Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನವೆಂಬರ್ ೨೬ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.ಅಂದು ಬೆಳಿಗ್ಗೆ ೯ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಸಂವಿಧಾನ ದಿನಾಚರಣೆ ಅಂಗವಾಗಿ ಏರ್ಪಡಿಸಿರುವ ಜಾಥಾ ಚಾಲನೆ ನೀಡಲಾಗುವುದು.ಜಾಥಾವು ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಅಂಬೇಡ್ಕರ ವೃತ್ತ, ಕನಕದಾಸ ವೃತ್ತದಿಂದ ಸಾಗಿ,ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ನಡೆಯಲಿದೆ.ವೇದಿಕೆ ಕಾರ್ಯಕ್ರಮ ಬೆಳಿಗ್ಗೆ ೧೦ ಗಂಟೆಗೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆಯಲಿದೆಈ ಕಾರ್ಯಕ್ರಮದಲ್ಲಿ ಜಿಲ್ಲಾ ಮತ್ತು ತಾಲೂಕಾ ಮಟ್ಟದ ಅಧಿಕಾರಿ, ಸಿಬ್ಬಂದಿ, ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೫-೨೬ನೇ ಸಾಲಿನ ಸರ್ಕಾರಿ ನರ್ಸಿಂಗ್ ಕಾಲೇಜುಗಳಲ್ಲಿ ಬಿಎಸ್ಸಿ ನರ್ಸಿಂಗ್ ಕೋರ್ಸ್ನ ಖಾಲಿ ಉಳಿದಿರುವ ಸೀಟುಗಳಿಗೆ ಸಮಿತಿ ಮೂಲಕ ಮೇರಿಟ್ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವಂತೆ ನಿರ್ದೇಶನದ ಹಿನ್ನಲೆಯಲ್ಲಿ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ನವೆಂಬರ್ ೨೮ರ ಬೆಳಿಗ್ಗೆ ೯ ರಿಂದ ಸಂಜೆ ೫ರವರೆಗೆ ಪ್ರಕ್ರಿಯೆ ನಡೆಯಲಿದ್ದು, ಆಸಕ್ತರು ಭಾಗವಹಿಸಬಹುದಾಗಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದಲ್ಲಿ ಮಂಗಳವಾರ ಶ್ರೀ ವೀರಭದ್ರದೇವರು ಹಾಗೂ ಭದ್ರಕಾಳಿ ಅಮ್ಮನವರ ಬೆಳ್ಳಿ ರಥವನ್ನು ನೂರಾರು ಮಹಿಳೆಯರು ಎಳೆಯುವುದರ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು.ಉತ್ತರ ಕರ್ನಾಟಕದಲ್ಲಿಯೇ ಅತ್ಯಂತ ವಿಶಿಷ್ಟವಾಗಿ ಮಹಿಳೆಯರೆ ರಥವನ್ನು ಎಳೆಯುವುದು ಇಲ್ಲಿನ ವಾಡಿಕೆ.ಸಾರಂಗಮಠದ ಪೂಜ್ಯ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಇಲ್ಲಿನ ವೀರಭದ್ರೇಶ್ವರ ಹಾಗೂ ಭದ್ರಕಾಳಿ ಅಮ್ಮನವರ ಭಕ್ತರ ಇಚ್ಚೇಷ್ಟೇಗಳ ಈಡೇರಿಕೆಗಾಗಿ ಕಳೆದ ಏಳು ವರ್ಷಗಳಿಂದ ಮಹಿಳೆಯರೇ ಈ ರಥವನ್ನು ಎಳೆಯುವ ಸಂಪ್ರದಾಯಕ್ಕೆ ವಿಶೇಷ ಮನ್ನಣೆ ಕೊಟ್ಟಿರುವುದು ಇತಿಹಾಸ. ರಥದ ಬೆಳ್ಳಿ ಪೀಠದಲ್ಲಿ ರಾರಾಜಿಸುತ್ತಿದ್ದ ವೀರಭದ್ರದೇವರು ಮತ್ತು ಭದ್ರಕಾಳಿ ಅಮ್ಮನವರ ಉತ್ಸವ ಮೂರ್ತಿಗಳೊಂದಿಗೆ ಸಾಗಿದ ರಥ ಮತ್ತು ಬೆಳ್ಳಿ ಪಲ್ಲಕ್ಕಿ, ನಗರದ ಸಾರಂಗಮಠದಿಂದ ಆರಂಭಗೊಂಡು, ಸ್ವಾಮಿ ವಿವೇಕಾನಂದ ವೃತ್ತ, ತೋಂಟದ ಡಾ.ಸಿದ್ಧಲಿಂಗ ಮಹಾಸ್ವಾಮಿಗಳ ರಸ್ತೆ ಮಾರ್ಗವಾಗಿ, ಕಾಯಿಪಲ್ಲೆ ಮಾರ್ಕೆಟ್ ಬಳಿ ಇರುವ ಗಚ್ಚಿನಮಠದ ಚೆನ್ನವೀರ ಸ್ವಾಮೀಜಿ ಪ್ರೌಢಶಾಲೆಯ ಅವರಣದಲ್ಲಿರುವ ವೀರಭದ್ರೇಶ್ವರ ಹಾಗೂ ಭದ್ರಕಾಳಿ ಅಮ್ಮನವರ ದೇವಸ್ಥಾನಕ್ಕೆ ತೆರಳಿತು.ನಗರದುದ್ದಕ್ಕೂ ಉಡಪಿಯ ಸ್ಕಂದ ಚೆಂಡೆ ಬಳಗದವರಿಂದ ನಡೆದ ಕುಣಿತ ಜನಮನಸೆಳೆಯಿತು. ಪುರವಂತಿಕೆ, ಜಯ…

