Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಅವರು ಜುಲೈ ೪ ಹಾಗೂ ೬ರಂದು ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಲಿದ್ದಾರೆ.ಜುಲೈ ೪ ರಂದು ಬೆಳಿಗ್ಗೆ ವಿಜಯಪುರಕ್ಕೆ ಆಗಮಿಸಿ, ಸ್ವೀಪ್ ಕಾರ್ಯಕ್ರಮಗಳ ಅನುಷ್ಠಾನ, ಇಎಲ್ಸಿ ಕಾರ್ಯಕ್ರಮಗಳು ಹಾಗೂ ಕ್ಯಾಲೆಂಡರ್ ಆಫ್ ಇವೆಂಟ್ಸ್, ಮುಂಬರುವ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯಕ್ರಮ-೨೦೨೫ರ ಕುರಿತು ಸ್ಥಳೀಯ ಅಧಿಕಾರಿಗಳೊಂದಿಗೆ ಚರ್ಚೆ ಮಾಡುವರು. ಅಂದು ಸಾಯಂಕಾಲ ಚಡಚಣಕ್ಕೆ ತೆರಳಿ ವಾಸ್ತವ್ಯ ಮಾಡುವರು. ಜುಲೈ ೫ ರಂದು ಚಡಚಣದಲ್ಲಿ ತಾಲೂಕ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಲ್ಲಿನ ಇಎಲ್ಸಿ ಗಳಿಗೆ ಭೇಟಿ ನೀಡಿ, ವಿಜಯಪುರಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಜುಲೈ ೬ರಂದು ವಿಜಯಪುರದಿಂದ ಬೆಂಗಳೂರಿಗೆ ರೈಲು ಮೂಲಕ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ವಿಜಯಪುರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ೨೦೧೯ನೇ ಕ್ಯಾಲೆಂಡರ್ ವರ್ಷದಿಂದ ೨೦೨೩ನೇ ಕ್ಯಾಲೆಂಡರ್ ವರ್ಷಗಳಿಗೆ ಟೀಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚಿಸಲಾಗಿದ್ದು,ಪ್ರಶಸ್ತಿಗೆ ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.ಆಯ್ಕೆ ಸಮಿತಿ: ಹೈಕೋರ್ಟ್ ನಿವೃತ್ತ ನ್ಯಾಯಾಧೀಶರಾದ ಪಿ.ಎನ್.ದೇಸಾಯಿ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿಯಲ್ಲಿ ಹಿರಿಯ ಪತ್ರಕರ್ತರಾದ ಡಾ.ಈಶ್ವರ ದೈತೋಟ, ಶಾಂತಲಾ ಧರ್ಮರಾಜ್ ಹಾಗೂ ಎಂ.ಎಸ್.ಮಣಿ ಸದಸ್ಯರಾಗಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ.ಟಿಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ:ಕನ್ನಡದ ಹಿರಿಯ ಪರ್ತಕರ್ತ ಟಿ.