Subscribe to Updates
Get the latest creative news from FooBar about art, design and business.
What's Hot
Author: editor.udayarashmi@gmail.com
ಬಸವನಬಾಗೇವಾಡಿ: ಜನಪದ ಶೈಲಿ ಪ್ರತಿಯೊಬ್ಬರನ್ನೂ ಮನಸೂರೆಗೊಳ್ಳುತ್ತದೆ. ಜನಪದ ಸಾಹಿತ್ಯಕ್ಕೆ ವಿದೇಶಿಯರು ಮಾರುಹೋಗಿರುವದನ್ನು ನಾವು ಯುಟ್ಯೂಬೊಂದರಲ್ಲಿ ನಾವು ನೋಡಿದ್ದೇವೆ ಎಂದು ಬಸವನಬಾಗೇವಾಡಿಯ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ತಾಲೂಕಿನ ಇಂಗಳೇಶ್ವರ ಗ್ರಾಮದ ವಿರಕ್ತಮಠದ ಲಿಂ.ಸಿದ್ದಲಿಂಗ ಶಿವಯೋಗಿಗಳವರ ೯೦ ನೇ ಜಾತ್ರಾಮಹೋತ್ಸವದಂಗವಾಗಿ ಶ್ರೀಮಠ, ಜಿಲ್ಲಾ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಾನಪದ ಸೊಗಡು ಗೋಷ್ಠಿಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಜಾನಪದ ಸೊಗಡು ಇರುವದನ್ನು ಕಾಣುತ್ತೇವೆ. ಇಂದಿನ ಆಧುನಿಕ ಕಾಲದಲ್ಲಿ ಜನಪದ ಸಾಹಿತ್ಯವೆಂದು ಅಶ್ಲೀಲವಾಗಿ ರಚನೆ ಮಾಡಿ ಹಾಡುತ್ತಿರುವುದು ಜನಪದ ಸಾಹಿತ್ಯಕ್ಕೆ ಧಕ್ಕೆ ಬರುವ ಸಾಧ್ಯತೆಯಿದೆ. ಅವರು ಜನಪದ ಸಾಹಿತ್ಯಕ್ಕೆ ಧಕ್ಕೆ ಬಾರದಂತೆ ಜನಪದ ಸಾಹಿತ್ಯವನ್ನು ರಚನೆ ಮಾಡಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ ಅವರು, ಜನಪದ ಸಾಹಿತ್ಯದಲ್ಲಿ ಜೀವನ ಮೌಲ್ಯಗಳಿವೆ. ಅದು ಎಂದಿಗೂ ಅಳಿದು ಹೋಗುವುದಿಲ್ಲ ಎಂದರು.ಕಾರ್ಯಕ್ರಮ ಉದ್ಘಾಟಿಸಿದ ಮನಗೂಳಿ ಹಿರೇಮಠದ ಅಭಿನವ ಸಂಗನಬಸವ ಸ್ವಾಮೀಜಿ ಮಾತನಾಡಿ, ಜನ ಸಾಮಾನ್ಯರ ಸಾಹಿತ್ಯವೇ ಜಾನಪದ ಸಾಹಿತ್ಯ. ಜನಪದ ಸಾಹಿತ್ಯದಲ್ಲಿ ಅನುಭಾವದ ನುಡಿಗಟ್ಟುಗಳಿರುವದರಿಂದ…
