Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷ ಸಿಂದಗಿ ಸಾರಂಗಮಠದ ಡಾ.ಪ್ರಭುಸಾರಂಗದೇವ ಶ್ರೀಗಳು ಕರೆ ಉದಯರಶ್ಮಿ ದಿನಪತ್ರಿಕೆ ಪಡಗಾನೂರ(ದೇವರಹಿಪ್ಪರಗಿ): ನಿಸ್ವಾರ್ಥವೆಂಬುದು ಧರ್ಮವಾಗಿದ್ದು, ಸ್ವಾರ್ಥವೆಂಬುದು ಅಧರ್ಮವಾಗಿದೆ. ಸ್ವಾರ್ಥವನ್ನು ತೆಗೆದುಹಾಕಿ ಎಲ್ಲರೂ ಸಾರ್ಥಕವಾದ ಜೀವನವನ್ನು ನಡೆಸಬೇಕು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷರಾದ ಸಿಂದಗಿ ಸಾರಂಗಮಠದ ಡಾ.ಪ್ರಭುಸಾರಂಗದೇವ ಶ್ರೀಗಳು ಹೇಳಿದರು.ತಾಲ್ಲೂಕಿನ ಪಡಗಾನೂರ ಗ್ರಾಮದ ಸೋಮೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಭಾನುವಾರ ಜರುಗಿದ ಧರ್ಮಸಭೆ ಹಾಗೂ ಸಾಮೂಹಿಕ ವಿವಾಹದ ಸಾನಿಧ್ಯ ವಹಿಸಿ, ಗ್ರಾಮಸ್ಥರಿಂದ ಗುರುವಂದನ ಸ್ವೀಕರಿಸಿ ಮಾತನಾಡಿದರು. ನಿಸ್ವಾರ್ಥ ಕಾಯಕ ನಮ್ಮನ್ನು ನಾಯಕರನ್ನಾಗಿಸುತ್ತದೆ ಎಂದರು.ಶಾಸಕ ರಾಜುಗೌಡ ಪಾಟೀಲ(ಕುದರಿಸಾಲವಾಡಗಿ), ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ. ಪ್ರಭುಗೌಡ ಲಿಂಗದಳ್ಳಿ(ಚಬನೂರ), ಮಾಜಿಶಾಸಕ ಶರಣಪ್ಪ ಸುಣಗಾರ ಮಾತನಾಡಿದರು.ಕಡಗಂಚಿಯ ಸಾವಿರದೇವರ ಸಂಸ್ಥಾನ ಮಠದ ವೀರಭದ್ರ ಸ್ವಾಮೀಜಿ ನೇತೃತ್ವದಲ್ಲಿ ಹಾಗೂ ಸೋಮೇಶ್ವರ ದೇವಸ್ಥಾನ ಕಮೀಟಿಯ ಅಧ್ಯಕ್ಷ ಅಯ್ಯಪ್ಪಯ್ಯ ಹಿರೇಮಠ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮದ ಸುಮಂಗಲೆಯರಿಂದ ಕುಂಭ ಕಳಶ,ಪಲ್ಲಕ್ಕಿಗಳ ಮೆರವಣಿಗೆ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.ಇಂಗಳೇಶ್ವರ ಭೃಂಗೇಶ್ವರ ಶ್ರೀ, ಬಸವನಬಾಗೇವಾಡಿ ಶಿವಪ್ರಕಾಶಶ್ರೀ,…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕೋರವಾರ ಗ್ರಾಮದ ಸದ್ಯ ಬೆಂಗಳೂರು ಸದ್ದುಗುಂಟೆ ಪಾಳ್ಯ ಠಾಣೆಯಲ್ಲಿ ಸಿಪಿಐ ಆಗಿ ಕಾರ್ಯ ನಿರ್ವಹಿಸುತ್ತಿರುವ ರಮೇಶ ಛಾಯಾಗೋಳ ೨೦೨೫ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ.ವಿಜಯಪುರ, ಬಬಲೇಶ್ವರ, ಮನಗೂಳಿ, ಹುಕ್ಕೇರಿ, ಹುಬ್ಬಳ್ಳಿಗಳಲ್ಲಿ ಪಿಎಸ್ಐ ಆಗಿ ಸೇವೆ ಸಲ್ಲಿಸಿ ನಂತರ ಪದೋನ್ನತಿ ಹೊಂದಿ ಯಮಕನಮರಡಿ, ಕಲಬರ್ಗಿಯಲ್ಲಿ ಸೇವೆ ಸಲ್ಲಿಸಿ ಈಗ ಬೆಂಗಳೂರಿನಲ್ಲಿ ಸೇವೆ ಸಲ್ಲಿಸುತ್ತಿರುವ ಇವರು ಕಳೆದ ವರ್ಷ ಕೇಂದ್ರೀಯ ಗೃಹ ಮಂತ್ರಿಗಳ ಇಲಾಖೆಯ ಪ್ರಶಸ್ತಿ ಪಡೆದಿದ್ದರು.
