Author: editor.udayarashmi@gmail.com

ಕೆ.ಆರ್.ಎಸ್ ರಾಜ್ಯ ಸಂಘಟನಾ‌ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಗಂಭೀರ ಆರೋಪ ಇಂಡಿ: ಜಿಲ್ಲೆಯಲ್ಲಿ ಅವ್ಯಾಹತವಾಗಿ ಭೂ ಮಾಫಿಯಾ ನಡೆಯುತ್ತಿದೆ‌.‌ ಅದಕ್ಕೆ ಇಂಡಿ ತಾಲ್ಲೂಕಿನ ಹಂಜಗಿ ಗ್ರಾಮದಲ್ಲಿರುವ ಸರ್ವೆ ನಂಬರ್ 531//1 ಕ್ಷೇತ್ರ 3 ಎಕರೆ 20 ಗುಂಟೆ ಸರಕಾರಿ ಕೃಷಿ ಜಮೀನನ್ನು ಖೊಟ್ಟಿ ದಾಖಲೆ ಸೃಷ್ಟಿಸಿ ಮೂವರಿಗೆ ಪರಭಾರೆ ಮಾಡಿರುವುದು ತಾಜಾ ಉದಾಹರಣೆಗೆ ಎಂದು ಕೆ ಆರ್ ಸಮಿತಿಯ ರಾಜ್ಯ ಸಂಘಟನಾ‌ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಗಂಭೀರವಾದ ಆರೋಪ ಮಾಡಿ‌‌‌ದರು. ಪಟ್ಟಣದಲ್ಲಿ ಸೋಮವಾರ ತಾಲೂಕು ಆಡಳಿತ ಸೌಧದ ಎದುರು ಕರ್ನಾಟಕ ರಾಷ್ಟ್ರ ಸಮತಿ ಪಕ್ಷದ ಕಾರ್ಯಕರ್ತರು ಖೊಟ್ಟಿ ದಾಖಲೆ ಹಾಜರು ಪಡಿಸಿ ಜಮೀನು ಪರಭಾರೆ ಮಾಡಿರುವ ಅಧಿಕಾರಿಗಳ ವಿರುಧ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಧರಣಿ ಸತ್ಯಾಗ್ರಹ ನಡೆಸಿದರು. ಪ್ರತಿ ಹಳ್ಳಿಯಲ್ಲಿರುವ ಸರಕಾರಿ ಆಸ್ತಿ‌ ಮತ್ತು ಜಮೀನುಗಳು ಭವಿಷ್ಯದಲ್ಲಿ ಆ ಗ್ರಾಮಕ್ಕೆ ಅತ್ಯಂತ ಸಹಾಯ ಮತ್ತು ಸಹಕಾರಿಯಾಗಿರುತ್ತದೆ. ಆ ಗ್ರಾಮದಲ್ಲಿ ಸರಕಾರಿ ಶಾಲೆ, ಸರಕಾರಿ ಆಸ್ಪತ್ರೆ, ಸಂತೆಕಟ್ಟೆ ಇತರೆ ಸಾರ್ವಜನಿಕ…

