Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ ಕಾರ್ಯಕ್ರಮವನ್ನು ಏಪ್ರಿಲ್ ೨ರ ಗುರುವಾರ ಬೆಳಿಗ್ಗೆ ೮ ಗಂಟೆಗೆ ಜಿಲ್ಲಾ ಪೊಲೀಸ್ ಕವಾಯತ್ ಮೈದಾನದಲ್ಲಿ ಆಯೋಜಿಲಾಗಿದೆ.ನಿವೃತ್ತ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್.ಕೆ. ಮಾರಿಹಾಳ ಅವರು ವಂದನೆ ಸ್ವೀಕರಿಸಲಿದ್ದಾರೆ.ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ. ಹಾಗೂ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ರಾಮನಗೌಡ ಹಟ್ಟಿ ಮತ್ತು ಜಿಲ್ಲೆಯ ಪೊಲೀಸ್ ಅಧಿಕಾರಿ, ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ ಎಂದು ಪೊಲೀಸ್ ಇಲಾಖೆಯ ಪ್ರಕಟಣೆ ತಿಳಿಸಿದೆ.

Read More

ವಿಜಯಪುರದ ಟಕ್ಕೆಯಲ್ಲಿ ಸರ್ಕಾರಿ ದತ್ತು ಸಂಸ್ಥೆ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವರ್ಷದೊಳಗಿನ ಅನಾಥ ಪ್ರತಿ ಮಗುವನ್ನು ಕೌಟುಂಬಿಕ ಪರಿಸರದಲ್ಲಿ ಬೆಳೆಸಿ ಉತ್ತಮ ಪ್ರಜೆಯಾಗಿಸುವ ನಿಟ್ಟಿನಲ್ಲಿ ದತ್ತು ಪೋಷಕರು, ಏಕಪಾಲಕರು ವಿಶೇಷ ದತ್ತು ಕೇಂದ್ರದ ಮೂಲಕ ಮಗುವನ್ನು ದತ್ತು ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ. ಅವರು ಹೇಳಿದರು.ನಗರದ ಟಕ್ಕೆಯಲ್ಲಿರುವ ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ಹೊಸ ಸರ್ಕಾರಿ ದತ್ತು ಸಂಸ್ಥೆಯನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿಯ ಅನಾಥ ಹಾಗೂ ಒಪ್ಪಿಸಿದ ಮಕ್ಕಳನ್ನು ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ-೨೦೧೫ ಹಾಗೂ ದತ್ತು ಮಾರ್ಗಸೂಚಿ-೨೦೧೭ರನ್ವಯ ಕಾನೂನಾತ್ಮಕವಾಗಿ ದತ್ತು ಪಡೆಯಲು ಅವಕಾಶವಿದ್ದು, ಮಕ್ಕಳಿಲ್ಲದವರು, ಇಲ್ಲಿನ ಮಕ್ಕಳನ್ನು ದತ್ತು ಸ್ವೀಕರಿಸಬಹುದಾಗಿದೆ ಎಂದರು.