Subscribe to Updates
Get the latest creative news from FooBar about art, design and business.
Author: editor.udayarashmi@gmail.com
ದೇವರಹಿಪ್ಪರಗಿ: ಪರಿಸರ ಉಳಿದರೆ, ಜೀವಜಗತ್ತು ಉಳಿಯುತ್ತದೆ, ಬೆಳೆಯುತ್ತದೆ ಎಂದು ಹೆಡಗಾಪೂರ ಶಿವಯೋಗೇಶ್ವರ ಸಂಸ್ಥಾನಮಠ ಹಾಗೂ ಯಾಳವಾರ ಗುರುಮಠದ ದಾರುಕಲಿಂಗ ಶ್ರೀಗಳು ಹೇಳಿದರು.ತಾಲ್ಲೂಕಿನ ಯಾಳವಾರ ಗ್ರಾಮದಲ್ಲಿ ಬುಧವಾರ ಅನುದಿನ ಅನುಸರಿಸು ಸಂಸ್ಥೆಯಿಂದ ಊರಿಗೊಂದು ವನ, ಗ್ರಾಮಕ್ಕೊಂದು ಗ್ರಂಥಾಲಯ, ಹಳ್ಳಿಗೊಂದು ಆಧ್ಯಾತ್ಮಯೋಗಮಂದಿರ ಎಂಬ ಸಂಕಲ್ಪ ಯೋಜನೆಯಡಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿಗಳನ್ನು ನೆಟ್ಟು, ನೀರುಣಿಸಿ ಹಾಗೂ ಗ್ರಾಮಸ್ಥರಿಗೆ ವಿತರಿಸಿ ಮಾತನಾಡಿ, ನಾವೆಲ್ಲರೂ ಪರಿಸರವನ್ನು ಉಳಿಸಿ ಬೆಳೆಸೋಣ ಎಂದರು.ಅಧ್ಯಕ್ಷತೆ ವಹಿಸಿದ ಪ್ರಣವ ಸ್ವಾಮೀಜಿ ಮಾತನಾಡಿ, ಪರಿಸರದ ಉಳಿವು ಇಂದು ಅತೀ ಅವಶ್ಯವಾಗಿದ್ದು, ಪರಿಸರ ನಾಶದಿಂದಲೇ ಈಗ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಿದೆ. ಮನುಷ್ಯ ಸ್ವಾರ್ಥತೆಯಿಂದ ಪರಿಸರ ನಾಶ ಮಾಡಿದರೆ ಮುಂದೆ ನೀರಿನಂತೆ ಗಾಳಿಯನ್ನು ಕೂಡಾ ಹಣ ಕೊಟ್ಟು ಕೊಂಡುಕೊಳ್ಳುವ ಪರಿಸ್ಥಿತಿ ಬರುವುದರಲ್ಲಿ ಸಂದೇಹವಿಲ್ಲ ಎಂದರು.ಇದೇ ಸಂದರ್ಭದಲ್ಲಿ ಶಿವಬಸವ ದೇವರ ಉಪಸ್ಥಿತಿಯಲ್ಲಿ ಸಂಸ್ಥೆಯ ಧ್ಯೇಯಗೀತೆಯನ್ನು ಬಿಡುಗಡೆ ಮಾಡಲಾಯಿತು.ಗ್ರಾಮದ ಪಿಕೆಪಿಎಸ್ ಅಧ್ಯಕ್ಷ ರಾಜುಗೌಡ ನಾಡಗೌಡ್ರ, ಆರ್.ಎಸ್.ಪಾಟೀಲ, ಸೋಮನಗೌಡ ತಳೇವಾಡ, ಅರವಿಂದ ನಾಗರಾಳ, ಮಾಂತಯ್ಯ ಹಂಚಿನಾಳಮಠ, ಬಸನಗೌಡ ಮೂಲಿಮನಿ, ನೀಲಮ್ಮ…
