Subscribe to Updates
Get the latest creative news from FooBar about art, design and business.
What's Hot
Author: editor.udayarashmi@gmail.com
ತಿಕೋಟಾ: ಅನೇಕ ಸರ್ಕಾರಿ ಶಾಲೆಗಳಲ್ಲಿ ಸಾಕಷ್ಟು ನೈರ್ಮಲ್ಯ ಸೌಲಭ್ಯಗಳ ಕೊರತೆಯು ಮಹಿಳಾ ವಿದ್ಯಾರ್ಥಿಗಳ ಮೇಲೆ ಅಸಮಾನವಾಗಿ ಪರಿಣಾಮ ಬಿರುತ್ತಿದೆ. ಇದರಿಂದ ಆರೋಗ್ಯ ಘನತೆ ಮತ್ತು ಶೈಕ್ಷಣಿಕ ಅವಕಾಶಗಳಿಗೆ ದಕ್ಕೆ ತರುತ್ತಿದೆ ಎಂದು ಲಾಡಲಿ ಫೌಂಡೇಶನ ನೈರ್ಮಲ್ಯ ಅಭಿಯಾನದ ರಾಯಬಾರಿ ಕುಮಾರಿ ಶಿಫಾ ಜಮಾದಾರ ಅಭಿಪ್ರಾಯ ವ್ಯಕ್ತಪಡಿಸಿದರು.ಪಟ್ಟಣದ ಸರಕಾರಿ ಹೆಣ್ಣು ಮಕ್ಕಳ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಲಾಡಲಿ ಫೌಂಡೇಶನ ವತಿಯಿಂದ ಅತ್ಯಾದುನಿಕ ತಂತ್ರಜ್ಞಾನದ ₹ 12 ಲಕ್ಷ ವೆಚ್ಚದಲ್ಲಿ ನಿರ್ಮಿಸುತ್ತಿರುವ ಹೈಟೆಕ ಶೌಚಾಲಯದ ಅಡಿಗಲ್ಲು ಸಮಾರಂಭ ನೇರವರೆಸಿ ಮಾತನಾಡಿದರು.ನಮ್ಮ ಕೆಲಸ ಕೇವಲ ಶೌಚಾಲಯ ನಿರ್ಮಾಣ ಮಾತ್ರವಲ್ಲ ಪ್ರತಿ ವಿದ್ಯಾರ್ಥಿನಿಯರಿಗೆ ತನ್ನ ಸಂಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳುವ ಉಜ್ವಲ ಭವಿಷ್ಯಕ್ಕಾಗಿ ಅಡಿಪಾಯವನ್ನು ನಿರ್ಮಿಸುವುದು. ನೈರ್ಮಲ್ಯ ಸುರಕ್ಷತೆ ಮತ್ತು ಹೆಣ್ಣು ಮಕ್ಕಳ ಹಕ್ಕುಗಳಿಗೆ ಗೌರವವನ್ನು ಉತ್ತೇಜಿಸುವ ಮೂಲಕ ಲಿಂಗವನ್ನು ಲೆಕ್ಕಿಸದೆ ಎಲ್ಲಾ ವ್ಯಕ್ತಿಗಳು ಅಭಿವೃದ್ಧಿ ಹೊಂದಲು ಸಮಾನ ಅವಕಾಶಗಳನ್ನು ಹೊಂದಿರುವ ಸಮಾನ ಸಮಾಜಕ್ಕೆ ನಾವು ದಾರಿ ಮಾಡಿಕೊಡುತ್ತಿದ್ದೇವೆ ಎಂದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಲಾಡಲಿ ಫೌಂಡೇಶನ್ ನಿರ್ದೇಶಕ ಡಾ.ಜಾವೀದ…
“ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ”ವಿವೇಕಾನಂದ. ಎಚ್. ಕೆ. ಬೆಂಗಳೂರು 18 ನೆಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಅಂಕಿ ಸಂಖ್ಯೆಗಳು ಬಹುತೇಕ ಸ್ಪಷ್ಟವಾಗಿದೆ. ಈ ಸಂದರ್ಭದಲ್ಲಿ ಕೇವಲ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರವಲ್ಲ, ರಾಜಕೀಯ ಆಸಕ್ತಿಯ ಸಾಮಾನ್ಯ ಜನರು, ಸಾಕಷ್ಟು ಕುಟುಂಬಗಳಲ್ಲಿ, ಅಂಗಡಿ ಮುಗ್ಗಟ್ಟುಗಳಲ್ಲಿ, ಹೋಟೆಲ್, ಬಸ್ಸು, ರೈಲು, ವಿಮಾನಗಳಲ್ಲಿ, ಕೋರ್ಟು ಕಚೇರಿ ಆಸ್ಪತ್ರೆ ಪೊಲೀಸ್ ಸ್ಟೇಷನ್ ಗಳಲ್ಲಿ, ಕೂಲಿ, ಉದ್ಯಮಿ, ವ್ಯಾಪಾರಿ, ರೈತ ಎಲ್ಲರೂ ಈ ಬಗ್ಗೆ ತಮ್ಮದೇ ಆದ ಒಂದೊಂದು ಅಭಿಪ್ರಾಯಗಳನ್ನು, ವಿಶ್ಲೇಷಣೆಗಳನ್ನು ಮಾಡುತ್ತಲೇ ಇದ್ದಾರೆ. ಸೋಲು ಗೆಲುವುಗಳ ಕಾರಣಗಳ ಬಗ್ಗೆ ಚರ್ಚಿಸುತ್ತಿದ್ದಾರೆ.ಸಮೂಹ ಸಂಪರ್ಕ ಕ್ರಾಂತಿಯ ಪರಿಣಾಮ ಇದು ವ್ಯಾಪಕವಾಗಲು ಕಾರಣವಾಗಿದೆ.. ಈ ವಿಶ್ಲೇಷಣೆಗಳ ಸಂಕ್ಷಿಪ್ತ ಸಾರಾಂಶ ಇಲ್ಲಿ ಸರಳವಾಗಿ ಹೇಳುವ ಒಂದು ಪ್ರಯತ್ನ.. ಇದು ನರೇಂದ್ರ ಮೋದಿ ಅವರ ಐತಿಹಾಸಿಕ ಹ್ಯಾಟ್ರಿಕ್ ಗೆಲುವು, ಇದು ತಾಂತ್ರಿಕವಾಗಿ ಅಂಕಿ ಸಂಖ್ಯೆಗಳ ಎನ್.ಡಿಎ ಗೆಲುವು, ಇದು ಬಿಜೆಪಿಯ ಸೈದ್ಧಾಂತಿಕ ತತ್ವಕ್ಕೆ ಸಿಕ್ಕಿದ ಮತ್ತೊಂದು ಗೆಲುವು, ಇದು ಭಾರತ ಬ್ರಾಂಡ್…
ವಿಜಯಪುರ: ಸಿರಿಗೆರೆ ತರಳಬಾಳು ಕಲಾ ಸಂಘದ ವತಿಯಿಂದ ತರಳುಬಾಳು ಜಗದ್ಗುರು 1108 ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಜಿಯವರ ನೇತೃತ್ವದಲ್ಲಿ “ಶರಣ ಸಂಕುಲ” ನೃತ್ಯರೂಪಕ ಕಾರ್ಯಕ್ರಮ ದಿ.15 ಶನಿವಾರ ಸಂ.6.30ಗಂಟೆಗೆ ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಜರುಗಲಿದೆ.ಕಳೆದ 25 ವರ್ಷಗಳಿಂದ ದೇಶದೆಲ್ಲೆಡೆ 12 ನೇ ಶತಮಾನದ ಶಿವಶರಣರ ತತ್ವಗಳನ್ನು ಜನಸಾಮಾನ್ಯರಿಗೂ ಅರ್ಥವಾಗುವಂತೆ ನೃತ್ಯ, ಸಂಗೀತ ಮತ್ತು ಅಭಿನಯಗಳ ಮೂಲಕ ಪ್ರದರ್ಶಿಸುವ ‘ಶರಣಸಂಕುಲ’ ಕಾರ್ಯಕ್ರಮ ಇದೀಗ ರಜತ ಮಹೋತ್ಸವ ಆಚರಿಸುತ್ತಿದೆ.