Author: editor.udayarashmi@gmail.com

ಬಸವನಬಾಗೇವಾಡಿ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗ್ರಾಮಾಡಳಿತಾಧಿಕಾರಿಗಳ ಸಂಘಕ್ಕೆ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಸ್ಥಳೀಯ ಗ್ರಾಮಾಡಳಿತಾಧಿಕಾರಿ ಸಂತೋಷ ಕುಂಟೋಜಿ ಅವರನ್ನು ಗುರುವಾರ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕರಾದ ಸಂತೋಷ ದೇಸಾಯಿ, ಜಿ.ಟಿ.ನಾಯಕ, ಜಗದೀಶ ಹಾರಿವಾಳ, ಗ್ರಾಮಾಡಳಿತಾಧಿಕಾರಿಗಳಾದ ರಮಾನಂದ ಚಕ್ಕಡಿ, ಅನಿಲ ಚವ್ಹಾಣ, ಲೋಹಿತ ಬೈರಗೊಂಡ, ರೆಹಮಾನ ಕನಾಮೇಶ್ವರ, ಶಿವಾನಂದ ಹಳ್ಳೂರ, ಅಂಜುಮ ಅವಟಿ ಇತರರು ಇದ್ದರು.

Read More

ಬಸವನಬಾಗೇವಾಡಿ: ಪ್ರಾಥಮಿಕ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಶಿಸ್ತು, ದೇಶಪ್ರೇಮ, ಭಾವೈಕ್ಯತೆ ಮೂಡಿಸಲು ಭಾರತ ಸೇವಾದಳದ ಘಟಕಗಳನ್ನು ಪ್ರಾಥಮಿಕ ಶಾಲಾ ಹಂತದಿಂದ ಆರಂಭಿಸಿರುವುದು ಶ್ಲಾಘನೀಯ ಎಂದು ಕ್ಷೇತ್ರಸಮನ್ವಾಧಿಕಾರಿ ಪಿ.ಯು.ರಾಠೋಡ ಹೇಳಿದರು.ಪಟ್ಟಣದ ಬಸವೇಶ್ವರ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿರುವ ಭಾರತ ಸೇವಾದಳದ ಕಾರ್ಯಾಲಯದಲ್ಲಿ ಭಾರತ ಸೇವಾದಳದ ಜಿಲ್ಲಾ ಹಾಗೂ ತಾಲೂಕು ಸಮಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಭಾರತ ಸೇವಾದಳದ ಶಿಕ್ಷಕರ ಪುನಶ್ಚೇತನ ಕಾರ್ಯಕ್ರಮದಲ್ಲಿ ಡಾ. ನಾ.ಸು.ಹರ್ಡೇಕರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಅರ್ಪಿಸಿದ ನಂತರ ಮಾತನಾಡಿದ ಅವರು, ಭಾರತ ಸೇವಾದಳ ಸೇರಲು ವಿದ್ಯಾರ್ಥಿಗಳು ದೈಹಿಕ,ಭೌತಿಕವಾಗಿ ಸದೃಢರಾಗಿರಬೇಕು. ಅಲ್ಲದೇ ಮಾನಸಿಕ ಸ್ವಾಸ್ಥ್ಯದಿಂದ ಇರಬೇಕು. ಭಾರತ ಸೇವಾದಳದಿಂದ ರಾಷ್ಟ್ರಗೀತೆ, ರಾಷ್ಟ್ರಧ್ವಜಕ್ಕೆ ಗೌರವ ನೀಡುವುದು, ಸಹೋದರತೆ, ಭಾವೈಕ್ಯತೆ, ನಾಯಕತ್ವ ಗುಣ, ಸಮಾನತೆ, ಸರಳತೆ, ಪ್ರಾಮಾಣಿಕತೆ, ದೇಶಪ್ರೇಮ,ಶಿಸ್ತು ಸೇರಿದಂತೆ ಅನೇಕ ಗುಣಗಳನ್ನು ವಿದ್ಯಾರ್ಥಿಗಳು ಕಲಿತುಕೊಳ್ಳುತ್ತಾರೆ. ಭಾರತ ಸೇವಾದಳದ ಶಿಕ್ಷಕರು ಇಂತಹ ಗುಣಗಳನ್ನು ವಿದ್ಯಾರ್ಥಿಗಳಲ್ಲಿ ಮೈಗೂಡಿಸಬೇಕೆಂದರು.ಕಾರ್ಯಕ್ರಮ ಉದ್ಘಾಟಿಸಿದ ಭಾರತ ಸೇವಾದಳದ ಕೇಂದ್ರ ಸಮಿತಿ ಸದಸ್ಯ ಶಿವನಗೌಡ ಬಿರಾದಾರ…

