Subscribe to Updates
Get the latest creative news from FooBar about art, design and business.
What's Hot
Author: editor.udayarashmi@gmail.com
ದೇವರಹಿಪ್ಪರಗಿ: ವಾಹನಗಳು ಹಾಗೂ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡತಡೆಯಾದ ಗೂಡಂಗಡಿ, ಬೀದಿಬದಿಯ ತಳ್ಳುವ ಗಾಡಿಗಳು, ಅತಿಕ್ರಮಣಗೊಂಡ ಕಟ್ಟಡಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ತಹಶೀಲ್ದಾರ ಪ್ರಕಾಶ ಸಿಂದಗಿ ಹೇಳಿದರು.ಪಟ್ಟಣದಲ್ಲಿ ಗುರುವಾರ ಮೊಹರೆ ಹಣಮಂತ್ರಾಯ ವೃತ್ತ , ಬಸ್ ನಿಲ್ದಾಣ ಆವರಣ ಸೇರಿದಂತೆ ನಾಡಕಚೇರಿವರೆಗಿನ ರಸ್ತೆಯಲ್ಲಿನ ಗೂಡಂಗಡಿ, ಬೀದಿಬದಿಯ ತಳ್ಳುವ ಗಾಡಿಗಳನ್ನು ತೆರವುಗೊಳಿಸಿ ಮಾತನಾಡಿದರು. ಪಟ್ಟಣ ಪಂಚಾಯಿತಿಯಲ್ಲಿ ಕಳೆದ ೩ ದಿನಗಳ ಹಿಂದೆ ಜರುಗಿದ ಸಾರ್ವಜನಿಕ ಸಭೆಯ ಮೂಲಕ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ರಸ್ತೆ ಅಗಲೀಕರಣದ ನಿರ್ಧಾರ ಮಾಡಲಾಗಿದೆ. ಅದಕ್ಕಾಗಿ ಗುರುವಾರ ನಾಡಕಚೇರಿವರೆಗೆ, ಶುಕ್ರವಾರ ಅಂಬೇಡ್ಕರ್ ವೃತ್ತ, ಟಿಪ್ಪು ಸುಲ್ತಾನ ವೃತ್ತ, ಮೇನ್ ಬಜಾರಗಳಲ್ಲಿ ಕಾರ್ಯಾಚರಣೆ ಕೈಗೊಂಡು ಅತೀಕ್ರಮಣಗೊಂಡ ಕಟ್ಟಡಗಳು ಸೇರಿದಂತೆ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾದ ಮಳಿಗೆಗಳನ್ನು ತೆರವುಗೊಳಿಸಿ ಜನತೆಗೆ ಅನುಕೂಲ ಮಾಡಿಕೊಡಲಾಗುತ್ತಿದೆ ಎಂದರು.ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಲ್.ಡಿ.ಮುಲ್ಲಾ ಮಾತನಾಡಿ, ವಿಶಾಲವಾದ ರಸ್ತೆಗಳಿಂದ ಅಪಘಾತಗಳು ನಿಯಂತ್ರಿಸಲ್ಪಡುತ್ತವೆ. ಹಾಗೂ ಪಟ್ಟಣವು ಸುಂದರವಾಗಿ ಕಾಣುತ್ತದೆ. ಆದ್ದರಿಂದ ಈ ಕಾರ್ಯಾಚರಣೆಗೆ ಎಲ್ಲರೂ ಸಹಕರಿಸಬೇಕು ಎಂದರು.ಪಿಎಸ್ಐ ಬಸವರಾಜ ತಿಪ್ಪಾರಡ್ಡಿ, ಹೆಸ್ಕಾಂ ಶಾಖಾಧಿಕಾರಿ…
