Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಎಲ್ಲಾ ತಾಲೂಕು ಮಟ್ಟದಲ್ಲಿ ವಿಕಲಚೇತನರ ಕುಂದುಕೊರತೆ ಸಭೆ ನಡೆಸಿ, ಅವರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಸೂಚನೆ ನೀಡಿದರು.ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ವಿಕಲಚೇತನರ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ವಿಕಲಚೇತನರ ಸಮಸ್ಯೆಗಳನ್ನು ಸ್ಥಳೀಯವಾಗಿ ಸ್ಪಂದಿಸಿ, ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ತಾಲೂಕು ಮಟ್ಟದಲ್ಲಿ ವಿಕಲಚೇತನರ ಕುಂದುಕೊರತೆ ಸಭೆಗಳನ್ನು ನಿಯಮಿತವಾಗಿ ಆಯೋಜಿಸಿ ಅವರ ಸಮಸ್ಯೆಗೆ ಪರಿಹಾರ ಒದಗಿಸಲು ಪ್ರಯತ್ನಿಸಬೇಕು. ವಿಕಲಚೇತನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರಿ ಕಚೇರಿ, ಆಸ್ಪತ್ರೆ, ಬ್ಯಾಂಕ್ ಎಟಿಎಂಗಳಲ್ಲಿ ರ‍್ಯಾಂಪ್ ಮತ್ತು ರೇಲಿಂಗ್ಸ್ ಅಳವಡಿಸುವಂತೆ ಸೂಚಿಸಲಾಯಿತು.ಜಿಲ್ಲೆಯಲ್ಲಿ ಬೆನ್ನುಹುರಿ ಅಪಘಾತಕ್ಕೆ ಒಳಗಾದ ವಿಕಲಚೇತನರಿಗೆ ಮೆಡಿಕಲ್ ಕಿಟ್ ವಿತರಿಸಲು ಅವಕಾಶವಿದ್ದು, ಅವಶ್ಯಕತೆ ಇರುವ ಹಾಗೂ ಯಾರು ಕೈಬಿಟ್ಟು ಹೋಗದಂತೆ ವೈದ್ಯಕೀಯ ಕಿಟ್‌ಗಳನ್ನು ಒದಗಿಸಬೇಕು. ಬೆನ್ನುಹುರಿ ಅಪಘಾತಕ್ಕೊಳಗಾದವರಿಗೆ ಮೆಡಿಕಲ್ ಕಿಟ್ ವಿತರಿಸಿರುವ ಮಾಹಿತಿ ವಿವರವನ್ನು ಐದು ದಿನಗಳೊಳಗಾಗಿ ನೀಡಬೇಕು ಎಂದು ಅವರು ಸೂಚಿಸಿದರು.ಸರ್ಕಾರ ವಿಕಲಚೇತನರ ಏಳಿಗೆಗಾಗಿ ಹಲವು ಯೋಜನೆಗಳನ್ನು ಜಾರಿಗೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಶ್ರೀ ಪುಟ್ಟರಾಜ ಗವಾಯಿ ಟ್ರಾಮಾಕೇರ್ ನಲ್ಲಿ ತಜ್ಞ ವೈದ್ಯರು, ಹಿರಿಯ ವೈದ್ಯಾಧಿಕಾರಿ, ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಹಾಗೂ ಅರೇ ವೈದ್ಯಕೀಯ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇರೆಗೆ ಷರತ್ತು ಹಾಗೂ ನಿಬಂಧನೆಗೊಳಪಟ್ಟು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ.ಜನರಲ್ ಸರ್ಜರಿ ತಜ್ಞ, ಮೂಳೆ ಮತ್ತು ಕೀಲು ಶಸ್ತ್ರಚಿಕಿತ್ಸಕ ತಜ್ಞ, ಅನಸ್ತೇಸಿಯಾ ತಜ್ಞ, ರೇಡಿಯಾಲಜಿ ತಜ್ಞ, ನ್ಯೂರೊ ಸರ್ಜರಿ ತಜ್ಞ ಹಾಗೂ ಹಿರಿಯ ವೈದ್ಯಾಧಿಕಾರಿ ಹುದ್ದೆಯ ಸಂದರ್ಶನಕ್ಕೆ ಡಿಸೆಂಬರ್ ೧೦ರ ಬೆಳಿಗ್ಗೆ ೯ ರಿಂದ ಸಂಜೆ ೪:೩೦ರವರೆಗೆ ಕಚೇರಿ ಸಮಯದಲ್ಲಿ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.ಅದರಂತೆ,ನರ್ಸಿಂಗ್ ಆಫೀಸರ್ ಹಾಗೂ ಫಿಜಿಯೋಥೆರಪಿಸ್ಟ್ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಪ್ರಕಟಣೆ ಹೊರಡಿಸಿದ ದಿನಾಂಕದಿಂದ ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾಸ್ಪತ್ರೆಯ ಕಚೇರಿಯಿಂದ ಪಡೆದುಕೊಂಡು ಅಗತ್ಯ ದಾಖಲೆ ಸಹಿತ ಡಿಸೆಂಬರ್ ೧೦ರ ಸಂಜೆ ೪:೩೦ರೊಳಗಾಗಿ ಸಲ್ಲಿಸಬಹುದಾಗಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:…

Read More

ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನ್ನಡ ಭಾಷೆ ಪಸರಿಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸೋಣ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ.ಪುರಷೋತ್ತಮ ಬಿಳಿಮಲೆ ಹೇಳಿದರು.ಗುರುವಾರ ನಗರದ ಸಾಯಿ ಪಾರ್ಕನಲ್ಲಿರುವ ಚಾಣಕ್ಯ ಪದವಿ ಮಹಾವಿದ್ಯಾಲಯದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕಮಲಾದೇವಿ ಪಾಟೀಲ ಮೆಮೋರಿಯಲ್ ಎಜ್ಯುಕೇಷನಲ್ ಅಸೋಸಿಯೇಷನ್ ಹಾಗೂ ಚಾಣಕ್ಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ನಾಡು-ನುಡಿ ಚಿಂತನ ಒಂದು ದಿನ ರಾಜ್ಯಮಟ್ಟದ ವಿಚಾರ ಕಮ್ಮಟ ಉದ್ಘಾಟಿಸಿ ಮಾತನಾಡಿದ ಅವರು, ಜಾಗತಿಕ ಮಟ್ಟದಲ್ಲಿ ರಾಷ್ಟ್ರೀಕರಣ, ವ್ಯಾಪಾರೀಕಣದ ಹಿನ್ನೆಲೆಯಲ್ಲಿ ಇಂದು ನಾವು ತಂತ್ರಜ್ಞಾನವನ್ನು ಹೆಚ್ಚು ಬಳಕೆ ಮಾಡುತ್ತಿದ್ದೇವೆ. ಡಾ.ಬಿ.ಆರ್ ಅಂಬೇಡ್ಕರ ಅವರು ದೇಶದ ಎಲ್ಲ ಬಾಷೆ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ಶಿಕ್ಷಣಕ್ಕೆ ಅನುಗುಣವಾಗಿ ಸಂವಿಧಾನ ರಚಿಸಿದ್ದಾರೆ.