ಸ್ವಾತಂತ್ರ್ಯ ಸೇನಾನಿ ಪದ್ಮಾವತಿ ವಾಮನರಾವ್ ದೇಸಾಯಿ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿದ ವಿಶ್ರಾಂತ ಸಂಪಾದಕ ಮನೋಜ ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ದೇಶದ ಸ್ವತಂತ್ರ್ಯಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ ಪದ್ಮಾವತಿ ಬಾಯಿ ಅತ್ಯಂತ ಕಷ್ಟದ ಜೀವನ ನಡೆಸಿದರು. ಗಂಡನ ಮನೆಯ ನೂರಾರು ಎಕರೆ ಭೂಮಿ ಕಳೆದುಕೊಂಡು, ವಿದ್ಯುತ್, ನೀರು, ಶೌಚಾಲಯವಿಲ್ಲದ ಅತ್ಯಂತ ಕಿರಿದಾದ ಕೋಣೆಯಲ್ಲಿ ವಾಸವಿದ್ದು, ತಮ್ಮ ಕೊನೆಯ ಜೀವನ ಕಳೆದರು ಎಂದು ಸ್ವಾತಂತ್ರ್ಯ ಸೇನಾನಿ ಪದ್ಮಾವತಿ ಬಾಯಿ ಅವರ ಮೊಮ್ಮಗ, ವಿಶ್ರಾಂತ ಸಂಪಾದಕ, ಮನೋಜ ಪಾಟೀಲ ಹೇಳಿದರು.ನಗರದ ಬಸವ ಭವನದಲ್ಲಿ ಏರ್ಪಡಿಸಿದ್ದ ಸ್ವಾತಂತ್ರ್ಯ ಸೇನಾನಿ ಪದ್ಮಾವತಿ ವಾಮನರಾವ್ ದೇಸಾಯಿ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಮಖಂಡಿಯಲ್ಲಿ ಪೇಶ್ವೆಗಳ ಸಂಸ್ಥಾನ ಇದ್ದುದರಿಂದ ಎಲ್ಲ ಕಾಗದ ಪತ್ರಗಳು, ದಾಖಲೆಗಳು ಮಹರಾಷ್ಟ್ರದ ಪುಣೆಯಲ್ಲಿವೆ. ಕರ್ನಾಟಕದಲ್ಲಿ ಪೇಸ್ವೆಗಳ ಆಡಳಿತದ ಯಾವ ದಾಖಲೆಗಳು ಸಿಗುತ್ತಿಲ್ಲ. ಮೊದಲು ಕನ್ನಡಕ್ಕೆ ಪ್ರಾಶಸ್ತ್ರವಿರಲಿಲ್ಲ, ಮರಾಠಿ ಪ್ರಭಾವವಿತ್ತು. ಈಗಲೂ ಪೇಶ್ವಾಯಿ ಸಂಸ್ಥಾನಗಳ ದಾಖಲೆಗಳು ಬೇಕಾದಲ್ಲಿ ಪುಣೆಗೆ ಹೋಗಬೇಕಾದ ಅನಿವಾರ್ಯತೆಯಿದೆ. ದಾಖಲೆಗಳಿಲ್ಲದ…
ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಹರಿದ 2 ಟಿಎಂಸಿ ನೀರು | ಶಾಸಕ ಲಕ್ಷ್ಮಣ ಸವದಿ ಭಗೀರಥ ಪ್ರಯತ್ನಕ್ಕೆ ಸಿಕ್ಕ ಫಲ ಉದಯರಶ್ಮಿ ದಿನಪತ್ರಿಕೆ ಅಥಣಿ: ತೀವ್ರ ಬೇಸಿಗೆಯ ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಅಥಣಿ ಮತಕ್ಷೇತ್ರದ ಜನತೆ ಹಾಗೂ ರೈತ ಸಮುದಾಯಕ್ಕೆ ಈಗ ಸಮಾಧಾನದ ಸುದ್ದಿ ಸಿಕ್ಕಿದೆ. ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಸುಮಾರು 2 ಟಿಎಂಸಿ ನೀರು ಹರಿದು ಬರುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.