Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಬಾದ್ಮಿ ಅಮಾವಾಸ್ಯೆ ನಿಮಿತ್ತ ಗುರುವಾರ ನಾಗಠಾಣದಲ್ಲಿ ಸಡಗರ ಸಂಭ್ರಮದಿಂದ ಚೌಡೇಶ್ವರಿ ದೇವಿಯ ಜಾತ್ರೆ ನೆರವೇರಿತು. ಜಾತ್ರೆಯ ಆರಂಭಕ್ಕೂ ಮುಂಚೆ ಮಹಿಳೆಯರು ಅಂಬಲಿ ಬಿಂದಿಗೆ ಹೊತ್ತು, ಬಾಸಿಂಗ, ಕಳಸದ ಮೆರವಣಿಗೆಯ ಜೊತೆಗೆ ಗುಡಿ ತಲುಪಿ, ಅಂಬಲಿ ಅರ್ಪಿಸಿದರು. ಅಪಾರ ಸಂಖ್ಯೆಯ ಭಕ್ತರು,ವಾದ್ಯ ಮೇಳದೊಂದಿಗೆ ದೇವಿಯ ಮುಖವಾಡ ಹೊತ್ತವರು ಇಡೀ ಗ್ರಾಮದ ಭಕ್ತರ ಮನೆ ಮನೆಗೆ ಭೇಟಿ ನೀಡಿ, ಕಾಯಿ-ಕರ್ಪೂರದೊಂದಿಗೆ ನೈವೇದ್ಯ ಸ್ವೀಕರಿಸಿ, ಉಡಿ ತುಂಬಿಕೊಂಡು ಆಶೀರ್ವದಿಸುವ ದೃಶ್ಯ ವಿಶೇಷವಾಗಿತ್ತು.ಚೌಡೇಶ್ವರಿಯು ಅತ್ಯಂತ ಶಕ್ತಿಶಾಲಿ ದೇವತೆಗಳಲ್ಲಿ ಒಬ್ಬಳಾಗಿದ್ದು, ಈಕೆಯ ಬಳಿ ಏನೇ ಬೇಡಿಕೊಂಡರೂ ಅದು ಈಡೇರುತ್ತದೆ ಎನ್ನುವ ನಂಬಿಕೆ ನಾಗಠಾಣ ಗ್ರಾಮದ ಭಕ್ತರಲ್ಲಿ ಈಗಲೂ ಜನಜನಿತವಾಗಿದೆ.ಕುಂಬಾರ ಮನೆತನದ ಮಹಿಳೆಯರು ಬಜಾರಕ್ಕೆ ಕಿಚಡಿ ತರುವರು.ಅಲ್ಲಿ ಔಡಲ ಕಟ್ಟಿಗೆಯ ಹಂದರದಲ್ಲಿ ಮಜ್ಜಿಗೆ ಕಡಿಯುವಳು. ಅಲ್ಲಿಂದ ನೇರವಾಗಿ ತನ್ನ ಗುಡಿಗೆ ಬಂದು ತಲುಪುವಳು.ಕುಂಬಾರ ಮನೆತನದ ಭೀಮರಾಯ, ಅಮೋಘಸಿದ್ದ, ಪವಾಡೇಶ, ಶಿವಾನಂದ, ಅಮೋಘಸಿದ್ದ, ಮಲ್ಲು, ಶರಣು,ಸೋಮನಿಂಗ, ಶ್ರೀಶೈಲ, ಸಿದ್ದು, ಪುಂಡಲೀಕ, ವಿಠಲ,ಬಾಬು,ಮಹಾಂತೇಶ ನರಸಪ್ಪ, ಹನಮಂತ, ಬಸವರಾಜ, ಪಿಂಟು, ಗಿರಮಲ್ಲ, ಚವಡಪ್ಪ,…
-ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆ, ಪಟ್ರಮೆ ಗ್ರಾಮ ಅಂಚೆ ಬೆಳ್ತಂಗಡಿ ತಾಲೂಕು, ದ.