Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಪ.ಜಾತಿ-ಪಂಗಡದ ಸಮಸ್ಯೆಗಳ ತ್ವರಿತ ಇತ್ಯರ್ಥಕ್ಕೆ ಡಿಸಿ ಟಿ.ಭೂಬಾಲನ್ ಸೂಚನೆ ವಿಜಯಪುರ: ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಇಲಾಖೆಗಳು ತ್ವರಿತವಾಗಿ ಸ್ಪಂದಿಸಿ ಇತ್ಯರ್ಥಗೊಳಿಸಿ ಅನುಸರಣಾ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಗುರುವಾರ ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ದೌರ್ಜನ್ಯ ಪ್ರಕರಣಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ದೌರ್ಜನ್ಯ ತಡೆ ಜಾಗೃತಿಗಾಗಿ ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಜಿಲ್ಲಾ ಪಂಚಾಯತ್, ಹಾಗೂ ಸಮಾಜ ಇಲಾಖೆ ಸಹಯೋಗದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಲ್ಲಿ ಜಾಗೃತಿ ಮೂಡಿಸಬೇಕು. ದೌರ್ಜನ್ಯ ಪ್ರಕರಣಗಳಲ್ಲಿ ದಾಖಲಾದ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಕ್ಕೆ ಕ್ರಮ ವಹಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಜನಾಂಗಗಳಿಗೆ ಸರ್ಕಾರದಿಂದ ದೊರೆಯುವ ಸಹಾಯ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸಬೇಕು. ಇಲಾಖೆಗಳಲ್ಲಿ ಮೀಸಲಿರುವ ಅನುದಾನದ ಸದ್ಬಳಕೆ ಮಾಡಿಕೊಂಡು ನಿಗದಿತ ಅವಧಿಯಲ್ಲಿ ಸಹಾಯ-ಸೌಲಭ್ಯ ಒದಗಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ…
ಬಬಲೇಶ್ವರ ತಾಲೂಕಿನ ವಿವಿಧ ಕಚೇರಿಗಳಿಗೆ ಭೇಟಿ ನೀಡಿದ ಡಿಸಿ ಟಿ.ಭೂಬಾಲನ್ ಖಡಕ್ ಸೂಚನೆ ವಿಜಯಪುರ: ಬಬಲೇಶ್ವರ ನಾಡಕಚೇರಿ, ರೈತ ಸಂಪರ್ಕ ಕೇಂದ್ರ, ಮೀಸಲು ಅರಣ್ಯ ಪ್ರದೇಶ, ಮಮದಾಪುರ ಕೆರೆಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಸಮರ್ಪಕವಾಗಿ ಕಾರ್ಯನಿರ್ವಹಣೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಗುರುವಾರ ಬಬಲೇಶ್ವರ ತಾಲೂಕಿನ ಮಮದಾಪುರ ನಾಡಕಚೇರಿಗೆ ಭೇಟಿ ನೀಡಿದ ಅವರು, ಕಂದಾಯ ಇಲಾಖೆಯ ವಿವಿಧ ಕಾರ್ಯಗಳ ಕುರಿತು ಪರಿಶೀಲನೆ ನಡೆಸಿದರು. ಕಚೇರಿಗಳಲ್ಲಿರುವ ಕಡತಗಳನ್ನು ಪರಿಶೀಲನೆ ನಡೆಸಿ, ಸಾರ್ವಜನಿಕರ ಯಾವುದೇ ಕಾರ್ಯಗಳಿಗೆ ವಿಳಂಬ ಧೋರಣೆ ಅನುಸರಿಸದೇ ನಿಗದಿತ ಕಾಲಾವಧಿಯಲ್ಲಿ ಇತ್ಯರ್ಥಗೊಳಿಸುವಂತೆ ತಿಳಿಸಿದ ಅವರು, ಕಚೇರಿ ಕಾರ್ಯಗಳಿಗಾಗಿ ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವುದೊಂದಿಗೆ ಜನಸ್ನೇಹಿಯಾಗಿ ಕಾರ್ಯನಿರ್ವಹಿಸುವ ಮೂಲಕ ಅವರ ಸಮಸ್ಯೆಗಳನ್ನು ತ್ವರಿತವಾಗಿ ಸ್ಪಂದಿಸಿ ಪರಿಹರಿಸಲು ಪ್ರಯತ್ನಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ನಂತರ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ರೈತರಿಂದ ಯಾವುದೇ ದೂರು ಬರದಂತೆ ನೋಡಿಕೊಳ್ಳಬೇಕು. ಬೀಜ, ರಸಗೊಬ್ಬರ…
ತಾಪಂ-ಗ್ರಾಪಂ ಕಾರ್ಯಾಲಯಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ ಜಿ.ಪಂ.ಸಿಇಓ ರಿಷಿ ಆನಂದ ಸೂಚನೆ ವಿಜಯಪುರ: ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಗುರುವಾರ ವಿಜಯಪುರ ತಾಲೂಕಾ ಪಂಚಾಯತ್ ಕಚೇರಿ ಹಾಗೂ ಮದಭಾವಿ ಗ್ರಾಮ ಪಂಚಾಯತ್ ಕಾರ್ಯಾಲಯಕ್ಕೆ ದಿಢೀರವಾಗಿ ಭೇಟಿ ನೀಡಿ ಕಾರ್ಯವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು.ಮದಭಾವಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ಸಿಬ್ಬಂದಿಯ ಹಾಜರಾತಿ ಹಾಗೂ ಸಿಬ್ಬಂದಿ ಇ-ಹಾಜರಾತಿ ವ್ಯವಸ್ಥೆ ಬಿಲ್ ಕಲೆಕ್ಟರ್ ಸಿಬ್ಬಂದಿಯು ತೆರಿಗೆ ವಸೂಲಾತಿ ಮಾಡುವ ಪಿ.ಓ.ಎಸ್ ಮಷಿನ್ ವ್ಯವಸ್ಥೆ, ಗ್ರಾಮ ಪಂಚಾಯತಿಯ ಸರಕಾರಿ ಗ್ರಂಥಾಲಯದಲ್ಲಿನನ ಮೂಲಭೂತ ಸೌಕರ್ಯಗಳಾದ ವಿದ್ಯುತ್ ವ್ಯವಸ್ಥೆ, ಓದುಗರಿಗೆ ಆಸನದ ವ್ಯವಸ್ಥೆ, ಗಾಳಿ, ಬೆಳಕು ಹಾಗೂ ಗ್ರಂಥಾಲಯದ ಪುಸ್ತಕಗಳನ್ನು ಇರಿಸಲು ಸ್ಥಳಾವಕಾಶ ಕುರಿತು ಪರಿಶೀಲನೆ ಮಾಡಿದರು.ಗ್ರಂಥಾಲಯದಲ್ಲಿ ಪುಸ್ತಕಗಳನ್ನು ಇಡಲು ಹೆಚ್ಚಿನ ರ್ಯಾಕ್ ವ್ಯವಸ್ಥೆ, ವಿದ್ಯಾರ್ಥಿಗಳಿಗೆ ಓದಲು ಈಗ ಇರುವ ಪುಸ್ತಕಗಳಷ್ಟೇ ಅಲ್ಲದೇ ಸ್ಪರ್ಧಾತ್ಮಕ ಪುಸ್ತಕ, ಸ್ಪೋಕನ್ ಇಂಗ್ಲೀಷ್ ಹಾಗೂ ಇತರೆ ಉತ್ತಮ ವಿಷಯಗಳನ್ನೊಳಗೊಂಡ ಪುಸ್ತಕಗಳನ್ನು ಒದಗಿಸಬೇಕು. ಗ್ರಂಥಾಲಯವು ವಿಶಾಲವಾಗಿರುವುದರಿಂದ…
