Author: editor.udayarashmi@gmail.com

ಮುದ್ದೇಬಿಹಾಳ: ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ಬೆಳಿಗ್ಗೆ ೧೦ಗಂಟೆಗೆ ಬಾಲಕಾರ್ಮಿಕ ವಿರೋಧಿ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.ತಾಲೂಕು ಕಾನೂನು ಸೇವಾ, ಸಮಿತಿ ನ್ಯಾಯವಾದಿಗಳ ಸಂಘ, ಕಾರ್ಮಿಕ ಇಲಾಖೆ ಹಾಗೂ ಇತರ ಎಲ್ಲ ಸರ್ಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಈ ಕಾರ್ಯಕ್ರಮವನ್ನು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ರವೀಂದ್ರಕುಮಾರ ಕಟ್ಟಿಮನಿ ಉದ್ಘಾಟಿಸುವರು.ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಸಂಪತ್ತಕುಮಾರ ಬಳೂಳಗಿಡದ ಉಪಸ್ಥಿತಿಯಲ್ಲಿ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಸ್.ಮಾಲಗತ್ತಿ ಅಧ್ಯಕ್ಷತೆ ವಹಿಸುವರು. ಸಹಾಯಕ ಸರ್ಕಾರಿ ಅಭಿಯೋಜಕರಾದ ನಾಘರಾಜ ಪೂಜಾರ ಮತ್ತು ಬಸವರಾಜ ಆಹೇರಿ, ತಹಶೀಲ್ದಾರ ಬಸವರಾಜ ನಾಗರಾಳ, ಅಪರ ಸರ್ಕಾರಿ ವಕೀಲ ಎಚ್.ಎಲ್.ಸರೂರ, ಪ್ರಭಾರ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಎಸ್.ಎಸ್.ಕಲ್ಮನಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ಸಾವಳಗಿ, ಪ್ರಭಾರ ಕಾರ್ಮಿಕ ನಿರೀಕ್ಷಕ ಆಯ್.ಎಸ್.ಇನಾಮದಾರ, ಸರ್ಕಾರಿ ಪ್ರೌಢ ಶಾಲೆಯ ಮುಖ್ಯಾಧ್ಯಾಪಕ ಎಸ್.ಎಸ್.ಕವಡಿಮಟ್ಟಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಶಿಶು ಅಭಿವೃದ್ಧಿ ಅಧಿಕಾರಿ ಶಿವಮೂರ್ತಿ ಕುಂಬಾರ ಅತಿಥಿಗಳಾಗಿ ಆಗಮಿಸಲಿದ್ದು ಹಿರಿಯ ನ್ಯಾಯವಾದಿ ಎನ್.ಆರ್.ಮೊಕಾಶಿ ಬಾಲಕಾರ್ಮಿಕ ನಿಷೇದ ಕಾಯ್ದೆ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.

Read More

ಮುದ್ದೇಬಿಹಾಳ: ತಾಲೂಕಿನ ಆಲೂರು ಗ್ರಾಮದ ಪಾನ್‌ಶಾಪ್ ನಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಪ್ರಕರಣ ದಾಖಲಾಗಿದೆ.ಬಸಪ್ಪ ಭೀಮಪ್ಪ ಬಿರಾದಾರ ಅಕ್ರಮ ಮಧ್ಯ ಮಾರಾಟಗಾರ. ಈತನು ತನ್ನ ಹತ್ತಿರ ಯಾವುದೇ ಪರ್ಮಿಟ ವ ಲೈಸನ್ಸ್ ಇಲ್ಲದೇ ಅನಧಿಕೃತವಾಗಿ ಮದ್ಯ ತುಂಬಿದ ಟೆಟ್ರಾ ಪ್ಯಾಕೇಟ್‌ಗಳನ್ನು ತನ್ನ ತಾಬಾದಲ್ಲಿ ಇಟ್ಟುಕೊಂಡು ಆಲೂರ ಗ್ರಾಮದ ಬಸ್ ನಿಲ್ದಾಣ ಹತ್ತಿರ ಇರುವ ತನ್ನ ಪಾನ್ ಶಾಪ್ ನಲ್ಲಿ ಅಕ್ರಮ ಮಧ್ಯ ಮಾರಾಟ ಮಾಡುವಾಗ ಪೊಲೀಸರ ಕೈಗೆ ಸಿಕ್ಕಿದ್ದು ಪಿಎಸ್‌ಐ ಸಂಜೀವ ತಿಪರೆಡ್ಡಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.ಆರೋಪಿತನಿಂದ ೧೮೦ ಎಮ್‌ಎಲ್‌ದ ಬ್ಯಾಗ್‌ಪೈಪರ್ ಅಂತಾ ಬರೆದ ಒಟ್ಟು ೧೨ ವಿಸ್ಕಿ ಪ್ಯಾಕೆಟ್‌ಗಳು, ೧೨ ಟುಬರ್ಗ ಪ್ರೀಮಿಯಮ್ ಬಿಯರ್ ಬಾಟಲಿಗಳನ್ನು ವಶಕ್ಕೆ ಪಡೆಯಲಾಗಿದೆ.

