Author: editor.udayarashmi@gmail.com

ವಿಜಯಪುರ : ಎಬಿವಿಪಿ ವಿಜಯಪುರ ಶಾಖೆ ವತಿಯಿಂದ ಜಿಲ್ಲೆಯ ಕೇಂದ್ರ ಬಸ್ ನಿಲ್ದಾಣ ಮುಂದೆ ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ಬಸ್ ಪಾಸ್ ವಿತರಿಸುವಂತೆ ಹಾಗೂ ಬಸ್ ಗಳ ಸಂಖ್ಯೆಯನ್ನು ಹೆಚ್ಚಳ ಮಾಡುವಂತೆ ಆಗ್ರಹಿಸಿ ಬುಧವಾರ ಎಬಿವಿಪಿ ಕಾರ್ಯಕರ್ತರು ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದರು.ಬಳಿಕ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಜಯಪುರ ಶಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಎಬಿವಿಪಿ ರಾಜ್ಯ ಕಾರ್ಯದರ್ಶಿ ಸಚೀನ ಕುಳಗೇರಿ ಮಾತನಾಡಿ, ರಾಜ್ಯದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಪಡೆಯಲು ಅತೀ ಹೆಚ್ಚು ನಗರ ಪ್ರದೇಶಗಳ ಶಾಲಾ ಕಾಲೇಜುಗಳಿಗೆ ಬರುತ್ತಾರೆ, ವಿದ್ಯಾರ್ಥಿಗಳ ತರಗತಿಗಳು ಪ್ರಾರಂಭವಾದ ನಂತರ ಸರಿಯಾದ ಸಮಯಕ್ಕೆ ಬಸ್ ಪಾಸ್ ಅನ್ನು ವಿತರಣೆ ಮಾಡದೇ ಇರುವ ಕಾರಣ ಪ್ರತಿದಿನ ನೂರಾರು ರೂಪಾಯಿಗಳನ್ನು ಖರ್ಚು ಮಾಡಿಕೊಂಡು ಬಡ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಬರುವುದು ಕಷ್ಟದ ಸಂಗತಿ ಆಗಿದೆ. ಸರ್ಕಾರ ಶಾಲಾ ಕಾಲೇಜುಗಳು ಪ್ರಾರಂಭವಾದ ತಕ್ಷಣವೇ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಅನ್ನು ಸಕಾಲದಲ್ಲಿ ಒದಗಿಸುವ ನಿಟ್ಟಿನಲ್ಲಿ…

Read More

ಲೈಂಗಿಕ ದೌರ್ಜನ್ಯ ಪ್ರಕರಣ | ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ | ಇನ್ನೂ ಮೂರು ದಿನಗಳ ಕಾಲ ಎಸ್​ಐಡಿ ಕಸ್ಟಡಿ ಬೆಂಗಳೂರು: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.ಹಾಸನ ಜಿಲ್ಲೆ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಧೀಶ ಸಂತೋಷ್ ಗಜಾನನ ಭಟ್, ತೀರ್ಪು ಕಾಯ್ದಿರಿಸಿದ್ದರು. ಬುಧವಾರ (ಜೂನ್ 26) ಅರ್ಜಿ ವಜಾಗೊಳಿಸಿ ಆದೇಶಿಸಿದ್ದಾರೆ.ಹೊಳೆನರಸೀಪುರದಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಬಂಧಿಸಿರುವ ಎಸ್‌ಐಟಿ ಪೊಲೀಸರು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಹಾಗಾಗಿ, ಜಾಮೀನು ಕೋರಿ ಪ್ರಜ್ವಲ್ ಅರ್ಜಿ ಸಲ್ಲಿಸಿದ್ದರು.ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 42ನೇ ಎಸಿಎಂಎಂ ನ್ಯಾಯಾಲಯ, ಪ್ರಜ್ವಲ್​ ರೇವಣ್ಣ ಅವರನ್ನು ಜೂನ್ 29ರವರೆಗೆ ಎಸ್​ಐಟಿ ಕಸ್ಟಡಿಗೆ ನೀಡಿದೆ.…

