Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಮುದ್ದೇಬಿಹಾಳ: ಕೃಷ್ಣಾ ಮೇಲ್ದಂಡೆ ಯೋಜನೆಯಡಿ ತಾಲೂಕಿನ ಭೂ ಸ್ವಾಧೀನ ಪ್ರಕರಣಗಳ(ಎಲ್ಎಸಿ)ನ್ನು ಇತ್ಯರ್ಥ ಪಡಿಸಲು ವಿಶೇಷ ಸರ್ಕಾರಿ ವಕೀಲರಾಗಿ ಪಟ್ಟಣದ ಹಿರಿಯ ನ್ಯಾಯವಾದಿ ಎಂ.ಎಸ್.ನಾವದಗಿ ಅವರನ್ನು ಆಯ್ಕೆ ಮಾಡಿ ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಅಧೀನ ಕಾರ್ಯದರ್ಶಿ ಆದಿನಾರಾಯಣ ಆದೇಶಿಸಿದ್ದಾರೆ.
ವಿಜಯಪುರ: ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೇಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ, ಬೆಂಗಳೂರು ಜಿಲ್ಲಾ ಸಮಿತಿ ವಿಜಯಪುರ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ವಿಜಯಪುರ ಇವರ ಮುಖಾಂತರ ರಾಜ್ಯದ ಮುಖ್ಯಮಂತ್ರಿಗಳಿಗೆ ಪ್ರತಿಭಟನೆ ಮಾಡುವುದರ ಮೂಲಕ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ ರವರು ಮಾತನಾಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ , ಅಲ್ಪಸಂಖ್ಯಾತ, ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಘದಲ್ಲಿ ಕಳೆದ ೧೫ ರಿಂದ ೨೦ ವರ್ಷಗಳಿಂದ ಕಡಿಮೆ ಸಂಬಳಕ್ಕೆ ವಸತಿ ನಿಲಯ-ಶಾಲಾ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅಡುಗೆ ಸಹಾಯಕರು, ಸ್ವಚ್ಛತಾಗಾರರು , ಕಾವಲುಗಾರರು, ಡಿ ಗ್ರೂಪ್ ಅಟೆಂಡರ್, ಕಂಪ್ಯೂಟರ್ ಆಪರೇಟರ್ ಗಳು ಯಾವುದೇ ಭದ್ರತೆ ಇಲ್ಲದೆ ಕೆಲಸ ಮಾಡುತ್ತಾ ನಿರಂತರವಾಗಿ ವಾರ್ಡನ್ ರವರು, ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಹೊರಗುತ್ತಿಗೆ ಸಿಬ್ಬಂದಿಗಳನ್ನು ಶೋಷಣೆ…
ಮೊಳಗಿದ ರಾಜು ಅಮರ ರಹೇ ಹೈ ಘೋಷಣೆ | ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ | ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ತಿಕೋಟಾ: ಭಾರತೀಯ ಸೇನೆಯ ರಾಷ್ಟ್ರೀಯ ರೈಪಲ್ಸನ 51 ಯುನಿಟ್ ಮಹರ ರೆಜಿಮೆಂಟ್ 13 ಜಮ್ಮು ಕಾಶ್ಮಿರದಲ್ಲಿ ನಿಧನ ಹೊಂದಿದ ವೀರಯೋಧ ರಾಜು ಗಿರಮಲ್ಲ ಕರಜಗಿ ಅವರ ಪಾರ್ಥಿವ ಶರೀರ ಹುಟ್ಟೂರು ತಿಕೋಟಾಕ್ಕೆ ಬುಧವಾರ ಬೆಳಗ್ಗೆ ಆಗಮಿಸುತ್ತಿದ್ದಂತೆ ರಾಜು ಅಮರ ರಹೇ ಹೈ, ಬೊಲೊ ಭಾರತ ಮಾತಾಕಿ ಜೈ ಘೋಷಣೆಗಳು ಮೊಳಗಿದವು.ಪಾರ್ಥಿವ ಶರೀರ ವಾಡೆ ಮೈದಾನಕ್ಕೆ ಬರುತ್ತಿದ್ದಂತೆ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತು ಸಹೋದರ, ಮಾವ ಹಾಗೂ ಸಂಬಂಧಿಕರು ವೀರಯೋಧನ ಒಡನಾಡ ನೆನಪಿಸಿಕೊಂಡು ಕಣ್ಣಿರು ಹಾಕಿದರು.ಪಟ್ಟಣದ ವಾಡೆ ಮೈದಾನದಲ್ಲಿ ಮದ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿತ್ತು. ಸಾರ್ವಜನಿಕರು, ಶಾಲಾ ಮಕ್ಕಳು, ಸುತ್ತಲಿನ ಹಳ್ಳಿಯ ಜನರು ಅಂತಿಮ ದರ್ಶನ ಪಡೆದರು. ವಿಧಾನ ಪರಿಷತ್ ಮಾಜಿ ಸದಸ್ಯ ಜಿ.ಕೆ.ಪಾಟೀಲ, ಬಿಜೆಪಿ ಮುಖಂಡ ವಿಜುಗೌಡ ಪಾಟೀಲ, ಚನ್ನಮಲ್ಲಿಕಾರ್ಜುನ…
– ಬಸವರಾಜ ನಂದಿಹಾಳಬಸವನಬಾಗೇವಾಡಿ: ಉತ್ತರ ಕರ್ನಾಟಕದಲ್ಲಿ ರೈತ ಬಾಂಧವರು ಕೃಷಿಗೆ ಹಾಗೂ ಜಾನುವಾರುಗಳಿಗೆ ಸಂಬಂಧಿಸಿದಂತೆ ಹಲವು ಹಬ್ಬಗಳನ್ನು ಆಚರಿಸುತ್ತಾ ಬಂದಿದ್ದಾರೆ. ಅವುಗಳಲ್ಲಿ ಕಾರಹುಣ್ಣಿಮೆ ನಂತರ ಬರುವ ಮಣ್ಣೆತ್ತಿನ ಅಮವಾಸ್ಯೆಯು ಪ್ರಮುಖವಾಗಿದೆ. ಈ ವರ್ಷದ ಮಣ್ಣೆತ್ತಿನ ಅಮವಾಸ್ಯೆಯು ಜುಲೈ ೫ರಂದು ಆಚರಿಸಲ್ಪಡುತ್ತಿದೆ.ಎತ್ತು ಮತ್ತು ಮಣ್ಣನ್ನು ಪೂಜೆಸಿದರೆ ಮಳೆ-ಬೆಳೆಗಳು ಚೆನ್ನಾಗಿ ಬರುತ್ತವೆ ಎಂಬ ನಂಬಿಕೆ ರೈತರ ಬಾಂಧವರಲ್ಲಿ ಹಿಂದಿನಿಂದಲೂ ಇದೆ. ಇಂದಿನ ಆಧುನಿಕತೆ ಸ್ಪರ್ಶದಿಂದಾಗಿ ಮಣ್ಣೆತ್ತಿನ ಬದಲಾಗಿ ಮಾರುಕಟ್ಟೆಯಲ್ಲಿ ಹೆಚ್ಚಾಗಿ ಪ್ಯಾರಿಸ್ ಆಫ್ ಪ್ಲಾಸ್ಟರ್ನಿಂದ ತಯಾರಿಸಿದ ಎತ್ತುಗಳ ಮಾರಾಟದ ಭರಾಟೆ ಕಂಡುಬರುತ್ತಿದೆ. ಮುಂಬರುವ ದಿನಗಳಲ್ಲಿ ಮಣ್ಣೆತ್ತಿನ ಅಮವಾಸ್ಯೆ ದಿನ ಮಣ್ಣೆತ್ತು ಕಾಣಸಿಗುವದಿಲ್ಲವೇನೋ ಎಂಬ ಆತಂಕ ವ್ಯಕ್ತವಾಗುತ್ತಿದೆ.