ವಿಜಯಪುರ: ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ವಿಜಯಪುರ ನಗರದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಸಗಟು ಮಳಿಗೆಗಳು/ಗೋದಾಮುಗಳಿಗೆ ಗುರುವಾರ ದಿಢೀರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಅನ್ನಭಾಗ್ಯ ಯೋಜನೆ, ಮಧ್ಯಾಹ್ನ ಬಿಸಿಯೂಟ ಯೋಜನೆ ಹಾಗೂ ವಸತಿ ನಿಲಯಗಳಿಗೆ ಸರಬರಾಜು ಮಾಡುವ ಆಹಾರ ಧಾನ್ಯಗಳಾದ ಅಕ್ಕಿ, ಗೋಧಿ, ಸೂರ್ಯಕಾಂತಿ ಎಣ್ಣೆಗಳ ಗುಣಮಟ್ಟವನ್ನು ಪರಿಶೀಲಿಸಿದ ಅವರು, ಮಳಿಗೆಗಳಲ್ಲಿ ದಾಸ್ತಾನು ನಿರ್ವಹಣೆ ವ್ಯವಸ್ಥಿತವಾಗಿ ಮಾಡಬೇಕು. ವಿವಿಧ ವಸತಿ ನಿಲಯ, ಸರ್ಕಾರಿ ಶಾಲೆಗಳಿಗೆ ನಿಗದಿತ ಅವಧಿಯಲ್ಲಿ ಯಾವುದೇ ತೊಂದರೆಯಾಗದಂತೆ ದಾಸ್ತಾನು ಸರಬರಾಜು ಮಾಡಲು ಕ್ರಮ ವಹಿಸಬೇಕು. ದಾಸ್ತಾನುಗಳನ್ನು ಅವಶ್ಯಕತೆಗೆ ತಕ್ಕಂತೆ ಹಾಗೂ ಮಕ್ಕಳ ಸಂಖ್ಯೆಗನುಗುಣವಾಗಿ ದಾಸ್ತಾನುಗಳನ್ನು ಸ್ವಚ್ಚತೆ ಹಾಗೂ ಗುಣಮಟ್ಟದಿಂದ ಇರುವಂತೆ ಪೂರೈಸಬೇಕು, ಗೋದಾಮುಗಳನ್ನು ಪ್ರತಿದಿನ ಸ್ವಚ್ಚತೆ ಮಾಡಬೇಕು ಹಾಗೂ ಗೋದಾಮಿನ ಸುತ್ತ-ಮುತ್ತಲಿನ ಪರಿಸರವನ್ನೂ ಸಹ ಸ್ವಚ್ಛವಾಗಿಟ್ಟುಕೊಳ್ಳುವಂತೆ ಗೋದಾಮುಗಳ ವ್ಯವಸ್ಥಾಪಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಬಳಿಕ, ಗೋದಾಮುಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರರೊಂದಿಗೆ ಸಂವಾದ ನಡೆಸಿ, ಅವರಿಗೆ ಸಮಯಕ್ಕೆ ತಕ್ಕಂತೆ…
ವಿಜಯಪುರ: ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಜೂ.೨೮ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಜೂ.೨೮ರಂದು ಬೆಳಿಗ್ಗೆ ೧೦ ಗಂಟೆಗೆ ವಿಜಯಪುರ ಜಿಲ್ಲೆಯ ಆಲಮಟ್ಟಿಗೆ ಆಗಮಿಸಿ, ಆಲಮಟ್ಟಿಯಲ್ಲಿ ಸರಕಾರಿ ಶಾಲೆ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ೨-೩೦ಕ್ಕೆ ಆಲಮಟ್ಟಿಯಿಂದ ರಸ್ತೆ ಮಾರ್ಗವಾಗಿ ಬಾಗಲಕೋಟೆ ಜಿಲ್ಲೆ ಮುಧೋಳಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಜಿಲ್ಲಾಧಿಕಾರಿಗಳಿಂದ ಇಂದಿರಾ ಕ್ಯಾಂಟಿನ್-ಡಿಜಿಟಲ್ ಗ್ರಂಥಾಲಯ ನಿರ್ಮಾಣದ ಸ್ಥಳ ಪರಿಶೀಲನೆ ವಿಜಯಪುರ: ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಬಬಲೇಶ್ವರ ತಾಲೂಕಿನ ವಿವಿಧ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ, ತಾಲೂಕಾ ಆಡಳಿತ ಸೌಧದಲ್ಲಿ ಸಾರ್ವಜನಿಕರ ಕುಂದು-ಕೊರತೆಗಳ ವಿಚಾರಣೆ ನಡೆಸಿದರು.ಗುರುವಾರ ಬಬಲೇಶ್ವರ ತಾಲೂಕಿಗೆ ಭೇಟಿ ನೀಡಿದ ಅವರು, ಬಬಲೇಶ್ವರ ಬಸ್ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟಿನ್ ನಿರ್ಮಾಣಕ್ಕೆ ಸ್ಥಳ ಆಯ್ಕೆ ಹಾಗೂ ಡಿಜಿಟಲ್ ಗ್ರಂಥಾಲಯ ಕಟ್ಟಡ ನಿರ್ಮಾಣ ಕುರಿತು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಚರ್ಚಿಸಿದರು.ನಂತರ ತಾಲೂಕಾ ಆಡಳಿತ ಸೌಧಕ್ಕೆ ಭೇಟಿ ನೀಡಿ ಕಂದಾಯ ಇಲಾಖೆಯ ಅಧಿಕಾರಿ-ಸಿಬ್ಬಂದಿಗಳ ಕಾರ್ಯವೈಖರಿ ಕುರಿತು ಪರಿಶೀಲನೆ ನಡೆಸಿ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ, ಸಾರ್ವಜನಿಕರಿಮದ ಯಾವುದೇ ಸಮಸ್ಯೆ ಬಾರದಂತೆ ನೋಡಿಕೊಂಡು ಜನರ ಕಚೇರಿಗಳಿಗೆ ಅಲೆದಾಟ ತಪ್ಪಿಸಿ ತ್ವರಿತವಾಗಿ ಅವರ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಕ್ರಮ ವಹಿಸಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ಚುರುಕಾಗಿ ಕಾರ್ಯನಿರ್ವಹಿಸುವಂತೆ ಅವರು ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಬಬಲೇಶ್ವರ ತಾಲೂಕಿನ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಬಸವನಬಾಗೇವಾಡಿ: ಮಳೆಗಾಲ ಪ್ರಾರಂಭವಾಗಿದ್ದು ನೀರಿನಿಂದ ಹರಡುವ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿರುತ್ತವೆ. ಕೂಡಲೇ ಎಲ್ಲ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳು ಜಾಗೃತರಾಗಬೇಕು ಎಂದು ತಾಲೂಕಾ ಆರೋಗ್ಯ ಅಧಿಕಾರಿ ಡಾ. ಬಸವರಾಜ ಕಮದಾಳ ಹೇಳಿದರು.ಪಟ್ಟಣದ ತಾಲೂಕು ಪಂಚಾಯತಿಯ ರಾಜೀವಗಾಂಧಿ ಸೇವಾ ಕೇಂದ್ರದ ಸಭಾಭವನದಲ್ಲಿ ಗುರುವಾರ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ಆರೋಗ್ಯ ಜಾಗೃತಿ ಕುರಿತಾದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದ ಅವರು, ಮಳೆಗಾಲದಲ್ಲೂ ಕರುಳು ಬೇನೆ, ಕಾಲರ, ಕಾಮಾಲೆ, ವಿಷಮಶೀತ ಜ್ವರ ಹಾಗೂ ಬಹು ದಿನಗಳವರೆಗೆ ನೀರಿನಲ್ಲಿ ಈಡೀಸ್ ಸೊಳ್ಳೆ ಸಂತಾನೋತ್ಪತ್ತಿ ಮಾಡುವುದರಿಂದ ಸೊಳ್ಳೆಗಳಿಂದ ಹರಡಬಹುದಾದ ಡೆಂಗ್ಯೂ, ಚಿಕುನಗುನ್ಯಾ ಇನ್ನಿತರ ರೋಗಗಳು ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದ್ದು ಅಧಿಕಾರಿಗಳು ಮುಂಜಾಗೃತ ಕೈಗೊಳ್ಳಬೇಕು ಎಂದು ಹೇಳಿದರು.ಈಗಾಗಲೇ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಂದ ನಿಯಮಿತವಾಗಿ ಈಡೀಸ್ ಲಾರ್ವ ಸಮೀಕ್ಷೆ ಹಾಗೂ ಕುಡಿಯುವ ನೀರಿನ ಮೂಲಗಳಿಂದ ನೀರಿನ ಮಾದರಿಗಳು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಮುನ್ನೆಚ್ಚರಿಕೆಯಾಗಿ ರೋಗಗಳು ಹರಡದಂತೆ ಗ್ರಾಮ ಪಂಚಾಯತಿಯಿಂದ ಮುಂಜಾಗ್ರತಾ ಕ್ರಮಗಳನ್ನು…
