Subscribe to Updates
Get the latest creative news from FooBar about art, design and business.
What's Hot
Author: editor.udayarashmi@gmail.com
ಮುದ್ದೇಬಿಹಾಳ: ಚಿಮ್ಮಲಗಿ ಏತ ನೀರಾವರಿ ಹಾಗೂ ನಾಗರಬೆಟ್ಟ ಏತ ನೀರಾವರಿ ಯೋಜನೆಯಡಿ ಭೂಮಿ ಕಳೆದುಕೊಂಡ ರೈತರಿಗೆ ಅವಾರ್ಡ ಪ್ರತಿ ನೀಡಿ, ಅಪೂರ್ಣಗೊಂಡಿರುವ ಕಾಲುವೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ತಾಲೂಕಿನ ನಾಲತವಾಡ ಬಳಿಯ ಅಮರೇಶ್ವರ ದೇವಸ್ಥಾನದ ಆವರಣದಲ್ಲಿ ಜೂ೮ ರಿಂದ ಆಮರಣ ಉಪವಾಸ ಸತ್ಯಾಗ್ರಹ ಪ್ರಾರಂಭಿಸುವುದಾಗಿ ಹೋರಾಟಗಾರ, ಕಾಂಗ್ರೇಸ್ ಮುಖಂಡ ಶಿವಾನಂದ ವಾಲಿ ಹೇಳಿದರು.ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಬಗ್ಗೆ ಕಳೆದ ಕೆಲವು ದಿನಗಳ ಹಿಂದೆ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದೆ. ನಮ್ಮ ಬೇಡಿಕೆ ಈಡೇರಿಸದಿದ್ದರೆ ಆಮರಣ ಉಪವಾಸ ಸತ್ಯಾಗ್ರಹ ಪ್ರಾರಂಭಿಸುವದಾಗಿ ಎಚ್ಚರಿಕೆ ಕೂಡ ನೀಡಿದ್ದೆ. ನಮ್ಮ ಮನವಿಗೆ ಇದುವರೆಗೆ ಯಾವುದೇ ರೀತಿಯಿಂದ ಸ್ಪಂದಿಸದ ಕಾರಣ ಸತ್ಯಾಗ್ರಹ ಪ್ರಾರಂಭಿಸುತ್ತಿದ್ದೇನೆ. ಸತ್ಯಾಗ್ರಹಕ್ಕೆ ವಿವಿಧ ಸಂಘಟನೆಗಳು, ರೈತರು, ಹೋರಾಟಗಾರರು ಬೆಂಬಲಿಸುವದಾಗಿ ತಿಳಿಸಿದ್ದಾರೆ ಎಂದರು.
ಮಹಿಳಾ ವಿಶ್ವವಿದ್ಯಾಲಯದಿಂದ ಕಲಕೇರಿಯಲ್ಲಿ ಪರಿಸರ ದಿನಾಚರಣೆ ಕಲಕೇರಿ: ವಿದ್ಯಾರ್ಥಿಗಳು ಕೇವಲ ವನಮಹೋತ್ಸವದ ಸಂದರ್ಭದಲ್ಲಿ ಸಸಿ ನೆಡುವುದು ಅಷ್ಟೇ ಅಲ್ಲ, ಅವುಗಳನ್ನು ಉಳಿಸಿ ಬೆಳೆಸುವ ಕಾರ್ಯವನ್ನು ವಿದ್ಯಾರ್ಥಿಗಳು ಪ್ರತಿನಿತ್ಯ ತಪ್ಪದೇ ಮಾಡಬೇಕಾಗಿದೆ ಎಂದು ವಿಜಯಪುರದ ಕ.ರಾ.ಅ.ಮ.ವಿ.ವಿಯ ದೈಹಿಕ ಶಿಕ್ಷಣ ವಿಭಾಗದ ಪ್ರೋ.ಜ್ಯೋತಿ ಉಪಾಧ್ಯೆ ಹೇಳಿದರು.