ವಿಜಯಪುರದಲ್ಲಿ ಅನುಭವ ಮಂಟಪದ ಬಸವಣ್ಣ, ಅಲ್ಲಮಪ್ರಭು, ಅಕ್ಕಮಹಾದೇವಿ, ವಿಶ್ವಬಂಧು ಮರುಳಸಿದ್ಧರು, ಅಕ್ಕಮಹಾದೇವಿಗೆ ದೀಕ್ಷೆ ಕೊಡುವ ಹರಳಯ್ಯ, ನುಲಿಯ ಚಂದಯ್ಯ, ಮೋಳಿಗೆ ಮಾರಯ್ಯ ಅವರ ಬದುಕಿನ ಸಾಧನೆಯನ್ನು ‘ಶರಣ ಸಂಕುಲ’ ಕಾರ್ಯಕ್ರಮದ ಮೂಲಕ ಸಾದರಪಡಿಸುತ್ತಿದ್ದಾರೆ. ಅಲ್ಲದೇ, ಸಿರಿಗೆರೆ ತರಳಬಾಳು ವಿದ್ಯಾಸಂಸ್ಥೆ ವಿದ್ಯಾರ್ಥಿಗಳಿಂದ “ಮಲ್ಲ ಕಂಬ” ಹಾಗೂ “ಮಲ್ಲಿ ಹಗ್ಗ” ಸಾಹಸ ಕ್ರೀಡೆಗಳ ಪ್ರದರ್ಶನ ಏರ್ಪಾಡಾಗಿದೆ.ಅತ್ಯಂತ ವಿಶೇಷವಾಗಿರುವ ಈ ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಪಾಲಕರು ಹಾಗೂ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಸಿರಿಗೆರೆ ತರಳಬಾಳು ಆಶ್ರಮದ ಭಕ್ತರಾಗಿರುವ ಹಣಮಂತ ಚಿಂಚಲಿ ಕೋರಿದ್ದಾರೆ.
ಆಲಮಟ್ಟಿ: ವಂದಾಲ ಗ್ರಾಮದ ಬನಶಂಕರಿ ದೇವಿಗೆ ಪ್ರತಿವರ್ಷದಂತೆ ಈ ಬಾರಿಯೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಗುರುವಾರ ಬಾದ್ಮಿ ಅಮವಾಸ್ಯೆಯಂದು ವಿಜ್ರಂಭಣೆಯಿಂದ ನೆರವೇರಿದವು.ಗುರುವಾರ ಬೆಳಿಗ್ಗೆ ಗ್ರಾಮದ ಸಂಗಮೇಶ್ವರ ದೇವಸ್ಥಾನದಿಂದ ಕುಂಭಮೇಳದೊಂದಿಗೆ ಕಿರು ರಥೋತ್ಸವ ನೆರವೇರಿತು. 9 ಗಂಟೆಗೆ ಬನಶಂಕರಿ ದೇವಿಯ ಮೂಲ ವಿಗ್ರಹಕ್ಕೆ ಲಘುನ್ಯಾಸ ಮಹಾ ರುದ್ರಾಭಿಷೇಕ, ಪೂಜಾ ಕೈಂಕರ್ಯವನ್ನು ಸುಕ್ಷೇತ್ರ ಬಾದಾಮಿಯ ಮೂಲ ಅರ್ಚಕರಾದ ಚಿದಂಬರ ಭಟ್ಟರು ನೆರವೇರಿಸಿದರು. ನಂತರ ನೆರವೇರಿದ ನಂದಿಕೋಲು, ಕುಂಭಮೇಳ, ಅಂಬಾರಿ ಮೇಳದ ಮೆರವಣಿಗೆಯುದ್ದಕ್ಕೂ ಸಹಸ್ರಾರು ಭಕ್ತಾದಿಗಳು ಪಾಲ್ಗೊಂಡಿದ್ದರು. ಮೆರವಣಿಗೆಯುದ್ದಕ್ಕೂ ಜನಮನ ಸೂರೆಗೊಂಡ ವಾಧ್ಯಮೇಳವನ್ನು ಕೆ.ಕೃಷ್ಣಾ ಮೋಹನರಾವ್ ಅವರು ಏರ್ಪಡಿಸಿದ್ದರು.