ಈ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಮಣ್ಣೆತ್ತು ಜೊತೆಗೆ ಮಾರುಕಟ್ಟೆಯಲ್ಲಿ ಕೊಲ್ಹಾಪುರದಿಂದ ತರಿಸಿರುವ ಪ್ಯಾರಿಸ್ ಆಪ್ ಪ್ಲಾಸ್ಟರ್ನಿಂದ ತಯಾರಿಸಿದ ಬಣ್ಣ ಬಣ್ಣದ ಎತ್ತುಗಳು ಬುಧವಾರ ಮಾರಾಟ ಮಾಡುವದು ಕಂಡು ಬಂದಿತ್ತು. ಇದರ ಜೊತೆಗೆ ಕಟ್ಟಿಗೆಯಿಂದ ತಯಾರಿಸಿದ ಅಲಂಕಾರಿಕ ಚಕ್ಕಡಿ ಸಹ ಮಾರಾಟ ಆಗುತ್ತಿರುವದು ಕಂಡುಬಂದಿತ್ತು.ಮಣ್ಣೆತ್ತಿನ ಅಮವಾಸ್ಯೆ ದಿನದಂದು ಪೂಜೆಗೆ ಅಗತ್ಯವಿರುವ ಮಣ್ಣೆತ್ತುಗಳನ್ನು…
ಬಸವನಬಾಗೇವಾಡಿ: ೧೨ ನೇ ಶತಮಾನದಲ್ಲಿ ಬಸವಾದಿ ಶರಣರು ರಚಿಸಿರುವ ವಚನ ಸಾಹಿತ್ಯ ನಮ್ಮ ಬದುಕಿಗೆ ದಾರಿದೀಪವಾಗಿದೆ. ಇಂತಹ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ ಮೂಲಕ ಕನ್ನಡ ಸಾಹಿತ್ಯದ ಶ್ರೀಮಂತಿಕೆಗೆ ವಚನ ಸಾಹಿತ್ಯ ಮುಕುಟಪ್ರಾಯವಾಗುವಂತೆ ಮಾಡಿದ ಕೀರ್ತಿ ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ಅವರಿಗೆ ಸಲ್ಲುತ್ತದೆ ಎಂದು ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ವ್ಹಿ.ಸೂರ್ಯವಂಶಿ ಹೇಳಿದರು.ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ಫ.ಗು.ಹಳಕಟ್ಟಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು, ಡಾ.ಫ.ಗು.ಹಳಕಟ್ಟಿ ಅವರು ಮನೆ ಮನೆಗೆ ಹಾಗೂ ಮಠ-ಮಂದಿರಗಳಿಗೆ ಭೇಟಿ ನೀಡಿ ಅಲ್ಲಿರುವ ಬಸವಾದಿ ಶರಣರ ವಚನಗಳ ಕಟ್ಟನ್ನು ಪಡೆದು ಸಂಪಾದಿಸಿ ಪರಿಷ್ಕರಣೆ ಮಾಡುವ ಮೂಲಕ ವಚನ ಸಾಹಿತ್ಯದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡರು. ನಾಡಿನಲ್ಲಿ ವಚನ ಸಾಹಿತ್ಯದ ಪ್ರಚಾರದ ಜೊತೆಗೆ ಅವುಗಳ ಮುದ್ರಣ ಕಾರ್ಯಕ್ಕೆ ಮುಂದಾಗಿ ಮುದ್ರಣವಾಗುವಂತೆ ಮಾಡಿದರು.…
ವಿಜಯಪುರ: ವಚನ ಸಾಹಿತ್ಯ ಹಾಗು ಶರಣ ಸಂಸ್ಕೃತಿ ಇಂದಿನ ಜೀವನಕ್ಕೆ ತೀರಾ ಅತ್ಯಗತ್ಯ. ಇಂದಿನ ಯಾಂತ್ರಿಕ ಯುಗದಲ್ಲಿಯೂ ಕನ್ನಡ ಸಾಹಿತ್ಯವನ್ನು ಜನಸಾಮಾನ್ಯರಿಗೆ ಮುಟ್ಟಿಸುವ ಕೆಲಸ ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತಿದೆ.ಗಡಿನಾಡ ಭಾಗದಲ್ಲಿ ಕನ್ನಡ ಸಾಹಿತ್ಯವನ್ನು ಉಳಿಸುವ ಮತ್ತು ಬೆಳೆಸುವ ಕಾರ್ಯ ಗಡಿನಾಡ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಡುತ್ತಿದೆ ಎಂದು ಗಡಿನಾಡು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸುಭಾಷ ಛಾಯಾಗೋಳ ಅಭಿಪ್ರಾಯ ವ್ಯಕ್ತಪಡಿಸಿದರುಜಿಲ್ಲಾ, ತಾಲೂಕ, ನಗರ ಘಟಕ ಕನ್ನಡ ಸಾಹಿತ್ಯ ಪರಿಷತ್ತು ವಿಜಯಪುರ ಸಂಯುಕ್ತ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿದ ದಿ: ಶಿವಮೂತೆ೯ಪ್ಪ ಅ ಪಾಟೀಲ ದತ್ತಿ. ದತ್ತಿ ದಾನಿಗಳಾದ ಡಾ: ಶಿವಲಿಂಗಪ್ಪ ಶಿವಮೂತೆ೯ಪ್ಪ ಪಾಟೀಲ ವಿಜಯಪುರವಿಷಯ: ಕನ್ನಡ ವಚನ ಸಾಹಿತ್ಯ ಕುರಿತು ಚಿಂತನ ಗೋಷ್ಠಿ.ದಿ:ದುಂಡಪ್ಪ ವೀರಭದ್ರಪ್ಪ ಸಕ್ರಿ ದತ್ತಿ: ದತ್ತಿದಾನಿಗಳಾದ ವೀರಭದ್ರಪ್ಪ ದುಂಡಪ್ಪ ಸಕ್ರಿ ವಿಷಯ. ಶರಣ ಸಂಸ್ಕೃತಿ. ದತ್ತಿನಿಧಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ, ಸದಾ ಕನ್ನಡ ಪರ ಕೆಲಸ ಮಾಡಿದ ಗಡಿ ಅಭಿವೃದ್ಧಿ ಪ್ರಾಧಿಕಾರ ಹಾಗು ಕನ್ನಡ…
ಇಂಡಿ: ಕಳೆದ ಹಂಗಾಮಿನಲ್ಲಿ ತೊಗರಿ ಬೆಳೆಗೆ ಇನ್ಸುರೆನ್ಸ ಕಟ್ಟಿ ನಾಲ್ಕು ಲಕ್ಷ ೫೦ ಸಾವಿರ ರೂ ಪಡೆದಿದ್ದಾನೆ ಎಂದು ಕೃಷಿ ಸಹಾಯಕ ಅಧಿಕಾರಿ ಮಹಾದೇವಪ್ಪ ಏವೂರ ತಿಳಿಸಿದ್ದಾರೆ.ಪಟ್ಟಣದ ಕೃಷಿ ಅಧಿಕಾರಿಗಳ ಕಚೇರಿಯಲ್ಲಿ ತಾಲೂಕಿನ ಸಾತಲಗಾಂವ ಪಿಎ ರೈತ ಸಾಹೇಬರಾವ ರಾವುತರಾಯ ಪಾಟೀಲ ಇವರಿಗೆ ಸಂಬಂದಿತ ಇನ್ಸುರೆನ್ಸ ಪತ್ರ ನೀಡಿ ಮಾತನಾಡುತ್ತಿದ್ದರು.ರೈತ ಸಾಹೇಬಗೌಡ ಪಾಟೀಲರು ತಮ್ಮ ಹೊಲದಲ್ಲಿ ೪೨ ಎಕರೆ ತೊಗರಿ ಹಾಕಿದ್ದರು. ಮತ್ತು ಪ್ರತಿ ಎಕರೆಗೆ ರೂ ೩೦೦ ಇನ್ಸುರೆನ್ಸ ಕಟ್ಟಿದ್ದರು. ಒಟ್ಟು ೧೨೬೦೦ ರೂ ಇನ್ಸುರೆನ್ಸ ಹಣ ಕಟ್ಟಿದ್ದರು.ಅವರಿಗೆ ಡಿಶೆಂಬರ್ ತಿಂಗಳಲ್ಲಿ ೨ ಲಕ್ಷ ೮೫ ಸಾವಿರ ರೂ ಹಣ ಜೂನ ತಿಂಗಳಲ್ಲಿ ಮತ್ತು ೧ ಲಕ್ಷ ೬೫ ಸಾವಿರ ಹಣ ಒಟ್ಟು ಎರಡು ಕಂತುಗಳಲ್ಲಿ ಬಂದಿರುತ್ತದೆ ಎಂದರು.ರೈತ ಸಾಹೇಬಗೌಡ ಪಾಟೀಲರು ಮಾತನಾಡಿ ನಾನು ೨೦೨೦ ರಿಂದ ಪ್ರತಿ ವರ್ಷ ಇನ್ಸುರೆನ್ಸ ಕಟ್ಟುತ್ತ ಬಂದಿದ್ದೇನೆ. ಒಮ್ಮೆಮ್ಮೆ ಮಳೆ ಬಾರದಿದ್ದರೆ ಅಥವಾ ಬೆಳೆಗೆ ರೋಗ ಭಾದೆ ಯಾದರೆ ಎಂದು ಇನ್ಸುರೆನ್ಸ ಕಟ್ಟುತ್ತ…