Read More

ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ ಹಕ್ಕೊತ್ತಾಯ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸರಕಾರಕ್ಕೆ ವಿಜಯಪುರ ಜಿಲ್ಲೆ ವಿಭಜನೆ ಮಾಡುವ ವಿಚಾರವಿದ್ದರೆ ಸಿಂದಗಿಯನ್ನು ಜಿಲ್ಲೆ ಮಾಡುವ ಗಮನವನ್ನು ಸಿಂದಗಿ ಶಾಸಕ ಅಶೋಕ ಮನಗೂಳಿ ಅವರು ಚಳಿಗಾಲ ಅಧಿವೇಶನದಲ್ಲಿ ಧ್ವನಿ ಎತ್ತಲಿ ಎಂದು ಮಾಜಿ ವಿಪ ಸದಸ್ಯ ಅರುಣ ಶಹಾಪುರ ಹಕ್ಕೊತ್ತಾಯಿಸಿದರು.ಪಟ್ಟಣದ ವಿದ್ಯಾ ನಗರದ ನಿವಾಸದಲ್ಲಿ ಮಾಜಿ ವಿಪ ಸದಸ್ಯ ಅರುಣ ಶಹಾಪುರ ಪತ್ರಿಕಾಗೋಷ್ಠಿ ಹಮ್ಮಿಕೊಂಡು ಮಾತನಾಡಿದ ಅವರು, ಕಳೆದ ಎರಡುವರೆ ವರ್ಷದಲ್ಲಿ ರಾಜ್ಯ ಸರಕಾರ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯಗಳನ್ನು ಎದುರಿಸುವ ಸ್ಥಿತಿ ನಿರ್ಮಾಣವಾಗಿದೆ. ಶಿಕ್ಷಣ ಇಲಾಖೆಯಲ್ಲಿ ೬೦ಸಾವಿರಕ್ಕಿಂತಲೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಅದರ ಪರಿಣಾಮವಾಗಿ ಸರಕಾರಿ ಶಿಕ್ಷಣ ವ್ಯವಸ್ಥೆ ಕುಸಿದಿದೆ. ಸರಕಾರಿ ಶಾಲೆಯಲ್ಲಿಯೇ ಅತೀ ದೊಡ್ಡ ಸಂಖ್ಯೆಯಲ್ಲಿ ಓದುವ ಪಠ್ಯಕ್ರಮವಿದೆ. ಆದರೆ ಇಂದು ಅಗಾಧವಾದ ಕುಸಿತ ಕಂಡಿರುವ ಹಿನ್ನಲೆಯಲ್ಲಿ ಕರ್ನಾಟಕ ಸರಕಾರ ಮ್ಯಾಗನೈಟ್ ಶಾಲೆಗಳು, ಕೆಪಿಎಸ್ ಶಾಲೆಗಳನ್ನಾಗಿ ಮಾಡುವ ಮೂಲಕ ಶಾಲೆಗಳನ್ನು ಮುಚ್ಚುವ ವ್ಯವಸ್ಥೆ ಸರಕಾರ ಮಾಡುತ್ತದೆ…

