Author: editor.udayarashmi@gmail.com

ವಿಜಯಪುರ: ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ರಾಜ್ಯದ ೪ ಕಂದಾಯ ವಿಭಾಗಗಳಲ್ಲಿ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲೆಯನ್ನು ನಡೆಸಲಾಗುತ್ತಿದ್ದು, ಧಾರವಾಡ ವಿಭಾಗದ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲೆಗೆ ಪ್ರವೇಶ ಬಯಸುವ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಪಿಯುಸಿ ಪರೀಕ್ಷೆಯಲ್ಲಿ ಕನಿಷ್ಠ ಶೇ.೪೦ ರಷ್ಟು ಹಾಗೂ ಎಸ್ಸಿ.ಎಸ್ಟಿ ಅಭ್ಯರ್ಥಿಗಳು ಕನಿಷ್ಠ ಶೇ.೩೫ರಷ್ಟು ಅಂಕ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಹಾಲಿ ಕಾರ್ಯ ನಿರ್ವಹಿಸುತ್ತಿರುವ ಇಲಾಖೆಯ ಡಿ ದರ್ಜೆ ಸಹವರ್ತಿ ಅಭ್ಯರ್ಥಿಗಳು ಸಂಬಂಧಿಸಿದ ಉಪನಿರ್ದೇಶಕರು- ಮುಖ್ಯ ಗ್ರಂಥಾಲಯಾಧಿಕಾರಿಗಳ ಮೂಲಕ ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರು ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ಮೂಲಕ ಹಾಗೂ ಇತರೆ ಸಂಸ್ಥೆಯಿಂದ ಬರುವ ಅಭ್ಯರ್ಥಿಗಳು ತಮ್ಮ ಸಂಸ್ಥೆಯ ಮುಖ್ಯಸ್ಥರ ಮೂಲಕ ಅರ್ಜಿ ಸಲ್ಲಿಸಬೇಕು.ಅರ್ಜಿ ಸಲ್ಲಿಸಲು ದಿನಾಂಕ : ೧೯-೦೭-೨೦೨೪ ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ನಗರ ಕೇಂದ್ರ ಗ್ರಂಥಾಲಯ, ಡಿಸಿ ಕಚೇರಿಯ ಆವರಣ, ಧಾರವಾಡ-೫೮೦೦೦೧ ದೂ: ೦೮೩೬-೨೪೪೨೪೬೫ ಸಂಖ್ಯೆಗೆ ಸಂಪರ್ಕಿಸುವಂತೆ ವಿಜಯಪುರ ನಗರ ಕೇಂದ್ರ ಗ್ರಂಥಾಲಯದ…

Read More

ವಿಜಯಪುರ: ಡಿಪ್ಲೋಮಾ ೨ನೇ ವರ್ಷದ ಅಥವಾ ೩ನೇ ಸೆಮಿಸ್ಟರ್ ಇಂಜಿನೀಯರಿಂಗ್ ಕೊರ್ಸ್ಗಳಿಗೆ ೨೦೨೪ನೇ ಸಾಲಿನ ಪ್ರವೇಶಕ್ಕೆ ಡಿಪ್ಲೋಮಾ ಸಾಮಾನ್ಯ ಪ್ರವೇಶ ಪರೀಕ್ಷೆಗಳು ಜೂ.೨೨ ರಂದು ವಿಜಯಪುರ ನಗರದ ಬಾಲಕರ ಸರ್ಕಾರಿ ಪದವಿಪುರ್ವ ಕಾಲೇಜ್‌ನಲ್ಲಿ ಜರುಗಲಿದ್ದು, ಮುನ್ನೆಚ್ಚರಿಕೆಯಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ವ್ಯಾಪ್ತಿಯಲ್ಲಿ ಮಧ್ಯಾಹ್ನ ೧೨-೩೦ರಿಂದ ಪರೀಕ್ಷೆ ಮುಕ್ತಾಯವಾಗುವರೆಗೆ ಕಲಂ ೧೪೪ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಇಂಟರ್‌ನೆಟ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ಸದರಿ ಅವಧಿಯಲ್ಲಿ ತೆರೆಯದಂತೆ ಅದೇಶದಲ್ಲಿ ಆದೇಶಿಸಲಾಗಿದೆ.

