Subscribe to Updates
Get the latest creative news from FooBar about art, design and business.
What's Hot
Author: editor.udayarashmi@gmail.com
ವಿಜಯಪುರ: ಜಿಲ್ಲೆಯ ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್ ಗಳು ಕಡ್ಡಾಯವಾಗಿ ಕೆಪಿಎಂಇ (.ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ) ಕಾಯ್ದೆ -2018 ರ ಅಡಿಯಲ್ಲಿ ನೋಂದಣಿ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚಿಸಿದರು.ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೆಪಿಎಂಇ ಜಿಲ್ಲಾ ನೋಂದಣಿ ಮತ್ತು ಕುಂದುಕೊರತೆ ನಿವಾರಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಖಾಸಗಿ ಆಸ್ಪತ್ರೆ, ಕ್ಲಿನಿಕ್ ಗಳು, ಪ್ರಯೋಗಾಲಯ, ನರ್ಸಿಂಗ್ ಹೋಮ್ ಗಳು ಕೆಪಿಎಂಇ ಕಾಯ್ದೆ ಅಡಿಯಲ್ಲಿ ನೋಂದಣಿ ಮಾಡಿಸಬೇಕು. ನಕಲಿ ವೈದ್ಯರ ಹಾವಳಿ ತಡೆಗಟ್ಟುವ ಉದ್ದೇಶದಿಂದ ಕಡ್ಡಾಯವಾಗಿ ಎಲ್ಲರಿಗೂ ಕಾಣುವ ರೀತಿಯಲ್ಲಿ ನೋಂದಣಿ ಫಲಕ ಅಳವಡಿಸಬೇಕು ಎಂದು ಸೂಚಿಸಿದರು.ಅಲೋಪತಿ ಆಸ್ಪತ್ರೆಗಳು ಆಕಾಶ ನೀಲಿ ಬಣ್ಣದ, ಆಯುರ್ವೇದಿಕ್ ಆಸ್ಪತ್ರೆಗಳು ತಿಳಿ ಹಸಿರು ಬಣ್ಣದ ಫಲಕಗಳನ್ನು ಅಳವಡಿಸಬೇಕು. ಜಿಲ್ಲೆಯಲ್ಲಿ ಇಲ್ಲಿಯವರೆಗೆ ನೋಂದಣಿಯಾಗದೆ ಇರುವ ಸಂಸ್ಥೆಗಳು ಒಂದು ವಾರದ ಒಳಗೆ ನೋಂದಣಿ ಹಾಗೂ ನವೀಕರಣ ಮಾಡಿಸತಕ್ಕದ್ದು, ತಪ್ಪಿದಲ್ಲಿ ಕೆಪಿಎಂಪಿ ಕಾಯ್ದೆ – 2018 ರ 19ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು…
ಲೋಕಸಭೆಯಲ್ಲಿ ಬಿಜೆಪಿ ಬಳಿಕ 99 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ | ಸಿಡಬ್ಲ್ಯುಸಿ ಸದಸ್ಯರಿಂದ ನಿರ್ಣಯ ಅಂಗೀಕಾರ ನವದೆಹಲಿ: ರಾಹುಲ್ ಗಾಂಧಿ ‘ಮ್ಯಾನ್ ಆಫ್ ದಿ ಮ್ಯಾಚ್’ ಆಗಿದ್ದಾರೆ. ಅವರು ಸದನದಲ್ಲಿ ವಿರೋಧ ಪಕ್ಷದ ನಾಯಕನಾಗಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಆಗ್ರಹಿಸಿದ್ದು, ಇದೇ ರೀತಿಯ ಬೇಡಿಕೆಯನ್ನು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಸೇರಿ ಹಲವು ಕಾಂಗ್ರೆಸ್ ನಾಯಕರು ಮುಂದಿಟ್ಟಿದ್ದಾರೆ.