ಮಧ್ಯಾಹ್ನ ಪವಾಡ ಬಸವೇಶ್ವರ ಮಠದಲ್ಲಿ ಅನ್ನ ಸಂತರ್ಪಣೆಯನ್ನು ಪರಮಭಕ್ತರಾದ ಬನಪ್ಪ ಸೋಮಪ್ಪ ಹಳ್ಳದ ಏರ್ಪಡಿಸಿದ್ದರು. ಸಂಜೆ ಪುರವಂತರ ಸೇವೆಯೊಂದಿಗೆ ಬನಶಂಕರಿ ದೇವಿಯ ಪಲ್ಲಕ್ಕಿ ಉತ್ಸವ ನೆರವೇರಿತು.ಅಂಬಾರಿಗಿಲ್ಲ ಈ ಬಾರಿ ಅವಕಾಶ;ವಂದಾಲ ಗ್ರಾಮದಲ್ಲಿ ಪ್ರತಿವರ್ಷ ಬಾದ್ಮಿ ಅಮವಾಸ್ಯೆಯಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಜತೆಗೆ ಅಂಬಾರಿ ಮಹೋತ್ಸವವೂ ಇಡೀ ಕಾರ್ಯಕ್ರಮಕ್ಕೆ ಕಳೆಗಟ್ಟುವಂತಿರುತ್ತಿತ್ತು. ಆದರೆ ಈ ಬಾರಿ ಸರ್ಕಾರದ ವಿವಿಧ ಕಟ್ಟಳೆಗಳಿಂದಾಗಿ…
ರಾಷ್ಟ್ರಪತಿ ಮುರ್ಮು ಭೇಟಿಯಾದ ಮೋದಿ | ಸರ್ಕಾರ ರಚನೆಗೆ ಹಕ್ಕು ಮಂಡನೆ | ರಾಷ್ಟ್ರಪತಿಗಳಿಂದ ಮೋದಿಗೆ ಸರ್ಕಾರ ರಚಿಸಲು ಆಹ್ವಾನ ನವದೆಹಲಿ: ಎನ್ಡಿಎ ನಾಯಕ ನರೇಂದ್ರ ಮೋದಿ ಅವರು ಶುಕ್ರವಾರ ರಾಷ್ಟ್ರಪತಿ ಭವನದಲ್ಲಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, ಕೇಂದ್ರದಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.ಇದರ ಬೆನ್ನಲ್ಲೇ ರಾಷ್ಟ್ರಪತಿಗಳು ಎನ್ಡಿಎ ನಾಯಕ ಪ್ರಧಾನಿ ಮೋದಿಯವರನ್ನು ಸರ್ಕಾರ ರಚಿಸಲು ಆಹ್ವಾನಿಸಿದರು.ನರೇಂದ್ರ ಮೋದಿ ಅವರು ಭಾನುವಾರ (ಜೂನ್ 9) ಸಂಜೆ ೭ ಗಂಟೆಗೆ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ರಾಷ್ಟ್ರಪತಿಯವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, “ದೇಶಕ್ಕೆ ಸೇವೆ ಸಲ್ಲಿಸಲು ಜನರು ಮೂರನೇ ಬಾರಿಗೆ ಎನ್ಡಿಎ ಸರ್ಕಾರಕ್ಕೆ ಅವಕಾಶ ನೀಡಿದ್ದಾರೆ. ಕಳೆದ ಎರಡು ಅವಧಿಗಳಲ್ಲಿ, ದೇಶವು ಮುನ್ನಡೆದ ವೇಗದಲ್ಲಿ, ಪ್ರತಿಯೊಂದು ವಲಯದಲ್ಲಿ ಬದಲಾವಣೆಯು ಗೋಚರಿಸುತ್ತದೆ ಮತ್ತು 25 ಕೋಟಿ ಜನರು ಬಡತನದಿಂದ ಹೊರಬರುವುದು ಪ್ರತಿ ಭಾರತಕ್ಕೂ ಹೆಮ್ಮೆಯ ಕ್ಷಣವಾಗಿದೆ ಎಂದು ನಾನು ದೇಶದ ಜನರಿಗೆ ಭರವಸೆ ನೀಡುತ್ತೇನೆ” ಎಂದರು.“ರಾಷ್ಟ್ರವು…