Read More

ವಿಜಯಪುರ: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜೂನ್-೨೦೨೪ರ ಮಾಹೆಯಲ್ಲಿ ವಿಜಯಪುರ ಜಿಲ್ಲೆಯ ರೈತ-ರೈತ ಮಹಿಳೆಯರಿಗೆ ವಿಜಯಪುರ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜೂ.೨೬ ರಂದು ಮುಂಗಾರು ಬೆಳೆಗಳ ಸಾಗುವಳಿಯಲ್ಲಿ ನವೀನ ತಾಂತ್ರಿಕತೆಗಳು ವಿಷಯ ಕುರಿತು ತರಬೇತಿ ಆಯೋಜಿಸಲಾಗಿದೆ.ಆಸಕ್ತ ರೈತರು ತರಬೇತಿಯಲ್ಲಿ ಭಾಗವಹಿಸಲು ಕೋರಲಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಹಾಗೂ ನೊಂದಣಿಗಾಗಿ ಕೃಷಿ ಅಧಿಕಾರಿಗಳಾದ ಫಾತೀಮಾ ಬಾನು ಸುತಾರ್ ಮೊ: ೯೮೮೬೧೩೪೩೧೦ ಸಂಖ್ಯೆಗೆ ಸಂಪರ್ಕಿಸುವಂತೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ-ನೀಟ್ ಮೂಲಕ ದಾಖಲಾತಿ ಪಡೆಯುವ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆಯಡಿಯಲ್ಲಿ ವಿದ್ಯಾಭ್ಯಾಸ (ಶೈಕ್ಷಣಿಕ) ಸಾಲ ಪಡೆಯಲು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಹಾಗೂ ಆಂಗ್ಲೋ ಇಂಡಿಯನ್ ಜನಾಂಗಕ್ಕೆ ಸೇರಿದ ಸಿಇಟಿ-ನೀಟ್ ಪರೀಕ್ಷೆಗೆ ಹಾಜರಾಗಿ ವೈದ್ಯಕೀಯ (ಎಂಬಿಬಿಎಸ್), ಬಿಡಿಎಸ್, ಬಿಇ , ಬಿಟೆಕ್ ಬ್ಯಾಚುಲರ್ ಆಫ್ ಆರ್ಕಿಟೆಕ್ಟರ್, ಬಿ.ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ಕೋರ್ಸ್ಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ಹೊಸದಾಗಿ ಸಾಲ ಸೌಲಭ್ಯ ಒದಗಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅರ್ಹರು ನಿಗಮದ ವೆಬ್‌ಸೈಟ್ https:kmdconline.karnataka.gov.inಮೂಲಕ ಅರ್ಜಿ ಸಲ್ಲಿಸಿ, ಸಲ್ಲಿಸಿದ ಅರ್ಜಿಯ ಪ್ರಿಂಟ್‌ಔಟ್ ತೆಗೆದು, ಇತರೆ ಅವಶ್ಯಕ ದಾಖಲೆಗಳೊಂದಿಗೆ ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ನಂತರ ಅರ್ಹ ವಿದ್ಯಾರ್ಥಿಗಳಿಗೆ ಅವರು ಸೇರಬಯಸುವ ಕಾಲೇಜಿಗೆ ಬೋಧನಾ ಶುಲ್ಕವನ್ನು…

