Author: editor.udayarashmi@gmail.com

ದೇವರಹಿಪ್ಪರಗಿ: ಶಾಲಾ ಮಕ್ಕಳು, ಶಿಕ್ಷಕರು ಹಾಗೂ ಪ್ರಮಖರ ಉಪಸ್ಥಿತಿಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಿಸಲಾಯಿತು.ಪಟ್ಟಣದ ೧೦೦೮ ಜಗದ್ಗುರು ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಗುರುವಾರ ಬೆಳಿಗ್ಗೆ ೯ ಗಂಟೆಗೆ ಆಯೋಜಿಸಲಾಗಿದ್ದ ಜಯಂತಿ ಕಾರ್ಯಕ್ರಮಕ್ಕೆ ಕೆಂಪೇಗೌಡರ ಭಾವಚಿತ್ರದ ಮೆರವಣಿಗೆಗೆ ಪಟ್ಟಣ ಪಂಚಾಯಿತಿ ಆವರಣದಲ್ಲಿ ಪಂಚಾಯಿತಿ ಸದಸ್ಯರ ಸಮ್ಮುಖದಲ್ಲಿ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು. ಶಾಲಾ ಮಕ್ಕಳು ಹಾಗೂ ಶಿಕ್ಷಕರು ಪಾಲ್ಗೊಂಡಿದ್ದ ಮೆರವಣಿಗೆ ಮೊಹರೆ ಹಣಮಂತ್ರಾಯ, ಅಂಬೇಡ್ಕರ್ ವೃತ್ತಗಳ ಮಾರ್ಗವಾಗಿ ಕಲ್ಯಾಣ ಮಂಟಪ ತಲುಪಿತು. ಇಲ್ಲಿ ಉಪನ್ಯಾಸ, ಪಾರಿತೋಷಕ ವಿತರಣೆಗಳು ಜರುಗಿದವು.ಈ ಎಲ್ಲ ಕಾರ್ಯಕ್ರಮಗಳಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರಿಗೆ ತಹಶೀಲ್ದಾರ ಪ್ರಕಾಶ ಸಿಂದಗಿ ಆಹ್ವಾನ ನೀಡಿದ್ದರೂ ಬಹುತೇಕರು ಬರದೇ ಇದ್ದು, ಜೊತೆಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಗೈರು ಹಾಜರಾಗಿದ್ದು ಕಂಡು ಬಂತು.ಕಾರ್ಯಕ್ರಮದಲ್ಲಿ ತಹಶೀಲ್ದಾರ ಪ್ರಕಾಶ ಸಿಂದಗಿ, ತಾಲ್ಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಎನ್.ಬಸವರಡ್ಡಿ, ದಲಿತ ಸಂಘರ್ಷ ಸಮೀತಿಯ ಪದಾಧಿಕಾರಿ ಪ್ರಕಾಶ ಗುಡಿಮನಿ ಮಾತನಾಡಿದರು.ಗ್ರೇಡ-೨ ತಹಶೀಲ್ದಾರ ಎಸ್.ಎಚ್.ರಾಠೋಡ, ಉಪತಹಶೀಲ್ದಾರ ಸುರೇಶ ಮ್ಯಾಗೇರಿ, ಪಟ್ಟಣ ಪಂಚಾಯಿತಿ ಕಿರಿಯ…