ಕ ಜಿಲ್ಲೆ ಆಗಷ್ಟೇ ಅಗಾಧ ಪರಿಣಾಮವುಂಟು ಮಾಡಿದ್ದ ಮಹಾಭಾರತ ಯುದ್ಧವು ಮುಗಿದಿತ್ತು. ಹದಿನೆಂಟು ದಿನಗಳ ಕಾಲ ನಡೆದ ಈ ಯುದ್ಧದ ಪರಿಣಾಮವು ದ್ರೌಪದಿಯನ್ನು ಆಕೆಯ ಎಂಭತ್ತನೆಯ ವಯಸ್ಸಿನಲ್ಲೂ ಮಾನಸಿಕವಾಗಿ ಮತ್ತು ದೈಹಿಕವಾಗಿ ಜರ್ಜರಿತಗೊಳಿಸತ್ತು. ಊರಿನ ಎಲ್ಲೆಡೆ ವಿಧವೆಯರು, ಕೈ ಕಾಲು ಕಳೆದುಕೊಂಡು ಅಂಗವೈಕಲ್ಯಗೊಂಡ ಪುರುಷರು, ಅನಾಥ ಮಕ್ಕಳು ಓಡಾಡುತ್ತಿದ್ದರು. ನಂದನವನದಂತಿದ್ದ ಹಸ್ತಿನಾಪುರವು ಸಂಪೂರ್ಣ ಸ್ಮಶಾನ ಮೌನಕ್ಕೀಡಾಗಿತ್ತು. ಹಸ್ತಿನಾಪುರದ ರಾಣಿಯಾದ ದ್ರೌಪದಿಯು ಶೂನ್ಯಮನಸ್ಕಳಾಗಿ ಗೋಡೆಯನ್ನು ನೋಡುತ್ತಾ ಕುಳಿತಿದ್ದಳು. ಆಗ ಶ್ರೀಕೃಷ್ಣನು ಅಲ್ಲಿಗೆ ಬಂದಾಗ ದ್ರೌಪದಿಯು ಓಡೋಡಿ ಬಂದು ಕೃಷ್ಣನನ್ನು ತಬ್ಬಿಕೊಂಡು ಅಳತೊಡಗಿದಳು. ಕೃಷ್ಣ ದ್ರೌಪದಿಯ ತಲೆಯನ್ನು ನೇವರಿಸಿ, ಸಮಾಧಾನ ಮಾಡತೊಡಗಿದ. ಆಗ ಕಣ್ಣೀರಿಡುತ್ತಾ ದ್ರೌಪದಿಯು ಕೃಷ್ಣಾ ಏನಿದೆಲ್ಲ? ಹೀಗೆಲ್ಲ ಆಗುತ್ತದೆಯೆಂದು ನಾನಂದುಕೊಂಡೇ ಇರಲಿಲ್ಲ ಎಂದಳು.ಆಗ ಕೃಷ್ಣನು ದ್ರೌಪದೀ, ಕರ್ತವ್ಯ ಮತ್ತು ನಿಯತ್ತು ಎಂಬುವುದು ಅತ್ಯಂತ ಕ್ರೂರಿಗಳು, ಅವುಗಳು ನಾವಂದುಕೊಂಡಂತೆ ಇರುವುದಿಲ್ಲ. ನಾವು ಮಾಡುವ ಪ್ರತಿಯೊಂದು ಕರ್ಮಗಳನ್ನು ಅವುಗಳ ಪರಿಣಾಮಗಳಲ್ಲಿ ಬದಲಾಯಿಸಿಬಿಡುತ್ತವೆ.…
ಮುದ್ದೇಬಿಹಾಳ: ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಜರುಗಿತು.ಮುಖ್ಯೋಪಾದ್ಯಾಯ ರಾಮಚಂದ್ರ ಹೆಗಡೆ, ಸಂಸ್ಥೆಯ ನಿರ್ದೇಶಕಿಯರುಗಳಾದ ಲೀಲಾ ಭಟ್ಟ ಮತ್ತು ಶಾಂತಾ ಭಟ್ಟ, ಆಂಗ್ಲ ಮಾಧ್ಯಮ ಮುಖ್ಯ ಗುರುಮಾತೆ ರಂಜಿತಾ ಹೆಗಡೆ, ಪ್ರಾಥಮಿಕ ಮುಖ್ಯ ಗುರುಮಾತೆ ಸರಸ್ವತಿ ಮಡಿವಾಳರ, ಶಿಕ್ಷಕರಾದ ಬಿ.ಟಿ.ಭಜಂತ್ರಿ, ಬಿ.ಆರ್.ಬೆಳ್ಳಿಕಟ್ಟಿ, ಶಿವಶಂಕರಯ್ಯ ಹಿರೇಮಠ, ಲೋಹಿತ ಜೈನಾಪೂರ ಸೇರಿದಂತೆ ಇತರರು ಹಾಜರಿದ್ದರು.ಪೊಲೀಸ್ ಠಾಣೆಯಲ್ಲಿ ಪರಿಸರ ದಿನಾಚರಣೆಮುದ್ದೇಬಿಹಾಳ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪರಿಸರ ದಿನಾಚರಣೆ ನಿಮಿತ್ಯ ಗಿಡಗಳನ್ನು ನೆಡಲಾಯಿತು.ಪಿಎಸ್ಐ ಸಂಜೀವ ತಿಪರೆಡ್ಡಿ, ಕ್ರೈಂ ಪಿಎಸ್ಐ ಎಸ್.