Author: editor.udayarashmi@gmail.com

ಅರೆಬರೆ ಕಾಮಗಾರಿ | ಕೊಳಚೆ ಪ್ರದೇಶವಾಗಿ ಮಾರ್ಪಟ್ಟ ಗ್ರಾಮ | ಸೊಳ್ಳೆಗಳ ಹಾವಳಿ | ಸಾಂಕ್ರಾಮಿಕ ರೋಗದ ಭೀತಿ – ಸಾಯಬಣ್ಣ ಮಾದರ, ಸಲಾದಳ್ಳಿವಿಜಯಪುರ: ಸಿಂದಗಿ ತಾಲೂಕಿನ ಹೊನ್ನಳ್ಳಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಅಡಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಒದಗಿಸುವ ಯೋಜನೆಯು ಗುತ್ತಿಗೆದಾರರ ನಿರ್ಲಕ್ಷದಿಂದ ಕಳಪೆ ಮತ್ತು ಅರೆಬರೆ ಕಾಮಗಾರಿ ನಡೆಯುತ್ತಿದ್ದರೂ ಸಂಬಂಧಿಸಿದ ಅಧಿಕಾರಿಗಳು ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯು ಅಧಿಕಾರಿಗಳ ಬೇಜವಾಬ್ದಾರಿಯಿಂದ ಸರ್ಕಾರಿ ನಿಯಮ ಪಾಲನೆಮಾಡದೆ ಕಾಮಗಾರಿ ನಡೆಯುತ್ತಿರುವುದು ಕಂಡುಬಂದಿದೆ. ಕಾಮಗಾರಿಗಾಗಿ ಎಲ್ಲೆಂದರಲ್ಲಿ ಗುಂಡಿಗಳನ್ನು ತೆಗೆದಿದ್ದು, ಅದರಲ್ಲಿ ಮಳೆ ನೀರು, ಚರಂಡಿ ನೀರು ನಿಂತು ಪ್ರತಿ ವಾರ್ಡ್ ಕೊಳಚೆ ಪ್ರದೇಶವಾಗಿ ಮಾರ್ಪಟ್ಟಿದೆ. ಕೊಳಚೆ ನೀರಿನಿಂದಾಗಿ ಸೊಳ್ಳೆಗಳು ವಿಪರೀತ ಹೆಚ್ಚಾಗಿದ್ದು ಹೊನ್ನಳ್ಳಿ ಗ್ರಾಮದಲ್ಲಿ ಡೆಂಗ್ಯೂ, ಮಲೇರಿಯಾ ವ್ಯಾಪಕವಾಗಿ ಹರಡುವ ಲಕ್ಷಣಗಳಿದ್ದು ಗ್ರಾಮಸ್ಥರಿಗೆ ಸಾಂಕ್ರಾಮಿಕ ರೋಗದ ಭೀತಿ ಆವರಿಸಿದೆ.ರಾಜ್ಯದೆಲ್ಲೆಡೆ ಹೆಮ್ಮಾರಿ ಡೆಂಗ್ಯೂ ತನ್ನ ಅಟ್ಟಹಾಸ ಮೆರೆಯುತ್ತಿರುವಾಗಲೇ ಗ್ರಾಮದ ಹಲವರು ಅನಾರೋಗ್ಯದಿಂದ ವಿಜಯಪುರದ ಹಲವು ಖಾಸಗಿ ಮತ್ತು…

