Subscribe to Updates
Get the latest creative news from FooBar about art, design and business.
Author: editor.udayarashmi@gmail.com
ದೇವರಹಿಪ್ಪರಗಿ: ಪಂಡರಪುರ ವಿಠ್ಠಲನ ಆಷಾಢ ಮಾಸದ ಉತ್ಸವದಲ್ಲಿ ಪಾಲ್ಗೊಳ್ಳಲು ಬಳ್ಳಾರಿ ಜಿಲ್ಲೆಯ ಏಳುಬೆಂಚಿ ಗ್ರಾಮಸ್ಥರು ೧೮ನೇ ವರ್ಷದ ಪಾದಯಾತ್ರೆಯ ಮೂಲಕ ಪ್ರಯಾಣ ಕೈಗೊಂಡರು.ಪಟ್ಟಣದಲ್ಲಿ ಶುಕ್ರವಾರ ಪ್ರವೇಶಿಸಿದ ದಿಂಡಿ ಯಾತ್ರೆಯ ಪಾದಯಾತ್ರಿಕರು ಅಲ್ಪ ವಿಶ್ರಾಂತಿಯ ನಂತರ ಪ್ರಯಾಣ ಆರಂಭಿಸಿದರು.ಈ ಸಂದರ್ಭದಲ್ಲಿ ಷಡಕ್ಷರಿ ಮಾತನಾಡಿ, ನಾವು ಕಳೆದ ೧೮ ವರ್ಷಗಳಿಂದ ಪಾದಯಾತ್ರೆ ಕೈಗೊಂಡು ಆಷಾಢ ಮಾಸದ ಉತ್ಸವದಲ್ಲಿ ಪಾಲ್ಗೊಳ್ಳುತ್ತೇವೆ. ನಾವು ಏಳುಬೆಂಚಿ ಗ್ರಾಮದಿಂದ ಕಳೆದ ಜೂನ್ ೨೭ ರಿಂದ ಯಾತ್ರೆ ಆರಂಭಿಸಿದ್ದು, ಇದೇ ತಿಂಗಳ ೧೧ ರಂದು ಪಂಡರಪುರ ತಲುಪಲಿದ್ದೇವೆ. ನಿನ್ನೆಯ ದಿನ ಕೊಂಡಗೂಳಿ ಗ್ರಾಮದ ಆಶ್ರಮದಲ್ಲಿ ತಂಗಿದ್ದು, ಬೆಳಿಗ್ಗೆ ಸ್ನಾನಾದಿಗಳನ್ನು ಮುಗಿಸಿಕೊಂಡು ಯಾತ್ರೆ ಆರಂಭಿಸಿದ್ದೇವೆ ಎಂದರು.ಪಾದಯಾತ್ರೆಯಲ್ಲಿ ಡಿ.ಪಾಂಡುರಂಗಸ್ವಾಮಿ, ಕೆ.ಜಂಬುನಾಥ, ಶರಣಪ್ಪ, ಪರಮೇಶ, ಕೆ.ಹೊನ್ನುರಸ್ವಾಮಿ, ಎರೆಸ್ವಾಮಿ, ಚಂದ್ರಶೇಖರ, ಓಬಳೇಶ, ಗಂಗಮ್ಮ, ಲಕ್ಷ್ಮೀ, ಶಾಂತಮ್ಮ, ಗಾರಲಿಂಗಪ್ಪ, ತಿಮ್ಮಪ್ಪ, ಶರಣಬಸು ಸೇರಿದಂತೆ ಮಕ್ಕಳು ಇದ್ದರು.