ಉಪನ್ಯಾಸಕರಿಗೆ ಪಪೂ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಡಾ. ಸಿ.ಕೆ. ಹೊಸಮನಿ ಸಲಹೆ ಚಡಚಣ: ಪಿಯುಸಿ ದ್ವಿತೀಯ ವರ್ಷ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದ್ದು ಈ ವರ್ಷದ ಪರೀಕ್ಷೆಯನ್ನು ವಿದ್ಯಾರ್ಥಿಗಳು ಧೈರ್ಯವಾಗಿ ಎದುರಿಸುವಂತೆ ಉಪನ್ಯಾಸಕರು ಅವರಿಗೆ ಮಾರ್ಗದರ್ಶನ ಮಾಡಬೇಕು ಎಂದು ಪಪೂ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಡಾ. ಸಿ.ಕೆ. ಹೊಸಮನಿ ಹೇಳಿದರು.ಚಡಚಣದ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಸಭಾ ಭವನದಲ್ಲಿ ಶಾಲಾ ಶಿಕ್ಷಣ ಇಲಾಖೆ(ಪಪೂ ವಿಭಾಗ) ವಿಜಯಪೂರ ಹಾಗೂ ಸಂಗಮೇಶ್ವರ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯ ಚಡಚಣ ಇವರ ಆಶ್ರಯದಲ್ಲಿ ನಡೆದ ಇಂಡಿ ಮತ್ತು ಚಡಚಣ ತಾಲೂಕುಗಳ ಪಪೂ ಕಾಲೇಜುಗಳ ಪ್ರಾಚಾರ್ಯರು ಮತ್ತು ಉಪನ್ಯಾಸಕರಿಗಾಗಿ ಹಮ್ಮಿಕೊಂಡ ಕಾರ್ಯಗಾರವನ್ನು ಉಧ್ಘಾಟಿಸಿ ಅವರು ಮಾತನಾಡಿದರು.೨೪-೨೫ ಸಾಲಿನಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಶಾಲಾ ಶಿಕ್ಷಣ ಇಲಾಖೆ ಅತ್ಯಂತ ಕಟ್ಟುನಿಟ್ಟಾಗಿ ನಡೆಸಲಿರುವದರಿಂದ ವಿದ್ಯಾರ್ಥಿಗಳಿಗೆ ಈಗಿನಿಂದಲೆ ಮಾರ್ಗದರ್ಶನ ಮಾಡಬೇಕು. ಶಾಲಾ ಶಿಕ್ಷಣ ಇಲಾಖೆಯು ಪಿಯುಸಿ ಪರೀಕ್ಷೆಯಲ್ಲಿಯೂ ವೆಬ್ ಕಾಸ್ಟಿಂಗ ತಂತ್ರಜ್ಞಾನವನ್ನು ಉಪಯೋಗಿಸುತ್ತಿರುವದರಿಂದ ಎಲ್ಲ ಪ್ರಾಚಾರ್ಯರು ಮತ್ತು ಉಪನ್ಯಾಸಕರು…
ವಿಜಯಪೂರ: ಗ್ರಾಮೀಣ ವಲಯದ ಶಿವಣಗಿ ಕ್ಲಸ್ಟರ ವ್ಯಾಪ್ತಿಯಲ್ಲಿ ಬರುವ ಸರಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಗ್ರಾಮದ ಗಣ್ಯರಾದ ರಾಜು ಬಿಜ್ಜರಗಿ ಇವರು ತಮ್ಮ ಅಜ್ಜನವರಾದ ದಿವಂಗತ ಮಲಕಾಜಪ್ಪ ಬಿಜ್ಜರಗಿ ಇವರ ಹೆಸರಿನಲ್ಲಿ 50 ಸಾವಿರ, ಗ್ರಾಮ ಪಂಚಾಯತಿ ಅಧ್ಯಕ್ಷೆ ಶಾಂತಾಬಾಯಿ ಭರತನೂರ 10 ಸಾವಿರ, ಶಾಲೆಯ ಮಾಜಿ ಎಸ್ಡಿಎಂಸಿ ಅಧ್ಯಕ್ಷ ಶಿವಪ್ಪ ಹಳ್ಳಿ 10 ಸಾವಿರ, ಮತೀನ್ ಮೈದರಗಿ ಸಾಪ್ಟವೇರ್ ಇಂಜನಿಯರ್ 17 ಸಾವಿರ (ಸದರಿ ಶಾಲೆಯ ಮುಖ್ಯಗುರುಮಾತೆ ಎಸ್.ಐ. ಹಕೀಮ್ ಅವರ ಅಳಿಯ) ದೇಣಿಗೆಯಾಗಿ ನೀಡಿರುವರು.ದೇಣಿಗೆ ನೀಡಿದ ರಾಜು ಬಿಜ್ಜರಗಿ, ಶಿವಪ್ಪ ಹಳ್ಳಿ, ಶಾಂತಾಬಾಯಿ ಭರತನೂರ ಇವರು ಶಾಲೆಯ ಹಳೆಯ ವಿದ್ಯಾರ್ಥಿಗಳಾಗಿದ್ದು, ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿದರು. ಶಾಲೆಯ ಅಭಿವೃದ್ಧಿಗೋಸ್ಕರ ಸದಾ ಸಹಕರಿಸುವುದಾಗಿ ಹೇಳಿದರು.