Read More

ವಿಜಯಪುರ: ಭೀಮಸೇನಾ ಕರ್ನಾಟಕ ರಾಜ್ಯ ಸರಕಾರಿ ನೌಕರರ ಕ್ಷೇಮಾಭಿವೃದ್ದಿ ಸಂಘ ಜಿಲ್ಲಾ ಘಟಕ ವಿಜಯಪುರ ಇದರ ವತಿಯಿಂದ ಸನ್ ೨೦೨೩-೨೪ ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ. ೯೦ ಕ್ಕಿಂತ ಹೆಚ್ಚು ಅಂಕ ಪಡೆದ ಚಲವಾದಿ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಹಾಗೂ ೦೧-೦೭-೨೦೨೩ ರಿಂದ ೩೦-೦೬-೨೦೨೪ರ ಅವಧಿಯಲ್ಲಿ ನಿವೃತ್ತಗೊಂಡ ನೌಕರರಿಗೆ ಸನ್ಮಾನಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.ಕಾರಣ ೨೦೨೩-೨೪ ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ, ೯೦ಕ್ಕಿಂತಲೂ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿ/ವಿದ್ಯಾರ್ಥಿನಿಯರು ದಿ :೨೦-೦೭-೨೦೨೪ ರ ಒಳಗೆ ತಮ್ಮ ಹೆಸರು ನೊಂದಾಯಿಸಿಕೊಳ್ಳುವವರು ತಮ್ಮ ಸ್ವ ವಿವರಗಳೊಂದಿಗೆ ವಿಜಯಾನಂದ ಮುದ್ದೇಬಿಹಾಳ ಪ್ರಧಾನ ಕಾರ್ಯದರ್ಶಿ ಮೊಬೈಲ್ ನಂ ೯೬೬೩೩೯೯೩೪೫, ಎಚ್.ಬಿ.ಸಿಂಗೆ ವಿಭಾಗೀಯ ಸಂಯೋಜಕರು ಮೊಬೈಲ್ ನಂ. ೯೭೪೧೧೪೦೦೭, ರಾವುಸಾಹೇಬ್ ಗವಾರಿ ಜಿಲ್ಲಾಧ್ಯಕ್ಷರು ಮೊಬೈಲ್ ನಂ .೭೪೮೩೨೫೧೬೯೦, ಮುದ್ದಣ್ಣ ಭೀಮನಗರ ರಾಜ್ಯ ಸಹ ಕಾರ್ಯದರ್ಶಿ ಮೊಬೈಲ್ ನಂ. ೭೦೧೯೨೨೩೬೧೫ ಇವರಲ್ಲಿ ತಮ್ಮ ವಿವರಗಳೊಂದಿಗೆ…

Read More

ಇಂಡಿ: ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಅಭಿಯಾನ ಪ್ರಾರಂಭವಾಗಿದ್ದು, ತಾಲೂಕಿನ ಅರ್ಹ ಸಾಹಿತ್ಯಾಸಕ್ತರು ಕನ್ನಡ ಸಾಹಿತ್ಯ ಪರಿಷತ್ತಿಗೆ ಸದಸ್ಯತ್ವ ಪಡೆಯಬಹುದು. ಮೊಬೈಲ್ ಆಪ್ ಮೂಲಕ ಸದಸ್ಯತ್ವ https://kannadasahityaparishattu.in ವಿಳಾಸವನ್ನು ಗೂಗಲ್ ನಲ್ಲಿ ತಮ್ಮ ಮಾಹಿತಿ ಹಾಗೂ ಸದಸ್ಯತ್ವ ಶುಲ್ಕವನ್ನು ಆನ್‌ಲೈನ್‌ನಲ್ಲಿಯೇ ಸಂದಾಯ ಮಾಡುವ ಮೂಲಕ ಸದಸ್ಯರಾಗಬಹುದು.ಹೆಚ್ಚಿನ ಮಾಹಿತಿಗಾಗಿ ತಾಲೂಕ ಕ.ಸಾ.ಪ ಕಾರ್ಯದರ್ಶಿ ಪಾರ್ವತಿ ಸೊನ್ನದ (8217735804) (9535925130) ಖಜಾಂಚಿ ವಾಯ್.ಟಿ.ಪಾಟೀಲ (8618103949)ರವರನ್ನು ಸಂಪರ್ಕಿಸಬೇಕೆಂದು ಇಂಡಿ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರಾಘವೇಂದ್ರ ಕುಲಕರ್ಣಿ (9481084909) ತಿಳಿಸಿದ್ದಾರೆ.

