Author: editor.udayarashmi@gmail.com

ಬಕ್ರೀದ್ ಹಬ್ಬದ ವಿಶೇಷ ಲೇಖನ -ಮಲಿಕ್ ಎಲ್.ಜಮಾದಾರ ಲೇಖಕರು,ಉಪನ್ಯಾಸಕರು ವಿಜಯಪುರ ಇಸ್ಲಾಂ ಧರ್ಮದ ಪವಿತ್ರ ಹಬ್ಬಗಳಲ್ಲಿ ಒಂದಾಗಿರುವ ಪ್ರಮುಖ ಬಕ್ರೀದ್ ಹಬ್ಬ ಈ ಹಬ್ಬವು ತನ್ನದೇ ಆದ ಆದ ಐತಿಹ್ಯವನ್ನು ಹೊಂದಿರುವಂಥದ್ದು. ಪ್ರವಾದಿಗಳಲ್ಲಿ ಒಬ್ಬರಾದ ಇಬ್ರಾಹಿಂ(ಅ.ಸ)ತಮ್ಮ ಮಗ ಇಸ್ಮಾಯಿಲ್(ಅ.ಸ)ರನ್ನು ಸೃಷ್ಟಿಕರ್ತನಾದ ಅಲ್ಲಾಹನಿಗೆ ಬಲಿ ಕೊಡಲು ಮುಂದಾದ ದಿನವನ್ನು ಬಕ್ರೀದ್ ಆಥವಾ ಬಲಿದಾನದ ದಿನವೆಂದು ಆಚರಿಸಲಾಗುತ್ತದೆ. ತ್ಯಾಗ, ಬಲಿದಾನ, ಅಚಲ ದೈವಭಕ್ತಿ ಹಾಗೂ ಅವರ ಪುತ್ರ ಹಜರತ್ ಇಸ್ಮಾಯಿಲ್(ಅ.ಸ)ಅವರ ದೈವಭಕ್ತಿಯನ್ನು ಸಾಂಕೇತಿಕರಿಸುವ ಬಕ್ರೀದ್ ತ್ಯಾಗ-ಬಲಿದಾನವನ್ನು ಸ್ಮರಿಸುವ ಮಹತ್ವದ ಹಬ್ಬ.ಈ ಹಬ್ಬದ ಶುಭ ಸಂದರ್ಭದಲ್ಲಿ ಮುಸ್ಲಿಂ ಬಾಂಧವರು ಪವಿತ್ರ ಹಜ್ ಯಾತ್ರೆಯನ್ನು ನೆರವೇರಿಸುವುದು ವಿಶೇಷ.• ಬಕ್ರೀದ್ ಹಬ್ಬದ ಐತಿಹಾಸಿಕ ಹಿನ್ನೆಲೆ:ಪ್ರವಾದಿ ಇಬ್ರಾಹಿಂ ಅವರಿಗೆ ಸತ್ವ ಪರೀಕ್ಷೆ ಮಾಡಲು ಅಲ್ಲಾಹನು ಒಮ್ಮೆ ಅವರಿಗೆ ನಿನ್ನ ಅತೀ ಪ್ರೀತಿಯ ವಸ್ತುವಿಗೆ ಪಾತ್ರವಾದ ಒಂದು ಜಿವನವನ್ನು ಬಲಿಕೊಡಬಲ್ಲೆಯೋ ಎಂದು ಪ್ರಶ್ನಿಸುತಾರೆ.ಇದೆಲ್ಲಾ ಆಜ್ಞೆ ಭಗವಂತನು ಎಂದು ಅರಿತ ಇಬ್ರಾಹಿಂ(ಅ.ಸ)ರು ತಮ್ಮ ಏಕೈಕ ಪುತ್ರನಾದ ಇಸ್ಮಾಯಿಲ್ (ಅ.ಸ)ರನ್ನು ಅಲ್ಲಾಹನ ಇಚ್ಛೆಯಂತೆ ಬಲಿಕೊಡಲೇಬೇಕು…