Read More

“ಪ್ರಬುಧ್ಧ ಮನಸ್ಸು ಪ್ರಬುಧ್ಧ ಸಮಾಜ”- ವಿವೇಕಾನಂದ. ಎಚ್. ಕೆ. ಬೆಂಗಳೂರು ಸಾಮಾಜಿಕ ಜಾಲತಾಣಗಳು ಕನ್ನಡ ಭಾಷೆ ಮತ್ತು ಸಾಹಿತ್ಯದ ಮೇಲೆ ಬೀರಿದ ಪ್ರಭಾವ..ಸುಮಾರು 10/15 ವರ್ಷಗಳ ಹಿಂದೆ ಇದ್ದ ಕನ್ನಡ ಭಾಷೆ ಮತ್ತು ಸಾಹಿತ್ಯದ ಬಗೆಗಿನ ಆತಂಕ ಈಗ ಅಷ್ಟಾಗಿ ಕಾಣುತ್ತಿಲ್ಲ. ಫೇಸ್ ಬುಕ್, ವಾಟ್ಸ್ ಆಪ್, ಎಕ್ಸ್, ಇನ್ಸ್ಟಾಗ್ರಾಂ ಮುಂತಾದ ಜಾಲತಾಣಗಳ ಸಂಪರ್ಕ ಕ್ರಾಂತಿಯಿಂದ ಆದ ಕೆಲವು ಒಳ್ಳೆಯ ಬೆಳವಣಿಗೆಗಳಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಬಹಳ ಉಪಯೋಗವಾಗಿದೆ ಎಂಬುದನ್ನು ಗಮನಿಸಬಹುದು.ಮೊದಲೆಲ್ಲಾ ಕೇವಲ ಪತ್ರಿಕೆಗಳು, ನಿಯತಕಾಲಿಕೆಗಳು, ಒಂದಷ್ಟು ಸಾಂಸ್ಕೃತಿಕ ವೇದಿಕೆಗಳು, ಪ್ರಕಾಶನಗಳು ಮತ್ತು ಬೆರಳೆಣಿಕೆಯ ಬರಹಗಾರರು ಬಿಟ್ಟರೆ ಸಾಮಾನ್ಯರಿಂದ ಸಾಹಿತ್ಯ ದೂರವೇ ಇತ್ತು. ಸಿನಿಮಾ ಜನಪ್ರಿಯತೆಗೆ ಹೋಲಿಸಿದರೆ ಸಾಹಿತ್ಯ ಕೆಲವೇ ಜನರ ಆಸಕ್ತಿದಾಯಕ ಕ್ಷೇತ್ರವಾಗಿತ್ತು. ಆದರೆ ಈಗ ನೋಡಿ ಸಾಮಾನ್ಯ ಜನರೂ ತಮ್ಮ ಭಾವನೆ ಅಭಿಪ್ರಾಯಗಳನ್ನು ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಅದೂ ಕನ್ನಡದಲ್ಲಿಯೇ ವ್ಯಕ್ತಪಡಿಸುತ್ತಿದ್ದಾರೆ. ಕೆಲವು ಯುವ ಪ್ರತಿಭೆಗಳಂತೂ ಮೂಕವಿಸ್ಮಿತರಾಗುವಂತೆ ತಮ್ಮ ಬರಹಗಳನ್ನು ಮೂಡಿಸುತ್ತಿದ್ದಾರೆ. ಅವರ ಭಾಷೆ, ಕಲ್ಪನೆ, ನಿರೂಪಣೆ…

