Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಜೈನ ಧರ್ಮದ 24ನೇ ತೀರ್ಥಂಕರ ಭಗವಾನ್ ಮಹಾವೀರ ಜಯಂತಿಯನ್ನು ಆಚರಿಸಲಾಯಿತು.ಸೋಮವಾರ ಡೀಮ್ಡ್ ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಅವರು ಭಗವಾನ‌ ಮಹಾವೀರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.ಬಳಿಕ ಮಾತನಾಡಿದ ಅವರು, ಭಗವಾನ್ ಮಹಾವೀರರು ಅಹಿಂಸೆ, ಸತ್ಯ, ಅಸ್ತೇಯ, ಬ್ರಹ್ಮಚರ್ಯ ಮತ್ತು ಅಪರಿಗ್ರಹ ಎಂಬ ಪಂಚಮಹಾವ್ರತಗಳನ್ನು ಬೋಧಿಸಿದ್ದಾರೆ. ಈ ತತ್ವಗಳು ನಮ್ಮ ವ್ಯಕ್ತಿತ್ವವನ್ನು ಶೇಷ್ಠಗೋಳಿಸುವ ಮಾರ್ಗಸೂಚಿಗಳಾಗಿವೆ. ಎಲ್ಲರೂ ಅವರ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೇಳಿದರು.ಈ ಕಾರ್ಯಕ್ರಮದಲ್ಲಿ ವೈದ್ಯಕೀಯ ವಿಭಾಗದ ಡೀನ ಮತ್ತು ಪ್ರಾಚಾರ್ಯೆ ಡಾ. ತೇಜಸ್ವಿನಿ ವಲ್ಲಭ, ಸೂಪರ್ ಸ್ಪೆಷಿಯಾಲಿಟಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ಪರೀಕ್ಷೆ ನಿಯಂತ್ರಣಾಧಿಕಾರಿ ಡಾ. ಎಸ್. ಎಸ್. ದೇವರಮನಿ, ಉಪಪ್ರಾಂಶುಪಾಲ ಡಾ. ಆನಂದ ಪಿ. ಅಂಬಲಿ, ಆರ್. ಆ್ಯಂಡ್ ಡಿ ವಿಭಾಗದ ನಿರ್ದೇಶಲ ಡಾ. ಎಂ. ಎಂ. ಪಾಟೀಲ, ಕಾನೂನು ಶಾಲೆಯ…

Read More

ವಿಜಯಪುರ ಜಿಲ್ಲಾಡಳಿತದಿಂದ ಭಗವಾನ ಮಹಾವೀರ ಜಯಂತಿ ಆಚರಣೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತ್ಯಾಗಕ್ಕೆ ಮತ್ತೊಂದು ಹೆಸರು ಭಗವಾನ್ ಮಹಾವೀರರು. ಅವರು ಈ ಸಮಾಜಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅವರು ಹೇಳಿದರು.ನಗರದ ಕಂದಗಲ್ ಶ್ರೀ ಹನಮಂತರಾಯ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸೋಮವಾರ ಭಗವಾನ್ ಶ್ರೀ ಮಹಾವೀರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಮಾನತೆ, ಜಾತಿ ಪದ್ಧತಿ ನಿರಾಕರಿಸಿ ಎಲ್ಲರೂ ಸಮಾನರು ಎಂದು ಬೋಧಿಸಿದ ಮಹಾನ್ ಪುರುಷ ಭಗವಾನ್ ಮಹಾವೀರರು ಎಂದು ಬಣ್ಣಿಸಿದರು. ಭಗವಾನ್ ಮಹಾವೀರರು ಮನುಕುಲಕ್ಕೆ ಸಾರಿದ ಸತ್ಯ, ಅಹಿಂಸೆಯಂತಹ ಮೌಲ್ವಿಕ ತತ್ವಗಳು ಸಾರ್ವಕಾಲಿಕವಾಗಿದ್ದು, ಅವರ ಸಂದೇಶಗಳನ್ನು ಯುವಕರು ಅರ್ಥೈಸಿಕೊಂಡು ಆದರ್ಶ ಜೀವನ ನಡೆಸಬೇಕೆಂದರು.ಸಂತರು, ಸತ್ಪುರುಷರು, ದಾರ್ಶನಿಕರ ಜೀವನಾದರ್ಶಗಳು ಹಾಗೂ ಅವರು ನೀಡಿದ ಸಂದೇಶಗಳನ್ನು ಅರಿತುಕೊಳ್ಳುವ ಮೂಲಕ ಯುವಕರು ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುವ ಮೂಲಕ ಜೀವನ ಪಾವನಗೊಳಿಸಿಕೊಳ್ಳಬೇಕು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಆಲಮೇಲ ತಾಲೂಕಿನ ಮೋರಟಗಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಮೋರಟಗಿ ಗ್ರಾಮವನ್ನು ಹಾಗೂ ಸಿಂದಗಿ ತಾಲೂಕಿನ ಗಬಸಾವಳಗಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಗಬಸಾವಳಗಿ, ಕೆರೂರ, ಆಹೇರಿ, ಬಿಸನಾಳ ಹಾಗೂ ಹಂಚಿನಾಳ ಗ್ರಾಮಗಳನ್ನು ಹಾಗೂ ಗುತ್ತರಗಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಗುತ್ತರಗಿ ಹಾಗೂ ಭಂಟನೂರ ಗ್ರಾಮಗಳನ್ನು ಮತ್ತು ತಾಳಿಕೋಟಿ ತಾಲೂಕಿನ ಸಾಸನೂರ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸಾಸನೂರ ಹಾಗೂ ಚಬನೂರ ಗ್ರಾಮಗಳನ್ನು ಹಾಗೂ ಬಸವನಬಾಗೇವಾಡಿ ತಾಲೂಕಿನ ವಡವಡಗಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ವಡವಡಗಿ, ಹುಲಿಬೆಂಚಿ, ನಾಗರಾಳಹುಲಿ, ನಂದಿಹಾಳ ಪಿ.ಎಚ್, ಸಿಂಧಗೇರಿ ಹಾಗೂ ಶರಣ ಸೋಮನಾಳ ಗ್ರಾಮಗಳನ್ನು ಒಳಪಡಿಸಿ, ಗ್ರಾಮ ಪಂಚಾಯತಿಗಳನ್ನು ಪುನರ್ ರಚಿಸಿ, ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಡಾ. ಆನಂದ. ಕೆ. ಅವರು ಅಧಿಸೂಚನೆ ಹೊಡಿಸಿದ್ದಾರೆ.ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಏಪ್ರಿಲ್.೨ ರೊಳಗೆ ಲಿಖಿತವಾಗಿ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಏಪ್ರಿಲ್ 27 ಮತ್ತು 28 ರಂದು ಸಿಂದಗಿ ನಗರದಲ್ಲಿ ನಡೆಯುವ 21ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಆರಕ್ಷಕ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕವಿಗೋಷ್ಠಿ, ವಿಚಾರಗೋಷ್ಠಿ, ಉಪನ್ಯಾಸ, ಸಂಗೀತ, ಜನಪದ, ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅವಕಾಶ ನೀಡಬೇಕು. ಈ ಮೂಲಕ ಪೊಲೀಸರ ವಿವಿಧ ಕಲೆಗೆ ಪ್ರೋತ್ಸಾಹ ನೀಡಬೇಕು ಎಂದು ಮೌಲಾಲಿ ಆಲಗೂರ ಮನವಿ ಮಾಡಿಕೊಂಡರು.ಬಿಡುವಿಲ್ಲದ ಕರ್ತವ್ಯದ ನಡುವೆಯೂ ಜಿಲ್ಲೆಯ ನೂರಾರು ಆರಕ್ಷಕ ಅಧಿಕಾರಿ ಮತ್ತು ಸಿಬ್ಬಂದಿಗಳು, ಕಥೆ, ಕಾವ್ಯ, ಕಾದಂಬರಿ ಒಳಗೊಂಡ ಸಾಹಿತ್ಯ, ಸಂಗೀತ, ಪ್ರವಚನ, ಜನಪದ, ನೃತ್ಯ, ನಟನೆ, ಸೇರಿದಂತೆ ಹಲವು ಕಲೆಗಳನ್ನು ಕರಗತ ಮಾಡಿಕೊಂಡಿದ್ದಾರೆ. ತಮ್ಮ ಬಿಡುವಿನ ಅವಧಿಯನ್ನು ಕಲಾ ಆರಾಧನೆಗೆ ಅರ್ಪಿಸಿದ್ದಾರೆ. ಆದರೆ ಅವರಿಗೆ ಸೂಕ್ತ ವೇದಿಕೆ ಇಲ್ಲದೆ ಕಲೆಗೆ ಬೆಲೆ ಸಿಗದಂತಾಗಿದೆ. ಆದ್ದರಿಂದ ಏಪ್ರಿಲ್ ಕೊನೆಯ ವಾರದಲ್ಲಿ ಜರುಗುವ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಆರಕ್ಷಕರಿಗೆ ಅವಕಾಶ ನೀಡಿ, ಅವರ ಕಲೆ ಇಮ್ಮಡಿಗೊಳಿಸಬೇಕು.ಹಂಸಕವಿ ನಾಮದ ಬೀದರ ಜಿಲ್ಲೆ ಹೆಡ್ ಕಾನ್ಸ್‌ಟೇಬಲ್ ಹಣಮಂತರಾಯ ವಲ್ಲೆಪುರ…

Read More

ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಸಮೀಪದ ಹುಣಶ್ಯಾಳ ಗ್ರಾಮದ ಟಿಪ್ಪುಸುಲ್ತಾನ ಹೈದರಸಾಬ ಸಿಪಾಯಿ ಅವರನ್ನು ಕೆಪಿಸಿಸಿ ಅಧ್ಯಕ್ಷರ ನರ್ಧೇಶನದ ಮೇರೆಗೆ ಹಾಗೂ ಮಾಜಿ ಶಾಸಕರಾದ ಶರಣಪ್ಪ ಸುಣಗಾರ ಅವರ ಶಿಫಾರಸ್ಸಿನಂತೆ ದೇವರಹಿಪ್ಪರಗಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಂಘಟನಾ ಕಾರ್ಯದರ್ಶಿಯನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಎಸ್. ಲೋಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಹಣ ಪಡೆದು ವಿದ್ಯಾರ್ಥಿಗಳಿಗೆ ಇಷ್ಟವಾದ ಕೇಂದ್ರ | ಸಂಭಾಷಣೆ ಮತ್ತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಆಡಿಯೋ ವೈರಲ್ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಬೇಕಾದ ಕೇಂದ್ರಗಳ ವ್ಯವಸ್ಥೆ ಮಾಡಿ ಕೊಡುವುದಾಗಿ ಸುಮಾರು ೩೦ಕ್ಕೂ ಅಧಿಕ ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡಿ, ಅವರು ಕೇಳಿದ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷಾ ದಾಖಲಾತಿ ನೀಡುವ ಭರವಸೆಯನ್ನು ಸಿಂದಗಿ ಸರಕಾರಿ ಆದರ್ಶ ಶಾಲೆಯ ಶಿಕ್ಷಕ ರಮೇಶ ಚಟ್ಟರಕಿ ನೀಡಿದ್ದರು ಎಂಬ ಸಂಭಾಷಣೆ ಮತ್ತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಇದೀಗ ಬೆಳಕಿಗೆ ಬಂದಿದೆ.ಈ ಕುರಿತು ನಮ್ಮ ಮಾಧ್ಯಮ ಪ್ರತಿನಿಧಿಯೊಂದಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಮಹಾಂತೇಶ ಯಡ್ರಾಮಿ ಮಾತನಾಡಿ, ಸಾಮಾಜಿಕ ಜಾಲತಾಣದಲ್ಲಿ ಈ ವಿಷಯದ ಕುರಿತು ವೈರಲ್ ಆಗಿದೆ. ಅದಕ್ಕೆ ಸಂಬಂಧಿಸಿದಂತೆ ಶಿಕ್ಷಕ ರಮೇಶ ಚೆಟ್ಟರಕಿ ಅವರಿಗೆ ಈಗಾಗಲೇ ನೋಟಿಸ್ ಜಾರಿ ಮಾಡಲಾಗಿದೆ. ಮತ್ತು ಮೇಲಾಧಿಕಾರಿಗಳ ಆದೇಶದ ಮೇರೆಗೆ ಶಾಲೆಯ ಶಿಕ್ಷಕನ ಈ ಕಾರ್ಯಕ್ಕೆ ಏನು ಮಾಡಿದ್ದಾರೆ ಎಂದು ಮುಖ್ಯೋಪಾಧ್ಯಾಯರಿಗೂ ಒಂದು ನೋಟಿಸ್ ನೀಡಿ ಎಂದು ಹೇಳಿದ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರದ ಸರಕಾರಿ ಉರ್ದು ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರಿ ಸಂಘ ನಿ. ೨೦೨೬-೨೦೩೧ನೆಯ ಸಾಲಿನ ಅವಧಿಗೆ ಅಧ್ಯಕ್ಷರಾಗಿ ಝಡ್.ಎಸ್.ಮುನಿಯಾರ, ಉಪಾಧ್ಯಕ್ಷರಾಗಿ ಎ.ಡಿ.ಭೂಸನೂರ. ನಿರ್ದೇಶಕರಾಗಿ ಅಲ್ತಾಫ್ ಸಾಲೋಟಗಿ. ಡಿ.ಎಲ್.ಮರ್ತೂರ. ಝಡ್.ಎಸ್. ಬಗಲಿ. ಎಂ.ಎ.ನಾಯ್ಕೋಡಿ. ಎಂ.ಎಚ್.ಮರ್ತೂರ. ಆರ್.ಎಂ.ಹಳ್ಳಿ ಮಹಿಳಾ ನಿರ್ದೇಶಕರಾಗಿ ಎನ್.ಆರ್.ಮಕಾನದಾರ. ಆರ್.ಜಿ.ತಾಂಬೋಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುಣಾವಣಾಧಿಕಾರಿ ವಿ.ಆರ್.ಜತ್ತಿ ತಿಳಸಿದ್ದಾರೆ.