Read More

ಕೆಪಿಸಿಸಿ ಪ್ರಚಾರ ಸಮಿತಿಯ ತಿಕೋಟಾ ಮತ್ತು ಬಬಲೇಶ್ವರ ತಾಲೂಕು ಘಟಕಗಳ ನೂತನ ಪದಾಧಿಕಾರಿಗಳಿಗೆ ನೇಮಕ ಪತ್ರ ವಿತರಿಸಿದ ಎಂಎಲ್ಸಿ ಸುನೀಲಗೌಡ ಪಾಟೀಲ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸರಕಾರದ ಯೋಜನೆಗಳು ಮತ್ತು ಸಾಧನೆಗಳ ಕುರಿತು ಜನರ ಜಾಗೃತಿ ಮೂಡಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಬೇಕು ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.ಮಂಗಳವಾರ ನಗರದಲ್ಲಿರುವ ಶಾಸಕರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ಬಬಲೇಶ್ವರ ಮತಕ್ಷೇತ್ರದ ತಿಕೋಟಾ ಮತ್ತು ಬಬಲೇಶ್ವರ ತಾಲೂಕು ಘಟಕಗಳ ನೂತನ ಪದಾಧಿಕಾರಿಗಳಿಗೆ ನೇಮಕ ಪತ್ರ ವಿತರಿಸಿ ಅವರು ಮಾತನಾಡಿದರು.ಪ್ರಚಾರ ಸಮಿತಿಯ ಪದಾಧಿಕಾರಿಗಳು ಸಿಎಂ ಸಿದ್ಧರಾಮಯ್ಯ, ಕೆ.ಪಿ.ಸಿ.ಸಿ ಅಧ್ಯಕ್ಷ ಮತ್ತು ಡಿಸಿಎಂ ಡಿ. ಕೆ. ಶಿವಕುಮಾರ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ ಸೊರಕೆ, ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಮಾರ್ಗದರ್ಶನದಲ್ಲಿ ಬೇರು ಮಟ್ಟದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು. ಸರಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಮತ್ತು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವೃಕ್ಷಥಾನ್ ಹೆರಿಟೇಜ್ ರನ್ ಪೂರ್ವಭಾವಿಯಾಗಿ ಡಿಸೆಂಬರ್ 5 ರಂದು ಶುಕ್ರವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮರಗಳಿಗಾಗಿ ವೃಕ್ಷ ಕಿಡ್ಸ್ ರನ್, ವಾಕ್ ಮತ್ತು ಶ್ರವಣದೋಷ ಮಕ್ಕಳಿಗೆ ಸ್ಪರ್ಧೆ ಹಾಗೂ ಮಾಧ್ಯಮ ಮಿತ್ರರಿಗಾಗಿ ಹ್ಯಾಪಿ ರನ್ ಜರುಗಲಿದೆ.ಬೆ. 8 ಗಂಟೆಗೆ ಮರಗಳಿಗಾಗಿ ಮಕ್ಕಳ ಓಟ, ವೃಕ್ಷ ಕಿಡ್ಸ್ ರನ್ ನಡೆಯಲಿದ್ದು, ನರ್ಸರಿ, ಎಲ್.ಕೆ.ಜಿ, ಯುಕೆಜಿ ಮತ್ತು ಒಂದನೇ ತರಗತಿ ಮಕ್ಕಳಿಗೆ 50 ಮೀ. ಓಟ ನಡೆಯಲಿದೆ. ಇದರಲ್ಲಿ ಪ್ರಥಮ ರೂ. 2500, ದ್ವಿತೀಯ ರೂ. 1500, ತೃತೀಯ ರೂ. 1000 ಮತ್ತು ಸಮಾಧಾನ ಬಹುಮಾನ ಇಬ್ಬರಿಗೆ ತಲಾ ರೂ. 500 ನೀಡಲಾಗುವುದು.ಬೆ. 9 ಗಂಟೆಗೆ 2 ಮತ್ತು 3ನೇ ತರಗತಿ ಮಕ್ಕಳಿಗಾಗಿ 200 ಮೀ. ಓಟ ಆಯೋಜಿಸಲಾಗಿದ್ದು, ಈ ವಿಭಾಗದಲ್ಲಿ ಪ್ರಥಮ ರೂ. 5000, ದ್ವಿತೀಯ, ರೂ. 3000, ತೃತೀಯ ರೂ. 2000 ಹಾಗೂ ಎರಡು ಸಮಾಧಾನ ಬಹುಮಾನ ತಲಾ ರೂ.1000 ನೀಡಲಾಗುತ್ತಿದೆ.ಬೆ.10 ಗಂಟೆಗೆ 4 ಮತ್ತು 5ನೇ…