Read More

ಗ್ರಾಪಂ ಜನಪ್ರತಿನಿಧಿಗಳಿಗೆವಿಜಯಪುರ ಜಿಪಂ ಸಿಇಒ ರಿಷಿ ಆನಂದ ಸೂಚನೆ ದೇವರಹಿಪ್ಪರಗಿ: ಡೋಣಿ ನದಿಯಿಂದ ಯಾಳವಾರ ಗ್ರಾಮದ ಸೇತುವೆ ಸಂಪೂರ್ಣ ಜಲಾವೃತವಾಗಿದೆ. ನೀರು ಸರಾಗವಾಗಿ ಹೋಗಲು ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ ಎಂದು ವಿಜಯಪುರ ಜಿಲ್ಲಾ ಪಂಚಾಯಿತಿ ಸಿಇಒ ರಿಷಿ ಆನಂದ ಹೇಳಿದರು.ತಾಲ್ಲೂಕಿನ ಸಾತಿಹಾಳ ಹಾಗೂ ಯಾಳವಾರ ಗ್ರಾಮಗಳ ಪಂಚಾಯಿತಿ ಹಾಗೂ ಸೇತುವೆಗಳಿಗೆ ಬುಧವಾರ ಭೇಟಿ ನೀಡಿ ಮಾತನಾಡಿದರು.ಈ ವರ್ಷ ಅತೀ ಹೆಚ್ಚು ಮಳೆಯಾಗುವ ನಿರೀಕ್ಷೆ ಇರುವುದರಿಂದ ಗ್ರಾಮದಲ್ಲಿ ಮಣ್ಣಿನ ಮನೆ ಮತ್ತು ಶಿಥಿಲಗೊಂಡ ಮನೆಗಳನ್ನು ಗುರುತಿಸಿ ಅಂಥ ಮನೆಗಳ ಸದಸ್ಯರನ್ನು ಬೇರೆ ಕಡೆ ಸ್ಥಳಾಂತರಿಸಬೇಕು ಎಂದು ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ಜೊತೆ ಮಾತನಾಡಿ, ಮಳೆಯಿಂದಾಗಿ ಆಗಬಹುದಾದ ಅನಾಹುತಗಳನ್ನು ತಡೆಗಟ್ಟಲು ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನ ತಾವೆಲ್ಲರೂ ಸೇರಿ ನಿರ್ಧರಿಸಬೇಕು ಎಂದು ಹೇಳಿದರು. ನಂತರ ಯಾಳವಾರ ಸೇತುವೆಗೆ ಭೇಟಿ ನೀಡಿ, ಹೆಚ್ಚಾಗಿ ಮಳೆಯಾದ ಸಂದರ್ಭದಲ್ಲಿ ಗ್ರಾಮಸ್ಥರು ಸೇತುವೆಯಲ್ಲಿ ಸಂಚಾರ ಮಾಡದಂತೆ ನೋಡಿಕೊಳ್ಳಬೇಕು. ಇದರಿಂದಾಗುವ ಅನಾಹುತಗಳನ್ನು ಮುಂಜಾಗ್ರತ ಕ್ರಮ ಕೈಗೊಂಡು ಜಿಲ್ಲಾ ಪಂಚಾಯತಿ ವರದಿ ನೀಡಬೇಕು ಎಂದು ಪಿಡಿಓ…