ಬಸವನಬಾಗೇವಾಡಿ: ತಾಲೂಕಿನ ಇವಣಗಿ ಗ್ರಾಮದ ಆರಾಧ್ಯದೈವ ವರದಾನಿ ಲಕ್ಕಮ್ಮದೇವಿ ಜಾತ್ರಾಮಹೋತ್ಸವದಂಗವಾಗಿ ಶುಕ್ರವಾರ ಭಾರ ಎತ್ತುವ ಸ್ಪರ್ಧೆ ಸೇರಿದಂತೆ ವಿವಿಧ ಕಸರತ್ತಿನ ಸ್ಪರ್ಧೆಗಳು ನೋಡುಗರನ್ನು ರೋಮಾಂಚನಗೊಳಿಸಿದವು.ಜಾತ್ರೆಯಂಗವಾಗಿ ಬೆಳಗ್ಗೆ ಜರುಗಿದ ಭಾರ ಎತ್ತುವ ಸ್ಪರ್ಧೆ ಹಾಗೂ ಗುಂಡು, ಸಂಗ್ರಾಣಿ ಕಲ್ಲು, ಚೀಲ ಎತ್ತುವ ಸ್ಪರ್ಧೆಯಲ್ಲಿ ವಿವಿಧೆಡೆಗಳಿಂದ ಆಗಮಿಸಿದ್ದ ಜಟ್ಟಿಗಳು ಭಾಗವಹಿಸಿದ್ದರು. ಮಧ್ಯಾನ್ಹ ಜರುಗಿದ ಜಂಗೀ ಕುಸ್ತಿ ಸ್ಪರ್ಧೆಯಲ್ಲಿಯೂ ವಿವಿಧೆಡೆಗಳಿಂದ ಆಗಮಿಸಿದ್ದ ಜಟ್ಟಿಗಳು ಭಾಗವಹಿಸಿದ್ದರು. ಈ ಎರಡು ಸ್ಪರ್ಧೆಗಳನ್ನು ವೀಕ್ಷಿಸಲು ಬಂದಿದ್ದ ಜನರು ಕೇಕೇ, ಚಪ್ಪಾಳೆ ಹಾಕಿ ಜಟ್ಟಿಗಳನ್ನು ಹುರಿದುಂಬಿಸಿದರು. ಕೆಲ ಸ್ಪರ್ಧೆಗಳು ಜನರನ್ನು ರೋಮಾಂಚನಗೊಳಿಸಿದವು. ಎಲ್ಲ ಸ್ಪರ್ಧೆಯಲ್ಲಿ ವಿಜೇತರಿಗೆ ಜಾತ್ರಾಮಹೋತ್ಸವ ಸಮಿತಿಯಿಂದ ಬಹುಮಾನ ನೀಡಿ ಸನ್ಮಾನಿಸಲಾಯಿತು. ಜಾತ್ರೆಯಂಗವಾಗಿ ರಾತ್ರಿ ೯ ಗಂಟೆಗೆ ಇವಣಗಿಯ ಬಸವ ಚೇತನ ಕಲಾ ಬಳಗದಿಂದ ಹಿರಿತನದ ಹೆಣ್ಣು ಸಾಮಾಜಿಕ ನಾಟಕ ಪ್ರದರ್ಶನವಾಯಿತು.
ಮುದ್ದೇಬಿಹಾಳ: ತಾಲೂಕಿನ ಅಮರಗೋಳ ಗ್ರಾಮದ ಕೃಷ್ಣಾ ನದಿಯ ದಡದಲ್ಲಿ ಮೃತ ದೇಹವೊಂದು ಪತ್ತೆಯಾಗಿದೆ.ಮೃತ ದುರ್ದೈವಿಯನ್ನು ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಮುರ್ತುಜಸಾಬ ವಾಲೀಕಾರ(೩೫) ಎಂದು ಗುರುತಿಸಲಾಗಿದೆ.