Read More

ವಿಜಯಪುರ: ಇಂಡಿ ಸರಕಾರಿ ಆದರ್ಶ ವಿದ್ಯಾಲಯದಲ್ಲಿ 2024-25 ನೇ ಸಾಲಿನಲ್ಲಿ 7, 8 ಮತ್ತು 9ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳಿಗೆ ವಿದ್ಯಾರ್ಥಿಗಳನ್ನು ಭರ್ತಿ ಮಾಡಿಕೊಳ್ಳಲು ಮಾನ್ಯ ರಾಜ್ಯ ಯೋಜನಾ ನಿರ್ದೇಶಕರು ಸಮಗ್ರ ಶಿಕ್ಷಣ ಕರ್ನಾಟಕ ಬೆಂಗಳೂರು ರವರ ಸುತ್ತೋಲೆಯ ಮೇರೆಗೆ ತರಗತಿವಾರು ಮತ್ತು ರೋಸ್ಟರ್ ಆಧಾರದ ಮೇಲೆ ಈ ಸಂಸ್ಥೆಯಲ್ಲಿ ಖಾಲಿ ಇರುವ ತರಗತಿವಾರು ಸೀಟುಗಳು ಅರ್ಜಿ ಕರೆಯಲಾಗಿದೆ.7ನೇ ತರಗತಿಯಲ್ಲಿ 22 ಸೀಟುಗಳು, 8ನೇ ತರಗತಿಯಲ್ಲಿ 08 ಸೀಟುಗಳು, 9ನೇ ತರಗತಿಯಲ್ಲಿ 08 ಸೀಟುಗಳು. ಖಾಲಿ ಇದ್ದು, ಆಸಕ್ತಿಯುಳ್ಳ ವಿದ್ಯಾರ್ಥಿಗಳು ಜೂನ 20 ರಿಂದ ಜೂನ 26 ವರೆಗೆ ಸರಕಾರಿ ಆದರ್ಶ ವಿದ್ಯಾಲಯ ಇಂಡಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿಕೊಳ್ಳಲು ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಆಲಗೂರ ಮತ್ತು ಮುಖ್ಯೋಪಾಧ್ಯಾಯ ಎಸ್.ಜಿ.ಬನಸೋಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪರೀಕ್ಷಾ ದಿನಾಂಕ ಜೂನ 29, ಪರೀಕ್ಷಾ ಸಮಯ: 10.30 ರಿಂದ 01.00 ಗಂಟೆಯವರೆಗೆ, ಹೆಚ್ಚಿನ ಮಾಹಿತಿಗಾಗಿ 8970716054 , 6360904885 ಈ ನಂಬರಗಳಿಗೆ ಸಂಪರ್ಕಿಸಿ.

Read More

ಸಿಂದಗಿ: ಯೋಗವು ವೈಯಕ್ತಿಕ ಆರೋಗ್ಯ ಮಾತ್ರವಲ್ಲದೇ ಸಾಮಾಜಿಕ ಯೋಗಕ್ಷೇಮಕ್ಕೂ ಕೊಡುಗೆ ನೀಡುತ್ತದೆ ಎಂದು ಸಿಂದಗಿಯ ಎನ್.ಬಿ.ಎನ್ ಫೌಂಡೇಶನ್ ಮುಖ್ಯಸ್ಥ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ ಹೇಳಿದರು.ಅವರು ಪಟ್ಟಣದ ಜ್ಯೋತಿ ಕಲ್ಯಾಣ ಮಂಟಪದಲ್ಲಿ ಲಿಟಲ್ ವಿಂಗ್ಸ್ ಪ್ರಿ ಸ್ಕೂಲ್ ಹಾಗೂ ಎನ್.ಬಿ.ಎನ್ ಫೌಂಡೇಶನ್ ವತಿಯಿಂದ ನಡೆದ ಅಂತರರಾಷ್ಟ್ರೀಯ ಯೋಗದಿನಾಚರಣೆ ಕಾರ‍್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಯೋಗವು ವೈಯಕ್ತಿಕ ಮತ್ತು ಸಾಮಾಜಿಕ ಆರೋಗ್ಯದ ಪರಸ್ಪರ ಸಂಬಂಧವನ್ನು ಒತ್ತಿಹೇಳುತ್ತದೆ. ನಿತ್ಯ ಯೋಗ ಮಾಡುವುದರಿಂದ ನಮ್ಮಯ ಅನೇಕ ರೋಗಗಳು ದೂರವಾಗುವುದಲ್ಲದೆ ನಮ್ಮನ್ನು ಸದಾ ಹಸನ್ಮುಖಿಯಾಗಿಸುತ್ತದೆ ಎಂದರು.ಈ ವೇಳೆ ಸಾನಿಧ್ಯ ವಹಿಸಿದ ಕೆರುಟಗಿ ಸಿದ್ದರಾಮೇಶ್ವರ ಮಠದ ಅಪ್ಪಯ್ಯ ಹಿರೇಮಠ ಪೂಜ್ಯರು, ಆರ್.ಡಿ.ಪಾಟೀಲ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ, ಎಚ್.ಜಿ.ಪದವಿ ಪೂರ್ವ ಕಾಲೇಜಿನ ಉಪನ್ಯಾಸ ಸಿದ್ದಲಿಂಗ ಕಿಣಗಿ, ಲಿಟಲ ವಿಂಗ್ಸ್ ಶಾಲೆಯ ಮಾರ್ಗದರ್ಶಕ ಸಿದ್ದಲಿಂಗ ಚೌಧರಿ ಮಾತನಾಡಿದರು.ಈ ವೇಳೆ ಯೋಗ ಶಿಕ್ಷಕ ಸಾಯಬಣ್ಣ ಪಿಳಬಂಟಿ ಮಕ್ಕಳಿಗೆ ಯೋಗದ ತರಬೇತಿ ನೀಡಿದರು. ನಂತರ ಶಾಲಾ ಮಕ್ಕಳು ವಿವಿಧ ಯೋಗಾಸನದ ಭಂಗಿಗಳನ್ನು ಮಾಡಿದರು.ವೇದಿಕೆ ಮೇಲೆ…