Read More

ಮಕ್ಕಳ ಸಾಹಿತ್ಯ ಸಂಗಮದ ಜಿಲ್ಲಾಧ್ಯಕ್ಷ ಪ್ರೊ. ಎ.ಆರ್.ಹೆಗ್ಗನದೊಡ್ಡಿ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ಆಲಮೇಲ: ಡಿಸೆಂಬರ್ 24 ರಂದು ಆಲಮೇಲದ ವಿಶ್ವೇಶ್ವರ ದೇವಸ್ಥಾನದಲ್ಲಿ ಜರುಗಲಿರುವ ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನದ ಪೂರ್ವ ಭಾವಿ ಸಭೆಯನ್ನು ವಿಶ್ವೇಶ್ವರ ಬಾಲಭಾರತಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು.ಮಕ್ಕಳ ಸಾಹಿತ್ಯ ಸಂಗಮದ ಜಿಲ್ಲಾಧ್ಯಕ್ಷ ಪ್ರೊ. ಎ.ಆರ್.ಹೆಗ್ಗನದೊಡ್ಡಿ ಮಾತನಾಡಿ, ಸಾಂಸ್ಕೃತಿಕ ಹಬ್ಬ ಹರಿದಿನಗಳಿಗೆ ಹೆಸರು ವಾಸಿಯಾಗಿರುವ ಆಲಮೇಲ ಪಟ್ಟಣ. ಈ ಸಮ್ಮೇಳನವು ವಿಶ್ವೇಶ್ವರ ಬಾಲಭಾರತಿ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ಹಾಗೂ ಆಲಮೇಲ ತಾಲ್ಲೂಕು ಮಕ್ಕಳ ಸಾಹಿತ್ಯ ಸಂಗಮದ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ ನಡೆಯಲಿದೆ.ಮಕ್ಕಳ ಸಾಹಿತ್ಯದ ತೊಟ್ಟಿಲು ಎಂದು ಕರೆಯುವ ವಿಜಯಪುರ ಜಿಲ್ಲೆಯಲ್ಲಿ ಯುವ ಮಕ್ಕಳನ್ನು ಸಾಹಿತ್ಯದ ಕಡೆಗೆ ಸೆಳೆಯಲು ಸಮ್ಮೇಳನ ಹಮ್ಮಿಕೊಂಡಿದ್ದು .ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಬಿ.ಆರ್.ನಾಡಗೌಡರ ರವರನ್ನು ಆಯ್ಕೆ ಮಾಡಲಾಗಿದೆ. ಸಮ್ಮೇಳನದಲ್ಲಿ ಸರ್ವಾಧ್ಯಕ್ಷರ ಸಾರೋಟ ಮೆರವಣಿಗೆ , ಉದ್ಘಾಟನಾ ಸಮಾರಂಭ, ವಿಶೇಷವಾಗಿ 3 ಗೋಷ್ಠಿಗಳು ,ಹಿರಿಯರ ಚಿಂತನ ಗೋಷ್ಠಿ, ಚಿಣ್ಣರ ಚಿಂತನ ಗೋಷ್ಠಿ ಹಾಗೂ…

