆಯ ಎಂ.ಎಂ.ಸಂಗಣ್ಣವರ ಅವರ “ಅಮ್ಮಬೇಕು” ಕವನ ಸಂಕಲನ ಮತ್ತು ಮಕ್ಕಳ ವಿಭಾಗದಲ್ಲಿ ಗದಗಿನ ಪ್ರಣತಿ ಗಡಾದ ಇವರ “ನಾನು ಮಳೆ ಆದರೆ” ಕವನ ಸಂಕಲನ ಆಯ್ಕೆಯಾಗಿರುತ್ತದೆ.ಜು.೨೮ರಂದು ಸಿಂದಗಿಯ ಸಾರಂಗಮಠದಲ್ಲಿ ಜರುಗುವ ಸಮಾರಂಭದಲ್ಲಿ ಆಯ್ಕೆಯಾದ ಲೇಖಕರಿಗೆ ನಗದು ಬಹುಮಾನದೊಂದಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಮಕ್ಕಳ ಹಿರಿಯ ಸಾಹಿತಿ ಹ.ಮ.ಪೂಜಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಿಂದಗಿ: ಜು.೭ರಂದು ಸಿಂದಗಿ-ದೇವರಹಿಪ್ಪರಗಿ ೧೧೦ಕೆವಿ ವಿದ್ಯುತ್ ಪ್ರಸರಣಾ ಜೋಡಿ ಮಾರ್ಗದಲ್ಲಿ ವಾಹಕಗಳ ಮತ್ತು ಗೋಪುರಗಳ ಬದಲಾವಣೆ ಕಾಮಗಾರಿ ಕೈಗೊಂಡಿರುವುದರಿಂದ ಬೆಳಿಗ್ಗೆ ೯ ರಿಂದ ಸಾಯಂಕಾಲ ೬ರ ವರೆಗೆ ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ೩೩ಕೆವಿ ಕಲಕೇರಿ ಫೀಡರ್, ೩೩ಕೆವಿ ಗೋಲಗೇರಿ ಫೀಡರ್, ಮತ್ತು ೧೧ಕೆವಿ ಬಂದಾಳ ಐಪಿ, ೧೧ಕೆವಿ ಬ್ಯಾಕೋಡ ಫೀಡರ್ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸದರಿ ಮಾರ್ಗಗಳ ಮೇಲೆ ಬರುವ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಇಂಡಿ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ನಗರದ ಪಿ.ಡಿ.ಜೆ.ಕಾಲೇಜಿನ ಸಭಾಭವನದಲ್ಲಿ, ಜು.7 ರವಿವಾರ ಬೆಳಿಗ್ಗೆ 10-00 ಗಂಟೆಗೆ -‘ಸ್ವಾತಂತ್ರ್ಯವೀರ ಸಾವರ್ಕರ್ ಮೇಲಿನ ಆರೋಪಗಳು ಸತ್ಯವೋ. ಮಿಥ್ಯವೋ.?’ ವಿಷಯದ ಮೇಲೆ ವಿಚಾರ ಸಂಕಿರಣ ಮತ್ತು ಸಾವರ್ಕರ್ ಸಮಗ್ರ ಸಂಪುಟ -1 ಮತ್ತು ಸಂಪುಟ-6 ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಜೀವನ ಚರಿತ್ರೆಯಾಧರಿತ ಕಾದಂಬರಿ ‘ಮಹಾಕಾಲ’ ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಸಾನಿಧ್ಯವನ್ನು , ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿ ವಹಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮದ ಮುಖ್ಯ ವಕ್ತಾರರಾಗಿ ಸಾಹಿತಿಗಳು, ಇತಿಹಾಸಕಾರರಾದ ಡಾ.