Read More

ಎನ್.ಆರ್. ಕುಲಕರ್ಣಿ ಅವರ “ಬಕುಲ ಪುಷ್ಪ” ಗ್ರಂಥ ಲೋಕಾರ್ಪಣೆ | ಗ್ರಂಥ ತುಲಾಭಾರ ವಿಜಯಪುರ: ಎನ್.ಆರ್. ಕುಲಕರ್ಣಿ ಅವರ ಬಕುಲ ಪುಷ್ಪ ಅಭಿನಂದನ ಗ್ರಂಥ ಬಿಡುಗಡೆ ಹಾಗೂ ಗ್ರಂಥ ತುಲಾಭಾರ ಸಮಾರಂಭವು ನಗರದ ಕಂದಗಲ್ಲ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜರುಗಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ಒಂದು ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭಕ್ಕೆ ಇಷ್ಟೊಂದು ಜನ ಕೂಡಿರುವದು ಸಂತಸವನ್ನುಂಟು ಮಾಡುತ್ತದೆ. ಸಾಹಿತ್ಯಾಭಿರುಚಿ ಎಲ್ಲರಲ್ಲಿ ಇರಬೇಕು. ಸಾಹಿತ್ಯದ ಜ್ಞಾನದಿಂದ ನಾವು ನಮ್ಮ ಜೀವನದಲ್ಲಿ ಯಶಸ್ವಿ ಆಗಲು ಸಾಧ್ಯವಾಗುತ್ತದೆ. ಸಂಪತ್ತಿನಿಂದ ಜ್ಞಾನ ಸಂಪಾದಿಸಲು ಸಾಧ್ಯವಿಲ್ಲ. ನಮ್ಮಲ್ಲಿ ಜ್ಞಾನವೊಂದಿದ್ದರೆ ಈ ಜೀವನದಲ್ಲಿ ಏನೆಲ್ಲಾ ಪಡೆದುಕೊಳ್ಳಬಹುದು. ಅದೇ ರೀತಿ ಎನ್.ಆರ್. ಕುಲಕರ್ಣಿ ಅವರಂತೆ ಸಾಹಿತ್ಯಾಭಿರುಚಿಯೊಂದಿಗೆ ಒಳ್ಳೆಯ ಗುಣಗಳನ್ನು ಬೆಳೆಸುವ ನಿಟ್ಟಿನಲ್ಲಿ ಇಲ್ಲಿ ನೆರೆದ ಎಲ್ಲ ಪೋಷಕರು ತಮ್ಮ ಮಕ್ಕಳಿಗೆ ತಿಳಿ ಹೇಳಿ ಸಮಾಜ ಮುಖಿಯಾಗಿ ಬೆಳೆಯುವಲ್ಲಿ ಸಹಕಾರಿಯಾಗುತ್ತದೆ ಎಂದರು.ಕೆ.ಎಫ್. ಅಂಕಲಗಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡುತ್ತ, ಎನ್.ಆರ್. ಕುಲಕರ್ಣಿ ಅವರು ರಚಿಸಿದ ಬಕುಲ ಪುಷ್ಪ…