ದೇವರಹಿಪ್ಪರಗಿ ರೈತ ಸಂಪರ್ಕ ಕೇಂದ್ರ | ಕೃಷಿ ಇಲಾಖೆಯಿಂದ ಚಾಲನೆ ದೇವರಹಿಪ್ಪರಗಿ: ರೈತರು ನೆಟೆರೋಗ ನಿರೋಧಕ ಹಾಗೂ ಅಧಿಕ ಇಳುವರಿ ತಳಿಗಳನ್ನು ಬಿತ್ತನೆ ಮಾಡಬೇಕು ಎಂದು ಕೃಷಿ ಅಧಿಕಾರಿ ಸೋಮನಗೌಡ ಬಿರಾದಾರ ಹೇಳಿದರು.ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಇತ್ತೀಚಿಗೆ ಕೃಷಿ ಇಲಾಖೆಯಿಂದ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆಗೆ ಚಾಲನೆ ನೀಡಿ ಮಾತನಾಡಿದರು.ರೈತ ಸಂಪರ್ಕ ಕೇಂದ್ರದಲ್ಲಿ ಈಗಾಗಲೇ ೮೨ ಕ್ವಿಂಟಲ್ ತೊಗರಿ, ೩ ಕ್ವಿಂಟಲ್ ಹೆಸರು, ೨೦ ಕ್ವಿಂಟಲ್ ಮೆಕ್ಕೆಜೋಳ, ೩ ಕ್ವಿಂಟಲ್ ಸಜ್ಜೆ, ೨ ಕ್ವಿಂಟಲ್ ಸೂರ್ಯಕಾಂತಿಯನ್ನು ದಾಸ್ತಾನಿಕರಿಸಲಾಗಿದೆ. ಮುಖ್ಯವಾಗಿ ತೊಗರಿಯಲ್ಲಿ ನೀರಾವರಿ ಹಾಗೂ ಹೆಚ್ಚು ತೇವಾಂಶ ಹಿಡಿದಿಟ್ಟುಕೊಳ್ಳುವ ಜಮೀನುಗಳಿಗೆ ಹೊಸದಾಗಿ ಅಭಿವೃದ್ಧಿ ಪಡಿಸಿದ ನೆಟೆ ರೋಗ ನಿರೋಧಕ ತಳಿಗಳಾದ ಜಿಆರ್ಜಿ-೧೫೨, ಜಿಆರ್ಜಿ-೮೧೧ ಗಳನ್ನು ರೈತರು ಬಳಸಬೇಕು ಮತ್ತು ಬಿತ್ತನೆ ಬೀಜಗಳನ್ನು ಪಡೆಯಲು ಕಡ್ಡಾಯವಾಗಿ ಎಫ್ಐಡಿ ಮತ್ತು ಜಾತಿಪ್ರಮಾಣ ಪತ್ರ ದಾಖಲಾತಿಗಳನ್ನು ಸಲ್ಲಿಸಿ ಸಹಾಯಧನದಲ್ಲಿ ಪ್ರಮಾಣಿಕೃತ ಬಿತ್ತನೆ ಬೀಜಗಳನ್ನು ಪಡೆಯಬೇಕು ಎಂದು ತಿಳಿಸಿದರು.ಕೃಷಿ ಅಧಿಕಾರಿ ಎಚ್.ಕೆ.ಪಾಟೀಲ ಮಾತನಾಡಿ, ಸರ್ಕಾರದ ಆದೇಶದಂತೆ…
ವಿಜಯಪುರ: ಆರೋಗ್ಯ ಇಲಾಖೆ ಹಾಗೂ ಸರಕಾರಿ ನರ್ಸಿಂಗ್ ಮಹಾವಿದ್ಯಾಲಯ, ಸರಕಾರಿ ನರ್ಸಿಂಗ್ ಶಾಲೆ ವಿಜಯಪುರ ಸಹಯೋಗದಲ್ಲಿ ಜೂ.೫ ರಂದು ವಿಜಯಪುರದ ಪ್ಯಾರಾಮೆಡಿಕಲ್ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು.ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶ್ರೀ ಸಿದೇಶ್ವರ ಸ್ವಾಮಿಗಳ ವನದಲ್ಲಿರುವ ೬೦೦ ಮತ್ತು ಬೃಂದಾವನದಲ್ಲಿರುವ ೭೦೦ ಸಸಿಗಳಿಗೆ ನೀರುಣಿಸುವ ಮೂಲಕ ಪರಿಸರ ಪ್ರಜ್ಞೆ ಮೆರೆಯಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ|| ಶಿವಾನಂದ ಮಾಸ್ತಿಹೋಳಿ, ಸ್ಥಳೀಯ ವೈದ್ಯಾಧಿಕಾರಿಗಳಾದ ಡಾ|| ಚಂದು ರಾಠೋಡ ಮತ್ತು ಡಾ|| ಎ. ಜಿ. ಬಿರಾದಾರ, ನರ್ಸಿಂಗ ಗ್ರೇಡ ೧ ರಾದ ಶ್ರೀಮತಿ ಸುಜಾತಾ ಭಜಂತ್ರಿ, ನರ್ಸಿಂಗ ಸೂಪರವೈಜರಾದ ಶ್ರೀಮತಿ ವಿಣಾ ಕುಲಕರ್ಣಿ, ಶ್ರೀಮತಿ ಭಾರತಿ ಸೂರಗಾವಿ ನರ್ಸಿಂಗ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಮತಿ ಗೀತಾ ತರವಿ, ನರ್ಸಿಂಗ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಭಾರತಿ ಮೋಕಾಶಿ, ಎಲ್ಲ ಭೋದಕರು ಮತ್ತು ವಿದ್ಯಾರ್ಥಿಗಳು ಉಪಸ್ತಿತರಿದ್ದರು.
ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ | ಪ್ಯಾನ್ ಇಂಡಿಯಾ ರಕ್ಷಣೆ & ಪುನರ್ವಸತಿ ಅಭಿಯಾನ ವಿಜಯಪುರ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಒಂದು ತಿಂಗಳ ಪ್ಯಾನ್ ಇಂಡಿಯಾ ರಕ್ಷಣೆ ಮತ್ತು ಪುರ್ನವಸತಿ ಅಭಿಯಾನ ಹಮ್ಮಿಕೊಂಡಿದ್ದು, ಅಭಿಯಾನದ ಅಂಗವಾಗಿ ಜೂ.೫ ರಂದು ತಿಕೋಟಾದಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಹಾಗೂ ವಿವಿಧ ಇಲಾಖೆಗಳ ಜಂಟಿ ಸಹಯೋಗದಲ್ಲಿ ವಿವಿಧ ಅಂಗಡಿ ಹಾಗೂ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ಕರಪತ್ರ ಹಾಗೂ ಸ್ಟೀಕರ್ ಅಂಟಿಸುವ ಮೂಲಕ ಜಾಗೃತಿ ಮೂಡಿಸಲಾಯಿತು.ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಕೈಗೊಂಡ ಅಭಿಯಾನದ ಸಂದರ್ಭದಲ್ಲಿ ಯಾವುದೇ ಬಾಲ ಮತ್ತು ಕಿಶೋರ ಕಾರ್ಮಿಕರು ಪತ್ತೆಯಾಗಿರುವುದಿಲ್ಲ. ಈ ಅಭಿಯಾನದಲ್ಲಿ ಕಾರ್ಮಿಕ ನಿರೀಕ್ಷಕರಾದ ಶ್ರೀಮತಿ ಜಗದೇವಿ ಸಜ್ಜನ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕ ಕುಮಾರಿ ನೀಲಮ್ಮಾ ಎಚ್. ಖೇಡಗಿ, ಶಿರಸ್ತೆದಾರ ಆರ್.ಎಚ್.ಸುಣಗಾರ, ದೈಹಿಕ ಶಿಕ್ಷಣ ಪರಿವೀಕ್ಷಕ ಸಿ.ಎಂ.ಕೋರೆ, ಸಹಾಯಕ ಶಿಶು ಅಭಿವೃದ್ದಿ ಯೋಜನಾಧಿಕಾರಿ ವ್ಹಿ.ಕೆ.ಹೊಸಮನಿ, ಸಮಾಜ ಕಲ್ಯಾಣ ಇಲಾಖೆಯ…