ಇನ್ನೊಂದೆಡೆ ಪೋಷಣೆ ಮತ್ತು ರಕ್ಷಣೆ ಅಗತ್ಯವಿರುವ ಮಕ್ಕಳನ್ನು ಸರ್ಕಾರಿ ದತ್ತು ಸಂಸ್ಥೆಯಲ್ಲಿ ದಾಖಲಿಸಬಹುದು. ಮಕ್ಕಳಿಲ್ಲದ ಅಥವಾ ಮಕ್ಕಳನ್ನು ಹೊಂದಿದವರು, ಆಸ್ಪತ್ರೆಯಲ್ಲಿ, ಯಾವುದೇ ಪ್ರದೇಶದಲ್ಲಿ ಬಿಟ್ಟು ಹೋದ ಮಕ್ಕಳನ್ನು ಅಥವಾ ಯಾವುದೇ ಕಾರಣದಿಂದ ಯಾವುದೇ ಪೋಷಕರಿಂದ ಮಗುವನ್ನು ನೇರವಾಗಿ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಕಬ್ಬಿನ ಗದ್ದೆಗೆ ತಗುಲಿದ್ದ ಬೆಂಕಿಯನ್ನು ನಂದಿಸಲು ಹೋಗಿದ್ದ ರೈತನೊಬ್ಬ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಾವನ್ನಪ್ಪಿದ ದಾರುಣ ಘಟನೆ ಪಟ್ಟಣದ ಸಮೀಪದ ಮಹಾದೇವಪ್ಪನ ತೆವೆರ ಬಳಿ ನಡೆದಿದೆ.ಮೃತರನ್ನು ಸಂಗಪ್ಪ ಈರಪ್ಪ ಕುಂಬಾರ (80) ಎಂದು ಗುರುತಿಸಲಾಗಿದೆ. ರವಿವಾರ ತಮ್ಮ ಸ್ವಂತ ಜಮೀನಿನಲ್ಲಿದ್ದ ಗೋಧಿ ಹುಲ್ಲು ಸುಡಲು ಬೆಂಕಿ ಹಚ್ಚಿದ ವೇಳೆ, ಆ ಬೆಂಕಿ ಪಕ್ಕದ ಜಮೀನಿನ ಕಬ್ಬಿನ ಗದ್ದೆಗೆ ಹಬ್ಬಿದೆ. ಅದನ್ನು ನಂದಿಸಲು ತೆರಳಿದ ಸಂಗಪ್ಪ ಅವರು ಅಕಸ್ಮಿಕವಾಗಿ ಬೆಂಕಿಗೆ ಸಿಲುಕಿದ್ದು, ಮಧ್ಯಾಹ್ನ ಸಮಯದಲ್ಲಿ ಸಜೀವ ದಹನಗೊಂಡಿದ್ದಾರೆ.ಘಟನೆ ನಡೆದ ವೇಳೆ ಸುತ್ತಮುತ್ತ ಯಾರೂ ಇರಲಿಲ್ಲ. ಸಂಜೆ ವೇಳೆಗೆ ಮನೆಗೆ ಮರಳದ ಹಿನ್ನೆಲೆ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.ಮಾಹಿತಿ ತಿಳಿದ ಕೊಲ್ಹಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು, ಪಟ್ಟಣ ಪಂಚಾಯಿತಿಗಳ ಸಹಯೋಗದಲ್ಲಿ ಅಂಬೇಡ್ಕರ್ ಜಯಂತಿಯಂದು ವಿವಿಧ ಕಾರ್ಯಕ್ರಮ ಕೈಗೊಳ್ಳಲಾಗುತ್ತಿದೆ. ಎಲ್ಲರ ಸಹಕಾರ ಅಗತ್ಯ ಎಂದು ತಹಶೀಲ್ದಾರ ನಿಂಗಪ್ಪ ಬಿರಾದಾರ ಹೇಳಿದರು.ಪಟ್ಟಣದ ಪ್ರವಾಸಿಮಂದಿರದಲ್ಲಿ ಮಂಗಳವಾರ ಡಾ.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಮ್ ಜಯಂತಿಗಳ ಅಂಗವಾಗಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.ಜಯಂತಿ ಅಂಗವಾಗಿ ಹೂಗಳಿಂದ ಅಂಬೇಡ್ಕರ್ ವೃತ್ತದ ಅಲಂಕಾರ, ಸ್ತಬ್ಧಚಿತ್ರ, ಭಾವಚಿತ್ರ ಮೆರವಣಿಗೆ, ವಿಶೇಷ ಉಪನ್ಯಾಸ ಜೊತೆಗೆ ಉಪಹಾರ ವ್ಯವಸ್ಥೆ ಕಲ್ಪಿಸಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನೆರವೇರಿಸಲಾಗುತ್ತಿದೆ ಎಂದರು.