Read More

ವಿಜಯಪುರ: ಪಟ್ಟಣದ ರಸ್ತೆಯಲ್ಲಿರುವ ಹೆಸರಾಂತ ವಿವಾ (VIVA) ಫಿಟ್ನೆಸ್ ಕ್ಲಾಸಿಸ್ ನಲ್ಲಿ ಶುಕ್ರವಾರ ಮಹಿಳೆಯರಿಗೆ ಯೋಗ ತರಬೇತಿ ನೀಡುವ ಮೂಲಕ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.’ವಿವಾ ಫಿಟ್ನೆಸ್’ ಕ್ಲಾಸಿಸ್ ಮುಖ್ಯಸ್ಥೆ ಶ್ರೀಮತಿ ವಿಜಯಲಕ್ಷ್ಮಿ ಗಿರಿಗಾಂವಕರ ಯೋಗದ ಮಹತ್ವ ಮತ್ತು ಪ್ರಯೋಜನಗಳ ಕುರಿತು ವಿವರಿಸಿದರು.’ಉದಯರಶ್ಮಿ’ ದಿನಪತ್ರಿಕೆ ಪ್ರಕಾಶಕಿ ಶೈಲಾ ಮಣೂರ, ಪುಷ್ಪಾ ಗಡಿನಾಯಕ, ಸವಿತಾ ಅಗಸರ, ಹೇಮಾ ದೇಸಾಯಿ, ರಾಜೇಶ್ವರಿ, ಪ್ರಿಯಾಂಕ, ಐಶ್ವರ್ಯ, ಯಶೋಧ, ಸುಮಂಗಲಾ ಸೇರಿದಂತೆ ಹಲವರಿದ್ದರು.