Read More

ಕಲಕೇರಿ: ಗ್ರಾಮದ ಮಲ್ಲಿಕಾರ್ಜುನ ವಿಧ್ಯಾವರ್ಧಕ ಸಂಘದ ಅಡಿಯಲ್ಲಿ ನಡೆಯುತ್ತಿರುವ ಅನುಧಾನಿತ ಬಸವೇಶ್ವರ ಪದವಿಪೂರ್ವ ಕಾಲೇಜು ಹಾಗೂ ಕಲಕೇರಿ ಪೋಲಿಸ್ ಠಾಣೆ ಇವರ ಸಹಯೋಗದಲ್ಲಿ ಬುಧವಾರ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರುದ್ದದ ಅಂತರಾಷ್ಟ್ರೀಯ ದಿನವನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಕಲಕೇರಿ ಪಿಎಸ್‌ಐ ಗಂಗಾ ಬಿರಾದಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸುಮಾರು ೩೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳು ಕಾಲೇಜು ಹಂತದಲ್ಲಿರುವಾಗ ಮನಸ್ಸು ಚಂಚಲತೆಯಿಂದ ಇರುವುದು ಸಾಮಾನ್ಯ. ಯುವ ಪೀಳಿಗೆ ಮಾದಕ ವಸ್ತುಗಳಿಂದ ದೂರವಿದ್ದು ತಮ್ಮ ಉಜ್ವಲ ಭವಿಷ್ಯವನ್ನು ನಿರ್ಮಿಸಿಕೊಳ್ಳುವತ್ತ ಮುಂದಾಗಬೇಕು ಎಂದು ಅವರು ಈ ಸಂದರ್ಬದಲ್ಲಿ ಹೆಳಿದರು.ಬಸವೆಶ್ವರ ಪಿಯು ಕಾಲೇಜಿನ ಪ್ರಾಚಾರ್ಯ ಸಿ ಎಸ್ ಹಿರೇಮಠ, ಪ್ರೋ ಎಸ್ ಎಸ್ ಕಲಶೇಟ್ಟಿ ಮಾತನಾಡಿದರು.ಇದೇ ವೇಳೆ ವಿದ್ಯಾರ್ಥಿಗಳಿಗೆ ಮಾದಕವಸ್ತುಗಳ ಕುರಿತ ಬೀತಿ ಪತ್ರಗಳನ್ನು ವಿತರಿಸಿ ನಂತರ ಮಾದಕ ವಸ್ತುಗಳಿಂದ ನಾವು ದೂರವಿರುತ್ತೆವೆ ಎಂಬ ಪ್ರತಿಜ್ಞಾವಿಧಿಯನ್ನು ಭೋದಿಸಲಾಯಿತು.ಈ ಸಂದರ್ಭದಲ್ಲಿ ಡಾ.ಗುರುರಾಜ್ ಮೆಡೆದಾರ,…