Read More

ದೇವರಹಿಪ್ಪರಗಿ: ಮಕ್ಕಳಲ್ಲಿ ಸ್ವಯಂ ಮೌಲ್ಯ, ಆತ್ಮವಿಶ್ವಾಸ, ಸೃಜನಶೀಲತೆ, ಸಮಾನತೆ, ಶಾಂತಿ ಮನೋಭಾವದಂತಹ ಭಾವನೆಗಳನ್ನು ಮೂಡಿಸಲು ಶ್ರಮಿಸೋಣ ಎಂದು ತಾಲ್ಲೂಕು ಪಂಚಾಯಿತಿ ಇಓ ರಾಮು ಅಗ್ನಿ ಹೇಳಿದರು.ತಾಲ್ಲೂಕಿನ ಕೋರವಾರ ಸರ್ಕಾರಿ ಕನ್ನಡ ಶಾಲೆ ಹಾಗೂ ಮುಳಸಾವಳಗಿ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಮಂಗಳವಾರ ಅಂತರಾಷ್ಟ್ರೀಯ ಆಟದದಿನದ ಅಂಗವಾಗಿ ಆಟದ ಹಕ್ಕನ್ನು ಸಂಭ್ರಮಿಸುವ ಚಟುವಟಿಕೆಗಳಿಗೆ ತಾಲ್ಲೂಕು ಪಂಚಾಯಿತಿ ಇಓ ರಾಮು ಅಗ್ನಿ ಚಾಲನೆ ನೀಡಿ ಮಾತನಾಡಿದರು.ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಅಂತರರಾಷ್ಟ್ರೀಯ ಆಟದ ದಿನದ ಅಂಗವಾಗಿ ಆಟದ ಹಕ್ಕನ್ನು ಸಂಭ್ರಮಿಸಲು ವಿಶ್ವಸಂಸ್ಥೆಯು ಅಂಗೀಕರಿಸಿ ಘೋಷಿಸಿದ ರಾಷ್ಟ್ರೀಯ ಆಟದ ದಿನವಾಗಿದೆ.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತ್ ಇಲಾಖೆ ಮಕ್ಕಳಿಗೆ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಿ ಲಿಂಗ, ಜಾತಿ, ವರ್ಗ ಮೂಲಗಳನ್ನು ತೊಡೆದು ಹಾಕಲು ಅರಿವು ಮೂಡಿಸುವುದಾಗಿದೆ ಎಂದರು. ನಂತರ ಕೋರವಾರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಸರ್ಕಾರಿ ಕನ್ನಡ ಶಾಲೆಯಲ್ಲಿ ಜರುಗಿದ ಒಳಾಂಗಣ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಕ್ಕಳೊಂದಿಗೆ ಚೆಸ್ ಮತ್ತು ಕೇರಂ ಆಟಗಳನ್ನು ಆಡಿ ಸಂಭ್ರಮಿಸಿದರು.ಯೋಜನಾಧಿಕಾರಿ ಶ್ರೀನಿವಾಸ ಪವಾರ, ತಾಂತ್ರಿಕ ಸಂಯೋಜಕ…