ಇತ್ತೀಚೆಗೆ ಪ್ಪರಗಿ ಬ್ಯಾರೇಜ್ನ ಗೇಟ್ ಮುರಿದು ನೀರು ಕೆಳಭಾಗಕ್ಕೆ ಹರಿದು ಹೋಗಿದ್ದರಿಂದ, ಅಥಣಿ ಭಾಗದಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ಅಭಾವ ಎದುರಾಗುವ ಭೀತಿ ಎದುರಾಗಿತ್ತು. ಪರಿಸ್ಥಿತಿಯ ಗಂಭೀರತೆಯನ್ನು ಮನಗಂಡ ಅಥಣಿ ಶಾಸಕ ಹಾಗೂ ಮಾಜಿ ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ಅವರು, ರೈತರ ಮೇಲಿನ ಅಪಾರ ಕಾಳಜಿಯಿಂದ ತಕ್ಷಣ ಕಾರ್ಯಪ್ರವೃತ್ತರಾದರು.ಮಹಾರಾಷ್ಟ್ರ ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಸಚಿವರೊಂದಿಗೆ ನಿರಂತರ ಸಂಪರ್ಕ ಸಾಧಿಸಿ, ಕೃಷ್ಣಾ ನದಿಗೆ ನೀರು ಬಿಡುವಂತೆ ಮನವರಿಕೆ…
ಎಲ್ಪಿಜಿ ಒತ್ತಡ ನಿವಾರಣೆಗೆ ಕೇಂದ್ರದ ತುರ್ತು ಕ್ರಮ | ಸೀಮೆಎಣ್ಣೆ ನಿಯಮ ಸಡಿಲಿಸಿದ ಕೇಂದ್ರ ಸರ್ಕಾರ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಎಲ್ಪಿಜಿ (LPG) ಸರಬರಾಜಿನಲ್ಲಿ ಉಂಟಾಗಿರುವ ಒತ್ತಡವನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ತುರ್ತು ಕ್ರಮವನ್ನು ಕೈಗೊಂಡಿದೆ.ಸೀಮೆಎಣ್ಣೆಯ ನಿಯಮಗಳನ್ನು ಸಡಿಲಗೊಳಿಸಿರುವ ಕೇಂದ್ರ ಸರ್ಕಾರ, ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ಮತ್ತು ಪೆಟ್ರೋಲ್ ಪಂಪ್ಗಳ ಮೂಲಕ ಗೃಹಬಳಕೆಗೆ ಮಾರಾಟ ಮಾಡಲು ಅವಕಾಶ ನೀಡಿದೆ.ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಮಾರ್ಚ್ 29 ರಂದು ಅಡುಗೆ ಅನಿಲ LPG ಮೇಲಿನ ಒತ್ತಡವನ್ನು ಕಡಿಮೆ ಮಾಡಲು 60 ದಿನಗಳವರೆಗೆ ಮಾರಾಟಕ್ಕೆ ಅವಕಾಶ ನೀಡುವ ಅಧಿಸೂಚನೆಯನ್ನು ಪ್ರಕಟಿಸಿದೆ.ಈ ಕ್ರಮವು ಹೆಚ್ಚಿನ ಎಲ್ಪಿಜಿ ಬೇಡಿಕೆ ಹಾಗೂ ಸರಬರಾಜಿನ ಸಮಸ್ಯೆಯ ನಡುವೆ ಮನೆಮಾಳಿಗಳಿಗೆ ಬದಲಿ ಅಡುಗೆ ಇಂಧನವನ್ನು ಒದಗಿಸಲು ನೆರವಾಗಲಿದೆ.ಕೇಂದ್ರ ಅಧಿಕಾರಿಗಳ ಪ್ರಕಾರ, ಈ ಹಿಂದೆ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ಉನ್ನತ ಸೀಮೆಎಣ್ಣೆ ತೈಲ ಮುಕ್ತ (PDS SKO) ಎಂದು ಘೋಷಿಸಲ್ಪಟ್ಟ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ PDS…
ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಬಿ.ಎನ್.ಎನ್.ಡಿ.ಪಿ. ರಾಜ್ಯ ಮಹಿಳಾ ಸಂಘಟನೆ ಮತ್ತು ಉದ್ದೇಶಿತ ಹಾಗೂ ಕನಾಟಕ ರಾಜ್ಯ ಶಿವಶರಣೆ ಅಕ್ಕಮ್ಮ ಮಹಿಳಾ ಕೋ-ಅಪರೇಟಿವ್ ಸೊಸೈಟಿ (ನಿ) ಕೊಡ ಮಾಡುವ ಶಿವಶರಣೆ ಅಕ್ಕಮ್ಮ ರಾಜ್ಯ ಪ್ರಶಸ್ತಿಗೆ ಹೆಚ್ ಡಿ ಕೋಟೆ ತಾಲೂಕು ಮಹಿಳಾ ಘಟಕದ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ಮಂಜುನಾಥ್ ಭಾಜನರಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೌಮ್ಯ ಮಂಜುನಾಥ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.ಈಡಿಗ, ಬಿಲ್ಲವ, ನಾಮಧಾರಿ, ದೀವರು, ದೇಸಿ ಭಂಡಾರಿ, ತೀಯಾ, ನಾಡರ್ ಸಮಾಜದ 26 ಒಳಪಂಗಡಗಳ ಸಾಧಕರಿಗೆ ಹಾಗೂ ಮಹಿಳಾ ಸಂಘಗಳ ಜಿಲ್ಲಾ ಹಾಗೂ ತಾಲೂಕು ಅಧ್ಯಕ್ಷರಿಗೆ ಅವರ ಸಮಾಜ ಸೇವೆ, ಸಾಧನೆ ಮತ್ತು ನಾಯಕತ್ವವನ್ನು ಗುರುತಿಸಿ ಶಿವಶರಣೆ ಅಕ್ಕಮ್ಮ ರಾಜ್ಯ ಪ್ರಶಸ್ತಿ ನೀಡಿ ಗೌರಿಸಲಾಗುತ್ತದೆ.
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕೋರವಾರ ಗ್ರಾಮದ ಕೋರವಾರೇಶನ ರಥೋತ್ಸವ ಹಾಗೂ ಪಲ್ಲಕ್ಕಿ ಮಹೋತ್ಸವ ಸಾವಿರಾರು ಭಕ್ತವೃಂದದೊಂದಿಗೆ ವಿಜೃಂಭಣೆಯಿಂದ ಜರುಗಿತು.ಗ್ರಾಮದ ಆರಾಧ್ಯದೈವವಾದ ಕೋರವಾರೇಶನ ರಥೋತ್ಸವದ ಅಂಗವಾಗಿ ಶನಿವಾರ ಸಾಂಪ್ರದಾಯಿಕವಾಗಿ ನಡೆದು ಬಂದ ಪೂಜಾ ವಿಧಿವಿಧಾನಗಳು ಬೆಳಿಗ್ಗೆ ಹೋಮ ಹವನದೊಂದಿಗೆ ಆರಂಭಗೊಂಡವು. ನಂತರ ಕೋರವಾರೇಶನ ಮೂರ್ತಿ ಹೊತ್ತ ಪಲ್ಲಕ್ಕಿ ಮೂಲಸ್ಥಳ ದೇವಸ್ಥಾನದಿಂದ ಹೊರಟು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಂತರ ದೇವಸ್ಥಾನ ತಲುಪಿತು. ನಂತರ ಮೆರವಣಿಗೆ ಮೂಲಕ ತಂದ ಕಳಶವನ್ನು ರಥದ ಮೇಲೆ ಪ್ರತಿಷ್ಠಾಪಿಸಲಾಯಿತು.ಸಾಯಂಕಾಲ ಹೂವಿನಹಾರ ಹಾಗೂ ತಳಿರು ತೋರಣಗಳಿಂದ ಶೃಂಗಾರಗೊಂಡ ರಥ(ತೇರ)ಕ್ಕೆ ನೆರೆದ ಸಾವಿರಾರು ಜನ ಭಕ್ತರು ಜಯಕಾರ ಉದ್ಘೋಶಗಳಿಂದ ಚಾಲನೆ ನೀಡಿದರು. ರಥೋತ್ಸವಕ್ಕೆ ಮಹಾರಾಷ್ಟ್ರ, ಆಂಧ್ರ ಸೇರಿದಂತೆ ವಿವಿಧ ಪ್ರದೇಶಗಳಿಂದ ಬಂದ ಅಸಂಖ್ಯಾತ ಭಕ್ತಸಮೂಹ ಯಾವುದೇ ಅಡ್ಡಿ ಆತಂಕಗಳಿಲ್ಲದ ಉತ್ಸಾಹದಿಂದ ರಥವನ್ನು ಸರಾಗವಾಗಿ ಎಳೆದು ತಮ್ಮ ಭಕ್ತಿ, ಭಾವ ತೋರಿದರು.