ಬಸವನಬಾಗೇವಾಡಿ: ತಾಲೂಕಿನ ಇಂಗಳೇಶ್ವರ ಗ್ರಾಮದ ವಿರಕ್ತಕಮಠದ ಲಿಂ.ಸಿದ್ದಲಿಂಗ ಶಿವಯೋಗಿಗಳವರ ೯೦ ನೇ ಜಾತ್ರಾಮಹೋತ್ಸವದಲ್ಲಿ ಶ್ರೀಮಠದ ಹಿರಿಯ ಶ್ರೀಗಳಾದ ಚನ್ನಬಸವ ಸ್ವಾಮೀಜಿಯವರಿಗೆ ಗುರುವಾರ ನಿರಂಜನಜ್ಯೋತಿ ಅಭಿನಂದನಾ ಗ್ರಂಥವನ್ನು ಸಂಪಾದಕ ಮಂಡಳಿಯವರು ಸಮರ್ಪಿಸಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಗ್ರಂಥದ ಪ್ರಧಾನ ಸಂಪಾದಕ, ಸಂಶೋಧಕ ಡಾ.ಸೋಮನಾಥ ಯಾಳವಾರ ಮಾತನಾಡಿ, ನಾಡಿನಲ್ಲಿ ಇಂಗಳೇಶ್ವರ ಗ್ರಾಮದ ವಚನ ಶಿಲಾ ಮಂಟಪ ಎಲ್ಲ ಮಠಗಳಿಗೆ ಮಾದರಿಯಾಗುವಂತೆ ಚನ್ನಬಸವ ಸ್ವಾಮೀಜಿಗಳು ವಚನಗಳನ್ನು ಶಿಲೆಯಲ್ಲಿ ಬರೆಸುವ ಮೂಲಕ ವಚನ ಶಿಲಾ ಮಂಟಪವನ್ನು ನಿರ್ಮಾಣ ಮಾಡಿದ್ದು ಐತಿಹಾಸಿಕ ದಾಖಲೆಯಾಗಿದೆ. ಈ ಮಠವು ವಚನಗಳಿಗೆ ಮುಕುಟ ಮಣಿಯಂತೆ ಕಂಗೊಳಿಸುತ್ತಿದೆ. ಶ್ರೀಗಳು ಚನ್ನಬಸವಣ್ಣನವರ ಕರಣ ಹಸಿಗೆ ಪ್ರವಚನದ ಮೂಲಕ ಜನರ ಮನಸೂರೆಗೊಂಡಿದ್ದಾರೆ. ಇಂತಹ ಹಿರಿಯ ಶ್ರೀಗಳ ಕುರಿತು ೮೦೦ಕ್ಕೂ ಹೆಚ್ಚು ಪುಟಗಳನ್ನು ಒಳಗೊಂಡ ನಿರಂಜನ ಜ್ಯೋತಿ ಎಂಬ ಅಭಿನಂದನಾ ಗ್ರಂಥ ಜನರ ಮನಕ್ಕೆ ತಲುಪಲಿದೆ. ಈ ಗ್ರಂಥವು ನಾನಾ ಲೇಖಕರು ಬರೆದ ಉತ್ತಮ ಲೇಖನಗಳನ್ನು ಒಳಗೊಂಡಿದೆ. ಮುಂದಿನ ಜನಾಂಗಕ್ಕೆ ಶ್ರೀಮಠದ ಚನ್ನಬಸವ ಸ್ವಾಮೀಜಿಗಳ ಬದುಕು, ಅವರು ವಚನ ಶಿಲಾ…
ದೇವರಹಿಪ್ಪರಗಿ: ಈ ವರ್ಷ ಸಕಾಲದಲ್ಲಿ ಮಳೆಯಾಗಿದ್ದು, ಬಿತ್ತನೆ ಮಾಡುವ ಸಮಯದಲ್ಲಿ ರೈತರಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಮುಂಗಾರು ಬಿತ್ತನೆಗೆ ಅಗತ್ಯವಾದ ಎಲ್ಲಾ ರೀತಿಯ ಬೀಜಗಳನ್ನು ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ. ರೈತಬಾಂಧವರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮುಳಸಾವಳಗಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಸಂಗನಗೌಡ ಬಿರಾದಾರ ಹೇಳಿದರು.