ವಿಜಯಪುರ: ಜಿಲ್ಲೆಯ ತಾಳಿಕೋಟಿ ತಾಲೂಕಿನ ವನಹಳ್ಳಿ ಗ್ರಾಮದಲ್ಲಿ ಹೊಸದಾಗಿ ಹೊಸದಾಗಿ ನಿರ್ಮಿಸಲಾಗುತ್ತಿರುವ ೧೧೦/೧೧ ಕೆ.ವಿ ವಿದ್ಯುತ್ವಿತರಣಾ ಕೇಂದ್ರಕ್ಕೆ ತಂತಿ ಜೋಡಣೆ ಕಾಮಗಾರಿಯ ದಿನಾಂಕ: ೦೮.೦೬.೨೦೨೪ರಂದು ಬೆಳಿಗ್ಗೆ ೧೦.೦೦ ಗಂಟೆಯಿಂದ ಸಾಯಂಕಾಲ ೫.೦೦ ಗಂಟೆವರೆಗೆ ಕೈಗೊಳ್ಳುವುದರಿಂದ ಸದರಿ ದಿನದಂದು ೧೧೦ ಕೆ.ವಿ ಉಪಕೇಂದ್ರ ತಾಳಿಕೋಟಿ ಉಪಕೇಂದ್ರದಿಂದ ಹೊರಹೋಗುವ ಎಲ್ಲಾ ೧೧ಕೆ.ವಿ ನಿರಂತರ ಜ್ಯೋತಿ ಮಾರ್ಗಗಳು, ನೀರು ಸರಬರಾಜು ಮಾರ್ಗಗಳು, ಕೃಷಿ ನೀರಾವರಿ ಮಾರ್ಗಗಳು ಹಾಗೂ ಗ್ರಾಮಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಗ್ರಾಹಕರು ಸಹಕರಿಸುವಂತೆ ಬಸವನಬಾಗೇವಾಡಿ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.
ವಿಜಯಪುರ: ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಮುಳವಾಡ ಮಧ್ಯಂತರ ಪಂಪಿನ ಮನೆಯಿಂದ ಜಲನಗರ ಪಂಪಿನ ಮನೆಯವರೆಗೆ ಅಳವಡಿಸಿರುವ ಮುಖ್ಯ ಏರು ಕೊಳವೆ ಮಾರ್ಗವು ಬರ್ಸ್ಟ ಆಗಿದ್ದು, ಜಲಮಂಡಳಿಯಿಂದ ತುರ್ತು ದುರಸ್ತಿ ಕಾಮಗಾರಿ ಕೈಗೊಳ್ಳಲಾಗುತ್ತಿರುವುದರಿಂದ ಜೂ.೬ ಮತ್ತು ೭ ರಂದು ಎರಡು ದಿವಸಗಳು ವಿಜಯಪುರ ನಗರಕ್ಕೆ ಕೊಲ್ಹಾರ ಶುದ್ಧ ಕುಡಿಯುವ ನೀರಿನ ಘಟಕದಿಂದ ನೀರು ಸರಬರಾಜುವ ಪ್ರದೇಶಗಳಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಜಲಮಂಡಳಿಯೊಂದಿಗೆ ಸಹಕರಿಸುವಂತೆ ಜಲಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜಿಲ್ಲೆಯ ರೈತ-ರೈತ ಮಹಿಳೆಯರಿಗೆ ಜೂ.೧೧ ರಂದು ವಿಜಯಪುರದ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ವಿವಿಧ ಬೆಳೆಗಳಲ್ಲಿ ಬೀಜೋಪಚಾರ ಮಹತ್ವ ಹಾಗೂ ವಿಧಾನಗಳ ಕುರಿತು ಉಚಿತ ತರಬೇತಿ ಆಯೋಜಿಸಲಾಗಿದೆ.