Author: editor.udayarashmi@gmail.com

“ವೀಣಾಂತರಂಗ” – ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ-ಗದಗ ದೇವರನ್ನು ಮತ್ತು ಬೆರಳೆಣಿಕೆಯ ಒಬ್ಬಿಬ್ಬರನ್ನು ಹೊರತುಪಡಿಸಿ ವ್ಯಕ್ತಿ ಪೂಜೆ ಮಾಡಲೇಬಾರದು ಎಂಬ ಭಾವ ನನ್ನದು. ತಂದೆ ತಾಯಿಯನ್ನು ಪ್ರೀತಿಸಬೇಕು, ಅವರಲ್ಲೂ ಕೂಡ ಮನುಷ್ಯ ಸಹಜವಾದ ರಾಗ ದ್ವೇಷಗಳಿರುವುದರಿಂದ ಅವರ ವ್ಯಕ್ತಿತ್ವದ ಎಲ್ಲ ಒಳಿತು ಕೆಡುಕುಗಳೊಂದಿಗೆ ಅವರನ್ನು ಗೌರವಿಸಬೇಕು. – ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ-ಗದಗ

Read More

ವಿಜಯಪುರ: ಎನ್.ಆರ್. ಕುಲಕರ್ಣಿ ಅವರ “ಬಕುಲ ಪುಷ್ಪ” ಅಭಿನಂದನಾ ಗ್ರಂಥ ಬಿಡುಗಡೆ ಹಾಗೂ ಗ್ರಂಥ ತುಲಾಭಾರ ಸಮಾರಂಭವನ್ನು ನಗರದ ಕಂದಗಲ್ಲ ಶ್ರೀ ಹನುಮಂತರಾಯ ರಂಗಮಂದಿರ, ಸ್ಟೇಷನ್ ರಸ್ತೆ, ವಿಜಯಪುರದಲ್ಲಿ ೧೬-೦೬-೨೦೨೪ ರಂದು ರವಿವಾರ ಬೆಳಿಗ್ಗೆ ೧೦.೦೦ ಗಂಟೆಗೆ ಜರುಗಲಿದೆ.ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಶ್ರೀಕಂಠ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಗುರು ಬಮ್ಮಲಿಂಗೇಶ್ವರ ಬೃಹನ್ಮಠ, ನಾಗಣಸೂರ ವಹಿಸುವರು. ಮಾಜಿ ಸಚಿವರಾದ ಅಪ್ಪಾಸಾಹೇಬ ಎಮ್. ಪಟ್ಟಣಶೆಟ್ಟಿ ಉದ್ಘಾಟನೆ ಮಾಡುವರು. ಅಧ್ಯಕ್ಷತೆಯನ್ನು ಹಿರಿಯ ಸಂಶೋಧಕ ಡಾ. ಕೃಷ್ಣ ಕೋಲ್ಹಾರ ಕುಲಕರ್ಣಿ ವಹಿಸುವರು. ವಿಶ್ರಾಂತ ಇಂಗ್ಲೀಷ ಪ್ರಾಧ್ಯಾಪಕರಾದ ಡಾ.ಆರ್.ಕೆ. ಕುಲಕರ್ಣಿ ಇವರು ಗ್ರಂಥ ಬಿಡುಗಡೆ ಮಾಡುವರು. ವಿಶ್ರಾಂತ ಪ್ರಾಚಾರ್ಯರಾದ ಜಿ.ಆರ್. ಕುಲಕರ್ಣಿ ಗ್ರಂಥಾವಲೋಕನ ನೆರವೇರಿಸುವರು ಎಂದು ಎನ್.ಆರ್. ಕುಲಕರ್ಣಿ ಅವರ ಅಭಿನಂದನ ಸಮಿತಿ ಹಾಗೂ ಅಭಿನಂದನ ಗ್ರಂಥ ಸಂಪಾದಕ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ನಗರದ ಮನಗೂಳಿ ಅಗಸಿ ಬಡಾವಣೆಯ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಡಾ ಬಿ ಆರ್ ಅಂಬೇಡ್ಕರ್ ಯುವಕ ಸಂಘದಿಂದ ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಶುಕ್ರವಾರ ೨೫ನೇ ದಿನ ಹಾಗೂ ೩ನೇ ದಿನ ಸರದಿ ಉಪವಾಸ ಸತ್ಯಾಗ್ರಹ ಪೂರೈಸಿದೆ. ಇಂದು ಹೋರಾಟಗಾರರಾದ ರೋಹಿತ ಮಲಕಣ್ಣನವರ ಹಾಗೂ ಮಂಜುನಾಥ ಶಿವಶರಣ ಅವರು ಸರದಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.ಈ ಸಂದರ್ಭದಲ್ಲಿ ಮುಖಂಡ ಮಹೇಶ ಚಲವಾದಿ ಮಾತನಾಡಿ, ಕಳೆದ ೨೫ ದಿನಗಳಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಾಗೂ ಕಳೆದ ೩ ದಿನಗಳಿಂದ ಸರದಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರೂ ಕೂಡಾ, ರಾಜ್ಯ ಸರ್ಕಾರ ದಿವ್ಯ ನಿರ್ಲಕ್ಷö್ಯ ತೋರುವ ಮೂಲಕ ದಲಿತ ಜನಾಂಗಕ್ಕೆ ಘೋರ ಅನ್ಯಾಯವೆಸಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಇಲ್ಲಿಯವರೆಗೆ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ರಾಜ್ಯ ಸರ್ಕಾರದ ಯಾವೊಬ್ಬ ಪ್ರತಿನಿಧಿಯು ಕೂಡ ನಮ್ಮ ಸಮಸ್ಯೆಯನ್ನು ಆಲಿಸಲು ಬಾರದೆ ಇರುವುದು ಇವರ ದಲಿತ ವಿರೋಧಿ ನೀತಿಯನ್ನು ಎತ್ತಿ ತೋರಿಸುತ್ತದೆ ಎಂದರು.ಈ ಸಂದರ್ಭದಲ್ಲಿ ರಾಜು ಕಾಖಂಡಕಿ,…