ಬಸವನಬಾಗೇವಾಡಿ: ಸರ್ಕಾರ ಇಂದು ನಾಡಿನಲ್ಲಿ ಮಹಾತ್ಮರ-ಶರಣರ-ಮಹನೀಯರ ಸಾಧನೆ, ತತ್ವ-ಸಂದೇಶಗಳನ್ನು ಯುವಜನಾಂಗ ಸೇರಿದಂತೆ ಎಲ್ಲರಿಗೂ ತಿಳಿಸುವ ಉದ್ದೇಶದಿಂದ ಅವರ ಜಯಂತಿ ಕಾರ್ಯಕ್ರಮ, ಸ್ಮರಣೀಯ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ನಾಡಿನಲ್ಲಿ ಉತ್ತಮ ಆಡಳಿತ ನೀಡಿದ ಮಹನೀಯರಲ್ಲಿ ಒಬ್ಬರಾದ ನಾಡಪ್ರಭು ಕೆಂಪೇಗೌಡ ಅವರ ಆಡಳಿತ ಎಂದಿಗೂ ಮಾದರಿಯಾಗಿದೆ ಎಂದು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಹೇಳಿದರು.ಪಟ್ಟಣದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ತಾಲೂಕಾಡಳಿತ, ತಾಲೂಕು ಪಂಚಾಯತ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡ ಅವರ ೫೧೫ ನೇ ಜಯಂತೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ೫೧೫ ವರ್ಷಗಳ ನಂತರವೂ ಕೆಂಪೇಗೌಡ ಅವರ ಸ್ಮರಣೆ ಮಾಡುವದಕ್ಕೆ ಅವರು ಮಾಡಿರುವ ಸ್ಮರಣೀಯ ಕಾರ್ಯಗಳಿಂದ ಎಂಬುವದನ್ನು ವಿದ್ಯಾರ್ಥಿಗಳು ಅರ್ಥ ಮಾಡಿಕೊಳ್ಳಬೇಕು. ಸಮಾಜಕ್ಕಾಗಿ ಕೆಲಸ ಮಾಡಿದವರನ್ನು ಮಾತ್ರ ಸಮಾಜ ಸದಾ ನೆನಪಿನಲ್ಲಿ ಇಟ್ಟುಕೊಳ್ಳುತ್ತದೆ. ಕೆಂಪೇಗೌಡ ಅವರು ಬೆಂಗಳೂರಿನಲ್ಲಿ ಒಂದು ಸಾವಿರ ಕೆರೆಗಳನ್ನು ನಿರ್ಮಾಣ ಮಾಡಿದ್ದರೂ ಕೆರೆಗಳು ಬಹಳಷ್ಟು ಅತಿಕ್ರಮಣವಾಗಿ ಕಾರಣದಿಂದಾಗಿ ಇಂದು ಕೇವಲ ೩೭ ಕೆರೆಗಳು ಮಾತ್ರ…
ಸಿಇಟಿ ಮತ್ತು ನೀಟ್ ತರಬೇತಿ ಪೂರ್ವಭಾವಿ ಪಾಲಕರ ಸಭೆಯಲ್ಲಿಡಾ.ಪ್ರಭುಸಾರಂಗದೇವ ಶ್ರೀ ಅಭಿಮತ ಸಿಂದಗಿ: ಮಕ್ಕಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಜೊತೆಗೆ ಪಾಲಕರ ಪಾತ್ರವೂ ಬಹಳ ಮಹತ್ವದ್ದಾಗಿದೆ ಎಂದು ಸಾರಂಗಮಠದ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.ಪಟ್ಟಣದ ಶ್ರೀ ಪ.ವಿ.ವ.ಸಂಸ್ಥೆಯ ಆರ್.ಡಿ.ಪಾಟೀಲ ಕಲಾ, ವಾಣಿಜ್ಯ, ಹಾಗೂ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡ ಪಿಯುಸಿ ದ್ವಿತೀಯ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸಿಇಟಿ ಮತ್ತು ನೀಟ್ ತರಬೇತಿ ಪೂರ್ವಭಾವಿ ಪಾಲಕರ ಸಭೆಯಲ್ಲಿ ಅವರು ಮಾತನಾಡಿದರು.ಮಕ್ಕಳ ಚನವಲನಗಳ ಮೇಲೆ ಪಾಲಕರು ನಿಗಾ ಇಡುವುದು ಅತೀ ಮುಖ್ಯವಾಗಿದೆ. ಈ ಮೋಬೈಲ್ ಗೀಳು ಮಕ್ಕಳ ಶೈಕ್ಷಣಿಕ ಪ್ರಗತಿಯನ್ನು ಕುಂಠಿತಗೊಳಿಸುತ್ತದೆ. ಬೇರೆ ಕಾಲೇಜುಗಳಿಗೆ ಹೋಲಿಸಿದರೆ ನಮ್ಮ ಸಂಸ್ಥೆಯಲ್ಲಿ ತರಬೇತಿಗಾಗಿ ಕಡಿಮೆ ಶುಲ್ಕವನ್ನು ತೆಗೆದುಕೊಂಡು ಪಾಲಕರ ಅಭಿಪ್ರಾಯದೊಂದಿಗೆ ಅನುಭವಿ ವಿಷಯ ಪರಿಣಿತ ಬೋಧಕರಿಂದ ವಿದ್ಯಾರ್ಥಿಗಳಿಗೆ ಸಿಇಟಿ ಮತ್ತು ನೀಟ್ ತರಬೇತಿಯನ್ನು ನೀಡಲಾಗುವುದು ಎಂದರು.ಸಭೆಯನ್ನು ಉದ್ಘಾಟಿಸಿ ನಿವೃತ್ತ ಪ್ರಾಚಾರ್ಯ ವಿಮಲಕಾಂತ ಪಾಟೀಲ ಮಾತನಾಡಿ, ನಿಮ್ಮ ಕನಸನ್ನು ನನಸಾಗಿಸುವ ಸಲುವಾಗಿಯೇ ಗ್ರಾಮೀಣ ಭಾಗದ…
“ವೀಣಾಂತರಂಗ”- ವೀಣಾ ಹೇಮಂತ ಗೌಡ ಪಾಟೀಲ್, ಮುಂಡರಗಿ – ಗದಗ ಬದುಕಿನ ಜ್ಯೋತಿಯನ್ನು ಉದ್ದೀಪಿಸುವ 3 ಅಗ್ನಿಗಳು ಪಂಚ ಮಹಾಭೂತಗಳಿಂದ ಕೂಡಿರುವ ನಮ್ಮ ಶರೀರದಲ್ಲಿ ಮೂರು ವಿಧದ ಅಗ್ನಿಗಳಿವೆ. ಈ ಅಗ್ನಿಗಳು ನಮ್ಮ ಭೌತಿಕ ಶರೀರದ ದೈಹಿಕ,ಮಾನಸಿಕ ಮತ್ತು ಆಧ್ಯಾತ್ಮಿಕ ಆರೋಗ್ಯವನ್ನು ನಿರ್ಧರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ.ಅವುಗಳೆಂದರೆ ಜಠರಾಗ್ನಿ, ಮಾನಸ ಇಲ್ಲವೇ ಮನೋ ಅಗ್ನಿ ಮತ್ತು ಮೂರನೆಯದು ಭೂತಾಗ್ನಿ.ಮೊದಲನೆಯದು ಜಠರಾಗ್ನಿ..ನಮ್ಮ ದೇಹದ ಜೀರ್ಣಾಂಗ ವ್ಯೂಹಕ್ಕೆ ಸಂಬಂಧಪಟ್ಟದ್ದು ನಾವು ಸೇವಿಸಿದ ಆಹಾರವನ್ನು ಜೀರ್ಣಿಸಿಕೊಳ್ಳಲು ಅನುಕೂಲವಾಗುವಂತಹ ಆಮ್ಲಗಳನ್ನು ಬಿಡುಗಡೆ ಮಾಡುವುದರ ಮೂಲಕ ಉತ್ತಮ ಜೀರ್ಣ ಕ್ರಿಯೆಯ ಮೂಲಕ ಆಹಾರಕ್ಕೆ ರಕ್ತಗತವಾಗುವಂತೆ ಮಾಡುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ.ಜಠರಾಗ್ನಿಯು ಪ್ರಬಲವಾಗಿದ್ದರೆ ಒಳ್ಳೆಯ ಜೀರ್ಣಶಕ್ತಿ ಇದೆ ಎಂದರ್ಥ. ಜಠರಾಗ್ನಿಯು ಮಂದವಾಗಿರುವ ವ್ಯಕ್ತಿಯು ಜೀರ್ಣ ಸಂಬಂಧಿ ತೊಂದರೆಗಳು ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಾನೆ. ಹೊಟ್ಟೆ ಉಬ್ಬರ, ಅಜೀರ್ಣ, ಹುಳಿತೇಗು, ವಾಕರಿಕೆ, ವಾಯುಬಾಧೆ ಮುಂತಾದ ತೊಂದರೆಗಳು ಆತನನ್ನು ಬಾಧಿಸುತ್ತವೆ.ಎರಡನೆಯದು ಮಾನಸ ಅಗ್ನಿ..ಈ ಅಗ್ನಿಯು ನಮ್ಮ ಮನಶ್ಶಕ್ತಿ ಗೆ ಸಂಬಂಧಪಟ್ಟದ್ದು ನಮ್ಮ ಜಾಣ್ಮೆ, ತಿಳುವಳಿಕೆ…