Read More

೨೧ನೆಯ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಶಾಸಕ ಅಶೋಕ ಮನಗೂಳಿ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಜಿಲ್ಲಾ ಸಮ್ಮೇಳನವನ್ನು ಏಪ್ರಿಲ್ ಪ್ರಥಮ ವಾರದಲ್ಲಿ ಹಮ್ಮಿಕೊಳ್ಳಲು ನಿಶ್ಚಯಿಸಲಾಗಿತ್ತು. ಆದರೆ ಪ್ರಥಮ ವಾರದಲ್ಲಿ ಪರೀಕ್ಷೆಗಳು ಹಾಗೂ ಮೌಲ್ಯಮಾಪನ, ದ್ವಿತೀಯ ವಾರದಲ್ಲಿ ಅಂಬೇಡ್ಕರ್ ಜಯಂತಿ, ಮೂರನೇ ವಾರದಲ್ಲಿ ಬಸವ ಜಯಂತಿಯ ಕಾರ್ಯಕ್ರಮಗಳು ಇರುವುದರಿಂದ ಏಪ್ರಿಲ್ ಕೊನೆಯ ವಾರ ೨೭ ಮತ್ತು ೨೮ರಂದು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದ್ದು ಅಧಿಕೃತ ದಿನಾಂಕವನ್ನು ಮುಂದಿನ ಸಭೆಯಲ್ಲಿ ತಿಳಿಸಲಾಗುವುದು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡ ೨೧ನೆಯ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಸುದೀರ್ಘ ೧೪ವರ್ಷಗಳ ಅವಧಿಯ ನಂತರ ಸಿಂದಗಿ ತಾಲೂಕಿಗೆ ಜಿಲ್ಲಾ ಸಾಹಿತ್ಯ ಸಮ್ಮೇಳನದ ಭಾಗ್ಯ ಒದಗಿ ಬಂದಿದ್ದು, ಸಮ್ಮೇಳನದ ಯಶಸ್ಸಿಗೆ ಎಲ್ಲ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು, ಮಹಿಳೆಯರು, ಹಿರಿಯ ಮತ್ತು ಕಿರಿಯ ಕವಿಗಳು, ಸಾಹಿತ್ಯಾಸಕ್ತರು ಮತ್ತು ಮಕ್ಕಳು ಕಂಕಣಬದ್ಧರಾಗಬೇಕು. ಸಾಹಿತ್ಯ ಪರಿಷತ್ತಿನ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಎ.ಡಿ.ಕೋರವಾರ ಆಗ್ರಹಿಸಿದ್ದಾರೆ.ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಗೋಲಗೇರಿ ಗ್ರಾಮವು ಸುಮಾರು ೮ಸಾವಿರ ಜನರನ್ನು ಹೊಂದಿರುವ ಗ್ರಾಮವಾಗಿದೆ. ಎರಡನೇ ಶ್ರೀಶೈಲ ಎಂದೇ ಖ್ಯಾತಿಯಾಗಿರುವ ಶ್ರೀ ಗೊಲ್ಲಾಳೇಶ್ವರ ದೇವಸ್ಥಾನವು ಗೋಲಗೇರಿಯಲ್ಲಿದೆ. ಲಕ್ಷಾಂತರ ಭಕ್ತರು ದೇವಸ್ಥಾನಕ್ಕೆ ದರ್ಶನ ಪಡೆಯಲು ಬರುತ್ತಾರೆ. ಈ ಗ್ರಾಮಕ್ಕೆ ಸರ್ಕಾರದ ಯೋಜನೆಯಲ್ಲಿ ಸಾಕಷ್ಟು ಅನುದಾನ ಬಂದರೂ ಸಹ ಈ ಗ್ರಾಮದಲ್ಲಿ ಮಾತ್ರ ಕುಡಿಯುವ ನೀರು ಮಾತ್ರ ಪೂರೈಕೆಯಾಗುತ್ತಿಲ್ಲ. ಜಲಜೀವನ ಮಿಷನ್ ಅಡಿಯಲ್ಲಿ ಸುಮಾರು ರೂ.