ಇದಲ್ಲದೆ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ಪಕ್ಷದ ನಾಯಕರನ್ನಾಗಿ ನೇಮಿಸಬೇಕು ಎಂದು ಸಿಡಬ್ಲ್ಯುಸಿ ಸದಸ್ಯರು ನಿರ್ಣಯ ಅಂಗೀಕರಿಸಿದ್ದಾರೆ.ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಶಶಿ ತರೂರ್, ಈ ಜನಾದೇಶವು ಬಿಜೆಪಿಯ ದುರಹಂಕಾರ ಮತ್ತು ವರ್ತನೆಗೆ ಮತದಾರರು ನೀಡಿರುವ ಜನಾದೇಶದ ಸಂದೇಶವಾಗಿದೆ. ಸರ್ಕಾರವನ್ನು ನಡೆಸುವಾಗ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿದ್ದ ಮೋದಿ ಮತ್ತು ಅಮಿತ್ ಶಾ ಅವರಿಗೆ ಇದು ಒಂದು ಸವಾಲಾಗಿದೆ ಮತ್ತು ಇದು ಅವರ ಕಾರ್ಯಚಟುವಟಿಕೆಯನ್ನು ಬದಲಾಯಿಸುವ ಮತ್ತು ಹೆಚ್ಚು ಹೊಂದಿಕೊಳ್ಳುವ ಸಾಮರ್ಥ್ಯವನ್ನು ಪರೀಕ್ಷಿಸಲಿದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.ಈ ಬಾರಿ…
ಕೊಲ್ಹಾರ: ತಾಲೂಕಿನ ಕೂಡಗಿ ಎನ್ ಟಿಪಿಸಿಯ ಬೂದಿ ತುಂಬಿಕೊಂಡು ಹೋಗಲು ಬಂದಿದ್ದ ಬಲ್ಕರ್ ವಾಹನದ ಚಾಲಕ ಮೇನ್ ಲೈನ್ ತಾಗಿ ಮೃತಪಟ್ಟಿರುವ ಘಟನೆ ಉಷ್ಣ ವಿದ್ಯುತ್ ಸ್ಥಾವರದ ಬಳಿಯ ಎಚ್ ಪಿ ಪೆಟ್ರೋಲ್ ಪಂಪ್ ಹತ್ತಿರ ಶನಿವಾರ ಸಂಜೆ 5 ಗಂಟೆಯ ಸುಮಾರಿಗೆ ಜರುಗಿದೆ.ಮೃತ ಚಾಲಕ ವಿಶ್ವನಾಥ್ ಶೇವು ರಾಠೋಡ (24) ಸಿಂದಗಿ ತಾಲೂಕಿನ ಕೋರವಾರ ಸಮೀಪದ ಮಲ್ಲಾಳ ತಾಂಡಾ ಎಲ್ ಟಿ ಗ್ರಾಮದವನು ಎಂದು ತಿಳಿದು ಬಂದಿದೆ. ಚಾಲಕ ವಾಹನದ ಮೇಲೆ ಹತ್ತಿದ ಸಂದರ್ಭದಲ್ಲಿ ಮೇನ್ ಲೈನ್ ತಾಗಿದೆ. ಸ್ಥಳಕ್ಕೆ ಕೂಡಗಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಲಿಂ.ಶಿವಾನಂದ ಮಹಾಸ್ವಾಮಿಗಳ 28 ನೇ ಪುಣ್ಯರಾಧನೆ | ನೂರಾರು ಸುಮಂಗಲೆಯರ ಸಂಭ್ರಮ ಚಡಚಣ: ಪಟ್ಟಣದ ವಿರಕ್ತ ಮಠದಲ್ಲಿ ಲಿಂ. ಶಿವಾನಂದ ಮಹಾಸ್ವಾಮಿಗಳ 28 ನೇ ಪುಣ್ಯರಾಧನೆ ನಿಮಿತ್ತವಾಗಿ ಶನಿವಾರ ಶ್ರೀಗಳ ಭಾವಚಿತ್ರದೊಂದಿಗೆ ಪಟ್ಟಣದ ಪ್ರಮುಖ ಬೀದಿ ಬೀದಿಗಳಲ್ಲಿ ನೂರಾರು ಸುಮಂಗಲೆಯರಿಂದ ಪೂರ್ಣ ಕುಂಭಮೇಳ ಹಮ್ಮಿಕೊಂಡು ಮಠಕ್ಕೆ ತಲುಪಿದ ನಂತರ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಿತು.ಶ್ರೀ ಮಠದ ವತಿಯಿಂದ ವಿವಿಧ ಮಠಮಾನ್ಯಗಳಿಂದ ಆಗಮಿಸಿದ ಮಠಾಧೀಶರಿಗೆ ಮತ್ತು ನೂತನವಾಗಿ ಆಯ್ಕೆಯಾದ ಪಟ್ಟಣ ಪಂಚಾಯತಿಯ ಸದಸ್ಯರುಗಳಿಗೆ ಗೌರವ ಸತ್ಕಾರ ಮಾಡಲಾಯಿತು.ಇದೇ ವೇಳೆ ಕದಳಿ ಮಹಿಳಾ ವೇದಿಕೆ ಮತ್ತು ಸಮೃದ್ಧಿ ಮಹಿಳಾ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳೊಂದಿಗೆ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.ಬಳಿಕ ಭಕ್ತರಿಗೆ ಅನ್ನಪ್ರಸಾದ ವನ್ನು ಉಣಬಡಿಸಲಾಯಿತು.ಇದಕ್ಕೂ ಮುನ್ನ ಲಿಂಗೈಕ್ಯ ಶ್ರೀಗಳ ಗದ್ದುಗೆಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಪುಷ್ಪವೃಷ್ಠಿ ಕಾರ್ಯಕ್ರಮವನ್ನು ನಡೆಸಿಕೊಡಲಾಯಿತು.
ಕಲಬುರ್ಗಿ: ಡಾ.ವಿಷ್ಣುಸೇನಾ ಸಮಿತಿ ವಿಜಯಪುರ ಜಿಲ್ಲಾ ಘಟಕದಿಂದ ಜಿಲ್ಲಾಧ್ಯಕ್ಷ ವಿಷ್ಣು ಸಂಗಮೇಶ್ ಅವರ ನೇತೃತ್ವದಲ್ಲಿ ಶನಿವಾರ ವಿಷ್ಣುಸೇನಾ ಸಮಿತಿಯ ರಾಜ್ಯಾಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಅವರ ಹುಟ್ಟು ಹಬ್ಬ ಆಚರಿಸಲಾಯಿತು.ಜನುಮದಿನ ಪ್ರಯುಕ್ತವಾಗಿ ಅಫಜಲಪುರ ತಾಲೂಕಿನ ಚಿಂಚೋಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮುದ್ದು ಮಕ್ಕಳ ಜೊತೆ ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಲಾಯಿತು.ಇದೇ ಸಂದರ್ಭದಲ್ಲಿ ಅಫಜಲಪುರ ತಾಲೂಕು ಕರ್ನಾಟಕ ರೈತ ಸಂಘದ ಅಧ್ಯಕ್ಷ ಮಹಾಂತೇಶ್ ಜಮಾದಾರ, ಉದ್ಯಮಿ ಶಿವಶಂಕರ ಜಗದೀ, ಮುಖಂಡರಾದ ಶ್ರೀಶೈಲ ಗೋಳೆ, ನಜೀರ್ ಮಲ್ಲಾಬಾದ, ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷ ಭಗವಂತ ರಾಯ ಹೂಗಾರ, ಪ್ರಶಾಂತ್ ರಾಚಗೋಳ, ರವಿ ಸುತಾರ ಸೇರಿದಂತೆ ಶಾಲೆಯ ಮುಖ್ಯ ಗುರುಗಳು ಹಾಗೂ ಮುದ್ದು ಮಕ್ಕಳು ಉಪಸ್ಥಿತರಿದ್ದರು.
