Author: editor.udayarashmi@gmail.com

ವಿಜಯಪುರ: ವಿಜಯಪುರ ನಗರದ ಮನಗೂಳಿ ಅಗಸಿ ಬಡಾವಣೆಯ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಡಾ ಬಿ ಆರ್ ಅಂಬೇಡ್ಕರ್ ಯುವಕ ಸಂಘದಿಂದ ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಗುರುವಾರ ೨೪ನೇ ದಿನ ಪೂರೈಸಿದೆ.ಗುರುವಾರ ಹೋರಾಟಗಾರರಾದ ರೋಹಿತ ಮಲಕಣ್ಣನವರ ಹಾಗೂ ಮಂಜುನಾಥ ಶಿವಶರಣ ಅವರು ಸರದಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.ಈ ಸಂದರ್ಭದಲ್ಲಿ ಮುಖಂಡ ರವಿ ಕಾಖಂಡಕಿ ಮಾತನಾಡಿ, ಕಳೆದ ೨೪ ದಿನಗಳಿಂದ ಅಂಬೇಡ್ಕರ ಭವನ ಕಟ್ಟಲು ಜಾಗಕ್ಕೆ ಆಗ್ರಹಿಸಿ ಅಹೋರಾತ್ರಿ ಧರಣಿ ಹಾಗೂ ಎರಡು ದಿನಗಳಿಂದ ಸರದಿ ಸತ್ಯಾಗ್ರಹ ನಡೆಸುತ್ತಿದ್ದರೂ ಕೂಡಾ ಅಧಿಕಾರಿಗಳು ದಿವ್ಯ ನಿರ್ಲಕ್ಷವಹಿಸಿದ್ದರಿಂದ ದಲಿತರ ಬದುಕು ಬೀದಿಗೆ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು ಅಂಬೇಡ್ಕರ್ ಭವನಕ್ಕೆ ಜಾಗ ನೀಡದಂತೆ ಒತ್ತಡ ಹಾಕುತ್ತಿರುವ ಪ್ರಭಾವಿಗಳ ಹೆಸರನ್ನು ಕೂಡಲೇ ಬಹಿರಂಗಪಡಿಸಬೇಕೆಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ಸುನೀಲ ಕಾಖಂಡಕಿ, ಬಾಬು ಶಿವಶರಣ, ಶ್ರೀಶೈಲ ಕಾಖಂಡಕಿ, ಸಚೀನ ಕಾಖಂಡಕಿ, ಬಸವಕುಮಾರ ಕಾಂಬಳೆ, ಬಸವರಾಜ ಕುಬಕಡ್ಡಿ, ಸುಭಾಸ ವಾಲಿಕಾರ, ರಾಜು ಕಾಖಂಡಕಿ, ಅರವಿಂದ ಕಾಖಂಡಕಿ, ಕೃಷ್ಣಾ ಚಲವಾದಿ,…