Read More

ಚಿಮ್ಮಡ: ಗ್ರಾಮದಲ್ಲಿ ನಿರ್ಮಿಸಲಾದ ದೊಡ್ಡ ಕೆರೆ ಅಂಗಳದಲ್ಲಿ ಸ್ಥಳಿಯ ಗ್ರಾಮ ಪಂಚಾಯತಿ ಹಾಗೂ ಸಾಮಾಜಿ ಅರಣ್ಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಸಸಿ ನೆಡುವ ಕಾರ್ಯಕ್ರಮ ಗುರುವಾರ ಆಯೋಜಿಸಲಾಗಿತ್ತು.ಲಕ್ಷ ವೃಕ್ಷ ಅಭಿಯಾಣ ಯೊಜನೆಯಡಿ ಸಸಿ ನೆಡುವ ಕಾರ್ಯಕ್ರಮಕ್ಕೆ ಸ್ಥಳಿಯ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಮಾಲಾ ಅಶೋಕ ಮೋಟಗಿಯವರು ಗ್ರಾಮದ ಕೆರೆ ಅಂಗಳದಲ್ಲಿ ವೃಕ್ಷ ನೆಡುವ ಮೂಲಕ ಚಾಲನೆ ನೀಡಿದರು.ಗ್ರಾಮದ ಕೆರೆ ಅಂಗಳ ಹಾಗೂ ಸುತ್ತಮುತ್ತಲಿನಲ್ಲಿ ಸುಮಾರು ೧೨೦೦ ಸಸಿ ನೆಡಲಾಗಿದ್ದು ಅವುಗಳನ್ನು ಗ್ರಾಮ ಪಂಚಾಯತಿ ಹಾಗೂ ಸಾಮಾಜಿಕ ಅರಣ್ಯ ಇಲಾಖೆಯಿಂದ ಪೋಷಿಸಿ ಬೆಳೆಸಲು ರೂಪುರೆಷೆ ತಯಾರಿಸಲಾಗಿದ್ದು ಒಂದೂ ಗಿಡ ಹಾಳಾಗದಂತೆ ಕ್ರಮ ಕೈಗೊಳ್ಳಲಾಗುವುದೆಂದು ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಮಾಲಾ ಅಶೋಕ ಮೋಟಗಿಯವರು ತಿಳಿಸಿದರು.ಸಾಮಾಜಿಕ ಅರಣ್ಯ ಇಲಾಖೆಯ ಅಧಿಕಾರಿ ಮಹಾಂತೇಶ ಚಂಡಕಿ, ಗ್ರಾ.ಪಂ. ಸದಸ್ಯ ನಾಗಪ್ಪ ಆಲಕನೂರ, ಅಶೋಕ ಮೋಟಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Read More

ಡೆಂಗಿ ನಿಯಂತ್ರಣಕ್ಕೆ ಲಾರ್ವಾಹಾರಿ ಮೀನು ಬಿಡುವ ಕಾರ್ಯಕ್ರಮಕ್ಕೆಆರೋಗ್ಯ ಸಚಿವ ದಿನೇಶ ಗುಂಡೂರಾವ್ ಚಾಲನೆ ವಿಜಯಪುರ: ಡೆಂಗಿ ನಿಯಂತ್ರಣಕ್ಕಾಗಿ ರಾಜ್ಯದಾದ್ಯಂತ ಹಮ್ಮಿಕೊಂಡ ಪ್ರತಿ ಶುಕ್ರವಾರ ಈಡೀಸ್ ಲಾರ್ವಾ ನಿರ್ಮೂಲನಾ ದಿನ ಹಾಗೂ ಲಾರ್ವಾಹಾರಿ ಮೀನು ಬಿಡುಗಡೆ ಅಭಿಯಾನಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವರಾದ ದಿನೇಶ ಗುಂಡೂರಾವ್ ಅವರು ಶುಕ್ರವಾರ ನಗರದ ದರ್ಗಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಾಲನೆ ನೀಡಿದರು.ಇಂದು ನಗರದ ದರ್ಗಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಈ ಕಾರ್ಯಕ್ರಮ ರಾಜ್ಯದಾದ್ಯಂತ ಏಕ ಕಾಲದಲ್ಲಿ ಪ್ರತಿ ಜಿಲ್ಲೆ, ತಾಲೂಕು ಮಟ್ಟಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದ ಮೂಲಕ ಡೆಂಗಿ ರೋಗ ಹರಡದಂತೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಸ್ವಯಂ ಸೇವಾ ಸಂಸ್ಥೆಗಳೊಂದಿಗೆ ಸಮನ್ವಯತೆ ಸಾಧಿಸಿಕೊಂಡು ಡೆಂಗಿ ಜ್ವರದ ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಪ್ರತಿ ಗ್ರಾಮದ ಮನೆ-ಮನೆಗಳಿಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸಬೇಕು. ಸಾರ್ವಜನಿಕರಿಗೆ ಮನೆಯಲ್ಲಿರುವ ಪಾತ್ರೆಗಳಲ್ಲಿ ನೀರನ್ನು ಹೆಚ್ಚು…