ಈ ದೇಶದ ಸಾಹಿತ್ಯ, ಸಂಸ್ಕೃತಿ, ಕಲೆ ಹಾಗೂ ಸಂಗೀತಕ್ಕೆ ಪ್ರೋತ್ಸಾಹ ದೊರೆತು ಮನೆ- ಮನಗಳಲ್ಲಿ ಗೋಚರಿಸುತ್ತಿದೆ ಎಂದು ಅವರು ಹೇಳಿದರು.ಕಲ್ಯಾಣದ ಚಾಲುಕ್ಯರು ಆಳುವ ದಿನಗಳಂದು ಇಂದಿನ ವಿಜಯಪುರ ವಿದ್ಯೆಗೆ…

Read More

ನಾವು – ನಮ್ಮ ಮಕ್ಕಳು(ಮಕ್ಕಳ ಬೆಳವಣಿಗೆಯಲ್ಲಿ ಪಾಲಕರ ಪಾತ್ರ ಕುರಿತ ಲೇಖನ ಮಾಲಿಕೆ) ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಇದೇನಿದು! ಮಕ್ಕಳಿಗೆ ಪಾಲಕರು ಹೆದರಬೇಕೇ ಎಂದು ಸೋಜಿಗ ಪಡದಿರಿ. ಸಾಮಾನ್ಯವಾಗಿ ಮಕ್ಕಳು ತಮ್ಮ ಪಾಲಕರಿಗೆ ಹೆದರಬೇಕು ಎಂಬುದು ಲೋಕಾರೂಢಿ, ಆದರೆ ಪಾಲಕರೇ ಮಕ್ಕಳಿಗೆ ಹೆದರಬೇಕು ಎಂಬುದು ಆಧುನಿಕ ಪರಿಭಾಷೆ.ಖಂಡಿತವಾಗಿಯೂ ಪಾಲಕರು ತಮ್ಮ ಮಕ್ಕಳಿಗೆ ಹೆದರಬೇಕು. ಯಾವ ಕಾರಣಕ್ಕಾಗಿ ಎಂಬುದನ್ನು ಹೇಳಿದರೆ ನೀವು ಕೂಡ ಈ ಮಾತುಗಳನ್ನು ಒಪ್ಪಿಕೊಳ್ಳುತ್ತೀರಿ.ಕೆಲವೇ ವರ್ಷಗಳ ಹಿಂದೆ ನಮ್ಮ ತಂದೆ, ಚಿಕ್ಕಪ್ಪ, ದೊಡ್ಡಪ್ಪ ಮಾವ ಹೀಗೆ ದ್ವಿಚಕ್ರ ವಾಹನಗಳನ್ನು ಹೊಂದಿರುವವರು ತಲೆಗೆ ಹೆಲ್ಮೆಟ್ ಧರಿಸಿ ಸಂಚಾರಿ ನಿಯಮಗಳನ್ನು ಪಾಲಿಸುತ್ತಾ ವಾಹನಗಳನ್ನು ಚಲಾಯಿಸುತ್ತಿದ್ದರು ಎಂಬುದು ನಮಗೆ ನೆನಪಿದೆ. ಅಷ್ಟೇನೂ ವಾಹನ ದಟ್ಟಣೆ ಇಲ್ಲದ ಕಾಲದಲ್ಲಿಯೂ ಕೂಡ ಅವರು ಎಲ್ಲ ನಿಯಮಗಳನ್ನು ಪಾಲಿಸುತ್ತಿದ್ದರು. ಆದರೆ ಇಂದಿನ ವಿಪರೀತ ಸಂಚಾರ ದಟ್ಟಣೆಯ ಸಮಯದಲ್ಲಿಯೂ ಕೂಡ ನಾವು ಸಂಚಾರಿ ನಿಯಮಗಳನ್ನು ಅತ್ಯಂತ ಸುಲಭವಾಗಿ ಉಲ್ಲಂಘಿಸಿ ಮುನ್ನಡೆಯುತ್ತೇವೆ. ಸಂಚಾರ ನಿಯಮಗಳನ್ನು…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದಲ್ಲಿ ಭಾರತೀಯ ಜನತಾ ಪಾರ್ಟಿ ಬಸವನ ಬಾಗೇವಾಡಿ ಮಂಡಲ ವತಿಯಿಂದ ಈರುಳ್ಳಿ, ಹತ್ತಿ ಮತ್ತು ಮೆಕ್ಕೆಜೋಳ ಬೆಳೆಗಳಿಗೆ ಬೆಂಬಲ ಬೆಲೆ ಹಾಗೂ ಖರೀದಿ ಕೇಂದ್ರ ಪ್ರಾರಂಭ ಮಾಡಲು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ನೇತೃತ್ವದಲ್ಲಿ ಸರ್ಕಾರಕ್ಕೆ ತಹಶೀಲ್ದಾರ ಮುಖಾಂತರ ಮನವಿಯನ್ನು ಶುಕ್ರವಾರ ಸಲ್ಲಿಸಿದರು.ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿ ಬಸವನಬಾಗೇವಾಡಿ ಮಂಡಲದಿಂದ ಪಟ್ಟಣದ ದ್ಯಾವಮ್ಮದೇವಿ ದೇವಸ್ಥಾನದಿಂದ ತಹಶೀಲ್ದಾರ ಕಚೇರಿಯವರೆಗೆ ಪಾದಯಾತ್ರೆಯ ಮೂಲಕ ತೆರಳಿ ಮನವಿ ಸಲ್ಲಿಸಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಮಾತನಾಡುತ್ತಾ ರಾಜ್ಯ ಕಾಂಗ್ರೆಸ್ ಸರ್ಕಾರ‌ ಅನ್ನದಾತರ ಹಿತವನ್ನು ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಹರಿಹಾಯ್ದರು.ರೈತರು ಶ್ರಮವಹಿಸಿ ಬೆಳೆದ ಬೆಳೆಗಳಿಗೆ ಬೆಲೆ ಸಿಗದೆ ಪರದಾಡುವಂತಾಗಿದೆ, ರೈತಾಪಿ ವರ್ಗದ ಅಳಲು ಆಲಿಸಬೇಕಾದ ಸರ್ಕಾರ ಕುಂಭಕರ್ಣ ನಿದ್ರೆಗೆ ಜಾರಿದೆ, ಮೆಕ್ಕೆಜೋಳ, ಹತ್ತಿ, ಈರುಳ್ಳಿ ಸಹಿತ ಇನ್ನಿತರ ಬೆಳೆಗಳನ್ನು ಬೆಳೆದಿರುವ ರೈತರಿಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಗದ ಕಾರಣ ರೈತರ ಸ್ಥಿತಿ ಹೇಳತೀರದಾಗಿದೆ ಕೂಡಲೆ ರಾಜ್ಯ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ಶ್ರೀ ವಿಶ್ವ ಭಾರತಿ ವಿದ್ಯಾವರ್ಧಕ ಸಂಸ್ಥೆಯ ಶ್ರೀ ಎಸ್.ಕೆ. ಬೆಳ್ಳುಬ್ಬಿ ಪದವಿ ಪೂರ್ವ ಕಾಲೇಜು ಹಾಗೂ ಶ್ರೀ ಯಲ್ಲಮ್ಮ ದೇವಿ ಸಿಬಿಎಸ್ಇ ಶಾಲೆಯ ಸಹಯೋಗದಲ್ಲಿ ವಾರ್ಷಿಕ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು.ಕ್ರೀಡಾಕೂಟದ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಜ್ಯೋತಿ ಬೆಳಗಿಸುವ ಮೂಲಕ ಕ್ರೀಡಾ ಕೂಟಕ್ಕೆ ಚಾಲನೆ ನೀಡಿದರು.ಕ್ರೀಡಾ ಧ್ವಜಾರೋಹಣವನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷ ಚನ್ನಮಲ್ಲಪ್ಪ ಗಿಡ್ಡಪ್ಪಗೋಳ ನೇರವೇರಿಸಿದರು.ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಮಾಜಿ ಸಚಿವರು, ಇಂದಿನ ಮಕ್ಕಳನ್ನು ದೈಹಿಕವಾಗಿ ಮತ್ತು ಬೌದ್ಧಿಕವಾಗಿ ಬೆಳೆಸುವಲ್ಲಿ ಪಾಲಕರ ಮತ್ತು ಶಾಲೆಗಳ ಪಾತ್ರ ಬಹಳ ದೊಡ್ಡದು ಏಕೆಂದರೆ ಉತ್ತಮ ರಾಷ್ಟ್ರಕಟ್ಟಲು ಉತ್ತಮ ಆರೋಗ್ಯವಂತ ಪ್ರಜೆಗಳು ಅಷ್ಟೇ ಮುಖ್ಯ ಎಂದು ಆರೋಗ್ಯದ ಗುಟ್ಟು ಕ್ರೀಡೆಯಲ್ಲಿ ಅಡಗಿದೆ ಆದ್ದರಿಂದ ಕ್ರೀಡೆಯಲ್ಲಿ ಎಲ್ಲಾ ಮಕ್ಕಳು ಭಾಗವಹಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಲಹೆ ನೀಡಿದರು.