Read More

ವಿಜಯಪುರ : ವಿಜಯಪುರ ನಗರದ ಕೇಂದ್ರ ಭಾಗದಲ್ಲಿ ನೂತನವಾಗಿ ಪ್ರಾರಂಭವಾಗಿರುವ ಹೈಟೆಕ್ ಗ್ರಂಥಾಲಯಕ್ಕೆ ದಲಿತ ವಿದ್ಯಾರ್ಥಿ ಪರಿಷತ್ ಹೋರಾಟದ ಪ್ರತಿಫಲ ಸಿಕ್ಕಿದೆ ಎಂದು ಪರಿಷತ್ ಜಿಲ್ಲಾ ಸಂಚಾಲಕ ಅಕ್ಷಯ್ ಕುಮಾರ್ ಅಜಮನಿ ಅವರು ಮಾತನಾಡಿದರು.ನಗರದ ನೆಹರೂ ಕಾಂಪ್ಲೆಕ್ಸನಲ್ಲಿರುವ ಹಳೆಯ ಗ್ರಂಥಾಲಯ ಓದಲು ಯೋಗ್ಯವಿರಲಿಲ್ಲ, ಅಲ್ಲಿ ಪ್ರತಿದಿನ ನೂರಾರು ವಿದ್ಯಾರ್ಥಿಗಳು, ಹಿರಿಯರು ಓದಲು ಬರುತ್ತಿದ್ದರು ಅವರಿಗೆ ಗ್ರಂಥಾಲಯದಲ್ಲಿ ಓದಲು ಪುಸ್ತಕಗಳಿಲ್ಲದೆ, ಕೂಡಲು ಆಸನಗಳಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಅದನ್ನು ಗಮನಿಸಿದ ದಲಿತ ವಿದ್ಯಾರ್ಥಿ ಪರಿಷತ್ ಈ ಕುರಿತು ಜಿಲ್ಲಾಧಿಕಾರಿಗಳಿಗೆ ಸಂಪರ್ಕಿಸಿ ಮನವಿ ಮಾಡಿತು.ನಂತರ ಮನವಿ ಪ್ರತಿಫಲವಾಗಿ ವಿದ್ಯಾರ್ಥಿಗಳಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಗ್ರಂಥಾಲಯ ಸಮಯವನ್ನು ಬದಲಾವಣೆ ಮಾಡಿದರು. ಮೊದಲು ಬೆಳಿಗ್ಗೆ ೩ ತಾಸು ಸಂಜೆ ೩ ತಾಸು ಇದ್ದ ಸಮಯವನ್ನ ಹಗಲು ಪೂರ್ತಿ ಆಯಿತು. ಪ್ರಸ್ತುತ ದಿನಮಾನಗಳಿಗೆ ಬೇಕಾದ ಪುಸ್ತಕಗಳನ್ನ ಪಟ್ಟಿ ಮಾಡಿ ಅವುಗಳನ್ನು ತರಿಸಲು ಆಗ್ರಹಿಸಲಾಗಿತ್ತು. ನೂತನ ಕಟ್ಟಡ ನಿರ್ಮಾಣ ಮಾಡಲು ಹೋರಾಟವನ್ನ ರೂಪಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿತ್ತು.…

Read More

ಮುದ್ದೇಬಿಹಾಳ: ತಾಲೂಕಿನ ಎಲ್ಲ ಹಳ್ಳಿಗಳಲ್ಲಿ ಈಗಾಗಲೇ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಅಭಿಯಾನವು ಪ್ರಾರಂಭವಾಗಿದ್ದು ಈ ಅಭಿಯಾನವು ಜುಲೈ ೨೦ನೇ ತಾರೀಖಿನವರೆಗೆ ಚಾಲ್ತಿಯಲ್ಲಿರುತ್ತದೆ. ಎಲ್ಲ ರೈತರುಗಳು ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಪಶು ವೈದ್ಯಾಧಿಕಾರಿ ಶಿವಾನಂದ ಮೇಟಿ ಸಲಹೆ ನೀಡಿದರು.ಈ ಕುರಿತು ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ಈ ರೋಗವು ದನ ಮತ್ತು ಎಮ್ಮೆ ಎರಡರಲ್ಲಿಯೂ ಎಲ್‌ಎಸ್‌ಡಿ ವೈರಸ್ ನಿಂದ ಉಂಟಾಗುತ್ತದೆ. ಆದರೆ ಕಾಯಿಲೆ ಮತ್ತು ರೋಗಕ್ಕೆ ತುತ್ತಾಗುವ ದೃಷ್ಟಿಯಿಂದ ಎಮ್ಮೆಗಳಿಗೆ ಹೋಲಿಸಿದರೆ ದನಗಳಲ್ಲಿ ಈ ರೋಗವು ತೀವ್ರವಾಗಿರುತ್ತದೆ. ಮಿಶ್ರ ತಳಿ ರಾಸುಗಳಲ್ಲಿ ಚರ್ಮದ ಗಂಟುಗಳ ಗಾತ್ರವು ಹೆಚ್ಚು ದೊಡ್ಡದಾಗಿ ಇರುತ್ತವೆ. ಸದರಿ ಲಸಿಕಾ ಅಭಿಯಾನದಲ್ಲಿ ಕೇವಲ ದನಗಳಿಗೆ ಮಾತ್ರ ಲಸಿಕೆಯನ್ನು ಹಾಕಲಾಗುತ್ತದೆ. ಈ ರೋಗವು ಪ್ರಾಣಿಜನ್ಯ ರೋಗವಲ್ಲ. ಆದ್ದರಿಂದ ಜಾನುವಾರುಗಳಿಂದ ಮನುಷ್ಯರಿಗೆ ಹರಡುವುದಿಲ್ಲ. ಯಾವುದೇ ಗಾಬರಿ ಪಡುವ ಅವಶ್ಯಕತೆ ಇಲ್ಲ. ಕಾಯಿಸಿದ ಹಾಲು ಮನುಷ್ಯರ ಬಳಕೆಗೆ ಸುರಕ್ಷಿತವಾಗಿರುತ್ತದೆ. ಕುರಿ ಮತ್ತು ಮೇಕೆಗಳು ದನಗಳ ಸಮೀಪವಿದ್ದರೂ ಕೂಡ ಈ ರೋಗವು ಹರಡುವುದಿಲ್ಲ. ಈ…

