Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಡಾವಣಗೆರೆ: ನಗರದಲ್ಲಿ ಸೋಮವಾರ ನಗರದ ಹರ್ಡೇಕರ್ ಮಂಜಪ್ಪ ಇವರ ಪುತ್ಥಳಿಗೆ ಮಹಾನಗರ ಪಾಲಿಕೆ ಅಧ್ಯಕ್ಷ ವಿನಾಯಕ ಪೈಲ್ವಾನ್ ಹಾಗೂ ಮಹಾನಗರ ಪಾಲಿಕೆ ಆಯುಕ್ತೆ ಶ್ರೀಮತಿ ರೇಣುಕಾ ಇವರು ಮಾಲಾರ್ಪಣೆ ಮಾಡುವ ಮೂಲಕ ಪತ್ರಿಕಾ ದಿನಾಚರಣೆ ಆಚರಿಸಲಾಯಿತು.ಈ ಸಂದರ್ಭದಲ್ಲಿಕಾನಿಪ ಅಧ್ಯಕ್ಷ ಇ.ಮೋ .ಮಂಜುನಾಥ,ಉಪಾಧ್ಯಕ್ಷ ತಿಪ್ಪೇಸ್ವಾಮಿ, ಖಜಾಂಚಿ ಬದರಿನಾಥ್, ಕಾರ್ಯದರ್ಶಿಗಳಾದ ನಿಂಗೋಜಿ ರಾವ್, ಚನ್ನವೀರಯ್ಯ, ಹಿರಿಯ ಪತ್ರಕರ್ತರಾದ ಮಂಜುನಾಥ, ಬಕ್ಕೇಶ್ ನಾಗನೂರು, ಪದಾಧಿಕಾರಿಗಳಾದ ವೇದಮೂರ್ತಿ, ಇಂದುದರ್ ನಿಷಾನಿಮತ್, ರವಿ, ಮಂಜುನಾಥ್ ಕಾಡಜ್ಜಿ, ಸದಸ್ಯರುಗಳಾದ ಚನ್ನಬಸವ ಶೀಲವಂತ, ರಾಜಶೇಖರ್, ನಿಂಗರಾಜು, ವಿನಾಯಕ್ ಜಾದವ್, ಹನುಮಂತಪ್ಪ , ಸೋಮಶೇಖರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವಿಜಯಪುರ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹಬ್ಬಳ್ಳಿ ಹಾಗೂ ಬಿ.ಎಲ್.ಡಿ.ಇ.ಎ ಸಂಸ್ಥೆಯ ಕಾನೂನು ಕಾಲೇಜಿನ ಸಹಯೋಗದಲ್ಲಿ ಅಂತ ಕಾಲೇಜು ಮಟ್ಟದಲ್ಲಿ ಕಾನೂನು ವಿದ್ಯಾರ್ಥಿ ವಿದ್ಯಾರ್ಥಿಣಿಯರಿಗಾಗಿ ಆಯೋಜಿಸಿದ ಚೆಸ್ ಟೋರ್ನಾಮೆಂಟ್ ಹಮ್ಮಿಕೊಂಡ ಸಂದರ್ಭದಲ್ಲಿ ವಿಜಯಪುರದ ಅಂಜುಮನ್ ಕಾನೂನು ಕಾಲೇಜಿನ ಐದು ವಿದ್ಯಾರ್ಥಿಗಳಾದ ಸಮೀರ್ ಖಾಜಿ (ಕ್ಯಾಪ್ಟನ್), ಅಮೀರ ಎನ್. ಕೋರ್ತಿ, ಪ್ರದೀಪ ಬಳಗಾನೂರ, ಆನಂದ ಕಾಳಗಿ, ಶಶಿಕುಮಾರ ನುಗ್ಗಿ ಇವರು ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದರು.ಸಮೀರ ಖಾಜಿ ಇವರು ಪ್ರಥಮ ಅತ್ಯುತ್ತಮ ಆಟಗಾರರೆಂದು ಪ್ರಶಸ್ತಿಗೆ ಭಾಜನರಾಗಿದ್ದಾರೆ.ದೈಹಿಕ ನಿರ್ದೇಶಕರಾದ ತೌಪಿಕ್ ಅಹ್ಮದ ಕೂಡಗಿ ವಿದ್ಯಾರ್ಥಿಗಳ ಸಾಧನೆಗೆ ಅಭಿನಂದಿಸಿ ಹರ್ಷವ್ಯಕ್ತಪಡಿಸಿದ್ದರು.ಇದೇ ಸಂದರ್ಭದಲ್ಲಿ ಅಂಜುಮನ್ ಕಾನೂನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಂತರ ಕಾಲೇಜು ಚೆಸ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಎಲ್ಲಾ ಚೆಸ್ ಆಟಗಾರರು ಮತ್ತು ದೈಹಿಕ ಶಿಕ್ಷಣ ನಿರ್ದೇಶಕರಿಗೆ ಅಭಿನಂದಿಸಿದ್ದಾರೆ.