Read More

ವಿಜಯಪುರ: ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಬೇಕು. ಪ್ರತಿಯೊಬ್ಬರು ಪರಿಸರ ಪ್ರೇಮ ಬೆಳೆಸಿಕೊಂಡು ಪರಿಸರ ಪ್ರೇಮಿಗಳಾಗಬೇಕು ಎಂದು ರವೀಂದ್ರನಾಥ ಟ್ಯಾಗೋರ ಶಿಕ್ಷಣ ಸಂಸ್ಥೆಯ ಪ್ರದಾನಕಾರ್ಯದರ್ಶಿ ಶ್ರೀಮತಿ ಡಾ. ಉಮಾ ಭೋಸಲೆ ಹೇಳಿದರು.ವಿಜಯಪುರ ನಗರದ ಅತಾಲಟ್ಟಿ ರಸ್ತೆಯಲ್ಲಿರುವ ರವೀಂದ್ರನಾಥ ಟ್ಯಾಗೋರ ಶಿಕ್ಷಣ ಸಂಸ್ಥೆಯ ಶ್ರೀ ಗುರುದೇವ ಇಂಟರನ್ಯಾಶನಲ್ ಪ್ರೌಡಶಾಲೆಯಲ್ಲಿ ಹಮ್ಮಿಕೊಂಡ ಪರಿಸರ ದಿನಾಚರಣೆ ಹಾಗೂ ಶಾಲಾ ಪ್ರಾರಂಭೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಆಧುನಿಕತೆ ಹೆಚ್ಚಾದಂತೆ ಪರಿಸರ ಪ್ರಜ್ಞೆ ಕಡಿಮೆಯಾಗುತ್ತಿದೆ. ಪ್ರತಿಯೊಬ್ಬರೂ ಗಿಡ ಬೆಳೆಸುವ ಮನೋಭಾವ ಬೆಳೆಸಿಕೊಳ್ಳಬೇಕು. ನೀವಿರುವ ಪ್ರದೇಶ ಶಾಲಾ ಆವರಣ, ರಸ್ತೆಗಳು ಖಾಲಿ ಜಾಗಗಳಲ್ಲಿ ಸಸಿ ನೆಟ್ಟು ಪರಿಸರ ಕಾಳಜಿ ತೋರಬೇಕು. ಪರಿಸರ ಸಂರಕ್ಷಣೆಯಿಂದ ನಮ್ಮ ಬಾಳು ಸುಂದರ ಸುಖಮಯವಾಗಲಿದೆ ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಪರಿಸರ ಪ್ರೇಮಿಗಳಾಗೋಣ ಎಂದರು.ಅಧ್ಯಕ್ಷತೆ ವಹಿಸಿದ್ದ ವೀಂದ್ರನಾಥ ಟ್ಯಾಗೋರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ರವೀಂದ್ರ ಭೋಸಲೆ ಮಾತನಾಡಿ ಮಕ್ಕಳಲ್ಲಿ ನಿರಂತರ ಕ್ರೀಯಾಶೀಲತೆಯಿಂದ ಓದಿನ ಕಡೆ ಹೆಚ್ಚು ಗಮನ ಕೊಡಬೇಕು. ನಿರಂತರ ಓದಿನಿಂದ ಏನನ್ನಾದರೂ ಸಾಧಿಸಲು…

Read More

ಸಿಂದಗಿ: ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಪಂ ಇಒ ರಾಮು ಅಗ್ನಿ ಅವರ ನೇತೃತ್ವದಲ್ಲಿ ಗುರುವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.ತಾಲೂಕಿನಲ್ಲಿ ಈ ಬಾರಿ ಪರೀಕ್ಷೆಗೆ ಹಾಜರಾದ ಮಕ್ಕಳಲ್ಲಿ ಪ್ರತಿಶತ ಶೇ.೮೦ ವಿದ್ಯಾರ್ಥಿಗಳು ಮಾತ್ರ ತೇರ್ಗಡೆ ಹೊಂದಿದ್ದು, ಮುಂದಿನ ದಿನಗಳಲ್ಲಿ ಶೇ.೧೦೦ಕ್ಕೆ ೧೦೦ರಷ್ಟು ಫಲಿತಾಂಶ ಬರುವಂತೆ ಶ್ರಮ ವಹಿಸಬೇಕು ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ತಾಪಂ ಇಒ ರಾಮು ಅಗ್ನಿ ಸೂಚಿಸಿದರು.ಇದಕ್ಕೆ ಉತ್ತರಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಆರಿಫ್ ಬಿರಾದಾರ್, ಈಗಾಗಲೇ ತಾಲೂಕಿನ ಪ್ರತಿಯೊಂದು ಗ್ರಾಮದ ಸರಕಾರಿ ಶಾಲೆಗೆ ತಮ್ಮ ಮಕ್ಕಳಿಗೆ ನೋಂದಣಿ ಪಡೆದುಕೊಳ್ಳುವಂತೆ ಜಾಗೃತಿ ಮೂಡಿಸಲಾಗಿದೆ. ಶೈಕ್ಷಣಿಕ ವರ್ಷದಲ್ಲಿ ಗಣಿತ, ವಿಜ್ಞಾನ ಮತ್ತು ಇಂಗ್ಲಿಷ್ ವಿಷಯಗಳಿಗೆ ಹೆಚ್ಚಿನ ಆದ್ಯತೆ ನೀಡಿ ವಿಶೇಷ ತರಗತಿ ನಡೆಸಲಾಗುವದು. ಮುಂಬರುವ ದಿನಮಾನಗಳಲ್ಲಿ ೧೦೦ಕ್ಕೆ ೧೦೦ರಷ್ಟು ಫಲಿತಾಂಶ ಬರುವ ಹಾಗೆ ಮಾಡಲಾಗುವುದು ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಇಲಾಖೆ, ಆರೋಗ್ಯ ಇಲಾಖೆ, ಪಿ.ಆರ್.ಇ.ಡಿ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆ,…