ಆರ್.ನಾಯಕ, ಸಿಬ್ಬಂದಿಗಳಾದ ಆರ್.ಎಸ್.ಪಾಟೀಲ, ಸಲೀಂ ಹತ್ತರಕಿಹಾಳ, ಎಂ.ಎ.ಬೋಳರೆಡ್ಡಿ, ಎಂ.ಬಿ.ಮುಳವಾಡ ಇದ್ದರು.ಬಾಲಾಜಿ ಶುಗರ್ಸ್ ಪ್ರೈ.ಲಿಯಲ್ಲಿ ವಿಶ್ವ ಪರಿಸರ ದಿನಮುದ್ದೇಬಿಹಾಳ: ತಾಲೂಕಿನ ಯರಗಲ್ಲ ಗ್ರಾಮದ ಬಾಲಾಜಿ ಶುಗರ್ಶ ಪ್ರೈ.ಲಿ ಕಂಪನಿಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.ಈ ವೇಳೆ ಅಧ್ಯಕ್ಷ ಎಚ್.ಎಸ್.ಪಾಟೀಲ, ನಿರ್ದೇಶಕರುಗಳಾದ ಎಚ್.ಎಲ್.ಪಾಟೀಲ, ಡಾ.ಅಜೀತ ಕನಕರೆಡ್ಡಿ, ರಾಹುಲ ಪಾಟೀಲ, ಶ್ರೀನಿವಾಸ ಅರಕೇರಿ, ಅಧಿಕ ಪಾಟೀಲ, ಪ್ರಜ್ವಲ ಪಾಟೀಲ ಸಿಬ್ಬಂದಿಗಳಾದ ಎಸ್.ಐನಾಪೂರ, ಬಸವರಾಜ…
ಮುದ್ದೇಬಿಹಾಳ: ಪಟ್ಟಣದ ತಾಲೂಕು ಆಸ್ಪತ್ರೆಯ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಅವರ ಜನ್ಮದಿನಾಚರಣೆಯನ್ನು ಅವರ ಅಭಿಮಾನಿಗಳು ಅರ್ಥಪೂರ್ಣವಾಗಿ ಆಚರಿಸಿದರು.ಈ ವೇಳೆ ಬಳಗದ ಪ್ರಮುಖರಾದ ಅವ್ವಣ್ಣ ಗ್ವಾತಗಿ ಮಾತನಾಡಿ, ಅತ್ಯಂತ ಸರಳ ವ್ಯಕ್ತಿತ್ವ, ಶಾಂತ ಸ್ವಭಾವಕ್ಕೆ ಹೆಸರುವಾಸಿಯಾಗಿರುವ ಪ್ರಭುಗೌಡ ದೇಸಾಯಿ ಅವರು ಸಹಾಯ ಕೇಳಿ ಬಂದವರಿಗೆ ಯಾವತ್ತೂ ಮರಳಿ ಕಳಿಸಿದವರಲ್ಲ. ಕೋವಿಡ್ ಸಂದರ್ಭದಲ್ಲಿ ಮುದ್ದೇಬಿಹಾಳ ಮತಕ್ಷೇತ್ರದ ಎಲ್ಲ ವಾರಿಯರ್ಸಗಳಿಗೆ ಕಿಟ್ ನೀಡುವ ಸಾಮಾಜಿಕ ಕಳಕಳಿ ಮೆರೆದಿದ್ದರು. ಅವರ ಜನ್ಮದಿನದ ನಿಮಿತ್ಯ ನಾವು ಸ್ವಯಂ ಪ್ರೇರಿತರಾಗಿ ವಿಶೇಶ ಪೂಜೆ ಸಲ್ಲಿಸಿ, ಬಡ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಿ ಅವರ ರಾಜಕೀಯ ಭವಿಷ್ಯ ಉಜ್ವಲವಾಗಿರಲೆಂದು ಪ್ರಾರ್ಥಿಸಿದ್ದೇವೆ ಎಂದರು.ಈ ವೇಳೆ ಶಿವು ದಡ್ಡಿ ವಕೀಲರು, ಮಹಾಂತೇಶ ಹಡಪದ, ಪ್ರಕಾಶಗೌಡ ಪಾಟೀಲ, ಭೀಮನಗೌಡ ಟಕ್ಕಳಕಿ, ಶಿವು ಚಿನಿವಾರ, ರಾಹುಲ ಮಡಿವಾಳರ, ಪ್ರಕಾಶ ತೋಳದಿನ್ನಿ ಸೇರಿದಂತೆ ಮತ್ತೀತರರು ಇದ್ದರು.