ಸಾನಿಧ್ಯ ವಹಿಸಿದ ಶ್ರೀ ದಿಗಂಬರೇಶ್ವರ ಮಠದ ಶ್ರೀ ಕಲ್ಲಿನಾಥ ದೇವರು ಮಾತನಾಡಿ ಮಕ್ಕಳನ್ನು ಅಂಕಗಳಲ್ಲಿ ಅಳೆಯದೆ ಅವರು ಸಹಪಠ್ಯ ಚಟುವಟಿಕೆಗಳಾದ ಸಂಗೀತ,ಕಲೆ,…

Read More

ಸರ್ಕಾರಿ ವೈದ್ಯಕೀಯ ಕಾಲೇಜ್ ಹೋರಾಟ ಸಮಿತಿಯ ಮುಖಂಡ ಅನೀಲ್ ಹೊಸಮನಿ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸರ್ಕಾರಿ ವೈದ್ಯಕೀಯ ಕಾಲೇಜ್ ಹೋರಾಟ ಮತ್ತಷ್ಟು ಚುರುಕು ನೀಡಲಾಗುತ್ತಿದ್ದು, ಡಿ.೧ ರಂದು ೨೫ ಸಾವಿರಕ್ಕೂ ಹೆಚ್ಚು ಜನರ ಸಮ್ಮುಖದಲ್ಲಿ ಬೃಹತ್ ಹೋರಾಟಕ್ಕೆ ಕರೆ ನೀಡಲಾಗಿದೆ ಎಂದು ಸರ್ಕಾರಿ ವೈದ್ಯಕೀಯ ಕಾಲೇಜ್ ಹೋರಾಟ ಸಮಿತಿಯ ಅನೀಲ್ ಹೊಸಮನಿ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್ ಸ್ಥಾಪನೆಯಾದರೆ ಬಡವರಿಗೆ ಆರೋಗ್ಯ ಹಾಗೂ ಬಡ ಮಕ್ಕಳಿಗೆ ವೈದ್ಯಕೀಯ ಶಿಕ್ಷಣ ಎರಡೂ ಗಗನಕುಸುಮ, ಹೀಗಾಗಿ ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜ್‌ಗಾಗಿ ನಮ್ಮ ಹೋರಾಟ ನಡೆದಿದೆ, ಇದು ಜನರ ಹೋರಾಟ, ಜನಪರವಾದ ಹೋರಾಟ, ಕಳೆದ ಸೆಪ್ಟೆಂಬರ್ ೧೮ ರಿಂದ ಹೋರಾಟ ಆರಂಭವಾಗಿದೆ, ಕಳೆದ ೭೨ ದಿನಗಳಿಂದ ನಿರಂತರವಾಗಿ ಹೋರಾಟ ನಡೆಯುತ್ತಿದೆ, ಎಲ್ಲ ಸಂಘಟನೆಗಳು ಹೋರಾಟಕ್ಕೆ ಬೆಂಬಲ ಸೂಚಿಸಿವೆ ಎಂದರು.ಡಿ.೧ ರ ಹೋರಾಟ ಬೃಹತ್ ಪ್ರಮಾಣದಲ್ಲಿ ನಡೆಯುತ್ತಿದ್ದು, ವಿವಿಧ ಕಾರ್ಮಿಕ, ಮಹಿಳಾ, ವಿದ್ಯಾರ್ಥಿಗಳು, ದಲಿತ, ಕನ್ನಡ ಪರ…

Read More

