Author: editor.udayarashmi@gmail.com

ವಿಜಯಪುರ: ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಸರ್ಕಾರದ ಕಾರ್ಯದರ್ಶಿಗಳಾದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಜೂ.೧೪ ರಿಂದ ೧೬ರವರೆಗೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಜೂ.೧೪ರಂದು ರಾತ್ರಿ ವಿಜಯಪುರಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಜೂ.೧೫ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯುವ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಸ್ಥಳೀಯ ಪರಿಶೀಲನೆ ನಡೆಸಿ, ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ.ಜೂ.೧೬ರಂದು ಬೆಳಿಗ್ಗೆ ೧೦ ಗಂಟೆಗೆ ಸ್ಥಳೀಯ ಪರಿಶೀಲನೆ ನಡೆಸಿ ನಂತರ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ಮುಖ್ಯಮಂತ್ರಿ ಸಿದ್ಧರಾಮಯ್ಯ ವಿಜಯಪುರ ಜಿಲ್ಲಾ ಪ್ರವಾಸ ವಿಜಯಪುರ: ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜೂ.೧೬ ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಜೂ.೧೬ರಂದು ಬೆಳಿಗ್ಗೆ ೧೦ ಗಂಟೆಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಪ್ರಯಾಣ ಬೆಳೆಸಿ, ೧೦-೫೦ಕ್ಕೆ ಬಳ್ಳಾರಿ ಜಿಲ್ಲೆ ತೋರಣಗಲ್ಲು ಏರಸ್ಟ್ರಿಪ್‌ಗೆ ಆಗಮಿಸಿ ೧೦-೫೫ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಹೊರಟು ಮಧ್ಯಾಹ್ನ ೧೨-೧೦ಕ್ಕೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಗ್ರಾಮದ ಹೆಲಿಪ್ಯಾಡ್‌ಗೆ ಆಗಮಿಸಿ, ಇಂಚಗೇರಿ ಮಠದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಪುಷ್ಪಾರ್ಚನೆ ಕಾರ್ಯಕ್ರಮ ಹಾಗೂ ನಿಜರಾಜಯೋಗಿ ಶ್ರೀ ಸಮರ್ಥ ಸದ್ಗುರು ಶ್ರೀ ಮಾಧವಾನಂದ ಪ್ರಭುಗಳ ದೇವಸ್ಥಾನ ಲೋಕಾರ್ಪಣೆ, ಕಳಸಾರೋಹಣ ಮತ್ತು ೪೪ನೇ ಪುಣ್ಯತಿಥಿ ಸಪ್ತಾಹದಲ್ಲಿ ಭಾಗವಹಿಸಲಿದ್ದಾರೆ.ಮಧ್ಯಾಹ್ನ ೩ ಗಂಟೆಗೆ ಇಂಚಗೇರಿ ಹೆಲಿಪ್ಯಾಡ್‌ದಿಂದ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ಪೂರ್ವಭಾವಿ ಸಿದ್ಧತೆ ಕುರಿತು ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ – ಪರಿಶೀಲನೆ ವಿಜಯಪುರ: ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಗ್ರಾಮಕ್ಕೆ ಜೂ.೧೬ ರಂದು ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಆಗಮಿಸಲಿರುವ ಹಿನ್ನಲೆಯಲ್ಲಿ ಜೂ.೧೪ರ ಶುಕ್ರವಾರ ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಅವರು ಸ್ಥಳಕ್ಕೆ ಭೇಟಿ ನೀಡಿ ಪೂರ್ವಸಿದ್ಧತೆ ಕುರಿತು ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದರು.ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸ್ಥಳಕ್ಕೆ ಭೇಟಿ ನೀಡಿ ಕೈಗೊಂಡಿರುವ ಸಿದ್ಧತೆಗಳ ಪರಿಶೀಲನೆ ನಡೆಸಿ, ಮುಖ್ಯಮಂತ್ರಿಗಳ ಆಗಮನ ಹಿನ್ನಲೆಯಲ್ಲಿ ಎಲ್ಲ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಮುಖ್ಯಮಂತ್ರಿಗಳ ಕಾರ್ಯಕ್ರಮದ ಸಂದರ್ಭದಲ್ಲಿ ಯಾವುದೇ ಲೋಪವಾಗದಂತೆ ಅಗತ್ಯ ಭದ್ರತಾ ವ್ಯವಸ್ಥೆ, ಹೆಲಿಪ್ಯಾಡ್ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಇಂಡಿ ಉಪವಿಭಾಗಾಧಿಕಾರಿ ಆಬಿದ ಗದ್ಯಾಳ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ರಾಜು ಮುಜುಮದಾರ ಸೇರಿದಂತೆ…