Read More

ವಿಜಯಪುರ: ಶಾಲೆ ಕಾಲೇಜುಗಳಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗು ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ಪ್ರತಿಭಾ ಪುರಸ್ಕಾರ ನೀಡುವುದರಿಂದ ಇತರ ವಿಧ್ಯಾರ್ಥಿಗಳಿಗೆ ಸ್ಪೂರ್ತಿ ಹಾಗು ಪ್ರೇರಣೆ ನೀಡುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು.ಶುಕ್ರವಾರ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ತಿಕೋಟಾ ಹಾಗು ಮುರಾರ್ಜಿ ದೇಸಾಯಿ ವಸತಿ ಶಾಲೆ ತಿಕೋಟಾ ಸಂಯುಕ್ತ ಆಶ್ರಯದಲ್ಲಿ ಮುರಾರ್ಜಿ ದೇಸಾಯಿ ವಸತಿ ಶಾಲೆ ತಿಕೋಟಾದಲ್ಲಿ ಜರುಗಿದ ತಿಕೋಟಾ ತಾಲೂಕಿನಲ್ಲಿ ಎಸ್ ಎಸ್ ಎಲ್ ಸಿ ಹಾಗು ಪಿಯುಸಿ ವಿಜ್ಞಾನ, ಕಲಾ. ವಾಣಿಜ್ಯ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪುರಸ್ಕಾರ ಪ್ರದಾನ ಮಾಡುವದು ಸರ್ಕಾರ ಹಾಗು ಸಂಘ ಸಂಸ್ಥೆಗಳ ಕತ೯ವ್ಯವಾಗಿದೆ. ಇದರಿಂದ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆ ಹಾಗು ಸ್ಪೂರ್ತಿ ನೀಡುತ್ತದೆ ಎಂದರು.ಸಾನ್ನಿಧ್ಯ ವಹಿಸಿದ್ದ ಖ್ಯಾತ ಕೀತ೯ನಕಾರ ಬಾಬುರಾವ ಮಹಾರಾಜ ಹೊನವಾಡ ಮಾತನಾಡಿ, ಮಕ್ಕಳು ಪಠ್ಯಕ್ರಮದ ಅನುಸಾರ ಪರಿಪೂರ್ಣ ಜ್ಞಾನ…

Read More

ದೇವರಹಿಪ್ಪರಗಿ: ಅಂಗನವಾಡಿ ಕೇಂದ್ರದ ಮೂಲಕ ನೀಡಲಾಗುತ್ತಿರುವ ಆರು ಸೇವೆಗಳಲ್ಲಿ ಶಾಲಾ ಪೂರ್ವ ಶಿಕ್ಷಣ ಅತ್ಯಂತ ಪ್ರಮುಖ ಸೇವೆಯಾಗಿದೆ ಎಂದು ಬಸವನಬಾಗೇವಾಡಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಿರ್ಮಲಾ ಸುರಪುರ ಹೇಳಿದರು.ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರ ಉಜ್ವಲ ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಶಿಕ್ಷಣಯಾತ್ರೆ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಸವನ ಬಾಗೇವಾಡಿ ಇವರ ಸಹಯೋಗದಲ್ಲಿ ಜರುಗಿದ ಅಂಗನವಾಡಿ ಕಾರ್ಯಕರ್ತೆಯರ ಮೂರು ದಿನಗಳ ಶಾಲಾ ಪೂರ್ವ ಶಿಕ್ಷಣ ತರಬೇತಿಗೆ ಚಾಲನೆ ನೀಡಿ ಮಾತನಾಡಿದರು.ಅಂಗನವಾಡಿ ಕೇಂದ್ರಗಳಲ್ಲಿ ಶಾಲಾ ಪೂರ್ವ ಶಿಕ್ಷಣ ಸರಿಯಾಗಿ ಅನುಷ್ಠಾನಗೊಂಡರೇ, ಪಾಲಕರು ತಾವಾಗಿಯೇ ತಮ್ಮ ಮಕ್ಕಳನ್ನು ಅಂಗನವಾಡಿ ಕೇಂದ್ರಗಳಿಗೆ ಕಳಿಸುತ್ತಾರೆ. ಆದರೆ ಇಂದು ಅಂಗನವಾಡಿ ಕಾರ್ಯಕರ್ತೆಯರು ವಿವಿಧ ಇಲಾಖೆಯ ಸಹಯೋಗದ ಕಾರ್ಯಗಳನ್ನು ನಿರ್ವಹಿಸುತ್ತಿರುವುದರಿಂದ ಶಾಲಾ ಪೂರ್ವ ಶಿಕ್ಷಣದ ಅನುಷ್ಠಾನಕ್ಕೆ ಅಡಚಣೆಯುಂಟಾಗುತ್ತಿದೆ. ಅದಾಗ್ಯೂ ಕಾರ್ಯಕರ್ತೆಯರು ಈ ತರಬೇತಿಯನ್ನು ಪಡೆದು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಇದರಿಂದ ನಿಮಗೂ ಹಾಗೂ ಇಲಾಖೆಗೆ ಒಳ್ಳೆಯ ಹೆಸರು ಬರುವಂತಾಗುತ್ತದೆ ಎಂದರು.ಉಜ್ವಲ ಸಂಸ್ಥೆಯ ಸಂಯೋಜಕ ಸಾಗರ…