ದೇಣಿಗೆಯನ್ನು ಸ್ವೀಕರಿಸಿ ಮಾತನಾಡಿದ ಶಾಲೆಯ ಮುಖ್ಯ ಗುರುಮಾತೆ ಎಸ್.ಐ.ಹಕೀಮ್ ಶಾಲೆಯ ಮಕ್ಕಳ ದಾಖಲಾತಿ ಹೆಚ್ಚು ಮಾಡಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ನಾನು ನನ್ನ ಸಿಬ್ಬಂದಿಯವರ ಜೊತೆಗೂಡಿ ಪ್ರಾಮಾಣಿಕವಾಗಿ ಶಕ್ತಿಮೀರಿ ಪ್ರಯತ್ತಿಸುತ್ತೇನೆ ಎಂದು…
ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಉದ್ಘಾಟಿಸಿದ ನ್ಯಾಯಾಧೀಶ ರವೀಂದ್ರಕುಮಾರ ಕಟ್ಟಿಮನಿ ಅಭಿಮತ ಮುದ್ದೇಬಿಹಾಳ: ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ನೀಡಿ ಬಾಲ ಕಾರ್ಮಿಕ ಪದ್ಧತಿಗೆ ಅಳವಡಿಸಿದಲ್ಲಿ ಅಂತವರ ವಿರುದ್ಧ ಕಾನೂನು ಪ್ರಕಾರ ಸೂಕ್ತ ಕ್ರಮ ಜರುಗಿಸಲಾಗುವದು ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ರವೀಂದ್ರಕುಮಾರ ಕಟ್ಟಿಮನಿ ಎಚ್ಚರಿಸಿದರು.ಪಟ್ಟಣದ ಮುಖ್ಯ ಬಜಾರನಲ್ಲಿರುವ ಸರ್ಕಾರಿ ಪ್ರೌಢ ಶಾಲೆಯಲ್ಲಿ ಗುರುವಾರ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಕಾರ್ಮಿಕ ಇಲಾಖೆ ಹಾಗೂ ಇತರ ಎಲ್ಲ ಸರ್ಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಬಾಲ ಕಾರ್ಮಿಕ ಪದ್ಧತಿಯಿಂದ ಮಕ್ಕಳ ಮೇಲೆ ದೈಹಿಕ ಬೆಳವಣಿಗೆ ಮಾತ್ರವಲ್ಲದೇ ವಿದ್ಯಾಭ್ಯಾಸದ ಮೇಲೆ ವ್ಯತಿರಿಕ್ತ ಪರಿಣಾಮಗಳು ಬೀರುತ್ತವೆ. ಹಾಗಾಗಿ ಬಾಲ ಕಾರ್ಮಿಕ ನಿಷೇದ ಪದ್ಧತಿಯನ್ನು ಜಾರಿಗೆ ತರಲಾಗಿದೆ. ಈ ಕಾಯ್ದೆ ಪ್ರಕಾರ ೧೪ ವರ್ಷದ ಒಳಗಿನ ಮಕ್ಕಳು ದುಡಿಯುವಂತಿಲ್ಲ. ಗ್ಯಾರೇಜ, ಕಾರ್ಖಾನೆ, ಅಂಗಡಿಗಳು ಸೇರಿದಂತೆ ಎಲ್ಲಿಯಾದರೂ ಬಾಲ ಕಾರ್ಮಿಕರನ್ನು…
ವಿಜಯಪುರ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಜೂನ್ ೧೫ ರಂದು ಬೆಳಿಗ್ಗೆ ೧೦:೩೦ ಗಂಟೆಗೆ ಕುಮದಾ ಕಾರ್ಸ ಪ್ರೈ.ಲಿ, ಇಬ್ರಾಹಿಂಪುರ ರಿಂಗ್ ರೋಡ್ ಎನ್ ಎಚ್-೫೦ ಇಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್, ಟೀಮ್ ಲೀಡರ್, ಕ್ಯಾಶಿಯರ್, ಸಿ.ಆರ್.ಇ. ಸರ್ವಿಸ್ ಅಡ್ವಜರ್, ಟೆಕ್ನೀಶಿಯನ್, ಪ್ಲೋರ್ ಇನ್ಚಾರ್ಜ, ರಿಸಪ್ಸೇನಿಸ್ಟ್ ಹಾಗೂ ಇನ್ಸುರನ್ಸ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದೆ. ಐ.