Read More

ಮುದ್ದೇಬಿಹಾಳ: ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಅರಿಹಂತಗಿರಿಯಲ್ಲಿ ಜೂ.೧೪ ರಂದು ಭಗವಾನ ಶ್ರೀ ಆಧಿನಾಥ ತೀರ್ಥಂಕರ ಮತ್ತು ೧೦೦೮ ಭಗವಾನ ಶ್ರೀ ಬಾಹುಬಲಿ ಸ್ವಾಮಿಯ ಪಂಚಕಲ್ಯಾಣ ಪ್ರತಿಷ್ಠಾ ಮಹೋತ್ಸವದ ವಾರ್ಷಿಕ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅರಿಹಂತ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಮಹಾವೀರ ಸಗರಿ ತಿಳಿಸಿದರು.ಬೆಳಿಗ್ಗೆ ೫ಘಂಟೆಗೆ ಮಂಗಳವಾದ್ಯಗೋಶ, ೬ಘಂಟೆಗೆ ಸಂಧ್ಯಾವಂದನ, ಸಕಲಿಕರಣ, ಪಂಚಾಮೃತ ಅಭಿಷೇಕ, ಮಹಾಶಾಂತಿ ಮಂತ್ರ ಪಠಣ, ಮಹಾವೀರ ಸ್ವಾಮಿಯ ಮನೋಕಾಮನಾ ವಿಧಾನ, ಶಾಂತಿ ಹೋಮ, ೧೦೮ ಕಳಶಾಭೀಷೆಕ ಹಾಗೂ ಭಗವಾನ ಬಾಹುಬಲಿ ಸ್ವಾಮಿ, ಆದಿನಾಥತೀರ್ಥಂಕರಿಗೆ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ ಮಧ್ಯಾಹ್ನ ಮಹಾಪ್ರಸಾದ, ೨ಗಂಟೆಗೆ ಕನ್ನಡ ಸಾಹಿತ್ಯಕ್ಕೆ ಜೈನ ಕವಿಗಳ ಕೊಡುಗೆ ಕುರಿತು ೬ ನೇ ವರ್ಷದ ದತ್ತಿ ಉಪನ್ಯಾಸ ಹೀಗೆ ವಿಶೇಶ ಕಾರ್ಯಕ್ರಮಗಳು ಸಮಸ್ತ ಜೈನ ಸಮಾಜ ಹಾಗೂ ನಾಗರಿಕರ ಸಹಯೋಗದಡಿಯಲ್ಲಿ ನಡೆಯಲಿವೆ. ಹದಿನೆಂಟು ತೀರ್ಥ ಕ್ಷೇತ್ರಗಳ ದರ್ಶನ ಮಾಡಿದ ಫಲ ೧೦೦೮ ಭಗವಾನ ಆದಿನಾಥರ ದರ್ಶನದಿಂದ ಸಿಗಲಿದ್ದು ಸಾರ್ವಜನಿಕರು ಭಾಗಿಯಾಗುವಂತೆ ಮನವಿ ಮಾಡಿಕೊಂಡಿದ್ದಾರೆ.