Read More

ಕೆಂಭಾವಿ: ಪಟ್ಟಣವು ಸೇರಿದಂತೆ ವಲಯದಲ್ಲಿರುವ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಓದುತ್ತಿರುವ ಮಕ್ಕಳ ದಾಖಲಾತಿ ಸಮಗ್ರ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಹೋರಾಟಗಾರ ಗೋಪಾಲ ಕಟ್ಟಿಮನಿ ಒತ್ತಾಯಿಸಿದ್ದಾರೆ.ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಮಕ್ಕಳ ಅಧಿಕೃತ ದಾಖಲಾತಿ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಇದ್ದು ಅಂತಹ ಮಕ್ಕಳೇ ಖಾಸಗಿ ಶಾಲೆಗಳಿಗೆ ಓದಲು ತೆರಳುತ್ತಿರುವ ಸನ್ನಿವೇಶ ಕಂಡು ಬರುತ್ತಿದೆ. ಇದಕ್ಕೆ ನೇರ ಹೊಣೆ ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರು, ಏಕೆಂದರೆ ಮಕ್ಕಳ ದಾಖಲಾತಿ ತೋರಿಸಿ ಬಿಸಿಯೂಟಕ್ಕೆ ಬೇಕಾದ ಸಾಮಗ್ರಿಗಳ ಖರೀದಿ ಮಾಡುತ್ತಾರೆ. ಇಲ್ಲಿ ಸಾಕಷ್ಟು ಲೋಪ ದೋಷಗಳು ಕಂಡರು ಕಣ್ಮುಚ್ಚಿ ಕುಳಿತ ಇಲಾಖೆ. ಹಣ ಗಳಿಸಲು ಮುಂದಾದ ಖಾಸಗಿ ಶಿಕ್ಷಣ ಸಂಸ್ಥೆಗಳು ಅಂತಹ ಮಕ್ಕಳನ್ನು ಶಾಲೆಗೆ ಬರಮಾಡಿಕೊಳ್ಳುತ್ತಿವೆ. ಇದು ಮಕ್ಕಳು ಕಲಿಕೆಯ ಮೇಲೆ ದುಷ್ಪರಿಣಾಮ ಬೀರಲಿದೆ. ಕಾರಣ ಇದರ ಸಮಗ್ರ ತನಿಖೆ ನಡೆಸಿ ಇದಕ್ಕೆ ಸಹಕಾರ ನೀಡುತ್ತಿರುವ ಶಾಲಾ ಶಿಕ್ಷಕರು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಕಾನೂನು…

Read More

ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ ಆಸ್ಪತ್ರೆಗೆ ಹೆರಿಗೆಗೆ ಆಗಮಿಸುವ ಗರ್ಭಿಣಿ ಮಹಿಳೆಯರಿಗೆ ಉಚಿತ ಚಿಕಿತ್ಸೆ ವ್ಯವಸ್ಥೆ ಕಲ್ಲಿಸಲಾಗಿದೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ, ಹೆರಿಗೆಗೆ ಆಸ್ಪತ್ರೆಗೆ ಆಗಮಿಸುವ ಮಹಿಳೆಯರಿಗೆ ಉಚಿತ ಹೆರಿಗೆ ಸೇರಿದಂತೆ ಇತರ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿಪತಿ ಮತ್ತು ಸಚಿವರೂ ಆಗಿರುವ ಎಂ. ಬಿ. ಪಾಟೀಲ ಅವರು, ಕೊರೊನಾ ಸಂದರ್ಭದಲ್ಲಿ ಸರಕಾರ ನಿಗದಿ ಪಡಿಸಿದ ದರಕ್ಕಿಂತಲೂ ಕಡಿಮೆ ದರದಲ್ಲಿ ಚಿಕಿತ್ಸೆ ಮತ್ತು ಬಹಳಷ್ಟು ಜನರಿಗೆ ಉಚಿತ ಚಿಕಿತ್ಸೆ ಒದಗಿಸಿ ಮಾದರಿ ಕಾರ್ಯ ಮಾಡಿದ್ದರು. ರೋಗಿಗಳ ಸೇವೆಯಲ್ಲಿ ಸದಾ ಮುಂಚೂಣಿಯಲ್ಲಿರುವ ಆಸ್ಪತ್ರೆ ಈಗ ಈಗ ಅವರ ಸೂಚನೆಯಂತೆ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಉಪಯೋಗವಾಗಲು ಮತ್ತೋಂದು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಅವರು…