Read More

ಗಬಸಾವಳಗಿ ಗ್ರಾಪಂಗೆ ಭೇಟಿ ನೀಡಿದ ಜಿಪಂ ಸಿಇಒ ರಿಷಿ ಆನಂದ್ ಸಲಹೆ ಮೋರಟಗಿ: ಗ್ರಾಮದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಜಿಪಂ ಸಿಇಒ ರಿಷಿ ಆನಂದ ಹೇಳಿದರು.ಸಮೀಪದ ಗಬಸಾವಳಗಿ ಗ್ರಾಪಂಗೆ ಗುರುವಾರ ಭೇಟಿ ನೀಡಿ ಸಭೆ ನಡೆಸಿ ಅವರು ಮಾತನಾಡಿದರು.ಆಲಮೇಲ ತಾಲೂಕಿನ ಗಬಸಾವಳಗಿ ಗ್ರಾಮಸ್ಥರು ಪಂಚಾಯಿತಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸುವಂತೆ ಜಿಪಂ ಕಚೇರಿಗೆ ಬಂದು ಮನವಿ ಸಲ್ಲಿಸಿದ್ದಾರೆ. ಗ್ರಾ.ಪಂ ಆಡಳಿತ ಮಂಡಳಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಗ್ರಾಮಸ್ಥರಿಗೆ ಸಹಕರಿಸಬೇಕು. ಗ್ರಾಮದ ಪ್ರಗತಿಗೆ ಪ್ರತಿಯೊಬ್ಬರೂ ಮುಂದಾಗಬೇಕು ಎಂದರು.ನಂತರ ಸಿಬ್ಬಂದಿ ಹಾಜರಾತಿ ಪರಿಶೀಲಿಸಿ ತೆರಿಗೆ ವಸೂಲಾತಿ ಬಗ್ಗೆ ಚರ್ಚಿಸಿದರು. ಪ್ರಸಕ್ತ ವರ್ಷ ಶೇ.೪ರಷ್ಟು ಮಾತ್ರ ತೆರಿಗೆ ಸಂಗ್ರಹಣೆಯಾಗಿದೆ. ಒಂದು ವಾರದಲ್ಲಿ ಶೇ.೧೦ರಷ್ಟು ಗುರಿ ತಲುಪಬೇಕು ಎಂದು ಪಿಡಿಒ ಜ್ಯೋತಿ ಶೇಗಾವಿ ಅವರಿಗೆ ಸೂಚಿಸಿದರು.ಸಂಗ್ರಹವಾದ ತೆರಿಗೆಯಲ್ಲಿ ಶೇ.೬ರಷ್ಟು ಹಣವನ್ನು ಗ್ರಂಥಾಲಯದಲ್ಲಿ ಪುಸ್ತಕಗಳು, ದಿನ ಪತ್ರಿಕೆಗಳನ್ನು ಖರೀದಿಸಲು ಉಪಯೋಗಿಸಬೇಕು ಎಂದು ಸೂಚಿಸಿದರು.ಆಹೇರಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಗೆ ಎಸ್ ಡಿಎಂಸಿ ರಚಿಸಿ ಕಚೇರಿಗೆ ವರದಿ ಸಲ್ಲಿಸುವಂತೆ ಅಭಿವೃದ್ಧಿ ಅಧಿಕಾರಿಗಳಿಗೆ…

Read More

ತಿಕೋಟಾ: ಪ್ರಜಾಪ್ರಭುತ್ವದಲ್ಲಿ ಸಂವಿಧಾನ ನೀಡಿರುವ ಹಕ್ಕನ್ನು ಪ್ರತಿಯೊಬ್ಬರೂ ಚಲಾಯಿಸಿ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸುವಂತೆ ಮಾಡಲು ಎಲ್ಲರೂ ಸಹಕರಿಸಬೇಕು. ಈ ಕುರಿತು ಮಕ್ಕಳಿಗೆ ಈಗಿನಿಂದಲೆ ಮಾರ್ಗದರ್ಶನ ನೀಡಬೇಕು. ಈ ನಿಟ್ಟಿನಲ್ಲಿ ಶಾಲೆಗಳಲ್ಲಿ ಕ್ಲಬ್ ಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ರಾಜ್ಯ ಚುನಾವಣಾ ಸಾಕ್ಷರತಾ ಕ್ಲಬ್ ನ ರಾಜ್ಯ ಅಧ್ಯಕ್ಷ ಬಿ.ಎಸ್. ಹಿರೇಮಠ ಹೇಳಿದರು.ತಾಲ್ಲೂಕಿನ ಸಿದ್ದಾಪುರ (ಕೆ) ಸರಕಾರಿ ಪ್ರೌಢ ಶಾಲೆಗೆ ಗುರುವಾರ ಭೇಟಿ ನೀಡಿ ಶಾಲೆಯಲ್ಲಿ ಚುನಾವಣಾ ಜಾಗೃತಿಗಾಗಿ ಕೈಗೊಂಡಿರುವ ಕ್ರಮಗಳನ್ನು ಪರೀಶಿಲಿಸಿ ಅವರು ಮಾತನಾಡಿದ ಅವರು ಹದಿನೆಂಟು ವರ್ಷ ಪೂರ್ಣಗೊಂಡ ಎಲ್ಲಾ ಅರ್ಹ ಮತದಾರರು ಕಡ್ಡಾಯವಾಗಿ ನೋಂದಣಿ ಮಾಡಬೇಕು.ಶಾಲೆಯಲ್ಲಿಯ ಕ್ಲಬ್ ನ ಅಡಿಯಲ್ಲಿ ಕೈಗೊಂಡಿರುವ ಕಾರ್ಯಗಳನ್ನು ಪ್ರಶಂಸೆ ವ್ಯಕ್ತಪಡಿಸಿದರು. ಚುನಾವಣಾ ಸಾಕ್ಷರತಾ ಕ್ಲಬ್ ಆಸಕ್ತಿದಾಯಕ ಚಟುವಟಿಕೆಗಳ ಮೂಲಕ ಶಾಲಾ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳುವ ವೇದಿಕೆಯಾಗಿದೆ. ಚುನಾವಣಾ ಹಕ್ಕುಗಳ ಬಗ್ಗೆ ಅವರಿಗೆ ಅರಿವು ಮೂಡಿಸಲು ನೋಂದಣಿ ಮತ್ತು ಮತದಾನದ ಚುನಾವಣಾ ಪ್ರಕ್ರಿಯೆಯೊಂದಿಗೆ ಅವರಿಗೆ ಪರಿಚಿತರಾಗಲು ಅನುಭವವನ್ನು ನೀಡುತ್ತದೆ ಎಂದರು.ಶಾಲೆಯಲ್ಲಿ ಇರುವ ಆಟದ ಮೈದಾನ ಹಾಗೂ…