Read More

ಸೋರುವ ಕೊಠಡಿಗಳು | ಶಾಲಾ ಆವರಣದಲ್ಲಿ ನಿಲ್ಲುವ ನೀರು | ವಾಹನಗಳ ಓಡಾಟದ ಕಿರಿಕಿರಿ | ಶೌಚಾಲಯದ ಸಮಸ್ಯೆ – ಚೇತನ ಶಿವಶಿಂಪಿ ಮುದ್ದೇಬಿಹಾಳ: ಕೇವಲ ಅಂಕಗಳ ಹಿಂದೆ ಬೆನ್ನು ಹತ್ತಿರುವ ಸಾರ್ವಜನಿಕರು ತಮ್ಮ ಮಕ್ಕಳು ವಿದ್ಯಾಭ್ಯಾಸ ಮಾಡುವ ಶಾಲೆಯ ಆವರಣ ಅಚ್ಚುಕಟ್ಟಾಗಿರಬೇಕು. ಕೊಠಡಿಗಳ ಕೋಣೆಗಳಲ್ಲಿ ಗಾಳಿ ಬೆಳಕು ಸರಿಯಾಗಿ ಇರಬೇಕು ಎಂದು ಖಾಸಗಿ ಶಾಲೆಗಳಿಗೆ ಸೇರಿಸಲು ಮುಂದಾಗಿರುವ ಸಧ್ಯದ ಪರಿಸ್ಥಿತಿಯಲ್ಲಿ ಶಾಲೆಯ ಆವರಣ ಹೇಗಾದರೂ ಇರಲಿ, ಗಾಳಿ ಬೆಳಕು ಬಂದ್ರೂ ಸರಿ ಬರದಿದ್ರೂ ಸರಿ, ನಮ್ಮ ಮಗು ವಿದ್ಯಾಭ್ಯಾಸ ಮಾತ್ರ ಪಡೆಯಬೇಕು ಎಂದು ಅದೆಷ್ಟೋ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಸರ್ಕಾರಿ ಶಾಲೆಗಳೇ ಆಸರೆ.ಬಡ ಮಕ್ಕಳು ವಿದ್ಯಾರ್ಜನೆಯಿಂದ ವಂಚಿತರಾಗಬಾರದು ಮತ್ತು ದೇಶದ ಭವಿಷ್ಯದ ಹಿತದೃಷ್ಠಿಯಿಂದ ಸರ್ಕಾರ, ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಸಾಕಷ್ಟು ಯೋಜನೆಗಳನ್ನು ರೂಪಿಸಿಕೊಂಡಿದೆ. ಆದರೆ ಆ ಯೋಜನೆಗಳು ಮಾತ್ರ ಸರಿಯಾಗಿ ಬಳಕೆಯಾಗುತ್ತಿಲ್ಲ ಎಂಬ ಸಾರ್ವಜನಿಕರ ಮಾತನ್ನು ತಳ್ಳಿಹಾಕುಂತಿಲ್ಲ. ಇದಕ್ಕೆ ತಾಜಾ ಉದಾಹರಣೆಯೊಂದು ಇಲ್ಲಿದೆ ನೋಡಿ.ಮಳೆಯಾದರೆ ಸಾಕು…

Read More

ವಿಜಯಪುರ: ಜೂ.೧೨ರಂದ, ಶೆಗುಣಶಿ ಗ್ರಾಮದಲ್ಲಿ ಜಿಲ್ಲಾ ಆರೊಗ್ಯ ಕೆಂದ್ರ, ಜಿಲ್ಲಾ ಆಸ್ಪತ್ರೆ ಮತ್ತು ರೋಟರಿ ಸಂಸ್ಥೆ ವಿಜಯಪುರ ಉತ್ತರ, ಸಂಜೀವಿನಿ ಫಾರ್ಮಸಿ ಕಾಲೆಜ ಹಾಗು ಬಿ. ಎಲ್. ಡಿ. ಇ. ಸಂಸ್ಥೆಯ ಸಹಯೊಗದೊಂದಿಗೆ ಉಚಿತ ನೇತ್ರ ತಪಾಸಣೆ ಹಾಗು ಶಸ್ತ್ರಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.ಶಿಬಿರದ ಉದ್ಘಾಟನೆಯನ್ನು ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಶಿವಾನಂದ ಮಾಸ್ತಿಹೊಳಿ, ರೋಟರಿ ಡಿಸ್ಟ್ರಿಕ್ಟ ೩೧೭೦ರ ಪ್ರಾಂತಕಾರದಂಧ ರೋ.ನಾಸಿರ ಬೊರ್ಸಾದವಾಲಾ ಮತ್ತು ರೋಟರಿ ಸಂಸ್ಥೆ ವಿಜಯಪುರ ಉತ್ತರ ಅಧ್ಯಕ್ಷರಾದ ರೋ. ಮಲ್ಲು ಕಲಾದಗಿ, ಕಾರ್ಯದರ್ಶಿರಾದ ರೋ. ರಾಜ ಶಹಾ ರು ಉದ್ಘಾಟನೆ ಮಾಡಿದರು.ಶಿಬಿರದ ಮಹತ್ವ ಕುರಿತು ಡಾ. ಶ್ರೀಮತಿ ಮೀನಾಕ್ಷಿ ಸೊನ್ನದ ಸವಿಸ್ತಾರವಾಗಿ ವಿವರಿಸಿದರು.ಶೆಗುಣಶಿ ಗ್ರಾಮದ ಪ್ರಮುಖರಾದ ಬಾಪುಗೌಡ ಪಾಟಿಲ ಪ್ರಾಸ್ತಾವಿಕ ಮಾತನಾಡಿದರು.ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಶಿವಾನಂದ ಮಾಸ್ತಿಹೊಳಿಯವರು ಶಿಬಿರದ ಮಹತ್ವ ಮತ್ತು ಸದುಪಯೊಗ ಪಡೆಯಬೇಕೆಂದು ಮಾತನಾಡಿದರು. ವಂದನಾರ್ಪಣೆಯನ್ನ ರೋ. ವಿಠ್ಠಲ ತೇಲಿಯವರು ಮಾಡಿದರು. ಕಾರ್ಯಕ್ರಮದ ನಿರುಪಣೆಯನ್ನು ಸುಂದರವಾಗಿ ರೋ. ಸುಧಿರ ಪವಾರ ನಿರೂಪಿಸಿದರು.ಇದೆ ಸಂಧರ್ಭದಲ್ಲಿ ಡಾ. ಸಂಪತ್ ಕುಮಾರ, ಡಾ.…