ಆಲಮಟ್ಟಿ: ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭಗೊಂಡಿದ್ದು, ಈ ವರ್ಷದ ಮೊದಲ ಒಳಹರಿವು ದಾಖಲಾಗಿದೆ. 1,768 ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, ಕೃಷ್ಣಾ ನದಿ ಪಾತ್ರದ ಜನರ ಸಂತಸಕ್ಕೆ ಕಾರಣವಾಗಿದೆ. ಕಳೆದ ವರ್ಷ ಜೂನ್ ಕಳೆದರೂ ಒಳಹರಿವು ಇರಲಿಲ್ಲ. ಆದರೆ ಈ ವರ್ಷ ಜೂನ್ ಮೊದಲ ವಾರವೇ ಒಳಹರಿವು ಆರಂಭವಾದ ಕಾರಣ ಕೃಷ್ಣಾ ನದಿ ಪಾತ್ರದ ಜನರಿಗೆ ಸಂತಸ ತಂದಿದೆ.ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಸುರಿದ ಮಳೆಯಿಂದ ಈ ಒಳಹರಿವು ಬಂದಿದ್ದು, ಇನ್ನೂ ಮಹಾರಾಷ್ಟ್ರದಿಂದ ಬಿಟ್ಟ ನೀರು ಬಂದಿಲ್ಲ.ಕಳೆದ ವರ್ಷ ಮಳೆಯ ಅಭಾವ, ನೀರಿನ ಬರ ಅನುಭವಿಸಿದ ರೈತರಿಗೆ ಈ ಬಾರಿ ಅಣೆಕಟ್ಟಿಗೆ ನೀರು ಬಂದ ಕಾರಣ ನೆಮ್ಮದಿಯ ನಿಟ್ಟುಸಿರು ಬಿಟ್ಟಂತಾಗಿದೆ.ಜಲಾಶಯ ಶೀಘ್ರ ಭರ್ತಿಯತ್ತ ಸಾಗಲಿ ಎಂದು ರೈತರ ಅಪೇಕ್ಷೆಯಾಗಿದೆ.ನೀರಿನ ಸಂಗ್ರಹದ ಮಾಹಿತಿ:519.60 ಮೀ ಗರಿಷ್ಟ ಎತ್ತರದ ಆಲಮಟ್ಟಿ ಜಲಾಶಯದಲ್ಲಿ ಶುಕ್ರವಾರ 507.79 ಮೀ, ವರೆಗೆ ನೀರು ಇತ್ತು. 123.081 ಟಿಎಂಸಿ ಗರಿಷ್ಠ ಸಂಗ್ರಹದ ಜಲಾಶಯದಲ್ಲಿ 20.6 ಟಿಎಂಸಿ ನೀರಿದೆ. ಅದರಲ್ಲಿ ಬಳಕೆಯೋಗ್ಯ 3 ಟಿಎಂಸಿ…
ಢವಳಗಿ: ಮುಂದಿನ ಪೀಳಿಗೆಗೆ ನಾವು ಪರಿಸರವನ್ನು ಉಳಿಸಿ ಹೋಗಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದ್ದು ಗಿಡಗಳನ್ನು ನೆಡುವ ಮೂಲಕ ಪ್ರತಿಯೊಬ್ಬರು ಹಸಿರು ಉಳಿಸುವ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ಬೆಂಗಳೂರಿನ ಸರ್ದಾರ್ ವಲ್ಲಭಬಾಯಿ ಪಟೇಲ್ ಸೊಸೈಟಿಯ ಮುಖ್ಯಸ್ಥ ಡಾ.