Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಕುಡಿವ ನೀರಿನ ಘಟಕ ಕಾರ್ಯಾರಂಭಗೊಳಿಸಿದ ಅಧಿಕಾರಿಗಳು ಮುದ್ದೇಬಿಹಾಳ: ಪಟ್ಟಣದ ವಿದ್ಯಾನಗರದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಕಳೆದ ಕೆಲವು ತಿಂಗಳುಗಳಿಂದ ನೀರು ಬಾರದೇ ಇಲ್ಲಿನ ನಿವಾಸಿಗಳು ಸಮಸ್ಯೆ ಎದುರಿಸುತ್ತಿದ್ದರು. ಈ ಬಗ್ಗೆ ’ಉದಯರಶ್ಮಿ’ ಪತ್ರಿಕೆಯ ಬುಧವಾರದ ಸಂಚಿಕೆಯಲ್ಲಿ “ಇದ್ದೂ ಇಲ್ಲದಂತಿರುವ ಶುದ್ಧ ನೀರಿನ ಘಟಕ” ಎಂಬ ತಲೆಬರಹದಡಿ ಜೂ.೨೦ ರಂದು ವರದಿ ಬಿತ್ತರಿಸಿ ಅಧಿಕಾರಿಗಳ ಗಮನ ಸೆಳೆದಿತ್ತು. ವರದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಪುರಸಭೆ ಅಧಿಕಾರಿಗಳು ಶುದ್ಧ ಕುಡಿಯುವ ನೀರಿನ ಘಟಕವನ್ನು ದುರಸ್ತಿಗೊಳಿಸಿ ಸಮಸ್ಯೆಗೆ ಪರಿಹಾರ ಕಲ್ಪಿಸಿ ಕೊಟ್ಟಿದ್ದಾರೆ.ಈ ಕುರಿತು ಪತ್ರಿಕೆಯೊಂದಿಗೆ ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಮಾತನಾಡಿ, ಘಟಕವನ್ನು ನಿರ್ವಹಣೆ ಮಾಡುವವರಿಗೆ ತಿಳಿಹೇಳಿ ಕಾಯಿನ್ ಸಮಸ್ಯೆಯಾಗದಂತೆ ನೋಡಿಕೊಳ್ಳುತ್ತೇನೆ ಎಂದರು.
ವಿಜಯಪುರ: ಜಿಲ್ಲೆಯ ಗ್ರಾಮೀಣ ಭಾಗಕ್ಕೆ ನೀರು ಹಾಗೂ ಉದ್ಯೋಗಕ್ಕೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಅಕುಶಲ ಕಾರ್ಮಿಕರಿಗೆ ನಿರಂತರ ಉದ್ಯೋಗ ನೀಡುವ ಉದ್ದೇಶದಿಂದ ಕೂಲಿ ಆಧಾರಿತ ಹಾಗೂ ಜಲಮೂಲ ಆಧಾರಿತ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವ ಮೂಲಕ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ತಿಳಿಸಿದ್ದಾರೆ.ಜಿಲ್ಲೆಯಲ್ಲಿ ಬೇಸಿಗೆಯಲ್ಲಿನ ಬಿಸಿಲಿನ ತಾಪಮಾನಕ್ಕೆ ಜಿಲ್ಲೆಯಲ್ಲಿ ಕೆರೆಗಳು ಸಂಪೂರ್ಣ ಬತ್ತಿಹೋಗಿ, ಬೆಟ್ಟ-ಗುಡ್ಡಗಳಲ್ಲಿ ವಾಸ ಮಾಡುವ ವನ್ಯಜೀವಿಗಳು ಹಾಗೂ ಮೇಯಲು ಹೋಗುವ ಜಾನುವಾರುಗಳು, ಮೇಕೆ-ಕುರಿಗಳಿಗೆ ಕುಡಿಯಲು ನೀರು, ಗ್ರಾಮೀಣ ಜನರು ಉದ್ಯೋಗ ಅರಸಿ ದೂರದ ಊರುಗಳಿಗೆ ವಲಸೆ ಹೋಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಆದೇಶದ ಮೇರೆಗೆ ಏಪ್ರಿಲ್, ಮೇ ಮತ್ತು ಜೂನ್ ಮಾಹೆಗಳಲ್ಲಿ ಗ್ರಾಮೀಣ ಭಾಗದ ಅಕುಶಲ ಕಾರ್ಮಿಕರಿಗೆ ನಿರಂತರ ಉದ್ಯೋಗ ನೀಡುವ ಉದ್ದೇಶದಿಂದ ಕೂಲಿ ಆಧಾರಿತ ಕಾಮಗಾರಿಗಳ ಅನುಷ್ಟಾನಕ್ಕೆ ಆದ್ಯತೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಗ್ರಾಮ ಪಂಚಾಯತಿ ಮತ್ತು ಅನುಷ್ಠಾನ…
ವಿಜಯಪುರ: ಜಿಲ್ಲಾಡಳಿತದ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಇದೇ ಜೂ.27 ರಂದು ಹಾಗೂ ಜುಲೈ 2ರಂದು ಡಾ.ಫ.ಗು.ಹಳಕಟ್ಟಿಯವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಅತ್ಯಂತ ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಣೆ ಮಾಡಲು ನಿರ್ಧರಿಸಲಾಯಿತು.ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಪೂರ್ವಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಜಯಂತಿ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಅಂಗವಾಗಿ ನಾಡಪ್ರಭು ಕೆಂಪೇಗೌಡ ಅವರ ಕುರಿತು ಫ್ರೌಡಶಾಲೆಯ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಏರ್ಪಡಿಸಿ,ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲು ತೀಮಾರ್ನಿಸಲಾಯಿತು.ಜುಲೈ 2 ರಂದು ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ಅವರ ಜಯಂತಿಯನ್ನು ಸಹ ಅತ್ಯಂತ ಸರಳವಾಗಿ, ವ್ಯವಸ್ಥಿತವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನೇರವೆರಿಸಲಾಗುವುದು. ಡಾ.ಫ.ಗು.ಹಳಕಟ್ಟಿ ಅವರ ಬಗ್ಗೆ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ…
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಅಧಿಕಾರಿಗಳಿಗೆ ಸೂಚನೆ ವಿಜಯಪುರ: ಮಕ್ಕಳ ಸರ್ವಾಂಗೀಣ ವ್ಯಕ್ತಿತ್ವದ ಬೆಳವಣಿಗೆಗೆ ಎಲ್ಲ ಇಲಾಖೆ ಅಧಿಕಾರಿಗಳು ಯೋಜನಾಬದ್ಧ ಗುರಿಯನ್ನು ನಿಗದಿಪಡಿಸಿಕೊಂಡು ಮಕ್ಕಳ ಸಂರಕ್ಷಣೆಗೆ ಆದ್ಯತೆ ನೀಡುವ ಮೂಲಕ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಸೂಚಿಸಿದರು.ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಕ್ಕಳ ಪಾಲನಾ ಸಂಸ್ಥೆ, ಸ್ವಯಂ ಸೇವಾ ಸಂಸ್ಥೆ ಮುಖ್ಯಸ್ಥರೊಂದಿಗೆ ನಡೆದ ಮಕ್ಕಳ ರಕ್ಷಣಾ ವ್ಯವಸ್ಥೆ ಕುರಿತ ಭಾಗಿದಾರರೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಪ್ರಸವಪೂರ್ವ ಲಿಂಗ ಪತ್ತೆ ಮತ್ತು ನವಜಾತ ಶಿಶುಗಳ ಹತ್ಯೆಯಂತಹ ಕೃತಗಳು ನಡೆಯದಂತೆ ನೋಡಿಕೊಳ್ಳಲು ಎಲ್ಲ ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಬೇಕು. ಎಲ್ಲ ಸ್ಕ್ಯಾನಿಂಗ್ ಸೆಂಟರ್ಗಳಿಗಳಿಗೆ ಸಂಬಂಧಿಸಿದ ಅಧಿಕಾರಿಗಳು ಭೇಟಿ…
ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯಕ್ಕೆ ವಿಶ್ವವಿದ್ಯಾಲಯ ಅನುದಾನ ಆಯೋಗ(ಯುಜಿಸಿ) 12 ಬಿ ಮಾನ್ಯತೆ ನೀಡಿದೆ.ವಿಶ್ವವಿದ್ಯಾಲಯದಲ್ಲಿರುವ ಲಭ್ಯವಿರುವ ಉನ್ನತ ಶಿಕ್ಷಣ, ನಡೆಯುತ್ತಿರುವ ಸಂಶೋಧನೆಗಳು, ಸಾಧಿಸಿರುವ ಪ್ರಗತಿಯನ್ನು ಪರಿಗಣಿಸಿ ಈ ಮಾನ್ಯತೆ ದೊರೆತಿದೆ. ಯುಜಿಸಿ 12ಬಿ ಮಾನ್ಯತೆ ನೀಡಿರುವುದರಿಂದ ಮುಂಬರುವ ದಿನಗಳಲ್ಲಿ ವಿವಿಯ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಯುಜಿಸಿ, ಕೇಂದ್ರ ಸರಕಾರ ಅಥವಾ ಸಂಸ್ಥೆಗಳಿಂದ ನಾನಾ ಸಂಶೋಧನೆ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಅನುದಾನ ಪಡೆಯಲು ಅರ್ಹತೆಯನ್ನು ಪಡೆದಂತಾಗಿದೆ.ವಿವಿಗೆ 12ಬಿ ಮಾನ್ಯತೆ ದೊರೆತಿರುವುದಕ್ಕೆ ಕುಲಾಧಿಪತಿ ಎಂ. ಬಿ. ಪಾಟೀಲ, ಸಂತಸ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಇನ್ನು ಮುಂದೆಯೂ ಕೂಡ ವಿವಿ ವೈದ್ಯಕೀಯ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆಗಳನ್ನು ಮಾಡಲು ಬದ್ಧವಾಗಿದೆ ಎಂದು ತಿಳಿಸಿದ್ದಾರೆ.ವಿವಿಗೆ ಈ ಗೌರವ ದೊರೆತಿರುವುದಕ್ಕೆ ಸಮಕುಲಾಧಿಪತಿ ಪ್ರೊ. ವೈ, ಎಂ. ಎಂ. ಜಯರಾಜ, ಕುಲಪತಿ ಡಾ. ಆರ್. ಎಸ್. ಮುಧೋಳ, ಸಮಕುಲಪತಿ ಡಾ. ಅರುಣ ಚಂ. ಇನಾಮದಾರ ಅವರು ವಿವಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ ಎಂದು…
ಕೆಂಭಾವಿ: ಪಟ್ಟಣದಲ್ಲಿಅಪರಿಚಿತ ವ್ಯಕ್ತಿಯೊಬ್ಬ ಅನಾರೋಗ್ಯದಿಂದ ಬಳಲುತ್ತಿದ್ದಾಗ ಮೃತಪಟ್ಟ ಘಟನೆ ಗುರುವಾರ ನಡೆದಿದೆ.ಅಪರಿಚಿತ ವ್ಯಕ್ತಿಯು ಅನಾರೋಗ್ಯದಿಂದ ನರಳುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ವೈದ್ಯಕೀಯ ಚಿಕಿತ್ಸೆಗಾಗಿ ಪಟ್ಟಣದ ಸಮುದಾಯದ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವನನ್ನು ಸುರಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.ಸದರಿ ವ್ಯಕ್ತಿಯ ಗುರುತು ಪತ್ತೆಯಾದಲ್ಲಿ ಕೆಂಭಾವಿ ಪೋಲೀಸ್ ಠಾಣೆಗೆ ಸಂಪರ್ಕಿಸಲು ಪಿಎಸ್ಐ ರಾಜಶೇಖರ ರಾಠೋಡ ಕೆಳಗಿನ ನಂಬರಿಗೆ ಕರೆ ಮಾಡಲು ತಿಳಿಸಿದ್ದಾರೆ.ಮೊ.ನಂಬರ್: 9480803585