Read More

ವಿಜಯಪುರ: ಸಂಸದ ರಮೇಶ ಜಿಗಜಿಣಗಿಯವರನ್ನು ಕೇಂದ್ರ ಸಂಪುಟ ದರ್ಜೆಯ ಸಚಿವ ಸ್ಥಾನಕ್ಕೆ ಪರಿಗಣಿಸಬೇಕೆಂದು ಭಾರತಿಯ ಜನತಾ ಪಕ್ಷದ ಎಸ್.ಸಿ.ಮೋರ್ಚಾ ಉಪಾದ್ಯಕ್ಷ ವಿಠ್ಠಲ ನಡುವಿನಕೇರಿ ಮನವಿ ಮಾಡಿದ್ದಾರೆ.ಈ ಕುರಿತು ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿದ ಅವರು, ರಮೇಶ ಜಿಗಜಿಣಗಿಯವರು ರಾಜಕೀಯ ಜೀವನದಲ್ಲಿ ಹಲವಾರು ಹುದ್ದೆಗಳನ್ನು ನಿಭಾಯಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಇವರು ಕಂದಾಯ ಅಬಕಾರಿ, ಸಮಾಜ ಕಲ್ಯಾಣ ಸಚಿವರಾಗಿ, ಗೃಹ ಸಚಿವರಾಗಿ ಹಲವಾರು ಮಹತ್ತರ ಅಭಿವೃದ್ದಿ ಕೆಲಸಗಳನ್ನು ಮಾಡಿದ ಹೆಮ್ಮೆ ಇವರದು ಇನ್ನು ಸತತವಾಗಿ ೭ ಬಾರಿ ಸಂಸದರಾಗಿ ಆಯ್ಕೆಯಾಗಿ ಬಿಜೆಪಿಗೆ ತಮ್ಮ ಆದ ಕೊಡುವೆಯನ್ನು ನೀಡಿದ್ದಾರೆ. ದಕ್ಷಿಣ ಭಾರತದಲ್ಲಿಯೇ ದಲಿತ ನಾಯಕರಾಗಿ ಇವರು ಆಯ್ಕೆಗೊಂಡಿರುವದು ಎಲ್ಲ ದಲಿತ ಸಮುದಾಯಕ್ಕೆ ಹಾಗೂ ಇನ್ನುಳಿದ ಸಮದಾಯಕ್ಕೆ ಹರ್ಷವನ್ನುಂಟು ಮಾಡಿದೆ.ಇವರು ತಮ್ಮ ರಾಜಕೀಯ ಜೀವನದಲ್ಲಿ ಅಜಾತ ಶತ್ರು ಆಗಿ ಹೊರಹೊಮ್ಮಿದ ನಾಯಕರಾಗಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಬಿಜೆಪಿಯಲ್ಲಿ ಕಟ್ಟಿ ಬೆಳೆಸುವಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಈ ಹಿಂದೆ ಕೇಂದ್ರ ಸಚಿವರಾದ ಸಮಯದಲ್ಲಿ ೧ ಲಕ್ಷ ಕೋಟಿ…