ಕಲಕೇರಿಯ ಶ್ರೀ ಬಸವೇಶ್ವರ ಮಹಿಳಾ ಮಹಾವಿದ್ಯಾಲಯಕ್ಕೆ ಶುಕ್ರವಾರ ಭೇಟಿ ನೀಡಿದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ “ಸ್ಥಾನಿಕ ವಿಚಾರಣಾ ಸಮಿತಿಯ ಪರಿಶೀಲನಾ ನಿಮಿತ್ಯವಾಗಿ ಆಗಮಿಸಿದ ಸಂದರ್ಭದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಾಲೇಜಿನ ಆವರಣದಲ್ಲಿ ಸಸಿ ನೆಟ್ಟು ನೀರುಣಿಸಿ ಅವರು ಮಾತನಾಡಿದರು.ಶ್ರೀ ಬಸವೇಶ್ವರ ಮಹಿಳಾ ಕಾಲೇಜಿನ ಅಭಿವೃದ್ಧಿ ಪರಿಶೀಲನಾ ತಂಡದ ಸದಸ್ಯರಾಗಿ ಆಗಮಿಸಿ ಮಾತನಾಡಿದ ಅವರು ನಾವೆಲ್ಲರೂ ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ ರಕ್ಷಣೆಗೆ ಎಷ್ಟು ಮಹತ್ವ ನೀಡುತ್ತೇವೆಯೋ ಹಾಗೆಯೇ ಸಸ್ಯ ಸಂಪತ್ತು ಮತ್ತು ಮಣ್ಣಿನ ಸಂರಕ್ಷಣೆ ಮಾಡಿ ಪರಿಸರದ ರಕ್ಷಣೆ ಮಾಡಿದಾಗ ಮಾತ್ರ ನಾವು ಸುಂದರ ಪರಿಸರದಲ್ಲಿ ಆರೋಗ್ಯಯುತ ಜೀವನ ನಡೆಸಲು ಸಾಧ್ಯವಾಗುತ್ತದೆ ಆದ್ದರಿಂದ…
ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಿಡೀರ್ ಬೇಟಿ ನೀಡಿದ ಶಾಸಕ ಅಶೋಕ ಮನಗೂಳಿ ಸಿಂದಗಿ: ಸಾರ್ವಜನಿಕ ಆಸ್ಪತ್ರೆಗೆ ಬೇಟಿ ನೀಡಿದ ಅವರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಸರಿಯಾಗಿ ಹಾಜರಾಗುತ್ತಿಲ್ಲ. ಗೋಲಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಗೂ ನಾಗಾವಿ ಕೇಂದ್ರದ ವೈದ್ಯಾಧಿಕಾರಿ ಆಸ್ಪತ್ರೆಗೆ ಮುಖವು ತೋರಿಸಿಲ್ಲ ನೀವೇನು ಮಾಡುತ್ತಿದ್ದಿರಾ ಎಂದು ತಾಲೂಕಾ ಆರೋಗ್ಯ ವೈದ್ಯಾಧಿಕಾರಿ ಡಾ.ಎ.ಎ.ಮಾಗಿ ಅವರಿಗೆ ಶಾಸಕ ಅಶೋಕ ಮನಗೂಳಿ ತರಾಟೆ ತೆಗೆದುಕೊಂಡರು.ಉತ್ತರಿಸಿದ ವೈದ್ಯಾಧಿಕಾರಿ ಹೋಗುತ್ತಾರೆ ಎನ್ನುತ್ತಿದಂತೆ ದೂರವಾಣಿ ಮುಖಾಂತರ ಮಾತನಾಡಿ ಇದೀಗ ಎಲ್ಲಿದ್ದಾರೆ ಎಂದು ವಿಚಾರಿಸಿ ಎಂದು ಹೇಳಿದಾಗ ವೈದ್ಯರು ಕೆಲಸದ ನಿಮಿತ್ಯ ಆಸ್ಪತ್ರೆಯಲ್ಲಿ ಇಲ್ಲ ಎಂದು ವೈದ್ಯಾಧಿಕಾರಿ ಡಾ.ಎ.ಎ.