Read More

ವಿಜಯಪುರ: ಶ್ರೀಮದ್ ಯೋಗೀಶ್ವರ ಯಾಜ್ಞವಲ್ಕ್ಯ ಜಯಂತ್ಯೋತ್ಸವ ಹಾಗೂ ೨೫ನೇ ವರ್ಷದ ಪಾದಯಾತ್ರೆಯ ರಜತ ಮಹೋತ್ಸವದ ಅಂಗವಾಗಿ ಸನ್ಮಾನ ಸಮಾರಂಭ ದಿನಾಂಕ : ಜೂನ್ ೧೫,೧೬ ರಂದು ಹಮ್ಮಿಕೊಳ್ಳಲಾಗಿದೆ.ವಿಜಯಪುರದಿಂದ ಶ್ರೀ ಕ್ಷೇತ್ರ ಕೆಂಗೇರಿ ಮುರಗೋಡಕ್ಕ ಸತತ ೨೫ ವರ್ಷಗಳ ಪಾದಯಾತ್ರೆಯು (ದಿಂಡಿ) ಸಂಪನ್ನಗೊಂಡಿರುವ ಪ್ರಯುಕ್ತ ಪಾದಯಾತ್ರಿಕರಿಗೆ ಸೇವೆ ಸಲ್ಲಿಸಿದ ಭಕ್ತಾಧಿಗಳಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ.ಸಕಲ ಸದ್ಭಕ್ತರು ಈ ಎಲ್ಲಾ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತನು, ಮನ, ಧನದಿಂದ, ಸೇವೆ ಸಲ್ಲಿಸಿ ಶ್ರೀ ಯಾಜ್ಞವಲ್ಕ್ಯ ಗುರುಗಳ ಹಾಗೂ ಶ್ರೀ ಶಿವ ಚಿದಂಬರ ಮಹಸ್ವಾಮಿಗಳ ಕೃಪೆಗೆ ಪಾತ್ರರಾಗಬೇಕೆಂದು ಕಮಿಟಿಯವರು ವಿನಂತಿಸಿಕೊಂಡಿದ್ದಾರೆ.