ಸಂಗಮೇಶ್ವರ ಪಿಯು ಕಾಲೇಜಿನಲ್ಲಿ ಅಂತರ ಪೀಳಿಗೆ ಜಾಗೃತಿ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ಚಡಚಣ: “ಮನೆಯಲ್ಲಿ ಇರುವ ಹಿರಿಯರನ್ನು ಪ್ರೀತಿಸಿ, ಅವರ ಅಗತ್ಯಗಳಿಗೆ ಸ್ಪಂದಿಸುವುದು ಕುಟುಂಬದ ಕಿರಿಯರ ಮತ್ತು ಹಿರಿಯರ ಇಬ್ಬರ ಜವಾಬ್ದಾರಿ. ಯುವ ಪೀಳಿಗೆ ಹಿರಿಯರ ಅನುಭವಗಳನ್ನು ಗೌರವಿಸಿ, ಅವರ ಜೀವನ ಮೌಲ್ಯಗಳಿಂದ ಕಲಿಯಬೇಕು,” ಎಂದು ವಿಜಯಪುರ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಉಪನ್ಯಾಸಕ ಹಾಗೂ ಅಂತರ ಪೀಳಿಗೆ ಜಾಗೃತಿ ಕಾರ್ಯಕ್ರಮದ ನೋಡಲ್ ಅಧಿಕಾರಿ ಪ್ರೊ. ಆರ್.ಸಿ. ಹಿರೇಮಠ ಹೇಳಿದರು.ಚಡಚಣದ ಸಂಗಮೇಶ್ವರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ, ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕರ್ನಾಟಕ ಸರ್ಕಾರಿ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಹಿರಿಯ ನಾಗರಿಕರ ಸ್ವಯಂಸೇವಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಅಂತರ ಪೀಳಿಗೆ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.“ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವದಿಂದ ಇಂದಿನ ಯುವಕರು ಹಿರಿಯರ ಬಗ್ಗೆ ನಿರ್ಲಕ್ಷ್ಯ ಮತ್ತು ತಾತ್ಸಾರಭಾವವನ್ನು ಹೊಂದುತ್ತಿರುವುದು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕದಂಬ ಸೈನ್ಯ ವಿಜಯಪುರ ಘಟಕದಿಂದ ದ್ವಿಭಾಷಾ ನೀತಿ ಕಡ್ಡಾಯವಾಗಿ ಜಾರಿಗೆ ಹಾಗೂ ಕನ್ನಡ ಕನ್ನಡಿಗರನ್ನು ನಿಂದಿಸುವವರ, ದೌರ್ಜನ್ಯ ಪುಂಡಾಟಿಕೆ ನಡೆಸುವವರ ವಿರುದ್ಧ ನಾಡದ್ರೋಹ ಕಾಯ್ದೆ ಜಾರಿಗೆ, ಕನ್ನಡಿಗರ‌ ಉದ್ಯೋಗ ದಾತೆ ೨೦೧೭ ಡಾ ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ ಮೂಲಕ ಶುಕ್ರವಾರ ಅಪರ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ ನೇತ್ರತ್ವದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರುನಂತರ ಕದಂಬ ಸೈನ್ಯ ಸಂಘಟನೆಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಗೆ ತಂದಿದೆ. ಆದರೆ ಕನ್ನಡ ಕಡ್ಡಾಯ ಇಲ್ಲ, ಕನ್ನಡ ಮತ್ತು ಇಂಗ್ಲಿಷ್ ಜೊತೆಗೆ ವಿದ್ಯಾರ್ಥಿಗಳು ತಮ್ಮ ತಮ್ಮಮಾತೃ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಆಯ್ಕೆ ಮಾಡಿಕೊಳ್ಳಲು ನೂತನ ನೀತಿಯಲ್ಲಿ ಅವಕಾಶ ಕಲ್ಪಿಸಲಾಗಿದೆ, ಇದರಿಂದ ಹಾಲಿ ಇರುವ ತ್ರಿಭಾಷಾ ಸೂತ್ರಕ್ಕೆ ರಾಜ್ಯ ಶಿಕ್ಷಣ ನೀತಿ ಅವಕಾಶ ಕಲ್ಪಿಸಿರುವದನ್ನು ರದ್ದುಮಾಡಿ ತಮಿಳುನಾಡಿನಲ್ಲಿ ದ್ವಿಭಾಷಾ ನೀತಿ ಜಾರಿಗೆ ತಂದಿರುವಂತೆ ನಮ್ಮ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಪ್ರತಿಭಾವಂತ ಯುವತಿಯೊಬ್ಬಳು ಜರ್ಮನಿಯ ಆಸ್ಪತ್ರೆಯೊಂದರಲ್ಲಿ ಹಿರಿಯ ಶುಶ್ರೂಷಕಿಯಾಗಿ ಸೇವೆ ಸಲ್ಲಿಸಲು ಆಯ್ಕೆಯಾಗಿ ಗ್ರಾಮೀಣ ಪ್ರತಿಭೆಗಳಲ್ಲಿ ಹೊಸ ಭರವಸೆ ಮೂಡಿಸಿದ್ದಾರೆ.ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಮಣೂರು ಗ್ರಾಮದ ಪ್ರೀತಿ ಸುಭಾಸ್ ಆನೆಗುಂದಿ ಈ ಸಾಧನೆ ಮೆರೆದ ಯುವತಿಯಾಗಿದ್ದಾರೆ. ಉತ್ತಮ ಸೇವೆಯಿಂದಲೇ ಗುರುತಿಸಿಕೊಂಡ ಪ್ರೀತಿ, ಬೆಂಗಳೂರಿನಿಂದ ಗುರುವಾರವೇ ಜರ್ಮನಿಗೆ ತೆರಳುತ್ತಿದ್ದು, ಕೆಲವೇ ದಿನಗಳಲ್ಲಿ ಅಲ್ಲಿನ ನಾರ್ವೆ ರಾಜ್ಯದ ಹಾಕ್ಸ್ಸ್ಟರ್‌ನ ಅಸ್ಕಲೆಪಿಯೋಸ್ ಎಂಬ ಆಸ್ಪತ್ರೆಯಲ್ಲಿ ಹಿರಿಯ ಶುಶ್ರೂಷಕಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ.ಗ್ರಾಮೀಣ ಪ್ರತಿಭೆಯಾದ ಪ್ರೀತಿ ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಬೇಕೆಂದು ಕನಸು ಕಂಡಿದ್ದರು. ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಇವರ ತಂದೆ ಸುಭಾಸ್ ಹಾಗೂ ಕುಟುಂಬದವರು ಪ್ರೀತಿ ಅವರ ಅಧ್ಯಯನಕ್ಕೆ ಸಾಕಷ್ಟು ಪ್ರೋತ್ಸಾಹ ನೀಡುತ್ತಿದ್ದರು.ಸದ್ಯ ವಿಜಯಪುರ ಜಿಲ್ಲೆಯಿಂದ ಆಯ್ಕೆಯಾದ ಇಬ್ಬರ ಪೈಕಿ ಪ್ರೀತಿ ಕೂಡ ಒಬ್ಬರಾಗಿದ್ದಾರೆ ಎಂಬುದು ಮಣೂರು ಗ್ರಾಮಸ್ಥರಿಗೆ ಅಭಿಮಾನದ ಸಂಗತಿಯಾಗಿದೆ. ಭಾಷೆ ಮತ್ತಿತರ ಸಮಸ್ಯೆಗಳಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಹಿಂಜರಿಯುವ ಗ್ರಾಮೀಣ ಯುವ ಜನತೆಗೆ ವಿದೇಶದಲ್ಲಿ ಸೇವೆ ಸಲ್ಲಿಸಲು ಹೊರಟಿರುವ…

Read More