ವಿಜಯಪುರ: ಕರುನಾಡ ಕನ್ನಡ ಕಲಾ ಸಿರಿ ಬಳಗ ಬೆಂಗಳೂರು ಕೊಡಮಾಡುವ 2024-25ನೇ ಸಾಲಿನ ಉತ್ತಮ ಕನ್ನಡ ಸಾಧಕ ಶಿಕ್ಷಕ ಪ್ರಶಸ್ತಿಗೆ ರಾಜಶೇಖರ ಕಂಬಾರವರು ಆಯ್ಕೆಯಾದ್ದಾರೆ.ಸಿಂದಗಿ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ದೇವರಹಿಪ್ಪರಗಿ ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕನ್ನಡ ಭಾಷಾ ಶಿಕ್ಷಕ ರಾಜಶೇಖರ ಕಂಬಾರ ಅವರು 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು 125ಕ್ಕೆ 125 ಅಂಕವನ್ನು ಪಡೆಯುವಲ್ಲಿ ಕಾಯಾ, ವಾಚಾ, ಮನಸ್ಸಿನಿಂದ ಸೇವೆ ಸಲ್ಲಿಸಿ ವಿದ್ಯಾರ್ಥಿಗಳ ಸಾಧನೆಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದಕ್ಕಾಗಿ ಬೆಂಗಳೂರಿನ ಕರುನಾಡ ಕನ್ನಡ ಕಲಾ ಸಿರಿ ಬಳಗವು ಪ್ರಸಕ್ತ ಸಾಲಿನ ಉತ್ತಮ ಕನ್ನಡ ಸಾಧಕ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಿದೆ.ಈ ಸಾಧನೆಗೆ ಶಾಲೆಯ ಪ್ರಾಂಶುಪಾಲೆ ರೇಷ್ಮಾ ಜಾಧವ ಹಾಗೂ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದರು.
ವಿಜಯಪುರ: ಪ್ರತಿ ವರ್ಷದಂತೆ ಈ ವರ್ಷವೂ ಸಹ ವಿಜಯಪುರ ತಾಲೂಕಿನ ಜಂಬಗಿ (ಆ) ಗ್ರಾಮದಲ್ಲಿ ಹಿಂದೂ ಮುಸ್ಲಿಂ ಭಾವ್ಯಕತ್ಯೆಯ ಹಜರತ್ ಪೀರ ಬಡೇಸಾಹೇಬ ದರ್ಗಾ (ಉರುಸು) ಕಾರ್ಯಕ್ರಮವು ದಿ ೦೧-೦೭-೨೦೨೪ ರಿಂದ ೦೩-೦೭-೨೦೨೪ರ ವರೆಗೆ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿದೆ.ದಿನಾಂಕ : ೦೧-೦೭-೨೦೨೪ ರಂದು ಸೋಮವಾರ ದಿವಸ ರಾತ್ರಿ ೧೦.೩೦ ಗಂಟೆಗೆ ಗ್ರಾಮದ ಮುಖ್ಯ ಬೀದಿಗಳಲ್ಲಿ ಹಾಯ್ದು ಹಜರತ್ ಪೀರ ಬಡೇಸಾಹೇಬ ಹಾಗೂ ಮೂಕಮತಾಯಿ ಗಂಧ ಏರಿಸುವ ಕಾರ್ಯಕ್ರಮ ಜರುಗುವದು.