ಬಾಲಕೃಷ್ಣ ರೆಡ್ಡಿ ಹೇಳಿದರು.ತಾಲ್ಲೂಕಿನ ಢವಳಗಿಯ ಮಡಿವಾಳೇಶ್ವರ ಉಚಿತ ಪ್ರಸಾದ ನಿಲಯದ ಆವರಣದಲ್ಲಿ ಶುಕ್ರವಾರ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸರ್ದಾರ್ ವಲ್ಲಭಬಾಯಿ ಪಟೇಲ್ ಸೊಸೈಟಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಪರಿಸರ ನಮಗೆ ಎಲ್ಲವನ್ನೂ ಕೊಟ್ಟಿದೆ. ಆದರೆ ಮನುಷ್ಯರು ಪರಿಸರಕ್ಕೆ ಹಾನಿಯನ್ನೇ ಮಾಡುತ್ತ ಹೊರಟಿದ್ದು ಉಷ್ಣಾಂಶದ ನಿಯಂತ್ರಣಕ್ಕೆ ಗಿಡಗಳನ್ನು ಬೆಳೆಸಿ ಅವುಗಳನ್ನು ಕಾಪಾಡುವುದೇ ನಮ್ಮ ಆದ್ಯ ಕರ್ತವ್ಯವಾಗಬೇಕು ಎಂದರು.ಮುಖಂಡ ಉಮೇಶ ಕಮ್ಮಾರ ಮಾತನಾಡಿ, ಪರಿಸರದ ಉಳಿವಿನಿಂದ ಜೀವ ಸಂಕುಲದ ಉಳಿವು ಸಾಧ್ಯ. ಬೇಸಿಗೆಯಲ್ಲಿ ಎದುರಿಸಿದ ಕಷ್ಟವನ್ನು ನಾವೆಲ್ಲ ಗಮನಿಸಿದ್ದೇವೆ. ಶಾಖ, ಉಷ್ಣಾಂಶವನ್ನು ಹೆಚ್ಚಳಗೊಳ್ಳಲು ಬಿಡದೇ ಪರಿಸರದ ಸಮತೋಲನಕ್ಕೆ ಅಗತ್ಯವಿರುವ ಕಾರ್ಯಗಳನ್ನು ಸಂಘ ಸಂಸ್ಥೆಗಳು,ಸಾಮಾಜಿಕ ಸಂಘಟನೆಗಳು ಕೈಗೊಳ್ಳಬೇಕು ಎಂದರು.ಶಿಬಿರದ…
ಸಿಂದಗಿ: ಪಟ್ಟಣದವನ್ನು ಹಚ್ಚಹಸಿರು ಮಾಡಲು ತಾಲೂಕಾ ಅರಣ್ಯ ಇಲಾಖೆ ಶ್ರಮ ಪಡುತ್ತಿದೆ. ಪರಿಸರ ಉಳಿದರೆ ಮಾತ್ರ ನಮ್ಮೆಲ್ಲರ ಬದುಕು ಹಸನವಾಗುತ್ತದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಅವರು ಪಟ್ಟಣದ ಪ್ರಾದೇಶಿಕ ಅರಣ್ಯ ಇಲಾಖೆ ಹಾಗೂ ಸಾಮಾಜಿಕ ವಲಯ ಅರಣ್ಯ ಇಲಾಖೆಗಳ ಸಹಯೋಗದಲ್ಲಿ ಶನಿವಾರ ವನಮಹೋತ್ಸವ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಮಾತನಾಡಿದರು.ಸಿಂದಗಿ ನಗರದ ಎಲ್ಲ ಬಡಾವಣೆಗಳಲ್ಲಿ ಈ ಬಾರಿ ಸಸಿ ನೆಡುವ ಯೋಜನೆ ಇದೆ. ಪ್ರತಿಯೊಬ್ಬರು ತಮ್ಮ ತಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿ ನೆಟ್ಟ ಸಸಿಗಳನ್ನು ಪಾಲನೆ ಪೋಷಣೆ ಮಾಡುವುದು ಮುಖ್ಯವಾಗಿದೆ. ಪರಿಸರದ ಬಗ್ಗೆ ಹೆಚ್ಚು ಕಾಳಜಿ ಎಲ್ಲರೂ ವಹಿಸಬೇಕು ಎಂದ ಅವರು ಪಟ್ಟಣದಲ್ಲಿ ಹಳೆಯ ವಿದ್ಯುತ್ತ್ ಕಂಬಗಳನ್ನು ತಗೆದು ಸುಮಾರು ೫ ಕೋಟಿ ವೆಚ್ಚದಲ್ಲಿ ಹೊಸ ವಿದ್ಯುತ್ತ್ ಕಂಬಗಳನ್ನು ನಿರ್ಮಾಣ ಮಾಡುವುದು ಹಾಗೂ ೩೬ ಕೋಟಿ ವೆಚ್ಚದಲ್ಲಿ ೨೪*೭ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳನ್ನು ಇನ್ನು ಕೆಲವೇ ದಿನಗಳಲ್ಲಿ ಭೂಮಿ ಪೂಜೆ ನೆರವೇರಿಸಿ ಕಾರ್ಯ ನಿರ್ವಹಿಸಲಿವೆ ಈಗಾಗಲೆ ಸಿಂದಗಿಯ ಹೊನ್ನಪ್ಪಗೌಡ ಲೇಔಟ್…
ಸಿಂದಗಿ: ಪಟ್ಟಣದ ಜನತೆಯ ಬಹುದಿನಗಳ ಬೇಡಿಕೆಯಾದ ವೀರರಾಣಿ ಕಿತ್ತೂರ ಚೆನ್ನಮ್ಮ ಮತ್ತು ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ಪುತ್ಥಳಿಗಳು ಸಿಂದಗಿ ನಗರಕ್ಕೆ ಜೂನ್ ೧೨ ರಂದು ಆಗಮಿಸಲಿವೆ ಎಂದು ಧುರೀಣ ಸಿದ್ದುಗೌಡ ಪಾಟೀಲ ಹೂನಳ್ಳಿ ಹೇಳಿದರು.ಅವರು ಪಟ್ಟಣದ ಬಸವ ಮಂಟಪದಲ್ಲಿ ಶನಿವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.ಜೂನ್ ೧೨ ರಂದು ಬೆಳಗ್ಗೆ ೧೦ ಗಂಟೆಗೆ ಕನಕದಾಸ ವೃತ್ತದಲ್ಲಿ ಪುತ್ತಳಿಗಳು ಆಗಮಿಸಲಿದ್ದು ಅಲ್ಲಿಂದ ಅರ್ಥಪೂರ್ಣವಾದ ಮೆರವಣಿಗೆ ಮೂಲಕ ಸ್ವಾಮಿ ವಿವೇಕಾನಂದ ವೃತ್ತಕ್ಕೆ ಆಗಮಿಸಿ ಅಲ್ಲಿ ಸ್ವಾಮಿ ವಿವೇಕಾನಂದರ ಪುತ್ತಳಿಯನ್ನು ನಿಲ್ಲಿಸಲಾಗುವುದು ಮತ್ತೆ ಎಚ್.ಜಿ.