Read More

ವಿಜಯಪುರ: ನಗರದಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದಲ್ಲಿ ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ನೂತನ ವಸತಿ ನಿಲಯ ಮಂಜೂರು ಮಾಡಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಋಷಿ ಆನಂದ್ ರವರಿಗೆ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಮನವಿ ಸಲ್ಲಿಸಲಾಯಿತುಮನವಿ ಸಲ್ಲಿಸಿ ಮಾತನಾಡಿದ ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ, ಅಕ್ಷಯಕುಮಾರ್ ಅಜಮನಿ ರಾಜ್ಯದ ಹಾಗೂ ವಿಜಯಪುರ ಜಿಲ್ಲೆಯಲ್ಲಿರುವ ಏಕೈಕ ಮಹಿಳಾ ವಿಶ್ವವಿದ್ಯಾಲಯವಾದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ರಾಜ್ಯದ ನಾನಾ ಭಾಗಗಳಿಂದ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಆಗಮಿಸುತ್ತಿದ್ದಾರೆ, ಈ ವರ್ಷವೂ ಕೂಡಾ ಹೆಚ್ಚಿನ ವಿದ್ಯಾರ್ಥಿನಿಯರು ಕೋರ್ಸ್ ಗಳಿಗೆ ಪ್ರವೇಶ ಪಡೆದುಕೊಂಡಿರುವುದರಿಂದ ವಿದ್ಯಾರ್ಥಿಗಳಿಗೆ ಕ್ಯಾಂಪಸ್‌ನಲ್ಲಿ ಈಗಿರುವ ವಸತಿ ನಿಲಯಗಳಲ್ಲಿ ಅವಕಾಶ ಸಿಗದೇ ಹೊರಗಡೆ ರೂಮ್ ಮಾಡಿಕೊಂಡು ಓದುವುದು ಕಷ್ಟದ ಸಂಗತಿ ಆಗಿದೆ. ಅದರಲ್ಲೂ ಕಾಲೇಜಿನ ಸಮಯಕ್ಕೆ ಸರಿಯಾಗಿ ಬಸ್‌ಗಳಿಲ್ಲದೆ ಕ್ಲಾಸ್‌ಗಳನ್ನು ತಪ್ಪಿಸುವ ಸಂಭವ ಉಂಟಾಗಿದೆ. ಪ್ರತಿದಿನ ಕಾಲೇಜಿನಿಂದ ರೂಮಿಗೆ ರೂಮಿನಿಂದ ಕಾಲೇಜಿಗೆ ಓಡಾಡುವದರಿಂದ ವಿದ್ಯಾಭ್ಯಾಸದಲ್ಲಿ ಕುಂಠಿತವಾಗುತ್ತಿದೆ. ಅದಕ್ಕಾಗಿ ಹೆಣ್ಣು ಮಕ್ಕಳ…