Read More

ದೇವರಹಿಪ್ಪರಗಿ: ನರೇಂದ್ರ ಮೋದಿ ಮೂರನೆಯ ಬಾರಿಗೆ ಪ್ರಧಾನ ಮಂತ್ರಿ ಹುದ್ದೆ ಅಲಂಕರಿಸಬೇಕು ಎಂಬ ಹರಕೆ ಹೊತ್ತಿದ್ದ ವ್ಯಕ್ತಿಯೊಬ್ಬರು ದೀರ್ಘದಂಡ ನಮಸ್ಕಾರ ಹಾಕುವುದರ ಮೂಲಕ ತಮ್ಮ ಹರಕೆ ಸಲ್ಲಿಸಿದರು.ಮಾರ್ಕಬ್ಬಿನಹಳ್ಳಿ ಗ್ರಾಮದ ನಿವಾಸಿ ಯಲ್ಲಾಲಿಂಗ ಗುಜ್ಜಲಕರ ಎನ್ನುವ ಖಾಸಗಿ ಶಾಲಾ ಶಿಕ್ಷಕರೇ ಗ್ರಾಮದ ತಮ್ಮ ಮನೆಯಿಂದ ಮಲ್ಲಿಕಾರ್ಜುನ ದೇವಸ್ಥಾನದವರೆಗೆ ದೀರ್ಘದಂಡ ನಮಸ್ಕಾರ ಸಲ್ಲಿಸಿ ಹರಕೆ ಪೂರ್ಣಗೊಳಿಸಿದರು. ನಂತರ ಮಾತನಾಡಿ ವಿಶ್ವನಾಯಕ ಮೋದಿ ದೇಶ ಕಂಡ ಅತ್ಯುತ್ತಮ ಪ್ರಧಾನಿಗಳಲ್ಲಿ ಒಬ್ಬರು ಇವರ ನೇತೃತ್ವದಲ್ಲಿ ದೇಶ ಹೆಚ್ಚೇಚ್ಚು ಅಭಿವೃದ್ಧಿಯಾಗಲಿ. ಮಳೆ, ಬೆಳೆ ಉತ್ತಮವಾಗಿ ಬರಲಿ. ರೈತ ಸಮುದಾಯ ಬಡತನ, ಸಾಲಮುಕ್ತವಾಗಲಿ ಎಂದರು.ಈ ಸಂದರ್ಭದಲ್ಲಿ ಬಾಪುಗೌಡ ಪಾಟೀಲ, ಶಿವರಾಜ್ ತಳವಾರ, ಪ್ರಕಾಶ ಡೋಣುರ, ಸುರೇಶ ಕುಂಬಾರ, ಶ್ರೀನಿವಾಸ ವಡ್ಡರ, ದೀಲೀಪ ಬಾಸುತ್ಕರ್, ಮಹಾಂತೇಶ ಬಿರಾದಾರ, ಪುನೀತ ಹಿಪ್ಪರಗಿ ಸಹಿತ ಗ್ರಾಮದ ಹಿರಿಯರು, ಬಿಜೆಪಿ ಮುಖಂಡರು, ಕಾರ್ಯಕರ್ತರು ಇದ್ದರು.