Read More

ಇಂಡಿ: ತಾಲೂಕಿನ ಅರಣ್ಯ ಪ್ರದೇಶ ಸಾವಳಸಂಗ ಗುಡ್ಡಕ್ಕೆ ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ ನೀಡಿದರು.ಅಲ್ಲಿ ಹೊಸದಾಗಿ ನಿರ್ಮಿಸುವ ಅಂತರ ರಾಷ್ಟ್ರೀಯ ಗುಡ್ಡಗಾಡು ಸೈಕ್ಲಿಂಗ್ ಪಾರ್ಕ ಕುರಿತು ಸೈಕ್ಲಿಂಗ್ ಸಂಘದ ಅಧ್ಯಕ್ಷ ದೇಸಾಯಿ ಇವರ ಜೊತೆ ಚರ್ಚೆ ನಡೆಸಿ ಸ್ಥಳ ಪರಿಶೀಲನೆ ನಡೆಸಿದರು.ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಸಾವಳಸಂಗ ಅರಣ್ಯ ಪ್ರದೇಶವನ್ನು ಪ್ರವಾಸಿ ತಾಣವಾಗಿ ಮಾಡಬೇಕು. ಟ್ರೀ ಪಾರ್ಕ, ಜಿಪಲಾಯಿನ್, ರೋಪವಾಕ್ ಮತ್ತು ಸಾಹಸಮಯ ಕ್ರೀಡೆಗಳಿಗೆ ಪ್ರೋತ್ಸಾಹಿಸುವ ಕ್ರೀಡಾ ಸ್ಥಳಗಳನ್ನು ನಿರ್ಮಿಸಲು ಕೇಳಿಕೊಂಡರು.ಸಾವಳಸಂಗದಲ್ಲಿ ಅರಣ್ಯ ಪ್ರದೇಶ ಹೆಚ್ಚಿಸಲು ಖಾಸಗಿಯವರು ತಮ್ಮ ಜಮೀನು ಮಾರುವವರಿದ್ದರೆ ಈ ಕುರಿತು ಪರಿಶೀಲಿಸಲು ತಿಳಿಸಿದರು.ನಂತರ ಅಮೃತ ಸರೋವರ ಪ್ರದೇಶವನ್ನು ವೀಕ್ಷಿಸಿದರು.ಜಿ.ಪಂ ಸಿಇಒ ರಿಷಿ ಆನಂದ, ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ರಿಸಿಕೇಶ ಭಗವಾನ, ಇಂಡಿ ಕಂದಾಯ ಉಪವಿಬಾಗಾಧಿಕಾರಿ ಅಬೀದ್ ಗದ್ಯಾಳ, ವಲಯ ಅರಣ್ಯಾಧಿಕಾರಿ ಮಂಜುನಾಥ ಧುಳೆ, ಇಒ ಸಂಜಯ ಖಡಗೇಕರ, ಚಡಚಣ ತಹಸೀಲ್ದಾರ ಸಂಜಯ ಇಂಗಳೆ,ಸಾಹಿಲ್ ಧನಶೆಟ್ಟಿ, ವಿನೋದ ಸಜ್ಜನ, ರಾಮಗೌಡ ಸರಬಡಗಿ, ಪಿಡಿಒ ಸಿದ್ದು ಲೋಣಿ, ಗ್ರಾ.ಪಂ…