ದಿನಾಂಕ : ೦೨-೦೭-೨೦೨೪ ರಂದು ಮಂಗಳವಾರ ಹಜರತ್ ಪೀರ ಬಡೇಸಾಹೇಬ ದೇವರಿಗೆ ನೈವಿದ್ಯ ಹಾಗೂ ದೀಡ ನಮಸ್ಕಾರ ಕಾರ್ಯಕ್ರಮ ಜರುಗುವದು. ದಿನಾಂಕ : ೦೩-೦೭-೨೦೨೪ ರಂದು ಬುಧವಾರ ದಿವಸ ಹಜರತ್ ಪೀರ ಬಡೇಸಾಹೇಬ ದೇವರ ಬಾಸಿ ದೀಪ ಇಳಿಸುವ ಹಾಗೂ ಅನ್ನಪ್ರಸಾದ ಕಾರ್ಯಕ್ರಮ ಜರುಗುವದು ಎಂದು ಹಜರತ್ ಪೀರ ಬಡೇಸಾಹೇಬ ಉರುಸ ಕಮೀಟಿಯ ಮಹಾಂತರಾವ ದೇಶಮುಖ, ಮುತ್ತುವಲ್ಲಿ ಮಹ್ಮದ ಪೈಗಂಬರ ಮುಲ್ಲಾ ಹಾಗೂ ಸಿದ್ದು ಗೇರಡೆ, ಹಾಜಿಮಲಂಗ ಮುಲ್ಲಾ, ಕಲ್ಲಪ್ಪ ತಳವಾರ, ಸೈಪನಸಾಬ…
ವಿಜಯಪುರ: ಎಸ್.ಎಮ್.ಎನ್. ಸೌಹಾರ್ದದಲ್ಲಿ ಕೋಟ್ಯಾಂತರ ಹಣತೊಡಗಿಸಿ ಕೈಸುಟ್ಟುಕೊಂಡ ಠೇವಣಿದಾರರಿಗೆ ಶೀಘ್ರದಲ್ಲಿ ಕ್ಲೇಮ್ ಪಡೆದುಕೊಂಡು ಹಣ ಮರುಪಾವತಿ ಮಾಡಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ಎಸ್.ಎಮ್.ಎನ್. ಸೌಹಾರ್ದದ ವಂಚಿತ ಠೇವಣಿದಾರರ ಹೋರಾಟ ಸಮಿತಿ ಹಾಗೂ ಗ್ರಾಹಕರು ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ರೈತ ಮುಖಂಡ ಅರವಿಂದ ಕುಲಕರ್ಣಿ ಹಾಗೂ ಎನ್.ಕೆ. ಮನಗೊಂಡ, ಎಸ್.ಜಿ. ಸಂಗೋದಿಮಠ ಮಾತನಾಡಿ, ವಿಜಯಪುರ ಜಿಲ್ಲೆ ಸೇರಿದಂತೆ ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಎಸ್.ಎಮ್. ಎನ್. ಸೌಹಾರ್ದದಲ್ಲಿ ತೊಡಗಿಸಿದ ಹಣವನ್ನು ಆಡಳಿತ ಮಂಡಳಿ ೩೦ಕೋಟಿ ಹಣವನ್ನು ದುರುಪಯೋಗ ಪಡೆಸಿಕೊಂಡಿದ್ದಾರೆ. ಹೋರಾಟ ಪ್ರತಿಫಲವಾಗಿ ಸರಕಾರ ಎಚ್ಚೆತ್ತುಕೊಂಡು ಸಿಓಡಿ ತನಿಖೆ ನಡೆಸಿ ಸಕ್ಷಮ ಪ್ರಾಧಿಕಾರ ನೇಮಕ ಮಾಡಿ ಸಂಬಂಧಿಸಿದ ಸೌಹಾರ್ದದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಸೇರಿದಂತೆ ಇನ್ನುಳಿದ ಸಿಬ್ಬಂಧಿಯ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಈ ಆಸ್ತಿಗಳನ್ನು ಶೀಘ್ರದಲ್ಲಿ ನ್ಯಾಯಾಲಯದ ಅನುಮತಿ ಪಡೆದು ಹಾರಾಜು ಮಾಡಿ ನೊಂದ ಠೇವಣಿದಾರರಿಗೆ ಬಡ್ಡಿ ಸಮೇತ ಹಣ ಮರುಪಾವತಿಸಬೇಕು. ಈಗಾಗಲೇ ಎಸ್.ಎಮ್.ಎನ್. ಸೌಹಾರ್ದದ ವಿಶೇಷ ಅಧಿಕಾರಿ ಆಮ್ಲನ್ ಆದಿತ್ಯ ಬಿಸ್ವಾಸ ಅವರು…