ಎಸ್. ರಾಮಚಂದ್ರರಾವ್ ಅವರ ನೆನಪಿನಲ್ಲಿ ಸರ್ಕಾರ ಟಿಯೆಸ್ಸಾರ್ ಪ್ರಶಸ್ತಿ ನಿಡುತ್ತಾ ಬಂದಿದೆ. ಪ್ರಶಸ್ತಿಯ ಮೊತ್ತ ೨ ಲಕ್ಷ ರೂ. ಆಗಿದ್ದು, ಕನ್ನಡ ಪತ್ರಿಕೋದ್ಯಮ, ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮದಲ್ಲಿ ಅಥವಾ ಎರಡರಲ್ಲೂ ಒಟ್ಟಿಗೆ ಕನಿಷ್ಠ ೩೦ ವರ್ಷಗಳ ಸೇವೆ ಸಲ್ಲಿಸಿರಬೇಕು. ಜೊತೆಗೆ ಕನ್ನಡ ಕ್ಷೇತ್ರಕ್ಕೆ ಭಾಷೆಯ ಬೆಳವಣಿಗೆಗೆ ವಿಶೇಷ ಕೊಡುಗೆ ನೀಡಿರುವವರನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರತಿ ಕ್ಯಾಲೆಂಡರ್…
ವಸತಿ ನಿಲಯಗಳ ಪರಿಶೀಲನೆ ಮಾಡಿದ ಜಿಪಂ ಸಿಇಒ ರಿಷಿ ಆನಂದ್ ಸೂಚನೆ ವಿಜಯಪುರ: ವಸತಿ ನಿಲಯಗಳಲ್ಲಿ ಅಡುಗೆ ಕೋಣೆ, ಭೋಜನಾಲಯ, ದಾಸ್ತಾನು ಕೊಠಡಿ, ಸ್ನಾನದ ಗೃಹಗಳು, ಶುದ್ಧ ಕುಡಿಯುವ ನೀರಿನ ಘಟಕಗಳ ಸ್ವಚ್ಚತೆ ಹಾಗೂ ಕಲ್ಪಿಸಿರುವ ಮೂಲಭೂತ ಸೌಲಭ್ಯಗಳನ್ನು ಪ್ರತಿದಿನವೂ ನಿರ್ವಹಣೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಸೂಚಿಸಿದರು.ಅವರು ಸೋಮವಾರ ವಿಜಯಪುರ ನಗರದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಮೂರು ಬಾಲಕಿಯರ ವಸತಿ ನಿಲಯಗಳು ಹಾಗೂ ಎರಡು ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಗಳಿಗೆ ಭೇಟಿ ನೀಡಿ, ಅಲ್ಲಿನ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲಿನೆ ನಡೆಸಿ, ಅಧಿಕಾರಿಗಳಿಗೆ ಸೂಚನೆ ನೀಡಿದರು.ವಿದ್ಯಾರ್ಥಿಗಳಿಗೆ ಸಮಯಾನುಸಾರ ಉಪಹಾರ, ಊಟ, ಶುದ್ಧ ಕುಡಿಯುವ ನೀರು ಮತ್ತು ಮೂಲಸೌಕರ್ಯಗಳನ್ನು ಒದಗಿಸಲು ಆಧ್ಯತೆ ನೀಡಬೇಕು. ವಸತಿ ನಿಲಯದ ಗ್ರಂಥಾಲಯಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ಪುಸ್ತಕಗಳು, ದಿನಪತ್ರಿಕೆಗಳು, ಮಾಸ ಪತ್ರಿಕೆಗಳನ್ನು ಪೂರೈಸಬೇಕು. ಗಣಕಯಂತ್ರ ಕೊಠಡಿಗಳಲ್ಲಿ ಕಡ್ಡಾಯವಾಗಿ ಇಂಟರ್ನೆಟ್ ವ್ಯವಸ್ಥೆ ಒದಗಿಸಬೇಕು. ಪ್ರತಿ ಮಾಹೆ…
ವಿಜಯಪುರ: ವಿಜಯಪುರ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ ಶಿವಾನಂದ ಮಾಸ್ತಿಹೊಳಿ ಇವರಿಗೆ ರಾಜ್ಯ ಸರ್ಕಾರದಿಂದ ‘ಶ್ರೇಷ್ಠ ವೈದ್ಯ ಪ್ರಶಸ್ತಿ’ಯನ್ನು ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ವೈದ್ಯರ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಿದರು.ಈ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಪ್ರಧಾನ ಕಾರ್ಯದರ್ಶಿಗಳಾದ ಹರ್ಷ ಗುಪ್ತಾ ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಆರ್ಸಿಎಚ್ ಅಧಿಕಾರಿಗಳಾದ ಡಾ ಕೇಶರ್ ಸಿಂಗ್ ಗುಂಡಬಾವಡಿ ಇವರಿಗೆ ಉತ್ತಮ ಆರ್ಸಿಎಚ್ ವಿಭಾಗದಲ್ಲಿ ಹಾಗೂ ಜಿಲ್ಲಾ ಆಸ್ಪತ್ರೆಯ ಕಣ್ಣಿನ ವಿಭಾಗದ ವೈದ್ಯರಾದ ಡಾ. ಮೀನಾಕ್ಷಿ ಮುತ್ತಪ್ಪನವರ್ ಅವರಿಗೆ ಉತ್ತಮ ವೈದ್ಯರೆಂದು ಹಾಗೂ ಇಂಡಿ ತಾಲೂಕಾ ವೈದ್ಯಾಧಿಕಾರಿ ಡಾ ಅರ್ಚನಾ ಕುಲಕರ್ಣಿ, ಮುಳವಾಡ ವೈದ್ಯಾಧಿಕಾರಿ ಡಾ. ನಂದಿನಿ ಇವರುಗಳಿಗೆ ರಾಜ್ಯ ಸರ್ಕಾರದ ವತಿಯಿಂದ ಪ್ರಶಸ್ತಿ ನೀಡಲಾಯಿತು.ಪ್ರಶಸ್ತಿ ಸ್ವೀಕರಿಸಿದ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ ಅವರಿಗೆ ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ…
ಎಸ್.ಬಿ ಕಲಾ & ಕೆ.ಸಿ.ಪಿ ವಿಜ್ಞಾನ ಕಾಲೇಜ್ನಲ್ಲಿ ಡಾ.ಫ.ಗು.ಹಳಕಟ್ಟಿ ಜನ್ಮದಿನ | ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ವಿಜಯಪುರ: ೧೨ನೇ ಶತಮಾನದ ನಂತರ ವಚನ ಸಾಹಿತ್ಯಕ್ಕೆ ಪುನರ್ ಚೈತನ್ಯವನ್ನು ತಂದು ಕೊಟ್ಟು ಕೀತಿ೯ ಹಳಕಟ್ಟಿ ಅವರಿಗೆ ಸುಲ್ಲುತ್ತದೆ. ಬಸವಾದಿ ಶರಣರ ವಚನ ಸಾಹಿತ್ಯವನ್ನು ರಚಿಸಿ ಹೊದರು ಅದನ್ನು ಬೆಳಕಿಗೆ ತರುವ ಕೆಲಸವನ್ನು ಹಳಕಟ್ಟಿಯವರು ಮಾಡಿದರು ಎಂದು ವೈದ್ಯಾಧಿಕಾರಿ ಡಾ. ದೀಪಮಾಲಾ ಪಾಟೀಲ ಹೇಳಿದರು.ನಗರದ ಬಿ.ಎಲ್.ಡಿ. ಈ ಸಂಸ್ಥೆ ಎಸ್.ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ, ವಿಜಯಪುರ, ಕನ್ನಡ ವಿಭಾಗ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಮತ್ತು ಕದಳಿ ಮಹಿಳಾ ವೇದಿಕೆ ಸಂಯುಕ್ತಾಶ್ರಯದಲ್ಲಿ ದಿನಾಂಕ ೦೨-೦೭-೨೦೨೪ ರಂದು ಡಾ.ಫ.ಗು.ಹಳಕಟ್ಟಿ ಅವರ ೧೪೪ನೇ ಜನ್ಮದಿನದ ಅಂಗವಾಗಿ “ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ” ಯ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಒಂದು ವಿಶ್ವವಿದ್ಯಾಲಯ ಸಾಧಿಸಿದಷ್ಟು ಕೆಲಸವನ್ನು ಏಕಾಂಗಿ ವೀರರಾಗಿ ಸಾಧಿಸಿದವರು, ಅವರು ಒಂದು ವ್ಯಕ್ತಿಯಾಗಿರದೆ ಒಂದು ಶಕ್ತಿಯಾಗಿ ಬದುಕಿದರು. ಹಳಕಟ್ಟಿಯವರ ಜೀವನ ಇಂದಿನ ಯುವಕರಿಗೆ…