Read More

ಮುದ್ದೇಬಿಹಾಳ: ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ನಿಗದಿಪಡಿಸಿ ಸದಸ್ಯರ ಅವಧಿ ಮುಂದುವರೆಸುವಂತೆ ಒತ್ತಾಯಿಸಿ ಇಲ್ಲಿನ ಪುರಸಭೆ ಸದಸ್ಯರು ಸೋಮವಾರ ತಹಶೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.ಈ ವೇಳೆ ಸದಸ್ಯ ಮಹೆಬೂಬ ಗೊಳಸಂಗಿ ಮಾತನಾಡಿ ಸರ್ಕಾರ ಪುರಸಭೆಯನ್ನು ಸಂಪೂರ್ಣ ಕಡೆಗಣಿಸಿದೆ. ಮಂತ್ರಿಗಳು ತಮಗೆ ಅನಾನುಕೂಲವಾಗುವ ಸಂಭವ ಕಂಡು ಬಂದರೆ ಕೂಡಲೇ ಕಠಿಣ ನಿರ್ಧಾರಗಳನ್ನು ತೆಗದುಕೊಳ್ಳುತ್ತಾರೆ. ಆದರೆ ನಾವು ಸಮಸ್ಯೆ ಅನುಭವಿಸುತ್ತಿದ್ದು ಸುಮಾರು ಎರಡು ವರ್ಷಗಳು ಗತಿಸಿದರೂ ಯಾವುದೇ ನಿರ್ಧಾರಕ್ಕೆ ಬರುತ್ತಿಲ್ಲ. ಮಾಧ್ಯಮದ ಮೂಲಕ ನಾನು ಸಂಬಂಧಿಸಿದ ಅಧಿಕಾರಿಗಳಿಗೂ ಹಾಗೂ ಮುಖ್ಯಮಂತ್ರಿಗಳು ಸೇರಿದಂತೆ ಎಲ್ಲರಿಗೂ ಕೈಮುಗಿದು ಕೇಳಿಕೊಳ್ಳುತ್ತೇನೆ. ಕೂಡಲೇ ನಮ್ಮ ಸಮಸ್ಯೆಗೆ ಪರಿಹಾರ ಒದಗಿಸಬೇಕು ಎಂದರು.ಸದಸ್ಯೆ ಸಂಗಮ್ಮ ದೇವರಳ್ಳಿ ಮಾತನಾಡಿದರು. ನಿಕಟಪೂರ್ವ ಅಧ್ಯಕ್ಷೆ ಪ್ರತಿಭಾ ಅಂಗಡಗೇರಿ, ಸದಸ್ಯರುಗಳಾದ ಚನ್ನಪ್ಪ ಕಂಠಿ, ಪ್ರೀತಿ ದೇಗಿನಾಳ, ಭಾರತಿ ಪಾಟೀಲ, ಸಹನಾ ಬಡಿಗೇರ, ಶಾಂತಾಬಾಯಿ ಪೂಜಾರಿ, ಶಿವು ಶಿವಪೂರ, ರಫೀಕ ದ್ರಾಕ್ಷಿ, ಯಲ್ಲಪ್ಪ ನಾಯಕಮಕ್ಕಳ, ಬಸು ಮುರಾಳ, ಅಶೋಕ ವನಹಳ್ಳಿ, ರಿಯಾಜ ಢವಳಗಿ ಸೇರಿದಂತೆ ಮತ್ತೀತರರು ಇದ್ದರು. ಪುರಸಭೆಯ…

Read More

ಮುದ್ದೇಬಿಹಾಳ: ಪಟ್ಟಣದ ಪೊಲೀಸ್ ಠಾಣೆ ಬಳಿ ಇರುವ ಬಿರಾದಾರ ಮಲ್ಟಿಸ್ಪೆಷಲಿಟಿ ಆಸ್ಪತ್ರೆಯಲ್ಲಿ ಉಚಿತ ಬಂಜೆತನ ನಿವಾರಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.ಬೆಂಗಳೂರಿನ ಜೀನಿಯ ಫರ್ಟಿಲಿಟಿ ಸೆಂಟರ್ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿಬಿರದಲ್ಲಿ ಸಮಾಲೋಚನೆ, ಸ್ಕ್ಯಾನ್, ವೀರ್ಯಾಣು ಪರೀಕ್ಷೆ ನಡೆಸಿ ಅಂದಾಜು ೧೦೦ಕ್ಕೂ ಹೆಚ್ಚು ಜನಕ್ಕೆ ಸೂಕ್ತ ಸಲಹೆ ನೀಡಲಾಯಿತು.ಈ ವೇಳೆ ಮಾಧ್ಯದವರನ್ನುದ್ದೇಶಿಸಿ ಮಾತನಾಡಿದ ಡಾ.ದಿವ್ಯಶ್ರೀ ಬಂಜೆತನ ಶಾಪವಲ್ಲ. ಬಹಳಷ್ಟು ಜನ ತಪ್ಪು ಗ್ರಹಿಸಿದ್ದಾರೆ. ರೈತರು ಸೇರಿದಂತೆ ಹಲವರು ಬಂಜೆತನದ ಸಮಸ್ಯೆ ಎದುರಿಸುತ್ತಿದ್ದು ಮೂಢ ನಂಬಿಕೆಗಳಿಗೆ, ಸರಿಯಾಗಿ ಚಿಕಿತ್ಸಾ ಪದ್ಧತಿ ಗೊತ್ತಿರದವರ ಮಾರುಹೋಗಿ ಹಣವ್ಯಯ ಮಾಡಿಕೊಳ್ಳುತ್ತಿದ್ದಾರೆ. ಸರಿಯಾದ ಚಿಕಿತ್ಸೆ ಪಡೆದಲ್ಲಿ ಖಂಡಿತ ಮಕ್ಕಳಾಗಬಹುದು ಎಂದರು.ಡಾ.ವಿಜಯ ಬಿರಾದಾರ ಮಾತನಾಡಿ, ನಮ್ಮ ಭಾಗದ ಜನತೆಗೆ ಅನುಕೂಲವಾಗುವ ಉದ್ದೇಶದಿಂದ ಉಚಿತ ಶಿಬಿರವನ್ನು ಹಮ್ಮಿಕೊಂಡಿದ್ದೇವೆ. ನಮ್ಮ ಭಾಗದ ಜನತೆಗೆ ದೂರದ ಬೆಂಗಳೂರಿಗೆ ಹೋಗಿ ತಪಾಸಣೆ ಮಾಡಿಸುವುದು ಆರ್ಥಿಕವಾಗಿ ಕಷ್ಟವಾಗುತ್ತದೆ. ಹಾಗಾಗಿ ತಿಂಗಳಿಗೊಮ್ಮೆ ನಮ್ಮಲ್ಲಿಯೇ ಉಚಿತ ತಪಾಸಣಾ ಶಿಬಿರ ನಡೆಸುವ ಮತ್ತು ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡಬೇಕು ಎನ್ನುವ ಷರತ್ತಿನ ಮೇಲೆ ಶಿಬಿರವನ್ನು ಆಯೋಜಿಸಿದ್ದೇವೆ…