Read More

ಬಿಜ್ಜರಗಿ ಗ್ರಾಪಂಗೆ ಭೇಟಿ ನೀಡಿದ ತಿಕೋಟಾ ತಾಪಂ ಇಒ ಬಸವರಾಜ ಐನಾಪುರ ಪ್ರಶಂಸೆ ತಿಕೋಟಾ: ತಾಲೂಕಿನ ಬಿಜ್ಜರಗಿ ಗ್ರಾಮ ಪಂಚಾಯತಿಗೆ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪುರ ಭೇಟಿ ನೀಡಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಹಾಗೂ ಸ್ವಚ್ಛ ಭಾರತ ಅಭಿಯಾನ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.ಆರಂಭದಲ್ಲಿ ಮನರೇಗಾ ಯೋಜನೆಯ ಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕಾಮಗಾರಿಯಲ್ಲಿ ಸಂಪೂರ್ಣವಾಗಿ ವಿಕಲಚೇತನರು ಕೆಲಸ ನಿರ್ವಹಣೆ ಮಾಡುತ್ತಿರುವುದನ್ನು ಕಂಡು ಸಂತಸ ವ್ಯಕ್ತಪಡಿಸಿದರು.ನಂತರ ಮಾತನಾಡಿದ ಅವರು ಜಿಲ್ಲೆಯಲ್ಲಿಯೇ ಮನರೇಗಾ ಯೋಜನೆಯಡಿ ನೊಂದಣಿಯಾದ ವಿಶೇಷಚೇತನರಿಗೆ ಕೆಲಸ ನೀಡುವಲ್ಲಿ ಹಾಗೂ ವಿಶೇಷಚೇತನರ ಮಾನವ ದಿನಗಳ ಸೃಜನೆ ಮಾಡುವಲ್ಲಿ ನಮ್ಮ ತಾಲೂಕು ಪ್ರಥಮ ಸ್ಥಾನದಲ್ಲಿದೆ. ಇದು ನಮಗೆ ಮತ್ತು ನಿಮಗೆಲ್ಲಾ ಹೆಮ್ಮೆಯ ವಿಷಯ ಎಂದರು. ಕೆಲಸ ನಿರ್ವಹಣೆ ಮಾಡುತ್ತಿರುವ ಎಲ್ಲ ವಿಶೇಷಚೇತನರು ಸಂಪೂರ್ಣ ೧೦೦ ದಿನಗಳ ಕೆಲಸ ನಿರ್ವಹಿಸಲು ತಿಳಿಸಿದರು. ಯೋಜನೆಯಡಿ ತಾಲೂಕು ವ್ಯಾಪ್ತಿಯಲ್ಲಿ ೪೭೬ ವಿಶೇಷಚೇತನರಿಗೆ ಉದ್ಯೋಗ ಖಾತ್ರಿ ಕಾರ್ಡ್ ನೀಡಲಾಗಿದ್ದು, ಈಗಾಗಲೇ…