ದಲಿತ ಸಂಘರ್ಷ ಸಮಿತಿಯ ರಾವುತ ತಳಕೇರಿ, ಜಾನು ಗುಡಿಮನಿ, ರಾಜಕುಮಾರ ಸಿಂದಗೇರಿ ಜಯಂತಿ ರೂಪರೇಷೆಗಳ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.ತಾಲ್ಲೂಕು ಪಂಚಾಯಿತಿ ಇಓ ಭಾರತಿ ಚೆಲುವಯ್ಯ, ಸಮಾಜ ಕಲ್ಯಾಣ ಅಧಿಕಾರಿ ಭವಾನಿ ಪಾಟೀಲ, ಬಿಇಓ ಎಂ.ಬಿ.ಯಡ್ರಾಮಿ, ಕೃಷಿ ಇಲಾಖೆಯ ಶರಣಗೌಡ ಬಿರಾದಾರ, ಶಿರಸ್ತೇದಾರ ಸುರೇಶ ಮ್ಯಾಗೇರಿ, ಹೆಸ್ಕಾಂನ ಯು.ಎಲ್.ಪಟ್ಟಣ, ಪಶು ಅಸ್ಪತ್ರೆಯ ರಾಮು ರಾಠೋಡ, ತೋಟಗಾರಿಕೆ ಇಲಾಖೆಯ ಸಚೀನ ಉಟಗಿ, ಸಿ.ಕೆ.ಕುದರಿ, ಎಸ್.ಎನ್.ಬಸವರೆಡ್ಡಿ, ಮುತ್ತುರಾಜ ಹಿರೇಮಠ,…

Read More

ಕಾರ್ಯನಿರತ ಪತ್ರಕರ್ತರ ಸಂಘದ ಸಿಂದಗಿ ತಾಲೂಕಾಧ್ಯಕ್ಷ ಮಹಾಂತೇಶ ನೂಲಾನವರ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಮಕ್ಕಳ ದೈಹಿಕ, ಮಾನಸಿಕ ಶ್ರೇಯೋಭಿವೃದ್ಧಿಗೆ ಶಾಲೆ ಆವರಣದ ಪರಿಸರವು ಪರಿಣಾಮ ಬೀರುತ್ತದೆ. ಈ ಶಾಲೆಯಲ್ಲಿ ಮಕ್ಕಳ ಪ್ರಗತಿಗೆ ಪೂರಕ ವಾತರಣವಿರುವುದು ತುಂಬಾ ಹರ್ಷ ತಂದಿದೆ. ಕೇವಲ ಎರಡೇ ವರ್ಷದಲ್ಲಿ ಶಾಲೆ ಇಷ್ಟೊಂದು ಎತ್ತರಕ್ಕೆ ಬೆಳೆಯಬೇಕಾದರೆ ಶಾಲಾ ವ್ಯವಸ್ಥಾಪಕ ಮಂಡಳಿಯ ಜೊತೆಗೆ ಸಿಬ್ಬಂದಿಗಳ ಶ್ರಮವೂ ಪ್ರಮುಖವಾಗಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕಾಧ್ಯಕ್ಷ ಮಹಾಂತೇಶ ನೂಲಾನವರ ಹೇಳಿದರು.ಪಟ್ಟಣದ ಕಿಡ್ಜಿ ಆಂಗ್ಲಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಂಡ ವಾರ್ಷಿಕ ಸಂಸ್ಕಾರ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಪ್ರತಿಭೆ ಪ್ರದರ್ಶನ, ಸಾಂಸ್ಕೃತಿಕ ಚಟುವಟಕೆಗಳು ಮತ್ತು ಸ್ನೇಹ ಬಾಂಧವ್ಯವನ್ನು ಉತ್ತೇಜಿಸುವ ಪ್ರಮುಖ ಕಾರ್ಯಕ್ರಮವಾಗಿದೆ. ಇಂತಹ ಸಮಾರಂಭಗಳು ಮಕ್ಕಳಲ್ಲಿ ನಾಯಕತ್ವದ ಗುಣ, ಶಿಸ್ತು, ಸಂಸ್ಕಾರ, ಸಂಸ್ಕೃತಿ ಮತ್ತು ಮೌಲ್ಯಯುತ ಶಿಕ್ಷಣವನ್ನು ಬೆಳೆಸುವ ವೇದಿಕೆಯಾಗುತ್ತದೆ ಎಂದರು.