ಬಸವನಬಾಗೇವಾಡಿ: ತಾಲೂಕಿನ ಇಂಗಳೇಶ್ವರ ಗ್ರಾಮದ ಆರಾಧ್ಯದೈವ ಜಗದ್ಗುರು ರೇವಣಸಿದ್ದೇಶ್ವರ ದೇವಸ್ಥಾನದಲ್ಲಿ ರೇವಣಸಿದ್ದೇಶ್ವರ ದೇವರ ಬೆಳ್ಳಿಯ ಉತ್ಸವ ಮೂರ್ತಿ ಹಾಗೂ ರೇವಣಸಿದ್ದೇಶ್ವರ ಗುಡ್ಡದಲ್ಲಿರುವ ಅಕ್ಕನಾಗಮ್ಮನ ಗುಹೆಯಲ್ಲಿ ಪ್ರತಿಷ್ಠಾಪಿಸುವ ಅಕ್ಕನಾಗಮ್ಮ, ಬಸವಣ್ಣನವರ ಹಾಗೂ ಚನ್ನಬಸವಣ್ಣನವರ ಮೂರ್ತಿಗಳ ಭವ್ಯ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿವಿಧ ವಾದ್ಯಮೇಳದೊಂದಿಗೆ ಅದ್ದೂರಿಯಾಗಿ ಶುಕ್ರವಾರ ಜರುಗಿತು.ಗ್ರಾಮದ ಹಾಲಭಾವಿಯಿಂದ ಆರಂಭವಾದ ಮೆರವಣಿಗೆಯು ಗ್ರಾಮದ ಪ್ರಮುಖ ಬೀದಿಗಳಲ್ಲಿ ಜರುಗಿ ರೇವಣಸಿದ್ದೇಶ್ವರ ಗುಡ್ಡಕ್ಕೆ ಮೂರ್ತಿಗಳು ತಲುಪಿದವು. ಮೆರವಣಿಗೆ ಸಾಗುವ ಮಾರ್ಗದಲ್ಲಿ ಆಯಾ ಪ್ರದೇಶದ ಮಹಿಳೆಯರು ರಂಗೋಲಿ ಚಿತ್ತಾರ ಹಾಕುವ ಮೂಲಕ ಶರಣರ ಮೂರ್ತಿಗಳಿಗೆ ಭವ್ಯ ಸ್ವಾಗತ ಕೋರಿದರು. ಮೆರವಣಿಗೆಯಲ್ಲಿ ಮಹಿಳೆಯರ ಕುಂಭದೊಂದಿಗೆ ವಚನದ ಕಟ್ಟನ್ನು ತಲೆ ಮೇಲೆ ಹೊತ್ತ ಮಕ್ಕಳು, ವಿವಿಧ ಶಾಲಾ ವಿದ್ಯಾರ್ಥಿಗಳು ಬಸವೇಶ್ವರ, ಅಕ್ಕನಾಗಮ್ಮ, ಅಕ್ಕಮಹಾದೇವಿ, ಚನ್ನಬಸವಣ್ಣ, ಅಂಬಿಗರ ಚೌಡಯ್ಯ, ಒನಕೆ ಒಬ್ಬವ್ವ ಸೇರಿದಂತೆ ವಿವಿಧ ಶರಣರ ವೇಷಭೂಷಣ ಧರಿಸಿ ಭಾಗವಹಿಸಿದ್ದು ಮೆರವಣಿಗೆಗೆ ಮೆರಗು ತಂದರು. ಮೆರವಣಿಗೆಯಲ್ಲಿ ಡೊಳ್ಳು, ಕರಡಿಮಜಲು, ಭಜನಾ ತಂಡಗಳು ಕಂಡುಬಂದವು. ಮೆರವಣಿಗೆಯಲ್ಲಿ ಸಿದ್ದೇಶ್ವರ ಟ್ರಸ್ಟ್ ಕಮೀಟಿ ಪದಾಧಿಕಾರಿಗಳು…
ಬಸವನಬಾಗೇವಾಡಿ: ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಶುಕ್ರವಾರ ಮಣ್ಣೆತ್ತಿನ ಅಮವಾಸ್ಯೆಯನ್ನು ರೈತ ಬಾಂಧವರು, ಜನರು ಮಣ್ಣೆತ್ತುಗಳಿಗೆ ಪೂಜೆ ಸಲ್ಲಿಸುವ ಮೂಲಕ ಸಡಗರ, ಸಂಭ್ರಮದಿಂದ ಆಚರಿಸಿದರು. ಅಮವಾಸ್ಯೆ ಹಿನ್ನೆಲೆಯಲ್ಲಿ ಐತಿಹಾಸಿಕ ಮೂಲನಂದೀಶ್ವರ (ಬಸವೇಶ್ವರ) ದೇವಸ್ಥಾನಕ್ಕೆ ವಿವಿಧೆಡೆಗಳಿಂದ ಅಪಾರ ಸಂಖ್ಯೆಯ ಭಕ್ತರು ಆಗಮಿಸಿ ದೇವರ ದರ್ಶನ ಪಡೆದುಕೊಂಡರು.ಮಕ್ಕಳೊಂದಿಗೆ ಮಾರುಕಟ್ಟೆಗೆ ತೆರಳಿದ ಜನರು ವಿವಿಧೆಡೆ ಮಣ್ಣೆತ್ತುಗಳ ದರ ಚೌಕಾಸಿ ಮಾಡಿ ಮಕ್ಕಳಿಗೆ ಇಷ್ಟವಾದ ಬಣ್ಣ ಹಚ್ಚಿದ ಅಲಂಕಾರಿಕ ಮಣ್ಣೆತ್ತುಗಳನ್ನು ಖರೀದಿಸಿದರೆ ಇನ್ನೂ ಕೆಲವರು ಬಣ್ಣ ಹಚ್ಚದೇ ಇರುವ ಮಣ್ಣೆತ್ತುಗಳೊಂದಿಗೆ ಪೂಜಾ ಸಾಮಗ್ರಿಗಳನ್ನು ಖರೀದಿಸಿದರು. ಮಾರುಕಟ್ಟೆಯಲ್ಲಿ ಮಣ್ಣಿನಿಂದ ತಯಾರಿಸಿದ ಹಾಗೂ ಬಣ್ಣದಿಂದ ಸಿಂಗರಿಸಿದ ವಿವಿಧ ಬಗೆಯ ಪಿಓಪಿ ಮಣ್ಣೆತ್ತುಗಳು ಆಕಾರಕ್ಕೆ ತಕ್ಕಂತೆ ರೂ. ೫೦ ರಿಂದ ರೂ. ೨೦೦೦ ವರೆಗೆ ಮಾರಾಟವಾದವು.ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗಲ್ಲಿಗಳಲ್ಲಿ ಅಲಂಕಾರಿಕ ಮಂಟಪ ಹಾಕಿ ಮಧ್ಯಾನ್ಹ, ಸಂಜೆ ಮಣ್ಣೆತ್ತುಗಳನ್ನು ಪ್ರತಿಷ್ಠಾಪಿಸುತ್ತಿರುವುದು ಕಂಡು ಬಂದಿತು.ಮನೆಯಲ್ಲಿ ದೇವರ ಜಗುಲಿಯ ಮೇಲೆ, ಕೆಲವರು ಮನೆಯಲ್ಲಿ ಮಂಟಪದಲ್ಲಿ ಮಣ್ಣೆತ್ತುಗಳನ್ನು ಪ್ರತಿಷ್ಠಾಪಿಸಿದ ನಂತರ ಕುಟುಂಬ ಸದಸ್ಯರೆಲ್ಲರೂ ಪೂಜೆ…
ರಾಜ್ಯ ಚುನಾವಣಾ ಆಯೋಗದ ಮಾನಿಟರಿಂಗ್ ಸೆಲ್ ಹಿರಿಯ ಮಾರ್ಗದರ್ಶಕ ಬಿ.ಎಸ್.ಹಿರೇಮಠ ಅಭಿಮತ ವಿಜಯಪುರ: ಮುಕ್ತ ಹಾಗೂ ಪಾರದರ್ಶಕದಿಂದ ಕೂಡಿದ ಚುನಾವಣೆ ಅತೀ ಅವಶ್ಯಕ. ಇದರಿಂದ ಸುಭದ್ರ ಪ್ರಜಾಪ್ರಭುತ್ವ ನಿರ್ಮಾಣ ಆಗುತ್ತದೆ ಹಾಗೂ ಉತ್ತಮ ಸರ್ಕಾರ ರಚನೆಯಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲ ಮತದಾರರ ಸಾಕ್ಷರತಾ ಕ್ಲಬ್(ಇ ಎಲ್ ಸಿ) ಗಳು ಮಕ್ಕಳಲ್ಲಿ ಅರಿವನ್ನು ಮೂಡಿಸುವ ಕಾರ್ಯ ಮಾಡಬೇಕು ಎಂದು ರಾಜ್ಯ ಚುನಾವಣಾ ಆಯೋಗದ ಮಾನಿಟರಿಂಗ್ ಸೆಲ್ನ ಹಿರಿಯ ಮಾರ್ಗದರ್ಶಕರಾದ ಬಿ. ಎಸ್. ಹಿರೇಮಠ ಅವರು ಕರೆ ನೀಡಿದರು.ಗುರುವಾರ ವಿಜಯಪುರ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ೨೦೨೪- ೨೫ನೇ ಸಾಲಿನ “ಮತದಾರರ ಸಾಕ್ಷರತಾ ಕ್ಲಬ್” ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಪದವಿಪೂರ್ವ ಕಾಲೇಜುಗಳ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿಗಳಾದ ಎಂ. ಬಿ. ರಜಪೂತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡು ಮಕ್ಕಳಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಬೇಕು, ಇಂದಿನ ಮಕ್ಕಳೇ ನಾಳಿನ ನಾಗರಿಕರು. ಈಗಿನಿಂದಲೇ ಯುವಜನರಿಗೆ…
ವಿಜಯಪುರ: ಪಿಂಚಣಿದಾರರ ಅಹವಾಲು ಆಲಿಸಲು ಹಾಗೂ ಅರ್ಹರಿಗೆ ಪಿಂಚಣಿ ಮಂಜೂರು ಮಾಡುವ ಕುರಿತ ಸಾಮಾಜಿಕ ಭದ್ರತಾ ಯೋಜನೆಯಡಿಯ ಜಿಲ್ಲೆಯ ೧೪ ಗ್ರಾಮಗಳಲ್ಲಿ ಜುಲೈ ೬ ರಂದು ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.