Read More

ವಿಜಯಪುರ: ೧೮ ನೇ ಲೋಕಸಭಾ ಚುನಾವಣೆಯಲ್ಲಿ ದಲಿತ ನಾಯಕರಾದ ರಮೇಶ ಜಿಗಜಿಣಗಿಯವರು ಸತತ ೭ನೇ ಬಾರಿ ಲೋಕಸಭಾ ಸಂಸದರಾಗಿ ಆಯ್ಕೆ ಆಗಿದ್ದು, ಅವರಿಗೆ ಸಚಿವ ಸ್ಥಾನ ನೀಡುವಂತೆ ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಇಬ್ಬರು ದಲಿತ ಬಿಜೆಪಿ ನಾಯಕರು ಆಯ್ಕೆಯಾಗಿರುವದು ಹೆಮ್ಮೆಯ ವಿಷಯವಾಗಿದೆ. ರಮೇಶ ಜಿಗಜಿಣಗಿಯವರು ವಿಜಯಪುರ ಜಿಲ್ಲೆಯಲ್ಲಿ ಭಾರತಿಯ ಜನತಾ ಪಾರ್ಟಿಯನ್ನು ಕಟ್ಟಿ ಬೆಳೆಸುವಲ್ಲಿ ತಮ್ಮ ಹಗಲಿರುಳು ಶ್ರಮವಿದೆ. ಅದೇ ರೀತಿ ವಿಜಯಪುರ ಜಿಲ್ಲೆಯಲ್ಲಿ ಬಿಜೆಪಿಯು ಗಟ್ಟಿಯಾಗಿ ಕೂಡಲು ಹಾಗೂ ಬೆಳೆಯಲು ಜಿಗಜಿಣಗಿಯವರು ಪರಿಶ್ರಮ ಬಹಳಷ್ಟಿದ್ದು, ಜಿಗಜಿಣಗಿಯವರು ತಮ್ಮ ರಾಜಕೀಯ ಜೀವನದಲ್ಲಿ ಎಲ್ಲರೊಂದಿಗೆ ಸ್ನೇಹ ಬಾಂಧವ್ಯ ಇಟ್ಟುಕೊಂಡು ಸೋಲಿಲ್ಲದ ಸರ್ಧಾರರಾಗಿದ್ದು, ಇವರು ರಾಜಕೀಯದಲ್ಲಿ ಅಜಾತಶತೃ ಎನಿಸಿಕೊಂಡವರು. ಇಂತಹ ಮುತ್ಸದ್ದಿ ನಾಯಕರಾದ ರಮೇಶ ಜಿಗಜಿಣಗಿಯವರು ೧೮ನೇ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ಸುಮಾರು ೨೪೦ ಶೀಟುಗಳನ್ನು ಗೆಲ್ಲುವ ಮೂಲಕ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ.ಇಂತಹ ಮುತ್ಸದ್ದಿ ರಾಜಕಾರಣಿಯು ೧೯೮೩, ೧೯೮೫ ಮತ್ತು ೧೯೯೪ರಲ್ಲಿ…

Read More

ಪುರಸಭೆ ಸದಸ್ಯರ ಅವಧಿ ವಿಸ್ತರಣೆ ಒತ್ತಾಯಿಸಿ‌ ರಾಜ್ಯಪಾಲರಿಗೆ ಮನವಿ ಇಂಡಿ: ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಮೀಸಲಾತಿ ನಿಗದಿ ಪಡಿಸದ ಹಿನ್ನೆಲೆಯಲ್ಲಿ ಕಳೆದ 14 ತಿಂಗಳಿನಿಂದ ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯ ಹಾಗೂ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿವೆ. ಹಾಗಾಗಿ ಅಧ್ಯಕ್ಷ ಉಪಾಧ್ಯಕ್ಷ ಮೀಸಲಾತಿ ನಿಗದಿ ಪಡಿಸಿ ಪುರಸಭೆ ಸದಸ್ಯ ಅವಧಿ ವಿಸ್ತರಿಸಬೇಕು ಎಂದು ಪುರಸಭೆ ಸದಸ್ಯರು ತಹಶಿಲ್ದಾರ ಮಂಜುಳಾ ನಾಯಿಕ‌ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.ಗುರುವಾರ ಪಟ್ಟಣದ ಆಡಳಿತ ಸೌಧಕ್ಕೆ ತೆರಳಿದ ಪುರಸಭೆಯ ಸದಸ್ಯರು, ಪ್ರತಿ ವಾರ್ಡಗಳಲ್ಲಿ‌‌ ಮೂಲಭೂತ ಸೌಲಭ್ಯ, ಸೌಕರ್ಯ ಹಾಗೂ ಅಭಿವೃದ್ಧಿ ಪಡಿಸಲಿಕೆ ತೊಂದರೆಯಾಗುತ್ತಿದೆ,ವಾರ್ಡಗಳಲ್ಲಿ ಕಾಮಗಾರಿ ಕುಂಠಿತಗೊಂಡಿವೆ.‌ ಎರಡನೆ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಮೀಸಲಾತಿ ನಿಗದಿ ಪಡಿಸಿ ಸದಸ್ಯರ ಅವಧಿ ವಿಸ್ತರಿಸಬೇಕು ಎಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಭೀಮನಗೌಡ ಪಾಟೀಲ ಮಾತನಾಡಿದ ಅವರು, 2019ನೇ ಸಾಲಿನಲ್ಲಿ ಚುನಾವಣೆ ಮುಕ್ತಾಯವಾಗಿ ಪುರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದೆವೆ. ನಂತರ ಅಧ್ಯಕ್ಷ – ಉಪಾಧ್ಯಕ್ಷರ ಮೀಸಲಾತಿಯನ್ನು…

Read More