Author: editor.udayarashmi@gmail.com

ವಿಜಯಪುರ: ವಿಜಯಪುರ ಮಹಾನಗರಪಾಲಿಕೆ ವತಿಯಿಂದ ೨೦೨೪-೨೫ನೇ ಸಾಲಿನ ಕೇಂದ್ರ ಪುರಸ್ಕೃತ ಯೋಜನೆಯಾದ ದೀನದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಉಪ ಘಟಕವಾರು ಭೌತಿಕ ಮತ್ತು ಆರ್ಥಿಕ ಗುರಿಯನ್ನು ನಿಗದಿಪಡಿಸಿದ್ದು, ಸ್ವಯಂ ಉದ್ಯೋಗ(ದ್ವಿ-ಪ್ರತಿ ಅರ್ಜಿ)-೭೮, ಗುಂಪು ಸಮೂಹ ಉದ್ಯಮಗಳು ಯೋಜನೆ – ೦೬, ಸ್ವಸಹಾಯ ಗುಂಪುಗಳ ರಚನೆ-೨೦೧, ಸ್ವಸಹಾಯ ಗುಂಪುಗಳ ಬ್ಯಾಂಕ ಲಿಂಕೇಜ್-೧೦೧ ಸದರಿ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಬಿಪಿಎಲ್/ಅಂತ್ಯೋದಯ ರೇಷನ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್, ಮತದಾರರ ಗುರುತೀನ ಚೀಟಿ, ವಿದ್ಯಾರ್ಹತೆ ಪ್ರಮಾಣ ಪತ್ರ ಮತ್ತು ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ದ್ವಿಪ್ರತಿಯಲ್ಲಿ ಕನಿಷ್ಠ ೧೮ ರಿಂದ ೫೦ ವಯಸ್ಸಿನ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಜೂನ್ ೨೬ ರಂದು ಸಾಯಂಕಾಲ ೫ ಗಂಟೆಯ ಒಳಗಾಗಿ ಮಹಾನಗರ ಪಾಲಿಕೆಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಯಾಗಿ ಮಹಾನಗರಪಾಲಿಕೆಯ ಡೇ-ನಲ್ಮ್ ವಿಭಾಗವನ್ನು ಸಂಪರ್ಕಿಸಬಹುದು ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ/ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ(ಆಂಗ್ಲ ಮಾಧ್ಯಮ) ಶಾಲೆಗಳ ೨೦೨೪-೨೫ನೇ ಸಾಲಿನ ೬ನೇ ತರಗತಿ ಪ್ರವೇಶಾತಿಗೆ ನಡೆಸಿದ ಪರೀಕ್ಷೆಯ ಮೆರಿಟ್ ಫಲಿತಾಂಶವನ್ನು ಪ್ರಕಟಿಸಲಾಗಿದ.ಜೂನ್ ೧೪ರಂದು ಬೆಳಗ್ಗೆ ೯ ಗಂಟೆಯಿಂದ ಆಯ್ಕೆಗೊಂಡ ವಿದ್ಯಾರ್ಥಿ/ನಿಯರ ಕೌನ್ಸಲಿಂಗ್ ನ್ನು ಅಫಜಲ್‌ಪುರ್ ಟಕ್ಕೆಯಲ್ಲಿರುವ ಸರ್ಕಾರಿ ಮುಸ್ಲಿಂ ವಸತಿ ಶಾಲೆಯಲ್ಲಿ ಮಾಡಲಾಗುವುದು. ಸದರಿ ವಿದ್ಯಾರ್ಥಿಗಳು ತಮ್ಮ ಸಿಂಧೂವಾದ ಪ್ರವೇಶ ಪ್ರಮಾಣ ಪತ್ರವನ್ನು, ತಾವು ಆಯ್ಕೆಯೊಳಿಸಿದ ವಸತಿ ಶಾಲೆಗಳಿಗೆ ಸಂಬಂಧಪಟ್ಟ ದಾಖಲಾತಿಗಳನ್ನು ತೆಗೆದುಕೊಂಡು ಜೂನ್ ೨೧ರಂದು ಪ್ರವೇಶ ಪಡೆಯಲು ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳ ಪ್ರಾಂಶುಪಾಲರು ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ದೂ.೦೮೩೫೨-೨೯೫೫೨೩ಕ್ಕೆ ಸಂಪರ್ಕಿಸಬೇಕು ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಆಸ್ತಿ ತೆರಿಗೆ ಪಾವತಿಸಲು…