Read More

ವಿಜಯಪುರ: ಜೂ. ೦೯ ರಂದು ಬಸವೇಶ್ವರ ಕಲಾ ಮಹಾವಿದ್ಯಾಲಯ ಬಾಗಲಕೋಟೆಯ ಸೆಮಿನಾರ್ ಹಾಲ್ ದಲ್ಲಿ ೨೦೨೪ ನೆಯ ಸಾಲಿನ ಮೇಘಮೈತ್ರಿಯ ರಾಜ್ಯಮಟ್ಟದ ೦೭ ನೆಯ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಿತು.ಈ ಸಮ್ಮೇಳನದಲ್ಲಿ ಈಗಾಗಲೇ ಹಲವಾರು ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿ ಪಡೆದಿರುವ, ವಿಜಯಪುರದ ಬಾಲಿಕೆಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ಕನ್ನಡ ಉಪನ್ಯಾಸಕ ಹಾಗೂ ಸಾಹಿತಿ ಪ್ರೊ. ಸಿದ್ದು ಸಾವಳಸಂಗ ಅವರಿಗೆ ೨೦೨೪ ನೆಯ ಸಾಲಿನ ರಾಜ್ಯಮಟ್ಟದ “ಮೇಘಮೈತ್ರಿ ಸಾಹಿತ್ಯ ಸೇವಾ ರತ್ನ ಪ್ರಶಸ್ತಿ” ಪ್ರದಾನ ಮಾಡಲಾಯಿತು.ಸದರಿ ಕಾರ್ಯಕ್ರಮದಲ್ಲಿ ಮೇಘಮೈತ್ರಿ ಕನ್ನಡ ಸಾಹಿತ್ಯ ಸಮ್ಮೇಳನದ ಸಂಸ್ಥಾಪಕ ಅಧ್ಯಕ್ಷ ಎಂ. ರಮೇಶ ಕಮತಗಿ, ಸಮ್ಮೇಳನದ ಸರ್ವಾಧ್ಯಕ್ಷ ಡಾ. ವಿಜಯಕುಮಾರ ಎಸ್. ಕಟಗಿಹಳ್ಳಿಮಠ ಹಾಗೂ ಅನೇಕ ಸಾಹಿತಿಗಳು ಉಪಸ್ಥಿತರಿದ್ದರು.

