Subscribe to Updates
Get the latest creative news from FooBar about art, design and business.
What's Hot
Author: editor.udayarashmi@gmail.com
ಆಲಮಟ್ಟಿ: ಕೊಲ್ಹಾರ ತಾಲ್ಲೂಕಿನ ಮಸೂತಿ ಗ್ರಾಮದ ವ್ಯಕ್ತಿಯೊಬ್ಬನನ್ನು ಆಕ್ರಮ ಸಂಬಂಧ ಹಿನ್ನಲೆಯಲ್ಲಿ ಕೊಲೆಗೈದು ಇಲ್ಲಿಯ ಪಾರ್ವತಿಕಟ್ಟಾ ಸೇತುವೆ (ಬೇನಾಳ ಬ್ರಿಜ್) ಮೇಲಿಂದ ಕೃಷ್ಣಾ ನದಿಗೆ ಎಸೆದ ಘಟನೆ ಈಚೆಗೆ ನಡೆದಿದೆ.ಮೃತ ವ್ಯಕ್ತಿ ವಿಜಯಪುರ ತಾಲ್ಲೂಕಿನ ಜುಮನಾಳ ಗ್ರಾಮದ ಹಾಲಿ ವಸ್ತಿ ಮಸೂತಿ ಗ್ರಾಮದ ರಮೇಶ ತಾಯಿ ಮಾಯವ್ವ ಮಾದರ (23).ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಆಕ್ರೋಶಗೊಂಡು ಮಸೂತಿ ಗ್ರಾಮದ ಆರೋಪಿಗಳಾದ ಮಂಜುನಾಥ ಬಾಬು ಮಾದರ, ಭೀಮಪ್ಪ ತಾಯಿ ದಾಳವ್ವ ಮಾದರ, ಸಾರೆಪ್ಪ ಹಣಮಂತ ಮಾದರ, ಮುತ್ತು ನಡುವಿನಮನಿ ಸೇರಿ ಕಾರಿನಲ್ಲಿ ಮೃತ ವ್ಯಕ್ತಿಯನ್ನು ಕರೆದುಕೊಂಡು ಹೋಗಿ ಬೇನಾಳ ಬ್ರಿಜ್ ಬಳಿ ಹೊಡೆದು, ಈಜು ಬಾರದ ಆತನನ್ನು ಮೂವರು ಸೇರಿ ಸೇತುವೆ ಮೇಲಿಂದ ಕೃಷ್ಣಾ ನದಿಗೆ ಎಸೆದಿದ್ದಾರೆ ಎಂದು ಪಿಎಸ್ಐ ಕೆ.ಎನ್. ಯತೀಶ ತಿಳಿಸಿದ್ದಾರೆ. ನಾಲ್ವರನ್ನು ಬಂಧಿಸಲಾಗಿದೆ. 31/12/2023 ರಂದು ಘಟನೆ ನಡೆದಿದ್ದು, 19/3/2024 ರಂದು ಕಾಣೆಯಾದ ದೂರಿನ ಹಿನ್ನಲೆಯಲ್ಲಿ ತನಿಖೆ ನಡೆಸಿದಾಗ ಕೊಲೆಯ ರಹಸ್ಯ ಬಯಲಾಗಿದೆ.ಶವ ಹುಡುಕಾಟ;ಶವವನ್ನು ಆಲಮಟ್ಟಿ ಬಳಿಯ ಪಾರ್ವತಿಕಟ್ಟಾ ಸೇತುವೆ…
ವಿಜರಪುರ: ಕಾಂಗ್ರೆಸ್ ಸರಕಾರದ ನಿಜ ರೂಪ ಚುನಾವಣೆಯ ನಂತರ ಬಯಲಾಗ್ತಿದೆ. ತಮ್ಮ ಬಿಟ್ಟಿ ಭಾಗ್ಯಗಳನ್ನು ಕೊಡಲು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ಸ್ ಏರಿಸಿ ಮಧ್ಯಮ ವರ್ಗದ ಜನರ ಮೇಲೆ ಚಪ್ಪಡಿ ಕಲ್ಲನ್ನು ಎಳೆದಿದ್ದಾರೆ ಎಂದು ಬಿಜೆಪಿ ಮುಖಂಡ ಡಾ.