Read More

ಝಳಕಿ: ಗ್ರಾಮೀಣ ಭಾಗದ ಜನರು ಬಡತನದಿಂದ ನಿರಾಶ್ರಿತರಾಗಿರುತ್ತಾರೆ ಈ ಉದೇಶದಿಂದ ಗ್ರಾಮೀಣ ಭಾಗದ ಬಡ ಜನರ ಸೇವೆ ಮಾಡಲು ಡಾ.ಎಲ್.ಎಚ್ ಬಿದರಿ ಅವರು ಮುಂದಾಗಿದ್ದಾರೆ ಆದರಿಂದ ಎಲ್ಲ ಜನರು ಇದರ ಸದುಪಯೋಗ ಪಡಿಸಿಕೊಳ್ಳಿ ಎಂದು ಯುವ ಮುಖಂಡ ರಾಘವೇಂದ್ರ ಕಾಪಸೆ ಹೇಳಿದರು.ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ವಿಜಯಪುರ ಡಾ.ಬಿದರಿಯವರ ಅಶ್ವಿನಿ ಆಸ್ಪತ್ರೆ ಹಾಗೂ ನ್ಯೂ ಅಶ್ವಿನಿ ಇನ್ಸ್ಟಿಟ್ಯೂಟ್ ಆಪ್ ನರ್ಸಿಂಗ್ ಸೈನ್ಸಸ್,ಝಳಕಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದೊಂದಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಹೃದಯ ತಪಾಸಣೆ ಹಾಗೂ ರಕ್ತದಾನ ಶಿಬಿರದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.ದಾನಗಳಲ್ಲಿ ರಕ್ತದಾನ ಮಹಾದಾನ ಜನರ ಜೀವ ರಕ್ಷಣೆಗೆ ರಕ್ತ ಅತ್ಯವಶ್ಯಕವಾಗಿದ್ದು, ರಕ್ತದ ಅವಶ್ಯಕತೆ ಇರುವ ವ್ಯಕ್ತಿಗಳಿಗೆ ರಕ್ತದಾನ ಮಾಡುವುದರ ಮೂಲಕ ಎಲ್ಲರೂ ಜನರ ಅಮೂಲ್ಯವಾದ ಜೀವ ರಕ್ಷಣೆಗೆ ಮುಂದಾಗಬೇಕು ಎಂದರು.ಡಾ.ಎಲ್.ಎಚ್.ಬಿದರಿ ಮಾತನಾಡಿ, ಮಾನವನಿಗೆ ಆಕಸ್ಮಿಕ ಸಂದರ್ಭಗಳಲ್ಲಿ ತುರ್ತಾಗಿ ಅಗತ್ಯವಾಗಿ ಬೇಕಾಗುವ ರಕ್ತವು ಅಮೂಲ್ಯ ಜೀವ ಉಳಿಸುವ ವಸ್ತುವಾಗಿದೆ. ಇದನ್ನರಿತು ಸಮಾಜದ…

Read More

ಇಂಡಿ: ಪಟ್ಟಣದ ಸರಕಾರಿ ಆಸ್ಪತ್ರೆ ಕೇಂದ್ರಕ್ಕೆ ಶೇ. ೧.೫ ರಕ್ತದ ಸಂಗ್ರಹ ಅವಶ್ಯಕತೆ ಇದ್ದು ಜಿಲ್ಲೆಗೆ ೧೨ ಸಾವಿರ ಯೂನಿಟ್ ರಕ್ತದ ಅವಶ್ಯಕತೆ ಇದೆ ಎಂದು ಹಾಲಿ ಪುರಸಭೆ ಸದಸ್ಯ ಮಾಜಿ ಅಧ್ಯಕ್ಷ ದೇವೆಂದ್ರ ಕುಂಬಾರ ಹೇಳಿದರು.ಪಟ್ಟಣದ ಕೇಂದ್ರ ಬಸ್ ನಿಲ್ದಾಣದಲ್ಲಿ ಪುರಸಭೆ ಸದಸ್ಯ ಅನೀಲಗೌಡ ಬಿರಾದಾರ ಮತ್ತು ಅವಳಿ ಸಹೋದರ ಸುನೀಲಗೌಡ ಬಿರಾದಾರ ಇವರ ೩೯ ನೇಯ ಹುಟ್ಟು ಹಬ್ಬದ ವಾರ್ಷಿಕೋತ್ಸವಲ್ಲಿ ೧೩ ನೆಯ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ಶ್ರೀ ಶಾಂತೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಕಾಸುಗೌಡ ಬಿರಾದಾರ ಮಾತನಾಡಿ ಇಂಡಿ ತಾಲೂಕಿನ ಜನಸಂಖ್ಯೆ ೪ ಲಕ್ಷ ಇದ್ದು ತಾಲೂಕಾ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ರೋಗಿಗಳಿಗೆ ರಕ್ತದ ಅಗತ್ಯವಿದೆ. ಬೇರೆ ದಾನಗಳಿಗಿಂತ ರಕ್ತದಾನ ಮಹಾದಾನವಾಗಿದೆ ಎಂದರು.ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವಡೆ ಮಾತನಾಡಿ ರಕ್ತದ ಅವಶ್ಯಕತೆ ಇರುವವರಿಗೆ ರಕ್ತ ಕೊಟ್ಟಾಗ ಅವರ ಜೀವವನ್ನು ಉಳಿಸಿದಂತಾಗುತ್ತದೆ. ನಾನು ಕಳೆದ ಬಾರಿ ರಕ್ತದಾನ ಮಾಡಿದ್ದು ಒಟ್ಟು ಆರು…