Read More

ಇಂಡಿ: ವಿಶ್ವ ರಕ್ತದಾನಿಗಳ ದಿನದ ಜಾಗತಿಕ ಧ್ಯೇಯವು ಪ್ರತಿ ವರ್ಷವೂ ತಮ್ಮ ರಕ್ತವನ್ನು ತಮಗೆ ತಿಳಿದಿಲ್ಲದ ಜನರಿಗಾಗಿ ದಾನ ಮಾಡುವ ನಿಸ್ವಾರ್ಥ ವ್ಯಕ್ತಿಗಳನ್ನು ಗುರುತಿಸುತ್ತದೆ ಎಂದು ಡಾ. ಪಿ.ಕೆ. ರಾಠೋಡ ಹೇಳಿದರು.ಪಟ್ಟಣದ ಜಿ.ಆರ್.ಗಾಂಧಿ ಕಲಾ, ವಾಯ್.ಎ.ಪಾಟೀಲ ವಾಣಿಜ್ಯ ಹಾಗೂ ಎಮ್.ಪಿ.ದೋಶಿ ವಿಜ್ಞಾನ ಪದವಿ ಮಹಾವಿದ್ಯಾಲಯದಲ್ಲಿ ರೆಡ್ ಕ್ರಾಸ್, ಸ್ಕೌಟ್ಸ್ ಗೈಡ್ಸ್, ಎನೆಸ್ಸೆಸ್ ಮತ್ತು ಜೀವಶಾಸ್ತ್ರ ವಿಭಾಗ ಅಡಿದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಪ್ರತಿ ವರ್ಷ ಪ್ರಪಂಚದಾದ್ಯಂತದ ದೇಶಗಳು ಜೂನ್ ೧೪ ರಂದು ವಿಶ್ವ ರಕ್ತದಾನಿಗಳ ದಿನವನ್ನು ಆಚರಿಸುತ್ತವೆ. ಸುರಕ್ಷಿತ ರಕ್ತ ಮತ್ತು ರಕ್ತದ ಉತ್ಪನ್ನಗಳ ಅಗತ್ಯತೆಯ ಅರಿವು ಮೂಡಿಸಲು ಮತ್ತು ಸ್ವಯಂಪ್ರೇರಿತ, ಪಾವತಿಸದ ರಕ್ತದ ದಾನಿಗಳಿಗೆ ತಮ್ಮ ಜೀವ ಉಳಿಸುವ ರಕ್ತಕ್ಕಾಗಿ ಧನ್ಯವಾದಗಳನ್ನು ನೀಡಲು ಈವೆಂಟ್ ಕಾರ್ಯನಿರ್ವಹಿಸುತ್ತದೆ. ರೋಗಿಗಳಿಗೆ ಸುರಕ್ಷಿತ ರಕ್ತ ಮತ್ತು ರಕ್ತದ ಉತ್ಪನ್ನಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಪ್ರವೇಶವನ್ನು ನೀಡುವ ರಕ್ತದ ಸೇವೆಯು ಪರಿಣಾಮಕಾರಿ ಆರೋಗ್ಯ ವ್ಯವಸ್ಥೆಯ ಪ್ರಮುಖ ಅಂಶವಾಗಿದೆ ಎಂದರು.ಶ್ವೇತಾ ಕಾಂತ, ಮಲ್ಲಿಕಾರ್ಜುನ ಕೊಣದೆ, ಡಾ. ಶ್ರೀಕಾಂತ…