Read More

“ವೀಣಾಂತರಂಗ”- ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ- ಗದಗ ಯೋಗವು ಒಂದು ವಿಜ್ಞಾನವಾಗಿದ್ದು ಮನುಷ್ಯ ಸಂಕುಲವು ಅನುಭವಿಸುತ್ತಿರುವ ಎಲ್ಲಾ ದುಃಖ ನಿರಾಶೆ ನೋವು ಜಂಜಡಗಳಿಗೆ, ಮಾನಸಿಕ ಸಂಕಷ್ಟಗಳಿಗೆ ರಾಮಬಾಣವಾಗಿದೆ. ಆದ್ದರಿಂದಲೇ ಯೋಗಃ ಚಿತ್ರವೃತ್ತಿ ನಿರೋಧಹ ಎಂದು ಹೇಳುತ್ತಾರೆ.ಚಿತ್ತ ದ ಹಲವಾರು ವೃತ್ತಿಗಳನ್ನು ಅಂದರೆ ವಿವಿಧ ಬಗೆಯ ಮಾನಸಿಕ ಕ್ಲೇಶಗಳನ್ನು ಕಳೆಯುವ ಶಕ್ತಿ ಯೋಗಕ್ಕಿದೆ.”ಯೋಗೇನ ಚಿತ್ತಸ್ಯ ಪದೇನ ವಾಚಾಮಲಂ ಶರೀರಸ್ಯಚ ವೈದ್ಯಕೇನಾಯೋಪಾಕರೋತ್ತಮ ಪ್ರವರಂ ಮುನೀನ ಪತಂಜಲಿಂ ಪ್ರಾಂಜಲಿಂ ರಾನತೋಸ್ಮಿ” ಎಂಬುದು ಭಾರತ ದೇಶಕ್ಕೆ ಅಷ್ಟೇ ಏಕೆ ಇಡೀ ವಿಶ್ವಕ್ಕೆ ಯೋಗದ ಜ್ಞಾನವನ್ನು ಕೊಟ್ಟ ಪತಂಜಲಿ ಮಹರ್ಷಿಯನ್ನು ಕುರಿತಾದ ಪ್ರಾರ್ಥನಾ ಮಂತ್ರ.2014ರಲ್ಲಿ ವಿಶ್ವಸಂಸ್ಥೆಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಅನುಮೋದಿಸಲ್ಪಟ್ಟಿತು. 2015 ಜೂನ್ 21ರಂದು ಮೊತ್ತ ಮೊದಲ ಬಾರಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಇಡೀ ಜಗತ್ತಿನಲ್ಲಿಯೇ ಆಚರಿಸಲಾಯಿತು. ತನ್ಮೂಲಕ ಜಗತ್ತಿನ ಹಲವಾರು ರಾಷ್ಟ್ರಗಳು ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸುತ್ತವೆ. ಜೂನ್ 21ರಂದೇ ಯೋಗ ದಿನವನ್ನು ಆಚರಿಸಲು ಕಾರಣ…

Read More

ಜಿಲ್ಲಾ ಉಸ್ತುವಾರಿ ಮತ್ತು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಮಾಹಿತಿ ಬೆಂಗಳೂರು: ವಿಜಯಪುರ ಜಿಲ್ಲೆ ಬಬಲೇಶ್ವರ ತಾಲ್ಲೂಕಿನಲ್ಲಿ ಇರುವ ಐತಿಹಾಸಿಕ ಮಮದಾಪುರ ಕೆರೆಯನ್ನು ಪುನಶ್ಚೇತನಗೊಳಿಸಲು ಕೋಕಾಕೋಲಾ ಕಂಪನಿ ಮುಂದೆ ಬಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಶುಕ್ರವಾರ ಹೇಳಿದ್ದಾರೆ.ಈ ಬಗ್ಗೆ ಕಂಪನಿಯ ಉನ್ನತಾಧಿಕಾರಿಗಳಾದ ಹಿಮಾಂಶು ಪ್ರಿಯದರ್ಶಿ ಮತ್ತು ಮುಕುಂದ್ ತ್ರಿವೇದಿ ಸಚಿವರನ್ನು ಇಲ್ಲಿ ಭೇಟಿ ಮಾಡಿ ಚರ್ಚಿಸಿದರು.16ನೇ ಶತಮಾನದಲ್ಲಿ ಆದಿಲ್ ಶಾಹಿ ಸುಲ್ತಾನರ ಕಾಲದಲ್ಲಿ ನಿರ್ಮಿತವಾಗಿರುವ ಮಮದಾಪುರ ಕೆರೆಯು ರಾಜ್ಯದ ಅತಿದೊಡ್ಡ ಕೆರೆಗಳ ಪೈಕಿ ಒಂದಾಗಿದೆ. ಕೆರೆಯ ಸುತ್ತಮುತ್ತ ಹಸಿರಿನಿಂದ ತುಂಬಿರುವ 1,654 ಎಕರೆ ಪ್ರದೇಶದಲ್ಲಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ನೆನಪಿನಲ್ಲಿ ಅರಣ್ಯ ಅಭಿವೃದ್ಧಿ ಪಡಿಸಲಾಗುತ್ತದೆ. ಕೆರೆ ಪುನಶ್ಚೇತನದ ಬಳಿಕ ಈ ಸ್ಥಳವು ಪ್ರವಾಸಿ ಆಕರ್ಷಣೆಯ ತಾಣವಾಗಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಕೋಕಾಕೋಲಾ ಕಂಪನಿಯು ಕೆರೆಗೆ ಸಂಪರ್ಕಿಸುವ ನಾಲೆಗಳಲ್ಲಿ ಬಾಂದಾರವನ್ನು ನಿರ್ಮಿಸಲಿದೆ. ಜೊತೆಗೆ ಮಮದಾಪುರ ಗ್ರಾಮದ ಮುಂಭಾಗದಲ್ಲಿ ಇರುವ 800 ಮೀಟರ್ ಉದ್ದದ…