ಮಾಗಿ ಅವರಿಗೆ ಉತ್ತರಿಸಿದರು. ನೀವೇ ನೋಡಿ ಅವರ ವಿರುದ್ದ ಕ್ರಮ ತೆಗೆದುಕೊಳ್ಳಿ ಇಲ್ಲವೇ ನಿಮ್ಮ ಮೇಲೆ ಕ್ರಮ ಅನಿವಾರ್ಯವಾಗುತ್ತದೆ. ಇದುವರೆಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ಯಾವ ಯಾವ ಚಿಕೀತ್ಸೆ ಲಭಿಸುತ್ತವೆ ಎಂಬ ಬಗ್ಗೆ ಜನರಿಗೆ ಗೋತ್ತಿಲ್ಲ. ಕಳೆದ ಒಂದು ವರ್ಷದಿಂದ ಜಾಗೃತಿ ಮೂಡಿಸುವ ಒಂದೇ ಒಂದು ಕಾರ್ಯಕ್ರಮ ನೀವು ಮಾಡಿಲ್ಲ.…
ಚಡಚಣ: ಪಟ್ಟಣದ ನಿವರಗಿ ರಸ್ತೆಯ ಸಮೀಪದಲ್ಲಿ ರಾಮ ಬಡಿಗೇರ ಅವರಿಗೆ ಸೇರಿದ ಎಮ್ಮೆಯೊಂದು ಸಿಡಿಲಿಗೆ ಬಲಿಯಾದ ಘಟನೆ ಶುಕ್ರವಾರ ಸಂಜೆ ನಡೆದಿದೆ.ಜಮೀನಿನಲ್ಲಿ ಕಟ್ಟಿದ್ದ ಎಮ್ಮೆಯು ಸಿಡಿಲ ಹೊಡೆತಕ್ಕೆ ಸ್ಥಳದಲ್ಲೇ ಸಾವನ್ನಪ್ಪಿದ್ದು ಪಕ್ಕದಲ್ಲಿರುವ ಮರಕ್ಕೂ ಸಿಡಿಲಿನ ಪ್ರಖರತೆಗೆ ಬೆಂಕಿ ಆವರಿಸಿಕೊಂಡಿದೆ.
ಸಿಂದಗಿ: ಪ್ರತಿಯೊಬ್ಬರೂ ನಿಮ್ಮ ನಿಮ್ಮ ಮನೆಯ ಮುಂದೆ, ಸಾರ್ವಜನಿಕ ಸ್ಥಳ, ಜಮೀನಿನಲ್ಲಿ ಸಸಿ ನಡುವುದರ ಮೂಲಕ ಪರಿಸರವನ್ನು ಕಾಪಾಡಿಕೊಳ್ಳಬೇಕು ಎಂದು ನರೇಗಾ ಸಹಾಯಕ ನಿರ್ದೇಶಕ ನಿತ್ಯಾನಂದ ಯಲಗೋಡ ಹೇಳಿದರು.ತಾಲೂಕಿನ ರಾಂಪೂರ ಪಿಎ ಗ್ರಾಮದ ವ್ಯಾಪ್ತಿಯ ನರೇಗಾ ಅಡಿಯಲ್ಲಿ ನಿರ್ಮಾಣವಾದ ಅಮೃತ ಸರೋವರ ದಡದಲ್ಲಿ ಹಮ್ಮಿಕೊಂಡ ಸಸಿ ನಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿವರ್ಷದಂತೆ ಈ ವರ್ಷವೂ ವಿಶ್ವ ಪರಿಸರ ದಿನವನ್ನು ಆಚರಣೆ ಮಾಡಲಾಗುತ್ತಿದೆ. ಈ ಅಮೃತ ಸರೋವರದಲ್ಲಿ ೧೦೦ಕ್ಕೂ ಅಧಿಕ ಸಸಿಗಳನ್ನು ನಡುತ್ತಿದ್ದೇವೆ ಎಂದರು.ಇದೇ ಸಂದರ್ಭದಲ್ಲಿ ದಸ್ತಗೀರಸಾಬ್ ನದಾಫ್, ಐಇಸಿ ಸಂಯೋಜಕರು ಭೀಮರಾಯ ಚೌಧರಿ, ಕಾರ್ಯದರ್ಶಿ ಬಸವರಾಜ್ ಪಟ್ಟಣಶೆಟ್ಟಿ, ಸಂಪತ್, ನಾಗು ವಾಲೀಕಾರ ಸೇರಿದಂತೆ ಗ್ರಾಮ ಪಂಚಾಯತ್ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಮತ್ತು ಸಿಬ್ಬಂದಿಗಳು ನರೇಗಾ ಕೂಲಿಕಾರರು ಇದ್ದರು.