ಕೆಂಭಾವಿ: ಕರ್ನಾಟಕ ಪುರಸಭೆಗಳ ಅಧಿನಿಯಮ 1964 ರ ಪ್ರಕರಣ 11(1) ಬಿ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲ್ಲಾಯಿಸಿ ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರಪಟ್ಟಣದ ಪುರಸಭೆಗೆ ಕರ್ನಾಟಕ ಸರ್ಕಾರದಿಂದ ನಾಮ ನಿರ್ದೇಶನಗೊಂಡ ಸದಸ್ಯರಾದ, ದೇವಿಂದ್ರಪ್ಪ ಭೀಮರಾಯ, ಪರಶುರಾಮ ಮಡಿವಾಳಪ್ಪ , ದಾವಲಸಾಬ್ ಸೋಪಿಸಾಬ್ ನಾಶಿ, ಶಿವಶಂಕರ ಶಿವರೆಡ್ಡಿ ಖಾನಾಪುರ, ಸಂಗಮ್ಮ ಆರ್ ಯರಗಲ್ ಇವರುಗಳಿಗೆ ಮಂಗಳವಾರ ಪುರಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.ಸನ್ಮಾನ ಸ್ವೀಕರಿಸಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಶಿವಶಂಕರ ಶಿವರೆಡ್ಡಿ ಖಾನಾಪುರ ಅವರು, ನನ್ನನ್ನು ಸೇರಿ ಐದು ಜನರನ್ನು ಪುರಸಭೆಗೆ ನಾಮನಿರ್ದೇಶನ ಮಾಡಲು ಕಾರಣೀಭೂತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಪುರ, ಪೌರಾಡಳಿತ ನಿರ್ದೇಶನಾಲಯ ಬೆಂಗಳೂರು, ಮಾಜಿ ಜಿಪಂ ಸದಸ್ಯ ಲಿಂಗನಗೌಡ ಮಾಲಿ ಪಾಟೀಲ್, ಮಾಜಿ ಜಿಪಂ ಅಧ್ಯಕ್ಷ ಸಿದ್ದನಗೌಡ ಪೋಲೀಸ್ ಪಾಟೀಲ್ ಮತ್ತು ಪಕ್ಷದ ಹಿರಿಯ ಮುಖಂಡರು, ಕೆಪಿಸಿಸಿ ಪದಾಧಿಕಾರಿಗಳಿಗೆ ಕೃತಜ್ಞತೆಗಳನ್ನು ಅರ್ಪಿಸಿದರು.ಇದೇ ವೇಳೆ ಮುಖ್ಯಾಧಿಕಾರಿಪುರಸಭೆ ಹಾಲಿ ಮತ್ತು ಮಾಜಿ ಸದಸ್ಯರು ಹಾಗೂ ಸಿಬ್ಬಂದಿ…
“ವೀಣಾಂತರಂಗ”- ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ – ಗದಗ ಪತ್ನಿ ಸೂಜಿಯಲ್ಲಿ ದಾರವನ್ನು ಫೋಣಿಸಲು ಒದ್ದಾಡುತ್ತಿದ್ದಾಗ ನಸುನಕ್ಕ ಆಕೆಯ ಪತಿ ಆಯ್ತಲ್ಲ ನಿನಗೂ ಚಾಲಿಸು.. ತಗೋಬೇಕಾಯ್ತು ಚಾಳೀಸು ಅಂತ ತಮಾಷೆ ಮಾಡಿದ. ಹೆಂಡತಿಯೇನು ಕಡಿಮೆಯೇ!? ಸೇರಿಗೆ ಸವಾಸೇರು ಎಂಬಂತೆ ನಿಮಗಿನ್ನೇನು ಕಮ್ಮಿ ಅನ್ಕೊಂಡ್ರ?? ನೆತ್ತಿ ಮೇಲಂತೂ ಕೂದಲಿಲ್ಲ… ಉಳಿದಿರೋ ತಲೆ ಕೂದಲಿಗೆ ಬಣ್ಣ ಹಚ್ಚೋಕೆ ಶುರುವಾಗಿ ವರ್ಷಗಳೇ ಕಳೆದು ಹೋಯಿತು, ಕನ್ನಡಕ ಇಲ್ದೆ ಪರದಾಡ್ತಿರಿ, ನೀವೇ ಇಟ್ಟ ವಸ್ತುಗಳು ಸಿಗದೇ ಇದ್ದಾಗ ಮನೆ ಮಂದಿ ಮೇಲೆ ಹರಿಹಾಯ್ತಿರಿ.. ಆಗ್ತಾ ಬಂತು ನಿಮಗೂ ಹತ್ತತ್ರ ಐವತ್ತು.. ಸುಮ್ನೆ ಮಾತಾಡಿ ತಂದ್ಕೋಬೇಡಿ ಇಲ್ಲದ ಆಪತ್ತು ಎಂದು ಉತ್ತರಿಸಿದಳು. ಮೇಲಿನ ಪತಿ ಪತ್ನಿಯರ ಸಂಭಾಷಣೆ ಮನಸ್ಸಿಗೆ ಮುದ ನೀಡಿದರೂ ಬದುಕಿನ ನಗ್ನ ಸತ್ಯವನ್ನು ತಿಳಿಸಿ ಹೇಳುತ್ತದೆ. ಬದುಕಿನ ಅರ್ಧ ಆಯಸ್ಸು ಮುಗಿದುಹೋಗುವ ಈ ಗಳಿಗೆಯಲ್ಲಿ ಬಾಲ್ಯ ಸಹಜ ತುಂಟಾಟ, ಯೌವನದ ಚೆಲ್ಲಾಟ ಮತ್ತು ಹೊಯ್ದಾಟಗಳು, ಬದುಕಿನ ಗುರಿಯತ್ತ ಓಟ, ನೌಕರಿಗಾಗಿನ ಅಲೆದಾಟ, ಸಂಗಾತಿಯ ಹುಡುಕುವಿಕೆಗಾಗಿ…