೩ಕೋಟಿ ವೆಚ್ಚದ ಕಾಮಗಾರಿಯಾಗಿದೆ. ಆದರೆ ಆ ಕಾಮಗಾರಿಯು ಅರ್ಥಪೂರ್ಣವಾಗಿಲ್ಲ ಮತ್ತು ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ.ಇದರ ಕುರಿತಾಗಿ ಸ್ಥಳೀಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಮನಕ್ಕೂ ತಂದಿದ್ದೇವೆ. ಜಿಲ್ಲಾ ಪಂಚಾಯಿತ್ ಅನುದಾನದಲ್ಲಿ ಸುಮಾರು ೪ತೆರೆದೆ ಬಾವಿಗಳು ಇದಾವೆ. ಆದರೆ ಅದು ನೀರನ್ನು ರಾಜಕಾರಣಿಗಳ ಪಾಲಾಗಿದ್ದು, ಸಾರ್ವಜನಿಕರಿಗೆ ಉಪಯೋಗ ಇಲ್ಲದಂತಾಗಿದೆ ಜಿಲ್ಲಾ ಪಂಚಾಯತ್ ಮುಖ್ಯ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಜಾಲವಾದ ಗ್ರಾಮದ ರೈತರ ಜಮೀನುಗಳಿಗೆ ಏಕದರ ನಿಗದಿಮಾಡಿ ಖರೀದಿಸುವಂತೆ ಆಗ್ರಹಿಸಿ ರೈತರ ಸಂಘ ಹಾಗೂ ಡಿಎಸ್‌ಎಸ್ ಪದಾಧಿಕಾರಿಗಳು ಪ್ರತಿಭಟನೆ ಕೈಗೊಂಡರು.ಗ್ರಾಮದ ರೈತರ ಧರಣಿ ಸ್ಥಳಕ್ಕೆ ಭೇಟಿ ನೀಡಿದ ಉತ್ತರ ಕರ್ನಾಟಕ ರೈತರ ಸಂಘದ ರಾಜ್ಯಾಧ್ಯಕ್ಷ ಶಂಕರಗೌಡ ಹಿರೇಗೌಡ ಮಾತನಾಡಿ, ಜಾಲವಾದ ಗ್ರಾಮದಲ್ಲಿ ಹರಿಯಾಣ ಮೂಲದ ಆರ್‌ಇಝಡ್ ಟ್ರಾನ್ಸಮಿಷನ್ ಸೋಲಾರ್ ಪಾರ್ಕ್ ಲಿಮಿಟೆಡ್ ಕಾರ್ಪೊರೇಟ್ ಕಂಪನಿಯು ರೈತರಿಗೆ ನಿಗದಿತ ಏಕರೂಪದ ಬೆಲೆ ನೀಡದೆ ವಂಚಿಸಿದೆ. ಈ ಕಂಪನಿಯು ತನ್ನ ನೀತಿಗಳಿಗೆ ಅನುಗುಣವಾಗಿ ನಿಗದಿತ ಅರ್ಹತಾ ಮಾನದಂಡಗಳಿಗೆ ಒಳಗೊಂಡAತೆ ಕರ್ನಾಟಕ ರಾಜ್ಯದಲ್ಲಿ ಬಿಆರ್‌ಐಜೆ ಯೋಜನೆಗೆ ರೈತರ ಭೂಮಿ ಖರೀದಿಸಿ ಸ್ಥಳೀಯ ನಿರಾಶ್ರಿತರಿಗೆ ಪ್ರತಿಯೊಂದು ಕುಟುಂಬಕ್ಕೆ ತಮ್ಮ ಕಂಪನಿಯಲ್ಲಿ ಉದ್ಯೋಗ ನೀಡುತ್ತೇವೆ ಎಂದು ಸರ್ಕಾರಿ ನಿಯಮಗಳ ಪ್ರಕಾರ ದೃಢಪಡಿಸಿ, ಈಗ ಸ್ಥಳೀಯ ರೈತರಿಗೆ ಅನ್ಯಾಯ ಮಾಡಿದೆ.ರಾಜಕೀಯ ಬಲ ಮತ್ತು ಕಾನೂನಿನ ಅರಿವುಳ್ಳ ರೈತರಿಗೆ ಪ್ರತಿ ಎಕರೆಗೆ ೨೮ ರಿಂದ ೩೦ ಲಕ್ಷ ರೂಪಾಯಿ ಕೊಟ್ಟು ಜಮೀನು ಖರೀದಿಸಿದೆ. ಆದರೆ ಅಮಾಯಕ ರೈತರಿಗೆ…

Read More