ವಿಜಯಪುರ: ನಾನು ಜಾಸ್ತಿ ದುಡ್ಡು ಮಾಡಬೇಕಾಗಿದ್ರೆ ತೆಲುಗು ತಮಿಳು ಚಿತ್ರರಂಗಕ್ಕೆ ಹೋಗಬೇಕಾಗಿತ್ತು. ಆದ್ರೆ ಕನ್ನಡದ ಪ್ರೇಕ್ಷಕರು, ಅಭಿಮಾನಿಗಳು ಕೊಟ್ಟಿರೋ ಪ್ರೀತಿನೆ ಸಾಕು ಎಂದು ಕನ್ನಡದ ಚಿತ್ರಗಳಲ್ಲಿ ಹಾಸ್ಯ ಕಲಾವಿದನಾಗಿ ಪಾತ್ರ ಮಾಡುತ್ತಾ ಬಂದಿದ್ದೇನೆ, ಉತ್ತರ ಕರ್ನಾಟಕ ಭಾಗದ ಹಳ್ಳಿಗಳು ನನಗೆ ಚಿರಪರಿಚಿತ ಎಂದು ಕನ್ನಡದ ಖ್ಯಾತ ಹಾಸ್ಯ ಕಲಾವಿದ ಟೆನ್ನಿಸ್ ಕೃಷ್ಣ ಹೇಳಿದರು.ನಗರದ ಸೊಲ್ಲಾಪುರ ರಸ್ತೆಯಲ್ಲಿ ಕೆಫೆ ಇನ್ ಉದ್ಘಾಟಿಸಿ ಅವರು ಮಾತನಾಡಿದರು, ಡಾ,ರಾಜ್ ಕುಮಾರ್, ವಿಷ್ಣುವರ್ಧನ್ ಸೇರಿದಂತೆ ಹಲವು ನಟರೊಂದಿಗೆ ಪಾತ್ರ ಮಾಡಿರೋದು ಪ್ರೇಕ್ಷಕರು ಅಭಿಮಾನಿಗಳ ಆಶೀರ್ವಾದದಿಂದ, ನಾನು ಹುಟ್ಟಿದ್ದು ಬೆಂಗಳೂರು,ಈಗ ಸಿಂಗಾಪುರ ಆಗಿದೆ. ನಮ್ಮ ತಂದೆ ಟೆನ್ನಿಸ್ ಕೋಚ್ ಆಗಿದ್ದರು. ನಾನು ಟೆನ್ನಿಸ್ ಕೋಚ್ ಆಗಿದ್ದೆ, ಚಿತ್ರರಂಗಕ್ಕೆ ಬಂದ್ಮೇಲೆ ಟೆನ್ನಿಸ್ ಕೃಷ್ಣ ಅಂತ ಹೆಸರು ಇಟ್ಟುಕೊಂಡೆ, ಚಿತ್ರರಂಗದಲ್ಲಿ ಹೊನ್ನಾಳಿ ಕೃಷ್ಣ, ಬೆಕ್ಕಿನ ಕಣ್ಣು ಕೃಷ್ಣ ಇದ್ದಾರೆ. ಹೀಗಾಗಿ ಟೆನ್ನಿಸ್ ಕೃಷ್ಣ ಎಂದು ಹೆಸರು ಬದಲಾಯಿಸಿಕೊಂಡೆ, ನಾನು ಒಂದೇ ಒಂದು ಡ್ರಾಪ್ ಸಹಿತ ಮದ್ಯ ಸೇವನೆ ಮಾಡೋಲ್ಲ, ಆದ್ರು ಕುಡುಕನ…
ಮೆ:ಡಬ್ಲೂಆರ್ಎಸ್ಆರ್ ಪಾವರ್ ಟ್ರಾನ್ಸಮಿಶನ್ ದಿಂದ ವಿದ್ಯುತ್ ಪ್ರಸರಣ ಮಾರ್ಗ ನಿರ್ಮಾಣ ವಿಜಯಪುರ: ಜಿಲ್ಲೆಯ ಕೊಲ್ಹಾರ, ಬಸವನಬಾಗೇವಾಡಿ, ಬಬಲೇಶ್ವರ ಹಾಗೂ ತಿಕೋಟಾ ತಾಲೂಕಿನ ಒಟ್ಟು ೧೭೭ ಸ್ಥಳಗಳಲ್ಲಿ ವಿದ್ಯುತ್ ಗೋಪುರಗಳನ್ನು ಅಳವಡಿಸಲು ಏಕಾಏಕಿ ಹೋಗಿ ಕಾಮಗಾರಿ ಆರಂಭಿಸದೇ ಸಂಬಂಧಿಸಿದ ಜಮೀನಿನ ಭೂಮಾಲೀಕರಿಗೆ-ರೈತರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಸೂಕ್ತ ತಿಳುವಳಿಕೆ ನೀಡಿದ ನಂತರ ಕಾಮಗಾರಿ ಆರಂಭಿಸುವಂತೆ ಕಂಪನಿಯವರಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.