Read More

ಕೊಳಚೆ ಗುಂಡಿ ಖಾಲಿ: ಸಾರ್ವಜನಿಕ ಸಮಸ್ಯೆಗೆ ಸ್ಪಂದಿಸಿದ ಪಪಂ ದೇವರಹಿಪ್ಪರಗಿ: ಬಸ್ ನಿಲ್ದಾಣ ಕಂಪೌಂಡಿಗೆ ಹೊಂದಿಕೊಂಡಿರುವ ಕೊಳಚೆ ಗುಂಡಿ ತ್ಯಾಜ್ಯದ ಸಮಸ್ಯೆಗೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಹಾಗೂ ಜಾಗೆಯ ಮಾಲೀಕ ಸ್ಪಂದಿಸಿ ಮಲೀನ ನೀರು ಹಾಗೂ ತ್ಯಾಜ್ಯವನ್ನು ತೆರವುಗೊಳಿಸಿದರು.ಪಟ್ಟಣದ ಸ್ಥಳೀಯ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಶನಿವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ್ದು ಭಾನುವಾರ “ಉದಯರಶ್ಮಿ” ಪತ್ರಿಕೆಯಲ್ಲಿ ಸುದ್ದಿ ಪ್ರಕಟವಾಗಿತ್ತು. ಸುದ್ದಿ ಹಾಗೂ ಸಮಸ್ಯೆಗೆ ಸ್ಪಂದಿಸಿದ ಮುಖ್ಯಾಧಿಕಾರಿ ಎಲ್.ಡಿ.ಮುಲ್ಲಾ ಕೂಡಲೇ ಕಾರ್ಯಪ್ರವೃತ್ತರಾಗಿ ಜಾಗೆಯ ಮಾಲೀಕರಿಗೆ ನಿರ್ದೇಶನ ನೀಡಿದ ಪರಿಣಾಮ ಜಾಗೆಯ ಮಾಲೀಕರು ಸಹ ಕೂಡಲೇ ಸ್ಪಂದಿಸಿ ಭಾನುವಾರ ಮಲೀನ ನೀರನ್ನು ತೆರವುಗೊಳಿಸಿದರು.ನಂತರ ಪಟ್ಟಣ ಪಂಚಾಯಿತಿ ಸ್ವಚ್ಛತಾ ಸಿಬ್ಬಂದಿ ಜೆಸಿಬಿಯೊಂದಿಗೆ ಆಗಮಿಸಿ ಗುಂಡಿಯಲ್ಲಿ ತುಂಬಿದ್ದ ತ್ಯಾಜ್ಯವನ್ನು ಬೇರೆಡೆ ಸಾಗಿಸಿ ಗುಂಡಿಯನ್ನು ಸ್ವಚ್ಛಗೊಳಿಸಿದರು.ಸಾರ್ವಜನಿಕ ಸಮಸ್ಯೆಗೆ ಸ್ಪಂದಿಸಿ ತಕ್ಷಣವೇ ಕಾರ್ಯ ನೆರವೇರಿಸಿದ ಮುಖ್ಯಾಧಿಕಾರಿ, ಜಾಗೆಯ ಮಾಲೀಕ ಹಾಗೂ ಪಟ್ಟಣ ಪಂಚಾಯಿತಿ ಸ್ವಚ್ಛತಾ ಸಿಬ್ಬಂದಿಗೆ ಸ್ಥಳೀಯ ಅಂಗಡಿ ಮಾಲೀಕರು ಹಾಗೂ ಎಲ್ಲ ವ್ಯಾಪಾರಸ್ಥರು ಅಭಿನಂದಿಸಿದ್ದಾರೆ.