Read More

ಮೆಟ್ರಿಕ್ ನಂತರದ ಹಿಂದುಳಿದ ವರ್ಗದ ವಸತಿನಿಲಯದಲ್ಲಿನ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ ಇಂಡಿ: ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಮೆಟ್ರಿಕ್ ನಂತರದ ಹಿಂದುಳಿದ ವರ್ಗದ ವಸತಿನಿಲಯದ ಬಾಲಕಿಯರು ವಸತಿ ನಿಲಯ ಎದುರಿಗೆ ವಿಜಯಪುರ ರಸ್ತೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿ ಘಟಕದ ನೇತೃತ್ವದ ಅಡಿ ರಾಸ್ತಾರೋಕೊ ಮಾಡಿದರು.ವಸತಿ ನಿಲಯದಲ್ಲಿ ಕಳೆದ ಎಂಟು ದಿನಗಳಿಂದ ನೀರು ಬಂದಿಲ್ಲ. ವಸತಿ ನಿಲಯದಲ್ಲಿ ಸ್ವಚ್ಛತೆ ಎಂಬುದು ಇಲ್ಲ. ಅಡುಗೆ ಮನೆಯಲ್ಲಿಯೇ ಊಟ ಮಾಡಿ ಉಳಿದಿದ್ದು ಅಲ್ಲಿಯೇ ಒಗೆಯುತ್ತಾರೆ. ತಾಟುಗಳಲ್ಲಿ ಉಳಿದಿದ್ದು ಅಲ್ಲಯೇ ಹಾಕಿ ತೊಳೆಯುತ್ತಾರೆ. ಹೀಗಾಗಿ ಅಡುಗೆ ಮನೆ ಹೊಲಸು ನಾರುತ್ತಿರುತ್ತದೆ. ಅಹಾರ ದಾನ್ಯಗಳು ಮತ್ತು ತರಕಾರಿ ಸಾಮಗ್ರಿಗಳು ಕಳಪೆ ಮಟ್ಟದಿಂದ ಕೂಡಿರುತ್ತವೆ. ಕೆಲವೊಂದು ಅಹಾರ ಧ್ಯಾನ್ಯಗಳಲ್ಲಿ ನುಸಿ ಮತ್ತು ಕಿಡೆಗಳಿದ್ದರೂ ಹಾಗೇ ಸ್ವಚ್ಛ ಮಾಡದೆ ಅಡುಗೆ ಮಾಡುತ್ತಾರೆ. ಸ್ನಾಹ ಗೃಹಗಳು ಸ್ವಚ್ಛತೆಯಿಂದ ಕೂಡಿಲ್ಲ. ಸ್ವಚ್ಛ ಮಾಡಲು ವಸತಿ ನಿಲಯದ ಅಧಿಕಾರಿಗಳಿಗೆ ತಿಳಿಸಿದರೆ ನಿವೇ ಸ್ವಚ್ಛ ಮಾಡಿಕೊಳ್ಳಿ ಎಂದು ಉತ್ತರಿಸುತ್ತಾರೆ ಎಂದರು.ವಸತಿ ನಿಲಯದ ಮೇಲ್ವಿಚಾರಕರು ಸರಿಯಾಗಿ ಬರುವದಿಲ್ಲ.…

Read More

ಸಿಂದಗಿ: ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ಸಾಹಿತಿ, ಕಥೆಗಾರ, ವಿಮರ್ಶಕ ಡಾ.ಚನ್ನಪ್ಪ ಕಟ್ಟಿ ಅಧಿಕಾರ ಸ್ವೀಕರಿಸಿದರು.