ಜುಲೈ ೬ ರ ಬೆಳಗ್ಗೆ ೧೧ ಗಂಟೆಗೆ ಹಗರಗುಂಡ ಗ್ರಾಮದ ಸಂತ ಸೇವಾಲಾಲ ದೇವಸ್ಥಾನದಲ್ಲಿ ವಿಜಯಪುರದ ಉಪ ವಿಭಾಗಾಧಿಕಾರಿಗಳು , ಅಂಬಳನೂರು ಗ್ರಾಮದ ಅಡಿವೆಪ್ಪಾ ಮುತ್ಯಾ ದೇವಸ್ಥಾನದಲ್ಲಿ ಇಂಡಿ ಉಪವಿಭಾಗಾಧಿಕಾರಿಗಳು ಪಿಂಚಣಿ ಅದಾಲತ್ ನಡೆಸಲಿದ್ದಾರೆ.ವಿಜಯಪುರ ಗ್ರೇಡ್ ೨ ತಹಶೀಲ್ದಾರ್ ಅವರು ಕುಮಟಗಿ ಗ್ರಾಮದ ಗ್ರಾಮ ಚಾವಡಿಯಲ್ಲಿ, ತಿಕೋಟಾದ ಗೇಡ್ ೨ ತಹಶೀಲ್ದಾರ್ ಅವರು ಧನರ್ಗಿ ಗ್ರಾಮದ ಶ್ರೀ ಹನುಮಾನ ದೇವಸ್ಥಾನದಲ್ಲಿ, ಬಬಲೇಶ್ವರ ಗ್ರೇಡ್ ೨ ತಹಶೀಲ್ದಾರ್ ಇವರು ಶೇಗುಣಸಿ ಗ್ರಾಮದ ಮಾರುತಿ ದೇವಸ್ಥಾನದಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.ಬಸವನ ಬಾಗೇವಾಡಿಯ ಗ್ರೇಡ್ ೨ ತಹಶೀಲ್ದಾರ್ ಇವರು ಮುತ್ತಗಿ ಗ್ರಾಮದ ಶಿವನ ಗುಡಿಯಲ್ಲಿ, ಕೋಲಾರ ತಹಶೀಲ್ದಾರ ಅವರು ತಲೇವಾಡ ಗ್ರಾಮದ ರಾಜೀವ ಗಾಂಧಿ ಸೇವಾ…
ಜನರ ಜೀವನ ಮಟ್ಟ ಸುಧಾರಿಸುವ ಅಭಿಯಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಚಾಲನೆ ವಿಜಯಪುರ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ “ಮಹತ್ವಾಕಾಂಕ್ಷಿ ತಾಲೂಕು ಕಾರ್ಯಕ್ರಮ”ದಡಿ “ಸಂಪೂರ್ಣತಾ ಅಭಿಯಾನ ಉತ್ಸವ” ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ತಾಲೂಕಾ ಮಟ್ಟದಲ್ಲಿನ ಜನರ ಜೀವನ ಮಟ್ಟ ಸುಧಾರಿಸಲು ಶ್ರಮಿಸೋಣ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕರೆ ನೀಡಿದರು.ಈ ಯೋಜನೆಯಡಿ ರಾಜ್ಯದಲ್ಲಿ ಒಟ್ಟು ೧೪ ತಾಲ್ಲೂಕುಗಳನ್ನು ಗುರುತಿಸಿದ್ದು, ಇದರಲ್ಲಿ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲ್ಲೂಕನ್ನು ಆಯ್ಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರದಂದು ತಾಳಿಕೋಟೆ ಪಟ್ಟಣದ ಸಂಗಮೇಶ್ವರ ಸಭಾಭವನದಲ್ಲಿ ನೀತಿ ಆಯೋಗ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ ವಿಜಯಪುರ ಮತ್ತು ತಾಲೂಕು ಆಡಳಿತ, ತಾಲೂಕು ಪಂಚಾಯತಿ ತಾಳಿಕೋಟಿ ಇವರ ಸಹಯೋಗದೊಂದಿಗೆ ಆಯೋಜಿಸಿದ್ದ “ಮಹತ್ವಾಕಾಂಕ್ಷಿ ತಾಲೂಕು ಕಾರ್ಯಕ್ರಮ”ದಡಿ “ಸಂಪೂರ್ಣತಾ ಅಭಿಯಾನ ಉತ್ಸವ”ಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು.ಆಯ್ಕೆಯಾದ ತಾಲ್ಲೂಕಿನಲ್ಲಿ ಜನರ ಜೀವನ ಮಟ್ಟವನ್ನು ಸುಧಾರಿಸಲು ಪ್ರಮುಖ ಸೇವಾ ವಲಯಗಳಾದ ಆರೋಗ್ಯ, ಪೌಷ್ಠಿಕತೆ, ಶಿಕ್ಷಣ, ಕುಡಿಯುವ ನೀರು ಮತ್ತು ನೈರ್ಮಲ್ಯ, ಕೃಷಿ, ಜಲ ಸಂಪನ್ಮೂಲಗಳು, ಆರ್ಥಿಕ ಸೇರ್ಪಡೆ…