Udayarashmi kannada daily newspaper Udayarashmi kannada daily newspaper
ಮುದ್ದೇಬಿಹಾಳ: ಮುದ್ದೇಬಿಹಾಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಕಾಮರಾಜ ಬಿರಾದಾರ ಇವರನ್ನು ತಾಲ್ಲೂಕಿನ ಸಾಹಿಗಳು ಹಾಗೂ ಕನ್ನಡಾಭಿಮಾನಿಗಳು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು.ಪಟ್ಟಣದ ಪ್ರವಾಸಿ ಮಂದರಿರದ ಸರ್ಕಿಟ್ ಹೌಸ್ ನಲ್ಲಿ ಕಸಾಪ ಆಯ್ಕೆ ಪ್ರಕ್ರೀಯೆಯ ನಂತರ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು ಕನ್ನಡ ನಾಡು-ನುಡಿ, ನೆಲ- ಜಲ, ಸಂಸ್ಕೃತಿಯನ್ನು ಉಳಿಸುವ ಬೆಳೆಸುವ ಕರ್ತವ್ಯ ನಿಮ್ಮೆಲ್ಲರದ್ದಾಗಿದೆ ಎಂದರು.ಕಸಾಪ ಮಾಜಿ ಅಧ್ಯಕ್ಷ ಎಮ್.ಬಿ.ನಾವದಗಿ ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತು ಸರ್ಕಾರದ ಅಂಗ ಸಂಸ್ಥೆಯಾಗಿದ್ದರಿAದ ನಮಗೆ ನೀಡಿದ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಿ ಇದರ ಗೌರವ ಘನತೆ ಹೆಚ್ಚಿಸಬೇಕು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ತಾಲೂಕಿನಲ್ಲಿ ಸಾಹಿತ್ಯದ ಪರಿಸರ ಮೂಡಿಸೋಣ ಎಂದರು.ಹಿರಿಯ ಮುಖಂಡ ಮುಖಂಡ ವಾಯ್.ಎಚ್.ವಿಜಯಕರ ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳು ಕ್ರೀಯಾಶೀಲವಾಗಿ ಸಾಗಬೇಕು. ಕನ್ನಡ ಸಾಹಿತ್ಯ ಪರಿಷತ್ತು ಅಲಂಕಾರಿತ ಹುದ್ದೆಯಲ್ಲ, ಕ್ರಿಯಾತ್ಮಕ ಚಟುವಟಿಕೆಗಳಿಂದ ಪ್ರತಿಭಾವಂತ ಸಾಹಿತಿಗಳಿಗೆ ವೇದಿಕೆಯನ್ನು ಕಲ್ಪಿಸಬೇಕು ಎಂದರು.ಕಸಾಪ ತಾಳಿಕೋಟಿ…
ಮುದ್ದೇಬಿಹಾಳ: ಚಾಲಕನ ನಿಯಂತ್ರಣ ತಪ್ಪಿದ ಕ್ರೂಸರ್ ವಾಹನವೊಂದು ಪಲ್ಟಿಯಾದ ಪರಿಣಾಮ ೧೨ ಪ್ರಯಾಣಿಕರಿಗೆ ಚಿಕ್ಕಪುಟ್ಟ ಮೂವರಿಗೆ ಹೆಚ್ಚಿನ ಗಾಯಗಳಾದ ಘಟನೆ ತಾಲೂಕಿನ ಕೊಳೂರ ಬಳಿ ನಡೆದಿದೆ.ಯರಗಲ್ಲ ಗ್ರಾಮದ ಬಾಲಾಜಿ ಶುಗರ್ಶ ನಲ್ಲಿ ಕೆಲಸ ಮಾಡುವ ಸಿಬ್ಬಂದಿಗಳನ್ನು ಹೊತ್ತೊಯ್ಯುತ್ತಿದ್ದ ವಾಹನ ಇದಾಗಿದ್ದು ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕೂಡಲೇ ಮುದ್ದೇಬಿಹಾಳದ ತಾಲೂಕಾಸ್ಪತ್ರೆಗೆ ರವಾನಿಸಿ ಕಾರ್ಖಾನೆಯ ವ್ಯವಸ್ಥಾಪಕರು ಸೂಕ್ತ ಚಿಕಿತ್ಸೆ ಕೊಡಿಸಿದ್ದಾರೆ. ಹೆಚ್ಚಿನ ಚಿಕಿತ್ಸೆ ಅವಶ್ಯವಿರುವವರನ್ನ ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ತಿಳಿದುಬಂದಿದೆ.