Read More

ಸಿಂದಗಿ: ನಗರದ ಬಿಎನ್‌ಬಿ ಫೌಂಡೇಶನ್ ವತಿಯಿಂದ ಜೂ.೧೬ರಂದು ಭಾನುವಾರ ಬೆಳಿಗ್ಗೆ ೧೦:೩೦ಗಂಟೆಗೆ ವಿಜಯಪುರ ರಸ್ತೆಯ ಮಾಂಗಲ್ಯ ಭವನದಲ್ಲಿ ದಿ.ಭೀಮರಾಯಗೌಡ ಬಿರಾದಾರ, ಮಾಗಣಗೇರಿ ಅವರ ಸ್ಮರಣಾರ್ಥವಾಗಿ ಸಿಂದಗಿ ಮತ್ತು ಆಲಮೇಲ ತಾಲೂಕಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಎನ್‌ಬಿ ಫೌಂಡೇಶನ್ ಅಧ್ಯಕ್ಷ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ ತಿಳಸಿದ್ದಾರೆ.ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಿಜಯಪುರ ವನಶ್ರೀ ಸಂಸ್ಥಾನ ಮಠದ ಡಾ.ಜಯಬಸವ ಕುಮಾರ ಸ್ವಾಮಿಗಳು, ಯಂಕಂಚಿಯ ಅಭಿನವ ರುದ್ರಮುನಿ ಶಿವಾಚಾರ್ಯರು, ಆಲಮೇಲ ವಿರಕ್ತಮಠದ ಜಗದೇವ ಮಲ್ಲಿಬೊಮ್ಮಯ್ಯ ಮಹಾಸ್ವಾಮಿಗಳು, ಕನ್ನೊಳ್ಳಿಯ ಸಿದ್ದಲಿಂಗ ಶಿವಾಚಾರ್ಯರು, ದೇವದುರ್ಗ ವೀರಗೋಟಿ ಮಠದ ಅಡವಿಲಿಂಗ ಮಹಾರಾಜರು ವಹಿಸಿಕೊಳ್ಳಲಿದ್ದಾರೆ. ಉದ್ಘಾಟಕರಾಗಿ ವಿಜಯಪುರ ಸಂಸದ ರಮೇಶ ಜಿಗಜಿಣಗಿ ಆಗಮಿಸಿಲಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ನಿತೀಶ ಪಾಟೀಲ ಗೌರವ ಉಪಸ್ಥಿತಿ ಇರಲಿದ್ದಾರೆ. ಅಧ್ಯಕ್ಷತೆಯನ್ನು ಮಾಜಿ ಶಾಸಕ ರಮೇಶ ಭೂಸನೂರ ವಹಿಸಿಕೊಳ್ಳಲಿದ್ದಾರೆ. ಪೋಟೋ ಪೂಜೆಯನ್ನು ಶಾಸಕ ಅಶೋಕ ಮನಗೂಳಿ ನೆರೆವೇರಿಸುವರು. ಮುಖ್ಯ ಅತಿಥಿಗಳಾಗಿ ಜೇವರ್ಗಿ ಶಾಸಕ ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್, ಇಂಡಿ ಶಾಸಕ ಯಶವಂತ್ರಾಯಗೌಡ…

Read More

ಸಿಂದಗಿ: ಪಟ್ಟಣದ ಯುವಕ ವಿಜಯಪುರ ಜಿಲ್ಲೆಯ ಪ್ರತಿಷ್ಠಿತ ಸಂಸ್ಥೆಯಾದ ಸಿಕ್ಯಾಬ್ ಇನ್ಸಿಟ್ಯೂಟ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಜಲಿ ಕಾಲೇಜಿನ ವಿದ್ಯಾರ್ಥಿ ಅಜರ್‌ಫಜಲ್‌ಅಹಮ್ಮದ ಮುಲ್ಲಾ ೨೦೨೩-೨೪ನೆಯ ಸಾಲಿನ ಎಮ್.ಟೆಕ್ ಪದವಿಯಲ್ಲಿ ಮಹಾವಿದ್ಯಾಲಯಕ್ಕೆ ಪ್ರಥಮ ಸ್ಥಾನದಲ್ಲಿ ಉತ್ತೀರ್ಣಗೊಂಡು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ವಿದ್ಯಾರ್ಥಿಯ ಈ ಸಾಧನೆಗೆ ಸಿಕ್ಯಾಬ್ ಸಂಸ್ಥೆಯ ಅಧ್ಯಕ್ಷ ಎಸ್.ಎ.ಪುಣೆಕರ್, ಕಾರ್ಯದರ್ಶಿ ಎ.ಎಸ್.ಪಾಟೀಲ, ನಿರ್ದೇಶಕ ಮಂಡಳಿ, ಪ್ರಾಚಾರ್ಯ ಡಾ.ಸೈಯದ್ ಅಬ್ಬಾಸಲಿ ಹಾಗೂ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಹರ್ಷವ್ಯಕ್ತಪಡಿಸಿದ್ದಾರೆ.