Read More

ಸಿಂದಗಿ: ರಾಣಿ ಚನ್ನಮ್ಮ ಹಾಗೂ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ಮೂರ್ತಿಗಳು ಭವ್ಯ ಹಾಗೂ ನಯನ ಮನೋಹರವಾಗಿವೆ. ವಿಜಯಪುರ ಜಿಲ್ಲೆಯಲ್ಲಿಯೇ ಇಂತಹ ಭವ್ಯ ಮೂರ್ತಿಗಳು ಪ್ರತಿಷ್ಠಾಪನೆಗೊಂಡಿದ್ದು, ಸಿಂದಗಿಯಲ್ಲಿಯೇ ಪ್ರಥಮ ಎಂದು ಕೂಡಲಸಂಗಮ ಜಗದ್ಗುರು ಪೀಠದ ಜಗದ್ಗುರು ಜಯಬಸವ ಮೃತ್ಯುಂಜಯ ಸ್ವಾಮಿಗಳು ಹೇಳಿದರು.ನಗರದಲ್ಲಿ ಕನಕದಾಸ ವೃತ್ತದ ಬಳಿ ಎರಡೂ ಪುತ್ಥಳಿಗಳ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಅವರು, ಶಾಸಕ ಅಶೋಕ ಮನಗೂಳಿ ಅವರ ಮುತುವರ್ಜಿ ಹಾಗೂ ನೇತೃತ್ವದಲ್ಲಿ ಎರಡೂ ಮೂರ್ತಿಗಳು ಸ್ಥಾಪನೆಗೊಂಡದ್ದು ಶ್ಲಾಘನೀಯ ಎಂದು ಹರ್ಷವ್ಯಕ್ತಪಡಿಸಿದರು.ಈ ವೇಳೆ ಶಾಸಕ ಅಶೋಕ ಮನಗೂಳಿ ಮಾತನಾಡಿ, ತಾಲೂಕಿನ ಜನತೆಯ ಬಹು ದಿನಗಳ ಬೇಡಿಕೆಯಾಗಿದ್ದ ಎರಡೂ ಮೂರ್ತಿಗಳ ಪ್ರತಿಷ್ಠಾಪನೆ ನನ್ನ ಅವಧಿಯಲ್ಲಿಯೇ ಸಾಕಾರಗೊಂಡದ್ದು ನನಗೆ ಹರ್ಷ ತಂದಿದೆ. ಈ ಮೂರ್ತಿಗಳ ಅನಾವರಣ ಕಾರ್ಯಕ್ರಮವು ಟಿಪ್ಪು ಸುಲ್ತಾನ ವೃತ್ತದ ಕಾಮಗಾರಿ ಪೂರ್ಣಗೊಂಡ ನಂತರ ಮೂರೂ ಮೂರ್ತಿಗಳ ಉದ್ಘಾಟನಾ ಕಾರ್ಯಕ್ರಮವನ್ನು ರಾಜ್ಯದ ಹರಗುರು ಚರಮೂರ್ತಿಗಳ ಸಾನಿಧ್ಯ, ರಾಜಕೀಯ ದುರಿಣರ ಸಮ್ಮುಖ ಹಾಗೂ ಮುಖ್ಯಮಂತ್ರಿಗಳ ಹಸ್ತದಿಂದ ನೆರವೇರಿಸಲಾಗುವುದು ಎಂದು ಹೇಳಿದರು.ಕನಕದಾಸ ವೃತ್ತದಲ್ಲಿ…

Read More

ವಿಜಯಪುರ ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಪ್ರಗತಿ ಪರಿಶೀಲನಾ ಸಭೆ ವಿಜಯಪುರ: ೨೦೨೪-೨೫ನೇ ಸಾಲಿಗೆ ಸಿಎಂಕೆಕೆವೈ ಯೋಜನೆಯಡಿ ಕೌಶಲ್ಯ ತರಬೇತಿ ಕೈಗೊಳ್ಳಲು ಪ್ರಸ್ತುತ ಜಿಲ್ಲೆಯಲ್ಲಿ ಮಾನ್ಯತೆ ಹೊಂದಿದ ಖಾಸಗಿ ತರಬೇತಿ ಸಂಸ್ಥೆಗಳು ಹೊಂದಿರುವ ಜಾಬ್‌ರೋಲ್‌ಗಳನ್ನು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ ಅಂತಿಮವಾಗಿ ಆಯ್ಕೆ ಮಾಡಿದ ಜಾಬ್‌ರೋಲ್‌ಗಳನ್ನು ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕೌಶಲ್ಯ ಮಿಷನ್ ಸಮಿತಿಯ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಡೇ-ನಲ್ಮ್ ಯೋಜನೆಯ ಎಲ್ಲ ಉಪಘಟಕಗಳ ಪ್ರಗತಿ ಪರಿಶೀಲನೆ, ಪಿ.ಎಂ. ಸ್ವ-ನಿಧಿ ಅಡಿ ಬಾಕಿ ಇರುವ ಫಲಾನುಭವಿಗಳ ಅರ್ಜಿಗಳನ್ನು ಪಡೆದು ಸಾಲ ಮಂಜೂರಾತಿ ಹಾಗೂ ವಿತರಣೆಗೆ ಆದ್ಯತಾನುಸಾರ ಕ್ರಮವಹಿಸುವಂತೆಯೂ, ಸ್ವ-ನಿಧಿ ಸೇ ಸಮೃದ್ಧಿ ಯೋಜನೆಯಡಿ ೮ ಸಾಮಾಜಿಕ ಭದ್ರತಾ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ಒದಗಿಸಲು ಕ್ರಮ ವಹಿಸುವಂತೆ ಸಂಬAಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.೨೦೨೪-೨೫ನೇ ಸಾಲಿನ ಡೇ-ನಲ್ಮ್ ಅಭಿಯಾನದಡಿ ೪೧೦ ಮಹಿಳಾ ಸ್ವ-ಸಹಾಯ ಸಂಘಗಳ ರಚನೆ, ೨೦ ಒಕ್ಕೂಟ ರಚನೆ, ೧೬೧…

