Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಕರ್ನಾಟಕ ಕಾಟ್ ಸೀಡ್ಸ್ ಹತ್ತಿ ಮೀಲ್ ಕಾರ್ಖಾನೆ ಉದ್ಘಾಟಿಸಿದ ಇಂಡಿ ಶಾಸಕ ಯಶವಂತ್ರಾಯಗೌಡ ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ಆಲಮೇಲ: ರೈತರ ಹಿತ ಕಾಪಾಡುವಲ್ಲಿ ಎಲ್ಲ ಪಕ್ಷದ ಸರ್ಕಾರಗಳು ವಿಫಲವಾಗಿವೆ. ರೈತರಿಗೆ ಒಳಿತು ಮಾಡುವದಾಗಿ ಹೆಳುತ್ತಾರೆ ವಿನಹ ರೈತರ ಬೆಳೆಗೆ ಯೋಗ್ಯ ಬೆಲೆ ನಿಗದಿಗೊಳಿಸುವ ಕಾನೂನು ಜಾರಿಗೊಳಿಸಲು ಯಾವುದೆ ಸರ್ಕಾರ ಆಸಕ್ತಿ ತೋರದಿರುವದು ವಿಪರ್ಯಾಸ ಎಂದು ಇಂಡಿ ಶಾಸಕ ಯಶವಂತ್ರಾಯಗೌಡ ಪಾಟೀಲ ಹೇಳಿದರು. ಆಲಮೇಲ ಸಮೀಪದ ಇಂಡಿ ತಾಲೂಕಿನ ತೆಗ್ಗೆಹಳ್ಳಿ ಕ್ರಾಸ್ ಹತ್ತಿರ ನಿರ್ಮಾಣ ಮಾಡಿರುವ ಕರ್ನಾಟಕ ಕಾಟ್ ಸೀಡ್ಸ್ ಹತ್ತಿ ಮೀಲ್ ಕಾರ್ಖಾನೆ ಉದ್ಘಾಟಿಸಿ ಮಾತನಾಡುತ್ತ ಹೆಳಿದರು. ಆಲಮೇಲ ಇಂಡಿ ತಾಲೂಕಿನ ಮದ್ಯದಲ್ಲಿ ನಿರ್ಮಾಣವಾಗಿರುವ ಈ ಹತ್ತಿ ಮಿಲ್ ಪ್ರಾರಂಭವಾಗಿದ್ದರಿಂದ ನಾಲ್ಕರಿಂದ ಐದು ತಾಲೂಕಿನ ರೈತರಿಗೆ ಅನಕೂಲವಾಗಲಿದೆ ಕಾರ್ಖಾನೆ ಮಾಲಿಕರು ರೈತರಿಗೆ ಯಾವುದೆ ಅನ್ಯಾಯಮಾಡದೆ ಯೋಗ್ಯ ಬೇಲೆ ನೀಡಿ ರೈತರಿಗೆ ಪ್ರೋತ್ಸಹ ನೀಡಿದರೆ ರೈತರು ಅಂತಹ ಕಾರ್ಖಾನೆ ಗಳಿಗೆ ಸಹಕಾರ ನೀಡುತ್ತಾರೆ ಎಂದೆರು. ನಿಜವಾದ ರೈತರ ಹಿತ ಕಾಪಾಡುವ ಉದ್ದಿಮೆದಾರರು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಸರಕಾರಿ ನೌಕರರ ಸಹಕಾರಿ ಬ್ಯಾಂಕಿನಲ್ಲಿ 77ನೇ ಗಣರಾಜ್ಯೋತ್ಸವದ ರಾಷ್ಟ್ರ ದ್ವಜಾರೋಹಣವನ್ನು ಬ್ಯಾಂಕಿನ ಅಧ್ಯಕ್ಷರಾದ ಅರ್ಜುನ ಲಮಾಣಿ ಇವರು ನೆರವೇರಿಸಿದರು.ರಾಷ್ಟ್ರದ್ವಜಾರೋಹಣ ನೆರವೇರಿಸಿ ಮಾತನಾಡಿದ ಅಧ್ಯಕ್ಷ ಅರ್ಜುನ ಲಮಾಣಿ ಇಡೀ ಜಗತ್ತಿಗೆ ಮಾದರಿಯಾದ ನಮ್ಮ ಸಂವಿಧಾನ ನಮ್ಮೆಲ್ಲರಿಗೂ ಹೆಮ್ಮೆ. ಇಂತಹ ಪವಿತ್ರ ಸಂವಿಧಾನ ಸಂರಕ್ಷಿಸೋಣ. ಪ್ರತಿಯೊಬ್ಬರೂ ನಿಯಮಗಳನ್ನು ಪಾಲಿಸುತ್ತ ಸಂವಿಧಾನ ಪಾಲಿಸೋಣ ಎಂದರು.ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಬ್ಯಾಂಕಿನ ನಿರ್ದೇಶಕರಾದ ಪ್ರವಾಸೋಧ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಅರವಿಂದ ಭೋ ಹೂಗಾರ, ತಹಸೀಲ್ದಾರ್ ಪ್ರಶಾಂತ ಚನಗೊಂಡ, ಎಸ್ ಎಸ್ ಜುಬೇರ, ಬ್ಯಾಂಕಿನ ಪ್ರಧಾನ ವ್ಯವಸ್ಧಾಪಕರಾದ ಎಮ್ ಕೆ ಜೋಶಿ, ವ್ಯವಸ್ಧಾಪಕರಾದ ಸಿ.ಎಸ್.ಹಿರೇಮಠ ಹಾಗೂ ಎಲ್ಲ ಸಿಬ್ಬಂದಿಗಳು ಹಾಜರಿದ್ದರು.
ಸದುಪಯೋಗಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಫೆಬ್ರವರಿ ೨ರಂದು ಕೌಶಲ್ಯದಿಂದ ಉದ್ಯೋಗದ ಕಡೆಗೆ ಯುವ ಸಮೃದ್ಧಿ ಸಮ್ಮೇಳನದ ಬೃಹತ್ ಉದ್ಯೋಗ ಮೇಳವು ಅಂದು ರಂದು ಬೆಳಿಗ್ಗೆ ೯.೩೦ ರಿಂದ ಸಂಜೆ ೫ರವರೆಗೆ ದರಬಾರ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿದೆ.ಈ ಮೇಳದಲ್ಲಿ ಉತ್ತರ ಕರ್ನಾಟಕ ಭಾಗದ ಯುವನಿಧಿ ಫಲಾನುಭವಿಗಳು ಹಾಗೂ ಎಸ್.ಎಸ್.ಎಲ್.ಸಿ. ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ, ಪದವಿ, ಸ್ನಾತ್ತಕೊತ್ತರ ಪದವಿ ಹಾಗೂ ಇಂಜಿನೀಯರಿಂಗ್ ಪದವಿಯಲ್ಲಿ ಉತ್ತೀರ್ಣರಾದವರು ತಮ್ಮ ಹೆಸರನ್ನು ನೋಂದಣಿ ಮಾಡಿಕೊಂಡು, ಉದ್ಯೋಗಮೇಳದಲ್ಲಿ ಭಾಗವಹಿಸಿ, ತಮ್ಮ ಆಸಕ್ತಿ ಹಾಗೂ ಅರ್ಹತೆಗೆ ಅನುಗುಣವಾಗಿ ಉದ್ಯೋಗ ಪಡೆದುಕೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಮಾಹಿತಿ ನೀಡಿದರು.ಅವರು ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ನಂತರ ಜಿಲ್ಲಾ…
ಗಾಂಧಿ ಭವನದಲ್ಲಿ ಧ್ವಜಾರೋಹಣ ನೆರವೇರಿಸಿದ ಡಿಸಿ ಡಾ.ಆನಂದ.ಕೆ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಸೋಮವಾರ ನಗರದ ಜಿಲ್ಲಾ ಪಂಚಾಯತಿಯ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದ ಅವರು, ನಮ್ಮ ಸಂವಿಧಾನದ ಆಶಯಗಳಿಗನುಗುಣವಾಗಿ ಕಾರ್ಯನಿರ್ವಹಿಸಿ, ನಮಗೆ ಸಂವಿಧಾನ ಕಲ್ಪಿಸಿರುವ ಮೂಲಭೂತ ಹಕ್ಕುಗಳಂತೆ ಅದರಲ್ಲಿ ಅಡಕವಾಗಿರುವ ಕರ್ತವ್ಯಗಳನ್ನು ಪಾಲಿಸೋಣ ಎಂದು ಹೇಳಿದರು.ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ,ಜಿಲ್ಲಾ ನಿರೂಪಣಾಧಿಕಾರಿ ನಿರದಮಲಾ ಸುರಪೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿ ದೀಪಾ ಕಾಳೆ, ವಾರ್ತಾಧಿಕಾರಿ ಅಮರೇಶ ದೊಡಮನಿ, ವಾರ್ತಾ ಇಲಾಖೆಯ ಸುರೇಶ ಅಂಬಿಗೇರ, ಶ್ರೀಮತಿ ಮಂಜುಳಾ ದುರಗನ್ನವರ, ವೈಷ್ಣವಿ, ರತ್ನಾಂಜಲಿ, ಮಿಥುನ ಬನಸೋಡೆ, ನಾಗೇಶ ಸೇರಿದಂತೆ ಪೀಟರ್ ಅಲೆಕ್ಸಾಂಡರ್, ಬಾಪುಗೌಡ ಪಾಟೀಲ ಶೇಗುಣಸಿ ಹಾಗೂ ನೇತಾಜಿ ಗಾಂಧಿ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ,ಸಿಬ್ಬಂದಿ ಸಾರ್ವಜನಿಕರು, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವಿಜಯಪುರ ಜಿಲ್ಲೆಯಲ್ಲಿ ಹೆಸರಾಂತ ಕಂಪನಿಗಳು ಹೂಡಿಕೆಗೆ ಆಸಕ್ತಿ | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ ಡಾ. ಎಂ.