ದೇವರಹಿಪ್ಪರಗಿ: ವೃತ್ತಿಯಲ್ಲಿ ನಿವೃತ್ತಿಯವರೆಗೆ ತೃಪ್ತಿಯಿಂದ ಕಾರ್ಯ ನಿರ್ವಹಿಸಬೇಕು. ಆಗ ಮಾತ್ರ ನಿವೃತ್ತಿ ಜೀವನ ನೆಮ್ಮದಿಯಿಂದ ಇರಲು ಸಾಧ್ಯ ಎಂದು ಪಟ್ಟಣ ಪಂಚಾಯಿತಿ ನಿವೃತ್ತ ಮುಖ್ಯಾಧಿಕಾರಿ ಎಲ್.ಡಿ.ಮುಲ್ಲಾ ಹೇಳಿದರು.ಪಟ್ಟಣದ ಪಂಚಾಯಿತಿ ಆವರಣದಲ್ಲಿ ಸೋಮವಾರ ಸೇವಾನಿವೃತ್ತಿ ಹೊಂದಿದ ನಿಮಿತ್ಯ ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಸಿಬ್ಬಂದಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು, ಪಟ್ಟಣಗಳಲ್ಲಿ ಸರ್ಕಾರಿ ಸೇವೆ ಸಲ್ಲಿಸುವುದು ಅಷ್ಟು ಸುಲಭದ ಕೆಲಸವಲ್ಲ. ಅದರಲ್ಲಿ ಮುಖ್ಯಾಧಿಕಾರಿಯಾಗಿ ವೃತ್ತಿ ಮಾಡಿದವರು ಎಲ್ಲ ವೃತ್ತಿಯೂ ಮಾಡಬಲ್ಲರು. ದಿನನಿತ್ಯ ಕಷ್ಟನಷ್ಟ ಸಾಮಾನ್ಯ. ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿ ಕಾರ್ಯ ನಿರ್ವಹಿಸಬೇಕು. ಜೊತೆಗೆ ತಾಳ್ಮೆ ಬೆಳೆಸಿಕೊಳ್ಳಬೇಕು. ಸುಮಾರು ೯ ವರ್ಷಗಳ ಕಾಲ ಪಟ್ಟಣ ಪಂಚಾಯಿತಿಯಲ್ಲಿ ಮುಖ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ತೃಪ್ತಿ ನನಗಿದೆ. ಸೇವೆಯಲ್ಲಿ ಏಳು ಬೀಳುಗಳನ್ನು ಸಹಿಸಿಕೊಂಡು ಸಾರ್ಥಕ ಸೇವೆ ನೀಡಿದ್ದೇನೆ ಎಂದರು.ಆಡಳಿತಾಧಿಕಾರಿ ಪ್ರಕಾಶ ಸಿಂದಗಿ, ಪಟ್ಟಣ ಪಂಚಾಯಿತಿ ಸದಸ್ಯರಾದ ಶಾಂತಯ್ಯ ಜಡಿಮಠ, ಕಾಸುಗೌಡ ಬಿರಾದಾರ(ಜಲಕತ್ತಿ), ರಮೇಶ ಮಸಬಿನಾಳ, ಸಿಂಧೂರ ಡಾಲೇರ, ಸುಮಂಗಲಾ ಸೇಬೆನವರ, ಬಷೀರ್ ಅಹ್ಮದ್ ಬೇಪಾರಿ, ಕಾಶೀನಾಥ ಬಜಂತ್ರಿ, ಕಾಸು…
ದೇವರಹಿಪ್ಪರಗಿ: ತಾಲ್ಲೂಕು ಆಡಳಿತದಿಂದ ವಚನ ಪಿತಾಮಹ ಫ.ಗು.ಹಳಕಟ್ಟಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಹಾಗೂ ವಚನ ಸಂರಕ್ಷಣಾ ದಿನ ಆಚರಿಸಲಾಯಿತು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಮಂಗಳವಾರ ಫ.ಗು.