Subscribe to Updates
Get the latest creative news from FooBar about art, design and business.
Author: editor.udayarashmi@gmail.com
ರೂ.೧.೨೫ ಕೋಟಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಶಾಸಕ ಮನಗೂಳಿ ಅಭಿಮತ ಸಿಂದಗಿ: ಪಟ್ಟಣ ಅತಿ ವೇಗವಾಗಿ ಬೆಳೆಯುತ್ತಿದೆ. ಆ ನಿಟ್ಟಿನಲ್ಲಿ ಸಿಂದಗಿಯ ಪ್ರಮುಖ ರಸ್ತೆಗಳನ್ನು ಅಭಿವೃದ್ದಿ ಪಡಿಸಿ ಸಿಂದಗಿ ನಗರವನ್ನು ಅತ್ಯಂತ ಸುಂದರ ನಗರವನ್ನಾಗಿ ಮಾಡುವ ಗುರಿ ನನ್ನದಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ ವೃತ್ತದ ಬಳಿ ಮಂಗಳವಾರ ಲೋಕಪಯೋಗಿ ಇಲಾಖೆ, ಉಪ ವಿಭಾಗ ಸಿಂದಗಿಯ ೨೦೨೩-೨೪ ನೇ ಸಾಲಿನ ೩೦೫೪- ಜಿಲ್ಲಾ ಮುಖ್ಯ ರಸ್ತೆಗಳ ನಿರ್ವಹಣೆ ಯೋಜನೆ ಅಡಿಯಲ್ಲಿ ಸಿಂದಗಿ ಪಟ್ಟಣದ ವ್ಯಾಪ್ತಿಯ ಜೇವರ್ಗಿ-ಚಿಕ್ಕೋಡಿ ರಸ್ತೆ ಹಾಗೂ ಆಲಮೇಲ-ಸಿಂದಗಿ ರಸ್ತೆ (ಮಹಾತ್ಮಾ ಗಾಂಧಿ ವೃತ್ತದಿಂದ) ರಾಷ್ಟ್ರೀಯ ಹೆದ್ದಾರಿ-೫೦ರವರೆಗೆ, ಚಿಕ್ಕಸಿಂದಗಿ ವರ್ತುಲ ರಸ್ತೆಯವರೆಗೆ ಬಾಕಿ ಉಳಿದಿರುವ ರಸ್ತೆಗೆ ಮೀಡಿಯನ್ ಅಳವಡಿಸುವ ಕಾಮಗಾರಿಗೆ ಅಂದಾಜು ೧.೨೫ ಕೋಟಿ ಅನುದಾನದಲ್ಲಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.ನಗರ ಅಭಿವೃದ್ದಿಯಾಗಲು ಮೊದಲು ರಸ್ತೆಗಳು ಉತ್ತಮವಾಗಿರಬೇಕು. ಮುಂಬರುವ ದಿನಗಳಲ್ಲಿ ಸಿಂದಗಿಗೆ ಕೂಡುವ ಎಲ್ಲ ರಸ್ತೆಗಳನ್ನು ಹಾಗೂ ಪಟ್ಟಣದ ಮುಖ್ಯ ರಸ್ತೆಗಳನ್ನು ಅಭಿವೃದ್ದಿ ಪಡಿಸುವ ಕಾರ್ಯವನ್ನು…
ಸಿಂದಗಿ: ಶಿಕ್ಷಕರ ಸಮುದಾಯ ಸೇವಾ ಮತ್ತು ಅರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸುವ ಮೂಲಕ ಭಾರತ ಸೇವಾದಳವನ್ನು ಉಳಿಸಿ ಬೆಳೆಸಬೇಕು ಎಂದು ಶಿಕ್ಷಣ ಸಂಯೋಜಕ ಆನಂದ ಮಾಡಗಿ ಹೇಳಿದರು.ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಯಲ್ಲಿ ವಿಜಯಪುರ ಜಿಲ್ಲಾ ಸಮಿತಿ ಭಾರತ ಸೇವಾದಳ, ತಾಲೂಕು ಸಮಿತಿ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆ ಇವರುಗಳ ಸಂಯೋಗದಲ್ಲಿ ಹಮ್ಮಿಕೊಂಡ ಸಿಂದಗಿ ತಾಲೂಕು ಮಟ್ಟದ ಭಾರತ ಸೇವಾದಳ ಶಿಕ್ಷಕರ ಪುನಃಶ್ಚೇತನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತ ಸೇವಾದಳ ಸ್ವಾತಂತ್ರ್ಯ ಹೋರಾಟಗಾರರು ಮತ್ತು ದೇಶಭಕ್ತರನ್ನು ಹುಟ್ಟು ಹಾಕಿದ ಸಂಸ್ಥೆ. ಸ್ವಾತಂತ್ರ್ಯ ಚಳುವಳಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರಿಗೆ ಸಾತ್ ಕೊಟ್ಟ ಏಕೈಕ ಸಂಸ್ಥೆ ಎಂದರು.ಈ ವೇಳೆ ತಾಲೂಕು ಸಮಿತಿ ಮಹಿಳಾ ಪ್ರತಿನಿಧಿ ಶ್ಯಾಮಲಾ ಮಂದೇವಾಲಿ ಮಾತನಾಡಿ, ಸೇವಾದಳದ ಶಿಕ್ಷಕರು ಮಕ್ಕಳಲ್ಲಿ ರಾಷ್ಟ್ರಭಕ್ತಿ, ದೇಶಪ್ರೇಮ, ಶಿಸ್ತು, ಸೇವಾ ಮನೋಭಾವನೆ, ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ…
ಸಿಂದಗಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸರ್ವಾಂಗೀಣ ಪ್ರಗತಿಗೆ ನೂತನವಾಗಿ ರಚಿಸಲ್ಪಟ್ಟ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರು ಶ್ರಮವಹಿಸಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಂಡ ಕಾಲೇಜು ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಕಾಲೇಜಿಗೆ ಬೇಕಾಗುವ ಮೂಲಭೂತ ಸೌಕರ್ಯಗಳನ್ನು ಸರಕಾರದಿಂದ ಒದಗಿಸಲು ಪ್ರಯತ್ನಿಸುವೆ. ಕಾಲೇಜಿನ ಕಂಪೌಂಡ ನಿರ್ಮಿಸಲು ಹಣವು ಈಗಾಗಲೇ ಮಂಜೂರಾಗಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಆರಂಭಿಸಲು ಸಂಬಂಧಿಸಿದ ಗುತ್ತಿಗೆದಾರರಿಗೆ ಸೂಚಿಸಿದರು. ನಿರ್ಮಾಣಗೊಂಡ ಕಾಲೇಜು ಕಟ್ಟಡವನ್ನು ಹಸ್ತಾಂತರಿಸಲು ಕ್ರಮಕೈಗೊಳ್ಳವುದಾಗಿ ಸಭೆಯಲ್ಲಿ ತಿಳಿಸಿದರು.ಇದೇ ಸಂದರ್ಭದಲ್ಲಿ ಸಮಿತಿ ಸದಸ್ಯ ಎಸ್.ಎಸ್.ಪಾಟೀಲ ಮಾತನಾಡಿ, ಕಾಲೇಜಿನ ಪ್ರಗತಿಗೆ ನಾವೆಲ್ಲರೂ ಸಹಕಾರ ನೀಡುತ್ತೇವೆ. ಸರಕಾರಿ ಪ್ರಥಮ ದರ್ಜೆ ಕಾಲೇಜನ್ನು ಮಾದರಿ ಮಹಾವಿದ್ಯಾಲಯವನ್ನಾಗಿ ಮಾಡಲು ನಾವೆಲ್ಲರೂ ಶ್ರಮಿಸುತ್ತೇವೆ ಎಂದು ಭರವಸೆ ನೀಡಿದರು.ಈ ವೇಳೆ ಪ್ರಾಚಾರ್ಯ ಶಿವಲಿಂಗ ಹಳೇಮನಿ ಪ್ರಾಸ್ತವಿಕವಾಗಿ ಮಾತನಾಡಿದರು. ಬಳಿಕ ನೂತನವಾಗಿ ಆಯ್ಕೆಯಾದ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಿಗೆ ಶಾಸಕರು ಸನ್ಮಾನಿಸಿ ಗೌರವಿಸಿದರು.ಪ್ರಾಧ್ಯಾಪಕ ಡಾ.ಮಿರಾಜ ಪಾಶ…