Read More

ವಿಜಯಪುರ: ಸಮಾಜ ಕಲ್ಯಾಣ ಇಲಾಖೆಯಿಂದ ೨೦೨೪-೨೫ನೇ ಸಾಲಿಗಾಗಿ ಪರಿಶಿಷ್ಟ ಜಾತಿಯ ಹಾಗೂ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ವಿಜಯಪುರ ಜಿಲ್ಲೆಯಲ್ಲಿ ವಾಸವಾಗಿರುವ ಪರಿಶಿಷ್ಟ ಜಾತಿಯ ಹಾಗೂ ಪರಿಶಿಷ್ಟ ಪಂಗಡದ ಕಾನೂನು ಪದವೀಧರರು ಆನ್‌ಲೈನ್ ಮೂಲಕ ಅರ್ಜಿಯನ್ನು ಪರಿಶಿಷ್ಟ ಜಾತಿ ಅಭ್ಯರ್ಥಿಗಳು sw.kar.nic.inರಲ್ಲಿ & ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು sw.kar.nic.in ರಲ್ಲಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ತಿಳಿಸಲಾಗಿದೆ. ಜೂನ್ ೧೮ ರಿಂದ ಅರ್ಜಿಸಲ್ಲಿಸಬಹುದಾಗಿದ್ದು, ಜುಲೈ ೩೧ ಕೊನೆಯ ದಿನವಾಗಿದೆ.ಆನ್‌ಲೈನ್ ಅರ್ಜಿ ನಮೂನೆ ಹಾಗೂ ಅಗತ್ಯ ದಾಖಲೆಗಳಿಗೆ ಪತ್ರಾಂಕಿತ ಅಧಿಕಾರಿಗಳಿಂದ ದೃಢಿಕರಣದೊಂದಿಗೆ ಅರ್ಜಿಯನ್ನು ಉಪನಿರ್ದೇಶಕರು, ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಕಚೇರಿಗಳಿಗೆ ಸಲ್ಲಿಸತಕ್ಕದ್ದು ಮತ್ತು ಇತರೆ ಹೆಚ್ಚಿನ ವಿವರಗಳಿಗಾಗಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ವಿಜಯಪುರ ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಮಾಜಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪುಂಡಲೀಕ ಮಾನವರ ತಿಳಿಸಿದ್ದಾರೆ.

Read More

ಜಿಪಂ ಸಿಇಒ ರಿಷಿ ಆನಂದ ಅಧಿಕಾರಿಗಳಿಗೆ ಸೂಚನೆ | ಪ್ರವಾಹ ಕಾಮಗಾರಿ ಪರಿಶೀಲನೆ ವಿಜಯಪುರ: ಹೆಗಡಿಹಾಳ, ಸಾತಿಹಾಳ ಹಾಗೂ ಯಾಳವಾರ ಗ್ರಾಮಗಳಲ್ಲಿ ಡೋಣಿ ನದಿಯಿಂದ ಉಂಟಾಗುವ ಪ್ರವಾಹ ನಿರ್ವಹಣೆಗೆ ಅಗತ್ಯ ಕ್ರಮಕೈಗೊಳ್ಳುವಂತೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅಧಿಕಾರಿಗಳಿಗೆ ಸೂಚಿಸಿದರು.ಬುಧವಾರ ಜಿಲ್ಲೆಯ ಹೆಗಡಿಹಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಉಕುಮನಾಳ ಗ್ರಾಮದಲ್ಲಿ ಈ ಹಿಂದೆ ಪ್ರವಾಹ ಬಂದ ಹಿನ್ನೆಲೆಯಲ್ಲಿ ಲೋಕೋಪಯೋಗಿ ಹಾಗೂ ಗ್ರಾಮ ಪಂಚಾಯತಿ ವತಿಯಿಂದ ಪ್ರವಾಹವು ಸರಾಗವಾಗಿ ಸಾಗುವಂತೆ ಕೈಗೊಂಡ ಕಾಮಗಾರಿಗಳನ್ನು ಪರಿಶೀಲಿಸಿದರು.ಈ ಬಾರೀ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಅತೀವೃಷ್ಟಿಯಿಂದ ಪ್ರವಾಹ ಬರುವ ಸಂಭವವಿದ್ದು, ಪ್ರವಾಹ ನಿಯಂತ್ರಣದ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಕುಡಿಯುವ ನೀರಿನ ಟ್ಯಾಂಕ್ ಸ್ವಚ್ಛಗೊಳಿಸುವುದು, ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕಾರ್ಯಾತ್ಮಕ ಸ್ಥಿತಿಯಲ್ಲಿಡಬೇಕು ಹಾಗೂ ಗ್ರಾಮದಲ್ಲಿನ ಚರಂಡಿಗಳನ್ನು ಸ್ವಚ್ಚಗೊಳಿಸಬೇಕು. ಸಾರ್ವಜನಿಕರಿಗೆ ಕುಡಿಯಲು…

Read More

ವಿಜಯಪುರ: ಓದಿನೊಂದಿಗೆ ಪಠ್ಯೇತರ ಚಟುವಟಿಕೆಯೂ ಮುಖ್ಯವಾಗಿದೆ. ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಅವರು ಹೇಳಿದರು.ಅವರು, ಹಿಟ್ಟಿನಹಳ್ಳಿ ಗ್ರಾಮದ ಸರಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಳೊಂದಿಗೆ ಸಂವಾದ ನಡೆಸಿದರು. ಅಂತರಾಷ್ಟ್ರೀಯ ಕ್ರೀಡಾ ದಿನ ಅಂಗವಾಗಿ ವಿಜಯಪುರ ತಾಲೂಕಿನ ಹಿಟ್ಟಿನಹಳ್ಳಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಗ್ರಂಥಾಲಯ, ಸರಕಾರಿ ಶಾಲೆ ಹಾಗೂ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ. ಪಾಠದೊಂದಿಗೆ ಕ್ರೀಡೆಗಳಾದ ಚೆಸ್, ಕೇರಂ, ಬ್ಯಾಡ್ಮಿಂಟನ್, ವ್ಹಾಲಿಬಾಲ್, ಥ್ರೊಬಾಲ್, ಕಬಡ್ಡಿ, ಖೋ ಖೋ ಹಾಗೂ ಇತರೆ ಆಟಗಳನ್ನು ಪ್ರತಿನಿತ್ಯ ರೂಢಿಸಿಕೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ಕಾಯ್ದುಕೊಳ್ಳಬಹುದು. ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಆಟೋಟಗಳಲ್ಲಿ ಪಾಲ್ಗೊಳ್ಳಬೇಕು. ಶಾಲಾ ಮಕ್ಕಳು ಮೊಬೈಲ್ ಬಳಕೆಯಿಂದ ದೂರವಿರಬೇಕು. ಓದಿನೊಂದಿಗೆ ಆಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು, ಇದರಿಂದ ನಾಯಕತ್ವ ಗುಣ, ಕ್ರೀಡಾ ಮನೋಭಾವ ಬೆಳೆಯುತ್ತದೆ ಎಂದು ಮಕ್ಕಳಿಗೆ ಸಲಹೆ…