Read More

ನೀಟ್ ಪರೀಕ್ಷೆ ಅವ್ಯವಹಾರ ಕುರಿತು ನ್ಯಾಯಾಂಗ ತನಿಖೆಗೆ ದವಿಪ ಆಗ್ರಹ ವಿಜಯಪುರ: ನಗರದಲ್ಲಿರುವ ಗಾಂಧಿ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ರ್‍ಯಾಲಿ ಮೂಲಕ ನೀಟ್ ಪ್ರವೇಶ ಪರೀಕ್ಷೆಯಲ್ಲಿ ನಡೆದ ಭ್ರಷ್ಟಾಚಾರವನ್ನು ವಿರೋಧಿಸಿ ದಲಿತ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳ ಮೂಲಕ ಜಿಲ್ಲಾ ಅಧಿಕಾರಿಗಳಿಗೆ ಮನವಿ ಮಾಡಿದರು.ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಅಕ್ಷಯ್ ಕುಮಾರ್ ಮಾತನಾಡಿ, ಜೂನ್ ೪ ರಂದು ಪ್ರಕಟಗೋಂಡ ನೀಟ್ ಪರೀಕ್ಷೆ ಫಲಿತಾಂಶದ ಭ್ರಷ್ಟಾಚಾರದ ಪಾರದರ್ಶಕತೆಯ ಕುರಿತು ದೇಶವ್ಯಾಪ್ತಿ ವಿದ್ಯಾರ್ಥಿಗಳು ಹಾಗೂ ಪಾಲಕರು ಹಲವಾರು ಪ್ರಶ್ನೆಗಳನ್ನು ಎತ್ತಿದ್ದಾರೆ. ಯು.ಜಿ.ಸಿ. ಪರೀಕ್ಷಾ ಮಾರ್ಗಸೂಚಿ ಅನ್ವಯ ಅಂಕಗಳನ್ನು ನೀಡಿದ್ದಲ್ಲಿ ವಿದ್ಯಾರ್ಥಿಗಳು ಪಡೆಯಬಹುದಾದ ಅಂಕಗಳೊಂದಿಗೆ ಪ್ರಸ್ತುತ ಒಂದಿಷ್ಟು ವಿದ್ಯಾರ್ಥಿಗಳು ಪಡೆದಿರುವ ಅಂಕಗಳು ಹೊಂದಾಣಿಕೆ ಆಗುತ್ತಿಲ್ಲ.ಕೆಲವು ವಿದ್ಯಾರ್ಥಿಗಳಿಗೆ ಹೆಚ್ಚುವರಿ ಅಂಕ ನೀಡಿರುಹುದಾಗಿ ಎನ್.ಟಿ.ಎ ಸಮಾಜಿಸಿ ನೀಡಿದೆ. ಆದರೆ ಹೆಚ್ಚುವರಿ ಶುಲ್ಕಗಳನ್ನು ನೀಡಿರುವ ಮಾನದಂಡವು ಸಂಪೂರ್ಣವಾಗಿ ಪಕ್ಷಪಾತಿಯಾಗಿದೆ. ಈ ವರ್ಷ ಪ್ರಕತಿಸಲಾಗಿದ್ದ ಮಾರ್ಗಸುಚಿ ಅನ್ವಯ ಹೆಚ್ಚುವರಿ ಅಂಕಗಳನ್ನು ನೀಡಲು ಅವಕಾಶವಿಲ್ಲ ಆಚರ್ಯಕರವೇಂಬಂತೆ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸಮಾನ…