ಬಿ.ಪಾಟೀಲ ಭವಿಷ್ಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬರದ ನಾಡು ಎಂಬ ಹಣೆಪಟ್ಟಿ ಅಂಟಿಕೊಂಡಿದ್ದ ವಿಜಯಪುರ ಜಿಲ್ಲೆಯಲ್ಲಿ ಹೆಸರಾಂತ ರಾಷ್ಟ್ರೀಯ-ಅಂತರರಾಷ್ಟ್ರೀಯ ಮಟ್ಟದ ಕಂಪನಿಗಳು ಹೂಡಿಕೆ ಮಾಡಲು ಆಸಕ್ತಿ ತೋರಿದ್ದು, ಈ ಭಾಗದಲ್ಲಿ ವಿವಿಧ ಕಾರ್ಖಾನೆ ಕಂಪನಿಗಳ ಸ್ಥಾಪನೆಯಿಂದ ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಯಾಗುವುದಲ್ಲದೇ, ಭವಿಷ್ಯದಲ್ಲಿ ವಿಜಯಪುರ ಜಿಲ್ಲೆಯ ಮ್ಯಾನುಫ್ಯಾಕ್ಚರ್ ಕ್ಲಸ್ಟರ್ವಾಗಿ ರೂಪಗೊಳ್ಳಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಹೇಳಿದರು.ಜಿಲ್ಲಾಡಳಿತದ ವತಿಯಿಂದ ಸೋಮವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ,ನಂತರ ಧ್ವಜವಂದನೆ ಸ್ವೀಕರಿಸಿ, ತೆರೆದ ವಾಹನದಲ್ಲಿ ಪೆರೇಡ್ ತಂಡಗಳ ಪರಿವೀಕ್ಷಣೆ ನಡೆಸಿ, ಗಣರಾಜ್ಯೋತ್ಸವ ಸಂದೇಶ ನೀಡಿದ ಅವರು, ಸ್ವಿಟ್ಜರ್ಲೆಂಡ್ ದೇಶದ ದಾವೋಸ್ ನಗರದಲ್ಲಿ ನಡೆದ ವಿಶ್ವ ಆರ್ಥಿಕ ಸಮಾವೇಶದಲ್ಲಿ ನಾನು ನೋಕಿಯಾ,…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ನಿರಾಣಿ ಸಮೂಹ ಸಂಸ್ಥೆಯ ಸಹಕಾರಿ ಸಂಘದ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಮಾಜಿ ಶಾಸಕ ಸೋಮನಗೌಡ ಪಾಟೀಲ (ಸಾಸನೂರ) ಹೇಳಿದರು.ಪಟ್ಟಣದಲ್ಲಿ ಭಾನುವಾರ ವಿಶಾಲ ಎಂಆರ್ಎನ್ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತ ಜಮಖಂಡಿ ಇದರ ೧೦ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ಲಾಕರ್ ಉದ್ಘಾಟಿಸಿ ಮಾತನಾಡಿದರು.ನಿರಾಣಿ ಒಡೆತನದ ಸಕ್ಕರೆ ಕಾರ್ಖಾನೆಗಳು ಅತಿ ಹೆಚ್ಚು ಸಕ್ಕರೆ ಉತ್ಪಾದಿಸಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಾ ಬಂದಿವೆ ಎಂದರು.ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಶಾಖೆ ಉದ್ಘಾಟಿಸಿ ಮಾತನಾಡಿ, ಪಟ್ಟಣದ ಜನತೆ ಆರ್ಥಿಕವಾಗಿ ಸಬಲರಾಗಿರುವುದರಿಂದ ಈ ಸೌಹಾರ್ದ ಸಂಘ ಅತ್ಯುತ್ತಮ ಶಾಖೆಯಾಗಿ ಹೊರಹೊಮ್ಮಲಿದೆ ಎಂದರು.ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಪ್ರಾಸ್ತಾವಿಕವಾಗಿ ಮಾತನಾಡಿ, ಸೌಹಾರ್ದ ಸಂಘ ನೊಂದಣಿಯಾಗಿ ೫ ವರ್ಷಗಳಾಗಿದ್ದು, ಒಟ್ಟು ೬೩೦೦ ಸದಸ್ಯರನ್ನು ಹೊಂದಿದೆ. ಜೊತೆಗೆ ೨೪೦ ಕೋಟಿಗೂ ಹೆಚ್ಚು ಠೇವಣಿಯನ್ನು ಹೊಂದಿದೆ. ಸದಸ್ಯರಿಗೆ ಕೋರ ಬ್ಯಾಂಕಿಂಗ್, ಎಸ್ಎಂಎಸ್ ಸೌಲಭ್ಯದೊಂದಿಗೆ ಆರ್ಟಿಜಿಎಸ್ ಹಾಗೂ ನೆಪ್ಟ್ ಸೌಲಭ್ಯ ಒದಗಿಸಲಾಗಿದೆ. ಮುಂದಿನ ದಿನಗಳಲ್ಲಿ ೨೫ ಶಾಖೆಗಳು,…
ಉದಯರಶ್ಮಿ ದಿನಪತ್ರಿಕೆ ಇಂಡಿ: ಕ್ಷೇತ್ರದ ಸರ್ವಾಂಗೀಣ ಅಭಿವೃಧ್ಧಿಗೆ ಶ್ರಮಿಸುತ್ತಿದ್ದು, ಮತಕ್ಷೇತ್ರದಲ್ಲಿ ಇನ್ನೂ ಆಗಬೇಕಾದ ಕಾರ್ಯಗಳನ್ನು ಶೀಘ್ರವೇ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಅಧಿಕಾರಿ ವರ್ಗ ಉತ್ತಮ ಕಾರ್ಯ ಮಾಡುತ್ತಿರುವುದರಿಂದಲೇ ಸರಕಾರದ ಯೋಜನೆಗಳು ಸಮರ್ಪಕವಾಗಿ ಜನರಿಗೆ ಮುಟ್ಟುತ್ತಿವೆ ಎಂದು ಶಾಸಕ ಯಶವಂತ್ರಾಯಗೌಡ ಪಾಟೀಲ ಹೇಳಿದರು.ಅವರು ನಗರದ ಕ್ರೀಡಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಇಂಡಿ ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆರಿಸಿದ್ದು, ಈಗಾಗಲೆ ಜನರಿಗೆ ೨೪*೭ ನೀರು ಒದಗಿಸಲಾಗುತ್ತಿದೆ. ತಾಲ;ಊಕಿನಲ್ಲಿ ಹತ್ತು ಹಲವು ಕಾಲೇಜುಗಳನ್ನು ತಂದು ಶೈಕ್ಷಣಿಕ ರಂಗದಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಅತ್ಯತ್ತಮವಾಗಿ ಪರೀಕ್ಷೆ ಬರೆಯಲು ಕಾರ್ಯಾಗಾರಗಳನ್ನು ಮಾಡಲಾಗುತ್ತಿದೆ. ಮುಂದಿನ ವರ್ಷ ಜಿಟಿಟಿಸಿ ಕಾಲೇಜು ಆರಂಭಗೊಳ್ಳಲಿದೆ ಎಂದು ತಿಳಿಸಿದರು.ಲಿಂಬೆ ಅಭಿವೃಧ್ಧಿ ಮಂಡಳಿ ಮುಖಾಂತರ ರೈತರಿಗೆ ಅನುಕೂಲ ಕಲ್ಪಿಸುವ ಯೋಜನೆಗಳನ್ನು ಹಾಕಿಕೊಳ್ಳಲಾಗುತ್ತಿದೆ. ಕೋಲ್ಡ ಸ್ಟೋರೇಜ್ ಸೇರಿದಂತೆ ಇನ್ನಿತರ ಕಾರ್ಯ ಮಾಡಲು ಕ್ರಮ ಕೈಗೊಳ್ಳಲಾಗುವುದು. ಶೀಘ್ರದಲ್ಲೇ ಲಿಂಬೆ ಅಭಿವೃಧ್ಧಿ ಮಂಡಳಿಯಲ್ಲಿ ನಡೆದಿರುವ ಕಾರ್ಯಕ್ರಮಗಳು ಹಾಗೂ ಆಗಬೇಕಾದ ಕಾರ್ಯಗಳ ಕುರಿತು ಒಂದು ದಿನ ಸೆಮಿನಾರ್ ಮಾಡಲಾಗುವುದು ಎಂದು ತಿಳಿಸಿದರು.ಕೈಗಾರಿಕೆ ಅಭಿವೃಧ್ದಿಗೆ ಸಂಬಂಧಿಸಿದಂತೆ ಕೈಗಾರಿಕೆ…
ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ಶೋಷಿತ ವರ್ಗದ ಏಳಿಗೆಗಾಗಿ, ನೊಂದವರ ಧ್ವನಿಯಾಗಿ, ಅನ್ಯಾಯಗೊಳಗಾದ ಸರ್ವ ಸಮುದಾಯದ ಶ್ರೇಯೋಭಿವೃದ್ಧಿಗಾಗಿ ರಾಜ್ಯವ್ಯಾಪಿ ಶ್ರಮಿಸುತ್ತಾ ಬರುತ್ತಿರುವ ಕರ್ನಾಟಕ ರಾಜ್ಯ ಭೀಮ್ ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ ಮಾಡಲಾಯಿತು.ಪಟ್ಟಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ನಸೀರ್ ಅಹಮದ್ ಅವರನ್ನು ಅಲ್ಪಸಂಖ್ಯಾತರ ಘಟಕದ ಮೈಸೂರು ಜಿಲ್ಲಾಧ್ಯಕ್ಷರನ್ನಾಗಿ ಅಪ್ಸರ್ ಪಾಷಾ ಅವರನ್ನು ಅಲ್ಪಸಂಖ್ಯಾತರ ಘಟಕದ ಹೆಚ್ ಡಿ ಕೋಟೆ ತಾಲೂಕು ಅಧ್ಯಕ್ಷರನ್ನಾಗಿ ಮತ್ತು ನಜೀರ್ ಅಹಮದ್ ಅವರನ್ನು ತಾಲೂಕು ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ನೇಮಕಾತಿ ಪ್ರಮಾಣ ಪತ್ರ ನೀಡಲಾಯಿತು.ಸಂಸ್ಥಾಪಕ ಕಂ. ರಾಜ್ಯಾಧ್ಯಕ್ಷ ಸರ್ವೇಶ್ ಮಾತನಾಡಿ, ಸಂಘಟನೆ ವತಿಯಿಂದ ಫೆಬ್ರವರಿ 23 ರಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿನಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಂಡಿದ್ದು, ನಿರುದ್ಯೋಗ ಯುವಕ, ಯುವತಿಯರು, ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.ಅಲ್ಪ ಸಂಖ್ಯಾತರ ಯುವ ಘಟಕದ ರಾಜ್ಯಾಧ್ಯಕ್ಷ ನಯಾಜ್ ಪಾಷಾ, ವಕ್ಫ್ ಸಲಹಾ ಸಮಿತಿಯ ಮೈಸೂರು ಜಿಲ್ಲಾ ಸದಸ್ಯ ಶರಪುದ್ದೀನ್ ಮಾತನಾಡಿದರು.ಮೈಸೂರು…
ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೃಷ್ಣಮೂರ್ತಿ ಕುಲಕರ್ಣಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ಈ ಭಾಗದ ಲಕ್ಷಾಂತರ ಜನರ ಜೀವನಾಡಿಯಾಗಿದೆ. ಈಗಾಗಲೇ ಯುಕೆಪಿ ಹಂತ-೧ ಮತ್ತು ಹಂತ-೨ ನ್ನು ಯಶಸ್ವಿಯಾಗಿ ನಿರ್ವಹಿಸಿ ೬ ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರೊದಗಿಸಲಾಗಿದೆ, ಈಗ ಹಂತ-೩ ರ ಕಾಮಗಾರಿಯನ್ನು ಯಶಸ್ವಿಯಾಗಿ ನಿರ್ವಹಿಸುವ ಸವಾಲು ನಮ್ಮ ಮುಂದಿದೆ ಎಂದು ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೃಷ್ಣಮೂರ್ತಿ ಕುಲಕರ್ಣಿ ಅಭಿಪ್ರಾಯಪಟ್ಟರು.