Author: editor.udayarashmi@gmail.com

ಮುಳವಾಡ ಏತ ನೀರಾವರಿ ಮುಖ್ಯ ಕಾಲುವೆಯಲ್ಲಿ ನಡೆದಿರುವ ಕಳಪೆ ಕಾಮಗಾರಿ ವಿಜಯಪುರ: ಮುಳವಾಡ ಏತ ನೀರಾವರಿ ಮುಖ್ಯ ಕಾಲುವೆಯಲ್ಲಿ ನಡೆದಿರುವ ಕಳಪೆ ಕಾಮಗಾರಿಯ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹ ಜಯ ಕರ್ನಾಟಕ ಸಂಘಟನೆಯ ವತಿಯಿಂದ ವಿಜಯಪುರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ವಿಷಯ ಕುರಿತು ರಾಜ್ಯ ಸಂಘಟನಾ ಕಾರ್ಯದರ್ಶಿ ರಾಕೇಶ ಕಲ್ಲೂರ ಅವರು ಮಾತನಾಡಿ, ತಾಳಿಕೋಟಿ ತಾಲೂಕಿನ ಬಂಟನೂರ ಗ್ರಾಮದ ಸರ್ವೇ ನಂ. ೧೭೮/೧,೨ ಈ ಜಮೀನದಲ್ಲಿ ಮುಖ್ಯ ಕಾಲುವೆ ಅಕ್ವಾಡೆಕ್ಕೆ ಹಾಗೂ ಏಂಬೆಕಮೆಂಟ್ ಕಾಮಗಾರಿ ಕೈಗೊಂಡಿದ್ದು, ಇದು ಕಳಪೆ ಮಟ್ಟದಿಂದ ಕೂಡಿದ್ದು, ಹಲವಾರು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದು, ಕಾಮಗಾರಿಗೆ ಕಾಲುವೆಗೆ ೧೯-೦೧-೨೦೨೪ ರಂದು ಪ್ರಾಯೋಗಿಕವಾಗಿ ನೀರು ಹರಿಸಿದ್ದು ಕಾಲುವೆಯ ನೀರು ಸದರಿಯವರ ಜಮೀನಿಗೆ ನುಗ್ಗಿ ಅಪಾರ ಹಾನಿ ಸಂಬಂಧಿಸಿರುತ್ತದೆ. ಆದಕಾರಣ ಆದಷ್ಟು ಬೇಗ ತಾವು ಖುದ್ದಾಗಿ ಸ್ಥಳ ಪರಿಶೀಲನೆ ಮಾಡಿ ತಪ್ಪಿತಸ್ಥರಾದ ಗುತ್ತಿಗೆದಾರ ಆದಿತ್ಯ ಕನ್ಸಟ್ರಂಕ್ಸನ್ ಕಂಪನಿ ಹಾಗೂ ಅವರೊಂದಿಗೆ ಕೂಡಿಕೊಂಡು ಕಳಪೆ ಕಾಮಗಾರಿಗೆ…

Read More

ಚಿಮ್ಮಡ: ಶಾಲೆ ಪ್ರೌಢಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಉತ್ತಮ ಅಂಕಗಳಿಸಲು ಛಲದೊಂದಿಗೆ ಜ್ಞಾನದ ಹಸಿವು ಇರಬೇಕು ಆವಾಗಲೇ ಸಾಧನೆ ಮಾಡಲು ಸಾಧ್ಯ ಎಂದು ಶಿಕ್ಷಣ ಇಲಾಖೆಯ ಉಪ ನಿರ್ದೆಶಕ ಬಿ.ಕೆ.ನಂದನೂರ ಹೇಳಿದರು.ಗ್ರಾಮದ ಸರಕಾರಿ ಪ್ರೌಢಶಾಲೆಗೆ ಸೋಮವಾರ ಭೇಟಿನೀಡಿ ಪರೀಶೀಲನೆ ನಡೆಸಿ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಜೊತೆಗೆ ಸಂವಾದ ನಡೆಸುತ್ತ ಮಾತನಾಡಿದ ಅವರು ಸತತ ಪ್ರಯತ್ನವೇ ಯಶಸ್ಸಿನ ಮೂಲವಾಗಿದ್ದು ಇರುವೆಯ ಪ್ರಯತ್ನಶೀಲತೆ ನಮಗೆಲ್ಲ ಮಾದರಿಯಾಗಬೇಕೆಂದ ಅವರು ನೂತನ ಪರೀಕ್ಷಾ ಪದ್ದತಿಗಳ ಅನುಕೂಲತೆಗಳ ಕುರಿತು ವಿದ್ಯಾರ್ಥಿಗಳನ್ನು ಅಭಿ ಪ್ರೇರಣೆಗೊಳಿಸಿ ಮಾರ್ಗದರ್ಶನ ನೀಡಿದರು.ಗ್ರಾಮೀಣ ಭಾಗದ ಈ ಶಾಲೆಯ ವಾತಾವರಣ, ಕಲಿಕಾ ಗುಣಮಟ್ಟದ ಕುರಿತು ಹರ್ಷವ್ಯಕ್ತಪಡಿಸಿದ ಅಧಿಕಾರಿಗಳು ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿರುವುದಕ್ಕೆ ಪ್ರಭಾರ ಮುಖ್ಯೋಪಾದ್ಯಾಯೆ ಸೇರಿದಂತೆ ಶಿಕ್ಷಕ ವೃಂದವನ್ನು ಹಾಗೂ ಎಸ್ಡಿಎಂಸಿ ಪಧಾಧಿಕಾರಿಗಳನ್ನು ಅಭಿನಂದಿಸಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ. ಬಸಣ್ಣವರ, ಕ್ಷೇತ್ರ ಸಮನ್ವಯ ಅಧಿಕಾರಿ ರಮೇಶ ಅವಟಿ, ಪ್ರೌಢಶಾಲೆಯ ಪ್ರಭಾರ ಮುಖ್ಯೋಪಾದ್ಯಾಯೆ ಶ್ರೀಮತಿ ಎಂ.ಎಸ್. ಜಿಟ್ಟಿ ಉಪಸ್ಥಿತರಿದ್ದರು.

Read More

“ಜಯ್ ನುಡಿ” (ವ್ಯಕ್ತಿತ್ವ ವಿಕಸನ ಮಾಲಿಕೆ) – ಜಯಶ್ರೀ.ಜೆ. ಅಬ್ಬಿಗೇರಿ,ಇಂಗ್ಲೀಷ್ ಉಪನ್ಯಾಸಕರು, ಬೆಳಗಾವಿ, ಮೊ:೯೪೪೯೨೩೪೧೪೨ ನಮ್ಮಲ್ಲಿ ಬಹುತೇಕ ಜನರು ಗುರಿ ಮುಟ್ಟದೇ ವಿಫಲರಾಗಲು ಕಾರಣ ಸಂವಹನ ಕಲೆ ಗೊತ್ತಿಲ್ಲದೇ ಇರುವುದು. ಅದರಲ್ಲೂ ಅಪರಿಚಿತರೊಂದಿಗೆ ಮಾತನಾಡಲು ಭಯಗೊಳ್ಳುವುದು ಸಾಮಾನ್ಯ. ಮಾತಿನ ಕಲೆ ತಲೆ ಎತ್ತಿ ನಡೆಯುವುದನ್ನು ದೈರ್ಯವನ್ನು ತುಂಬುತ್ತದೆ. ಕರಗತ ಮಾಡಿಕೊಂಡರೆ ಅಪರಿಚಿತರೊಂದಿಗೆ ಮಾತು ಹೇಗೆ ಆರಂಭಿಸಬೇಕೆಂಬುದು ಸಲೀಸಾಗಿ ಬಿಡುತ್ತದೆ. ನಾಲ್ಕಾರು ಜನರ ಗುಂಪಿನಲ್ಲಿರುವಾಗ ಏನು ಮಾತನಾಡುವುದೆಂದು ತಿಳಿಯದೆ ಆ ಕಡೆ ಈ ಕಡೆ ನೋಡುತ್ತ ನಿಂತು ಬಿಡುತ್ತೇವೆ. ಅವರಲ್ಲಿ ನಾವೂ ಒಬ್ಬರೆಂಬ ಭಾವನೆ ಬರದೇ ಅವರ ಇರುವಿಕೆಯನ್ನು ಸಂತಸದಿಂದ ಕಳೆಯದೆ ಪೇಚಾಡುತ್ತೇವೆ. ಉಸಿರುಗಟ್ಟಿದ ವಾತಾವರಣದಲ್ಲಿ ನಿಂತಂತೆನಿಸಿ ಅಲ್ಲಿಂದ ಹೊರ ನಡೆದರೆ ಸಾಕೆಂದು ಅನಿಸುವುದೂ ಉಂಟು. ಅಂಥ ಸಮಯದಲ್ಲಿ ನೀವೂ ಅವರಲ್ಲೊಬ್ಬರು ಅಂತೆನಿಸಲು ಹೇಗೆ ಮಾತನಾಡಬೇಕೆಂದು ಯೋಚಿಸುತ್ತೀರಿ, ಆದರೆ ಮಾತನಾಡಿ ಏನಾದರೂ ತಪ್ಪಾದರೆಂದು ಬಾಯಿ ಮುಚ್ಚಿಕೊಂಡಿರುತ್ತೀರಿ. ನಡೆಯುತ್ತಿರುವ ಸಂಭಾಷಣೆಯಲ್ಲಿ ನೀವೂ ಭಾಗ ತೆಗೆದುಕೊಳ್ಳಬೇಕೆಂದರೆ ಏನು ಮಾಡಬೇಕೆಂಬುದಕ್ಕೆ ಇಲ್ಲಿವೆ ಕೆಲವು ಸಲಹೆಗಳು. – ಜಯಶ್ರೀ.ಜೆ.…

Read More

ಇಂಡಿ: ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಹೊಲದಲ್ಲಿ ೨೦ ಅಡಿ ಆಳದ ತೆರೆದ ಕೊಳವೆ ಬಾವಿಗೆ ಆಕಸ್ಮಿಕವಾಗಿ ಬಿದ್ದ ಎರಡು ವರ್ಷದ ಮಗು ಸಾತ್ವಿಕನನ್ನು ರಕ್ಷಿಸಲು ಸತತ ೨೦ ಗಂಟೆಗಳ ರಕ್ಷಣಾ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ ಮಗುವನ್ನು ರಕ್ಷಿಸುವಲ್ಲಿ ಯಶಸ್ವಿ ತಂಡದಲ್ಲಿ ಇಂಡಿಯ ಅಗ್ನಿಶಾಮಕ ತಂಡದಲ್ಲಿದ್ದ ಆರು ಜನ ಸಿಬ್ಬಂದಿಯನ್ನು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಡಾ. ಜಿ.ಪರಮೇಶ್ವರ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ.ಅಗ್ನಿ ಶಾಮಕ ತಂಡದ ಠಾಣಾಧಿಕಾರಿ ಗುರುಪಾದಪ್ಪ ತೇಲಿ, ಸಹಾಯಕ ಠಾಣಾಧಿಕಾರಿ ದೇವದಾನಮ್ಮ, ಮತ್ತು ಮುಬಾರಕ ಇಂಡಿಕರ, ಅನೀಲ ಚವ್ಹಾಣ, ಮಾರು ರಾಠೋಡ, ಮಹಮ್ಮದ ಅಲಿ ಬಂಥನಾಳ ಇವರಿಗೆ ರಾಜ್ಯ ಗೃಹ ಸಚಿವ ಡಾ. ಜಿ.ಪರಮೇಶ್ವರ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಗೌರವಿಸಿದರು.ಈ ರಕ್ಷಣಾ ಕಾರ್ಯಾಚರಣೆಯಲ್ಲಿ ತೋರಿದ ಧೈರ್ಯ ಹಾಗೂ ಸಮಯಪ್ರಜ್ಞೆ ಅನುಕರಣೀಯ. ಈ ಕುರಿತು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಪೋಲಿಸ್ ಮಹಾ ನಿರ್ದೇಶಕ ಹಾಗೂ ಮಹಾ ನಿರ್ದೇಶಕರು ಕರ್ನಾಟಕ ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಕಮಲ ಪಂತ ಪ್ರಶಂಸನಾ ಪತ್ರ…