ಈ ವೇಳೆ ೫೦೦ಕ್ಕೂ ಅಧಿಕ ವಚನಗಳ ವಾಚನ, ಭಗವದ್ಗೀತೆಯ ೧೮ ಅಧ್ಯಾಯಗಳ ಹೆಸರು, ಶ್ರೀರಾಮ ವಂಶಸ್ಥರ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಮಹಿಳೆಯರು ಗ್ರಾಮೀಣ ಸಂಸ್ಕೃತಿಯ ಪ್ರತೀಕವಾಗಿ ಜೀವನ ಸಾಗಿಸಬೇಕು. ಮಹಿಳೆ ಎಲ್ಲರಿಗೂ ಮಾದರಿಯಾಗಿ ಬದುಕಬೇಕು ಎಂದು ಸಮಾಜ ಸೇವಕಿ, ಶಿಕ್ಷಣ ಪ್ರೇಮಿ ನಾಗರತ್ನ ಅಶೋಕ ಮನಗೂಳಿ ಅಭಿಪ್ರಾಯ ವ್ಯಕ್ತಪಡಿಸಿದರು.ಸಿಂದಗಿ ತಾಲೂಕ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಮದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆ ಎಲ್ಲ ಕ್ಷೇತ್ರಗಳಲ್ಲಿ ಸಮರ್ಥವಾಗಿ ಸಾಧನೆಗೈದಿದ್ದಾರೆ. ವಿದ್ಯಾವಂತ ಮಹಿಳೆಯರು ಆರ್ಥಿಕವಾಗಿ ಸಬಲೀಕರಣಗೊಳ್ಳುತ್ತಿದ್ದಾರೆ. ಮಹಿಳೆಯರನ್ನು ಪೂಜ್ಯನೀಯ ಭಾವದಿಂದ ಭಾರತ ಕಾಣುತ್ತದೆ ಎಂದರು.ಈ ವೇಳೆ ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶಿಲ್ಪಾ ಭಸ್ಮೆ ಮಾತನಾಡಿ, ಮಹಿಳೆಯರು ಇಂದು ವೃತ್ತಿ ಜೀವನ ಮತ್ತು ವೈಯಕ್ತಿಕ ಜೀವನವನ್ನು ಸಮತೋಲನದಲ್ಲಿ ನಿಭಾಯಿಸುವ ಚಾಕಚಕ್ಯತೆಯನ್ನು ಹೊಂದಿದ್ದಾರೆ. ಅವಕಾಶ ಸಿಕ್ಕಾಗಲೆಲ್ಲ ತನ್ನುನ್ನು ತಾವು ಎಲ್ಲ ರಂಗಗಳಲ್ಲಿ ಗುರುತಿಸಿಕೊಂಡಿದ್ದಾರೆ. ಶಿಕ್ಷಣ ನೀಡುವುದರ ಮೂಲಕ ಮಹಿಳೆಯರನ್ನು ವಿಶ್ವಕ್ಕೆ ಪರಿಚಯಿಸುವ ಪ್ರಯತ್ನ ಮಾಡುಬೇಕು ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಲಮೇಲ ಮಹಿಳಾ ಸಾಹಿತಿ ರೇವತಿ ಉಪ್ಪಿನ ವಹಿಸಿ ಮಾತನಾಡಿದರು.…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ರಾಮ ನವಮಿ ನಿಮಿತ್ತ ಶ್ರೀರಾಮನ ಮೂರ್ತಿ ಮೆರವಣಿಗೆ ಪಟ್ಟಣದ ದೇವಿಗುಡಿಯಿಂದ ಊರಿನ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪಟ್ಟಣ ಪಂಚಾಯತ ಆವರಣದವರೆಗೆ ನಡೆಯಿತು.