Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಲೈಫ್ ಸ್ಟೈಲ್ ಮೆಡಿಸೀನ್ ಸಪ್ತಾಹದ ಅಂಗವಾಗಿ ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ.ಎಂ.ಪಾಟೀಲ್ ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಫಿಸಿಯಾಲಜಿ ವಿಭಾಗದ ವತಿಯಿಂದ ಜೀವನಶೈಲಿ ಔಷಧದ ತತ್ವಗಳು, ಆರೋಗ್ಯ ಮತ್ತು ಯೋಗಕ್ಷೇಮದ ಮೇಲೆ ಅದರ ಪ್ರಭಾವವನ್ನುದ ಕುರಿತು ಜಾಗೃತಿ ಒಂದು ವಾರ ಪ್ರತಿ ದಿನ ನಾನಾ ಕಾರ್ಯಕ್ರಮಗಳು ನಡೆದವು.ವಿಶ್ವಾದ್ಯಂತ ಪ್ರತಿ ವರ್ಷ ಜೂನ್ ತಿಂಗಳಲ್ಲಿನಲ್ಲಿ ಈ ಸಪ್ತಾಹ ಆಚರಿಸಲಾಗುತ್ತಿದ್ದು, ಬಿ.ಎಲ್.ಡಿ.ಈ ಡೀಮ್ಡ್ ವಿವಿ ಆವರಣದಲ್ಲಿ ಈ ತಿಂಗಳ ಕೊನೆಯ ವಾರ ಈ ಸಪ್ತಾಹ ಆಚರಿಸಲಾಯಿತು.ಆರೋಗ್ಯದ ಆರು ಪ್ರಮುಖ ಆಧಾರ ಸ್ತಂಭಗಳಾದ ದೈಹಿಕ ಚಟುವಟಿಕೆ, ನಿದ್ರೆ, ಒತ್ತಡ ನಿರ್ವಹಣೆ, ಸಾಮಾಜಿಕ ಸಂಪರ್ಕಗಳು ಮತ್ತು ಹಾನಿಕಾರಕ ಪದಾರ್ಥಗಳನ್ನು ತಪ್ಪಿಸುವುದರ ಮೇಲೆ ಈ ಕಾರ್ಯಕ್ರಮಗಳು ಕೇಂದ್ರೀಕೃತವಾಗಿದ್ದವು.ಫಿಸಿಯಾಲಜಿ ವಿಭಾಗದ ಮುಖ್ಯಸ್ಥೆ ಡಾ. ಲತಾ ಮುಳ್ಳೂರ ಅವರ ಮಾರ್ಗದರ್ಶನದಲ್ಲಿ ಶರೀರಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಮತ್ತು ಜೀವನಶೈಲಿ ವೈದ್ಯಕೀಯ ವೈದ್ಯ ಡಾ. ಅನಿತಾ ತೇಲಿ ಅವರ ಉಸ್ತುವಾರಿಯಲ್ಲಿ…
ಸಿಂದಗಿ: ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಜಲ ಜೀವನ ಮಿಷನ್ ಯೋಜನೆ ಮೂಲಕ ಸಂಪರ್ಕ ಕಲ್ಪಿಸಲಾಗಿದೆ. ಅಧಿಕಾರಿಗಳು ನೀರು ಪೂರೈಕೆಯಲ್ಲಿ ಬದ್ಧತೆ ಕಾಯ್ದುಕೊಂಡು ಜನರಿಗೆ ಶುದ್ಧ ಹಾಗೂ ಸುರಕ್ಷಿತ ನೀರನ್ನು ಪೂರೈಕೆ ಮಾಡಬೇಕು ಎಂದು ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಅಭಿಯಂತರ ಹಾಗೂ ದೇವರ ಹಿಪ್ಪರಗಿ ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಭಾರತಿ ಚೆಲುವಯ್ಯ ಸೂಚಿಸಿದರು. ಪಟ್ಟಣದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಜಿಲ್ಲಾ ಪಂಚಾಯತ್ ಜಲಜೀವನ್ ಮಿಷನ್ ಯೋಜನೆಯ ಮಾಹಿತಿ ಅನುಷ್ಠಾನ ನೆರವು ಸಂಸ್ಥೆ ಸಂಯೋಗದಲ್ಲಿ ಪ್ರತಿಮನೆಗೆ ನಲ್ಲಿ ಸಂಪರ್ಕ ಮೂಲಕ ಶುದ್ಧ ಹಾಗೂ ಸುರಕ್ಷಿತ ನೀರು ಗ್ರಾಮಗಳಲ್ಲಿ ಪೂರೈಕೆ ಮಾಡುವ ಕುರಿತು ಶುಕ್ರವಾರ ನಡೆದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.ಗ್ರಾಮೀಣ ಭಾಗದ ಜನರಿಗೆ ಜಲಜೀವನ್ ಮಿಷನ್ ಯೋಜನೆಯಡಿ ಪೂರೈಕೆ ಆಗುವ ನೀರನ್ನು ಬಹಳ ಸುರಕ್ಷತೆ ದೃಷ್ಟಿಯಿಂದ ಬಳಸಬೇಕು. ನೀರು ಸಂಗ್ರಹಿಸುವ ತೊಟ್ಟಿ ಹಾಗೂ ನೀರನ್ನು ಬಳಕೆ ಮಾಡುವ ವಸ್ತುಗಳನ್ನು ಶುಚಿಯಾಗಿಟ್ಟುಕೊಳ್ಳುವಂತೆ ಸಲಹೆ…
ಕೆಂಭಾವಿ: ಮುಸ್ಲಿಮರು ಪವಿತ್ರವಾದ ಪುಣ್ಯ ಕ್ಷೇತ್ರ ಮೆಕ್ಕಾ ಮದೀನಾಗೆ ವರ್ಷಪೂರ್ತಿ ಪಾದಯಾತ್ರೆ ಕೈಗೊಂಡು 2025 ರ ಹಜ್ಜ್ ಯಾತ್ರೆಗೆ ತೆರಳುತ್ತಿರುವ ಪಟ್ಟಣದ ನಿವಾಸಿಯಾದ ಸೈಯದ್ ಜಿಲಾನಿ ಯವರನ್ನು ಮಾರ್ಗ ಮಧ್ಯದಲ್ಲಿ ಕರ್ನಾಟಕ ಸರ್ಕಾರದ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳು ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಪುರ ಸನ್ಮಾನಿಸಿ, ಗೌರವಿಸಿ ಪಾದಯಾತ್ರಿಗೆ ಶುಭಹಾರೈಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಮುಚ್ಚಿಹಾಕಲು ಸರ್ಕಾರ ಯತ್ನ | ದಲಿತರ ಹಣ ಲೂಟಿ | ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪ ಬೆಂಗಳೂರು: ಸರ್ಕಾರಿ ಸ್ವಾಮ್ಯದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿ ಶುಕ್ರವಾರ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿತು.ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಿದರು.ಜಿಲ್ಲಾ ಕೇಂದ್ರ ಚಿತ್ರದುರ್ಗ ಪಟ್ಟಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾಗವಹಿಸಿದ್ದರು. ವಿಜಯೇಂದ್ರ ಮತ್ತು ಇತರ ಮುಖಂಡರು ಹಾಗೂ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸುತ್ತಿದ್ದಂತೆ, ಪೊಲೀಸರು ಅವರನ್ನು ತಡೆದು ವಶಕ್ಕೆ ಪಡೆದರು.ಬೆಳಗಾವಿ, ಮಂಡ್ಯ, ಮಂಗಳೂರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಇದೇ ರೀತಿ ಪ್ರತಿಭಟನೆಗಳು ನಡೆದಿರುವ ಬಗ್ಗೆ ವರದಿಯಾಗಿದೆ.ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಹಗರಣವನ್ನು ಮುಚ್ಚಿಹಾಕಲು…
ವಿಜಯಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ತಾಯಂದಿರರ ಮತ್ತು ಮಕ್ಕಳ ಉತ್ತಮ ಆರೋಗ್ಯದ ಹಿತದೃಷ್ಟಿಯಿಂದ ವಿವಿಧ ರೀತಿಯ ಪೌಷ್ಟಿಕ ಆಹಾರವನ್ನು ಒದಗಿಸುತ್ತಿದೆ ಆದರೆ ಜಿಲ್ಲೆಯ ಬಹುತೇಕ ಅಂಗನವಾಡಿ ಕೇಂದ್ರಗಳು ಅಂಗನವಾಡಿ ಕಾರ್ಯಕರ್ತೆಯರ ಕುಟುಂಬದ ಆರ್ಥಿಕ ಅಭಿವೃದ್ದಿಗೆ ನಿರ್ಮಾಣವಾದಂತೆ ಭಾಸವಾಗುತ್ತಿವೆ.ಬಹುತೇಕ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳೇ ಇರುವುದಿಲ್ಲ, ಆದರೂ ಆ ದಿನದ ಹಾಜರಾತಿ ಪೂರ್ತಿಯಾಗಿ ತೋರಿಸಿ ಆ ಮಕ್ಕಳಿಗೆ ಬರುವ ಎಲ್ಲಾ ರೀತಿಯ ಸೌಲಭ್ಯಗಳನ್ನು (ಆಹಾರ ಕಿಟ್) ಹೊರಗಡೆ ಖಾಸಗಿ ವ್ಯಕ್ತಿಗಳಿಗೆ ಮಾರಿಕೊಳ್ಳುತ್ತಿರುವ ಸಂಗತಿ ಜಿಲ್ಲೆಯಾದ್ಯಂತ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಅಂಗನವಾಡಿ ಕೇಂದ್ರಗಳು ಕೇವಲ ಸರಕಾರಕ್ಕೆ ಖೊಟ್ಟಿ ವರದಿ ನೀಡುವ ಕೇಂದ್ರಗಳಾಗಿ ನಿರ್ಮಾಣವಾಗುತ್ತಿರುವುದು ವಿಷಾದನೀಯ ಸಂಗತಿ. ಈ ಕಹಿ ಸತ್ಯವು ತಮಗೂ ಸೇರಿದಂತೆ ಇಲಾಖೆಯ ಬಹುತೇಕ ಸಿಬ್ಬಂದಿಗಳಿಗೆ ತಿಳಿದ ವಿಷಯವೇ ಆದರೂ ಈ ವಿಷಯದ ಬಗ್ಗೆ ತಾವು ಯಾವುದೇ ರೀತಿಯ ಕ್ರಮವನ್ನು ಕೈಗೊಂಡಿರುವುದಿಲ್ಲ. ಆದ್ದರಿಂದಾಗಿ ಸೂಕ್ತ ಕ್ರಮ ಕೈಗೊಳ್ಳದೆ ಹೋದರೆ ಕರ್ನಾಟಕ ರಾಷ್ಟ ಸಮಿತಿ ಪಕ್ಷವು ತಮ್ಮ ಕಚೇರಿಯ ಮುಂದೆ ಉಗ್ರವಾದ ಹೋರಾಟವನ್ನು…
ಆಲಮಟ್ಟಿಯ ಎಂಪಿಎಸ್ & ಎಂಎಚ್ಎಂ ಶಾಲೆಯ ಹಳೆಯ ವಿದ್ಯಾರ್ಥಿ ಬಳಗದಿಂದ ಗುರು ಶಿಷ್ಯರ ಮಹಾಸಂಗಮ | ಗ್ರಂಥ ಬಿಡುಗಡೆ ಆಲಮಟ್ಟಿ: ಇಲ್ಲಿನ ಸರಕಾರಿ ಶಾಲೆಯ ಹಳೆಯ ವಿದ್ಯಾರ್ಥಿಗಳು ತಮ್ಮ ಶಾಲೆಯ ೬೦ನೆಯ ವರ್ಷಾಚರಣೆಯ ಸಂದರ್ಭದಲ್ಲಿ ಕಲಿತ ಶಾಲೆ ಅಕ್ಷರ ತೋರಣ ಎಂಬ ಅಭಿನಂದನ ಗ್ರಂಥವನ್ನು ಅರ್ಪಿಸಿರುವುದು ಇಡೀ ರಾಜ್ಯಕ್ಕೆ ಮಾದರಿ ಕೆಲಸವಾಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬಣ್ಣಿಸಿದರು.ಇಲ್ಲಿನ ಸಮುದಾಯ ಭವನದಲ್ಲಿ ಶುಕ್ರವಾರ ಕರ್ನಾಟಕ ಗಾಂಧಿ ಮಂಜಪ್ಪ ಹರ್ಡೇಕರ ಪ್ರೇರಿತ ಎಂಪಿಎಸ್ ಮತ್ತು ಎಂಎಚ್ಎಂ. ಶಾಲೆಗಳ ಹಳೆಯ ವಿದ್ಯಾರ್ಥಿಗಳ ಬಳಗದಿಂದ ಹಮ್ಮಿಕೊಂಡ ‘ಕಲಿತ ಶಾಲೆಗೆ ಅಕ್ಷರ ತೋರಣ’ ಹಾಗೂ ಗುರು ಶಿಷ್ಯರ ಮಹಾಸಂಗಮ ಕಾರ್ಯಕ್ರಮದಲ್ಲಿ ಶುಕ್ರವಾರ ಗ್ರಂಥ ಬಿಡುಗಡೆಗೊಳಿಸಿ ಅವರು ಮಾತನಾಡಿದರು.ಹುಟ್ಟಿದ ಊರು, ಹೆತ್ತ ತಂದೆ ತಾಯಿ, ಕಲಿತ ಶಾಲೆ, ಕಷ್ಟದಲ್ಲಿ ಸಹಾಯ ಮಾಡಿದವರನ್ನು ಎಂದೂ ಮರೆಯಬಾರದು. ಉತ್ತಮ ತಾಯಿ ನೂರು ಜನ ಶಿಕ್ಷಕರಿಗೆ ಸಮ. ಗುರು ಶಿಷ್ಯರ ಸಂಬಂಧ ಉತ್ತಮವಾಗಿರಬೇಕು ಎಂದು ಹೇಳಿದರು.ಸರಕಾರೀ ಶಾಲೆಗಳ ಅಗತ್ಯವನ್ನು ಒತ್ತಿ…
ಚಡಚಣ: ಸಮೀಪದ ಬರಡೋಲ ಗ್ರಾಮದ ಶ್ರೀ ಚೆನ್ನಮಲ್ಲಿಕಾರ್ಜುನ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024-25 ನೇ ಸಾಲಿನ ವಿವಿಧ ವಸತಿ ಶಾಲೆಗಳ ಪರೀಕ್ಷೆಯಲ್ಲಿ ಆಯ್ಕೆಗೊಂಡ 22 ವಿದ್ಯಾರ್ಥಿಗಳಿಗೆ ಗ್ರಾಮಸ್ಥರು ಹಾಗೂ ಶಾಲೆಯ ಸಿಬ್ಬಂದಿ ವರ್ಗದವರು , ವಿದ್ಯಾರ್ಥಿಗಳು ಮುಂತಾದವರು ಸನ್ಮಾನಿಸುವ ಮೂಲಕ ಅಭಿನಂದಿಸಿದರು.
ಮುದ್ದೇಬಿಹಾಳ: ಡೆಂಗಿ ಜ್ವರ ನಿಯಂತ್ರಣಗೊಳಿಸಲು ರಾಜ್ಯದಾದ್ಯಂತ ಹಮ್ಮಿಕೊಳ್ಳಲಾದ ಪ್ರತೀ ಶುಕ್ರವಾರ ಈಡಿಸ್ ಲಾರ್ವಾ ಉತ್ಪತ್ತಿ ತಾಣಗಳನ್ನು ನಾಶ ಪಡಿಸುವ ಚಟುವಟಿಕೆಯನ್ನು ಪಟ್ಟಣದ ಪುರಸಭೆ ಎದುರು ಶುಕ್ರವಾರ ಪು.ಸದಸ್ಯೆ ಪ್ರೀತಿ ದೇಗಿನಾಳ ಚಾಲನೆ ನೀಡಿದರು.ಈ ವೇಳೆ ನಗರ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಗೌಡರ ಮಾತನಾಡಿ, ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮವಾಗಿ ಈ ಸಮೀಕ್ಷೆ ನಡೆಸಲಾಗುತ್ತಿದೆ. ಡೆಂಘೀ ರೋಗವು ಈಡಿಸ್ ಎಂಬ ಸೊಳ್ಳೆಗಳಿಂದ ಹರಡುವ ರೋಗವಾಗಿದೆ. ಇಂಥ ಸೊಳ್ಳೆಗಳ ಸಂತಾನೋತ್ಪತ್ತಿ ತಾಣಗಳಾದ ಹೂವಿನ ಕುಂಡ, ಬಿಸಾಕಿದ ಹಳೆ ಟೈರ್, ಹಳೆ ಎಣ್ಣೆಯ ಡ್ರಮ್, ನೀರು ಸಂಗ್ರಹಿಸುವ ತೊಟ್ಟ್ಟಿ ಮುಂತಾದವುಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವದು, ಮಳೆಗಾಲದಲ್ಲಿ ಸೋಂಕು ಹೆಚ್ಚಾಗಿ ಹರಡುವುದರಿಂದ ಇವುಗಳನ್ನು ಶುಚಿಗೊಳಿಸಿ ಸೊಳ್ಳೆ ಮೊಟ್ಟೆ ಇಡಲು ಅವಕಾಶವಿರದಂತೆ ಸಾರ್ವಜನಿಕರು ನೋಡಿಕೊಳ್ಳಬೇಕು. ಹಗಲಿನಲ್ಲಿ ಸೊಳ್ಳೆ ಕಚ್ಚದಂತೆ ಎಚ್ಚರ ವಹಿಸಬೇಕು. ನೀರು ಶೇಖರಣಾ ತೊಟ್ಟಿ ಮತ್ತು ಟ್ಯಾಂಕ್ಗಳ ಮುಚ್ಚಳವನ್ನು ಭದ್ರವಾಗಿ ಮುಚ್ಚಬೇಕು. ಪಾತ್ರೆ ಹಾಗೂ ಬಿಂದಿಗೆಗಳಲ್ಲಿ ಹೆಚ್ಚು ದಿನ ನೀರು ಸಂಗ್ರಹಿಸಿಡಬಾರದು. ಮನೆಯ ಸುತ್ತ ಮತ್ತು ಮಾಳಿಗೆಯ ಮೇಲೆ ನೀರು…
ವಾಲ್ಮೀಕಿ ನಿಗಮದ ೧೮೭ ಕೋಟಿ ರೂ.ಗಳ ಭ್ರಷ್ಟಾಚಾರ ಹಗರಣ ಖಂಡಿಸಿ ಬಿಜೆಪಿ ಎಸ್.ಟಿ.ಮೋರ್ಚಾ ಬೃಹತ್ ಪ್ರತಿಭಟನೆ ವಿಜಯಪುರ: ವಾಲ್ಮೀಕಿ ನಿಗಮದಲ್ಲಿ ೧೮೭ ಕೋಟಿ ರೂ.ಗಳ ಭ್ರಷ್ಟಾಚಾರ ಹಗರಣ ಖಂಡಿಸಿ ಬಿಜೆಪಿ ಎಸ್.ಟಿ.ಮೋರ್ಚಾ ವತಿಯಿಂದ ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಆರಂಭವಾದ ಪ್ರತಿಭಟನೆ ಗಾಂಧಿಚೌಕ್ನಲ್ಲಿ ರಾಜ್ಯ ಸರ್ಕಾರದ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಮಾತನಾಡಿ, ದಲಿತರ ಕಲ್ಯಾಣ ಮಾಡುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಬಿಜೆಪಿಯ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಪರಿಶಿಷ್ಟ ಕಲ್ಯಾಣ ಮೀಸಲಿಟ್ಟದ್ದ ೨೮ ಸಾವಿರ ಕೋಟಿ ಹಣ ದುರ್ಬಳಕೆ ಮಾಡಿದರು. ನಂತರ ವಾಲ್ಮೀಕಿ ನಿಗಮದಲ್ಲಿ ಪರಿಶಿಷ್ಟ ಪಂಗಡ ಅಭಿವೃದ್ಧಿಗೆ ಇಟ್ಟಿದ್ದ ೧೮೭ ಕೋಟಿ ಹಣದಲ್ಲಿ ೪೫ ಕೋಟಿ ರೂ. ನೆರೆಯ ತೆಲಂಗಾಣ ರಾಜ್ಯಕ್ಕೆ ೯ ಬೇರೆ ನಕಲಿ ಖಾತೆಗಳಿಗೆ ಹಣ ವರ್ಗಾವಣೆ ಮಾಡಿ ತಮ್ಮ ಪಕ್ಷಕ್ಕೆ…
ದೇವರಹಿಪ್ಪರಗಿ: ಗ್ರಾಮದ ಮುಖ್ಯರಸ್ತೆಯ ಕಾಮಗಾರಿ ವಿಳಂಬವಾಗಿದ್ದು, ತ್ವರಿತವಾಗಿ ಪೂರ್ಣಗೊಳಿಸಿ ಗ್ರಾಮಸ್ಥರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ರಾಜ್ಯಹೆದ್ದಾರಿ ೪೧ರಲ್ಲಿ ಪ್ರತಿಭಟನಾ ಧರಣಿ ಕೈಗೊಂಡರು.ತಾಲ್ಲೂಕಿನ ಚಿಕ್ಕರೂಗಿ ಗ್ರಾಮದ ಬಸ್ ನಿಲ್ದಾಣದ ರಾಜ್ಯಹೆದ್ದಾರಿಯಲ್ಲಿ ಶುಕ್ರವಾರ ಸಭೆ ಸೇರಿ, ಮುಖ್ಯ ರಸ್ತೆಯ ಕಾಮಗಾರಿ ವಿಳಂಬಕ್ಕೆ ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಶೈಲ ಮುಳಜಿ ಹಾಗೂ ಎಂ.ಡಿ.ಕಣಮೇಶ್ವರ ಮಾತನಾಡಿ, ಕಳೆದ ಒಂದೂವರೆ ವರ್ಷಗಳ ಹಿಂದೆ ೨೦೨೨-೨೩ನೇ ಸಾಲಿನಲ್ಲಿ ಅಂದಿನ ಶಾಸಕ ಸೋಮನಗೌಡ ಪಾಟೀಲ(ಸಾಸನೂರ) ಭೂಮಿಪೂಜೆ ನೆರವೇರಿಸಿ, ಮುಖ್ಯರಸ್ತೆಯ ಎಡಬದಿ ಚರಂಡಿಗಳ ಸಹಿತ ೫೦೦ ಮೀಟರ್ ಉದ್ದದ ದ್ವೀಪಥ ರಸ್ತೆಗೆ ಚಾಲನೆ ನೀಡಿದ್ದರು. ನಂತರ ಗುತ್ತಿಗೆದಾರರು ರಸ್ತೆಯನ್ನು ಅಗೆದು ನಂತರ ಕಾರ್ಯ ನಿಲ್ಲಿಸಿದರು. ಈಗ ಅಗೆದ ರಸ್ತೆ ಗ್ರಾಮಸ್ಥರಿಗೆ ಶಾಪವಾಗಿ ಕಾಡುತ್ತಿದ್ದು ಅಪಘಾತಗಳಿಗೂ ಆಹ್ವಾನಿಸುವಂತಿದೆ. ಆದ್ದರಿಂದ ಕೂಡಲೇ ಗುತ್ತಿಗೆದಾರರು ಸ್ಥಳಕ್ಕೆ ಆಗಮಿಸಿ ರಸ್ತೆ ಎಂದು ಪೂರ್ಣಗೊಳಿಸಲಾಗುವುದು ಎಂಬುದರ ಕುರಿತು ನಿಖರ ಮಾಹಿತಿ ನೀಡಬೇಕು ಎಂದು ಆಗ್ರಹಿಸಿದರು.ಪ್ರತಿಭಟನಾ ಸುದ್ದಿ ತಿಳಿದು ಸ್ಥಳಕ್ಕೆ…