Read More

ದೇವರ ಹಿಪ್ಪರಗಿ: ಕಳೆದ ಹಲವಾರು ದಿನಗಳಿಂದ ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಸಮರ್ಪಕವಾಗಿ ಪೂರೈಸಲು ಅಗತ್ಯ ದಾಸ್ತಾನು ಕ್ರಮ ಕೈಗೊಳ್ಳಬೇಕು ಎಂದು ಹುಣಶ್ಯಾಳ ಗ್ರಾಪಂ ಮಾಜಿ ಅಧ್ಯಕ್ಷೆ ಬಂಗಾರೇಮ್ಮ ಮಾನಪ್ಪ ದೊಡಮನಿ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿ, ಆಗ್ರಹಿಸಿದ್ದಾರೆ.ಮನವಿ ಸಲ್ಲಿಸಿ ಮಾತನಾಡಿ, ಯಾವುದೇ ಕಾರಣಕ್ಕೂ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಕೊರತೆ ಉಂಟಾಗದಂತೆ ತಾಲೂಕು ಕೃಷಿ ಅಧಿಕಾರಿಗಳು ಹಾಗೂ ತಾಲೂಕು ಆಡಳಿತ ಕ್ರಮ ಕೈಗೊಳ್ಳಬೇಕು, ಅಗತ್ಯ ಪ್ರಮಾಣದಲ್ಲಿ ದಾಸ್ತಾನು ಸಂಗ್ರಹಿಸುವ ಕಾರ್ಯವಾಗಬೇಕು, ತಾಲೂಕಿನ ಕೊನೆಯ ಭಾಗದ ರೈತರಿಗೂ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದರು.ಬೀಜ ರಸಗೊಬ್ಬರಗಳಿಗೆ ಸರ್ಕಾರ ನಿಗದಿ ಮಾಡಿದ ದರಕ್ಕಿಂತ ಹೆಚ್ಚಿನ ಹಣವನ್ನು ರೈತರಿಂದ ವಸೂಲಾತಿ ಮಾಡುತ್ತಿರುವುದು ಕಂಡು ಬಂದರೆ ಅಂತಹ ಅಧಿಕಾರಿ, ಸಿಬ್ಬಂದಿ ಹಾಗೂ ಮಧ್ಯವರ್ತಿಗಳ ವಿರುದ್ಧ ಹಾಗೂ ನಕಲಿ ಬೀಜ ಹಾಗೂ ರಸಗೊಬ್ಬರಗಳ ಮಾರಾಟ ಮಾಡುವವರ ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು.ರೆಂಟೆ ಸಮಗೊಳಿಸುವ, ಬಿತ್ತನೆಗೆ ಅನುಕೂಲವಾಗುವಂತಹ ಕೃಷಿ ಯಂತ್ರೋಪಕರಣಗಳನ್ನು…