Read More

ಇಂಡಿ: ಕರ್ತವ್ಯ ಲೋಪ ಹಿನ್ನಲೆ ಪ್ರಭಾರ ಪಿಡಿಓನ್ನು ಜಿಲ್ಲಾ ಪಂಚಾಯತ ಸಿಇಓ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.ಜಿಲ್ಲೆಯ ಇಂಡಿ ತಾಲ್ಲೂಕಿನ ಹಂಜಗಿ ಗ್ರಾಮ ಪಂಚಾಯತಿ ಪ್ರಭಾರ ಹಾಗೂ ಹಿರೇಬೇವನೂರ ಗ್ರಾಮ ಪಂಚಾಯತಿ ಪಿಡಿಓ ರವಿ ಕರ್ಜಗಿ ಅಮಾನತುಗೊಂಡವರು. ಇನ್ನು ನಮ್ಮ ಭೂಮಿ ನಮ್ಮ ತೋಟ ಯೋಜನೆಯಡಿಯಲ್ಲಿ ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಅದಕ್ಕಾಗಿ ರವಿ ಅವರನ್ನು ಅಮಾನತುಗೊಳಿಸಿ ಮುಂದಿನ ಶಿಸ್ತು ಕ್ರಮಕ್ಕೆ ಜಿಲ್ಲಾ ಪಂಚಾಯತ ಸಿಇಓ ರಿಷಿ ಆನಂದ ಆದೇಶ ಹೊರಡಿಸಿದ್ದಾರೆ.

Read More

ಇಂಡಿ: ಬಾಲಕಾರ್ಮಿಕ ಪದ್ಧತಿ ಜಗತ್ತಿನ ಪಿಡುಗು. ಮಕ್ಕಳನ್ನು ದುಡಿಸುವ ಪದ್ಧತಿ ರಾಷ್ಟ್ರಕ್ಕೆ ಕಳಂಕವಾಗಿದ್ದು, ಮಕ್ಕಳ ದುಡಿಮೆ ಮಾನವ ಅಭಿವೃದ್ಧಿಗೆ ಮಾರಕವಾಗಿದೆ. ಮಕ್ಕಳಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ, ಈ ಪದ್ಧತಿಯ ಕಡಿವಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ನಿಮಿತ್ತ ‘ಮಕ್ಕಳ ಶೈಕ್ಷಣಿಕ ಸವಲತ್ತುಗಳು’ಕುರಿತು ಮಾತನಾಡಿದರು.ಶಿಕ್ಷಣದಿಂದ ಬದುಕು ಕಟ್ಟಿಕೊಂಡು, ಪ್ರಗತಿ ಹೊಂದಲು ಸಾಧ್ಯ ಎಂಬ ಅರಿವು ಪೊಷಕರಲ್ಲಿ ಮೂಡಿಸಬೇಕು. ಬಾಲಕಾರ್ಮಿಕ ಪದ್ಧತಿ ವಿರುದ್ಧದ ನಿಜವಾದ ಅಸ್ತ್ರ ಎಂದರೆ ಸಾರ್ವತ್ರಿಕ ಶಿಕ್ಷಣ. ಪೋಷಕರು ಮಕ್ಕಳನ್ನು ಬಾಲ ಕಾರ್ಮಿಕರನ್ನಾಗಿಸದೆ ಅವರ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಬೇಕು ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಹಿರಿಯ ಶಿಕ್ಷಕ ಎಸ್ ಎಸ್ ಅರಬ ಮಾತನಾಡಿ, ಬಾಲ್ಯವು ಸಂತೋಷ, ನಗು ಮತ್ತು ಶಿಕ್ಷಣದ ಸಮಯವಾಗಿರಬೇಕು. ಬಾಲ್ಯಾವಸ್ಥೆಯಲ್ಲಿ ಮಕ್ಕಳನ್ನು ಮೂಲಭೂತ ಶಿಕ್ಷಣ, ಜ್ಞಾನ ಮತ್ತು ಕಲಿಕೆಯ ಪ್ರಕ್ರಿಯೆಯಲ್ಲಿ ತೊಡಗಿಸಬೇಕು. ಅವರ ಹಕ್ಕುಗಳನ್ನು ರಕ್ಷಿಸಬೇಕಾದದ್ದು ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕರ ಕರ್ತವ್ಯ ಎಂದು…

Read More

ಮುದ್ದೇಬಿಹಾಳ: ಕುಷ್ಟಗಿ ತಾಲೂಕಿನಲ್ಲಿ ನಡೆದ ಟಗರು ಕಾಳಗದಲ್ಲಿ ತಾಲೂಕಿನ ಶಿರೋಳ ಗ್ರಾಮದ ಟಗರು ಪ್ರಥಮ ಬಹುಮಾನವಾಗಿ ಎಚ್‌ಎಫ್ ಡಿಲಕ್ಸ್ ದ್ವಿಚಕ್ರ ವಾಹನ ಪಡೆದು ಬೀಗಿದೆ.ಶಿರೋಳ ಗ್ರಾಮದ ಪಮ್ಮು ದಾಸರ ಸಾಕಿದ್ದ ಟಗರು ಅಂದಾಜು ೮೦ಕೆಜಿ ಇದ್ದು ಯಾದಗಿರಿ ಜಿಲ್ಲೆಯ ಕೊಡೆಕಲ್ ಗ್ರಾಮದಿಂದ ಖರೀದಿಸಿದ್ದರಂತೆ. ಪ್ರತಿನಿತ್ಯ ಹುರುಳಿ, ಹಾಲು, ತತ್ತಿ, ಗೋದಿ, ಕಡಲೆಬೇಳೆ ಸೇರಿದಂತೆ ವಿಟ್ಯಾಮಿನ್ ಫುಡ್ ತಿನ್ನುವ ಈ ಟಗರು ಕಳೆದ ಹತ್ತಾರು ಕಾಳದಲ್ಲಿ ಬಹುಮಾನವನ್ನು ತಂದು ಕೊಟ್ಟಿದೆ. ಈ ವರೆಗೂ ಭಾಗವಹಿಸಿದ್ದ ೧೧ ಕಾಳಗದಲ್ಲಿ ೬ ಪ್ರಥಮ, ೩ ದ್ವಿತೀಯ, ೩ ತೃತೀಯ ೨ ಸಮಾಧಾನಕರ ಬಹುಮಾನವನ್ನು ಪಡೆದ ಈ ಟಗರಿಗೆ ೨ ವರ್ಷ ವಯಸ್ಸು.ಟಗರು ಕಾಳಗದಲ್ಲಿ ಹೆಚ್ಚಿನ ಯಶಸ್ಸು ಪಡೆಯುತ್ತಿರುವ ಈ ಟಗರು ನಮ್ಮೂರಿನ ಹೆಮ್ಮೆ ಎಂದು ಸ್ಥಳೀಯ ನಿವಾಸಿ ಸೋಮು ಶಿರೋಳ ಮೆಚ್ಚಿಕೊಂಡಿದ್ದು ಟಗರು ಸಾಕುವ ಯುವಕ ಚಿಕ್ಕವನಾಗಿದ್ದರೂ ಟಗರುಗಳನ್ನು ತುಂಬಾ ಚನ್ನಾಗಿ ಬೆಳೆಸುತ್ತಿದ್ದಾನೆ. ಈತ ೨,೪,೬,೮ ಹಲ್ಲುಗಳುಳ್ಳ ಟಗರುಗಳನ್ನು ಸಾಕಿದ್ದು ಎಲ್ಲ ಟಗರುಗಳು ಕಾಳಗದಲ್ಲಿ ಒಳ್ಳೆ…

Read More

ಬಸವನಬಾಗೇವಾಡಿ: ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಮಹಿಳಾ ವೇದಿಕೆ, ಐಕ್ಯೂಎಸಿ ಸಹಯೋಗದಲ್ಲಿ ಬೇಟಿ ಬಚಾವೊ ಬೇಟಿ ಪಡಾವೋ ಜನಜಾಗೃತಿ ಜಾಥಾವನ್ನು ಬುಧವಾರ ಹಮ್ಮಿಕೊಳ್ಳಲಾಗಿತ್ತು. ಮಹಾವಿದ್ಯಾಲಯದ ಮುಂಭಾಗ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ವ್ಹಿ.ಸೂರ್ಯವಂಶಿ ಜಾಥಾಕ್ಕೆ ಚಾಲನೆ ನೀಡಿದರು.ಜಾಥಾವು ಕಾಲೇಜಿನಿಂದ ಆರಂಭಗೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಸವೇಶ್ವರ ವೃತ್ತದಲ್ಲಿ ಜಾಥಾ ಸಮಾವೇಶಗೊಂಡ ನಂತರ ಜಾಥಾ ಉದ್ದೇಶಿಸಿ ಮಹಾವಿದ್ಯಾಲಯದ ಮಹಿಳಾ ವೇದಿಕೆ ಅಧ್ಯಕ್ಷೆ, ಇತಿಹಾಸ ಪ್ರಾಧ್ಯಾಪಕಿ ಡಾ.ಎಸ್.ಬಿ.ಜನಗೊಂಡ ಮಾತನಾಡಿ, ಪ್ರತಿಯೊಬ್ಬ ಪುರುಷನಿಗೆ ಹೆಣ್ಣು ತಾಯಿಯಾಗಿ, ಸಹೋದರಿಯಾಗಿ, ಪತ್ನಿಯಾಗಿ ಬೇಕು. ಅದೇ ಅವಳು ಮಗಳಾಗಿ ಬೇಡವಾಗಿರುವದು ನೋವಿನ ಸಂಗತಿ. ಇಂದು ಶಿಕ್ಷಣವು ಎಲ್ಲರ ಹಕ್ಕಾಗಿ ಪರಿವರ್ತನೆಯಾಗಿದ್ದರೂ ಸಹ ಸಮಾಜದಲ್ಲಿ ಹೆಣ್ಣಿನ ಶೋಷಣೆ ನಿಲ್ಲುತ್ತಿಲ್ಲ. ಪ್ರಜ್ಞಾವಂತರಾದ ನಾವೆಲ್ಲರೂ ಹೆಣ್ಣು ಭ್ರೂಣ ಹತ್ಯೆ ತಡೆಯವಲ್ಲಿ ಮುಂದಾಗಬೇಕು. ಆಗ ಮಾತ್ರ ಪ್ರತಿ ಪುರುಷನ ಬಾಳಿನಲ್ಲಿ ಹೆಣ್ಣು ತಾಯಿಯಾಗಿ, ಸಹೋದರಿಯಾಗಿ, ಪತ್ನಿಯಾಗಿ, ಮಗಳಾಗಿ ಬರಲು ಸಾಧ್ಯ. ಎಲ್ಲರೂ ಹೆಣ್ಣುಮಕ್ಕಳನ್ನು ಬೆಳೆಸುವ ಕಾರ್ಯ ಮಾಡಬೇಕೆಂದರು.ಜಾಥಾದಲ್ಲಿ ಕಾಲೇಜಿನ ಐಕ್ಯೂಎಸಿ ಮತ್ತು…

Read More

ಬಸವನಬಾಗೇವಾಡಿ: ವಿಜಯಪುರ ಜಿಲ್ಲೆಯಲ್ಲಿರುವ ನೂತನ ಎಂಟು ತಾಲೂಕುಗಳಿಗೆ ಎಲ್ಲ ಸರ್ಕಾರಿ ಕಚೇರಿಗಳನ್ನು ಮಂಜೂರು ಮಾಡಿ ರೈತರಿಗೆ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಬುಧವಾರ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ, ಅವಳಿ ಜಿಲ್ಲೆಯ ಉಸ್ತುವಾರಿ ಅಶೋಕ ಹಾರಿವಾಳ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.ಅಶೋಕ ಹಾರಿವಾಳ ಅವರು ಸಿಎಂ ಅವರಿಗೆ ತಮ್ಮ ಘನ ಸರ್ಕಾರ ನೂತನ ತಾಲೂಕುಗಳನ್ನು ಘೋಷಣೆ ಮಾಡಿದ್ದು ಶ್ಲಾಘನೀಯ. ನೂತನ ತಾಲೂಕುಗಳು ರಚನೆಯಾಗಿ ಸುಮಾರು ವರ್ಷಗಳು ಕಳೆದರೂ ಎಲ್ಲ ಸರ್ಕಾರಿ ಕಚೇರಿಗಳು ಇಲ್ಲದೇ ಇರುವದರಿಂದಾಗಿ ರೈತರಿಗೆ, ಸಾರ್ವಜನಿಕರಿಗೆ ಆಡಳಿತಾತ್ಮಕವಾಗಿ ತುಂಬಾ ತೊಂದರೆಯಾಗಿದೆ. ಕೂಡಲೇ ಎಲ್ಲ ಎಂಟು ತಾಲೂಕುಗಳಿಗೆ ಎಲ್ಲ ಸರ್ಕಾರಿ ಕಚೇರಿಗಳನ್ನು ಮಂಜೂರು ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಮನವಿಗೆ ಸಿಎಂ ಅವರು ಸ್ಪಂದಿಸಿದರು ಎಂದು ದೂರವಾಣಿ ಮೂಲಕ ಪತ್ರಿಕೆಗೆ ತಿಳಿಸಿದರು.

Read More

ವಿಶ್ವಕಾರ್ಮಿಕ & ಬಾಲಕಾರ್ಮಿಕ ವಿರೋಧಿ ದಿನಾಚರಣೆಯಲ್ಲಿ ನ್ಯಾಯಾಧೀಶೆ ಸೌಮ್ಯ ಹೂಲಿ ಮಾತು ಬಸವನಬಾಗೇವಾಡಿ: ಹದಿನಾಲ್ಕು ವರ್ಷದೊಳಗಿನ ಮಕ್ಕಳನ್ನು ಯಾವುದೇ ಕಾರಣಕ್ಕೂ ಯಾವುದೇ ಕೆಲಸಕ್ಕೆ ದುಡಿಯುವದಕ್ಕೆ ಕಳಿಸುವದು ಕಾನೂನುರೀತ್ಯ ಅಪರಾಧ. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ವಿದ್ಯಾವಂತರನ್ನಾಗಿ ಮಾಡಬೇಕೆಂದು ಹೆಚ್ಚುವರಿ ಸಿವ್ಹಿಲ್ ನ್ಯಾಯಾಧೀಶೆ ಸೌಮ್ಯ ಹೂಲಿ ಹೇಳಿದರು.ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ಕಾರ್ಮಿಕ ಇಲಾಖೆ ಸಹಯೋಗದಲ್ಲಿ ವಿಶ್ವಕಾರ್ಮಿಕ ದಿನಾಚರಣೆ, ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಅವರು, ಜನಸಾಮಾನ್ಯರಲ್ಲಿ ಕಾನೂನು ಅರಿವು ಬಹಳ ಮುಖ್ಯ. ಎಲ್ಲರೂ ಕಾನೂನುಗಳ ಬಗ್ಗೆ ಅರಿವು ಮೂಡಿಸಿಕೊಂಡು ಜಾಗೃತರಾಗಿ ಬಾಲಕಾರ್ಮಿಕರರಾಗುವುದನ್ನು ತಡೆಗಟ್ಟುವಲ್ಲಿ ಪಾತ್ರ ವಹಿಸಬೇಕು. ಯಾವ ಮಕ್ಕಳು ಬಾಲಕಾರ್ಮಿಕರಾಗದಂತೆ ನೋಡಿಕೊಳ್ಳುವದು ಪ್ರತಿಯೊಬ್ಬರ ಜವಾಬ್ದಾರಿ. ಮಕ್ಕಳು ಯಾವುದೇ ಕಾರಣಕ್ಕೂ ಶಾಲೆ ಬಿಡದೇ ನಿರಂತರವಾಗಿ ಶಾಲೆಗೆ ಬಂದು ಉತ್ತಮ ಅಧ್ಯಯನ ಮಾಡುವ ಮೂಲಕ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕೆಂದರು.ಕ್ಷೇತ್ರಶಿಕ್ಷಣಾಧಿಕಾರಿ ವಸಂತ ರಾಠೋಡ ಮಾತನಾಡಿ, ಸರ್ಕಾರ…

Read More