ಗೌತಮ್ ಚೌಧರಿ ಆರೋಪಿಸಿದ್ದಾರೆ.ಶನಿವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ರಾಜ್ಯದಲ್ಲಿ ಮೊದಲೇ ಎಲ್ಲ ದಿನಬಳಕೆ ವಸ್ತುಗಳ ಬೆಳೆಗಳು ಗಗನಕ್ಕೇರಿದ್ದು ಜನಸಾಮಾನ್ಯರು ಹೇಗಪ್ಪಾ ಬದುಕೋದು ಅನ್ನುವಷ್ಟರಲ್ಲಿ ಮುಖ್ಯಮಂತ್ರಿಗಳು ಮತ್ತೊಂದು ಶಾಕ್ ಕೊಟ್ಟಿದ್ದಾರೆ. ಜನರಿಗೆ ಕಾಂಗ್ರೆಸ್ ಸರಕಾರದ ಮೇಲೆ ಸಂಪೂರ್ಣವಾಗಿ ವಿಶ್ವಾಸ ಹೊರಟು ಹೋಗಿದೆ. ಈ ಕೂಡಲೇ ಏರಿಸಿರುವ ಸೆಸ್ಸನ್ನು ಇಳಿಸಬೇಕು, ಇಲ್ಲವಾದರೆ ರಾಜ್ಯಾದ್ಯಂತ ಪ್ರತಿಭಟನೆಯನ್ನು ಎದುರಿಸಿಲು ಸಿದ್ಧವಾಗಿ ಎಂದು ಬಿಜೆಪಿ ಮುಖಂಡ ಡಾ.ಗೌತಮ್ ಆರ್ ಚೌಧರಿ ಎಚ್ಚರಿಸಿದ್ದಾರೆ.
ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಕಟ್ಟುನಿಟ್ಟಿನ ಸೂಚನೆ ವಿಜಯಪುರ: ಜಿಲ್ಲೆಯ ಅಭಿವೃದ್ದಿಗಾಗಿ ಎಲ್ಲ ಅಧಿಕಾರಿಗಳು ಚುರುಕಿನಿಂದ ಕಾರ್ಯನಿರ್ವಹಿಸುವ ಮೂಲಕ ಉತ್ತಮ ಆಡಳಿತ ನೀಡಬೇಕು. ಅಭಿವೃದ್ದಿ ಕಾರ್ಯವನ್ನು ಗಂಭೀರವಾಗಿ ಪರಿಗಣಿಸಬೇಕು. ಅಭಿವೃದ್ದಿ ವಿಷಯದಲ್ಲಿ ಅಸಡ್ಡೆ, ನಿರ್ಲಕ್ಷ್ಯ ತೋರುವ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಜರುಗಿದ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ತ್ರೆöÊಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪ್ರತಿಯೊಂದು ಕಾರ್ಯಕ್ಕೆ ನೀತಿ ಸಂಹಿತೆ ನೆಪ ಹೇಳಬೇಡಿ ನೀತಿ ಸಂಹಿತೆ ಯಾವುದೇ ಅಭಿವೃದ್ದಿ ಕಾರ್ಯಗಳಿಗೆ ಅಡ್ಡಿ ಬರುವುದಿಲ್ಲ. ನೀತಿ ಸಂಹಿತೆ ನೆಪ ನೀಡಿ ನುಣುಚಿಕೊಳ್ಳಬೇಡಿ ಪ್ರತಿಯೊಬ್ಬರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಸಚಿವರು ಅಧಿಕಾರಿಗಳಿಗೆ ತರಾಟೆಗೆ ತೆಗದುಕೊಂಡರು.ಕೆಡಿಪಿ ಸಭೆಗಳಲ್ಲಿ ಕೈಗೊಂಡ ನಿರ್ಣಯಗಳನ್ನು ಗಂಭೀರವಾಗಿ ಪರಿಗಣಿಸಿ ಅನುಷ್ಠಾನಗೊಳಿಸಲು ಮುಖ್ಯಮಂತ್ರಿಗಳ ನಿರ್ದೇಶನವಿರುವ ಹಿನ್ನಲೆಯಲ್ಲಿ ಉತ್ತಮ ಆಡಳಿತ ಒದಗಿಸಲು…
ವಿಜಯಪುರ: ೧೦ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಭಾವಿಯಾಗಿ ಜಿಲ್ಲಾ ಪಂಚಾಯತ್ ಆಯುಷ್ ಇಲಾಖೆ ವತಿಯಿಂದ ಯೋಗೋತ್ಸವ ಕಾರ್ಯಕ್ರಮ ಹಾಗೂ ಐಆರ್ಬಿ ಪೊಲೀಸ್ ಅಧಿಕಾರಿ-ಸಿಬ್ಬಂದಿಗಳಿಗೆ ದೇಹದ ತೂಕ ನಿರ್ವಹಣೆ ಮತ್ತು ಆಹಾರ ಪದ್ಧತಿ ಕುರಿತು ತರಬೇತಿ ಕಾರ್ಯಾಗಾರವನ್ನು ಐಆರ್ಬಿಯಲ್ಲಿ ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದಲ್ಲಿ ಡೆಪ್ಯೂಟಿ ಕಮಾಂಡೆಂಟ್ ಪ್ರಸನ್ನಕುಮಾರ ಅವರು ಮಾತನಾಡಿ, ಸದೃಢ ದೇಹದಲ್ಲಿ ಸದೃಢ ಮನಸ್ಸು ನೆಲೆಸಿರುತ್ತದೆ. ದೈಹಿಕ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ದಿನನಿತ್ಯ ಯೋಗಾಭ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ಇತ್ತೀಚಿನ ದಿನಗಳಲ್ಲಿ ಜಂಕ್ಫುಡ್ ಮತ್ತು ಕಲುಷಿತ ವಿಷಕಾರಿ ಆಹಾರದಿಂದ ಮಾನವನ ಮೇಲಾಗುವ ಪರಿಣಾಮಗಳು ಹಾಗೂ ಆಹಾರ ಪದ್ಧತಿ, ಶುದ್ಧ ಆಹಾರ ಸೇವನೆ, ದೈನಂದಿನ ಜೀವನ ಕ್ರಮದ ಬಗ್ಗೆ ಆಯುಷ್ ಇಲಾಖೆಯ ಡಾ.ವಿಜಯಮಹಾಂತೇಶ ದೇಸಾಯಿ ಮಾಹಿತಿ ನೀಡಿದರು.ವಿವಿಧ ವಿಷಯಗಳ ಕುರಿತು ಡಾ. ಬಸವರಾಜ ವಗ್ಗರಗಿ, ಶ್ರೀಮತಿ ಸುನೀತಾ ಬಿರಾದಾರ ಮಾಹಿತಿ ನೀಡಿದರು. ಯೋಗಾಸನ ಮತ್ತು ಪ್ರಾಣಾಮಗಳು, ಧ್ಯಾನದ ಬಗ್ಗೆ ಯೋಗಶಿಕ್ಷಕರಾದ ಚಂದ್ರಶೇಖರ ರಾಮನಗೌಡ ಕಲಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಮಾಂಡೆಂಟ್ ಎನ್.ಬಿ.ಮೆಳ್ಳೆಗಟ್ಟಿ ವಹಿಸಿದ್ದರು.ಕಾರ್ಯಕ್ರಮದಲ್ಲಿ ಸಹಾಯಕ ಕಮಾಂಡೆಮಟ್ ಶರಣಬಸವ ಡಾ.ಮಹೇಶ…
ಮುದ್ದೇಬಿಹಾಳ: ಇತ್ತೀಚೆಗೆ ಹಾವು ಕಚ್ಚಿ ಮೃತಪಟ್ಟಿದ್ದ ತಾಲೂಕಿನ ನಾಲತವಾಡ ಪಟ್ಟಣದ ಪತ್ರಕರ್ತ ಉಮೇಶ ಆಲಕೊಪ್ಪರ ಅವರ ಮನೆಗೆ ಸಾಬೂನ ಮತ್ತು ಮಾರ್ಜಕ ನಿಮಗದ ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.ನಂತರ ಮಾತನಾಡಿದ ಅವರು ಮೃತ ಪತ್ರಕರ್ತನಿಗೆ ಸರಕಾರದಿಂದ ಸಿ.ಎಂ ಅವರ ವಿಶೇಷ ಅನುದಾನದಲ್ಲಿ ಆರ್ಥಿಕವಾಗಿ ಸಹಾಯ ಕೊಡಿಸುತ್ತೇನೆ. ಮೆಡಿಕಲ್ ರಿಪೋರ್ಟ ಹಚ್ಚಿ ನನಗೆ ಕೊಡಿ ಎಂದರು, ಮಕ್ಕಳನ್ನು ಶಿಕ್ಷಣದಿಂದ ವಂಚಿತಗೊಳಿಸಬೇಡಿ, ಅವರು ಎಲ್ಲಿಯವರೆಗೆ ಶಿಕ್ಷಣ ಕಲಿಯಲು ಬಯಸುತ್ತಾರೆ ಶಿಕ್ಷಣ ಕೊಡಿಸಿ ಎಂದರು.ಈ ವೇಳೆ ಮುಖಂಡರಾದ ರಾಯನಗೌಡ ತಾತರೆಡ್ಡಿ, ಎ.ಜಿ.ಗಂಗನಗೌಡರ, ಪ.ಪಂ ಸದಸ್ಯ ಬಸವರಾಜ ಗಂಗನಗೌಡರ, ರಮೇಶ ಆಲಕೊಪ್ಪರ, ಸಿದ್ದಣ್ಣ ಆಲಕೊಪ್ಪರ, ದೌರ್ಜನ್ಯ ಸಮೀತಿ ಸದಸ್ಯ ಮಲ್ಲು ತಳವಾರ, ಹಣಮಂತ ಕುರಿ, ಪರಶು ಕೆಂಭಾವಿ, ಬಸವರಾಜ ಇಲಕಲ್ ಹಾಗೂ ಇನ್ನಿತರರು ಇದ್ದರು.
ಮುದ್ದೇಬಿಹಾಳ: ತಾಲೂಕಿನ ಕಾಳಗಿ ಸರ್ಕಾರಿ ಆಸ್ಪತ್ರೆಯಲ್ಲಿ ‘೧೦೮’ ಆರೋಗ್ಯ ಕವಚ ವಾಹನಕ್ಕೆ ಕೊನೆಗೂ ಕಾಯಕಲ್ಪ ಸಿಕ್ಕಂತಾಗಿದ್ದು ಶನಿವಾರ ಸ್ಥಳೀಯ ಮಾಜಿ ಗ್ರಾ.ಪಂ ಅಧ್ಯಕ್ಷ ಜಾವೀದ ಇನಾಮದಾರ ಹಾಗೂ ಆಸ್ಪತ್ರೆಯ ವೈದ್ಯ ಡಾ. ರಂಗನಾಥ ವೈದ್ಯ ಸೇರಿ ಜಂಟಿಯಾಗಿ ಚಾಲನೆ ನೀಡಿದರು.ಈ ವೇಳೆ ಮಾತನಾಡಿದ ಇನಾಮದಾರ ಸಾರ್ವಜನಿಕ ಆರೋಗ್ಯ ರಕ್ಷಣೆ ಸಂವಿಧಾನಬದ್ಧ ಹಕ್ಕು. ಹಾಗಾಗಿ, ಸಾರ್ವಜನಿಕರನ್ನು ಆರೋಗ್ಯವಂತರನ್ನಾಗಿ ಮಾಡಲು ಆರೋಗ್ಯ ಇಲಾಖೆ ಬದ್ಧವಾಗಿರಬೇಕು. ಗ್ರಾಮೀಣ ಪ್ರದೇಶದ ಆಸ್ಪತ್ರೆಗಳಲ್ಲಿ ಸಾಮಾನ್ಯವಾಗಿ ಔಷಧಿಗಳ ಕೊರೆತೆ ಕಂಡು ಬರುತ್ತವೆ. ಆದರೆ ನಮ್ಮೂರಿನ ಆಸ್ಪತ್ರೆಯಲ್ಲಿ ಯಾವುದೇ ಕೊರತೆ ಇಲ್ಲ. ಆದರೇ ರೋಗಿಗಳನ್ನು ಕರೆತರಲು, ಹೆರಿಗೆ ನೋವಿನಿಂದ ಬಳಲುವ ರೋಗಿಗಳಿಗೆ ಆಸ್ಪತ್ರೆಗೆ ಕರೆತರಲು ವಾಹನ ಇಲ್ಲದೇ ತುಂಬಾ ತೊಂದರೆ ಆಗುತ್ತಿತ್ತು. ಸದ್ಯಪ್ರಾರಂಭಗೊಂಡ ನೂತನ ೧೦೮ ವಾಹನ ಸುತ್ತಮತ್ತಲಿನ ಗ್ರಾಮಸ್ಥರಿಗೆ ಆಸರೆಯಾಗಿದೆ. ಇದರ ಸದುಪಯೋಗ ಪಡೆದಕೊಳ್ಳಬೇಕು ಎಂದರು.