Read More

ಇಂದು (ನವೆಂಬರ್ ೨೬) “ಸಂವಿಧಾನ ದಿನಾಚರಣೆ” ಪ್ರಯುಕ್ತ ಈ ವಿಶೇಷ ಲೇಖನ) ಲೇಖನ- ವೀಣಾ ಹೇಮಂತಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಇಡೀ ಪ್ರಪಂಚದ ದೇಶಗಳಲ್ಲಿ ಇರುವ ಸಂವಿಧಾನಿಕ ಸಿದ್ಧಾಂತಗಳನ್ನು ಸಂಪೂರ್ಣವಾಗಿ ಓದಿ ಅರಗಿಸಿಕೊಂಡುನಮ್ಮ ದೇಶದ ಸಾಮಾಜಿಕ, ಆರ್ಥಿಕ, ಧಾರ್ಮಿಕ, ಔದ್ಯೋಗಿಕ ಬೆಳವಣಿಗೆಗೆ ಅನುವಾಗುವಂತೆ ಭಾರತದ ಸಂವಿಧಾನವನ್ನು ಡಾ. ಬಿ ಆರ್ ಅಂಬೇಡ್ಕರ್ ಅವರ ನೇತೃತ್ವದ ಸಮಿತಿಯು ರಚಿಸಿದ್ದು ಅದರ ಕರಡು ಪ್ರತಿಯನ್ನು 1949 ರ ನವೆಂಬರ್ 26ರಂದು ಅಂಗೀಕರಿಸಲಾಯಿತು. ಈ ದಿನವನ್ನು ನೆನಪಿಸುವ ನಿಟ್ಟಿನಲ್ಲಿ ಕಳೆದ ಕೆಲವು ವರ್ಷಗಳಿಂದ ಸಂವಿಧಾನ ದಿನವನ್ನಾಗಿ ಆಚರಿಸಲಾಗುತ್ತಿದೆ.ಭಾರತದ ಸರ್ವ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ವಿಚಾರ, ಅಭಿವ್ಯಕ್ತಿ ಸ್ವಾತಂತ್ರ್ಯ, ನಂಬಿಕೆ, ಭಕ್ತಿ ಮತ್ತು ಆರಾಧನೆಯಲ್ಲಿ ಸ್ವಾತಂತ್ರ್ಯ, ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆಯನ್ನು ನಮ್ಮ ಸಂವಿಧಾನವು ಖಾತ್ರಿಪಡಿಸುತ್ತದೆ. ರಾಷ್ಟ್ರೀಯ ಸದ್ಭಾವನೆಯನ್ನು, ಭಾವೈಕ್ಯತೆಯನ್ನು ನಮ್ಮ ಸಂವಿಧಾನವು ಉತ್ತೇಜಿಸುತ್ತದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕೂಡ ಸಮಾನ ಬದುಕುವ ಹಕ್ಕುಗಳನ್ನು ನಮ್ಮ ಸಂವಿಧಾನವು ನಮಗೆ ನೀಡಿದೆ.…