ಜಿ.ಬಿ.ಹರೀಶ , ಮುಖ್ಯ ಅತಿಥಿಗಳಾಗಿ ಪುಸ್ತಕ ಪ್ರಕಾಶಕರಾದ ಹರ್ಷ ಸಮೃದ್ಧ ಆಗಮಿಸುತ್ತಿದ್ದಾರೆ. ವೇದಿಕೆ ಮೇಲೆ ೨ ಮಹಾಸಭೆಗಳ ಅಧ್ಯಕ್ಷರು, ೭ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು, ೪ ಶಿಕ್ಷಣ ಸಂಸ್ಥೆಗಳ ಪ್ರಾಚಾರ್ಯರು, ವಕೀಲರ ಸಂಘದ ಅಧ್ಯಕ್ಷರು ಮತ್ತು ಇನ್ನಿತರರ ಗೌರವ ಉಪಸ್ಥಿತಿ ಇರಲಿದೆ ಎಂದು ಕಾರ್ಯಕ್ರಮವನ್ನು ಆಯೋಜಿಸಿರುವ ಮಂಥನ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9341092167 , 9663872037 ಮೊಬೈಲ್ ಸಂಖ್ಯೆಗಳಿಗೆ…
ಚಿಮ್ಮಡ: ಉತ್ತಮ ಆರೋಗ್ಯ ಹೊಂದಲು ನೈರ್ಮಲ್ಯ ಕಾಪಾಡಿಕೊಳ್ಳುವುದು ಬಹು ಮುಖ್ಯವಾಗಿದೆಯಂದು ಪ್ರಭುಲಿಂಗೇಶ್ವರ ಇಂಟರನ್ಯಾಷನಲ್ ಸ್ಕೂಲ್ನ ಸಂಸ್ಥಾಪಕ ಕಾರ್ಯದರ್ಶೀ ವಿದ್ಯಾಧರ ಸವದಿ ಹೇಳಿದರು.ಗ್ರಾಮದ ಪ್ರಭುಲಿಂಗೇಶ್ವರ ಇಂಟರನ್ಯಾಷನಲ್ ಸ್ಕೂಲ್ನಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ವೈದ್ಯರ ದಿನಾಚರಣೆ ಕಾರ್ಯಕ್ರಮದ ಉದ್ಘಾಟಣೆ ನೆರವೇರಿಸಿ ಮಾತನಾಡಿದ ಅವರು ದೇಶದ ಜನರಲ್ಲಿ ಆರೋಗ್ಯದ ಅರಿವು ಮೂಡಿಸಲು ಆಚರಿಸಲಾಗುವ ಈ ದಿನಾಚರಣೆಗಳಿಂದ ಶಾಲಾ ಮಕ್ಕಳಲ್ಲಿ ಹಾಗೂ ಪಾಲಕರಲ್ಲಿ ಶುಚಿತ್ವದ ಮಹತ್ವಮನವರಿಕೆ ಮಾಡಬೇಕಾಗಿದೆ, ಪ್ರತಿಯೊಬ್ಬರು ನೈರ್ಮಲ್ಯ ಕಾಪಾಡಿಕೊಳ್ಳುವುದರಿಂದ ನೂರಾರು ಕಾಯಿಲೆಗಳಿಂದ ನಾವು ಬಚಾವಾಗಬಹುದೆಂದರು.”ಮಕ್ಕಳಲ್ಲಿ ನೈರ್ಮಲ್ಯದ ಮಹತ್ವ” ವಿಷಯ ಕುರಿತು ತಜ್ಞವೈದ್ಯರಾದ ಡಾ. ಸೋಮನಾಥ ಬಡೇಮನಿ, ಡಾ. ಸತೀಶ ಮಾಳಿ, ಡಾ. ಕುಮಾರ ಅಥಣಿ ಮಾತನಾಡಿದರು.ಈ ಶಾಲೆಯನ್ನು ನಿರ್ವಹಿಸುವ ಹಿಪೋ ಕ್ಯಾಂಪಸ್ ಉಪಾಧ್ಯಕ್ಷೆ ಶ್ರೀಮತಿ ಲಲಿತಾ ಹಾಗೂ ಪ್ರಾಚಾರ್ಯ ಫಿಲಿಪ್ ಥಾಮಸ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಇದೇ ಸಂಧರ್ಬದಲ್ಲಿ ಶಾಲಾ ವಿದ್ಯಾರ್ಥಿಗಳೀಂದ ಪ್ರಸಕ್ತ ಸಂಧರ್ಭದಲ್ಲಿ ವೈದ್ಯರ ಪಾತ್ರದ ಕುರಿತು ಅಣಕು ಪ್ರದರ್ಶನ ನಡೆಸಲಾಯಿತು.