ಸಭೆಯಲ್ಲಿ ವೈದ್ಯಾಧಿಕಾರಿ ಡಾ.ರಂಗನಾಥ ವೈದ್ಯ, ಗ್ರಾಮ ಪಂಚಾಯತಿ ಸದಸ್ಯ ಸತೀಶ ರಾಠೋಡ, ಸ್ಥಳೀಯರಾದ ನಿಂಗಪ್ಪ ಹುಂಡಿ, ಗುರಪ್ಪ ಸಜ್ಜನ, ಜೆ ಎಚ್ ಮುಲ್ಲಾ, ಸಿದ್ದಪ್ಪ…
“ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ”- ವಿವೇಕಾನಂದ. ಎಚ್. ಕೆ. ಬೆಂಗಳೂರು ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿದೆ. ಕೆರೆಕಟ್ಟೆಗಳು, ನದಿ ಕಾಲುವೆಗಳಿಗೆ ನೀರು ಹರಿಯುತ್ತಿದೆ. ಮುಂದಿನ ಕೆಲವು ತಿಂಗಳುಗಳು ಹೀಗೆ ಮಳೆ ಮುಂದುವರಿದರೆ ಕಳೆದ ಬಾರಿಯ ಬರಗಾಲದ ಛಾಯೆ ಮರೆಯಾಗಿ, ಕೃಷಿ ಕ್ಷೇತ್ರ ಒಂದಷ್ಟು ಉತ್ತಮ ಬೆಳವಣಿಗೆ ಕಾಣುತ್ತದೆ. ಇದು ರೈತರ ಮತ್ತು ಕೃಷಿ ಅವಲಂಬಿತರ ಹಿತದೃಷ್ಟಿಯಿಂದ ಹಾಗೂ ರಾಜ್ಯದ ಅಸಂಖ್ಯಾತ ಜನ ಮತ್ತು ಸರ್ಕಾರದ ಹಿತ ದೃಷ್ಟಿಯಿಂದ ಅತ್ಯುತ್ತಮ ಬೆಳವಣಿಗೆ.. ನಿಜವಾಗಲೂ ಇಡೀ ಆಡಳಿತ ವ್ಯವಸ್ಥೆ ಮತ್ತು ಅದಕ್ಕೆ ಪೂರಕವಾದ ಎಲ್ಲಾ ಕ್ಷೇತ್ರಗಳು ಈ ಬಗ್ಗೆ ಸಾಕಷ್ಟು ಗಮನಹರಿಸಿ ಒಳ್ಳೆಯ ಕೆಲಸ ಮಾಡಬೇಕಿದೆ. ಬಿತ್ತನೆ ಬೀಜ ಮತ್ತು ರಸಗೊಬ್ಬರಗಳಿಗೆ ಹಾಗು ಹಣಕಾಸು ಸಾಲ ಸೌಲಭ್ಯಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕಿದೆ. ಆದರೆ ದುರಾದೃಷ್ಟವಶಾತ್ ಕಳೆದ ಕೆಲವು ವಾರಗಳಿಂದ ಚುನಾವಣಾ ರಾಜಕೀಯ, ತದನಂತರದಲ್ಲಿ ನೇಹಾ ಕೊಲೆ, ಪ್ರಜ್ವಲ್ ವಿಕೃತ ಕಾಮ, ದರ್ಶನ್ ಕ್ರೌರ್ಯ, ಈಗ ಯಡಿಯೂರಪ್ಪನವರ ಫೋಕ್ಸೋ ಹೀಗೆ ಆಡಳಿತ, ಮಾಧ್ಯಮ ಮತ್ತು ಜನರ ಮನಸ್ಸಿನಲ್ಲಿ…
ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅಧ್ಯಕ್ಷತೆಯಲ್ಲಿ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ವಿಜಯಪುರ: ಮುಂಗಾರು ಹಂಗಾಮಿನಲ್ಲಿ ೭೧೧೩೭೦ ಹೆಕ್ಟೇರ್ ಗುರಿಗೆ ೧೯೫೬೭ ಹೆಕ್ಟೇರ್ ಬಿತ್ತನೆಯಾಗಿದೆ. ಮಳೆ ಬಿಡುವಿನ ನಂತರ ಬಿತ್ತನೆ ಪ್ರಗತಿಯಾಗಲಿದ್ದು, ಮುಂಗಾರು ಹಂಗಾಮಿನಲ್ಲಿ ಯಾವುದೇ ಬೀಜ, ರಸಗೊಬ್ಬರದ ಕೊರತೆಯಾದಂತೆ ಸಮರ್ಪಕವಾಗಿ ಪೂರೈಸುವಂತೆ ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಜರುಗಿದ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮುಂಗಾರು ಹಂಗಾಮಿನಲ್ಲಿ ರೈತರಿಗೆ ರಸಗೊಬ್ಬರ, ಬೀಜ ವಿತರಣೆಯಲ್ಲಿ ಯಾವುದೇ ಗೊಂದಲಗಳಾಗದಂತೆ ನೋಡಿಕೊಂಡು ಎಲ್ಲ ಅಗತ್ಯ ಕ್ರಮ ಕೈಗೊಳ್ಳಬೇಕು. ವಿತರಣೆ ಸಂದರ್ಭದಲ್ಲಿ ಜನಜಂಗುಳಿಯಾಗದಂತೆ ನೋಡಿಕೊಂಡು ಪೂರ್ವಸಿದ್ಧತೆಯೊಂದಿಗೆ ವಿತರಣೆಗೆ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.ಮುಂಗಾರು ಹಂಗಾಮಿನಲ್ಲಿ ಇಲ್ಲಿಯವರೆಗೆ ೭೭೨೦.೮೦ ಕ್ವಿಂ. ವಿವಿಧ ಬಿತ್ತನೆ ಬೀಜ ವಿತರಿಸಲಾಗಿದೆ. ಬೀಜದ ಯಾವುದೇ ಕೊರತೆ ಇಲ್ಲ. ೩೨೦೩.೭೨…
ವಿಜಯಪುರ: ಸನಾತನ ಹಿಂದೂ ಧರ್ಮ ಭಾರತೀಯ ಸಂಸ್ಕೃತಿ ಕಾಪಾಡಲು ಸಂತತಿ ಬೆಳೆಯಲು ಬ್ರಾಹ್ಮಣರು ಸೇರಿದಂತೆ ಸಮಸ್ತ ಹಿಂದೂ ಸಮಾಜ ವಿವಾಹ ಆಗುವದು ಅತಿ ಅವಶ್ಯ ಎಂದು ಆನಂದವನ ಅಗಡಿಯ ವೇ.ಬ್ರ.ಶಂಕರಭಟ್ಟ ಜೋಶಿ (ಕಮಡೊಳ್ಳಿ) ನುಡಿದರು. ಶನಿವಾರ ನಗರದ ಹೊರವಲಯದ ಶ್ರೀ ಶಿವಚಂದಬರೇಶ್ವ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ವಿಜಯಪುರದಿಂದ ಶ್ರೀಕ್ಷೇತ್ರ ಕೆಂಗೇರಿ ಮುರುಗೋಡಕ್ಕೆ ಸತತ ೨೫ ವರ್ಷಗಳ ಪಾದಯಾತ್ರೆ ಸಂಪನ್ನಗೊಂಡ ಪ್ರಯುಕ್ತ ಪಾದಯಾತ್ರಿಕರಿಗೆ ಸೇವೆ ಸಲ್ಲಿಸಿದ ಭಕ್ತಾದಿಗಳಿಗೆ ಸನ್ಮಾನ ಸಮಾರಂಭ ನಿಮಿತ್ಯ ವಿಶೇಷವಾಗಿ ಹಮ್ಮಿಕೊಂಡಿದ್ದ ಸ್ವಯಂವರ ಪಾರ್ವತಿ ಹೋಮದ ನೇತೃತ್ವವನ್ನು ವಹಿಸಿ ಆಶೀರ್ವಚನ ನೀಡಿದರು.