ವಿಜಯಪುರ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮಿಗಳು ಜು.೩ ರಂದು ನಗರಕ್ಕೆ ಆಗಮಿಸಿ ಶ್ರೀಕೃಷ್ಣ-ವಾದಿರಾಜ ಮಠದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ದಿನಾಂಕ ೪ ರಂದು ಬೆಳಿಗ್ಗೆ ಶ್ರೀಮಠದಲ್ಲಿ ಭಕ್ತಾದಿಗಳಿಂದ ಸಾಮೂಹಿಕ ಪಾದಪೂಜೆ ಸ್ವೀಕರಿಸಿ ನಂತರ ದೇಣಿಗೆ ನೀಡಿದ ಭಕ್ತರ ಮನೆಗೆ ಭೇಟಿ ನೀಡಲಿದ್ದಾರೆ. ಸಾಯಂಕಾಲ ೫ ಗಂಟೆಗೆ ಶ್ರೀಗಳನ್ನು ನಂಜನಗೂಡು ಶ್ರೀರಾಘವೇಂದ್ರ ಸ್ವಾಮಿಗಳ ಮಠದಿಂದ ಅಲಂಕೃತ ವಾಹನದಲ್ಲಿ ಶೋಭಾ ಯಾತ್ರೆ ಮೂಲಕ ಶ್ರೀಕೃಷ್ಣ-ವಾದಿರಾಜ ಮಠಕ್ಕೆ ಕರೆತರಲಾಗುವದು. ಶ್ರೀರಾಮ ಮಂದಿರ ಟ್ರಸ್ಟ ಸದಸ್ಯರೂ ಆಗಿರುವ ಶ್ರೀಗಳು ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರತಿಷ್ಠಾಪನೆ ಮತ್ತು ಮಂಡಳ ಪೂಜೆಯನ್ನು ಯಶಸ್ವಿಯಾಗಿ ನೆರವೇರಿಸಿದ್ದಾರೆ. ಮತ್ತು ಅವರಿಗೆ ಈಗ ಅರವತ್ತು ವಸಂತಗಳು ಪೂರ್ಣಗೊಂಡ ಸಂದರ್ಭದಲ್ಲಿ ನಗರದ ಸಮಸ್ತ ಭಕ್ತ ಮಂಡಳಿ ಪರವಾಗಿ ಅವರನ್ನು ಗೌರವಿಸಲಾಗುವದು. ಹಾಗೆಯೆ ಶ್ರೀಗಳು ಸಂಕಲ್ಪಿಸಿದಂತೆ ಅಖಿಲ ಭಾರತ ಮಧ್ವ ಮಹಾಮಂಡಳ ಗಂಗಾಬಾಯಿ ಆದ್ಯ ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ನಿರ್ಮಾಣ ಕಾರ್ಯದ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.ದಿನಾಂಕ ೫ ರಂದು ಶ್ರೀಗಳು ಬೆಳಿಗ್ಗೆ ಶ್ರೀಮಠದಲ್ಲಿ ಸಾಮೂಹಿಕ…
ಡಾ.ಫ.ಗು. ಹಳಕಟ್ಟಿ ಅವರ ಜನ್ಮದಿನ ಮತ್ತು ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ವಿಜಯಪುರ: ದಾರ್ಶನಿಕರ ಜನ್ಮದಿನಾಚರಣೆಯನ್ನು ಜಿಲ್ಲಾಡಳಿತ ಅರ್ಥಪೂರ್ಣವಾಗಿ ಆಯೋಜಿಸಿ, ಅವರ ಸಾರ್ಥಕ ಸಾಧನೆಯನ್ನು ಅವರ ಜೀವನ ಮೌಲ್ಯವನ್ನು ವಿಚಾರಗಳನ್ನು ಯುವಪೀಳಿಗೆ ಅರಿತುಕೊಳ್ಳಬೇಕು ಎಂದು ವಿಜಯಪುರ ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ ಇವರ ಸಹಯೋಗದಲ್ಲಿ ಮಂಗಳವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ಅವರ ಜನ್ಮದಿನಾಚರಣೆ ಮತ್ತು ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.