ಈ ಸಮಯದಲ್ಲಿ ಮಹಿಳೆಯರು, ಮಕ್ಕಳು, ಯುವಕರು ತಾವು ತಂದ ಉತ್ತತ್ತಿ, ಬಾಳೆಹಣ್ಣುಗಳನ್ನು ರಥೋತ್ಸವ ಸಾಗುವಾಗ ಅದರ ಮೇಲೆ ಎರೆಚಿ ಸಂತಸಪಟ್ಟರು. ರಥೋತ್ಸವದ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಡಗಾನೂರ ಗ್ರಾಮದ ಐತಿಹಾಸಿಕ ಸೋಮೇಶ್ವರ ಜಾತ್ರಾ ಮಹೋತ್ಸವ ರಥೋತ್ಸವ ಹಾಗೂ ನಂದಿಕೋಲ ಮೆರವಣಿಗೆಯೊಂದಿಗೆ ಭಾನುವಾರ ಸಂಪನ್ನಗೊಂಡಿತು.ಗ್ರಾಮದ ಸಾಂಪ್ರದಾಯಿಕ ಸೋಮೇಶ್ವರ ಜಾತ್ರಾ ಮಹೋತ್ಸವ ದಿ:೧೯ ರಿಂದ ಕಲಬುರಗಿ ಶ್ರೀಶರಣಬಸವೇಶ್ವರ ಪುರಾಣದಿಂದ ಆರಂಭಗೊಂಡು ನಂತರ ರೊಟ್ಟಿ ಬುತ್ತಿ ಜಾತ್ರೆ, ಮುತೈದೆಯರಿಗೆ ಉಡಿ ತುಂಬುವದು, ಉಚಿತ ನೇತ್ರ ಹಾಗೂ ಹೃದಯ ರೋಗ ತಪಾಸಣಾ ಶಿಬಿರ, ಮುಕ್ತ ಕಬಡ್ಡಿ ಪಂದ್ಯಾವಳಿಗಳಂತ ಹಲವು ಕಾರ್ಯಕ್ರಮಗಳ ಮೂಲಕ ಸಾಂಗವಾಗಿ ಸಾಗಿಬಂದು ದಿ:೨೯ ರಂದು ಬೆಳಿಗ್ಗೆ ಪುರಾಣ ಮಹಾಮಂಗಲ ನಂತರ ಶ್ರೀಸೋಮೇಶ್ವರ, ಮಲ್ಲಯ್ಯ, ಲಗಮಾದೇವಿ, ಕೆಂಚರಾಯ ಹಾಗೂ ಷ.ಬ್ರ. ವೀರಭದ್ರಶ್ರೀಗಳ ಪಲ್ಲಕ್ಕಿ ಉತ್ಸವ ಪುರವಂತರ ಸೇವೆ ಸಹಿತ ಧಾರ್ಮಿಕ ಕಾರ್ಯಗಳು ವಾದ್ಯ,ವೈಭವಗಳೊಂದಿಗೆ ಜರುಗಿದವು. ನಂತರ ಅಗ್ನಿಪ್ರವೇಶ ಮತ್ತು ಮಹಾಪ್ರಸಾದ ಜರುಗಲ್ಪಟ್ಟವು. ಸಾಯಂಕಾಲ ನಂದಿಕೋಲ ಮೆರವಣಿಗೆಯೊಂದಿಗೆ ರಥೋತ್ಸವ ಆರಂಭಗೊಂಡಿತು.ಸಾಯಂಕಾಲ ಹೂವಿನಹಾರ ಹಾಗೂ ತಳಿರು ತೋರಣಗಳಿಂದ ಶೃಂಗಾರಗೊಂಡ ರಥ(ತೇರ)ಕ್ಕೆ ನೆರೆದ ಸಾವಿರಾರು ಜನ ಭಕ್ತರು ಜಯಕಾರ ಉದ್ಘೋಶಗಳಿಂದ ಚಾಲನೆ ನೀಡಿದರು. ರಥೋತ್ಸವಕ್ಕೆ ವಿವಿಧ ಪ್ರದೇಶಗಳಿಂದ ಬಂದ ಭಕ್ತಸಮೂಹ ಯಾವುದೇ ಅಡ್ಡಿ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಭಾರಿ ಬಿರುಗಾಳಿಗೆ ಸೋಲಾರ ಫಲಕ ಬಿದ್ದು ಹಾನಿಯಾಗಿರುವ ದುರ್ಘಟನೆ ತಾಲ್ಲೂಕಿನ ನಿಂಬಾಳ ಬಿ ಕೆ ಗ್ರಾಮದಲ್ಲಿ ನಡೆದಿದೆ.