ಆಸಕ್ತ ರೈತರು ತರಬೇತಿಯಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ ಕೃಷಿ ನಿರ್ದೇಶಕರು ಕೋರಿದ್ದಾರೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಹಾಗೂ ನೊಂದಣಿಗಾಗಿ ಕೃಷಿ ಅಧಿಕಾರಿ ಶ್ರೀಮತಿ ಫಾತಿಮಾ ಬಾನು ಸುತಾರ್ ಮೊ: ೯೮೮೬೧೩೪೩೧೦ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ವಿಜಯಪುರ: ಕೆಪಿಟಿಸಿಎಲ್ ವತಿಯಿಂದ ೧೧೦ಕೆವ್ಹಿ ಬೇಗಳ ಮೊದಲನೇ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಜೂ.೭ರಂದು ಕೈಗೊಳ್ಳುವುದರಿಂದ ಅಂದು ೧೧೦/೧೧ ಕೆವ್ಹಿ ವಿವಿ ಕೇಂದ್ರ ತೊರವಿದಿಂದ ಹೊರಹೋಗುವ ಎಲ್ಲ ೧೧ ಕೆವ್ಹಿ ವಿದ್ಯುತ್ ಮಾರ್ಗಗಳಿಗೆ ಹಾಗೂ ೧೧೦/೧೧ ಕೆವ್ಹಿ ಟಕ್ಕಳಕಿ-ಕನಮಡಿ ಮಾರ್ಗದ ವಿದ್ಯುತ್ ವಾಹಕ ಎಳೆಯುವ ಕಾಮಗಾರಿ ಕೈಗೊಳ್ಳುವುದರಿಂದ ಬೆಳಿಗ್ಗೆ ೧೦ ರಿಂದ ೪ ಗಂಟೆಯವರೆಗೆ ೧೧೦/೧೧ ಕೆವ್ಹಿ ಟಕ್ಕಳಕಿ ಉಪ ಕೇಂದ್ರದಿಂದ ಹೊರಹೋಗುವ ಎಲ್ಲ ೧೧ ಕೆವ್ಹಿ ವಿದ್ಯುತ್ ಮಾರ್ಗಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ವಿಜಯಪುರ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
ವಿಜಯಪುರ: ಪ್ರಜಾಪ್ರಭುತ್ವದಲ್ಲಿ ಜನರ ತೀರ್ಮಾನವೇ ಅಂತಿಮವಾಗಿದ್ದು ಅದನ್ನು ಎಲ್ಲರೂ ಗೌರವಿಸಲೇಬೇಕು. ಕಳೆದ ಲೋಕಸಭಾ ಚುನಾವಣೆಗೆ ಹೋಲಿಸಿದರೆ, ಈ ಬಾರಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅತ್ಯುತ್ತಮ ಸಾಧನೆ ತೋರಿದೆಯಾದರೂ ನಿರೀಕ್ಷಿತ ಫಲಿತಾಂಶ ಬಾರದಿರುವುದಕ್ಕೆ ಬೇಸರವಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ ಹೇಳಿದ್ದಾರೆ.ಈ ಕುರಿತು ಪತ್ರಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜು ಆಲಗೂರವರ ಸೋಲನ್ನು ನಿರೀಕ್ಷಿಸಿರಲಿಲ್ಲ. ಆದರೆ ಅವರಿಗೆ ಗಣನೀಯ ಪ್ರಮಾಣದಲ್ಲಿ ಮತದಾನ ಮಾಡಿದ, ಮತದಾರರಿಗೆ ಪಕ್ಷದ ಪರವಾಗಿ ನಾನು ತುಂಬು ಹೃದಯದ ಕೃತಜ್ಞತೆಗಳನ್ನು ಸಮರ್ಪಿಸುತ್ತೇನೆ. ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಸೋತಿರಬಹುದು, ಆದರೆ ಅವರು ಸದಾ ಜನರೊಂದಿಗೆ ಬೆಳೆದು ಬಂದವರು, ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಮ್ ಬಿ ಪಾಟೀಲರ ಹಾಗೂ ಜಿಲ್ಲೆಯ ಶಾಸಕರು ಪಕ್ಷದ ಮುಖಂಡರ ಜೊತೆಗೂಡಿ ಮತ್ತೆ ಜನರ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತೇವೆ. ಇಂಡಿಯಾ ಮೈತ್ರಿಕೂಟ ದೇಶದಲ್ಲಿ ಗಣನೀಯ ಪ್ರಮಾಣದಲ್ಲಿ ಚೇತರಿಸಿಕೊಂಡಿರುವುದು ಭಾರತದ ಜನತೆ ಬದಲಾವಣೆಯನ್ನು ಬಯಸುತ್ತಿದ್ದಾರೆ ಎನ್ನುವುದರ ಪ್ರಬಲ ಮುನ್ಸೂಚನೆಯಾಗಿದೆ. ಹಾಗಾಗಿ ನಮ್ಮ ಕಾರ್ಯಕರ್ತರು ಧೃತಿಗೆಡುವ ಅಗತ್ಯವಿಲ್ಲ.…
ವಿಜಯಪುರ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನನ್ನ ಗಿಡ ನನ್ನ ಭೂಮಿ ತಂಡ ಹಾಗೂ ವಿವಿಧ ಪರಿಸರ ಸಂಘಟನೆಗಳ ಸಹಯೋಗದೊಂದಿಗೆ ಜ್ಞಾನ ಯೋಗಾಶ್ರಮದ ಮಾರ್ಗದರ್ಶನದಲ್ಲಿ ಈ ನಾಡಿನ ಶ್ರೇಷ್ಠ ಸಂತ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ನಡೆದಾಡಿದ ಸ್ಥಳವಾದ ಬರಟಗೇರಿ ರಸ್ತೆಯ ಪೂನಮ್ ನಗರದಲ್ಲಿ ಏಕಕಾಲಕ್ಕೆ 200 ಕ್ಕೂ ಹೆಚ್ಚು ಗಿಡಗಳನ್ನುಹಚ್ಚುವುದರ ಮೂಲಕ ಪರಿಸರ ಜಾಗೃತಿ ಮೂಡಿಸಲಾಯಿತು.ಜ್ಞಾನ ಯೋಗ ಆಶ್ರಮದ ಪೂಜ್ಯಶ್ರೀ ಬಸವಲಿಂಗ ಸ್ವಾಮಿಗಳು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಪರಿಸರ ಉಳಿದರೆ ಮಾತ್ರ ಮನುಕುಲದ ಉಳಿವು, ಅದಕ್ಕಾಗಿ ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿದರು, ದಿವ್ಯ ಸಾನಿಧ್ಯವನ್ನು ವಹಿಸಿದ ಈಶಪ್ರಸಾದ ಮಹಾಸ್ವಾಮಿಗಳು ಗುರುದೇವಶ್ರಮ ಅಥರ್ಗಾ ಅವರು ಮಾತನಾಡಿ, ಜಾಗತಿಕ ತಾಪಮಾನವನ್ನು ಪ್ರಕೃತಿ ನಮಗೆ ಕೊಡುವ ಎಚ್ಚರಿಕೆಯ ಗಂಟೆಯನ್ನಾಗಿ ತಿಳಿದುಕೊಂಡು ಗಿಡಗಳನ್ನು ನೆಟ್ಟು ಬೆಳೆಸುವುದೊಂದೇ ಅದಕ್ಕಿರುವ ಪರಿಹಾರ, ಈ ಪವಿತ್ರ ಕಾರ್ಯವನ್ನು ಮಾಡುತ್ತಿರುವ ನನ್ನ ಗಿಡ ನನ್ನ ಭೂಮಿ ತಂಡದ ಕೆಲಸವನ್ನು ಶ್ಲಾಘಿಸಿದರುಪ್ರಸ್ತಾವಿಕವಾಗಿ ನನ್ನ ಗಿಡ ನನ್ನ ಭೂಮಿ ತಂಡದ ಸಂಚಾಲಕ ಬಸವರಾಜ…