ತಿಕೋಟಾ: ಗುರುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಹಳ್ಳ ಕೊಳ್ಳ ಬಾಂದಾರಗಳು ತುಂಬಿ ಹರಿಯುತ್ತಿದ್ದು ತಾಲ್ಲೂಕಿನ ಲೋಹಗಾಂವ ಗ್ರಾಮದ ವಿಜಯಪುರ ರಸ್ತೆಯು ಹಳ್ಳದಿಂದ ಹರಿಯುವ ನೀರಿನ ರಭಸಕ್ಕೆ ಸೇತುವೆ ಕಿತ್ತು ಹೋಗಿದೆ. ಬೆಳ್ಳಂಬೆಳಗ್ಗೆ ವಾಹನ ಸವಾರರು ತೊಂದರೆ ಅನುಭವಿಸಿದ್ದು ರಸ್ತೆ ಬಂದ್ ಆಗಿ ಸಾಲುಗಟ್ಟಲೆ ವಾಹನಗಳು ರಸ್ತೆಯುದ್ದಕ್ಕೂ ನಿಂತಿದ್ದವು.ರಸ್ತೆ ಬಂದ್ ಆಗಿ ಸಾರ್ವಜನಿಕರು ತೊಂದರೆ ಅನುಭವಿಸುತ್ತಿರುವ ವಿಷಯ ತಿಳಿದ ಸಚಿವ ಎಂ.ಬಿ.ಪಾಟೀಲ್ ಅವರು ತಮ್ಮ ಆಪ್ತಸಹಾಯಕ ಸಂತೋಷ ಲೋಕುರೆ ಹಾಗೂ ಪಿಡಬ್ಲುಡಿ ಎಇಇ ರವಿ ಪವಾರ ಅವರನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ತಿಳಿಸಿದ್ದಾರೆ.ಸ್ಥಳಕ್ಕೆ ಭೇಟಿ ನೀಡಿದ ಎಇಇ ಹಾಳಾದ ಸೇತುವೆ ಹತ್ತಿರ ತಾತ್ಕಾಲಿಕವಾಗಿ ಗರಸು ಹಾಕಿ ಜೆಸಿಬಿ ಮೂಲಕ ಮುಳ್ಳುಕಂಟಿ ತೆಗೆಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ತಾತ್ಕಾಲಿಕ ಪೈಪ್ ಹಾಕಿ ಕಾಮಗಾರಿ ಮಾಡಲಾಗುವದು. ಸೇತುವೆ ಹಾನಿ ಕುರಿತು ಸರ್ಕಾರಕ್ಕೆ ವರದಿ ನೀಡುತ್ತೇವೆ. ಶಾಶ್ವತ ಸೇತುವೆ ಮಂಜೂರಿಗೆ ವರದಿ ನೀಡುತ್ತೇವೆ. ಅನುದಾನ ಮಂಜೂರಾದ ನಂತರ ಶಾಶ್ವತ ಸೇತುವೆ ನಿರ್ಮಿಸಲಾಗುವದು ಎಂದು…
ವಿಜಯಪುರ: ನಗರದ ಡಾ.ಬಿ.ಆರ್. ಅಂಬೇಡ್ಕರ ಕ್ರೀಡಾಂಗಣ ಹತ್ತಿರವಿರುವ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಕಚೇರಿ ವಿಜಯಪುರ ಕಚೇರಿಯಲ್ಲಿರುವ ಹಳೆಯ ಅನುಪಯುಕ್ತ ವಸ್ತುಗಳನ್ನು ಬರುವ ಜುಲೈ ೧೧ರ ೨೦೨೪ರಂದು ಬೆಳಿಗ್ಗೆ ೧೧ಗಂಟೆಯಿಂದ ಮಧ್ಯಾಹ್ನ ೧ ಗಂಟೆಯವರೆಗೆ ವಿಲೇವಾರಿ ಮಾಡಲಾಗುವುದು.