ದೇವರಹಿಪ್ಪರಗಿ: ಮಳೆಗಾಲದಲ್ಲಿ ಸೋರುತ್ತಿರುವ ಅಂಗನವಾಡಿ, ಶಾಲಾ ಕೋಠಡಿಗಳ ಮಾಹಿತಿ ನೀಡುವುದು ಅಗತ್ಯವಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ(ಪಂಚಾಯತ್ ರಾಜ್) ಶಿವಾನಂದ ಮೂಲಿಮನಿ ಹೇಳಿದರು.ಪಟ್ಟಣದ ಪ್ರವಾಸಿಮಂದಿರದಲ್ಲಿ ಮಂಗಳವಾರ ಜರುಗಿದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಜಿಲ್ಲಾ ಪಂಚಾಯಿತಿಯ ಆದೇಶದ ಅನ್ವಯ, ತಾಲ್ಲೂಕಿನ ಅಂಗನವಾಡಿ ಹಾಗೂ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಕೋಠಡಿಗಳಲ್ಲಿ ಮಳೆ ನೀರು ಸೋರಿಕೆ, ದುರಸ್ತಿ, ಶೌಚಾಲಯಗಳ ಕೊರತೆ, ಕುಡಿಯುವ ನೀರಿನ ಸಮಸ್ಯೆಗಳಿದ್ದಲ್ಲಿ ಕೂಡಲೇ ಮಾಹಿತಿ ನೀಡಬೇಕು. ಶಾಲೆಗಳ ಇಂಥ ನ್ಯೂನ್ಯತೆಗಳು ಮಕ್ಕಳ ಕಲಿಕೆಯ ಮೇಲೆ ವ್ಯತಿರಿಕ್ತ ಪರಿಣಾಮ ಉಂಟು ಮಾಡುತ್ತವೆ. ಆದ್ದರಿಂದ ಸಮೂಹ ಸಂಪನ್ಮೂಲ ವ್ಯಕ್ತಿಗಳು, ಅಂಗನವಾಡಿ ಮೇಲ್ವಿಚಾರಕರು ಯಾವುದೇ ತಪ್ಪು ಮಾಹಿತಿಗೆ ಅವಕಾಶ ನೀಡದೇ ಅಗತ್ಯ ಕ್ರಮವಹಿಸಲು ಸೂಚಿಸಿದರು.ಕ್ಷೇತ್ರ ಸಮನ್ವಯ ಅಧಿಕಾರಿ ಐ.ಎಸ್.ಟಕ್ಕೆ ಮಾತನಾಡಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಪಿಡಿಓ ಅವರೊಂದಿಗೆ ಸಮನ್ವಯ ಸಾಧಿಸಿ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿಯನ್ನು ಜುಲೈ ೪ರ ಒಳಗಾಗಿ ತಾಲ್ಲೂಕು ಪಂಚಾಯಿತಿಗೆ ಸಲ್ಲಿಸಬೇಕು ಎಂದರು.ಸಹಾಯಕ ನಿರ್ದೇಶಕ(ನರೇಗಾ) ಶಾಂತಗೌಡ ನ್ಯಾಮಣ್ಣವರ, ಎಸಿಡಿಪಿಓ ಜಯಶ್ರೀ ದೊಡಮನಿ,…
ಆಲಮಟ್ಟಿ: ಯಾವುದೇ ಮನೆ, ಮಠ, ದೇಗುಲಗಳಲ್ಲಿ ಪೂಜೆಗೆ ಸೀಮಿತವಾಗಿ ನಶಿಸುತ್ತಿದ್ದ ೧೨ ನೇ ಶತಮಾನದ ಶರಣರು ತಾಡೋಲೆಗಳಲ್ಲಿ ರಚಿಸಿದ್ದ ವಚನಗಳನ್ನು ಸಂಗ್ರಹಿಸಿ, ಸಂಶೋಧಿಸಿ ಕೃತಿ ಸಂಪುಟಗಳಲ್ಲಿ ಹೊರ ತಂದ ಡಾ ಫ.ಗು. ಹಳಕಟ್ಟಿ ಅವರು ಜೀವನದುದ್ಧಕ್ಕೂ ಸರಳ ಫಕೀರನಂತೆ ಬದುಕು ಸಾಗಿಸಿದರು ಎಂದು ಸಾಹಿತಿ ಮೋಹನ ಕಟ್ಟಿಮನಿ ಅಭಿಪ್ರಾಯಪಟ್ಟರು.ಆರ್ಬಿಪಿಜಿ ಹಳಕಟ್ಟಿ ಪ್ರೌಢಶಾಲೆಯಲ್ಲಿ ನಿಡಗುಂದಿ ತಾಲ್ಲೂಕು ಆಡಳಿತ ವಚನ ಪಿತಾಮಹ ಡಾ ಫ.ಗು. ಹಳಕಟ್ಟಿ ಅವರ ೧೪೪ ನೇ ಜನ್ಮದಿನದ ಅಂಗವಾಗಿ ಹಮ್ಮಿಕೊಂಡ ವಚನ ಸಂರಕ್ಷಣಾ ದಿನದಲ್ಲಿ ಅವರು ಉಪನ್ಯಾಸ ನೀಡಿ ಮಾತನಾಡಿದರು.ಹುಟ್ಟಿದ ಆರಂಭದಿಂದ ೮೩ ವರ್ಷಗಳಕಾಲ ನಿರಂತರವಾಗಿ ತಮ್ಮ ಸುಖವನ್ನು ಬಯಸದೆ ವಚನ ಸಾಹಿತ್ಯದ ಸಂಶೋಧನೆಗಾಗಿ ಜೀವನವನ್ನೇ ಸವೆದ ಮಹಾಪುರುಷನ ಜನ್ಮ ದಿನವನ್ನು ಸರಕಾರ ಆಚರಣೆ ಮಾಡಬೇಕಾದರೆ ೧೩೦ ವರ್ಷ ತೆಗೆದುಕೊಂಡಿತು ಅದೇ ನಮ್ಮ ದುರ್ದೈವ.ಎಂದು ವಿಷಾಧಿಸಿದರು.ಬಿಎಲ್ಡಿಎ ಶಿಕ್ಷಣ ಸಂಸ್ಥೆ ಮತ್ತು ಸಿದ್ದೇಶ್ವರ ಬ್ಯಾಂಕ್ ಸ್ಥಾಪಿಸಿದ ಹಳಕಟ್ಟಿಯವರು ಲಿಂಗೈಕ್ಯರಾಗಿದ್ದಾಗ ಅವರ ಸಮಾಧಿಗಾಗಿ ಯಾರೂ ಜಾಗ ನೀಡಲಿಲ್ಲ, ಕೊನೆಗೆ ಜ್ಞಾನಯೋಗಾಶ್ರಮದ ಮಲ್ಲಿಕಾರ್ಜುನ ಸ್ವಾಮೀಜಿ ತಾವು…
ಬಸವನಬಾಗೇವಾಡಿ: ತಾಲೂಕಿನ ಇಂಗಳೇಶ್ವರ ಗ್ರಾಮದ ಆರಾಧ್ಯದೈವ ಜಗದ್ಗುರು ರೇವಣಸಿದ್ದೇಶ್ವರ ದೇವರ ಬೆಳ್ಳಿಯ ಉತ್ಸವ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ಅಕ್ಕನಾಗಮ್ಮನ ಗುಹೆಯಲ್ಲಿ ಅಕ್ಕನಾಗಮ್ಮ, ಬಸವಣ್ಣನವರ ಮತ್ತು ಚನ್ನಬಸವಣ್ಣನವರ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮದಂಗವಾಗಿ ಜುಲೈ ೫ ಮತ್ತು ೭ ರಂದು ಎರಡು ದಿನಗಳ ಕಾಲ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಗ್ರಾಮದ ಹಾಲಭಾವಿಯಿಂದ ಜುಲೈ ೫ ರಂದು ಬೆಳಗ್ಗೆ ೯ ಗಂಟೆಗೆ ಮೂರ್ತಿಗಳ ಮೆರವಣಿಗೆಯು ಆರಂಭಗೊಂಡು ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿವಿಧ ವಾದ್ಯವೈಭವದೊಂದಿಗೆ ಮುತ್ತೈದೆಯರ ಕಳಸ-ಕನ್ನಡಿ, ಆರತಿ, ಭಜನಾ ಹಾಗೂ ಕಲಾತಂಡಗಳೊಂದಿಗೆ ರೇವಣಸಿದ್ದೇಶ್ವರ ಗುಡ್ಡವನ್ನು ತಲುಪುವುದು.ರೇವಣಸಿದ್ದೇಶ್ವರ ಗುಡ್ಡದ ಅಂಚಿನಲ್ಲಿರುವ ಅಕ್ಕನಾಗಮ್ಮ ಗುಹೆಯಲ್ಲಿ ಜು.೭ ರಂದು ಪ್ರಾತಃಕಾಲದಲ್ಲಿ ವಿವಿಧ ಶ್ರೀಗಳಿಂದ ಸಾನಿಧ್ಯದಲ್ಲಿ ಬರಡೋಲದ ವೇದಮೂರ್ತಿ ವಿಶ್ವನಾಥ ಶಾಸೀಜಿಯವರಿಂದ ಅಕ್ಕನಾಗಮ್ಮ ,ಬಸವಣ್ಣನವರ ಮತ್ತು ಚನ್ನಬಸವಣ್ಣನವರ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ನೆರವೇರುವುದು. ನಂತರ ಬೆಳಗ್ಗೆ ೧೧ ಗಂಟೆಗೆ ರೇವಣಸಿದ್ದೇಶ್ವರ ಸಮುದಾಯ ಭವನದಲ್ಲಿ ಜಗದ್ಗುರು ರೇವಣಸಿದ್ದೇಶ್ವರ ದೇವರ ಬೆಳ್ಳಿಯ ಉತ್ಸವ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ…
ಬಸವನಬಾಗೇವಾಡಿ: ಡಾ.ಫ.ಗು.ಹಳಕಟ್ಟಿ ಅವರು ೧೨ ನೇ ಶತಮಾನದ ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂಕ್ಷರಣೆ ಮಾಡಿದ್ದು ಸದಾ ಸ್ಮರಣೀಯವಾಗಿದೆ. ಇವರು ವಚನ ಸಾಹಿತ್ಯ ಸಂರಕ್ಷಣೆ ಮಾಡಿದ್ದರಿಂದಲೇ ಇಂದು ನಾವೆಲ್ಲರೂ ವಚನ ಸಾಹಿತ್ಯವನ್ನು ಓದುತ್ತಿದ್ದೇವೆ ಎಂದು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಹೇಳಿದರು.ಪಟ್ಟಣದ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ತಾಲೂಕಾಡಳತದಿಂದ ಮಂಗಳವಾರ ಹಮ್ಮಿಕೊಂಡಿದ್ದ ಡಾ.ಫ.ಗು.ಹಳಕಟ್ಟಿ ಅವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಡಾ.ಫ.ಗು.ಹಳಕಟ್ಟಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು, ವಚನ ಸಾಹಿತ್ಯ ಸಂರಕ್ಷಣೆಗಾಗಿ ಡಾ.ಹಳಕಟ್ಟಿ ಅವರು ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟಿದ್ದರು. ಈ ಮೂಲಕ ಅವರು ಜಗತ್ತಿಗೆ ವಚನಸಾಹಿತ್ಯವನ್ನು ಉಳಿಸಿದ್ದಾರೆ. ಸರ್ಕಾರವು ಇವರ ಜಯಂತಿ ದಿನವನ್ನು ವಚನ ಸಾಹಿತ್ಯ ಸಂರಕ್ಷಣಾ ದಿನವನ್ನಾಗಿ ಆಚರಿಸಬೇಕೆಂದು ಆದೇಶ ಹೊರಡಿಸಿದೆ. ವಚನ ಸಾಹಿತ್ಯದಲ್ಲಿರುವ ಸಂದೇಶಗಳನ್ನು ಅರಿತು ಮುನ್ನೆಡೆದರೆ ಸುಂದರ ಬದುಕು ರೂಪಿಸಿಕೊಳ್ಳಬಹುದು ಎಂದರು.ನಿವೃತ್ತ ಪ್ರಾಧ್ಯಾಪಕ ಪಿ.ಎಲ್.ಹಿರೇಮಠ ಮಾತನಾಡಿ, ವಚನ ಸಾಹಿತ್ಯವನ್ನು ನಮ್ಮ ಸಾರಸ್ವತ ಲೋಕಕ್ಕೆ ಡಾ.ಫ.ಗು.ಹಳಕಟ್ಟಿ ಕೊಡುಗೆಯಾಗಿ ನೀಡಿದ್ದಾರೆ. ಅವರು ಸಂಕಷ್ಟದ ಬದುಕಿನಲ್ಲಿಯೂ ವಚನ ಸಾಹಿತ್ಯವನ್ನು ಪ್ರಚಾರ,…
ವಿಜಯಪುರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಯುವನಿಧಿ ಯೋಜನೆಯಡಿ ಅರ್ಜಿ ಸಲ್ಲಿಸಿರುವ ಜಿಲ್ಲೆಯ ಅರ್ಹ ಫಲಾನುಭವಿಗಳು ತಮ್ಮ ಅರ್ಜಿ ಬಾಕಿ ಇದ್ದಲ್ಲಿ, ಅರ್ಜಿ ಸ್ಥಿತಿಗತಿ ಪರಿಶೀಲಿಸಿಕೊಳ್ಳಲು ಜಿಲ್ಲೆಯ ಉದ್ಯೋಗಾಧಿಕಾರಿಗಳ ಕಚೇರಿ ಹಾಗೂ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರ ಕಚೇರಿ ಅಥವಾ ಸಹಾಯಕ ಉದ್ಯೋಗಾಧಿಕಾರಿ (ಮೊ.೮೧೨೩೮೮೦೦೮೪) ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ವಿಜಯಪುರ: ವಿಜಯಪುರದ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜುಲೈ ೪ರಂದು ಬೆಳಗ್ಗೆ ೯ ಗಂಟೆಗೆ ವಿವಿಧ ಬೆಳೆಗಳಲ್ಲಿ ಸೂಕ್ಷ್ಮ ನೀರಾವರಿ ಘಟಕಗಳ ಉಪಯೋಗಗಳು, ಅಳವಡಿಕೆ ಮತ್ತು ನಿರ್ವಹಣೆ ವಿಷಯದ ಕುರಿತು ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಕೃಷಿ ಅಧಿಕಾರಿಗಳಾದ ಶ್ರೀಮತಿ ಫಾತೀಮಾ ಬಾನು ಸುತಾರ (ಮೊ:೯೮೮೬೧೩೪೩೧೦) ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ವಿಜಯಪುರ: ನಿಡಗುಂದಿ ೧೧೦/೧೧ ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ೧೧ ಕೆ.ವಿ ಬ್ರೆಕರ್ಗಳ ಬದಲಾವಣೆ ಕಾರ್ಯ ಕೈಗೊಳ್ಳಲಾಗುವುದರಿಂದ ೧೧೦ ಕೆವಿ ನಿಡಗುಂದಿ ಉಪಕೇಂದ್ರದಿಂದ ಹೊರ ಹೋಗುವ ೧೧ ಕೆ.ವಿ ಮಾರ್ಗಗಳಾದ ಹುಲ್ಲೂರು, ಆಲಮಟ್ಟಿ, ಜಟ್ಟಗಿ, ಕಾಶಿನಕುಂಟಿ, ನಿಡಗುಂದಿ ಹಾಗೂ ಚಿಮ್ಮಲಗಿ ಮಾರ್ಗಗಳಲ್ಲಿ ಜುಲೈ ೪ರಂದು ಬೆಳಿಗ್ಗೆ ೯ ರಿಂದ ಜುಲೈ ೭ ರಂದು ಸಾಯಂಕಾಲ ೬ ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸಬೇಕು ಎಂದು ಬಸವನ ಬಾಗೇವಾಡಿ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