Read More

ಮುದ್ದೇಬಿಹಾಳ: ಮಳೆಗಾಲ ಪ್ರಾರಂಭವಾಗಿದ್ದು ನೀರಿನಿಂದ ಹರಡುವ ಸಾಂಕ್ರಾಮಿಕ ರೋಗಗಳಾದ ಕರುಳು ಬೇನೆ, ಕಾಲರ, ಕಾಮಾಲೆ, ವಿಷಮಶೀತ ಜ್ವರ ಇತ್ಯಾದಿ ಹಾಗೂ ಬಹು ದಿನಗಳವರೆಗೆ ನೀರಿನಲ್ಲಿ ಈಡೀಸ್ ಸೊಳ್ಳೆ ಸಂತಾನೋತ್ಪತ್ತಿ ಮಾಡುವುದರಿಂದ ಹಾಗೂ ಸೊಳ್ಳೆಗಳಿಂದ ಹರಡುಬಹುದಾದ ಡೆಂಗ್ಯೂ, ಚಿಕುನಗುನ್ಯ ಇನ್ನಿತರ ರೋಗಗಳು ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದ್ದು ಕೂಡಲೇ ಎಲ್ಲ ಪಂಚಾಯತನ ಅಭಿವೃದ್ಧಿ ಅಧಿಕಾರಿಗಳು ಜಾಗೃತರಾಗಬೇಕು ಎಂದು ತಾಲೂಕ ಆರೋಗ್ಯ ಅಧಿಕಾರಿ ಡಾ.ಸತೀಶ್ ತಿವಾರಿ ಹೇಳಿದರು.ಪಟ್ಟಣದ ತಾಲೂಕು ಪಂಚಾಯತ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಡಿದರು.ಈಗಾಗಲೇ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಂದ ನಿಯಮಿತವಾಗಿ ಈಡಿಸ್ ಲಾರ್ವ ಸಮೀಕ್ಷೆ ಹಾಗೂ ಕುಡಿಯುವ ನೀರಿನ ಮೂಲಗಳಿಂದ ನೀರಿನ ಮಾದರಿಗಳು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಮುನ್ನೆಚ್ಚರಿಕೆಯಾಗಿ ರೋಗಗಳು ಹರಡದಂತೆ ಗ್ರಾಮ ಪಂಚಾಯತಿಯಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯವಿದೆ. ಎಲ್ಲ ಕುಡಿಯುವ ನೀರಿನ ಟ್ಯಾಂಕರ್ ಗಳನ್ನು ಕೋರಿನೆಷನ್ ಮಾಡಿಸಿ (ಬೀಚಿಂಗ್ ಪೌಡರ್ ಹಾಕಿಸಿ) ಶುದ್ಧ ಕುಡಿಯುವ ನೀರನ್ನು ಒದಗಿಸುವುದು, ಕೈ ಪಂಪುಗಳು…