ಆಸಕ್ತ ಸಾರ್ವಜನಿಕರು ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಅಧೀಕ್ಷಕರು ಕರ್ನಾಟಕ ಲೋಕಾಯುಕ್ತ ವಿಜಯಪುರ ಇವರ ಕಚೇರಿಯ ಸಮಯದಲ್ಲಿ ಭೇಟಿಯಾಗಿ ಮಾಹಿತಿ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ವಿಜಯಪುರ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಬಿ.ಎಲ್.ಡಿ.ಈ ವಿಜಯಪುರ ಇವರ ಸಹಯೋಗದೊಂದಿಗೆ ಜೂ.೧೦ ರಂದು ಬೆಳಿಗ್ಗೆ ೯ ಗಂಟೆಗೆ ಟಾಟಾ ಪಾವರ ಸೋಲಾರ ಲಿ, ಬೆಂಗಳೂರು ವತಿಯಿಂದ ಐ.ಟಿ ಐ. ಪಾಸಾದಂತಹ ಹಾಗೂ ಅಂತಿಮ ವರ್ಷದ ಪರೀಕೇಗೆ ಹಾಜರಾಗುತ್ತಿರುವ, ೨೩ ವರ್ಷದೊಳಗಿನ ಅಭ್ಯರ್ಥಿಗಳಿಗೆ ಅಪ್ರೆಂಟಿಶಿಪ್ಗಾಗಿ ಕ್ಯಾಂಪಸ್ ಸಂದರ್ಶನವನ್ನು ಬಿ.ಎಲ್.ಡಿ.ಈ ಐ.ಟಿ.ಐ/ಪಾಲಿಟೆಕ್ನಿಕ್ ಕಾಲೇಜು ಆವರಣ, ಆಶ್ರಮ ರಸ್ತೆ ವಿಜಯಪುರದಲ್ಲಿ ಆಯೋಜಿಸಲಾಗಿದೆ.ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಎಲ್ಲಾ ಸೆಮಿಸ್ಟರಗಳ ಮೂಲಪ್ರತಿ ಹಾಗೂ ಜೆರಾಕ್ಸ ಪ್ರತಿಗಳು, ಎರಡು ಭಾವಚಿತ್ರ ಮತ್ತು ರೆಸ್ಯೂಮ್ ನೋಂದಿಗೆ ಭಾಗವಹಿಸಬೇಕು,ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೯೯೧೬೮೫೩೬೦೫-೯೯೪೫೦೦೦೭೯೩ ಗೆ ಸಂಪರ್ಕಿಸಲು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಎಸ್ ಎಸ್ ಎಲ್ ಸಿ ೨ ಪರೀಕ್ಷೆಯನ್ನು ಪಾರದರ್ಶಕ ಹಾಗೂ ನಕಲು ಮುಕ್ತವಾಗಿ ನಡೆಸಲು ಕಟ್ಟು ನಿಟ್ಟಿನ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.ಶುಕ್ರವಾರ ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯ:೨ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜೂನ್ ೧೪ ರಿಂದ ೨೨ರ ವರೆಗೆ ಜಿಲ್ಲೆಯಲ್ಲಿ ಒಟ್ಟು ೨೬ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿದ್ದು, ಸುಮಾರು ೮,೦೬೦ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಕುಡಿಯುವ ಶುದ್ಧ ನೀರು, ಬೆಂಚ್, ಮಧ್ಯಾöಹ್ನ ಬಿಸಿಯೂಟ, ಸಾರಿಗೆ ವ್ಯವಸ್ಥೆ ಹಾಗೂ ವೈಧ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಸೂಚಿಸಿದರು.ಪರೀಕ್ಷಾ ದಿನಗಳಂದು ಆಯಾ ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿರುವ ತಹಶೀಲ್ಧಾರರು, ತಾಲೂಕು ಪಂಚಾಯತ ಕಾರ್ಯನಿರ್ವಹಣಾಧಿಕಾರಿಗಳು, ನರೇಗಾ ಯೋಜನೆಯ ಸಹಾಯಕ ನಿರ್ದೇಶಕರು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ತಮಗೆ ವಹಿಸಿಕೊಟ್ಟ ವಿಶೇಷ ವಿಚಕ್ಷಣಾ ದಳದ ಕರ್ತವ್ಯಗಳನ್ನು ತಪ್ಪದೆ ನಿರ್ವಹಿಸಬೇಕು ತಪ್ಪಿದಲ್ಲಿ ಪರೀಕ್ಷಾ ಮಂಡಳಿಯ ನಿಯಮಾನುಸಾರ ಶಿಸ್ತು…
ವಿಜಯಪುರ: ನಗರದ ಕನಕದಾಸ ಬಡಾವಣೆಯ ಹತ್ತಿರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕೀಯರ ವಸತಿ ನಿಲಯಕ್ಕೆ ಇಂದು ಜಿಲ್ಲಾಧಿಕಾರಿ ಟಿ.ಬೂಬಾಲನ್ ಭೇಟಿ ನೀಡಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದರು.ಈ ಸಂದರ್ಭದಲ್ಲಿ ಪರಿಸರದ ಮಹತ್ವದ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಜಿಲ್ಲೆಯಲ್ಲಿ ಸುಮಾರು 101 ವಸತಿ ನಿಲಯಗಳು ಕಾರ್ಯನಿರ್ವಹಿಸುತ್ತಿದ್ದು ಎಲ್ಲ ವಸತಿ ನಿಲಯಗಳಲ್ಲಿ ಗಿಡ ಮರಗಳನ್ನು ಬೆಳೆಸಬೇಕು ಹಾಗೂ ಅವುಗಳನ್ನು ಸಂರಕ್ಷಿಸಬೇಕು ಗಿಡಮರಗಳು ನಮಗೆ ಉತ್ತಮ ಗಾಳಿ, ಪರಿಸರ, ನೆರಳು ಹಾಗೂ ಉತ್ತಮ ಆರೋಗ್ಯವನ್ನು ಒದಗಿಸುತ್ತವೆ ನಾವೆಲ್ಲರೂ ಗಿಡ ಮರಗಳನ್ನು ಬೆಳೆಸೋಣ ಉಳಿಸೋಣ ಎಂದು ಅವರು ಹೇಳೀದರು.ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅಶೋಕ ಕಲ್ಯಾಣಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮೆಹಬೂಬ ತುಂಬರಮಟ್ಟಿ, ಹಾಗೂ ಇಲಾಖೆಯ ಇತರೇ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು
