Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕಡು ಬಡತನ ಕುಟುಂಬದಲ್ಲಿ ಜನಿಸಿ, ಏಕಾಗ್ರತೆ, ಶಿಸ್ತು, ಶ್ರದ್ಧೆ, ಸಹನೆಯಿಂದ ಓದಿ ೨೦೦೬ನೇ ಸಾಲಿನಲ್ಲಿ ಕೆಎಎಸ್ ಅಧಿಕಾರಿಯಾಗಿ ಸೇವೆ ಆರಂಭಿಸಿ, ೨೦೧೨ರಲ್ಲಿ ಐಎಎಸ್‌ಗೆ ಮುಂಬಡ್ತಿ ಹೊಂದಿ ಸಮಾಜ ಹಾಗೂ ಯುವ ಜನಾಂಗಕ್ಕೆ ಮಾದರಿ ವ್ಯಕ್ತಿಯಾಗಿದ್ದರು. ಬಸವ ಅನುಯಾಯಿಯಾಗಿದ್ದ ಇವರು ಕರ್ತವ್ಯದಲ್ಲಿ ಪ್ರಾಮಾಣಿಕತೆ ಮತ್ತು ದಕ್ಷತೆಗೆ ಹೆಸರಾಗಿದ್ದರು. ಭಗವಂತ ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಆರಕ್ಷಕ ಮೌಲಾಲಿ ಆಲಗೂರ ಹೇಳಿದರು.ಸಿಂದಗಿ ತಾಲೂಕಿನ ಬೋರಗಿ ಗ್ರಾಮದ ನಬಿರೋಶನ್ ಪ್ರಕಾಶನ ವತಿಯಿಂದ ಹಮ್ಮಿಕೊಂಡ ಮಹಾಂತೇಶ ಬೀಳಗಿ ಅವರ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ನುಡಿ ನಮನ ಸಲ್ಲಿಸಿ ಮಾತನಾಡಿ ಅವರು, ಸ್ಪೂರ್ತಿದಾಯಕ ಮಾತುಗಳಿಂದ ಲಕ್ಷಾಂತರ ಸ್ಪರ್ಧಾತ್ಮಕ ಓದುಗರ ಕೀರ್ತಿ ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ, ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅವರ ಸಾವು ಅತ್ಯಂತ ನೋವಿನ ಸಂಗತಿ ಎಂದರು.ಈ ವೇಳೆ ಆರಕ್ಷಕರಾದ ತುಕಾರಾಮ, ಸಂಜು, ಜಲಾಲುದ್ದೀನ್, ಜಾವೀದ್ ಮಹಾಂತೇಶ ಬೀಳಗಿ ಇವರ ಪೋಟೋಗೆ ಪುಷ್ಪಾರ್ಚನೆ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರದಲ್ಲಿ ಪ್ರಪ್ರಥಮ ಬಾರಿಗೆ ಯುವಾ ಬ್ರಿಗೇಡ್ ವತಿಯಿಂದ ನ.೨೯ರಂದು ಪಟ್ಟಣದ ಮಾಂಗಲ್ಯ ಭವನದಲ್ಲಿ ಸಾಯಂಕಾಲ ೫ಗಂಟೆಗೆ ಡಾ.ಬಾಬಾಸಾಹೇಬ್ ಅವರ ವಿಚಾರಗಳ ಅನಾವರಣ, ಹೊಸ ಬೆಳಕು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಯುವಾ ಬ್ರಿಗೇಡ್ ವಿಭಾಗೀಯ ಸಂಚಾಲಕ ರಾಜು ಪಾಟೀಲ ಹೇಳಿದರು.ಸಿಂದಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಯುವಾ ಬ್ರಿಗೇಡ್ ವತಿಯಿಂದ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮಾಜಿ ಸಚಿವ ಎನ್.ಮಹೇಶ, ಯುವಾ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಆಗಮಿಸಲಿದ್ದಾರೆ. ಸಾನಿಧ್ಯವನ್ನು ಯಂಕAಚಿ ಶ್ರೀಮಠದ ಅಭಿನವ ರುದ್ರಮುನಿ ಶಿವಾಚಾರ್ಯರು, ಆಲಮೇಲ ಶ್ರೀಮಠದ ಚಂದ್ರಶೇಖರ ಶಿವಾಚಾರ್ಯರು ವಹಿಸಿಕೊಳ್ಳುವರು. ಹಾಗಾಗಿ ಕಾರ್ಯಕ್ರಮಕ್ಕೆ ಎಲ್ಲರೂ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.ಈ ವೇಳೆ ಅಮೃತ ಬಿಂದು ರಾಜ್ಯ ಸಂಚಾಲಕ ಚಂದ್ರಶೇಖರ ನಂಜನಗೂಡು ಮಾತನಾಡಿ, ದೇಶಕ್ಕೆ ಕೊಡುಗೆ ನೀಡಿದ ಮಹಾಪುರುಷರ ವಿಚಾರಗಳನ್ನು ಸಂಪೂರ್ಣವಾಗಿ ಸಮಾಜಕ್ಕೆ ಉಪನ್ಯಾಸ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶವಾಗಿದೆ. ಬಾಬಾಸಾಹೇಬರ್ ವಿಚಾರಗಳನ್ನು ಕುರಿತಾಗಿ ಸಾರ್ವಜನಿಕರಿಗೆ ತಿಳಿಸುವ ದಿಸೆಯಲ್ಲಿ…

Read More

ಪ್ರೌಢಶಾಲೆ ನಿರ್ಮಾಣಕ್ಕೆ ನಿವೇಶನ ಖರೀದಿಗೆ ರೂ.೧೦ ಲಕ್ಷದ ಚೆಕ್ ವಿತರಿಸಿದ ಶಾಸಕ ಅಶೋಕ ಮನಗೂಳಿ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಮನಗೂಳಿ ಮನೆತನ ಶಿಕ್ಷಣ ಕ್ಷೇತ್ರಕ್ಕೆ ಅಗಾದವಾದ ಕೊಡುಗೆ ನೀಡಿದೆ. ಈ ಹಿಂದೆ ಬಮ್ಮನಳ್ಳಿ ಗ್ರಾಮದಲ್ಲಿ ಪ್ರೌಢಶಾಲೆ ನಿರ್ಮಾಣವಾಗಲು ಜಾಗೆಯ ಖರೀದಿಗೆ ೫ಲಕ್ಷ ನೀಡುವುದಾಗಿ ವಾಗ್ದಾನ ಮಾಡಿದ್ದೆ ಕೊಟ್ಟ ಮಾತಿನಂತೆ ಜಾಗೆಯ ಖರೀದಿಗೆ ರೂ.೧೦ಲಕ್ಷದ ಚೆಕ್ಕನ್ನು ಗ್ರಾಮಸ್ಥರ ಪರವಾಗಿ ಶ್ರೀಮಠದ ನರಸಿಂಹ ಮಹಾರಾಜರಿಗೆ ನಿಡುತ್ತಿದ್ದೇನೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ಮತಕ್ಷೇತ್ರದ ಬಮ್ಮನಳ್ಳಿ ಗ್ರಾಮದ ಸದ್ಗುರು ಭೀಮಾಶಂಕರ ಮಹಾರಾಜರ ೭೧ನೇ ಜಾತ್ರಾ ಮಹೋತ್ಸವದ ಪುರಾಣ ಮಹಾಮಂಗಲ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮನಗೂಳಿ ಮನೆತನ ಕೇವಲ ಭರವಸೆ ನೀಡಿ ಹೊಗುವ ಮನೆತನವಲ್ಲ. ದಿ.ಎಂ.ಸಿ.ಮನಗೂಳಿ ಅವರು ೨ಬಾರಿ ಶಾಸಕರಾಗಿ ಸಚಿವರಾಗಿದ್ದವರು. ಅವರು ಈ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸಲು ಸದಾ ದುಡಿದವರು. ಅವರ ಹಾದಿಯಲ್ಲಿಯೇ ನಾನು ದುಡಿಯುತ್ತಿದ್ದೇನೆ. ಈ ಹಿಂದೆ ಬಮ್ಮನಳ್ಳಿ ಗ್ರಾಮದಲ್ಲಿ ಪ್ರೌಢಶಾಲೆಯನ್ನು ನಿರ್ಮಾಣ ಮಾಡುತ್ತೇನೆ ಎಂದು ಭರವಸೆ ನೀಡಿದ್ದೆ, ಆದರೆ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕಿನ ಪ್ರಸಿದ್ಧ ಹನುಮಾನ(ಕೋರವಾರೇಶ ) ಕಾರ್ತಿಕೋತ್ಸವದ ಅವರೋಹಣ ಕಾರ್ಯಕ್ರಮ ದಿ: ೨೯ ರಂದು ಶನಿವಾರ ಜರುಗಲಿದೆ.ಕಾರ್ಯಕ್ರಮಕ್ಕೆ ರಾಮಚಂದ್ರ ದೇವರ ಉಪಾಸಕರಾದ ರಘುವರೇಂದ್ರತೀರ್ಥ ಶ್ರೀಪಾದರು ಭೀಮಸಿತು ಮುನಿವೃಂದ ಸಂಸ್ಥಾನಮಠ ಭೀಮನಕಟ್ಟೆ, ಶಿವಮೊಗ್ಗ ಜಿಲ್ಲೆ ಇವರು ದಿ: ೨೮ ರಂದು ಕೋರವಾರಕ್ಕೆ ಆಗಮಿಸುವರುಶ್ರೀಪಾದಂಗಳವರನ್ನು ಸಕಲ ವಾದ್ಯ, ವೈಭವ, ವಿವಿಧ ಭಜನಾ ತಂಡಗಳಿಂದ ಭಜನೆ, ಸಾಂಪ್ರದಾಯಿಕ ಕೋಲಾಟ, ಧಾರ್ಮಿಕ ಸ್ತಬ್ಧ ಚಿತ್ರಗಳ ಮೆರವಣಿಗೆಯೊಂದಿಗೆ ಸ್ವಾಗತಿಸುವುದರ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಶೋಭಾಯಾತ್ರೆಯನ್ನ ಕೈಗೊಳ್ಳಲಾಗುವುದುದಿ: ೨೯ ರಂದು ಶನಿವಾರ ಬೆಳಗ್ಗೆ ಶ್ರೀಪಾದಂಗಳವರಿಂದ ಶ್ರೀಕೊರವರೇಶನಿಗೆ ಅಭಿಷೇಕ, ರಜತಕವಚ ಅಲಂಕಾರ ನಂತರ ಸಂಸ್ಥಾನಪೂಜೆ, ನೈವೇದ್ಯ, ಭಕ್ತಾದಿಗಳೆಲ್ಲರಿಗೂ ಪ್ರಸಾದ ವ್ಯವಸ್ಥೆ. ಸಾಯಂಕಾಲ ಶ್ರೀಗಳಿಂದ ಆಶೀರ್ವಚನ. ನಂತರ ಸಕಲ ವಾದ್ಯವೈಭವಗಳೊಂದಿಗೆ ಪಲ್ಲಕ್ಕಿ ಸೇವೆ ನಂತರ ದೇವಸ್ಥಾನ ಟ್ರಸ್ಟ್ ಇವರಿಂದ ವರದಿ ವಾಚನ ಮುಂತಾದ ಕಾರ್ಯಕ್ರಮಗಳು ಜರುಗುವವುಈ ಎಲ್ಲ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಶ್ರೀರಾಮಚಂದ್ರದೇವರ ಹಾಗೂ ಶ್ರೀಕೊರವಾರೇಶನ ಅನುಗ್ರಹಕ್ಕೆ ಪಾತ್ರರಾಗಲು ದೇವಸ್ಥಾನ ಸಮಿತಿ ಪ್ರಕಟಣೆ ಮೂಲಕ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ವೇದಿಕೆಯಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲರು ಹೇಳಿದರು.ಪಟ್ಟಣದ ವೀರ ಭಾರತಿ ವಿದ್ಯಾಕೇಂದ್ರದ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಆಧ್ಯತೆ ನೀಡಬೇಕಿದೆ. ಪ್ರತಿಭೆಗೆ ಸೂಕ್ತ ಉತ್ತೇಜನ ಒದಗಿಸಿದರೆ ಉನ್ನತ ಸಾಧನೆ ಸಾದ್ಯವಾಗುತ್ತದೆ ಎಂದರು.ವಿದ್ಯಾರ್ಥಿಗಳಲ್ಲಿ ಸೃಜನಾತ್ಮಕ ಚಟುವಟಿಕೆಗಳ ಮೂಲಕ ಪ್ರತಿಭೆ ಅನಾವರಣ ಗೊಳಿಸಲು ಹಾಗೂ ಕಲಾತ್ಮಕ ಅಭಿರುಚಿ ಬೆಳೆಸಲು ಪ್ರತಿಭಾ ಕಾರಂಜಿ ಕಲೋತ್ಸವ ಸಹಕಾರಿ . ವಿದ್ಯಾರ್ಥಿಗಳು ಇಂಥ ವೇದಿಕೆ ಅವಕಾಶಗಳನ್ನು ಸಮರ್ಥವಾಗಿ ಸದ್ಭಳಿಸಿಕೊಂಡು ಸಾದನೆ ಮಾಡುವಂತೆ ಕೇಳಿಕೊಂಡರು.ಕ್ಷೇತ್ರಶಿಕ್ಷಣಾಧಿಕಾರಿ ಸಯಿದಾ ಮುಜಾವರ, ಎಸ್.ಆರ್., ನಡಗಡ್ಡಿ, ಎ ಸಿ ಹುಣಸಗಿ, ಬಸವರಾಜ ಗೊರನಾಳ, ಮಾತನಾಡಿದರು.ವೇದಿಕೆಯ ಮೇಲೆ ವೀರಭಾರತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಭಿನಂದನ ಕಿರಣಗಿ, ಉಪಾದ್ಯಕ್ಷ ನಿರಂಜನ ಶಹಾ, ಚೇತನ ಧನಶೆಟ್ಟಿ, ವೃಷಭ ಧನಶೆಟ್ಟಿ ,ವಿದ್ಯಾಸಾಗರ ಧನಶೆಟ್ಟಿ, ಲಕ್ಷ್ಮೀಕಾಂತ ದುರ್ಗಿ, ಲಾಲ ಬಹಾದ್ದೂರ ಧನಶೆಟ್ಟಿ, ಪ್ರಜ್ವಲ ಧನಪಾಲ,…

Read More

ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಗ್ರಾಮದ ಭೀಮನಗರದ ಅಂಬೇಡ್ಕರ ವೃತದಲ್ಲಿ ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಸಂವಿದಾನ ದಿನವನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ತೇರದಾಳ ಮತಕ್ಷೇತ್ರದ ಯುವ ಕಾಂಗ್ರೇಸ್ ಅಧ್ಯಕ್ಷ ಪ್ರವೀಣ ಪೂಜಾರಿ ಹಾಗೂ ಅಂಬೇಡ್ಕರ ಸಂಘದ ಅಧ್ಯಕ್ಷ ದಶರಥ ಗೋವಿಂದಗೋಳ, ದೈಹಿಕ ಶಿಕ್ಷಕ ಯಲ್ಲಪ್ಪ ಭಜಂತ್ರಿ, ಸದ್ದಾಮ ನದಾಫ, ಪ್ರಭು ದೂಡವಾಡ ಸೇರಿದಂತೆ ಹಲವಾರು ಜನ ಯುವಕರು ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಂದಿನ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿಗಳು ಪಠ್ಯಕ್ರಮ, ಪಠ್ಯ ಯೋಜನೆ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಸಕ್ರೀಯವಾಗಿ ಪಾಲ್ಗೊಂಡು ವೈವಿಧ್ಯಮ ಕೌಶಲ್ಯಗಳನ್ನು ಒಡಮೂಡಿಸಲು ಪೂರಕವಾಗಿದೆ. ಪದವಿ ವಿದ್ಯಾರ್ಥಿಗಳು ವಿಷಯ ಜ್ಞಾನವನ್ನು ಪಡೆಯಲಷ್ಟೇ ಸಿಮೀತವಾಗಬಾರದೆಂಬ ಮಹೋನ್ನತವಾದ ಉದ್ಧೇಶದಿಂದ ಅವರು ಶಿಕ್ಷಣದ ವಿವಿಧ ಮಜಲುಗಳಲ್ಲಾಗುತ್ತಿರುವ ಬದಲಾವಣೆಗಳಿಗೆ ಹೊಂದಿಕೊಳ್ಳುವಂತೆ ವಿದ್ಯಾರ್ಥಿಗಳು ರೂಪಿಸುವುದು ಇಂದಿನ ಅಗತ್ಯತೆಯಾಗಿದೆ ಎಂದು ವಾಣಿಜ್ಯಶಾಸ್ತ್ರ ಪ್ರಾಧ್ಯಾಪಕ ಪ್ರೊ. ಎಂ.ಎಸ್.ಖೊದ್ನಾಪೂರ ಅವರು ಅಭಿಪ್ರಾಯಪಟ್ಟರು.ಅವರು ನಗರದ ನವಭಾಗದಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯಶಾಸ್ತç ವಿಭಾಗದಿಂದ ಬಿ.ಕಾಂ ವಿದ್ಯಾರ್ಥಿಗಳಿಗಾಗಿ ದಿನಾಂಕ: ೨೭-೧೧-೨೦೨೫ ರಂದು ಆಯೋಜಿಸಿದ ‘ಚಟುವಟಿಕೆ ಆಧಾರಿತ ಕಲಿಕೆ’ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ಅವರು ಮಾತನಾಡುತ್ತಾ, ಬೋಧಿಸಿದ ವಿಷಯದ ಅರ್ಥಗ್ರಹಿಕೆ ಮತ್ತು ಪರಿಣಾಮಕಾರಿ ಬೋಧನೆ-ಕಲಿಕೆಯಲ್ಲಿ ಸಾಮರಸ್ಯತೆಯನ್ನು ಸಾಧಿಸಲು ವಿದ್ಯಾರ್ಥಿಗಳಿಗೆ ಪಠ್ಯದ ಜತೆಗೆ ಪ್ರಾಯೋಗಿಕ ಜ್ಞಾನ, ಪ್ರಾಜೆಕ್ಟ್ ತಯಾರಿಕೆ, ಮಾದರಿ ತಯಾರಿಕೆ, ಯೋಜನೆ ರೂಪಿಸುವುದು, ವ್ಯವಹಾರಕ್ಕೆ ಅಗತ್ಯವಾದ ಬಂಡವಾಳದ ಬಜೆಟ್ ಸಿದ್ದತೆಯಂತಹ ಮುಂತಾದ ಕೌಶಲ್ಯಗಳನ್ನು ಒಡಮೂಡಿಸಬೇಕಾಗಿದೆ. ವಿದ್ಯಾರ್ಥಿಗಳಿಗೆ ಯಾವುದಾದರೊಂದು ವಿಷಯವನ್ನು ಹಂಚಿಕೆ ಮಾಡಿ, ತಮ್ಮ ಕ್ರಿಯಾಶೀಲತೆ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ರಾಜ್ಯ ಬ್ರಾಹ್ಮಣ ಸಮುದಾಯದ ಪ್ರತಿಭಾವಂತ ಪದವೀಧರರಿಗೆ ನಾಗರಿಕ ಸೇವೆಗಳಾದ ಐ.ಎ.ಎಸ್ ಅಥವಾ ಕೆ.ಎ.ಎಸ್ ಸ್ಪಧಾತ್ಮಕ ಪರೀಕ್ಷೆಗಳನ್ನು ಬರೆದಯಲು ಉತ್ತೇಜನ ನೀಡುವ ಸಲುವಾಗಿ ಚಾಣಕ್ಯ ಆಡಳಿತ ತರಬೇತಿ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ.ಐ.ಎ.ಎಸ್ ಅಥವಾ ಕೆ.ಎ.ಎಸ್. ಸ್ಪಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ತರಬೇತಿ ಪಡೆಯುವ ಸಂಬAಧ ೨೦೨೫-೨೬ನೇ ಸಾಲಿನಲ್ಲಿ ಪ್ರವೇಶಾತಿ ಪಡೆದು, ಪಾವತಿಸಲಾದ ತರಬೇತಿ ಶುಲ್ಕದ ಮೊತ್ತದಲ್ಲಿ ಗರಿಷ್ಠ ರೂ.೧ ಲಕ್ಷ ಗಳಿಗೆ ಮಿತಿಗೊಳಿಸಿ ಡಿಬಿಟಿ ಮೂಲಕ ನೇರವಾಗಿ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಮಾಡಲಾಗುವುದುಆಸಕ್ತರು ಡಿಸೆಂಬರ್ ೧೫, ೨೦೨೫ ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: ೦೮೦೨೯೬೦೫೮೮೮, ೮೭೬೨೨೪೯೨೩೦ ಗೆ ಅಥವಾ ವೆಬ್ ಸೈಟ್ ksbdb.karnataka.gov.inಗೆ ಭೇಟಿ ನೀಡಬಹುದು ಎಂದು ಜಿಲ್ಲೆಯ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕಾಂಗ್ರೆಸ್ ಗೆ ಅಹಿಂದ ಸಮುದಾಯಗಳ ಖಡಕ್ ಎಚ್ಚರಿಕೆ | ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿದರೆ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಕಾಂಗ್ರೆಸ್ ಗೆ ಅಹಿಂದ ಸಮುದಾಯಗಳು ಖಡಕ್ ಎಚ್ಚರಿಕೆ ನೀಡಿದೆ.ಮುಂದಿನ ಮುಖ್ಯಮಂತ್ರಿಯಾಗಲು ಆಕಾಂಕ್ಷಿಯಾಗಿರುವ ಸಿದ್ದರಾಮಯ್ಯ ಮತ್ತು ಅವರ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಡುವಿನ ಅಧಿಕಾರ ಸಂಘರ್ಷಕ್ಕೆ ರಾಜ್ಯ ಸಾಕ್ಷಿಯಾಗುತ್ತಿದೆ. ಇದರ ನಡುವೆ ರಾಜ್ಯದಲ್ಲಿ ಅಧಿಕಾರ ಸಂಘರ್ಷದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪದಚ್ಯುತಗೊಳಿಸುವ ಯಾವುದೇ ಪ್ರಯತ್ನವು ಪಕ್ಷದ ಮೇಲೆ ಪರಿಣಾಮ ಬೀರುತ್ತದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗ ಸಮುದಾಯಗಳ ಒಕ್ಕೂಟ (ಕೆಎಸ್‌ಎಫ್‌ಬಿಸಿಸಿ) ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದೆ.ಇಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಕೆಎಸ್‌ಎಫ್‌ಬಿಸಿಸಿ ಅಧ್ಯಕ್ಷ ಕೆ ಎಂ ರಾಮಚಂದ್ರಪ್ಪ, ಅಹಿಂದ (ಅಲ್ಪಸಂಖ್ಯಾತ ಹಿಂದುಳಿದ ವರ್ಗಗಳು ಮತ್ತು ದಲಿತ ಸಮುದಾಯಗಳ ಕನ್ನಡ ಸಂಕ್ಷಿಪ್ತ ರೂಪ) ನಡೆಯುತ್ತಿರುವ ಬೆಳವಣಿಗೆಗಳನ್ನು ನೋಡಿ ತೀವ್ರ ನೋವುಂಟಾಗಿದೆ ಎಂದು ಹೇಳಿದರು.ಉಪಮುಖ್ಯಮಂತ್ರಿ ಡಿ…

Read More

ಲೇಖನ- ಬಸವರಾಜ ಹೂಗಾರನಿಕಟ ಪೂರ್ವ ಜಿಲ್ಲಾಧ್ಯಕ್ಷರುಬಿಜೆಪಿ ಯುವ ಮೋರ್ಚಾಆಲಮೇಲವಿಜಯಪುರ ಜಿಲ್ಲೆಮೊ: 9740207097 ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯ ಸರ್ಕಾರ ಇತ್ತೀಚೆಗೆ ಬಡವರ ಪಡಿತರ ಚೀಟಿಗಳನ್ನು ರದ್ದುಪಡಿಸಲು ಆರಂಭಿಸಿರುವುದು ಸರ್ಕಾರದ ಸಂಪೂರ್ಣ ವಿಫಲತೆಯ ಜೀವಂತ ಸಾಕ್ಷಿ. ಈಗಾಗಲೇ ಬೊಕ್ಕಸ ಖಾಲಿಯಾಗಿರುವ ಪರಿಸ್ಥಿತಿಯಲ್ಲಿ, ಸುಳ್ಳು ಪಂಚ ಗ್ಯಾರಂಟಿಗಳ ಮೂಲಕ ರಾಜ್ಯವನ್ನು ದಿವಾಳಿ ಮಾಡಿದ ನಂತರ ಈ ಸರ್ಕಾರ ಈಗ ಬಡವರ ಹೊಟ್ಟೆಗೆ ಕೈ ಹಾಕುವ ಮಟ್ಟಕ್ಕೆ ಇಳಿದುಬಂದಿದೆ. ಇದು ಅತ್ಯಂತ ಖಂಡನೀಯ ಮತ್ತು ಸಂವೇದನಾಶೀಲತೆಯ ಕೊರತೆಯ ಆಡಳಿತ.ಪಡಿತರ ಚೀಟಿ ಬಡ ಕುಟುಂಬಗಳಿಗೆ ಕೇವಲ ಒಂದು ದಾಖಲೆ ಅಲ್ಲ, ಅದು ಜೀವನ, ಅನ್ನ, ಬಾಳಿನ ಭರವಸೆ.ಇದನ್ನು ರದ್ದುಪಡಿಸುವ ಮೂಲಕ ಸರ್ಕಾರ ಬಡತನವನ್ನು ಮತ್ತಷ್ಟು ತೀವ್ರಗೊಳಿಸಲು ಕಾರಣವಾಗುತ್ತಿದೆ.ಸರಕಾರ ನಿಭಾಯಿಸಲು ಆಗದೆ ಹೋದರೆ ರಾಜೀನಾಮೆ ಕೊಡಲಿ, ಮನೆಗೆ ಹೋಗಲಿ.ಬಡವರ ಜೀವನದೊಂದಿಗೆ ಆಟ ಆಡುವ ಹಕ್ಕು ಯಾರಿಗೂ ಇಲ್ಲ.ಇನ್ನೂ ದುಃಖಕರ ಸಂಗತಿ ಏನೆಂದರೆ, ಶ್ರೀಮಂತರ ಕಾರ್ಡುಗಳನ್ನು ಅಚ್ಚುಕಟ್ಟಾಗಿ ಇಟ್ಟು, ಬಹುತೇಕ ಬಡವರ ಕಾರ್ಡುಗಳನ್ನು ಮಾತ್ರ ರದ್ದುಪಡಿಸುತ್ತಿರುವುದು ಸರ್ಕಾರದ ದ್ವಂದ್ವ ನಿಲುವಿನ…

Read More