Read More

ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದು ಗಂಟೆ ರಸ್ತಾರೋಕ್ ಮಾಡಿದ ವಿದ್ಯಾರ್ಥಿಗಳು | ಸಂಚಾರ ಅಸ್ತವ್ಯಸ್ತ ಇಂಡಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನಿಂದ ಬುಧವಾರ ವಿಜಯಪುರ ರಸ್ತೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತಾರೋಕ್ ಮಾಡಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ಎಸ್.ಜಿ. ಬಿರಾದಾರ ಅವರಿಗೆ ಮನವಿ ನೀಡಿದರು.ಸುಮಾರು ಒಂದು ಗಂಟೆಗಳ ಕಾಲ ರಸ್ತೆಗಳ ಮೇಲೆ ಬಸ್ಸುಗಳು ಹಾಗೂ ಸಾರ್ವಜನಿಕರ ವಾಹನಗಳು ಅಲ್ಲೇ ನಿಂತಿದ್ದರಿಂದ. ಸಾರ್ವಜನಿಕರಿಗೆ ತೊಂದರೆ ಉಂಟಾಯಿತು.ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ನಗರ ಘಟಕದ ಕಾರ್ಯದರ್ಶಿ ಸಚಿನ್ ಧಾನಗೊಂಡ ಮಾತನಾಡಿ, ಇಂಡಿ ತಾಲೂಕಿನಾದ್ಯಂತ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಪಡೆಯಲು ಪಟ್ಟಣಕೆ ನಿತ್ಯ ಬರುತ್ತಾರೆ. ವಿದ್ಯಾರ್ಥಿಗಳ ತರಗತಿಗಳು ಪ್ರಾರಂಭವಾದ ನಂತರ ವಿದ್ಯಾರ್ಥಿಗಳ ಬರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದ್ದು, ಸರಿಯಾದ ಸಮಯಕ್ಕೆ ಬಸ್ ಪಾಸ್ ಹಾಗೂ ಇಂಡಿಯಿಂದ ವಿಜಯಪೂರ, ವಿಜಯಪುರದಿಂದ ಇಂಡಿಗೆ ಬರುವ ಬಸ್ಸುಗಳು ಆದರ್ಶ ವಿದ್ಯಾಲಯದಲ್ಲಿ ನಿಲ್ಲುವುದಿಲ್ಲ. ಆದರಿಂದ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜಿಗೆ ಹೋಗು ಬರಲು ನಿತ್ಯ ತೊಂದರೆ ಉಂಟಾಗುತ್ತಿದ್ದು. ಆದ್ದರಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ…

Read More

ವಿಜಯಪುರ: ಮಾದಕ ದ್ರವ್ಯ ಸೇವನೆ ನಮ್ಮ ದೇಶದ ಅತೀ ದೊಡ್ಡ ಪಿಡುಗು. ಈ ಪಿಡುಗನ್ನು ತಳ ಮಟ್ಟದಿಂದ ತೊಡೆದು ಹಾಕುವ ಪ್ರಯತ್ನ ನಡೆಯಬೇಕು. ಇತ್ತೀಚಿನ ದಿನಗಳಲ್ಲಿ ಗಾಂಜಾ ಸೇವನೆಗೆ ಯುವ ಜನತೆ ಬಲಿಯಾಗುತ್ತಿದ್ದು, ಯುವಕರ ಜೀವನವೇ ಶೂನ್ಯವಾಗುತ್ತಿದೆ. ಶಾಲಾ-ಕಾಲೇಜುಗಳ ಸುತ್ತಲೂ ಗಾಂಜಾ ಸೇರಿದಂತೆ ಮಾದಕ ವ್ಯಸನ ಸೇವನೆ ಹೆಚ್ಚಾಗುತ್ತಿದ್ದು, ಯುವ ಜನರು ಇದನ್ನು ಸೇವನೆಯನ್ನು ಬಹಿಸ್ಕರಿಸಬೇಕು ಎಂದು ವಿಜಯಪುರ ಆದರ್ಶ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಐ.ಎಂ.ದುಂಡಸಿಯ ಹೇಳಿದರು.ಬುಧವಾರದಂದು ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಬಂಜಾರಾ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಆದರ್ಶ ನಗರ ಪೊಲೀಸ್ ಠಾಣೆಯ ಸಂಯುಕ್ತಾಶ್ರಯದಲ್ಲಿ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ‘ಮಾದಕ ವಸ್ತುಗಳ ಸಾಗಾಣಿಕೆ ಹಾಗೂ ಮಾರಾಟದ ಕುರಿತು ಜಾಗೃತಿ’ ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದ ಅವರು. ಮದ್ಯಪಾನ ವ್ಯವಸ್ಥೆ ಇಡೀ ಸಮಾಜವನ್ನೇ ಹಾಳು ಮಾಡುತ್ತಿದೆ. ಮದ್ಯಪಾನ, ಮಾದಕ ದ್ರವ್ಯ ಸೇವನೆ ಮುಂತಾದವುಗಳು ನಮ್ಮ ಸಮಾಜದ ಕೆಟ್ಟ ವ್ಯವಸ್ಥೆಯಾಗಿದೆ. ಯುವಜನರು ಇಂತಹ ದುಃಶ್ಚಟಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಿ. ಮಕ್ಕಳು…