ವಿಶ್ವ ಹಿಂದೂ ಪರಿಷತ್ ಉತ್ತರ ಪ್ರಾಂತದ ಸಾಮಾಜಿಕ ಸಮರಸತ ಪ್ರಮುಖರಾದ ಶ್ರೀಮಂತ ದುದ್ದಗಿ ಶ್ರೀರಾಮನ ಮೂರ್ತಿಗೆ ಪೂಜೆ ಸಲ್ಲಿಸಿ ಶೋಭಾ ಯಾತ್ರೆಗೆ ಚಾಲನೆ ನೀಡಿದರು.ಸ್ವಾಮಿ ವಿವೇಕಾನಂದ ಸೇನೆ ಅಧ್ಯಕ್ಷ ಹಣಮಂತ ರಜಪೂತ ಮಾತನಾಡಿ, ಈಗಿನ ಯುವಪಿಳಿಗೆಗಳಾದ ನಾವುಗಳು ರಾಮನ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಮತ್ತು ನಮ್ಮ ಹಿಂದೂ ಆಚರಣೆಗಳನ್ನು ರೂಡಿಸಿಕೊಳ್ಳಬೇಕು. ನಮ್ಮ ಹಿಂದೂ ಧರ್ಮ ರಕ್ಷಣೆಗೆ ನಾವೆಲ್ಲರೂ ಸಿದ್ದರಿರಬೇಕು ಎಂದರು.ಮುಖಂಡ ಕಮಲಾಕರ ಪತ್ತಾರ ಮಾತನಾಡಿ, ಹಿಂದೂ ಹುಡುಗಿಯರು ಮತಾಂತರ ವಾಗುವುದನ್ನು ತಡೆಗಟ್ಟಬೇಕಿದೆ. ಗೋವು ರಕ್ಷಣೆ ದೇಶರಕ್ಷಣೆ ಧರ್ಮ ರಕ್ಷಣೆ ಪ್ರತಿಯೊಬ್ಬ ಭಾರತೀಯ ಹಿಂದೂವಿನ ಕರ್ತವ್ಯವಾಗಿದೆ ಎಂದು ಹೇಳಿದರು.ಮೆರವಣಿಗೆಯಲ್ಲಿ ವಿಜಯಪುರ ಶಾಸಕರ ಬಸವನಗೌಡ ಪಾಟೀಲ(ಯತ್ನಾಳ) ಭಾವಚಿತ್ರಗಳು ರಾರಾಜಿಸುತ್ತಿದ್ದವು. ಯುವಕರ ಬಾಯಿಯಲ್ಲಿ ಮುಂದಿನ ಮುಖ್ಯಮಂತ್ರಿ ಬಸನಗೌಡ ಪಾಟೀಲ ಎಂದು ಕೂಗುತ್ತಿದ್ದರು. ಬಿಜೆಪಿ ಪಟ್ಟಣ ಪಂಚಾಯತಿ ಸದಸ್ಯರು ಹಾಗೂ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಹಿಂದೆ ನಮ್ಮ ತಂದೆ/ತಾಯಿ, ಅಜ್ಜ /ಅಜ್ಜಿಯರ ಸಮಯದಲ್ಲಿ ಪ್ರಾಣಿ ಪಕ್ಷಿಗಳ ಸಂತಾನ ಹೆಚ್ಚಾಗಿ ಮನೆಗಳಲ್ಲಿ ಕಾಣುತಿದ್ದೆವು, ಆದರೆ ಇವಾಗ ಜಗತ್ತಿನಲ್ಲಿ ಮೊಬೈಲ್, ಸೆಟಲೈಟ್, ವಾಹನಗಳ ಮಾಲಿನ್ಯಕ್ಕೆ ಪಕ್ಷಿಗಳ ಸಂತಾನ ಕ್ಷಿಣಿಸುತ್ತಿದೆ, ಇದಕ್ಕೆಲ್ಲ ನಾವು ಮನುಜರು ಮನಸ್ಸು ಮಾಡಿದರೆ ಪಕ್ಷಿಗಳ ಸಂತಾನ ಉಳಿಸಲು ಸಾಧ್ಯ ಎಂದು ವಿಜಯಪುರ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ರಾಘವೇಂದ್ರ ಕಾಪಸೆ ಹೇಳಿದರು.