Read More

ಕೆಂಭಾವಿ: ಪಟ್ಟಣದ ಶ್ರೀಮತಿ ಗಂಗೂಬಾಯಿ ಶಾಂತಗೌಡ ಪೋಲೀಸ್ ಪಾಟೀಲ್ ಮೆಮೋರಿಯಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ಪ್ರಾಂಶುಪಾಲ ಡಾ.ನಾಗಪ್ಪ ಚಾವಲ್ಕರ್ ಮಾತನಾಡಿ, ಯೋಗವನ್ನು ‌ವಿಶ್ವಕ್ಕೆ ಪರಿಚಯಿಸಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ. ಅಧಿಕಾರ, ಅಂತಸ್ತು, ಹಣ್ಣ ಮುಖ್ಯವಲ್ಲ, ಆರೋಗ್ಯ ಮುಖ್ಯ, ಹಾಗಾಗಿ ವಿದ್ಯಾರ್ಥಿಗಳು ದಿನಂಪ್ರತಿ ಬೆಳಿಗ್ಗೆ ಅರ್ಧ ಗಂಟೆ ಯೋಗಾಭ್ಯಾಸ ಮಾಡುವುದರಿಂದ ರೋಗ ನಿರೋಧಕ ಶಕ್ತಿ ವೃದ್ಧಿಸುತ್ತದೆ ಎಂದರು.ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ ಸಿದ್ದಲಿಂಗ ರಾಠೋಡ್ ಮಾತನಾಡಿ, ಯೋಗವು ಮನಸ್ಸು ಮತ್ತು ದೇಹ ಗಟ್ಟಿಗೊಳಿಸಿ, ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುತ್ತದೆ ಎಂದವರು ಪ್ರತಿ ವರ್ಷ ಜೂನ್ 21 ರಂದು ವಿಶ್ವ ಯೋಗ ದಿನವಾಗಿ ಆಚರಿಸಲಾಗುತ್ತದೆ ಎಂದರು.ಇದೇ ವೇಳೆ ಡಾ ನಂದಾ ವಾರದ, ಡಾ ಬಸಮ್ಮ ಎಸ್, ನಸ್ರೀನ್ ತಾಜ್, ಗುಲಾಂ ಮೈಹಿಬೂಬಸಾಬ್, ಮಾಸುಮ ಅಲಿ ನಾಶಿ ಡಾ ಯಂಕನಗೌಡ ಪಾಟೀಲ, ಮಲ್ಲಣ್ಣ ಬಿಳೇಬಾವಿ, ಶರಣಪ್ಪ ನಡಕೂರ, ಡಾ ಆನಂದ ರೇವಡಿ, ಬಸವರಾಜ ಹೋಳಿಕಟ್ಟಿ, ಮರಿಸ್ವಾಮಿ,…

Read More