Read More

ಢವಳಗಿ: ಸಮೀಪದ ಬಸರಕೋಡ ಗ್ರಾಮದ ಶ್ರೀ ಪವಾಡ ಬಸವೇಶ್ವರ ಸಂಸ್ಥೆಯ ಅಡಿಯಲ್ಲಿ ನಡೆಯುವ ಶ್ರೀ ಮಾತೋಶ್ರೀ ಶಿವಲಿಂಗಮ್ಮ ಬ ನಾಡಗೌಡರ ಅವರ ಅನುದಾನಿತ ಶಾಲೆಗೆ ಸುಮಾರು 60 ಎಕರೆ ಭೂಮಿಯನ್ನು ದಾನ ಮಾಡಿದ ಶಿವಲಿಂಗಮ್ಮ ಬ ನಾಡಗೌಡರ ಅವರ 39 ನೇ ಪುಣ್ಯಸ್ಮರಣೆಯ ಆಚರಣೆಯನ್ನು ಗುರುವಾರದಂದು ಬಸರಕೋಡ ಗ್ರಾಮದ ಶಾಲೆಯ ಎಲ್ಲ ಮಕ್ಕಳಿಗೆ ಸಿಹಿ ಅಡುಗೆ ಮಾಡಿಸಿದ್ದರು. ಮಾ.ಶಿ.ಬ.ನಾಡಗೌಡರ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಕ್ಷ ಎಸ್ ಬಿ ನಾಡಗೌಡರ(ಧಣಿ), ಎಸ್ ಎಮ್ ಸೂಳಿಬಾಯಿ, ಬಾಬು ಸೂಳಿಬಾಯಿ(ಧಣಿ), ವರುಣ ನಾಡಗೌಡರ ಗ್ರಾಮ ಪಂಚಾಯತಿ ಸದಸ್ಯರು, ಕಾಶಿನಾಥ ಸೂಳಿಬಾಯಿ ಸೇರಿದಂತೆ ಶಾಲೆಯ ಮುಖ್ಯ ಗುರುಗಳು ಹಾಗೂ ಸಿಬ್ಬಂದಿ ಇದ್ದರು.

Read More

ಕೆಂಭಾವಿ: ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ಗಣಕ ವಿಜ್ಞಾನದ ಮುಖ್ಯಸ್ಥೆ ಪೂಜಾ ಹೊನ್ನುಟಗಿಯವರು, ಡಾ.ವಿ.ಡಿ. ಮೈತ್ರಿ ಮಾರ್ಗದರ್ಶನ ಹಾಗೂ ಡಾ.ಲಲಿತಾ ವೈ.ಎಸ್ ಸಹ ಮಾರ್ಗದರ್ಶನದಲ್ಲಿ ” ಅಂಡರ್ವಾಟರ್ ಚಿತ್ರಗಳು ಮತ್ತು ವೀಡಿಯೊಗಳನ್ನು ವರ್ಧಿಸಲು ಫ್ಯೂಷನ್ ಆಧಾರಿತ ತಂತ್ರ” ಎಂಬ ಶೀರ್ಷಿಕೆ ಕುರಿತು ಸಂಶೋಧನಾ ಮಹಾಪ್ರಬಂಧ ಮಂಡಿಸಿ, 2023-24 ನೇ ಸಾಲಿನಲ್ಲಿ, ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ “ಡಾಕ್ಟರ್ ಆಫ್ ಫಿಲಾಸಫಿ” ಪದವಿ ಪಡೆದ ಪ್ರಯುಕ್ತ ಕಾಲೇಜಿನಲ್ಲಿ ಸನ್ಮಾನಿಸಿ ಗೌರವಿಸಲಾಯಿತು.ಇದೇ ವೇಳೆ ಪ್ರಾಂಶುಪಾಲ ಡಾ.ನಾಗಪ್ಪ ಚವಲ್ಕರ್, ಡಾ.ನಂದಾ ವಾರದ, ಡಾ.ಬಸಮ್ಮ ಎಸ್, ನಸ್ರೀನ್ ತಾಜ್, ಡಾ.ಸಿದ್ದಲಿಂಗ ರಾಠೋಡ್, ಡಾ.ಯಂಕನಗೌಡ ಪಾಟೀಲ, ಡಾ.ಉಪೇಂದ್ರ ನಾಯಕ್, ಮಲ್ಲಣ್ಣ ಬಿಳೇಬಾವಿ, ಶರಣಪ್ಪ ನಡಕೂರ, ಪ್ರದೀಪ್ ಸಂಶಿಕರ್, ಸಂದೀಪ್ ಸಂಶಿಕರ್, ಪವನ ಕುಲ್ಕರ್ಣಿ, ಮಂಜುನಾಥ ಚೆಟ್ಟಿ, ಬಸವರಾಜ ಹೋಳಿಕಟ್ಟಿ, ಮರಿಸ್ವಾಮಿ, ಬಸವರಾಜ ಪಾಟೀಲ, ಶರಣಬಸವ ಅಂಗಡಿ, ಮಲ್ಲಿಕಾರ್ಜುನ ಕಲಾಲ್, ಜಟ್ಟೆಪ್ಪ ಹೊಸ್ಮನಿ, ಪಾರ್ವತಿ, ಜ್ಯೋತಿ, ಸೇರಿದಂತೆ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದು, ಶುಭ ಹಾರೈಸಿ ಹರ್ಷ ವ್ಯಕ್ತಪಡಿಸಿದರು.