Read More

ಮೋರಟಗಿ: ನರೇಂದ್ರ ಮೋದಿಜಿ ಅವರು ಭಾರತ ದೇಶದ ೧೫ನೇ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು ಭಾರತ ದೇಶ ಸೇತಿದಂತೆ ಅನೇಕ ರಾಷ್ಟ್ರಗಳಲ್ಲಿ ಆನಂದ ಬಾಷ್ಪಗಳು ಮುಗಿಲಿಗೆ ಮುಟ್ಟಿವೆ ಎಂದು ಮಾಜಿ ಜಿ ಪಂ ಸದಸ್ಯ ಬಿಂದುರಾಯಗೌಡ ಪಾಟೀಲ ಹೇಳಿದರು.ಸಮೀಪದ ಕಕ್ಕಳಮೆಲಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಧಾನಿ ಮೋದಿಜಿ ಪ್ರಮಾಣ ವಚನ ದಿನದಂದು ಬಿಜೆಪಿ ವಿಜಯೋತ್ಸವ ಸಂಭ್ರಮ ಆಚರಿಸಿ ಅವರು ಮಾತನಾಡಿದರು.ಕಳೆದ ಎರಡು ಅವಧಿಯಲ್ಲಿ ಮೋದಿಜಿ ಅವರು ಈ ದೇಶದ ಸಮಗ್ರ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಿದ್ದಾರೆ ಭಗವಂತ ಮತ್ತೆ ದೇಶದ ಜನ ಸೇವೆ ಮಾಡಲು ಮೂರನೇ ಬಾರಿ ಅವಕಾಶ ಕಲ್ಪಿಸಿದ್ದಾನೆ ಅವರ ಅಭಿವೃದ್ಧಿ ಕಾರ್ಯಗಳು ಮುಂದೆ ವರಿಯಲಿಈ ಬಾರಿ ಭಾರತ ವಿಶ್ವಗುರು ಆಗಲಿದೆ ಎಂದರು.ಕಾರ್ಯಕ್ರಮದಲ್ಲಿ ಸಿದ್ರಾಮಪ್ಪ ಸಾಂಬಾ, ಸಿದ್ದನಗೌಡ ಮಾಲಿಪಾಟೀಲ್, ನಿಂಗಣ್ಣ ಆಹೆರಿ, ಧರೆಪ್ಪ ಹಳ್ಳೆಪ್ಪನವರ, ದುಂಡಪ್ಪ ಸಾಂಬಾ, ಶರಣಪ್ಪ ಹಳ್ಳೆಪ್ಪನವರ, ರಾಯಗೊಂಡಪ್ಪ ಸಾಂಬಾ, ಚಂದ್ರು ನಾಗಯ್ಯನಮಠ, ಸಂತೋಷ ಗಾಣಿಗೇರ, ನಿಂಗಣ್ಣ ಹಳ್ಳೆಪ್ಪನವರ, ಸಿದ್ದರಾಮ ಬಿರಾದಾರ, ಭಗವಂತರರಾಯ ಗೋಡೆಕರ, ಸೇರಿದಂತೆ ಅನೇಕರು ಇದ್ದರು.