Read More

– ಸಂತೋಷ್ ರಾವ್ ಪೆರ್ಮುಡ,ಪೆರ್ಮುಡ ಮನೆ, ಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕು, ದ.ಕ ಜಿಲ್ಲೆ. ಒಂದೂರಿನಲ್ಲಿ ಒಬ್ಬಳು ಅಜ್ಜಿ ಕಾಡಿನಂಚಿನಲ್ಲಿ ವಾಸವಾಗಿದ್ದಳು. ಮನೆಯ ದಿನನಿತ್ಯದ ಬಳಕೆಗಾಗಿ ಅಗತ್ಯವಿರುವ ನೀರನ್ನು ತರಲು ಅಜ್ಜಿಯು ನಾಲ್ಕೈದು ಕಿ.ಮೀ ದೂರದಲ್ಲಿದ್ದ ನದಿಯಿಂದ ಕಾಡಿನ ಹಾದಿಯಲ್ಲಿ ಸಾಗಿ ತರಬೇಕಿತ್ತು. ನದಿಯಿಂದ ನೀರನ್ನು ತರಲು ಅಜ್ಜಿಯು ಎರಡು ತಾಮ್ರದ ಬಿಂದಿಗೆಗಳನ್ನು ಬಳಸುತ್ತಿದ್ದಳು. ಈ ಎರಡು ತಾಮ್ರದ ಬಿಂದಿಗಳು ಆತ್ಮೀಯ ಮಿತ್ರರಾಗಿದ್ದು, ನಿತ್ಯವೂ ತಮ್ಮ ಉಭಯ ಕುಶಲೋಪರಿಗಳನ್ನು ಹಂಚಿಕೊಳ್ಳುತ್ತಿದ್ದವು. ಹೀಗಿರುವಾಗ ಒಂದು ಬಾರಿ ಈ ತಾಮ್ರದ ಬಿಂದಿಗೆಗಳ ಪೈಕಿ ಒಂದು ಬಿಂದಿಗೆ ತೂತಾಗಿಬಿಡುತ್ತದೆ ಮತ್ತು ಬಿಂದಿಗೆಯು ತೂತಾಗಿರುವ ವಿಚಾರ ಅಜ್ಜಿಗೆ ತಿಳಿಯುವುದೇ ಇಲ್ಲ.ಹೀಗೆ ದಿನನಿತ್ಯ ಅಜ್ಜಿ ಎರಡೂ ಬಿಂದಿಗೆಗಳಲ್ಲಿ ನೀರನ್ನು ತುಂಬಿಕೊಂಡು ನದಿಯಿಂದ ಕಾಡಿನ ಹಾದಿಯ ಮೂಲಕ ತನ್ನ ಮನೆಗೆ ಬರುತ್ತಿದ್ದಳು. ತೂತಾಗದೆ ಇರುವ ಬಿಂದಿಗೆಯಲ್ಲಿ ನದಿಯಿಂದ ತುಂಬಿಕೊಂಡ ನೀರು ಪೂರ್ತಿಯಾಗಿ ಮನೆಗೆ ಬಂದರೆ, ತೂತಾಗಿದ್ದ ಬಿಂದಿಗೆಯಲ್ಲಿ ತುಂಬಿಕೊಂಡು ಬಂದ ನೀರು ಅರ್ಧಕ್ಕರ್ಧ ದಾರಿಯುದ್ದಕ್ಕೂ ಚೆಲ್ಲಿ ಮನೆಗೆ ಬರುವಾಗ…

Read More