ಶನಿವಾರ ಬೀಸಿದ ಭಾರಿ ಬಿರು ಗಾಳಿಗೆ ತಾಲೂಕಿನ ನಿಂಬಾಳ ಬಿಕೆ ಗ್ರಾಮದ ರೈತ ಮಹಿಳೆ ಸುನೀತಾ ಜಗದೇವ ರಾಠೋಡ ಅವರು ಅಳವಡಿಸಿರುವ ಸೋಲಾರ ಫಲಕ ಬಿದ್ದು ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿದೆ.ತನ್ನ ಎರಡು 5 ಎಕರೆ ಜಮೀನಿನಲ್ಲಿ ಕೃಷಿ ಕೆಲಸಕ್ಕೆ ಸೋಲಾರ ಫಲಕ ಅಳವಿಡಿಸಿದ್ದು , ಅದು ಬಿರುಗಾಳಿಗೆ ಬಿದ್ದು ಹಾನಿಯಾಗಿದೆ. ಇದು ಮತ್ತೆ ನಿರ್ಮಿಸಿ ಕೊಳ್ಳಲು ನನಗೆ ಕಷ್ಟ ಸಾಧ್ಯ. ಅದಕ್ಕಾಗಿ ಸರಕಾರ ಪರಿಸಡಿಕೊಳ್ಳಲು ಪರಿಹಾರ ನೀಡಬೇಕು ಎಂದು ರೈತ ಮಹಿಳೆ ಮನವಿ ಮಾಡಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯ ಸಹಯೋಗದೊಂದಿಗೆ ಕಲಾವಿದರು ಮತ್ತು ಸಾಹಿತಿಗಳು, ಸಂಗೀತಗಾರರು, ಶಿಕ್ಷಕರು ಹಾಗೂ ಸಾಂಸ್ಕೃತಿಕ ಚಿಂತಕರೊಂದಿಗೆ ಚರ್ಚೆ ಮತ್ತು ಚಹಾಕೂಟದ ಕಾರ್ಯಕ್ರಮವನ್ನು ಜ್ಞಾನಯೋಗಾಶ್ರಮ ಹತ್ತಿರವಿರುವ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಉದ್ಯಾನವನದಲ್ಲಿ ರವಿವಾರ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದಲ್ಲಿ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಡಾ. ಎಂ.ಎಸ್ ಮದಬಾವಿ, ಮಾತನಾಡುತ್ತಾ ಕಲೆ ಸಾಹಿತ್ಯ ಸಂಸ್ಕೃತಿ ಸಮಾಜದ ಅವಿಭಾಜ್ಯ ಅಂಗ ಈ ಕ್ಷೇತ್ರದ ಎಲ್ಲರೂ ಒಟ್ಟಾಗಿ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು, ಸಂಘಟನೆ ಮಾಡುವುದು ಅತ್ಯವಶ್ಯಕ ಎಲ್ಲರೂ ಸೇರಿ ಚಿಂತನ ಮಂಥನ ಮಾಡುವುದು ಈಗಿನ ದಿನಮಾನಗಳಲ್ಲಿ ಅವಶ್ಯಕವಾಗಿದೆ ಇಂತಹ ಕಾರ್ಯಕ್ರಮಗಳು ನಿರಂತರವಾಗಿ ಮುಂದುವರೆಯಲಿ ಸರ್ಕಾರ ಮತ್ತು ವಿವಿಧ ಅಕಾಡೆಮಿಗಳ, ಪ್ರಾಧಿಕಾರಗಳ ಸಹಯೋಗದೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿಸಬಹುದು ಎಂದು ಸಲಹೆ ನೀಡಿದರು. ಕಲಾಪೋಷಕರು ಹಾಗೂ ವೈದ್ಯರಾದ ಡಾ. ಸತೀಶ್ ಜಿಗಜಿನ್ನಿ ಮಾತನಾಡುತ್ತಾ, ಈಗಿನ ಯುವಕರು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಖ್ಯಾತರಾಗಲು ಹಲವಾರು ಯೋಜನೆಗಳಿವೆ ಸರ್ಕಾರ ಮತ್ತು ಇನ್ನಿತರ ಸಹಯೋಗದೊಂದಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು…