Read More

ಕೊಲ್ಹಾರ: ಸಮಾಜದಲ್ಲಿ ರಾಜಕೀಯ ಗಣ್ಯರು ವ್ಯಾಪಾರಸ್ಥರು ಉದ್ಯಮಿಗಳು, ಯುವ ನೇತಾರರು ತಮ್ಮಗಳ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಡಂಬರದ ಸಾರ್ವಜನಿಕರಿಗೆ ಪ್ರತಿಷ್ಟೆ ತೋರಿಸುವ ಸಲುವಾಗಿ ಆಚರಣೆ ಮಾಡಿಕೊಳ್ಳುವ ಇಂದಿನ ದಿನಮಾನಗಳಲ್ಲಿ ಕೊಲ್ಹಾರದ ದೇಸಗತಿ ಮನೆತನದ ಯುವ ಮುಖಂಡರಾದ ವಿನೀತಕುಮಾರ ದೇಸಾಯಿಯವರು ತಮ್ಮ ೩೫ನೇ ಹುಟ್ಟುಹಬ್ಬವನ್ನು ಶುಕ್ರವಾರ ವಿಶಿಷ್ಟ ರೀತಿಯಲ್ಲಿ ಆಚರಣೆ ಮಾಡಿಕೊಂಡಿದ್ದಾರೆ.ನಸುಕಿನ ಜಾವ ನಾಲ್ಕು ಘಂಟೆಗೆ ಬಾಗಲಕೋಟ ಜಿಲ್ಲೆಯ ಮುಚಖಂಡಿ ಗ್ರಾಮದಲ್ಲಿರುವ ಬಸವೇಶ್ವರ ಸಂಸ್ಥೆಯ ಗೋಶಾಲೆಗೆ ತೆರಳಿ ಸುಮಾರು ೧೧ ಸಾವಿರ ರೂಪಾಯಿಯ ಮೇವು ಖರೀದಿ ಮಾಡಿ ೧೬೦ ಜಾನುವಾರುಗಳಿಗೆ ತಾವೇ ಖುದ್ದಾಗಿ ಮೇವಿನ ಆಹಾರವನ್ನು ಪೂರೈಕೆ ಮಾಡಿದರು ಅದರಂತೆ ಬೆಂಗಳೂರಿನ ಇಸ್ಕಾನ್ ಸಂಸ್ಥೆಯವರು ನಡೆಸಿಕೊಂಡು ಬರುತ್ತಿರುವ ಅನಾಥಾಶ್ರಮಕ್ಕೆ ೧೧ ಸಾವಿರ ರೂಪಾಯಿಗಳ ದೇಣಿಗೆಯನ್ನು ನೀಡಿದರು. ಬಾದಾಮಿ ಬನಶಂಕರಿ ದೇವಸ್ಥಾನಕ್ಕೆ ತೆರಳಿ ಆಡಳಿತ ಮಂಡಳಿಗೆ ದೇವಸ್ಥಾನದ ಜೀರ್ಣೋದ್ದಾರಕ್ಕಾಗಿ ಸಹಾಯ ಮಾಡಿರುವದು ಅದ್ದೂರಿಯಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವ ಜನರಿಗೆ ಇವರು ಮಾಡಿರುವ ಕಾರ್ಯ ಆದರ್ಶ ಪ್ರಾಯವಾಗಿದೆ.ಕುಟುಂಬವ್ಯವಸ್ಥೆಯಲ್ಲಿ ಬದುಕುವಾಗ ಸಮಾಜದ ಮಧ್ಯದಲ್ಲಿ ನಾವುಗಳು ನಡೆದುಕೊಳ್ಳುವ ರೀತಿ ಪರೋಪಕಾರಂ ಇದಂ…