ತಾಲ್ಲೂಕಿನ ಮುಳಸಾವಳಗಿ ಗ್ರಾಮದ ವಿ.ಪ್ರಾ.ಗ್ರಾ.ಕೃ.ಸ.ಸಂಘದಲ್ಲಿ ಶುಕ್ರವಾರ ರೈತರಿಗೆ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ದೇವರಹಿಪ್ಪರಗಿ ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ನೀಡಲಾಗುವ ಬಿತ್ತನೆ ಬೀಜಗಳನ್ನೇ ಇಲ್ಲಿ ನೀಡಲಾಗುತ್ತಿದೆ. ಯಾವುದೇ ರೀತಿಯ ತೊಂದರೆ ಹಾಗೂ ವಿಳಂಬವಾಗದಂತೆ ವ್ಯವಸ್ಥೆಯನ್ನು ಮಾಡಲಾಗಿದೆ. ರೈತರು ಬೇಗನೇ ತಮಗೆ ಅಗತ್ಯವಾದ ಬೀಜಗಳನ್ನು ಪಡೆದು ಸಕಾಲದಲ್ಲಿ ಜಮೀನು ಬಿತ್ತುವುದರ ಮೂಲಕ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.ಪಿಕೆಪಿಎಸ್ ಸಿಇಓ ಬಿ.ಎ.ಪಾಟೀಲ, ಲೆಕ್ಕಿಗ ಮಲ್ಲನಗೌಡ ಬಿರಾದಾರ, ಉಪಾಧ್ಯಕ್ಷ ಕಲ್ಲಪ್ಪ ತಳವಾರ, ನಿರ್ದೇಶಕರಾದ ಕಲ್ಲಪ್ಪ ಮೂಲಿಮನಿ, ಬಸವರಾಜ ಬಮ್ಮನಳ್ಳಿ, ಮಲಕಪ್ಪ ನಾಯ್ಕೋಡಿ, ಶ್ರೀಶೈಲ ಹದರಿ, ಚನ್ನು ಹದರಿ, ಶಿವಾನಂದ…
ದೇವರಹಿಪ್ಪರಗಿ: ಸಾತಿಹಾಳ ಗ್ರಾಮದ ಎಸ್.ಸಿ ಕಾಲೋನಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಕೊಳಚೆ ಹಾಗೂ ಮಳೆ ನೀರು ನಿಂತು ಸಾರ್ವಜನಿಕರು ನಡೆಯಲು ಬಾರದಂತಾಗಿದ್ದು ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟಿಸಲಾಗುವುದು ಎಂದು ಸಾರ್ವಜನಿಕರು ಎಚ್ಚರಿಕೆ ನೀಡಿದ್ದಾರೆ.ತಾಲ್ಲೂಕಿನ ಸಾತಿಹಾಳ ಗ್ರಾಮದ ಎಸ್.ಸಿ.ಕಾಲೋನಿಗೆ ತೆರಳುವ ರಸ್ತೆಯನ್ನು ಈ ಮೊದಲೇ ಸಿ.ಸಿ ರಸ್ತೆಯಾಗಿ ನಿರ್ಮಿಸಿ ಸಾಕಷ್ಟು ಹಣ ಖರ್ಚು ಮಾಡಲಾಗಿದೆ. ಈಗ ಸಿ.ಸಿ ರಸ್ತೆ ಕಾಣದಂತಾಗಿದ್ದು ಕಳಪೆ ಕಾಮಗಾರಿಗೆ ನಿದರ್ಶನವಾಗಿದೆ. ಪ್ರತಿವರ್ಷ ಮಳೆಗಾಲ ಆರಂಭಗೊಳ್ಳುತ್ತಿದ್ದಂತೆಯೇ ಗ್ರಾಮದ ರಸ್ತೆಗಳಲ್ಲಿ ಕೊಳಚೆ ಹಾಗೂ ಮಳೆ ನೀರು ನಿಂತು ಕೆಸರಿನ ಗದ್ದೆಗಳಂತಾಗುತ್ತಿವೆ. ಜೊತೆಗೆ ಮನೆಗಳಲ್ಲಿಯೂ ನೀರು ನುಗ್ಗುತ್ತಿದೆ.ಸಾತಿಹಾಳ ಡೋಣಿ ನದಿ ತೀರದ ಗ್ರಾಮವಾಗಿದ್ದು ಎರೆಮಣ್ಣಿನಿಂದ ಕೂಡಿದ್ದಾಗಿದೆ. ಸ್ವಲ್ಪವೇ ಮಳೆ ಆದರೆ ಸಾಕು ರಸ್ತೆಗಳೆಲ್ಲಾ ಕೆಸರುಮಯವಾಗಿ ನಡೆಯಲು ಬಾರದಂತಾಗುತ್ತವೆ. ಇಂಥ ರಸ್ತೆಗಳಲ್ಲಿಯೇ ವೃದ್ಧರು, ಅಂಗವಿಕಲರು ನಡೆದಾಡಲು ಹರಸಾಹಸ ಪಡುವಂತಾಗಿದೆ. ಓಣಿಗಳೆಲ್ಲಾ ನಿಂತ ಗಲೀಜು ನೀರಿನಿಂದ ಗಬ್ಬೆದ್ದು ನಾರುತ್ತಿವೆ. ಪರಿಸ್ಥಿತಿ ಆಯೋಮಯವಾಗಿದೆ. ಇದು ಮುಂದೆ…
ಬಸವನಬಾಗೇವಾಡಿ: ಪಟ್ಟಣದ ಕೋರಮಾರ ರಸ್ತೆಗೆ ಹೊಂದಿಕೊಂಡಿರುವ ಸರ್ವೇ ನಂ.೩೫೨ ಸೇರಿದಂತೆ ಅನೇಕ ಜಮೀನುಗಳ ಬಿತ್ತನೆ ಕಾರ್ಯಕ್ಕೆ ಬಿತ್ತನೆ ಕಾರ್ಯಕ್ಕೆ ಅಡ್ಡಿ ಉಂಟು ಮಾಡುತ್ತಿರುವವರ ವಿರುದ್ಧ ಸೂಕ್ತಕ್ರಮ ಕೈಗೊಳ್ಳಬೇಕೆಂದು ಕೆಲ ಜಮೀನುಗಳ ರೈತರು ಶಿರಸ್ತೇದಾರ ಮಹೇಶ ಬಳಗಾನೂರ ಅವರ ಮೂಲಕ ಶುಕ್ರವಾರ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.ಬಿಸಿಲಿನ ತಾಪಮಾನಕ್ಕೆ ತತ್ತರಿಸಿ ಹೋದ ರೈತರಿಗೆ ವರಕೃಪೆಯಿಂದ ಮಳೆಯಾಗಿ ನೆಮ್ಮದಿಯ ನಿಟ್ಟಿಸಿರು ಬಿಟ್ಟ ರೈತನಿಗೆ ತಮ್ಮ ಜಮೀನುಗಳಲ್ಲಿ ಬಿತ್ತನೆ ಕಾರ್ಯ ಸೇರಿ ಇತರೇ ಕಾರ್ಯಗಳಿಗೆ ಕೆಲ ಜಮೀನುಗಳ ಪ್ರಬಲ ವ್ಯಕ್ತಿಗಳು ದಾರಿಯನ್ನು ಕೊಡದೇ ದಾರಿಯಲ್ಲಿ ತೆಗ್ಗುಗಳನ್ನು ತೋಡಿ ನಿಮಗೆ ದಾರಿಯಿಲ್ಲ. ನೀವು ನ್ಯಾಯಾಲಯಕ್ಕೆ ಹೋಗಿ ದಾರಿ ಮಾಡಿಕೊಳ್ಳಿ ಎಂದು ಹೇಳುತ್ತಿದ್ದಾರೆ. ಕೂಡಲೇ ತಹಸೀಲ್ದಾರರು ಅವರ ವಿರುದ್ಧ ಕ್ರಮಕೈಗೊಂಡು ರೈತರ ದಾರಿ ಸಮಸ್ಯೆ ಇತ್ಯರ್ಥಪಡಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.ಈ ಸಂದರ್ಭದಲ್ಲಿ ರವಿ ಗೊಲ್ಲರ, ಸುರೇಶ ಗುಂಡಿ, ಐ.ಎಂ.ನಾಗೂರ, ಜಂಗಪ್ಪ ಗೊಲ್ಲಾರ, ವಿರೇಶ ಬಸರಕೋಡ, ಭೀಮರೆಡ್ಡಿ ಜಾಯವಾಡಗಿ ಇತರರು ಇದ್ದರು.
ಬಸವನಬಾಗೇವಾಡಿ: ಮಹಿಳೆ ಕುಟುಂಬದ ಆಸ್ತಿಯಾಗಿ ವಿದ್ಯಾವಂತರಾಗಬೇಕು. ಶಿಕ್ಷಣ ಸಂಸ್ಕೃತಿ, ಸಂಸ್ಕಾರ ಪಡೆದುಕೊಳ್ಳಬೇಕು. ಮಹಿಳೆ ಇಂದು ಎಲ್ಲ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿ ಸಾಕ್ಷಿಯಾಗಿದ್ದಾರೆ ಎಂದು ಹೂವಿನಹಿಪ್ಪರಗಿಯ ಪತ್ರಿಮಠದ ದ್ರಾಕ್ಷಾಯಿಣಿ ಮಾತಾಜಿ ಹೇಳಿದರು.ತಾಲೂಕಿನ ಇಂಗಳೇಶ್ವರ ಗ್ರಾಮದ ವಿರಕ್ತಮಠದ ಲಿಂ.ಸಿದ್ದಲಿಂಗ ಶಿವಯೋಗಿಗಳ 90 ನೇ ಜಾತ್ರಾಮಹೋತ್ಸವದಂಗವಾಗಿ ಶ್ರೀಮಠ, ಜಿಲ್ಲಾ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಹಿಳಾ ಸಬಲೀಕರಣ ಗೋಷ್ಠಿ ಉದ್ಘಾಟಿಸಿ ಮಾತನಾಡಿದ ಅವರು, ಪುರುಷರು ಆತ್ಮ ಶುದ್ಧೀಕರಣದಿಂದ ಮಹಿಳೆಯರಿಗೆ ಗೌರವ ನೀಡಬೇಕು. ಮಹಿಳೆ ಕುಟುಂಬದ ಆಧಾರ ಸ್ಥಂಭವಾಗಿದ್ದಾಳೆ. ಮಹಿಳೆಯರನ್ನು ಪೂಜ್ಯನೀಯ ಸ್ಥಾನದಲ್ಲಿ ಕಾಣುವ ದೃಷ್ಟಿಕೋನ ಇರಬೇಕು. ಮಹಿಳೆ ದೇವತೆಯ ಸಮಾನಳು ಎಂದರು.ಮಾಜಿ ಸಚಿವ ಲೀಲಾವತಿ ಪ್ರಸಾದ ಮಾತನಾಡಿ, ಇಂಗಳೇಶ್ವರ ವಿರಕ್ತಮಠ ವಚನ ಶಿಲಾಶಾಸನ ಮಂಟಪ ಕಾರ್ಯ ಇತಿಹಾಸ ಪ್ರಸಿದ್ಧವಾಗಿದೆ. ನಾನು ಇಂಗಳೇಶ್ವರ ಗ್ರಾಮದ ಮೊಮ್ಮಗಳಾಗಿದ್ದು ಹೆಮ್ಮೆಯ ವಿಷಯ ಎಂದರು.ಮಹಿಳಾ ಸಬಲೀಕರಣ ಗೋಷ್ಠಿಯಲ್ಲಿ ಸುಖದೇವಿ ಅಲಬಾಳಮಠ ಹಾಗು ರೋಹಿಣಿ ಜತ್ತಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಮಹಿಳೆಯರು ಆಥಿ೯ಕ, ಸಾಮಾಜಿಕ ಧಾರ್ಮಿಕ…
ಬಸವನಬಾಗೇವಾಡಿ: ರಾಜ್ಯದ ಸಾಂಸ್ಕ್ರತಿಕ ನಾಯಕ ಬಸವೇಶ್ವರರ ತತ್ವಗಳನ್ನು ಪ್ರತಿಯೊಬ್ಬರೂ ಮನಸಾಕ್ಷಿಯಾಗಿ ಅಳವಡಿಸಿಕೊಳ್ಳುವ ಮೂಲಕ ಅವರನ್ನು ಮನದ ಒಡೆಯನನ್ನಾಗಿ ಮಾಡಿಕೊಳ್ಳುವ ಅಗತ್ಯವಿದೆ ಎಂದು ಬಸವ ಸಮಿತಿಯ ಅರವಿಂದ ಜತ್ತಿ ಹೇಳಿದರು.ತಾಲೂಕಿನ ಇಂಗಳೇಶ್ವರ ಗ್ರಾಮದ ವಿರಕ್ತಮಠದ ಬಸವೇಶ್ವರ ವಚನ ಶಿಲಾ ಮಂಟಪದಲ್ಲಿ ಗುರುವಾರ ಸಂಜೆ ಶ್ರೀಮಠದ ಹಿರಿಯ ಶ್ರೀಗಳಾದ ಚನ್ನಬಸವ ಸ್ವಾಮೀಜಿಗಳ ಅಭಿನಂದನಾ ಗ್ರಂಥ ನಿರಂಜನ ಜ್ಯೋತಿ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರೂ ಅಂತರಂಗ-ಬಹಿರಂಗ ಶುದ್ಧಿ ಇಟ್ಟುಕೊಳ್ಳಬೇಕು. ನಮ್ಮೆಲ್ಲರ ಬದುಕು ಬಸವಮಯವಾಗಬೇಕು. ವಚನ ಸಾಹಿತ್ಯದ ತಾತ್ಪರ್ಯವನ್ನು ಅರಿತುಕೊಳ್ಳಬೇಕು. ವಚನ ಸಾಹಿತ್ಯ ವಿಜ್ಞಾನವಾಗಿದೆ. ಇಂದಿನ ಜನಾಂಗಕ್ಕೆ ಲಿಂಗಧಾರಣೆ ಮಾಡಿ ಲಿಂಗದ ಕಲ್ಪನೆ ಕೊಡಬೇಕು. ಅಂತರಂಗ ಶುದ್ಧಿಯಾಗಿ, ಲಿಂಗಸಾಕ್ಷಿಯಾಗಿ ಮಾತನಾಡುವ ಮೂಲಕ ಎಲ್ಲರೂ ಸಾರ್ಥಕ ಬದುಕನ್ನು ಸಾಗಿಸುವಂತಾಗಬೇಕು. ಬಸವ ಜಯಂತಿ ಆಚರಣೆ ರಾಷ್ಟ್ರಮಟ್ಟಕ್ಕೆ ಮುಟ್ಟುವಂತಾಗಬೇಕಿದೆ. ರಾಜ್ಯದ ಸಾಂಸ್ಕ್ರತಿಕ ನಾಯಕ ಬಸವೇಶ್ವರರರು ಪ್ರಜಾಪ್ರಭುತ್ವ ನಾಯಕನೂ ಆಗಿದ್ದಾನೆ ಎಂದರು.ಗ್ರಂಥ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಮಾತನಾಡಿ, ಇಂಗಳೇಶ್ವರ ವಿರಕ್ತಮಠದಲ್ಲಿ ಹಿರಿಯ ಶ್ರೀಗಳಾದ ಚನ್ನಬಸವ ಸ್ವಾಮೀಜಿಗಳು ವಿಶ್ವಕ್ಕೆ…
ದೇವರಹಿಪ್ಪರಗಿ: ಬಸ್ ನಿಲ್ದಾಣ ಕಂಪೌಂಡಿಗೆ ಹೊಂದಿಕೊಂಡಿರುವ ಕೊಳಚೆ ಗುಂಡಿ ಮುಚ್ಚಿ ಸ್ವಚ್ಛ ಪರಿಸರಕ್ಕೆ ಸಹಕಾರ ನೀಡುವುದರ ಜೊತೆಗೆ ಸೊಳ್ಳೆಗಳ ಕಾಟದಿಂದ ವ್ಯಾಪಾರಸ್ಥರು ಹಾಗೂ ಗ್ರಾಹಕರನ್ನು ಮುಕ್ತಗೊಳಿಸುವಂತೆ ಸ್ಥಳೀಯ ವ್ಯಾಪಾರಸ್ಥರು ಆಡಳಿತಾಧಿಕಾರಿ ಪ್ರಕಾಶ ಸಿಂದಗಿ ಹಾಗೂ ಮುಖ್ಯಾಧಿಕಾರಿ ಎಲ್.ಡಿ.ಮುಲ್ಲಾ ಅವರಲ್ಲಿ ಆಗ್ರಹಿಸಿದ್ದಾರೆ.ಪಟ್ಟಣದ ಸ್ಥಳೀಯ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಶನಿವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿ, ಬಸ್ ನಿಲ್ದಾಣಕ್ಕೆ ಹೊಂದಿಕೊಂಡಿರುವ ಕೊಳಚೆಗುಂಡಿ ಮುಚ್ಚಿ ರೋಗದಿಂದ ಕಾಪಾಡುವಂತೆ ಆಗ್ರಹಿಸಿದರು.