Read More

ತಿಕೋಟಾ: ತಾಲ್ಲೂಕಿನ ಅರಕೇರಿ ಸಮೀಪದ ಮುಮ್ಮೆಟ್ಟ ಗುಡ್ಡದ ಅಮೋಘಸಿದ್ದ ದೇವಸ್ಥಾನಕ್ಕೆ ಭಕ್ತರು ಹೋಗಲು ಅನೂಕೂಲವಾಗಲೆಂದು ವಿಜಯಪುರ ಕೇಂದ್ರ ಬಸ್ ನಿಲ್ದಾಣದಿಂದ ಬಸ್ ಸೇವೆ ಆರಂಭಿಸುವಂತೆ ಸಚಿವ ಎಂ.ಬಿ.ಪಾಟೀಲ ನೀಡಿದ ನಿರ್ದೆಶನದಂತೆ ಆಪ್ತ ಕಾರ್ಯದರ್ಶಿ ಸಂತೋಷ ಲೋಕುರೆ ಅವರು ಡಿಟಿಓ ದೇವಾನಂದ ಬಿರಾದಾರ ಅವರಿಗೆ ವಿನಂತಿಸಿದ್ದರಿಂದ ಬುಧವಾರ ಬಸ್ ಸೇವೆ ಆರಂಭವಾಯಿತು.ವಿಜಯಪುರ ಕೇಂದ್ರ ಬಸ್ ನಿಲ್ದಾಣದಿಂದ ಬೆಳಗ್ಗೆ ಎಂಟು ಗಂಟೆಗೆ, ಮದ್ಯಾಹ್ನ ಒಂದು ಗಂಟೆಗೆ, ಸಾಯಂಕಾಲ ಐದು ಗಂಟೆಗೆ ವಿಜಯಪುರದಿಂದ ಮುಮ್ಮೆಟ್ಟಿಗುಡ್ಡಕ್ಕೆ ಹೊರಡುವದು. ಕೇಂದ್ರ ಬಸ್ ನಿಲ್ದಾಣದಿಂದ ರಾಮಮಂದಿರ ಲಿಂಗದಗುಡಿರಸ್ತೆ, ಬಂಜಾರಾಕ್ರಾಸ್, ಬಾಯ್ ಪಾಸ್‌, ಮೋತಾಬಾಯಿಕ್ರಾಸ್, ಕರಾಡದೊಡ್ಡಿ ಕ್ರಾಸ್, ಅರಕೇರಿ, ಅರಕೇರಿ ಎಲ್.ಟಿ.2, ಅರಕೇರಿ ಎಲ್.ಟಿ.3 ಮಾರ್ಗವಾಗಿ ಮುಮ್ಮೆಟ್ಟಿಗುಡ್ಡ ತಲುಪುವದು.ವಿಶೇಷ ಪೂಜೆ: ನೂತನವಾಗಿ ಆರಂಭವಾದ ಬಸ್ ಗೆ ತೆಂಗಿನ ಗರಿ ಹಾಗೂ ಹೂವುಗಳಿಂದ ಸಿಂಗರಿಸಿ ಬಲೂನಗಳನ್ನು ಕಟ್ಟಿ ಪೂಜೆ ಮಾಡಲಾಯಿತು.ಈ ಸಂದರ್ಭದಲ್ಲಿ ಮುಮ್ಮೆಟ್ಟಿಗುಡ್ಡದ ಪೂಜಾರಿ ನಾಡಗೌಡ ಒಡೆಯರ್, ಮುಖಂಡರಾದ ಅರವಿಂದ ರಾಠೋಡ, ರಾವಸಾಬ ಮಾನೆ, ಸೊಮು ಬರಕಡೆ, ಪ್ರಕಾಶ ರಾಠೋಡ, ಸಿದ್ದು ದಳವಾಯಿ,…