Read More

ಮೋರಟಗಿ: ಮಕ್ಕಳು ಪಠ್ಯ ಚಟುವಟಿಕೆಗಳ ಜೊತೆಗೆ ಕ್ರೀಡೆಗೂ ಮಹತ್ವ ನೀಡಬೇಕು, ಮಕ್ಕಳ ಬೆಳವಣಿಗೆ ಹಾಗೂ ಅವರ ಆರೋಗ್ಯಕರ ಜೀವನಕ್ಕೆ ಕ್ರೀಡೆ ಅತ್ಯವಶ್ಯ ಎಂದು ಅಭಿವೃದ್ಧಿ ಅಧಿಕಾರಿ ಆರ್ ಎಂ ಚಕ್ರವರ್ತಿ ಹೇಳಿದರು.ಮಂಗಳವಾರ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಹಮ್ಮಿಕೊಂಡ ಅಂತರ ರಾಷ್ಟ್ರೀಯ ಆಟದ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಒಬ್ಬ ಸಾಮಾನ್ಯ ವ್ಯಕ್ತಿ ಆಗಲಿ ಶ್ರೀಮಂತ ವ್ಯಕ್ತಿ ಆಗಲಿ ಎಷ್ಟು ವರ್ಷ ಬದುಕಿದ್ದಾನೆ ಎನ್ನುವುದು ಮುಖ್ಯವಲ್ಲ ಎಷ್ಟು ಅರೋಗ್ಯವಂತನಾಗಿ ಬದುಕಿದ್ದಾನೆ ಎನ್ನುವುದು ಮುಖ್ಯ ಇಂದಿನ ವಿದ್ಯಾರ್ಥಿಗಳಾದ ತಾವುಗಳು ನಾಳೆ ನಮ್ಮ ದೇಶ ಬೆಳೆಸುವ ಪ್ರಜೆಗಳು ವಿದೇಶಿ ಕ್ರೀಡೆಗಿಂತ ಸ್ವದೇಶ ಕ್ರೀಡೆಗಳಿಗೆ ಹೆಚ್ಚಿನ ಆದ್ಯತೆ ನೀಡಿ ಉತ್ತಮ ಗುಣಮಟ್ಟದ ಶಿಕ್ಷಣ ಪಡೆದು ದೇಶ ಮೆಚ್ಚುವ ಮಕ್ಕಳಾಗಿ ಹೊರ ಹುಮ್ಮಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ನಂತರ ಗ್ರಾಪಂ ಅಧ್ಯಕ್ಷರ ಪ್ರತಿನಿದಿ ರವಿಕಾಂತ ನಡುವಿನಕೇರಿ ಮಾತನಾಡಿ ದಿನದಿಂದ ದಿನಕ್ಕೆ ಮೊಬೈಲ್ ಬಳಕೆ ಹೆಚ್ಚಾಗುತ್ತಿದೆ ವಿದ್ಯಾರ್ಥಿಗಳು ಹಾಗೂ ಯುವಕರು ಮೊಬೈಲ್ ಗಿಣಿಯ ಹಿಂದೆ ಬಿದ್ದು ಅದೆಷ್ಟೋ ಜನ ಬಲಿಯಾಗಿದ್ದು…

Read More

ಹಡಗಲಿ ಗ್ರಾಮ ಘಟಕ ಉದ್ಘಾಟನೆ | ರೈತರಿಗೆ ಗುರುತಿನ ಚೀಟಿ ವಿತರಣೆ ವಿಜಯಪುರ: ಈ ನಾಡಿನಲ್ಲಿ ರೈತರನ್ನು ಕೃಷಿಯಿಂದ ದೂರವಿಟ್ಟು ಬಂಡವಾಳ ಶಾಹಿಗಳಿಗೆ ಅನುಕೂಲ ಮಾಡಿಕೊಡುವ ಹುನ್ನಾರ ನಡಿತಾ ಇದೆ, ಇದಕ್ಕೆ ನಮ್ಮ ಜನಪ್ರತಿನಿಧಿಗಳು ಸಹ ಅವರೊಂದಿಗೆ ಕೈಜೋಡಿಸುತ್ತಾ, ಅಂತವರ ಪರವಾಗಿಯೇ ಯೋಜನೆಗಳನ್ನು ರೂಪಿಸಿ ರೈತರಿಗೆ ಅನ್ಯಾಯ ಮಾಡುತ್ತಾ ದ್ರೋಹ ಎಸುಗುತ್ತಿದ್ದಾರೆ, ಆದ್ದರಿಂದ ರೈತರೆಲ್ಲರೂ ಒಗ್ಗಟಾಗಿ ಶಕ್ತಿ ಪ್ರದರ್ಶಿಸಬೇಕು ಅಂದಾಗ ಮಾತ್ರ ಈ ದೇಶದಲ್ಲಿ ಕೃಷಿ ಉಳಿಯುವುದು ಜೊತೆಗೆ ರೈತ ಕುಲ ಉಳಿಯುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಅವರು ಹಡಗಲಿ ಗ್ರಾಮದ ರೈತ ಸಂಘದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವಿಜಯಪುರ ಜಿಲ್ಲೆಯ ಹಡಗಲಿ ಗ್ರಾಮದಲ್ಲಿ ಗ್ರಾಮ ಘಟಕ ಉದ್ಘಾಟನೆಯನ್ನು ಸಸಿಗೆ ನೀರುಣಿಸುತ್ತಾ, ಆಲಿಮಟ್ಟಿ ಆಣೆಕಟ್ಟು ಇಲ್ಲಿಯೇ ಇದ್ದು, ನಮ್ಮ ರೈತರ ಸಾವಿರಾರು ಎಕರೆ ಕೃಷಿ ಭೂಮಿ ಕಳೆದುಕೊಂಡು ಮುಂದಿನ ನಮ್ಮ ಮಕ್ಕಳ ಭವಿಷ್ಯಕ್ಕಾಗಿ ತ್ಯಾಗ ಮಾಡಿದ್ದರು, ಇಂದು ಜಿಲ್ಲೆಯಲ್ಲಿ…