ಈ ಸಂದರ್ಭದಲ್ಲಿ ಚೇತನ ಇಂಡಿ, ರಮೇಶ ಮಾಳನೂರ ಮಾತನಾಡಿ, ಕಟ್ಟಡ ಕಟ್ಟಲು ಅಗೆದ ಗುಂಡಿ ಕಳೆದ ಒಂದು ವರ್ಷದಿಂದ ತ್ಯಾಜ್ಯದ ತಿಪ್ಪೆಯಾಗಿ ಬದಲಾಗಿದ್ದು, ಕಳೆದ ವರ್ಷವೇ ಮುಖ್ಯಾಧಿಕಾರಿ ಎಲ್.ಡಿ.ಮುಲ್ಲಾ ಅವರಿಗೆ ಮನವಿ ಸಲ್ಲಿಸಿದ್ದೇವು. ಆಗ ಮುಖ್ಯಾಧಿಕಾರಿ ಖಾಲಿ ಜಾಗೆ ಖಾಸಗಿ ಅವರದ್ದಾಗಿದೆ ನಾವು ಏನೂ ಮಾಡುವಂತಿಲ್ಲ ಎಂಬ ಮಾತು ಹೇಳಿದ್ದರು. ಈಗ ಇಲ್ಲಿ ಮಳೆ ನೀರು ತುಂಬಿ ಸೊಳ್ಳೆಗಳ ಆವಾಸ ಸ್ಥಾನವಾಗಿದೆ. ಜೊತೆಗೆ ಇಂಥ ನೀರಿನಲ್ಲಿಯೇ ಸತ್ತ ಪ್ರಾಣಿಗಳನ್ನು ಎಸೆಯುತ್ತಿದ್ದಾರೆ. ಇದರಿಂದ ಇಡೀ ಪ್ರದೇಶ ಕೊಳಚೆಯಿಂದ…
ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ವಿಜಯಪುರ: ಕಳೆದ ಏಳು ವರ್ಷಗಳಿಂದ ಜಿಲ್ಲೆಯ ನೊಂದಣಾಧಿಕಾರಿಗಳು ವಿಜಯಪುರ ನಗರದಲ್ಲಿ ಕಾರ್ಯನಿರ್ವಹಿಸಿದ್ದು ಇಂಥ ಪ್ರಕರಣಗಳಿಗೆ ಕುಮಕ್ಕು ನೀಡುತ್ತಿದ್ದಾರೆ. ಇವರ ಜೊತೆ ಹಲವಾರು ಜನ ಕೈಜೋಡಿಸಿ ಅಮಾಯಕ ಬಡ ಜನರ ನಕಲಿ ದಾಖಲೆ ಸೃಷ್ಟಿಸಿ ಕೊಳ್ಳೆ ಹೊಡೆಯುತ್ತಿದ್ದಾರೆ. ಇದರ ಬಗ್ಗೆ ಜಿಲ್ಲಾಧಿಕಾರಿಗಳು ಗಂಭೀರವಾಗಿ ಈ ಪ್ರಕರಣವನ್ನು ಪರಿಗಣಿಸಬೇಕು. ಇದಕ್ಕೆ ತಾಲೂಕು ಮತ್ತು ಜಿಲ್ಲೆಯಲ್ಲಿ ವಿಶೇಷ ತಂಡವನ್ನು ರಚನೆ ಮಾಡಿ ತಕ್ಷಣದಿಂದ ಕಾರ್ಯ ಪ್ರವೃತ್ತರಾಗಬೇಕು ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಶನಿವಾರ ಮನವಿ ಸಲ್ಲಿಸಲಾಯಿತು.ಶನಿವಾರ ನಗರದ ಡಾಕ್ಟರ್ ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ಮತ್ತು ಜಿಲ್ಲೆಯಲ್ಲಿ ಅಕ್ರಮವಾಗಿ ನಕಲಿ ಭೂ-ದಾಖಲೆ ಸೃಷ್ಟಿ ಮಾಡಿ ಜನರನ್ನು ವಂಚಿಸುತ್ತಿರುವ ದೊಡ್ಡ ಪ್ರಮಾಣದಲ್ಲಿ ಬೀಡುಬಿಟ್ಟಿದ್ದು ಇದನ್ನು ಜಿಲ್ಲಾಡಳಿತ ತಕ್ಷಣವೇ ಮಟ್ಟಹಾಕಬೇಕು. ಇದರಲ್ಲಿ ನೂರಾರು ಜನ ತಮ್ಮ ಆಸ್ತಿಪಾಸ್ತಿಗಳನ್ನು ಕಳೆದುಕೊಂಡಿದ್ದಾರೆ. ಇವತ್ತಿನ ದಿನಮಾನದಲ್ಲಿ ಇದರ…