Read More

ಎಮ್ಮಿಗನೂರು ಹಂಪಿಸಾವಿರ ಮಠದ ವಾಮದೇವ ಮಹಾಂತ ಸ್ವಾಮೀಜಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಮಾನವೀಯತೆ ಆದರ್ಶ ಮೌಲ್ಯಗಳು ಬೆಳೆದು ಬರಬೇಕು. ಒಡೆದ ಮನಸ್ಸುಗಳನ್ನು ಬೆಸೆಯುವುದೇ ನಿಜವಾದ ಧರ್ಮ ಎಂದು ಎಮ್ಮಿಗನೂರು ಹಂಪಿಸಾವಿರ ಮಠದ ವಾಮದೇವ ಮಹಾಂತ ಸ್ವಾಮೀಜಿ ಹೇಳಿದರು.ಸಿಂದಗಿ ಸಾರಂಗಮಠ ಪೂಜ್ಯ ಶ್ರೀ ಚೆನ್ನವೀರ ಸ್ವಾಮೀಜಿ ಪ್ರತಿಷ್ಠಾನ ಹಾಗೂ ಬೆಂಗಳೂರಿನ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಇವರ ಸಹಯೋಗದೊಂದಿಗೆ ಶ್ರೀ ಸಿದ್ಧಾಂತ ಶಿಖಾಮಣಿ ವೀರಶೈವ ಧರ್ಮಗ್ರಂಥ ಕರ್ತೃಗಳಾದ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸಾಲೋಟಗಿಯ ಶ್ರೀ ಶಿವಯೋಗಿ ಶಿವಾಚಾರ್ಯ ಸ್ಮರಣಾರ್ಥ ಸಿಂದಗಿಯ ಸಾರಂಗಮಠದ ಲಿಂ.ಚನ್ನವೀರ ಮಹಾಸ್ವಾಮಿಗಳ ೧೩೨ನೇ ಜಯಂತ್ಯುತ್ಸವದ ನಿಮಿತ್ತ ಚೆನ್ನವೀರ ಮಹಾಸ್ವಾಮೀಜಿ ಪ್ರತಿಷ್ಠಾನ ಕೊಡಮಾಡುವ ಶಿವಯೋಗಿ ಶಿವಾಚಾರ್ಯ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಸಮಾರಂಭದ ಸಮ್ಮುಖ ವಹಿಸಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆ ವೇದಾಂತಗಳ ತವರುರು. ಸಿಂದಗಿ ಶ್ರೀಮಠವು ಮತಿಗೆ ಗ್ರಂಥ, ಮತಕ್ಕೆ ಮಂತ್ರವನ್ನು ಕೊಟ್ಟಂತ ಮಠವಿದು. ಇಂತಹ ಮಹಾಮಠದಲ್ಲಿ ಶಿವಯೋಗಿ ಶಿವಾಚಾರ್ಯರ ಹೆಸರಿನ ಮೇಲೆ ಪ್ರಶಸ್ತಿ ನೀಡುತ್ತಿರುವುದು ಶ್ಲಾಘನೀಯ.…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸಕಲ ಜೀವರಾಶಿಗಳಲ್ಲಿ ಮಾನವನ ಜೀವನ ಅತ್ಶಂತ ಶ್ರೇಷ್ಠವಾಗಿದ್ದು, ಅದನ್ನು ಅರಿಯದೆ ಅನೇಕರು ತಮ್ಮ ಅಮೂಲ್ಶ ಬದುಕನ್ನು ಗೊತ್ತು ಗುರಿಯಿಲ್ಲದೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಶ್ರೇಷ್ಠ ಜೀವನ ಸಾರ್ಥಕಗೊಳ್ಳಲು ಅಂತರಂಗದ ಆಧ್ಶಾತ್ಮದ ಅರಿವು ಅಗತ್ಶವಾಗಿದೆ ಎಂದು ಯಡ್ರಾಮಿ ತಾಲೂಕಿನ ಸುಕ್ಷೇತ್ರ ಮಾಗಣಗೇರಿ ಬೃಹನ್ಮಠದ ಡಾ.ವಿಶ್ವರಾಧ್ಶ ಶಿವಾಚಾರ್ಯರು ಹೇಳಿದರು.ಸಿಂದಗಿ ತಾಲೂಕಿನ ಹೊನ್ನಳ್ಳಿ ಗ್ರಾಮದ ಗುರು ವೀರಘಂಟೈ ಮಡಿವಾಳೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಹಮ್ಮಿಕೊಂಡ ಆರೂಢ ಕೈಲಾಸ ಸಿದ್ಧಾರೂಢರ ಮಹಾ ಪುರಾಣದ ತೊಟ್ಟಿಲೋತ್ಸವ ಕಾರ್ಯಕ್ರಮದಲ್ಲಿ ಧಿವ್ಯ ಸಾನ್ನಿಧ್ಶ ವಹಿಸಿ ಮಾತನಾಡಿದ ಅವರು, ಮಠ, ಮಂದಿರಗಳು ಸಂಸ್ಕಾರ ಮತ್ತು ಸಂಸ್ಕೃತಿಯ ಪ್ರತೀಕ. ಪ್ರತಿಯೊಬ್ಬರೂ ಜೀವನದಲ್ಲಿ ಭೌತಿಕಕ್ಕಿಂತ ಆಧ್ಶಾತ್ಮದ ಸಂಪತ್ತು ಹೆಚ್ಚಿಸಿಕೊಳ್ಳಬೇಕು. ಧರ್ಮ ಮಾರ್ಗದಲ್ಲಿ ಬದುಕು ಸಾಗಿಸಿದರೆ ಸುಖ ಶಾಂತಿ ದೊರೆಯಲಿದೆ ಎಂದರು.ಈ ವೇಳೆ ಶ್ರೀಮಠದ ಒಡೆಯ ಗುರುಲಿಂಗಯ್ಶ ಗದ್ದಗಿಮಠ ಸ್ವಾಮೀಜಿ, ಗುರುಪಾದಯ್ಶ ಹಿರೇಮಠ ನೇತೃತ್ವ ವಹಿಸಿದ್ದರು. ಶರಣ ಸೋಮನಾಳದ ಕುಮಾರಶ್ರೀ ಪ್ರಶಸ್ತಿ ಪುರಸ್ಕೃತ ಮಹಾದೇವಯ್ಯ ಶಾಸ್ತ್ರೀಜಿ ಹಿರೇಮಠ ಪ್ರವಚನ ನೀಡಿದರು. ಅಯ್ಯಪ್ಪಯ್ಯ ಗದ್ದಗಿಮಠ, ಚನ್ನಾರಡ್ಡಿ…

Read More