Read More

ಮುದ್ದೇಬಿಹಾಳ: ಪಟ್ಟಣದ ನ್ಯಾಯಾಲಯದ ಎದುರು ಮಂಗಳವಾರ ಯುವಕನೋರ್ವನಿಗೆ ಕಬ್ಬಿಣದ ರಾಡ್ ನಿಂದ ಮನಸೋ ಇಚ್ಛೆ ಥಳಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗೇವಾಡಿ ತಾಲೂಕು ಜಯವಾಡಗಿ ಗ್ರಾಮದ ೮ ಜನರ ವಿರುದ್ಧ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.ಭೀಮಪ್ಪ ಕರಳ್ಳಿ, ನಿಂಗಪ್ಪ ಕರಳ್ಳಿ, ಬಸಪ್ಪ ಕರಳ್ಳಿ, ಶಂಕ್ರಪ್ಪ ಕರಳ್ಳಿ, ಯಲ್ಲಪ್ಪ ಕರಳ್ಳಿ , ಮಲ್ಲಪ್ಪ ಕರಳ್ಳಿ, ಸೋಮಪ್ಪ ಕರಳ್ಳಿ, ಶಿವಪ್ಪ ಕರಳ್ಳಿ ಇವರ ಮೇಲೆ ಭಾರತೀಯ ದಂಡ ಸಂಹಿತೆಯ ಕಲಂ ೧೪೩, ೧೪೭, ೧೪೮, ೩೪೧, ೩೨೩, ೩೨೬, ೧೦೯, ೫೦೪, ೫೦೬ ಮತ್ತು ಓದಬಲ್ಲ ೧೪೯ ಕಲಂಗಳ ಅಡಿ ಪ್ರಕರಣ ದಾಖಲಾಗಿದೆ.ಗಾಯಾಳು ಸಂತೋಷ ಕಾಡಮೆಗೇರಿ ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರದ ಆಸ್ಪತ್ರೆಗೆ ದಾಖಲಾಗಿದ್ದಾನೆ. ಘಟನೆ ಕುರಿತು “ಉದಯರಶ್ಮಿ” ಯೊಂದಿಗೆ ಮಾತನಾಡಿ ನನ್ನ ತಾಯಿಯ ತವರೂರು ಜಯವಾಡಗಿ. ನಾನು ಅಲ್ಲಿಯೇ ವಾಸವಿದ್ದೆ. ಕಳೆದ ೧೫ ದಿನಗಳ ಹಿಂದೆ ಯುವತಿಗೆ ಈರುಳ್ಳಿಯ ಬೆಲೆ ಕೇಳಿದ್ದಕ್ಕಾಗಿ ನನಗೆ ಹೊಡೆಯಲು ಮುಂದಾಗಿದ್ದರು. ಭಯದಿಂದ ನಾನು ಊರು…

Read More

ವಿಜಯಪುರ: ೧೧೦ ಕೆವಿ ದೇವರ ಹಿಪ್ಪರಗಿ, ೧೧೦ ಕೆವಿ ಅಥರ್ಗಾ, ೧೧೦ ಕೆವಿ ಹಿರೇಮಸಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ ಜೂನ್ ೧೪ ರಂದು ಬೆಳಗ್ಗೆ ೮ ಗಂಟೆಯಿಂದ ಸಾಯಂಕಾಲ ೪ ಗಂಟೆಯವರೆಗೆ ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ ೧೧ ಕೆವಿ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಆದ ಕಾರಣ ಸದರಿ ಮಾರ್ಗಗಳಲ್ಲಿ ಬರುವ ಗ್ರಾಹಕರು ಸಾರ್ವಜನಿಕರು ಸಹಕರಿಸಬೇಕು ಎಂದು ಇಂಡಿ ಹೆಸ್ಕಾಂ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ೧೧೦ ಕೆವಿ ಝಳಕಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ೧೦ ಎಂ.ವಿ ಬದಲು ೨೦ ಎಂ.ವಿ ಶಕ್ತಿ ಪರಿವರ್ತಕ ಅಳವಡಿಸುವ ಕಾಮಗಾರಿ ಕೈಗೊಂಡಿರುವುದರಿಂದ ಜೂನ್ ೧೪ ರಿಂದ ೧೬ ವರೆಗೆ ಬೆಳಗ್ಗೆ ೬ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ೧೧ ಕೆವಿ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಆದ ಕಾರಣ ಸದರಿ ಮಾರ್ಗಗಳಲ್ಲಿ ಬರುವ ಗ್ರಾಹಕರು ಸಾರ್ವಜನಿಕರು ಸಹಕರಿಸಬೇಕು ಎಂದು ಇಂಡಿ ಹೆಸ್ಕಾಂ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More