Read More

ವಿಜಯಪುರ: ಬಾಲಕಾರ್ಮಿಕತೆ ಅನಿಷ್ಠ ಪದ್ದತಿಯಾಗಿದ್ದು, ಇದರ ನಿರ್ಮೂಲನೆಗೆ ಪರಿಣಾಮಕಾರಿ ಜಾಗೃತಿ ಅಗತ್ಯವಾಗಿದ್ದು, ಎಲ್ಲಾ ಅಧಿಕಾರಿಗಳು, ಸಂಘ- ಸಂಸ್ಥೆಗಳು ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಕರೆ ನೀಡಿದರು.ಬುಧವಾರ ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಇವರ ಸಹಯೋಗದಲ್ಲಿ ಹಮ್ಮಿಕೊಂಡ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಬಾಲಕಾರ್ಮಿಕ ಪದ್ಧತಿ ನಿಷೇಧಿಸಲಾಗಿದೆ. ಇದೊಂದು ಅಪರಾಧವಾಗಿದೆ ಎಂಬುದರ ಕುರಿತು ಸಾರ್ವಜನಿಕರಲ್ಲಿ ತಿಳುವಳಿಕೆ ಮೂಡಿಸಿ, ಸಂಪೂರ್ಣ ನಿರ್ಮೂಲನೆಗೆ ಕೈಜೋಡಿಸಬೇಕು. ಬಾಲಕಾರ್ಮಿಕ ಪ್ರಕರಣಗಳು ಕಂಡುಬಂದ ಸಂದರ್ಭದಲ್ಲಿ ಮಕ್ಕಳ ಸಹಾಯವಾಣಿ – ೧೦೯೮ಕ್ಕೆ ಸಾರ್ವಜನಿಕರು ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ. ಕಾರ್ಮಿಕ ಇಲಾಖೆಯು ಸೇರಿದಂತೆ ಅಧಿಕಾರಿಗಳು ದಾಳಿ ಮಾಡಿದ ಸಂದರ್ಭದಲ್ಲಿ ರಕ್ಷಿಸಿದ ಮಕ್ಕಳನ್ನು ಬಾಲಮಂದಿರಕ್ಕೆ ದಾಖಲಿಸಿ ಅವರ ಪುನರ್ವಸತಿ ಕಲ್ಪಿಸಿ ಅವರಿಗೆ ಪೂರಕವಾದ ಶಿಕ್ಷಣ, ಕೌಶಲಗಳ ತರಬೇತಿ ಒದಗಿಸಲಾಗುತ್ತಿದೆ…

Read More

ವಿಜಯಪುರ: ಜಿಲ್ಲಾ ಮಟ್ಟದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ೨೦೨೩-೨೪ರ ನಾಲ್ಕನೆ ತ್ರೈಮಾಸಿಕದ ಹಾಗೂ ೨೦೨೪-೨೫ರ ಒಂದನೇ ತ್ರೈಮಾಸಿಕದ ಸಭೆಯು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಖಾತೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಜೂನ್ ೧೫ರಂದು ಬೆಳಿಗ್ಗೆ ೧೦:೩೦ಕ್ಕೆ ನಗರದ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

– ಸಂತೋಷ್ ರಾವ್ ಪೆರ್ಮುಡ,ಪೆರ್ಮುಡ ಮನೆ, ಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕು, ದ.ಕ ಜಿಲ್ಲೆ. ಕೃಷ್ಣದೇವರಾಯನ ಆಸ್ಥಾನದಲ್ಲಿ ತೆನಾಲಿರಾಮನೆಂಬ ಆಸ್ಥಾನ ವಿದೂಷಕನಿದ್ದನು. ತೆನಾಲಿರಾಮನಿಗೆ ರಾಜನು ಅರಮನೆಯ ಸಮೀಪದಲ್ಲೇ ಮನೆಯನ್ನೂ ನಿರ್ಮಿಸಿ ಅಲ್ಲಿ ವಾಸಿಸಲು ಅನುಕೂಲ ಮಾಡಿಕೊಟ್ಟಿರುತ್ತಾನೆ. ಒಂದು ದಿನ ಕೃಷ್ಣದೇವರಾಯ ಆಸ್ಥಾನದ ಪಂಡಿತರಿಗೆ ಮತ್ತು ಸಿಬ್ಬಂದಿಗಳಿಗೆ ಭೋಜನ ಕೂಟವನ್ನು ಏರ್ಪಡಿಸುತ್ತಾನೆ. ಈ ಭೋಜನ ಕೂಟದಲ್ಲಿ ರಾಜನು ಅರಮನೆಯ ತೋಟದಲ್ಲೇ ಬೆಳೆದ ಬದನೆಕಾಯಿಯಿಂದ ಸಾಂಬಾರನ್ನು ತಯಾರಿಸಿ ಬಡಿಸುತ್ತಾನೆ. ಊಟದಲ್ಲಿ ಬದನೆಯ ಸಾಂಬಾರಿನ ರುಚಿಗೆ ಎಲ್ಲರೂ ಎರಡೆರಡು ಮೂರು ಮೂರು ಬಾರಿ ಸಾಂಬಾರು ಬಡಿಸಿಕೊಂಡು ತಿಂದು ತೇಗುತ್ತಾರೆ. ಊಟ ಮುಗಿದ ಬಳಿಕ ಎಲ್ಲರ ಬಾಯಿಯಲ್ಲೂ ರಾಜನ ತರಕಾರಿ ತೋಟದಲ್ಲಿ ಬೆಳೆದಿದ್ದ ಬದನೆಕಾಯಿಯ ರುಚಿಯದ್ದೇ ಮಾತು. ಅರಮನೆಯಲ್ಲಿ ಊಟ ಮಾಡಿ ಮನೆಗೆ ತೆರಳಿದ ತೆನಾಲಿರಾಮ ರಾಜನ ಆಸ್ಥಾನದ ತರಕಾರಿ ತೋಟದ ಬದನೆಯ ರುಚಿಯ ಕುರಿತ ಹೊಗಳಿಕೆಯಿಂದ ತೆನಾಲಿರಾಮನ ಹೆಂಡತಿಯ ಬಾಯಲ್ಲಿ ನೀರೂರಲಾರಂಭಿಸಿತು. ಹೇಗಾದರೂ ಮಾಡಿ ಕೃಷ್ಣದೇವರಾಯನ ಆಸ್ಥಾನದ ತರಕಾರಿ ತೋಟದ ಬದನೆಕಾಯಿಯನ್ನು ನಮ್ಮ ಮನೆಗೂ…