Read More

ದೇವರಹಿಪ್ಪರಗಿ: ಬಿತ್ತನೆಗೆ ಮುಂಚಿತವಾಗಿ ಬೀಜಗಳಲ್ಲಿ ಬರ ನಿರೋಧಕತೆ ಹೆಚ್ಚಿಸಲು ಬೀಜೋಪಚಾರ ಅಗತ್ಯವಾಗಿದೆ ಎಂದು ಕೃಷಿ ಅಧಿಕಾರಿ ಸೋಮನಗೌಡ ಬಿರಾದಾರ ಹೇಳಿದರು.ಪಟ್ಟಣದ ಸಾವಿತ್ರಿ ಹಿರೇಮಠ ಕೃಷಿಭೂಮಿಯಲ್ಲಿ ಶನಿವಾರ ಜರುಗಿದ ಬೀಜೋಪಚಾರ ಆಂದೋಲನದಲ್ಲಿ ಪಾಲ್ಗೊಂಡು ಮಾತನಾಡಿದರು.ಬಿತ್ತನೆಗೆ ಮುಂಚೆ ಬೀಜಗಳನ್ನು ಶೇಕಡಾ ೨ರ ಕ್ಯಾಲ್ಸಿಯಂ ಕ್ಲೋರೈಡ್ ದ್ರಾವಣದಲ್ಲಿ ಒಂದು ಗಂಟೆ ನೆನೆಸಿ ನಂತರ ನೆರಳಿನಲ್ಲಿ ಕನಿಷ್ಟ ೭ ಗಂಟೆ ಒಣಗಿಸಬೇಕು. ನಂತರ ಪ್ರತಿ ಕೆಜಿ ಬಿತ್ತನೆ ಬೀಜಕ್ಕೆ ೦೩ ಗ್ರಾಂ ಶೀಲೀಂದ್ರ ಮಿಶ್ರಣವಾದ ಕಾರ್ಬೇಂಡೈಜಿಮ್ ಶೇ.೧೨ ಹಾಗೂ ಮ್ಯಾಂಕೋಜೇಬ್ ಶೇ.೬೪ ಅಥವಾ ೧೦ ಗ್ರಾಮ್ ಜೈವಿಕ ಗೊಬ್ಬರಗಳಾದ ಟ್ರೆöÊಕೋಡರ್ಮ, ಪಿಎಸ್‌ಬಿ ಹಾಗೂ ರೈಜೋಬಿಯಂಗಳಿಂದ ಬೀಜೋಪಚಾರ ಮಾಡಬೇಕು ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ಜಮೀನಿನ ಒಂದು ಎಕರೆಪ್ರದೇಶವನ್ನು ತೊಗರಿ ಬೆಳೆ ಪ್ರಾತ್ಯಕ್ಷಿಕೆಗಾಗಿ ಆಯ್ಕೆ ಮಾಡಲಾಯಿತು.ನಿವೃತ್ತ ತಾಲ್ಲೂಕು ಪಂಚಾಯಿತಿ ಎಡಿ ಪ್ರಭುದೇವ ಹಿರೇಮಠ, ಸಿಂದಗಿ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಎಚ್.ವೈ.ಸಿಂಗೆಗೋಳ, ಕೃಷಿ ಅಧಿಕಾರಿ ಎಚ್.ಕೆ.ಪಾಟೀಲ, ಸಹಾಯಕ ಕೃಷಿ ಅಧಿಕಾರಿ ರಾಜು ಸದಾನಂದ, ಆತ್ಮಾ ಸಿಬ್ಬಂದಿ ಸುಧಾಕರ್ ಇರಸೂರ, ಪಂಚಾಯಿತಿಗಳ…