Read More

ಖೊಟ್ಟಿ ದಾಖಲೆ ಸೃಷ್ಠಿಸಿ ಭೂಮಿ ಮಾರಾಟ ಮಾಡಿ ವಂಚಿಸುತ್ತಿದ್ದ ಖದೀಮರು ಅಂದರ್! ವಿಜಯಪುರ: ಜಿಲ್ಲೆಯಲ್ಲಿ ಖೊಟ್ಟಿ ದಾಖಲೆ ಸೃಷ್ಠಿಸಿ ಭೂಮಿ ಮಾರಾಟ ಮಾಡಿ ವಂಚಿಸುತ್ತಿದ್ದ ಬೇರೆ ಬೇರೆ ಪ್ರಕರಣಗಳನ್ನು ವಿಜಯಪುರ ಸಿಇಎನ್ ಮತ್ತು ಆದರ್ಶ ನಗರ ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಿದ್ದಾರೆ.ಈ ಕುರಿತಂತೆ ಗುರುವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಎಸ್ಪಿ ಋಷಿಕೇಶ ಸೋನಾವಣೆ ಅವರು, ಸಿಇಎನ್ ಮತ್ತು ವಿಜಯಪುರ ನಗರದ ಆದರ್ಶ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾದ ಪ್ರಕರಣಗಳ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ವಿವರಿಸಿದರು.ವಿಜಯಪುರ ನಗರದ ಕೆ.ಎಚ್.ಬಿ ಕಾಲನಿಯ ಮಾರುತಿ ರಾಜಾರಾಮ ನಾರಾಯಣಕರ ಅವರಿಗೆ ತಿಕೋಟಾ ತಾಲೂಕಿನ ತೊರವಿ ಗ್ರಾಮದ ವ್ಯಾಪ್ತಿಯಲ್ಲಿರುವ ಒಂದು ಎಕರೆ 36 ಗುಂಟೆ ಜಮೀನನ್ನು ಖೊಟ್ಟಿ ದಾಖಲೆ ಸೃಷ್ಠಿಸಿ ಕಬ್ಜಾರಹಿತ ಖರೀದಿ ಇಸಾರ ಕರಾರು ಪತ್ರ ಮಾಡಿಕೊಂಡು ರೂ. 25 ಲಕ್ಷ ಹಣವನ್ನು ಪಡೆದಿದ್ದರು. ಆದರೆ, ಅವರು ನೀಡಿದ ದಾಖಲೆಗಳು ಖೊಟ್ಟಿ ಎಂದು ಗೊತ್ತಾಗಿ ಹಣ ಮರಳಿಸಲು…

Read More

ಆರೋಗ್ಯ ಇಲಾಖೆ ಪ್ರಗತಿ ಪರಿಶೀಲಿಸಿದ ಆರೋಗ್ಯ ಸಚಿವರು | ತಜ್ಞ ವೈದ್ಯರ ನೇಮಕಾತಿಗೆ ಅನುಮತಿ | ಅಧಿಕಾರಿಗಳಿಗೆ ಖಡಕ್ ಸೂಚನೆ ವಿಜಯಪುರ: ಜಿಲ್ಲೆಯಲ್ಲಿನ ವೈದ್ಯರ ಕೊರತೆ ನೀಗಿಸುವ ನಿಟ್ಟಿನಲ್ಲಿ ಗುತ್ತಿಗೆ ಆಧಾರದ ಮೇಲೆ ತಜ್ಞರ ವೈದ್ಯರ ನೇಮಕಾತಿಗಾಗಿ ಅನುಮತಿ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ ಆರ್.ಗುಂಡೂರಾವ್ ಅವರು ಹೇಳಿದರು.ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ಜಿಲ್ಲೆಯಲ್ಲಿರುವ ಮೆಡಿಕಲ್ ಕಾಲೇಜುಗಳೊಂದಿಗೆ ಸಮನ್ವಯತೆ ಸಾಧಿಸಿಕೊಂಡು, ಅವರೊಂದಿಗೆ ಸಂಯೋಜನೆ ಮಾಡಿ, ವೈದ್ಯರ ಹಾಗೂ ಇತರ ಸಿಬ್ಬಂದಿಗಳ ಕೊರತೆ ನೀಗಿಸಲು ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ತಾಯಿ ಮತ್ತು ಶಿಶುವಿನ ಮರಣ ಪ್ರಮಾಣವನ್ನು ತಗ್ಗಿಸಲು ಅಗತ್ಯ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಭ್ರೂಣ ಹತ್ಯೆ ತಡೆಗೆ ಸೂಕ್ತ ಜಾಗೃತಿ ಹಾಗೂ ತಿಳುವಳಿಕೆ ಮೂಡಿಸಬೇಕು. ಭ್ರೂಣ ಹತ್ಯೆ ತಡೆಗೆ ತಳಮಟ್ಟದಿಂದ ಯೋಜನೆ ರೂಪಿಸಿ, ಭ್ರೂಣ…

Read More

ಸಿಎಂ ಭೇಟಿ ಮಾಡಿದ ಕಾನಿಪ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೇತೃತ್ವದ ನಿಯೋಗ ಬೆಂಗಳೂರು: ಪತ್ರಕರ್ತರಿಗೆ ಉಚಿತ ಆರೋಗ್ಯ, ಬಸ್ ಪಾಸ್ ಮತ್ತಿತರ ಬೇಡಿಕೆಗಳ ಬಗ್ಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗ ಮನವಿ ಸಲ್ಲಿಸಿದೆ.ಅರ್ಜಿ ಸಲ್ಲಿಸಿದ್ದರೂ, ಅರ್ಹ ಪತ್ರಕರ್ತರ ಮಾಸಾಶನ ಮಂಜೂರು ಮಾಡಿಲ್ಲ. ಮೂರ‌್ನಾಲ್ಕು ತಿಂಗಳಾದರೂ ಪತ್ರಕರ್ತರ ಮಾಸಾಶನ ಇನ್ನೂ ಬಿಡುಗಡೆ ಆಗಿಲ್ಲ ಎಂಬಿತ್ಯಾದಿ ಬೇಡಿಕೆಗಳ ಬಗ್ಗೆ ಸಿಎಂ ಗಮನಕ್ಕೆ ತರಲಾಗಿದೆ.ಹಿಂದುಳಿದ ವರ್ಗ, ಬ್ರಾಹ್ಮಣ ಮತ್ತು ದಲಿತ ವರ್ಗಗಳಿಗೆ ಬಿಡುಗಡೆ ಮಾಡಬೇಕಾದ ಜಾಹೀರಾತುಗಳ ಬಗ್ಗೆ ಸಿಎಂ ಗಮನ ಸೆಳೆಯಲಾಯಿತು.ಮಾಧ್ಯಮ ಅಕಾಡೆಮಿ, ಪ್ರೆಸ್ ಕ್ಲಬ್ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಂಟಿಯಾಗಿ ಜುಲೈ 1 ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ ಆವರಣದಲ್ಲಿ ಆಯೋಜಿಸಿರುವ ಪತ್ರಿಕಾ ದಿನಾಚರಣೆಗೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಯಿತು.ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು, ರಾಜ್ಯ ಸಮಿತಿ ಸದಸ್ಯರಾದ ಎನ್.ರವಿಕುಮಾರ್ ಮತ್ತು ರಾಜ್ಯ…

Read More

ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ’ವಚನಗಳಲ್ಲಿ ವಿಜ್ಞಾನ’ ಉಪನ್ಯಾಸ ವಿಜಯಪುರ: ೧೨ ನೇ ಶತಮಾನದ ಶರಣರ ವೈಜ್ಞಾನಿಕ ಚಿಂತನೆಗಳ ಒಲವು ವಚನ ಸಾಹಿತ್ಯ ಈ ನೆಲದ ಅಮೂಲ್ಯ ಸಂಪತ್ತು. ೧೨ ನೇ ಶತಮಾನದಲ್ಲಿಯೇ ಬಸವಾದಿ ಶರಣರು ವೈಜ್ಞಾನಿಕ ಚಿಂತನೆಗಳನ್ನು ತಮ್ಮ ವಚನಗಳಲ್ಲಿ ಬಹಳ ಸ್ಪಷ್ಠವಾಗಿ ಹೇಳಿದ್ದಾರೆ. ಅವುಗಳನ್ನು ಬಿತ್ತುವಂತಾಗಬೇಕು ಎಂದು ಸಾಹಿತಿ ಪ್ರೊ. ಸುಧಾ ಹುಚ್ಚಣ್ಣನವರ ಹೇಳಿದರು.ನಗರದ ಬಿ.ಎಲ್ ಡಿ ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಕನ್ನಡ ವಿಭಾಗದ ಸಂಯುಕ್ತಾಶ್ರಯದಲ್ಲಿ ’ವಚನಗಳಲ್ಲಿ ವಿಜ್ಞಾನ’ ಎಂಬ ವಿಶೇಷ ಉಪನ್ಯಾಸದಲ್ಲಿ ಮಾತನಾಡಿದ ಅವರು, ವಚನ ಸಾಹಿತ್ಯ ಈ ನೆಲದ ಅಮೂಲ್ಯ ಸಂಪತ್ತು. ೧೨ ನೇ ಶತಮಾನದಲ್ಲಿಯೆ ಬಸವಾದಿ ಶರಣರು ವೈಜ್ಞಾನಿಕ ಚಿಂತನೆಗಳನ್ನು ತಮ್ಮ ವಚನಗಳಲ್ಲಿ ಬಹಳ ಸ್ಪಷ್ಡವಾಗಿ ಹೇಳಿದ್ದಾರೆ. ಅಂದಿನ ಶರಣರು ಸಾಮಾಜಿಕ ಆಧ್ಯಾತ್ಮೀಕ ಸುಧಾರಣೆಗೆ ಒತ್ತು ನೀಡಿದ ಹಾಗೆ ವೈಚಾರಿಕ ಮತ್ತು ವೈಜ್ಞಾನಿಕ ಚಿಂತನೆಗಳ ಕುರಿತು ಹೆಚ್ಚಿನ ಒಲವುಗಳನ್ನು ತೋರಿದ್ದರು ಎಂದು ಸೂಚಿಸುತ್ತದೆ.…

Read More