Read More

“ವೀಣಾಂತರಂಗ”- ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ – ಗದಗ ನಮ್ಮ ದೇಹವು ಪಂಚಭೂತಗಳಾದ ಪೃಥ್ವಿ, ಆಕಾಶ, ವಾಯು,ಜಲ ಮತ್ತು ಅಗ್ನಿ ತತ್ವಗಳಿಂದ ಕೂಡಿದೆ. ಹುಟ್ಟಿದಾಗ ನಾವು ಪರಿಶುದ್ಧರಾಗಿಯೇ ಇದ್ದು ಜೀವಿತಾವಧಿಯಲ್ಲಿ ಸಿಟ್ಟು ಸೆಡವು ಕೋಪ ತಾಪ ದ್ವೇಷ ಅಸೂಯೆ, ಸುಖ ಸಂತೋಷ ನೆಮ್ಮದಿ ರಾಗ ಮುಂತಾದ ಎಲ್ಲಾ ರೀತಿಯ ಭಾವಗಳಿಗೆ ಸ್ಪಂದಿಸುತ್ತ ಬೆಳೆಯುತ್ತೇವೆ. ಒಟ್ಟಿನಲ್ಲಿ ಮನುಷ್ಯ ಜೀವಿ ಕಾರ್ಕೋಟಕ ವಿಷಕ್ಕಿಂತಲೂ ಕಡೆ ಎಂದು ಭಾವಿಸುವಂತೆ ತನ್ನ ಜೀವಿತಾವಧಿಯನ್ನು ಮನುಷ್ಯ ಕಳೆಯುತ್ತಾನೆ. ಯಾವ ರೀತಿ ಅಗರ ಬತ್ತಿಯು ತನ್ನನ್ನು ತಾನು ಸುಟ್ಟು ಕೊಳ್ಳುವುದೋ ಹಾಗೆಯೇ ನಮ್ಮಲ್ಲಿ ಉಂಟಾಗುವ ದ್ವೇಷ, ಅಸೂಯೆ, ಮದ, ಮತ್ಸರಗಳು ನಮ್ಮನ್ನು ನಮಗರಿವಿಲ್ಲದೆಯೇ ಸುಟ್ಟು ಹಾಕುತ್ತವೆ.ಯಾವ ರೀತಿ ಕುದಿಯುವ ನೀರಿನಲ್ಲಿ ನಮ್ಮ ಮುಖ ನಮಗೆ ಕಾಣುವುದಿಲ್ಲವೋ ಹಾಗೆಯೇ ಸಿಟ್ಟಿನಲ್ಲಿದ್ದಾಗ ಮನುಷ್ಯ ತನ್ನ ತಪ್ಪನ್ನು ಅರಿತುಕೊಳ್ಳುವುದಿಲ್ಲ. ಶಾಂತವಾದ ಮತ್ತು ಶುದ್ಧವಾದ ಪರಿಸರದಲ್ಲಿ ತನ್ನ ತನು, ಮನಗಳನ್ನು ಶುದ್ಧೀಕರಿಸಿಕೊಳ್ಳಲು ಆ ಮೂಲಕ ತನ್ನನ್ನು ತಾನು ತಿದ್ದಿಕೊಳ್ಳಲು ಈ ಕೆಲವು ವಿಷಯಗಳು ಮನುಷ್ಯನಿಗೆ…