ಇಲ್ಲಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕೃಷ್ಣಾ ಭಾಗ್ಯ ಜಲ ನಿಗಮದ ವತಿಯಿಂದ ಜರುಗಿದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.ಬಹುದಿನಗಳ ಬೇಡಿಕೆಯಾಗಿರುವ ಆಲಮಟ್ಟಿಯ ಎಚ್ಪಿಎಸ್ ಶಾಲೆಯ ಮೈದಾನವನ್ನು ಹಂತ ಹಂತವಾಗಿ ಅಭಿವೃದ್ಧಿಗೊಳಿಸಲಾಗುವುದು ಎಂದು ಅವರು ಭರವಸೆ ನೀಡಿದರು.ವಿಶ್ವದ ಅತಿ ದೊಡ್ಡ ಸಂವಿಧಾನ ಹೊಂದಿದ ಭಾರತದಲ್ಲಿ ಪ್ರತಿ ಪ್ರಜೆಗೂ ಸಮಾನ ಹಕ್ಕು ಮತ್ತು ಘನತೆಯನ್ನು ನೀಡಿದೆ. ಸಂವಿಧಾನದ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಇಂದು ಕಾನೂನು ಕೃತಿಯನ್ನು ಸ್ವೀಕರಿಸಿದ ದಿನ. ವಿವಿಧ ದೇಶಗಳಿಗೆ ತುಲಾನಾತ್ಮಕವಾಗಿ ಹೊಲಿಸಿ ನೋಡಿದಾಗ ಭಾರತ ದೇಶದ ಸಂವಿಧಾನ ವಿಶ್ವದ ಅತೀ ದೊಡ್ಡ ಸಂವಿಧಾನವಿದೆ. ದೇಶದ ಏಕತೆ, ಸಮಾನತೆ ಮತ್ತು ಭ್ರಾತೃತ್ವವನ್ನು ಉತ್ತೇಜಿಸುತ್ತದೆ ಎಂದು ತಹಶೀಲ್ದಾರ ಕರೆಪ್ಪ ಬೆಳ್ಳಿ ಹೇಳಿದರು.ಸಿಂದಗಿ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕಾಡಳಿತ ವತಿಯಿಂದ ಹಮ್ಮಿಕೊಂಡ ೭೭ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೇರವೇರಿಸಿ ಮಾತನಾಡಿದ ಅವರು, ಗಣರಾಜ್ಯೋತ್ಸವವು ನಮ್ಮ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ನೆನಪಿಸುತ್ತದೆ. ದೇಶದ ಅಭಿವೃದ್ಧಿಗಾಗಿ ಶ್ರಮಿಸುವ ಸಂಕಲ್ಪ ಮಾಡುವುದು ಈ ದಿನದ ನಿಜವಾದ ಮಹತ್ವವಾಗಿದೆ ಎಂದರು.ಪರೇಡನಲ್ಲಿ ಬಾಗವಹಿಸಿದ ಪಿಎಸ್ಐ ಆರೀಫ ಮುಷಾಪುರಿ, ಅಗ್ನಿ ಶಾಮಕ ಅದಿಕಾರಿ, ಗೃಹ ರಕ್ಷಕ ದಳ, ಲೋಯಲಾ ಸ್ಕೌಟ್ಸ್ ಮತ್ತು ಗೈಡ್ಸ್ ಆರ್.ಡಿ.ಪಾಟೀಲ ಕಾಲೇಜಿನ ರರ್ಸ್ ಮತ್ತು ರೆರ್ಸ್, ಜ್ಞಾನ ಭಾರತಿ ಪ್ರೌಡಶಾಲೆ, ಕೆಜಿಎಸ್, ಆದರ್ಶ ವಿದ್ಯಾಲಯ ವಿದ್ಯಾರ್ಥಿಗಳು ಗೌರವ ವಂದನೆ ಸಲ್ಲಿಸಿದರು.ಕಾರ್ಯಕ್ರಮಕ್ಕೂ ಮುನ್ನ ತಹಶೀಲ್ದಾರ ಕರೆಪ್ಪ ಬೆಳ್ಳಿ ಸಂವಿಧಾನ ಪೀಠಿಕೆ ಓದಿದರು.ಸಹಾಯಕ ಕೃಷಿ ನಿರ್ದೇಶಕ ಪ್ರಶಾಂತ ಸಾಣಿ,…