ಕಾಲೇಜು ಮಾರ್ಗವಾಗಿ ಶ್ರೀ ಬಸವೇಶ್ವರ ವೃತ್ತಕ್ಕೆ ಸಾಗಿ ಚೆನ್ನಮ್ಮ ವೃತ್ತದಲ್ಲಿ ವೀರರಾಣಿ ಕಿತ್ತೂರ ಚೆನ್ನಮ್ಮಳ ಪುತ್ತಳಿಯನ್ನು ನಿಲ್ಲಿಸಲಾಗುವುದು. ಈ ಎಲ್ಲ ಕಾರ್ಯಕ್ರಮ ಶಾಸಕ ಅಶೋಕ ಮನಗೂಳಿ ಅವರ ನೇತೃತ್ವದಲ್ಲಿ ಮತ್ತು ಅನೇಕ ಮಠಾಧೀಶರ ಸಾರಥ್ಯದಲ್ಲಿ ನೆರವೇರುವುದು ಎಂದು ತಿಳಿಸಿದರು.ಈ ಸಂಧರ್ಭದಲ್ಲಿ ಎಮ್.ಎಮ್.ಹಂಗರಗಿ ಮತ್ತು ಸಂಗನಬಸು ಬಿರಾದಾರ ಮಾತನಾಡಿ, ಶಾಸಕ ಅಶೋಕ ಮನಗೂಳಿ ಅವರ ಮತ್ತು ಅನೇಕ ಹಿರಿಯ ಮುಖಂಡರ ಸಹಕಾರದಿಂದ…
ವಿಜಯಪುರ : ಅಜಾತ ಶತ್ರು ಎಂದು ಕರೆಸಿಕೊಳ್ಳುವ ರಮೇಶ ಜಿಗಜಿಣಗಿಯವರು ಈ ಬಾರಿ ಲೋಸಕಭೆ ಚುನಾವಣೆಯಲ್ಲಿ ೭೭,೨೨೯ ಸಾವಿರ ಮತಗಳ ಅಂತರದಿಂದ ಗೆದ್ದು ಬೀಗಿದ್ದು, ಮಾನ್ಯ ನರೇಂದ್ರ ಮೋದಿಜಿಯವರ ಬಿಜೆಪಿ ಸರಕಾರಕ್ಕೆ ಒಂದು ಶಕ್ತಿಯನ್ನು ತಂದುಕೊಟ್ಟಿದ್ದಾರೆ. ಇವರು ಸತತ ೭ ಬಾರಿ ಸಂಸದರಾಗಿ ಆಯ್ಕೆಯಾಗಿರುವದು ಇತಿಹಾಸವೇ ಸರಿ. ಇವರಿಗೆ ಸೋಲು ಎಂಬುದು ಮರಿಚಿಕ್ಕೆಯಾಗಿದೆ. ಇವರು ಈ ಹಿಂದಿನ ಬಿಜೆಪಿ ಸರಕಾರದಲ್ಲಿ ಕೇಂದ್ರ ರಾಜ್ಯ ಸಚಿವರಾಗಿ ಹಲವಾರು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದು ಇತಿಹಾಸವಿದೆ. ರಮೇಶ ಜಿಗಜಿಣಗಿಯವರು ಸರಳ ಸಜ್ಜನಿಕೆಯ ವ್ಯಕ್ತಿಗಳಾಗಿದ್ದು, ಇವರು ಎಲ್ಲರೊಂದಿಗೆ ಸ್ನೇಹ ಭಾವದಿಂದ ಎಲ್ಲ ಜಾತಿ, ಮತ, ಧರ್ಮವನ್ನು ಗೌರವಿಸುತ್ತಾ, ದೀನ, ದಲಿತರ, ಹಿಂದುಳಿದ ವರ್ಗದವರೊಂದಿಗೆ ಒಳ್ಳೆಯ ಒಡನಾಟವನ್ನು ಇಟ್ಟುಕೊಂಡವರು. ಸಂಸದರಾಗುವ ಮುಂಚೆ ರಾಜ್ಯ ಸಚಿವರಾಗಿ ಹಲವಾರು ಇಲಾಖೆಯಲ್ಲಿ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿದ ಅನುಭವ ಇವರದು.ಇಂತಹ ಸರಳ ಸಜ್ಜನಿಕೆಯ ವ್ಯಕ್ತಿಗೆ ಈ ಬಾರಿ ಎನ್ಡಿಎ. ಒಕ್ಕೂಟದ ಸರಕಾರದಲ್ಲಿ ಕೇಂದ್ರ ಸಂಪುಟ ದರ್ಜೆಯ ಸಚಿವ ಸ್ಥಾನವನ್ನು ನೀಡಿ ವಿಜಯಪುರ…