Read More

ಸಿಂದಗಿ: ಪಟ್ಟಣದ ಪುರಸಭೆ ಮುಖ್ಯಾಧಿಕಾರಿ ಗುರುರಾಜ ಚೌಕಿಮಠ ಅವರನ್ನು ಕರ್ತವ್ಯದ ಲೋಪದಡಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ.ನಗರದ ಸ್ವಚ್ಚ ಮತ್ತು ನೈರ್ಮಲ್ಯತೆ ಕುರಿತಾಗಿ ಸಾರ್ವಜನಿಕರು ನೀಡಿದ ದೂರುಗಳನ್ನು ಪುರಸಭೆ ಮುಖ್ಯಾಧಿಕಾರಿ ಕಡೆಗಣಿಸಿದ್ದರು. ಕಳೆದ ನಾಲೈದು ದಿನಗಳ ಹಿಂದೆ ನಗರದಲ್ಲಿ ಸೂರಿದ ಬಾರಿ ಮಳೆಯಿಂದ ಪಟ್ಟಣದ ೨೩ ವಾರ್ಡಗಳಲ್ಲಿ ಚರಂಡಿ ನೀರು ಹೊರ ಬಂದು ಮನೆಗಳಲ್ಲಿ ನುಗ್ಗಿ ಸಾರ್ವಜನಿಕರಿಗೆ ತೊಂದರೆಯಾಗಿದೆ. ಅವರ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಿಲ್ಲ. ಜೊತೆಗೆ ಕಛೇರಿಯ ಯಾವುದೇ ಸಭೆಗಳಿಗೆ ಹಾಜರಿರುವುದಿಲ್ಲ. ಪುರಸಭೆಯಲ್ಲಿ ನಡೆಯುವ ವ್ಯವಹಾರದ ಕುರಿತಾಗಿ ಜಿಲ್ಲಾಧಿಕಾರಿಗಳು ಮಾಹಿತಿ ಕೇಳಿದಾಗ ಅವರು ಯಾವುದೇ ಉತ್ತರ ನೀಡಿರುವುದಿಲ್ಲ. ಇಂತಹ ಹಲವಾರು ವಿಚಾರಗಳ ಕುರಿತಾಗಿ ಕರ್ತವ್ಯ ವೈಫಲ್ಯಗಳನ್ನು ಉಲ್ಲೇಖಿಸಿ ಮುಖ್ಯಾಧಿಕಾರಿ ಗುರುರಾಜ ಚೌಕಿಮಠ ಅವರನ್ನು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಮಾನತ್ತು ಮಾಡಿದ್ದಾರೆ.

Read More

ಸಿಂದಗಿ: ರಾಜ್ಯ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಿರುವುದು ಜನ ಸಾಮಾನ್ಯರಿಗೆ ಹೊರೆಯಾಗಿ ಪರಿಣಮಿಸಿದೆ. ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿರುವುದನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ಡಿವೈಎಫ್‌ಐ ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ ಮತ್ತು ಕೂಡಲೇ ಬೆಲೆ ಏರಿಕೆಯನ್ನು ಹಿಂಪಡೆಯಬೇಕೆಂದು ರಾಜ್ಯ ಸರಕಾರವನ್ನು ಒತ್ತಾಯಿಸುತ್ತದೆ ಎಂದು ಕರ್ನಾಟಕ ರಾಜ್ಯ ಸಮಿತಿ ಸದಸ್ಯ ರಮೇಶ ಸಾಸಾಬಾಳ ಹೇಳಿದ್ದಾರೆ. ಭಾನುವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರ್ನಾಟಕ ಸರಕಾರವು ಪೆಟ್ರೋಲ್ ಮತ್ತು ಡೀಜೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿರುವುದರಿಂದಾಗಿ ಪೆಟ್ರೋಲ್ ಬೆಲೆ ೩ರೂ, ಡೀಸೆಲ್ ಬೆಲೆ೩.೫೦ ಪೈಸೆ ಹೆಚ್ಚಳವಾಗಿದೆ. ೮೫.೯೩ ಪೈಸೆಯಿದ್ದ ಡೀಸೆಲ್ ಬೆಲೆ ೮೯.೨೦ ಪೈಸೆಗೆ ಏರಿಕೆಯಾದರೆ ೧೦೦ ರೂಪಾಯಿ ಇದ್ದ ಪೆಟ್ರೋಲ್ ದರ ೧೦೩ ರೂ.ಗೆ ಹೆಚ್ಚಳವಾಗಿದೆ ಇದರಿಂದ ಸಾರ್ವಜನಿಕರಿಗೆ ಹೊರೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪೆಟ್ರೋಲ್, ಡಿಸೇಲ್ ಬೆಲೆಗಳು ದೈನಂದಿನ ಬದುಕಿಗೆ ಜನಸಾಮಾನ್ಯರು ಬಳಸುವ ಅಗತ್ಯ ಸರಕುಗಳ ಮೇಲೆಯೂ ಪರಿಣಾಮ ಬೀರುತ್ತವೆ. ಕಳೆದ ವರ್ಷ ಬರಗಾಲ ಬಿದ್ದಿರುವುದರಿಂದಾಗಿ ಗ್ರಾಮೀಣ…