ಕುಡಿದ ಅಮಲಿನಲ್ಲಿ ತನ್ನಷ್ಟಕ್ಕೆ ತಾನೇ ಸಾಯಬೇಕು ಅಂತಾ ನದಿಗೆ ಬಿದ್ದು ಈಜು ಬಾರದೇ ಉಸಿರುಗಟ್ಟಿ ತೀರಿಕೊಂಡಿರಬಹುದು. ಮೃತನ ಸಾವಿನಲ್ಲಿ ನನ್ನದು ಯಾವುದೇ ಸಂಶಯ ಇರುವದಿಲ್ಲ ಎಂದು ಆತನ ಪತ್ನಿ ಬೀಬಿಜಾನ ವಾಲೀಕಾರ ಮುದ್ದೇಬಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ಮುದ್ದೇಬಿಹಾಳ: ಪಟ್ಟಣದ ವಿದ್ಯಾನಗರದ ನಿವಾಸಿ ಕಾಂಚನಾ ಪತ್ತಾರ ಕಾಣೆಯಾದ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಾಧಾರಣ ಮೈ, ದುಂಡು ಮುಖ, ಬಿಳಿ ಬಣ್ಣ, ಎತ್ತರಕ್ಕೆ ೪.೧೦ ಫೂಟ್ ಇದ್ದು ಕನ್ನಡ, ಇಂಗ್ಲೀಷ್, ಹಿಂದಿ ಭಾಷೆಗಳನ್ನು ಓದಲು ಬರೆಯಲು ಬರುತ್ತದೆ. ಮೇ೨೫ ರಂದು ಸಂಜೆ ೫ಗಂಟೆಗೆ ಹಳದಿ ಬಣ್ಣದ ಚೂಡಿದಾರ ಧರಿಸಿ ಮನೆಯಿಂದ ಕೋಚಿಂಗ್ಗೆ ಹೋಗುತ್ತೇನೆ ಅಂತಾ ಹೇಳಿ ಹೋದವಳು ಇಲ್ಲಿಯವರೆಗೆ ಮನೆಗೆ ವಾಪಸ್ ಬರದೇ ತನ್ನ ಮೊಬೈಲ್ ಫೋನ್ ಸ್ವಿಚ್ಆಫ್ ಮಾಡಿಕೊಂಡು ಎಲ್ಲಯೋ ಕಾಣೆಯಾಗಿದ್ದು ಹುಡುಕಿ ಕೊಡುವಂತೆ ಆಕೆಯ ತಂದೆ ವಿರುಪಾಕ್ಷಿ ಪತ್ತಾರ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.
ಮುದ್ದೇಬಿಹಾಳ: ಪಟ್ಟಣದ ಸೇರಿದಂತೆ ತಾಲೂಕಿನ ಹಲವೆಡೆ ಗುರುವಾರ ರಾತ್ರಿ ಗುಡುಗು, ಸಿಡಿಲು ಸಮೇತ ಸುರಿದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ಥವಾಗಿದೆ.ತಾಲೂಕಿನ ತಾರನಾಳ ಗ್ರಾಮದ ಮಡಿವಾಳಮ್ಮ ಚಲವಾದಿ, ಹಣಮಂತ ಹಂದ್ರಾಳ ದೆವೂರ ಗ್ರಾಮದ ದುರ್ಗವ್ವ ಮಾದರ, ಶಂಕ್ರವ್ವ ಮಾದರ, ಕುಂಟೋಜಿ ಗ್ರಾಮದ ಮರಲಿಂಗವ್ವ ಕವಡಿಮಟ್ಟಿ ಮತ್ತು ಶರಣಮ್ಮ ಗೊಲ್ಲರ ಇವರ ಮನೆಗಳು ಭಾಗಶಃ ಹಾನಿಯಾದರೆ, ಕುಂಟೋಜಿ ಗ್ರಾಮದ ಯಲ್ಲಪ್ಪ ಯರಝರಿಯವರಿಗೆ ಸೇರಿದ್ದ ಆಕಳು ಸಿಡಿಲು ಬಡೆದು ಸಾವನ್ನಪ್ಪಿದೆ.ನಿಯಮಗಳಂತೆ ಆಕಳು ಮೃತ ಪಟ್ಟರೆ ರೂ. ೩೭೫೦೦, ಪಕ್ಕಾ ಮನೆ ಸಂಪೂರ್ಣ ಹಾನಿಯಾದರೆ ರೂ. ೧೨೦೦೦೦, ಪಕ್ಕಾ ಮನೆ ಶೇ.೧೫ ರಷ್ಟು ಹಾನಿಯಾದರೆ ರೂ.೬೫೦೦ ಗಳನ್ನು ಪರಿಹಾರವಾಗಿ ನೀಡಲಾಗುವದು ಎಂದು ತಹಶೀಲ್ದಾರ ಬಸವರಾಜ ನಾಗರಾಳ ತಿಳಿಸಿದ್ದಾರೆ.