ಬ್ರಾಹ್ಮಣ ಸಮಾಜದಲ್ಲಿನ ಗಂಡು-ಹೆಣ್ಣುಗಳ ವಿವಾಹದಲ್ಲಿ ಸಮಸ್ತ ಬ್ರಾಹ್ಮಣ ಸಮಾಜದ ಸಮತೋಲನ ಕಾಪಾಡಿಕೊಳ್ಳುವದರ ಜೊತೆಗೆ ವರ ಹಾಗೂ ಕನ್ಯಾಗಳ ಪಿತ್ರುಗಳ ಪೋಷಕರು ಹೊಂದಿಕೊಂಡು ಹೋಗಬೇಕೆಂದು ಕರೆ ನೀಡಿದರು.ಬ್ರಾಹ್ಮಣರಲ್ಲಿ ವಿಚ್ಚೇದನ ಪ್ರಮೇಯ ಬರಬಾರದು: ಇತ್ತೀಚಿನ ದಿನಗಳಲ್ಲಿ ವಿಚ್ಚೇದನ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಅದರಲ್ಲೂ ವಿಶೇಷವಾಗಿ ಬ್ರಾಹ್ಮರದಲ್ಲೂ ವಿಚ್ಚೇದನ ಪ್ರಕರಣ ಕಂಡುಬರುತ್ತಿವೆ. ಅದು ಆಗಬಾರದು ವಿಪ್ರರಲ್ಲಿ ವಿವಾಹ ವಿಚ್ಚೇದನ ಪ್ರಮೇಯ ಎಂದಿಗು ಬರಬಾರದು. ಸಂಸಾರ ಎಂದರೆ…
ಬಸವನಬಾಗೇವಾಡಿ: ತಾಲೂಕಿನ ಇಂಗಳೇಶ್ವರ ಗ್ರಾಮದ ವಿರಕ್ತಮಠದ ಬಸವನಿಷ್ಠರಾದ ಹಿರಿಯ ಶ್ರೀಗಳಾದ ಚನ್ನಬಸವ ಸ್ವಾಮೀಜಿಗಳು ೯೩ ನೇ ವರ್ಷದ ವಯೋವೃದ್ಧರಾಗಿದ್ದಾರೆ. ಗುರುವಾರ ಜರುಗಿದ ಇವರ ಅಭಿನಂದನಾ ಗ್ರಂಥ ನಿರಂಜನ ಜ್ಯೋತಿ ಗ್ರಂಥ ಬಿಡುಗಡೆಯ ಸಮಾರಂಭದಲ್ಲಿ ಗ್ರಂಥ ಬಿಡುಗಡೆ ಸಂದರ್ಭದಲ್ಲಿ ಇವರನ್ನು ವೇದಿಕೆಯ ಮೇಲೆ ಕರೆಯದೇ ಅವಮಾನ ಮಾಡಲಾಯಿತು. ದೂರದಿಂದ ಬಂದ ಭಕ್ತರು ಈ ಘಟನೆಯಿಂದ ತುಂಬಾ ನೊಂದುಕೊಂಡು ಬೇಸರ ವ್ಯಕ್ತಪಡಿಸಿದರು ಎಂದು ಬಸವನಬಾಗೇವಾಡಿಯ ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವೇದಿಕೆಯಲ್ಲಿ ಹಿರಿಯ ಶ್ರೀಗಳ ಅನುಪಸ್ಥಿತಿಯಲ್ಲಿ ಗ್ರಂಥ ಲೋಕಾರ್ಪಣೆವಾಗಿರುವುದು ಸರಿಯಾದ ಕ್ರಮವಾಗಿರಲಿಲ್ಲ. ಗ್ರಂಥ ಪ್ರಧಾನ ಸಂಪಾದಕ ಡಾ.ಸೋಮನಾಥ ಯಾಳವಾರ ಅವರು ತಮ್ಮ ಗ್ರಂಥ ಪರಿಚಯ ಕಾರ್ಯಕ್ರಮದಲ್ಲಿ ಈ ವಿಷಯ ಪ್ರಸ್ತಾಪಿಸಿ ವೇದಿಕೆಯ ಬ್ಯಾನರ್ ಸಹ ಇಲ್ಲದೇ ಇರುವದನ್ನು ಸಹ ಕಾರ್ಯಕ್ರಮದಲ್ಲಿ ಗಮನಕ್ಕೆ ತಂದರು. ಆಗ ಹಿರಿಯ ಶ್ರೀಗಳನ್ನು ವೇದಿಕೆಯ ಕರೆದು ಸಂಪಾದಕ ಮಂಡಳಿಯಿಂದ ಅವರಿಗೆ ಗ್ರಂಥ ಸಮರ್ಪಿಸಿ ಗೌರವಿಸಿದರ ನಂತರ ಭಕ್ತರ ಬೇಸರ ಕೊಂಚ ದೂರವಾಯಿತು. ಬ್ಯಾನರ್…