ಚಡಚಣ: ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ,ನಂ-೨ ಮರಡಿ ಶಾಲೆಯಲ್ಲಿ ಇತ್ತೀಚೆಗೆ ಸೇವಾ ನಿವೃತ್ತಿ ಹೊಂದಿದ ರೇಣುಕಾ ಗೌರ ಗುರುಮಾತೆಯರಿಗೆ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಗಿತ್ತು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಎಸ್ ಡಿ ಎಂ ಸಿಯ ಉಪಾಧ್ಯಕ್ಷರಾದ ಮಾಹಾದೇವಿ ಕೇಶೆಟ್ಟಿ ವಹಿಸಿದ್ದರು.ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಬಿ ಆರ್ ಪಿ ಸತೀಶ ಬಗಲಿ, ಗೌರ ಗುರುಮಾತೆಯರು ನನ್ನ ವಿದ್ಯಾಗುರುಗಳಾಗಿದ್ದಾರೆ. ಅವರು ಕಲಿಸಿದ ಅನೇಕ ಚಟುವಟಿಕೆಗಳು ನಾನು ಇಂತಹ ಉನ್ನತ ಹುದ್ದೆ ಸ್ವೀಕರಿಸಲು ಸಹಾಯಕವಾಯಿತು ಎಂದರು.ಸಿ ಆರ್ ಪಿ ಭೀಮಾಶಂಕರ ವಾಘಮೋರೆ ಮಾತನಾಡಿ, ಗುರುಮಾತೆಯರು ನನ್ನ ವಿದ್ಯಾಗುರುಗಳು ಮತ್ತು ಅವರೊಟ್ಟಿಗೆ ಐದಾರು ವರ್ಷ ಸೇವೆ ಸಲ್ಲಿಸುವ ಭಾಗ್ಯ ನನಗೆ ದೊರೆಯಿತು. ನನಗೆ ಅವರು ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ, ನಲಿಕಲಿ ಚಟುವಟಿಕೆಗಳ ಕುರಿತು ಸಲಹೆ ಸೂಚನೆಗಳನ್ನು ನೀಡಿದ್ದಾರೆ ಎಂದರುಶಿಕ್ಷಕ ಜಗದೀಶ ಚಲವಾದಿ ಮಾತನಾಡಿ, ಗೌರ ಗುರುಮಾತೆಯರು ಮಾತೃ ಸ್ವರೂಪಿಗಳಾಗಿದ್ದಾರೆ. ಅವರ 39 ವರ್ಷಗಳ ಸೇವೆ ಸಾರ್ಥಕತೆಯನ್ನು ಪಡೆದುಕೊಂಡಿದೆ. ಅವರು ಸದಾ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಸದಾ ಸಿದ್ಧರಿದ್ದರು…