ಬೇಸಿಗೆ ಸಮಯದಲ್ಲಿ ಚಡಚಣ ತಾಲೂಕಿನ ಹತ್ತಳ್ಳಿ ಗ್ರಾಮದ ಕೆರೆಯಲ್ಲಿ ಸಾವಿರಾರು ಪಕ್ಷಿಗಳು ನಾಶವಾದ ವಿಷಯ ಕಂಡು ಝಳಕಿ ಗ್ರಾಮದಲ್ಲಿ ವಿಜಯಪುರ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷರು ರಾಘವೇಂದ್ರ ಕಾಪಸೆ ಹಾಗೂ ಗೆಳೆಯರ ಬಳಗದ ಸಹಯೋಗದಲ್ಲಿ ಪಕ್ಷಿಗಳಿಗೆ ನಿರುಣಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಹಿಂದೆ ಸಲೀಮ್ ಅಲಿ ಅಂತಹ ಪ್ರಾಣಿ, ಪಕ್ಷಿಗಳ ಪ್ರಿಯರು ಇತಿಹಾಸದಲ್ಲೇ ದಾಖಲೆಯಾಗಿದ್ದನ್ನು ಕಂಡಿದ್ದೇವೆ, ನಾವುಗಳು ಪಕ್ಷಿಗಳಿಗೆ ದಿನದ ಒಂದು ಅರ್ಧ ಗಂಟೆ ಮಾತ್ರ ಕಾರ್ಯಗತರಾಗೋಣ ಎಂದರು.ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಇಂಡಿ ತಾಲೂಕು ಉಪಾಧ್ಯಕ್ಷ ಪ್ರಕಾಶ ಬಿರಾದಾರ,…

Read More

ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ಮೊನ್ನೆ ನಡೆದ ಜನರೊಂದಿಗೆ ಜನತಾದಳ ಸಮಾವೇಶಕ್ಕೆ ಮಾಜಿ ಶಾಸಕ ಚಿಕ್ಕಣ್ಣ ಅವರನ್ನು ಕರೆತಂದಿದ್ದರೆ ಹೆಚ್ ಡಿ ಕೋಟೆ ವಿಧಾನಸಭಾ ಕ್ಷೇತ್ರದಲ್ಲಿ NDA ಅಭ್ಯರ್ಥಿ ಗೆಲ್ಲುವ ಒಂದು ಅವಕಾಶವಿತ್ತು. ಆದರೆ ಆ ಕೆಲಸವನ್ನು ನಿಖಿಲ್ ಕುಮಾರಸ್ವಾಮಿ ಮಾಡಲಿಲ್ಲ. ಜೆಡಿಎಸ್ ಪಕ್ಷದಿಂದ ದೂರ ಇರುವ ಮಾಜಿ ಶಾಸಕ ಚಿಕ್ಕಣ್ಣ ಸುಮ್ಮನೆ ಕೈಕಟ್ಟಿ ಕುಳಿತಿಲ್ಲ. ಅಂದೇ ಪಂಚೆಯನ್ನು ಮೇಲಕ್ಕೆ ಕಟ್ಟಿ, ಟಿಕೆಟ್ ತರುವುದಾಗಿ ತೊಡೆ ತಟ್ಟಿದ್ದರು. ಆ ಕೆಲಸವನ್ನು ಮುಂಬರುವ ವಿಧಾನಸಭೆ ಚುನಾವಣೆಗೂ ಮಾಡುತ್ತಾರೆ, NDA ಮೈತ್ರಿಕೂಟದಲ್ಲಿ ಟಿಕೆಟ್ ತರುತ್ತಾರೆ. ಹೀಗಾಗಿ ಇಬ್ಬರ ಜಗಳದಲ್ಲಿ ಮೂವರಿಗೆ ಲಾಭ ಎನ್ನುವ ಗಾದೆ ಮಾತಿನಂತೆ 2028 ವಿಧಾನಸಭಾ ಚುನಾವಣೆಗೂ ಕಾಂಗ್ರೆಸ್ ಗೆ ಲಾಭವಾಗಲಿದ್ದು, ಶಾಸಕ ಅನಿಲ್ ಚಿಕ್ಕಮಾದು ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾಗುತ್ತಾರೆ ಎಂದು ಕಾಂಗ್ರೆಸ್ ಮುಖಂಡ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಿ.ವಿ. ಬಸವರಾಜು ಭವಿಷ್ಯ ನುಡಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಬಿ.ವಿ. ಬಸವರಾಜು. ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್…

Read More