ಬಸವನಬಾಗೇವಾಡಿ: ಅಗ್ನಿಶಾಮಕ ಠಾಣೆಯ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬುಧವಾರ ಅಗ್ನಿಶಾಮಕ ಠಾಣಾಧಿಕಾರಿ ಸಂಗಮೇಶ ಶಿವಪೂಜಿ ಸಸಿ ನೆಟ್ಟು ನೀರುಣಿಸಿದರು.ಈ ಸಂದರ್ಭದಲ್ಲಿ ಠಾಣೆಯ ಸಿಬ್ಬಂದಿಗಳಾದ ಭೀಮಾಶಂಕರ ಮಾದರ, ಬಸಪ್ಪ ಜಾಲಗೇರಿ, ನಾರಾಯಣ ರಾಠೋಡ, ಸುಭಾಸ ಹಾದಿಮನಿ, ಇಮಾಮಸಾಬ ಕುಷ್ಟಗಿ, ಮುತ್ತಣ್ಣ ಲಮಾಣಿ, ಅಶೋಕ ನಾಯಕ, ಮಹಮ್ಮದ್ ತಾಂಬೋಳಿ ಇದ್ದರು.
ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಹಿರೇಮಠದ ಶತಾಯುಷಿ ಸಂಗನಬಸವ ಶಿವಾಚಾರ್ಯ ಕಲ್ಯಾಣ ಮಂಟಪದ ಆವರಣದಲ್ಲಿ ಬುಧವಾರ ಪರಿಸರ ದಿನಾಚರಣೆಯಂಗವಾಗಿ ಶ್ರೀಮಠದ ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಸಸಿ ನೆಟ್ಟು ನೀರುಣಿಸಿದರು.ನಂತರ ಮಾತನಾಡಿದ ಶ್ರೀಗಳು, ಸಮಾಜದಲ್ಲಿರುವ ಪ್ರತಿಯೊಬ್ಬರೂ ಗಿಡಗಳನ್ನು ಹಚ್ಚುವಂತಹ ಕೆಲಸ ಮಾಡಬೇಕು. ಗಿಡಗಳ ಹಚ್ಚುವುದರಿಂದ ನಮ್ಮ ಸುತ್ತಮುತ್ತಲಿನ ವಾತಾವರಣ ಬಹಳ ಸುಂದರವಾಗಿ ಕಾಣುತ್ತದೆ. ಹೊಲದಲ್ಲಿರುವ ಗಿಡಗಳನ್ನು ಕಡೆದು ಹೊಲ ಉಳಿಮೆ ಮಾಡ್ತಾ ಇದ್ದೀವಿ.ಎಷ್ಟು ಗಿಡಗಳು ಇರುತ್ತವೆ ಅಷ್ಟು ಊರಿಗೆ ಒಳ್ಳೇದು. ಸುಮಾರು 25-30 ವರ್ಷ ಹಿಂದೆ ಪ್ರತಿಯೊಬ್ಬರೂ ಗಿಡಗಳನ್ನು ಬೆಳೆಸುತ್ತಿದ್ದರು. ಈಗ ಯಾರು ಗಿಡಗಳನ್ನು ಬೆಳೆಸುತ್ತಿಲ್ಲ. ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯನ್ನು ನಾವೆಲ್ಲ ಅನುಭವಿದ್ದೇವೆ. ಮನುಷ್ಯ ಉಸಿರಾಡಬೇಕಾದರೆ ಗಾಳಿ ಬೇಕು. ಈ ನಿಟ್ಟಿನಲ್ಲಿ ಮರ-ಗಿಡಗಳನ್ನು ಹೆಚ್ಚು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆ ಮಾಡಬೇಕೆಂದರು.ಹೊಲವನ್ನು ಖರೀದಿ ಮಾಡುವಾಗ ಪ್ರತಿಯೊಬ್ಬರೂ 10 ಗಿಡಗಳನ್ನು ನೀವು ಹಚ್ಚಬೇಕು ಅನ್ನುವಂತಹ ಆದೇಶ ಸರ್ಕಾರ ಮಾಡಿದರೆ ಹೆಚ್ಚು ಮರ-ಗಿಡಗಳು ಬೆಳೆಯುವ ಮೂಲಕ ನಮ್ಮ ನಾಡು ಸಮೃದ್ಧಿಯಾಗುತ್ತದೆ. ನಮ್ಮ ಶ್ರೀಮಠದ ಆವರಣದಲ್ಲಿ…