Read More

ಮುದ್ದೇಬಿಹಾಳ: ಅರಣ್ಯ ಇಲಾಖೆಯ ಗಿಡಗಳನ್ನು ನೆಡುವ ಕೆಲಸಕ್ಕೆ ಅಡ್ಡಿ ಪಡಿಸುವವರೇ ಹೆಚ್ಚು. ನಮ್ಮ ಹೊಲದ ಬಾಜೂ ಗಿಡ ಹಚ್ಚಬ್ಯಾಡ್ರಿ, ಕಿತ್ತಿ ಒಗಿತಿವಿ ನೋಡ್ರಿ ಅನ್ನೋರು ಜಾಸ್ತಿ ಇರುವಾಗ, ಬನ್ನಿ, ನಮ್ಮ ಕಡೆ ಗಿಡಗಳನ್ನು ಹಚ್ರಿ ಎನ್ನುವವರನ್ನು ಕಂಡರೆ ನಮಗೆ ಬಹಳ ಸಂತೋಷವಾಗುತ್ತದೆ ಎಂದು ತಾಲ್ಲೂಕು ಸಾಮಾಜಿಕ ವಲಯ ಅರಣ್ಯಾಧಿಕಾರಿ ಎಸ್.ಜಿ.ಸಂಗಾಲಕ ಹೇಳಿದರು.ತಾಲೂಕಿನ ಸರೂರ ಗ್ರಾಮದ ರೇವಣಸಿದ್ದೇಶ್ವರ ಹಿರೇಗುಡ್ಡದಲ್ಲಿ ಅರಣ್ಯ ಇಲಾಖೆ, ಹಸಿರು ತೋರಣ ಗೆಳೆಯರ ಬಳಗ ಹಾಗೂ ಸರೂರ ಗ್ರಾಮಸ್ಥರು ಹಮ್ಮಿಕೊಂಡ ಸರೂರ ಗುಡ್ಡ ಉಳಿಸಿ ಅಭಿಯಾನದಂಗವಾಗಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.ಅರಣ್ಯ ಇಲಾಖೆ ಈ ವರ್ಷ ಮಾಡಬೇಕಾದ ಯೋಜನೆಗಳನ್ನು ಹಿಂದಿನ ವರ್ಷವೇ ಮಾಡಿರುತ್ತದೆ. ಆದಾಗ್ಯೂ ಸ್ಥಳ ಬದಲಾವಣೆ ಮಾಡಿ ಯೋಜನೆ ಅನುಷ್ಠಾನ ಮಾಡಲು ಯತ್ನಿಸುತ್ತೇವೆ. ನಮ್ಮೆಲ್ಲರ ಉದ್ದೇಶ ಗಿಡಗಳನ್ನು ನೆಡುವುದಾಗಿದೆ. ಜನರ ಸಹಕಾರ, ಬೆಂಬಲ ದೊರೆತರೆ ಅದು ಯಶಸ್ಸು ಕಾಣುತ್ತದೆ ಎಂದರು.ಸಾಹಿತಿ ಸಿದ್ದನಗೌಡ ಬಿಜ್ಜೂರ ಮಾತನಾಡಿ, ಸರೂರ ಗ್ರಾಮವು ರೇವಣಸಿದ್ದೇಶ್ವರರ ಮೂಲಪೀಠವಾಗಿ ನಾಡಿಗೇ ಚಿರಪರಿಚಿತ. ಒಂದು ಕಾಲದಲ್ಲಿ ಸಾವಿರಾರು ಗಿಡಗಳಿಂದ…

Read More