ವಿಶೇಷ ಉಪನ್ಯಾಸ ನೀಡಿದ ಡಾ.ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ಸಂಯೋಜನಾಧಿಕಾರಿ ಡಾ.ವಿ.ಡಿ. ಐಹೊಳ್ಳಿ, ೧೨ನೇ ಶತಮಾನದ ಶರಣರ ವಚನ ಸಾಹಿತ್ಯವನ್ನು ಸಂಗ್ರಹಿಸಿ ಸಂರಕ್ಷಿಸಿಕೊಟ್ಟು, ಮುಂದಿನ ತಲೆಮಾರಿಗೆ ತಲುಪಿಸುವ ಮಹತ್ತರ ಕಾರ್ಯ ನಿರ್ವಹಿಸಿದ ದಾರ್ಶನಿಕ ವಚನ ಪಿತಾಮಹ ಡಾ.ಫ.ಗು. ಹಳಕಟ್ಟಿ ಅವರ ಕಾರ್ಯ ಅನನ್ಯವಾಗಿದೆ ಎಂದರು.ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವುದರಲ್ಲಿ ಹಳಕಟ್ಟಿಯವರ ಹೆಸರು ಅಜರಾಮರವಾಗಿದೆ. ಅನೇಕ…
ವಿಜಯಪುರ: ನಂಬಿ ಬಂದ ರೋಗಿಗಳನ್ನು ಆರೈಕೆ ಮಾಡುವ ವೈದ್ಯರು ವಿಶ್ವ ಭಾವೈಕ್ಯತೆಯ ಪ್ರತೀಕ. ನಮ್ಮೆಲ್ಲರ ಆರೋಗ್ಯವನ್ನು ಸುಸ್ಥಿರವಾಗಿರಿಸಿ, ಸುಂದರ ಆರೋಗ್ಯಪೂರ್ಣ ಸಮಾಜದ ನಿರ್ಮಾತೃಗಳೇ ವೈದ್ಯರು ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ತಾಲೂಕಿನ ನಾಗಠಾಣ ಗ್ರಾಮದಲ್ಲಿ ಸೋಮವಾರ ಸಂಜೆ ರಾಷ್ಟ್ರೀಯ ವೈದ್ಯರ ದಿನದ ಪ್ರಯುಕ್ತ ವೈದ್ಯ ಡಾ.ಮೋಹನ ಎಂ ಭೋಸಲೆ ಅವರ ಸನ್ಮಾನ ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದರು.ಓರ್ವ ಆದರ್ಶ ವೈದ್ಯ ತನ್ನ ಕುಟುಂಬದ ನೋವು ನಲಿವುಗಳನ್ನು ಬದಿಗಿರಿಸಿ ರೋಗಿಯನ್ನು ಗುಣಪಡಿಸುವ ರೀತಿ ನಿಜಕ್ಕೂ ಅತ್ಯುದ್ಭುತ. ಪ್ರೀತಿ ತುಂಬಿದ ಮಾತುಗಳಿಂದ ರೋಗಿಗಳಲ್ಲಿ ಆಪ್ತ ಸಂಜೀವಿನಿಯಂತೆ, ಸ್ನೇಹಿತನಂತೆ ಕಂಡು ಬರುವ ಡಾ.ಭೋಸಲೆ ಅವರ ಗ್ರಾಮೀಣ ಸೇವೆ ಅನುಪಮವಾದುದು ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಇಂಡಿ ಐಟಿಐ ಕಾಲೇಜಿನ ಪ್ರಾಚಾರ್ಯ ಪರಶುರಾಮ ರಜನಿಕರ ಮಾತನಾಡಿ,ವೈದ್ಯರು ನಮ್ಮ ಎರಡನೇ ತಂದೆ ತಾಯಿಗಳು ಇದ್ದಂತೆ. ಡಾ.ಭೋಸಲೆ ಅವರು ನಾಗಠಾಣದಲ್ಲಿಯೇ 50 ವರ್ಷದ ಸೇವೆ ಪೂರೈಸಿದ್ದು ಅವಿಸ್ಮರಣೀಯ ಎಂದು ಹೇಳಿದರು.ಮುಂಬೈ ನಗರದ ಗಿರೀಶ ಸಾರವಾಡ ಮಾತನಾಡಿ,ತಮ್ಮ ಬಂಧು ಬಳಗದ ಪ್ರೀತಿಯ ಪರಿಸರವನ್ನು…