ಅದಾನಿ ಗ್ರೂಪ್ನ ಮೆ: ಡಬ್ಲೂಆರ್ಎಸ್ಆರ್ ಪಾವರ್ ಟ್ರಾನ್ಸಮಿಶನ್ ಲಿ. ವತಿಯಿಂದ ೭೬೫ ಕೆ.ವಿ. ಪ್ರಸರಣ ಮಾರ್ಗವನ್ನು ಕೂಡಗಿ ವಿದ್ಯುತ್ ಸ್ಥಾವರದ (ನರೇಂದ್ರ-ಹೊಸ) ಸ್ವೀಕರಣಾ (ಕೂಡಗಿ) ಕೇಂದ್ರದಿಂದ ಪುಣೆ(ಜಿಐಎಸ್) ಸ್ವೀಕರಣಾ ಕೇಂದ್ರದವರೆಗೆ ನಿರ್ಮಿಸಲಾಗುತ್ತಿದ್ದು, ಸದರಿ ಕಂಪನಿಯವರು ಸರಿಯಾದ ಮಾಹಿತಿ ನೀಡದೇ ಹಾಗೂ ಪರಿಹಾರ ಸಿಗುವ ನೋಟಿಸ್ ರೈತರಿಗೆ ನೀಡದೇ ಏಕಾಏಕಿ ಹೊಲದಲ್ಲಿ ಕಾಮಗಾರಿ ಆರಂಭಿಸಿರುವ ಕುರಿತು ಸಂಬಂಧಿಸಿದ ಜಮೀನಿನ ರೈತರು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.ಈ ದೂರಿನ ಹಿನ್ನಲೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸದರಿ ಕಂಪನಿಯೊಂದಿಗೆ ಸಭೆ ನಡೆಸಿ ಸೂಚನೆ ನೀಡಿದ…
ವಿಜಯಪುರ: ಹಲಸಂಗಿ ಗೆಳೆಯರ ಪ್ರತಿಷ್ಠಾನದ ವತಿಯಿಂದ ಇಂಡಿ ತಾಲೂಕಿನ ಝಳಕಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ನಲ್ಲಿ ಶನಿವಾರ ವಿಶೇಷ ಉಪನ್ಯಾಸ ಕಾರ್ಯಕ್ರಮ ಜರುಗಿತು.ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಪ್ರೊ: ವಲ್ಲಭ ಕಬಾಡೆ ಅಧ್ಯಕ್ಷತೆ ವಹಿಸಿದ್ದರು.ಸಿಕ್ಯಾಬ್ ಮಹಿಳಾ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಮಲ್ಲಿಕಾರ್ಜುನ ಮೇತ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ನ ಉಪನ್ಯಾಸಕರಾದ ಡಾ.