Read More

ವಿಜಯಪುರ: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಅತ್ಯಂತ ಹೇಯ ಕೃತ್ಯ, ಈ ಕೃತ್ಯದಲ್ಲಿ ಪಾಲ್ಗೊಂಡ ಎಲ್ಲರಿಗೂ ಕಠಿಣ ಶಿಕ್ಷೆ ಆಗಬೇಕು. ತಪ್ಪಿತಸ್ಥರೆಲ್ಲರನ್ನೂ ಬಂಧಿಸಿರುವ ಪೊಲೀಸ್ ಇಲಾಖೆಯ ಕಾರ್ಯವೈಖರಿ, ಈ ನೆಲದ ಕಾನೂನಿನ ಮೇಲೆ, ನಮ್ಮ ಹೆಮ್ಮೆಯ ಪೊಲೀಸ್ ಇಲಾಖೆಯ ಮೇಲೆ, ಶ್ರೀಸಾಮಾನ್ಯರ ವಿಶ್ವಾಸಾರ್ಹತೆಯನ್ನು ಇಮ್ಮಡಿಗೊಳಿಸಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಕೊಲೆಯಂತಹ ಕಾನೂನು ಬಾಹಿರವಾದ ಹೇಯ ಕೃತ್ಯದಲ್ಲಿ, ಪಾಲ್ಗೊಂಡವನು ಸೆಲೆಬ್ರಿಟಿ ಆಗಿರಲಿ, ಶ್ರೀಸಾಮಾನ್ಯನಾಗಿರಲಿ, ಎಲ್ಲರಿಗೂ ಕಾನೂನು ಒಂದೇ ಎಂಬ ಸ್ಪಷ್ಟ ಸಂದೇಶವನ್ನು ಪೊಲೀಸರು ಈ ಪ್ರಕರಣದಲ್ಲಿ ಪ್ರಚುರಪಡಿಸಿದ್ದಾರೆ. ನಟನಾಗಿ ಈ ನಾಡಿನಲ್ಲಿ ಮನೆ ಮಾತಾಗಿದ್ದ ದರ್ಶನ್, ಇಂಥ ಹೇಯ ಕೃತ್ಯದಲ್ಲಿ ಪಾಲ್ಗೊಂಡಿರುವುದು ನಾಚಿಕೆಗೇಡಿನ ಸಂಗತಿ, ಮೃತ ರೇಣುಕಾ ಸ್ವಾಮಿಯ ಧರ್ಮಪತ್ನಿ,ಆತನ ಮುಗ್ಧ ತಂದೆ, ತಾಯಿ, ಬಂಧುಗಳ ಅಕ್ರಂದನವನ್ನ ಮಾಧ್ಯಮದಲ್ಲಿ ನೋಡಿದವರೆಲ್ಲರ ಕಣ್ಣುಗಳು ಹನಿಗೂಡುತ್ತವೆ. ರೇಣುಕಾ ಸ್ವಾಮಿ ಚಾಟ್ ಮಾಡುವುದರ ಮೂಲಕ ಅಶ್ಲೀಲ ಮೆಸೇಜ್ ಗಳನ್ನು ಕಳಿಸಿದ್ದರೆ, ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬಹುದಿತ್ತು, ಅದನ್ನು…

Read More