Read More

ಇಂಡಿ: ಆಟಗಳು ದೈಹಿಕ, ಮಾನಸಿಕ, ಸಾಮಾಜಿಕ ಹಾಗೂ ಭಾವನಾತ್ಮಕ ಪ್ರಬಲರನ್ನಾಗಿಸುವಲ್ಲಿ ಮಹತ್ವದಾಗಿದೆ. ಆಟದ ಜೊತೆಗೆ ಪಾಠಕ್ಕೂ ಗಮನ ನೀಡಿ ಎಂದು ಇಂಡಿ ತಾಲೂಕ ಪಂಚಾಯಿತಿ ಯೋಜನಾಧಿಕಾರಿ ನಂದೀಪ ರಾಠೋಡ ಹೇಳಿದರು.ಅವರು ತಾಲೂಕಿನ ಹಿರೇರೂಗಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಹಾಗೂ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯ ವತಿಯಿಂದ ಹಮ್ಮಿಕೊಂಡ”ಅಂತಾರಾಷ್ಟ್ರೀಯ ಆಟದ ದಿನ”ವನ್ನು ಉದ್ಘಾಟಿಸಿ ಮಾತನಾಡಿದರು.ಕ್ರೀಡೆಯು ಮಕ್ಕಳಲ್ಲಿ ಕಲಿಕೆ ಮತ್ತು ಆರೋಗ್ಯಕರ ಬೆಳವಣಿಗೆಯನ್ನು ಉತ್ತೇಜಿಸಿ, ಸೃಜನಶೀಲತೆಯನ್ನು ಬೆಳೆಸುತ್ತದೆ ಎಂದು ಹೇಳಿದರು.ಹಿರೇರೂಗಿ ಪಿಡಿಓ ಬಸವರಾಜ ಬಬಲಾದ ಮಾತನಾಡಿ, ಮಕ್ಕಳು ಆಟವಾಡುವ ಹಕ್ಕನ್ನು ರಕ್ಷಿಸಲು ಅಂತಾರಾಷ್ಟ್ರೀಯ ಆಟದ ದಿನವಾಗಿ ಒಂದು ದಿನವನ್ನು ಗುರುತಿಸುವಂತೆ ವಿಶ್ವಸಂಸ್ಥೆಗೆ ಮಕ್ಕಳೇ ಮನವಿ ಮಾಡಿದ್ದು, ಅದರಂತೆ ಈ ದಿನವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಜೀವನ ಕೌಶಲ್ಯವನ್ನು ವೃದ್ಧಿಸುವಲ್ಲಿ ಆಟಗಳೇ ಮಗುವಿಗೆ ಮೊದಲ ಮೆಟ್ಟಿಲು. ದೈಹಿಕ-ಮಾನಸಿಕ ಆರೋಗ್ಯ, ಸ್ವಾಭಿಮಾನ, ಆತ್ಮವಿಶ್ವಾಸ, ಸೃಜನಶೀಲತೆ, ಸಮಾನತೆ, ಸಾಮಾಜಿಕ ಸಾಮರಸ್ಯದಂತಹ ಅಭ್ಯಾಸಗಳಿಗೆ ಕ್ರೀಡೆಯು ಅತಿ ಅವಶ್ಯಕ ಎಂದು ಹೇಳಿದರು.ಶಿಕ್ಷಕ ಎಸ್ ಆರ್ ಚಾಳೇಕರ ಮಾತನಾಡಿ,…