ರಮೇಶ ತೇಲಿ ಅವರು ಉಪನ್ಯಾಸ ನೀಡಿ, ಹಲಸಂಗಿ ಗೆಳೆಯರು ೮೦೦ ತ್ರಿಪದಿ ಗರತಿಹಾಡು ಸಂಗ್ರಹಿಸಿ ಅಚ್ಚರಿ ಮೂಡಿಸಿದ್ದು, ತಂದೆ ತಾಯಿಯ ಪ್ರೀತಿ ಹಾಗೂ ದಾಂಪತ್ಯ ಜೀವನದ ಮೌಲ್ಯ ಕುರಿತು ಹಾಗೂ ಹಲಸಂಗಿ ಗೆಳೆಯರು ಸ್ವಾತಂತ್ರ್ಯ ಹೋರಾಟದಲ್ಲಿ ಸಾಹಿತ್ಯದ ಮೂಲಕ ನೀಡಿದ ಕೊಡುಗೆಗಳು, ಮಧುರ ಚೆನ್ನರ ಜೀವನ ಹಾಗೂ ಮಾತಾ ಅರವಿಂದರ ದಾರಿಯ ಬಗ್ಗೆ ಪ್ರೊ: ಡಿ.ಭಿ.ಭಜಂತ್ರಿ ಮಾತನಾಡಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಹಲಸಂಗಿ ಪ್ರತಿಷ್ಠಾನದ ಸದಸ್ಯ ಕಾರ್ಯದರ್ಶಿ ಸಂತೋಷ ಭೋವಿ ಸ್ವಾಗತಿಸಿದರು.ಕಾರ್ಯಕ್ರಮದಲ್ಲಿ ಆರ್.ಎನ್.ಶಿಂಪಿ, ಜೆ.ಎಸ್.ಗಲಗಲಿ, ಚಿದಾನಂದ ಗಲಗಲಿ ಇತರರು ಉಪಸ್ಥಿತರಿದ್ದರು.ವಿರೇಶ ವಾಲಿ ಹಾಗೂ ತಂಡದವರು ಜಾನಪದ…
ವಿಜಯಪುರ: ಸೇವಾ ಮನೋಭಾವದ ಯುವಕರು ಸಂಘಟಿತರಾದರೆ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವಿದೆ ಎಂದು ಡಾ. ಸುರೇಶ್ ಕಾಗಲ್ಕರ್ ರೆಡ್ಡಿ ಹೇಳಿದರು.ನಗರದ ಶಿವಶರಣ ಹರಳಯ್ಯ ಅಂಧರ ಸಂಸ್ಥೆಯಲ್ಲಿ ಭಾರತ ಯುವ ವೇದಿಕೆ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಪಿಎಸ್ಐ ಸುರೇಶ ಮಂಟೂರ್ ಕೊಡ ಮಾಡಿದ ಸಮವಸ್ತ್ರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ವಿವೇಕಾನಂದರು ತಮ್ಮ ಬದುಕಿನಲ್ಲಿ ಸಾಕಷ್ಟು ಆದರ್ಶಗಳನ್ನು ಮೈಗೂಡಿಸಿಕೊಂಡಿದ್ದರು ಅದರಂತೆ ಭಾರತ ಯುವ ವೇದಿಕೆಯು ಕೂಡ ಯುವ ಮನಸುಗಳಿಂದ ಸಮಾಜಕ ಕಳಕಳಿಯ ಕಾರ್ಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವುದು ನಿಜಕ್ಕೂ ಉತ್ತಮ ಆದರ್ಶ ಕೆಲಸ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಅಧ್ಯಕ್ಷತೆ ವಹಿಸಿರುವ ಫೌಂಡೇಶನ್ ಅಧ್ಯಕ್ಷರಾದ ಸುನಿಲ್ ಜೈನಾಪುರ್ ಮಾತನಾಡಿ ಸಮಸ್ತ್ರವನ್ನು ಅಂದ ಮಕ್ಕಳಿಗೆ ಉಚಿತವಾಗಿ ವಿತರಿಸುವ ಮೂಲಕ ಪಿಎಸ್ಐ ಸುರೇಶ್ ಮಂಟೂರ ಸಾಮಾಜಿಕ ಕಳಕಳಿ ಮತ್ತು ಮಾನ್ವಿಯ ಮೌಲ್ಯಗಳ ಮೆರೆದಿದ್ದಾರೆ ‘ ಕೊಟ್ಟಿದ್ದು ತನಗೆ ಬಚ್ಚಿಟ್ಟದ್ದು ಪರರಿಗೆ ‘ ಎನ್ನುವ ಮಾತನ್ನು ಎಲ್ಲರೂ ಪಾಲಿಸಿದರೆ ಸಂಕಷ್ಟದಲ್ಲಿರುವವರಿಗೆ ನೆರವಾಗಿರುತ್ತದೆ ಎಂದು ಹೇಳಿದರು.