ಟಿ.ಐ, ಡಿಪ್ಲೋಮಾ, ಪಿಯುಸಿ ಹಾಗೂ ಯಾವುದೇ ಪದವಿ ಪಾಸಾದ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಸ್ವ-ವಿವರದೊಂದಿಗೆ ಈ ನೇರ ಭಾಗವಹಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಮೊ:೯೭೪೨೨೭೨೬೪೧ ಹಾಗೂ ಮೊ:೯೯೪೫೦೦೦೭೯೩ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ವಿಜಯಪುರ ಮಹಾನಗರಪಾಲಿಕೆ ವತಿಯಿಂದ ೨೦೨೪-೨೫ನೇ ಸಾಲಿನ ಕೇಂದ್ರ ಪುರಸ್ಕೃತ ಯೋಜನೆಯಾದ ದೀನದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಉಪ ಘಟಕವಾರು ಭೌತಿಕ ಮತ್ತು ಆರ್ಥಿಕ ಗುರಿಯನ್ನು ನಿಗದಿಪಡಿಸಿದ್ದು, ಸ್ವಯಂ ಉದ್ಯೋಗ(ದ್ವಿ-ಪ್ರತಿ ಅರ್ಜಿ)-೭೮, ಗುಂಪು ಸಮೂಹ ಉದ್ಯಮಗಳು ಯೋಜನೆ – ೦೬, ಸ್ವಸಹಾಯ ಗುಂಪುಗಳ ರಚನೆ-೨೦೧, ಸ್ವಸಹಾಯ ಗುಂಪುಗಳ ಬ್ಯಾಂಕ ಲಿಂಕೇಜ್-೧೦೧ ಸದರಿ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಬಿಪಿಎಲ್/ಅಂತ್ಯೋದಯ ರೇಷನ್ ಕಾರ್ಡ್, ಬ್ಯಾಂಕ್ ಪಾಸ್ಬುಕ್, ಮತದಾರರ ಗುರುತೀನ ಚೀಟಿ, ವಿದ್ಯಾರ್ಹತೆ ಪ್ರಮಾಣ ಪತ್ರ ಮತ್ತು ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ದ್ವಿಪ್ರತಿಯಲ್ಲಿ ಕನಿಷ್ಠ ೧೮ ರಿಂದ ೫೦ ವಯಸ್ಸಿನ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಜೂನ್ ೨೯ ರಂದು ಸಾಯಂಕಾಲ ೫ ಗಂಟೆಯ ಒಳಗಾಗಿ ಮಹಾನಗರ ಪಾಲಿಕೆಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಯಾಗಿ ಮಹಾನಗರಪಾಲಿಕೆಯ ಡೇ-ನಲ್ಮ್ ವಿಭಾಗವನ್ನು ಸಂಪರ್ಕಿಸಬಹುದು ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಲಮಟ್ಟಿ: ನಿಡಗುಂದಿ ಪಟ್ಟಣದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ -೫೦ ರಿಂದ ಸಾಕಷ್ಟು ಅಪಘಾತಗಳು ಸಂಭವಿಸುತ್ತಿದ್ದು, ಅಲ್ಲಿ ಹೆದ್ದಾರಿಗೆ ಮೇಲ್ಸೇತುವೆ ನಿರ್ಮಿಸಲಾಗುವುದು ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.ಗುರುವಾರ, ಯಲಗೂರದ ಯಲಗೂರೇಶನ ದರ್ಶನ ಪಡೆದು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.ಮೇಲ್ಸೇತುವೆ ನಿರ್ಮಾಣಕ್ಕೆ ಸ್ಥಳೀಯರ ವಿರೋಧವಿದೆ, ಆದರೆ ಅಪಘಾತಗಳು ಹೆಚ್ಚಿಗೆ ಸಂಭವಿಸುತ್ತಿವೆ, ಹೀಗಾಗಿ ಶೀಘ್ರವೇ ಮೇಲ್ಸೇತುವೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು.ಮೇಲ್ಸೇತುವೆ ನಿರ್ಮಿಸದಂತೆ ಯಾವುದೇ ಒತ್ತಡವೂ ನನ್ನ ಮೇಲಿಲ್ಲ. ಅಲ್ಲಿ ಯಾವುದೇ ಭೂಸ್ವಾಧೀನದ ಪ್ರಶ್ನೆಯೂ ಉದ್ಭವಿಸುವುದಿಲ್ಲ. ಮುಂದಿನ ೫ ವರ್ಷಗಳ ಕಾಲ ಮತಕ್ಷೇತ್ರದಲ್ಲಿ ಜನರು ಹೇಳುವ ಕೆಲಸ ಮಾಡುವುದೇ ನನ್ನ ಅಜೆಂಡಾ ಎಂದರು.ಆಲಮಟ್ಟಿ ಬಳಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಸ್ತಾವನೆಯಿದೆ ಎಂದರು.ರಾಜ್ಯದವರೇ ಕೇಂದ್ರ ಕೈಗಾರಿಕಾ ಸಚಿವರಿದ್ದು, ಕೃಷ್ಣಾ ತೀರದಲ್ಲಿ ಯಾವುದಾದರೂ ಕಾರ್ಖಾನೆ ಸ್ಥಾಪಿಸಲು ಪ್ರಯತ್ನಿಸುವೆ ಎಂದರು.ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಕರಣಗೊಳಿಸಲು ಹಲವು ತಾಂತ್ರಿಕ ತೊಡಕುಗಳಿವೆ ಎಂದರು.ಗೋಪಾಲ ನಾಯಕ,ಬಿಜೆಪಿ ಮುಖಂಡ ಗೋಪಾಲ ಗದ್ದನಕೇರಿ, ನಾರಾಯಣ ಒಡೆಯರ ಗೋಪಾಲಚಾರ್ಯ ಹಿಪ್ಪರಗಿ, ಭೀಮಣ್ಣ, ಯಲಗೂರದಪ್ಪ ಪೂಜಾರಿ, ರಾಮಣ್ಣ…
ವಿಜಯಪುರ: ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ ಸಿರಿಗೆರೆ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಮಲ್ಲಿ ಕಂಬ, ಮಲ್ಲಿ ಹಗ್ಗ ಸಾಹಸ ಕ್ರೀಡೆ ಪ್ರದರ್ಶನ ಹಾಗೂ ತರಳಬಾಳು ಕಲಾ ಸಂಘದಿಂದ ಶರಣ ಸಂಕುಲ ನೃತ್ಯ ಸಂಗೀತ ಮತ್ತು ಅಭಿನಯ ವಿಶೇಷ ಕಾರ್ಯಕ್ರಮ ಜ್ಞಾನಯೋಗಾಶ್ರಮ ವಿಜಯಪುರದಲ್ಲಿ ದಿ.15 ಶನಿವಾರ ಸಂಜೆ 6.30ಗಂ. ಜರುಗಲಿದೆ.ಈ ಕಾರ್ಯಕ್ರಮದ ಸಾನಿಧ್ಯವನ್ನು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಸಿರಿಗೆರೆ ಇವರು ವಹಿಸಲಿದ್ದು, ಜ್ಞಾನಯೋಗಾಶ್ರಮದ ಬಸವಲಿಂಗ ಮಹಾಸ್ವಾಮಿಗಳು ಅಧ್ಯಕ್ಷತೆ ವಹಿಸಲಿದ್ದು, ಕೈಗಾರಿಕೆ ಮೂಲಸೌಕರ್ಯ ಅಭಿವೃದ್ಧಿ ಸಚಿವರು ಮತ್ತು ವಿಜಯಪುರ ಜಿಲ್ಲೆ ಉಸ್ತಿವಾರಿ ಸಚಿವರಾದ ಎಂ.ಬಿ.ಪಾಟೀಲ ಉಪಸ್ಥಿತರಿರಲಿದ್ದಾರೆ. ಸಾರ್ವಜನಿಕರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಪ್ರಕಟಣೆ ತಿಳಿಸಿದೆ.
“ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ”- ವಿವೇಕಾನಂದ. ಎಚ್.ಕೆ. ಬೆಂಗಳೂರು ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಅವರು ಅಸ್ತಂಗತರಾದ ಈ ಸಂದರ್ಭದಲ್ಲಿ..ನಾಗರಿಕ ಮನುಷ್ಯ ಊಟ, ವಸತಿ, ಬಟ್ಟೆ, ವಾಹನ ಪ್ರಯಾಣ ಹೀಗೆ ನಾನಾ ಅವಶ್ಯಕತೆಗಳನ್ನು, ಆಧುನಿಕತೆಯನ್ನು ತಾಂತ್ರಿಕತೆಗಳನ್ನು ಪೂರೈಸಿಕೊಳ್ಳುತ್ತಾ ಸಾಕಷ್ಟು ಆರಾಮದಾಯಕ ಬದುಕಿಗಾಗಿ ಪರಿತಪಿಸುವಾಗಲು, ಕೆಲವು ಕ್ಷೇತ್ರಗಳಲ್ಲಿ ಮಹತ್ಸಾಧನೆಗಾಗಿ ಅಥವಾ ಆತ್ಮ ತೃಪ್ತಿಗಾಗಿ ಅದರಲ್ಲಿ ಲೀನವಾಗಲು ಸದಾ ಪ್ರಯತ್ನಿಸುತ್ತಲೇ ಇರುತ್ತಾನೆ..ಅಂತಹ ಒಂದು ಕ್ಷೇತ್ರ ಕಲೆಯ ಬಲೆಯಾಗಿರುವ ವಾದ್ಯ ಸಂಗೀತ. ಹರಿಯವ ನೀರಿನ ಜುಳು ಜುಳು ನಿನಾದ, ಸಮುದ್ರದಲೆಗಳ ಭೋರ್ಗರೆತ, ಗಾಳಿಯ ರೊಯ್ಯನೇ ಬೀಸುವ ತಂಗಾಳಿಯ ನಾದ,ಪ್ರಾಣಿ ಪಕ್ಷಿ ಕ್ರಿಮಿಕೀಟಗಳ ಆಹ್ಲಾದಕರ ಸುಶ್ರಾವ್ಯ ಗಾನ, ದಟ್ಟ ಕಾಡುಗಳ, ಹಿಮಾಚ್ಛಾದಿತ ಪ್ರದೇಶಗಳ ವರ್ಣಿಸಲಾಗದ ಧ್ವನಿ ತರಂಗಗಳು, ಮರ ಮುಟ್ಟುಗಳ ವಿವಿಧ ಆಕಾರದ ದ್ವನಿ ಹೊಮ್ಮಿಸುವ ಶಬ್ದ ನಿನಾದಗಳು, ವಿಧ ವಿಧ ತಂತಿಗಳು ಹೊಮ್ಮಿಸುವ ಸಂಗೀತ ಪ್ರಾಕಾರಗಳು..ಹಾಗೆಯೇ, ವೀಣೆ, ಕೊಳಲು, ಹಾರ್ಮೋನಿಯಂ, ತಬಲಾ, ಸರೋದ್, ಮೃದಂಗ, ಗೆಜ್ಜೆ, ಪಿಟೀಲು, ತಾಳೆ, ಮದ್ದಲೆ, ಚೆಂಡೆ, ವೀಣೆ,…