Read More

ಅಕ್ಕಮಹಾದೇವಿ ಮಹಿಳಾ ವಿವಿ ಸಮಾಜ ಕಾರ್ಯ ಪ್ರಶಿಕ್ಷಣಾರ್ಥಿಗಳಿಂದ ಕ್ಷೇತ್ರ ಕಾರ್ಯ ಅಧ್ಯಯನ ತಿಕೋಟಾ: ತಾಲೂಕಿನ ಟಕ್ಕಳಕಿ ಗ್ರಾಮ ಪಂಚಾಯತಿಗೆ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಮಾಜ ಕಾರ್ಯ ವಿಭಾಗದ ಪ್ರಶಿಕ್ಷಣಾರ್ಥಿಗಳು ಭೇಟಿ ನೀಡಿ, ಕ್ಷೇತ್ರ ಕಾರ್ಯ ಅಧ್ಯಯನ ಕೈಗೊಂಡರು.ಈ ಸಂದರ್ಭದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಕೂಸಿನ ಮನೆ, ಅಮೃತ ಸರೋವರ, ಶಾಲಾ ಅಭಿವೃದ್ಧಿ ಕಾಮಗಾರಿಗಳು, ಘನ ತ್ಯಾಜ್ಯ ವಿಲೇವಾರಿ ಘಟಕ ಸೇರಿ ವಿವಿಧ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು.ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅಕ್ಕಮಹಾದೇವಿ ಪವಾರ ಅವರು ಪ್ರಶಿಕ್ಷಣಾರ್ಥಿಗಳಿಗೆ ಗ್ರಾಮ ಪಂಚಾಯತಿ ವತಿಯಿಂದ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳ, ಕಾಮಗಾರಿಗಳ, ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.ನಂತರ ಮಾತನಾಡಿದ ಅವರು “ಗ್ರಾಮದಲ್ಲಿರುವ ಸಮಸ್ಯೆಗಳನ್ನು ಅಳಿಸಿ, ಸುಸ್ಥಿರ ಗ್ರಾಮ ನಿರ್ಮಾಣ ನಮ್ಮ ಗುರಿಯಾಗಿದೆ. ಎಲ್ಲ ಚುನಾಯಿತ ಸದಸ್ಯರ ಸಹಕಾರದಿಂದ ಗ್ರಾಮದಲ್ಲಿ ಎಲ್ಲ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲಾಗುತ್ತಿದೆ. ಮುಖ್ಯವಾಗಿ ಕುಡಿಯುವ ನೀರು, ನೈರ್ಮಲ್ಯ ಹಾಗೂ ಉದ್ಯೋಗ ಖಾತರಿಯಲ್ಲಿ ಯಾವದೇ ರೀತಿಯ ತೊಂದರೆಯಾಗದಂತೆ ನಾವು ಕಾರ್ಯ ನಿರ್ವಹಿಸುತ್ತಿದ್ದೇವೆ. ಯಾವದೇ ರೀತಿಯ…

Read More

ವಿಜಯಪುರ: ೨೦೨೪-೨೫ನೆ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಪ್ರವೇಶಾತಿ ಪಡೆದುಕೊಳ್ಳಲು ಎಚ್‌ಎಂಐಎಸ್ ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಪ.ಜಾ/ಪ.ಪಂ ವಿದ್ಯಾರ್ಥಿಗಳು ಇಲಾಖೆಯ ವೆಬ್‌ಸೈಟ್‌ ಮೂಲಕ ಹಾಗೂಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿ ಹಾಗೂ ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿಗೂ (ಮ್ಯಾನ್ಯುಯಲ್) ಖುದ್ದಾಗಿ ಸಲ್ಲಿಸಬಹುದು ಎಂದು ವಿಜಯಪುರ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Read More