Read More

ವಿಜಯಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೊಸದಾಗಿ ಮಂಜೂರಾದ ಮೆಟ್ರಿಕ್ ನಂತರದ ಬಾಲಕರ ವಸತಿನಿಲಯ(೧೦೦ ವಿದ್ಯಾರ್ಥಿಗಳು), ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ(೧೦೦ ವಿದ್ಯಾರ್ಥಿಯರು)ಕ್ಕಾಗಿ ಬಾಡಿಗೆ ಕಟ್ಟಡಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.ವಸತಿ ನಿಲಯಗಳ ಸಂಖ್ಯಾಬಲಕ್ಕೆ ಅನುಗುಣವಾಗಿ ಸಾಕಷ್ಟು ಸ್ಥಳಾವಕಾಶವಿರುವ ಸುಸಜ್ಜಿತ ಮೂಲಭೂತ ಸೌಕರ್ಯಗಳುಳ್ಳ ( ಹತ್ತು ವಿದ್ಯಾರ್ಥಿಗಳಿಗೆ ಒಂದರಂತೆ ಶೌಚಾಲಯ ಹಾಗೂ ಸ್ನಾನದ ಗೃಹಗಳು, ಸೋಲಾರ್ ವಾಟರ್ ಹೀಟರ್, ಸಾಕಷ್ಟು ಪ್ರಮಾಣದಲ್ಲಿ ನೀರು) ಕಟ್ಟಡಗಳ ಅವಶ್ಯಕತೆಯಿರುವುದರಿಮದ ಆಸಕ್ತಿಯುಳ್ಳ ಕಟ್ಟಡ ಮಾಲೀಕರು ಸರ್ಕಾರ ನಿಗಧಿ ಪಡಿಸಿದ ಮಿತಿಯಲ್ಲಿ ಬಾಡಿಗೆ ಮೊತ್ತಕ್ಕೆ ಬಾಡಿಗೆ ರೂಪದಲ್ಲಿ ಕೊಡಲು ಇಚ್ಚಿಸಿದಲ್ಲಿ ಜುಲೈ ೫ರ ಒಳಗಾಗಿ ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಡಿ.ದೇವರಾಜ ಅರಸು ಭವನ, ಜಿಲ್ಲಾ ಪಂಚಾಯತ್ ಕಚೇರಿ ಹತ್ತಿರ ಕನಕದಾಸ ಬಡಾವಣೆ ಇವರಿಗೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ೦೮೩೫೨-೨೬೭೯೯೩ ಹಾಗೂ ಮೊಬೈಲ್ ಸಂಖ್ಯೆ: ೯೬೧೧೫೧೮೪೭೬ನ್ನು ಸಂಪರ್ಕಿಸಬಹುದು ಎಂದು ವಿಜಯಪುರ ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ…

Read More

ವಿಜಯಪುರ: ೨೦೨೪-೨೫ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗಾಗಿ ಆನ್‌ಲೈನ್ ಅರ್ಜಿಯನ್ನು ಆಹ್ವಾನಿಸಲಾಗಿದೆ. ಜುಲೈ ೨೦ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು ವಿದ್ಯಾರ್ಥಿಗಳ ತಮ್ಮ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು ಎಂದು ವಿಜಯಪುರ ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಕರ್ನಾಟಕ ಜಾನಪದ ಅಕಾಡೆಮಿಯ ವತಿಯಿಂದ ೨೦೨೨ (ದಿನಾಂಕ೧-೧-೨೦೨೨ ರಿಂದ ೩೧-೧೨-೨೦೨೨ರವರೆಗೆ) ಹಾಗೂ ೨೦೨೩ನೇ (೧-೧-೨೦೨೩ರಿಂದ ೩೧-೧೨-೨೦೨೩ರವರಗೆ) ಸಾಲಿನಲ್ಲಿ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ(ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ) ಕನಿಷ್ಠ ೧೫೦ ಪುಟಗಳಿಗೂ ಮೇಲ್ಪಟ್ಟಿರುವಂತೆ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ, ಜನಪದ ಸಂಕೀಣ ಈ ನಾಲ್ಕು ಪ್ರಕಾರಗಳ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳ ಪುಸ್ತಕ ಬಹುಮಾನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಲೇಖಕರು, ಪ್ರಕಾಶಕರು, ಸಂಪಾದಕರು ೪ ಕೃತಿಗಳನ್ನು ದ್ವಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟಾರ್, ಕರ್ನಾಟಕ ಜಾನಪದ ಅಕಾಡೆಮಿ, ೨ನೇ ಮಹಡಿ ಜೆ.ಸಿ. ರಸ್ತೆ ಬೆಂಗಳುರು-೫೬೦೦೦೨ ಇವರಿಗೆ ಜುಲೈ ೨ರ ಒಳಗೆ ತಲುಪುವಂತೆ ಖುದ್ದಾಗಿ ಕೊರಿಯರ್ ಅಥವಾ ಅಂಚೆ ಮೂಲಕ ಕಳಿಹಿಸಬೇಕು ಎಂದು ವಿಜಯಪುರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ೨೦೨೪-೨೫ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ದಾಳಿಂಬೆ, ಲಿಂಬೆ, ಹಾಗೂ ದ್ರಾಕ್ಷಿ ಬೆಳೆಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿವಾ ಯೋಜನೆಯನ್ನು ಅನುಷ್ಠಾನಗೊಳಿಸಲು ಅಧಿಸೂಚಿಸಲಾಗಿದೆ.ಬೆಳೆಸಾಲ ಪಡೆದ ರೈತರು ಹಾಗೂ ಬೆಳೆ ಸಾಲ ಪಡೆಯದೆ ಇರುವ ರೈತರು ತಮ್ಮ ಆಧಾರ್ ಕಾರ್ಡ್ ಝರಾಕ್ಸ್, ಪಹಣಿ ಪತ್ರಿಕೆ ಹಾಗೂ ಬ್ಯಾಂಕ್ ಪಾಸ್‌ಬುಕ್ ಪ್ರತಿಯೊಂದಿಗೆ ಹತ್ತಿರದ ಬ್ಯಾಂಕ್‌ಗಳಲ್ಲಿ ಅಥವಾ ಗ್ರಾಮ ಒನ್ ಕೇಂದ್ರ, ಸಿಎಸ್‌ಸಿ ಸೆಂಟರ್‌ಗಳಲ್ಲಿ ವಿಮಾ ಯೋಜನೆಯಡಿ ನೋಂದಾಯಿಸಿಕೊಳ್ಳಬೇಕು.ದ್ರಾಕ್ಷಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಜಿಲೈ ೧೫ ಕೊನೆಯ ದಿನವಾಗಿರುತ್ತದೆ. ರೈತರು ಪಾವತಿಸಬೇಕಾದ ವಿಮಾ ಕಂತಿನ ಮೊತ್ತ ೧೪೦೦ ರೂ.ಗಳಾಗುರುತ್ತದೆ. ದಾಳಿಂಬೆ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಜುಲೈ ೧ ಕೊನೆಯದಿನವಾಗುದ್ದು, ರೈತರು ೬,೩೫೦ರೂ.ಗಳನ್ನು ವಿಮಾಕಂತು ತುಂಬಬೇಕು. ಹಾಗೂ ಲಿಂಬೆ ಬೆಳೆಗೆ ವಿಮೆ ನೋಂದಾಯಿಸಿಕೊಳ್ಳಲು ಜುಲೈ ೧ ಕೊನೆಯದಿನವಾಗಿದ್ದು, ವಿಮಾ ಕಂತಿನ ಮೊತ್ತ ೨೮೦೦ರೂ ಗಳನ್ನು ಪಾವತಿಸಬೇಕು.ಹೆಚ್ಚಿನ ಮಾಹಿತಿಗಾಗಿ ಹತ್ತಿರದ ತೋಟಗಾರಿಕೆ ಇಲಾಖೆ, ರೈತ ಸಂಪರ್ಕ ಕೇಂದ್ರ, ಬ್ಯಾಂಕ್, ಹಾಗೂ ಪವಿತ್ರಾ, ಅಗ್ರಿಕಲ್ಚರಲ್ ಇನ್ಸುರನ್ಸ್ ಕಂಪನಿ ವಿಮಾ…

Read More

ವಿಜಯಪುರ: ಜಿಲ್ಲೆಯ ಯುವಕ ಯುವತಿಯರಿಗೆ ಉದ್ಯೋಗ ಕೌಶಲ್ಯ ತರಬೇತಿ ನೀಡುವುದರ ಜೊತೆಗೆ ಸ್ವಯಂ ಉದ್ಯೋಗ ಸ್ಥಾಪನೆ ಮಾಡುವಂತೆ ಪ್ರೇರೆಪಿಸಬೇಕು ಎಂದು ಕನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕಾಂತಾ ನಾಯಕ ಅವರು ಹೇಳಿದರು.ಶುಕ್ರವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ೯ ಬೃಹತ್ ಪ್ರಮಾಣದ ಸಕ್ಕರೆ ಕಾರ್ಖಾನೆಗಳಿದ್ದು, ೨೦೨೨-೨೩ನೇ ಸಾಲಿನಲ್ಲಿ ಒಟ್ಟು ೯,೪೭೬ ಉದ್ಯಮಗಳು ನೋಂದಣಿಯಾಗಿರುತ್ತವೆ. ಕೌಶಲ್ವಾಭಿವೃದ್ಧಿ ಇಲಾಖೆಯೆ ಮುಖಾಂತರ ನಿರುದ್ಯೋಗಿ ಯುವಕ/ಯುವತಿಯರಿಗೆ ಅವರ ಅನುಭವ ಕೌಶಲ್ಯಗಳ ಆಧಾರದ ಮೇಲೆ ತರಬೇತಿಯನ್ನು ನೀಡಿ ಉದ್ಯೋಗ ಸೃಷ್ಟಿಗೆ ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದರು.ತರಬೇತಿಯೂ ಕೇವಲ ಉದ್ಯೋಗ ಕೊಡಿಸುವುದಷ್ಟೇ ಗುರಿಯಾಗಿರಬಾರದು, ಆತ್ಮ ವಿಶ್ವಾಸ ಬೆಳಸಿ ಅವರನ್ನು ಯಶಸ್ವಿ ಉದ್ಯಮಿಯಾಗಿ ಜೀವನ ನಡೆಸುವಂತೆ ಸ್ಪೂರ್ತಿದಾಯಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅವರ ಬೇಡಿಕೆಯನುಸಾರವಾಗಿ ವಿವಿಧ ತರಬೇತಿಗಳನ್ನು ನೀಡುವಲ್ಲಿ ಎಲ್ಲಾ ಇಲಾಖೆಗಳು ಸಮನ್ವಯತೆ ಸಾಧಿಸಿಬೇಕು ಎಂದರು.ಜಿಲ್ಲೆಯಲ್ಲಿ ಸ್ಥಾಪನೆಗೊಂಡಿರುವ ಉದ್ಯಮ, ಇಂಡಸ್ಟಿçಗಳಲ್ಲಿ ಸ್ಥಳೀಯ ಜನರಿಗೆ ಆಧ್ಯತೆಯನ್ನು ನೀಡಬೇಕು. ಜಿಲ್ಲೆಯಲ್ಲಿ ನಿರುದ್ಯೋಗ ಪ್ರಮಾಣ…

Read More