ವಿಜಯಪುರ: ಜಿಲ್ಲೆಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಕುಸುಬೆ ಉತ್ಪನ್ನಕ್ಕೆ ಪ್ರತಿ ಕ್ವಿಂಟಲ್ ೫೮೦೦ ರೂ. ಬೆಂಬಲ ಬೆಲೆ ನಿಗದಿಪಡಿಸಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಜಿಲ್ಲಾ ಕನಿಷ್ಠ ಬೆಂಬಲ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ನಿರ್ಧರಿಸಿದೆ ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.ಹಿಂಗಾರು ಹಂಗಾಮಿನಲ್ಲಿ ೯೪೮ ಹೆಕ್ಟೇರ್ ಕ್ಷೇತ್ರದಲ್ಲಿ ಕುಸುಬೆ ಬಿತ್ತನೆಯಾಗಿದ್ದು, ಅಂದಾಜು ೯೪೮೦ ಕ್ವಿಂಟಲ್ ಇಳುವರಿ ಅಂದಾಜಿಸಲಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್ಗೆ ೪೭೦೦ ರಿಂದ ೪೭೫೦ ರೂ. ವರೆಗಿನ ದರದಿಂದ ಮಾರಾಟವಾಗುತ್ತಿದ್ದು, ಕೇಂದ್ರ ಸರ್ಕಾರದ ಬೆಂಬಲ ಬೆಲೆಯಡಿ ಪ್ರತಿ ಕ್ವಿಂಟಾಲ್ ಕುಸುಬೆ ಉತ್ಪನ್ನಕ್ಕೆ ೫೮೦೦ ರೂ. ಬೆಲೆ ನಿಗದಿಪಡಿಸಿ ಖರೀದಿಸಲು ನಿರ್ಧರಿಸಲಾಗಿದೆ.ಬೆಂಬಲ ಬೆಲೆಯಡಿ ಕುಸುಬೆ ಉತ್ಪನ್ನ ಖರೀದಿಗೆ ಜಿಲ್ಲೆಯ ಕೆಓಎಫ್ ಸಂಸ್ಥೆಯ ಎಣ್ಣೆ ಬೀಜ ಬೆಳಗಾರರ ಸಹಕಾರಿ ಸಂಘಗಳನ್ನು ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನಾಗಿ ಪರಿಗಣಿಸಲಾಗಿದ್ದು, ರೈತರ ನೊಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ.ಜಿಲ್ಲೆಯಲ್ಲಿ ವಿಜಯಪುರ-ಬಬಲೇಶ್ವರ ತಾಲೂಕಿನ ಬಬಲೇಶ್ವರ ಹಾಗೂ ಸವನಹಳ್ಳಿ ಎಣ್ಣೆ ಬೀಜ ಬೆಳೆಗಾರರ ಸಹಕಾರಿ…
ವಿಜಯಪುರ: ೧೧೦ ಕೆವಿ ದೇವರ ಹಿಪ್ಪರಗಿ – ಸಿಂದಗಿ ವಿದ್ಯುತ್ ಪ್ರಸರಣ ಮಾರ್ಗದಲ್ಲಿ ವಾಹಕ ಮತ್ತು ಗೋಪುರಗಳ ಬದಲಾವಣೆ ಕಾಮಗಾರಿ ಕೈಗೊಂಡಿದ್ದು, ಈ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ೩೩ ಕೆವಿ ಕಲಕೇರಿ ಫೀಡರ್, ೩೩ ಕೆವಿ ಗೋಲಗೇರಿ ಫೀಡರ್, ೧೧ ಕೆವಿ ಬಂದಳ ಐಪಿ, ೧೧ ಕೆವಿ ಬ್ಯಾಕೊಡ ಫೀಡರ್ ಮಾರ್ಗಗಳಲ್ಲಿ ಜುಲೈ ೭ ರಂದು ಬೆಳಗ್ಗೆ ೯ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಇಂಡಿ ಹೆಸ್ಕಾಂ ಕಾರ್ಯ ನಿರ್ವಾಹಕ ಅಭಿಯಂತರರ ಪ್ರಕಟಣೆ ತಿಳಿಸಿದೆ.
ವಿಜಯಪುರ: ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಾರ್ಷಿಕ-ಪೂರಕ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಂದ ೨೦೨೪-೨೫ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸಗಳಾದ ಅಟೊಮೊಬೈಲ್, ಸಿವಿಲ್, ಮೆಕ್ಯಾನಿಕಲ್, ಇಂಜಿನಿಯರಿಂಗ್ ವಿಭಾಗಗಳಲ್ಲಿ ಖಾಲಿ ಉಳಿದಿರುವ ಸೀಟುಗಳ ಪ್ರವೇಶಕ್ಕಾಗಿ ಜುಲೈ ೦೧ರವರೆಗಿದ್ದ ಕೊನೆಯ ದಿನಾಂಕವನ್ನು ಜುಲೈ ೧೫ರವರೆಗೆ ವಿಸ್ತರಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಪ್ರವೇಶ ವಿಭಾಗದ ವಿಭಾಗದ ಕಾರ್ಯನಿರ್ವಾಹಕರನ್ನು ಸಂಪರ್ಕಿಸುವಂತೆ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಳಿಕೋಟಿಯಲ್ಲಿ ಕಟ್ಟದ ಕಾಮಗಾರಿ ಪರಿಶೀಲಿಸಿದ ಡಿಸಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚನೆ ವಿಜಯಪುರ: ಪ್ರಗತಿಯಲ್ಲಿರುವ ಇಂದಿರಾ ಕ್ಯಾಂಟೀನ ಕಾಮಗಾರಿಗೆ ವೇಗ ನೀಡಿ ನಿಗದಿತ ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಶುಕ್ರವಾರ ತಾಳಿಕೋಟಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಪಟ್ಟಣದ ಹುಣಸಗಿ ರಸ್ತೆಯಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ ಕಟ್ಟಡದ ನಿರ್ಮಾಣ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು. ಈ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಕಟ್ಟಡವು ಗುಣಮಟ್ಟದಿಂದ ಕೂಡಿರುವಂತೆ ನೋಡಿಕೊಳ್ಳಬೇಕು. ಕ್ಯಾಂಟೀನ ಸುತ್ತ ಕಂಪೌಂಡ್ ನಿರ್ಮಿಸಿ, ಪ್ಲೋರಿಂಗ್ ಮಾಡಲು ತಾಳಿಕೋಟಿಯ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.ಹಳೆಯ ಪುರಸಭೆಯ ಆವರಣದಲ್ಲಿನ ಗ್ರಂಥಾಲಯ ಕಟ್ಟಡವನ್ನು ಪರಿಶೀಲನೆ ನಡೆಸಿದ ಅವರು, ಈಗಿರುವ ಗ್ರಂಥಾಲಯದ ಪಕ್ಕದಲ್ಲಿರುವ ಖಾಲಿ ಜಾಗೆಯಲ್ಲಿ ಆಧುನಿಕ ಸೌಲಭ್ಯಯುಳ್ಳ ಅತ್ಯುತ್ತಮ ಸ್ಮಾರ್ಟ ಗ್ರಂಥಾಲಯ ನಿರ್ಮಾಣಕ್ಕಾಗಿ ನೀಲ ನಕ್ಷೆ ಸಿದ್ಧಪಡಿಸಿ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ,…