Read More

ವಿಜಯಪುರ: ೨೦೨೪-೨೫ನೇ ಸಾಲಿಗೆ ಸಮನ್ವಯ ಶಿಕ್ಷಣ ಚಟುವಟಿಕೆಗಳ (ವಿಶೇಷ ಚೇತನ ಮಕ್ಕಳಿಗೆ ಬೋಧನೆ ಹಾಗೂ ಸಂಬಂಧಿಸಿದ ಇತರೆ ಚಟುವಟಿಕೆಗಳು) ಅನುಷ್ಠಾಮಕ್ಕಾಗಿ ಪ್ರಾಥಮಿಕ ಮತ್ತು ಫ್ರೌಡ ಹಂತಕ್ಕೆ ಅಗತ್ಯತೆ ಅನುಗುಣವಾಗಿ, ವಿಶೇಷ ಡಿ.ಇಡಿ( ಶ್ರವಣ ದೋಷ ಮತ್ತು ದೃಷ್ಟಿ ದೋಷ) ಹಾಗೂ ಬಿ.ಇಡಿ (ಬುದ್ದಿಮಾಂದ್ಯ ಮತ್ತು ಬಹುವಿಕಲಾಂಗತೆ) ವಿಕಲತೆಯಲ್ಲಿ ವಿಶೇಷತೆ ವಿದ್ಯಾರ್ಹತೆ ಹೊಂದಿದ ಹಾಗೂ ೬೦ ವರ್ಷ ಒಳಗಿನ ಅರ್ಹ ಅಭ್ಯರ್ಥಿಗಳಿಂದ ನೇರ ಗುತ್ತಿಗೆ ಮೂಲಕ ವಿಶೇಷ ಶಿಕ್ಷಕರ ಸೇವೆ ಪಡೆಯಲು ಖಾಲಿ ಇರುವ ೧೯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ನೇರ ಗುತ್ತಿಗೆಯಡಿಯಲ್ಲಿ ತಾತ್ಕಾಲಿಕವಾಗಿ ಕಾರ್ಯ ನಿರ್ವಹಿಸಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಜೂನ್ ೧೯ ರಂದು ಸಂಜೆ ೫ ಗಂಟೆಯ ಒಳಗಾಗಿ ಉಪನಿರ್ದೇಶಕರು (ಆಡಳಿತ) ಹಾಗೂ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು, ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ-ಕರ್ನಾಟಕ ವಿಜಯಪುರ ಜಿಲ್ಲಾ ಕಚೇರಿಗೆ ಅಗತ್ಯ ದಾಖಲಾತಿಗಳೊಂದಿಗೆ ಪತ್ರಾಂಕಿತ ಅಧಿಕಾರಿಗಳಿಂದ ಧೃಡೀಕರಿಸಿ, ದ್ವಿ-ಪ್ರತಿಯಲ್ಲಿ ಸಲ್ಲಿಸಲು ತಿಳಿಸಿದೆ.ಆರ್‌ಸಿಐ ನೋಂದಣಿ ಹಾಗೂ ಚಾಲ್ತಿಯಲ್ಲಿ ಇಲ್ಲದೆ ಇರುವ ಪ್ರೊವಿಷನಲ್ ಸರ್ಟಿಪಿಕೆಟ್…

Read More