ಕರ್ನಾಟಕ ಶೈಕ್ಷಣಿಕ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ…
ವಿಜಯಪುರ: ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಬೆಂಗಳೂರು ರಾಷ್ಟ್ರೀಯ ಸೇವಾ ಯೋಜನೆ ಸಬಲೀಕರಣ ಹಾಗೂ ಕ್ರೀಡೆ ಮತ್ತು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವಿಜಯಪುರ ಸಂಯುಕ್ತ ಆಶ್ರಯದಲ್ಲಿ” ಮಹಾತ್ಮ ಗಾಂಧೀಜಿಯವರ ವಿಚಾರಗಳಲ್ಲಿ ಮಾನ್ವೀಯ ಮೌಲ್ಯಗಳು ” ವಿಷಯ ಕುರಿತು ರಾಜ್ಯ ಮಟ್ಟದ ಒಂದು ದಿನದ ಕಾರ್ಯಗಾರ ಜರುಗಿತು.ಸದರಿ ಕಾರ್ಯಕ್ರಮ ಉದ್ಘಾಟಿಸಿ ಭಾಗವಹಿಸಿದ ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾನಿಲಯ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳು ಹಾಗೂ ಸಮಾಜ-ವಿಜ್ಞಾನಗಳ ಡೀನ್ ಡಾ ಶಾಂತಾದೇವಿ ಮಾತನಾಡಿ, ಮಾನವೀಯ ಮೌಲ್ಯಗಳು ಇಂದಿನ ದಿನಗಳಲ್ಲಿ ಕಾರ್ಯಕ್ರಮಕ್ಕೆ ಮಾತ್ರ ಸೀಮಿತವಾಗಿವೆ ಅವು ಕಾರ್ಯ ರೂಪದಲ್ಲಿ ಬರಬೇಕು. ಗಾಂಧೀಜಿಯವರ ಸತ್ಯ, ಅಹಿಂಸೆ ಹಾಗೂ ಅಪರಿಗ್ರಹ ಎಂಬ ಮೂರು ಮೌಲ್ಯಗಳು ಶ್ರೇಷ್ಠವಾಗಿವೆ ನಾವೆಲ್ಲರೂ ಗಾಂಧೀಜಿಯವರ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.ಕಾರ್ಯಕ್ರಮದ ಮೊದಲನೆಯ ಗೋಷ್ಠಿಯಲ್ಲಿ ‘ ಮಹಾತ್ಮ ಗಾಂಧೀಜಿ ಮತ್ತು ಸತ್ಯಾಗ್ರಹ ‘ ವಿಷಯ ಕುರಿತು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಶ್ರೀ ನೇತಾಜಿ ಗಾಂಧೀಯವರು ಮಹಾತ್ಮ ಗಾಂಧೀಜಿ ಅವರು ಜಗತ್ತಿಗೆ ಶ್ರೇಷ್ಠ ತತ್ವಜ್ಞಾನಿ…