ಹಳಕಟ್ಟಿ ಅವರ ಜನ್ಮದಿನವನ್ನು ವಚನ ಸಾಹಿತ್ಯ ಸಂರಕ್ಷಣಾ ದಿನವನ್ನಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಬಸವ ಶರಣ ಸಂಗಮ ಸೇವಾ ಸಮೀತಿ ಅಧ್ಯಕ್ಷ ಸಂಗಣ್ಣ ತಡವಲ್ ಮಾತನಾಡಿ, ಬಸವಾದಿ ಶರಣರ ವಚನಗಳ ಸಂರಕ್ಷಣೆ ಮಾಡಿ, ಬೇರೆ ಬೇರೆ ಭಾಷೆಗಳಿಗೆ ಅನುವಾದಿಸಿ ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಫ.ಗು.ಹಳಕಟ್ಟಿಯವರ ಕಾರ್ಯ ತುಂಬಾ ಶ್ಲಾಘನೀಯ. ವಚನಗಳ ಮುದ್ರಣಕ್ಕಾಗಿ ತಮ್ಮ ಸ್ವಂತ ಮನೆಯನ್ನೇ ಮಾರಿದ ಹಳಕಟ್ಟಿಯವರ ಸ್ಮರಣೆಗಾಗಿ ವಚನ ಸಂರಕ್ಷಣಾ ದಿನ ಆಚರಿಸುತ್ತಿರುವುದು ಅಭಿನಂದನೀಯ ಸಂಗತಿ ಎಂದರು.ಕಸಾಪ ತಾಲ್ಲೂಕು ಅಧ್ಯಕ್ಷ ಜಿ.ಪಿ.ಬಿರಾದಾರ ಮಾತನಾಡಿ, ಪತ್ರಿಕಾ ಸಂಪಾದಕರಾಗಿದ್ದು, ೧೯೨೬ ರಲ್ಲಿ ಬಳ್ಳಾರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಹಳಕಟ್ಟಿಯವರ ಬಾಲ್ಯಜೀವನ, ಅವರ ವಚನ ಸಂಗ್ರಹಕ್ಕೆ ಪ್ರೇರಣೆ, ಪಟ್ಟ ಕಷ್ಟ ಹಾಗೂ ಅಂದಿನ ರಾಜ್ಯಪಾಲರಾಗಿದ್ದ ಜಯಚಾಮ ರಾಜೇಂದ್ರ ಒಡೆಯರ್ ಅವರು ಹಳಕಟ್ಟಿ ಅವರ ಭೇಟಿಗೆ…
ವಿಜಯಪುರ: ವಿಜಯಪುರದ ಕೃಷಿ ಮಹಾವಿದ್ಯಾಲಯದಲ್ಲಿ ಅಗ್ರಿ ಮೈಕ್ರೋಬಯಲಾಜಿ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರು(ಒಂದು ಹುದ್ದೆಗೆ) ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಜುಲೈ ೧೮ರಂದು ಮಧ್ಯಾಹ್ನ ೩.೦೦ ಘಂಟೆಗೆ ಸಂದರ್ಶನ ನಡೆಯಲಿದೆ.ಅರ್ಹ ಶೈಕ್ಷಣಿಕ ಅರ್ಹತೆಯುಳ್ಳ ಅಭ್ಯರ್ಥಿಗಳು ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲೆಗಳನ್ನು ಹಾಗೂ ಮೂಲ ದಾಖಲೆಗಳ ಎರಡು ಝರಾಕ್ಸ್ ಪ್ರತಿ ತಮ್ಮ ಭಾವ ಚಿತ್ರದೊಂದಿಗೆ ಅರ್ಜಿ ನಮೂನೆಗೆ ಲಗತ್ತಿಸಿ ಸಂದರ್ಶನದ ಸಮಯದಲ್ಲಿ ತರಲು ತಿಳಿಸಲಾಗಿದೆ. ಯಾವುದೇ ಸಂದರ್ಭದಲ್ಲಿ ಅರ್ಜಿಯನ್ನು ಮುಂಗಡವಾಗಿ ಕಳುಹಿಸಬಾರದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೩೫೨-೨೯೫೪೧೧ ಮೋ:೯೦೦೮೮೦೬೭೩೯ನ್ನು ಸಂಪರ್ಕಿಸಬಹುದು ಎಂದು ಕೃಷಿ ಮಹಾವಿದ್ಯಾಲಯದ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