Read More

ವಿಜಯಪುರ: ಅಭಿಮಾನಿಯನ್ನೇ ಕೊಲ್ಲುವ ಮೃಗಿಯ ಭಾವನೆ ಹೊಂದಿರುವ ನಟ ದರ್ಶನ ಪ್ರಭಾವಿ ರಾಜಕಾರಣಿಗಳ ಆಪ್ತರಾಗಿದ್ದು ಸಾಕ್ಷಿ ನಾಶದ ಜೊತೆಯಲ್ಲಿ ಪ್ರಕರಣದ ತನಿಖೆಯಲ್ಲಿ ಪ್ರಭಾವ ಬೀರುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಅದು ಅಲ್ಲದೆ ನಟ ದರ್ಶನರವರು ತಮ್ಮನ್ನು ಈ ಪ್ರಕರಣದಿಂದ ಕೈಬಿಟ್ಟರೆ ಕೇಳಿದಷ್ಟು ಹಣ ಕೊಡುವುದಾಗಿ ಪೊಲೀಸ್ ಅಧಿಕಾರಿಗಳಿಗೆ ಆಮಿಷವೊಡ್ಡಿರುವುದು ಮಾಧ್ಯಮಗಳಲ್ಲಿ ಬಿತ್ತರಗೊಂಡಿದೆ. ಹಾಗಾಗಿ ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸಬೇಕೆಂದು ಕೆಆರ್‌ಎಸ್ ಪಕ್ಷವು ವಿಜಯಪುರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ, ಗಣಪತಿ ರಾಠೋಡ, ದೀಪಾ ಮರನೂರ, ದುರ್ಗಪ್ಪ ಬೂದಿಹಾಳ, ಲಕ್ಷ್ಮಣ ಚಡಚಣ, ರಾಕೇಶ ಇಂಗಳಗಿ, ಪ್ರವೀಣ ಕನಸೇ ಇತರರು ಇದ್ದರು.

Read More

ಎಸ್ಸೆಸ್ಸೆಲ್ಸಿ ಪರೀಕ್ಷೆ -೨ ೫೨೬ ವಿದ್ಯಾರ್ಥಿಗಳ ಗೈರು ವಿಜಯಪುರ: ಶುಕ್ರವಾರ ನಡೆದ ಎಸ್ಸೆಸೆಲ್ಸಿ ಪರೀಕ್ಷೆ -೨ರ ಪ್ರಥಮ ಭಾಷೆ ವಿಷಯದಲ್ಲಿ ಜಿಲ್ಲೆಯ ಒಟ್ಟು ೪,೭೭೭ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು. ಇದರಲ್ಲಿ ೪,೨೫೧ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ೫೨೬ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ಅವರು ಜೂ.೧೯ರಿಂದ ೨೧ರವರೆಗೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಜೂ.೧೯ರಂದು ಬೆಳಿಗ್ಗೆ ೬ಗಂಟೆಗೆ ವಿಜಯಪುರಕ್ಕೆ ಆಗಮಿಸಿ, ಅಂದು ಬೆಳಿಗ್ಗೆ ೮ ರಿಂದ ರಾತ್ರಿ ೮ ಗಂಟೆಯವರೆಗೆ ವಸತಿ ಶಾಲೆ, ವಸತಿ ನಿಲಯ, ಜಿಲ್ಲಾ ಆಸ್ಪತ್ರೆ ಅಂಗನವಾಡಿ, ಮಕ್ಕಳ ಪಾಲನಾ ಸಂಸ್ಥೆ ಹಾಗೂ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಜೂ.೨೦ರಂದು ಬೆಳಿಗ್ಗೆ ೧೦-೩೦ ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ಮಕ್ಕಳ ರಕ್ಷಣಾ ವ್ಯವಸ್ಥೆ ಕುರಿತು ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ ೬ ಗಂಟೆಗೆ ವಿಜಯಪುರದಿಂದ ಸಿಂದಗಿಗೆ ಪ್ರಯಾಣ ಬೆಳೆಸಿ, ರಾತ್ರಿ ೮ ಗಂಟೆಗೆ ಸಿಂದಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪರಿಶೀಲನೆ ನಡೆಸಿ, ಮಕ್ಕಳೊಂದಿಗೆ ಊಟ ಮತ್ತು ವಾಸ್ತವ್ಯ ಮಾಡಲಿದ್ದಾರೆ.ಜೂ.೨೧ರಂದು ಬೆಳಿಗ್ಗೆ ೬ ಗಂಟೆಗೆ ಮಕ್ಕಳೊಂದಿಗೆ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಬೆಳಿಗ್ಗೆ ೮ ಗಂಟೆಗೆ ಸಿಂದಗಿಯಿಂದ ಬೀದರ್…

Read More