Read More

ಸಿಂದಗಿ: ಬಿ.ಎನ್.ಬಿ ಫೌಂಡೇಶನ್ ಸಂಸ್ಥೆಯನ್ನು ಹುಟ್ಟು ಹಾಕಿದ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ ಹಾಗೂ ಅವರ ಕುಟುಂಬ ಮುಂದಿನ ಯುವ ಪೀಳಿಗೆಗೆ ಸ್ಫೂರ್ತಿದಾಯಕವಾಗಿದ್ದಾರೆ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಹೇಳಿದರು. ಭಾನುವಾರದಂದು ಪಟ್ಟಣದ ಮಾಂಗಲ್ಯ ಭವನದಲ್ಲಿ ಬಿ.ಎನ್.ಬಿ ಫೌಂಡೇಶನ್ ವತಿಯಿಂದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೃಷಿ ಕುಟುಂಬದಿಂದ ಬಂದಂತಹ ದಿ.ಭೀಮರಾಯಗೌಡರು ಈ ಸಮಾಜದಲ್ಲಿ ನೆನಪು ಉಳಿಯುವಂತಹ ಸಾಧನೆಗಳನ್ನು ಮಾಡಿ ಹೋಗಿದ್ದಾರೆ. ಸಾಧಕರಾಗಬೇಕಾದರೆ ದೃಢ-ಮನಸ್ಸು ಅಗತ್ಯ,ಜೀವನದ ಉತ್ತಮ ಆಲೋಚನೆಗಳು ಮಾತ್ರ ಉತ್ತಮ ಭವಿಷ್ಯದ ಬದುಕನ್ನು ನಿರ್ಧರಿಸುತ್ತವೆ. ಇಂತಹ ಕಾರ್ಯಕ್ರಮಗಳು ಈ ಸಮಾಜದಲ್ಲಿ ಮೇಲಿಂದ ಮೇಲೆ ಜರುಗಬೇಕು. ವಿದ್ಯಾರ್ಥಿಗಳಲ್ಲಿ ಉತ್ತೇಜನ ನೀಡಬೇಕು. ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ ಅವರಿಗೆ ಪುರಸ್ಕರಿಸುವ ಬಿ.ಎನ್.ಬಿ ಫೌಂಡೇಶನ್ ಕಾರ್ಯ ಶ್ಲಾಘನೀಯ ಎಂದರು. ಈ ವೇಳೆ ಮಾಜಿ ವಿಪ ಸದಸ್ಯ ಅರುಣ ಶಹಾಪುರ ಮಾತನಾಡಿ, ಈ ಹಿಂದೆ ರಾಜ್ಯದ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದ ಮಾಜಿ ಸಚಿವ,…

Read More

ವಿಜಯಪುರ: ಮಂಡ್ಯದ ಡಾ.ಜೀಶಂಪ ಸಾಹಿತ್ಯ ವೇದಿಕೆ, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಫಿಲಂಸ್ ಮಂಡ್ಯ ಹಾಗೂ ಕನ್ನಂಬಾಡಿ ಮತ್ತು ಕಾವೇರಿ ಪ್ರಭ ದಿನಪತ್ರಿಕೆ ಇವರುಗಳ ಆಶ್ರಯದಲ್ಲಿ ಮಂಡ್ಯದ ಗಾಂಧಿ ಭವನದಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿ ಅಂಗವಾಗಿ ಜರುಗಿದ 6 ನೆಯ ಅಕ್ಷರ ಜಾತ್ರೆ ಕಾರ್ಯಕ್ರಮದಲ್ಲಿ ಡಾ.ಜೀಶಂಪ ವೇದಿಕೆಯ ಅಧ್ಯಕ್ಷರಾದ ಕೃಷ್ಣ ಸ್ವರ್ಣಸಂದ್ರ ಇವರು ನಗರದ ಸಾಹಿತಿ, ಸಂಘಟಕರಾದ ಪ್ರಕಾಶ್ ಜಹಾಗೀರದಾರ ಇವರಿಗೆ ರಾಜ್ಯ ಮಟ್ಟದ ಕನ್ನಡರತ್ನ ಪ್ರಶಸ್ತಿ ನೀಡಿ ಗೌರವಿಸಿದರು.

Read More