ಬಸವನಬಾಗೇವಾಡಿ: ಸ್ಕಿಜೋಫ್ರೀನಿಯಾ ಖಾಯಿಲೆಯು ಮಾನಸಿಕ ಖಾಯಿಲೆಯ ಒಂದು ಭಾಗವಾಗಿದೆ. ಇದನ್ನು ಆರಂಭಿಕ ಹಂತದಲ್ಲಿಯೇ ಆಪ್ತ ಸಮಾಲೋಚನೆ ಹಾಗು ಚಿಕಿತ್ಸೆ ಪಡೆದರೆ ಸಂಪೂರ್ಣ ಗುಣಮುಖವಾಗುತ್ತದೆ ಎಂದು ಸ್ತ್ರೀ ರೋಗ ಹಾಗೂ ಪ್ರಸೂತಿ ತಜ್ಞೆ ಡಾ. ಹಜರಾಬೇಗಂ ಇಂಡಿಕರ ಹೇಳಿದರು.ಪಟ್ಟಣದ ತಾಲೂಕಾ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಲಯ ಹಾಗು ತಾಲೂಕು ಆಸ್ಪತ್ರೆ ರ ಸಂಯುಕ್ತ ಆಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ತಾಲೂಕಗ ಮಟ್ಟದ ವಿಶ್ವ ಸ್ಕಿಜೋಫ್ರೀನಿಯಾ ದಿನಾಚರಣೆ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಮ್ಮಷ್ಟಕ್ಕೆ ತಾವೇ ಮಾತನಾಡುವುದು, ನಗುವುದು. ಸಾಮಾಜಿಕ ಜೀವನದಿಂದ ದೂರ ಉಳಿಯುವುದು. ಸ್ನಾನ,ಊಟ ಇತ್ಯಾದಿ ಕೆಲಸಗಳಲ್ಲಿ ನಿರಾಸಕ್ತಿ. ವಿಪರಿತ ಕೋಪ. ದಾರಿಯಲ್ಲಿ ಓಡಾಡುವುದು. ವೈಯಕ್ತಿಕ ಸ್ವಚ್ಛತೆ ಇಲ್ಲದಿರುವುದು. ವಿಚಿತ್ರವಾಗಿ ವರ್ತಿಸುವುದು ಮತ್ತು ಅತಿಯಾದ ಅನುಮಾನ. ಯಾರಿಗೂ ಕೇಳಿಸದ ಶಬ್ದಗಳು ಕೇಳಿಸುವುದು. ಇಂತಹ ಲಕ್ಷಣಗಳು ತಮಗೆ ಪರಿಚಿತರಲ್ಲಿ ಬಂಧುಗಳಲ್ಲಿ ಹಾಗೂ ತಮ್ಮ ಕುಟುಂಬದಲ್ಲಿ ಯಾರಿಗಾದರೂ ಕಂಡು ಬಂದರೆ…
ಬಸವನಬಾಗೇವಾಡಿ: ಪಟ್ಟಣದ ನಂದಿ ಬಡಾವಣೆಯ ಉದ್ಯಾನವನದಲ್ಲಿ ವಿವೇಕ ಬ್ರಿಗೇಡ್ ದಿಂದ ಬುಧವಾರ ಹಮ್ಮಿಕೊಂಡಿದ್ದ ಪರಿಸರ ದಿನಾಚರಣೆಯಲ್ಲಿ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಸಸಿ ನೆಟ್ಟು ನೀರುಣಿಸುವ ಮೂಲಕ ಸಸಿಗಳ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂದಿ ಬಡಾವಣೆ ಉದ್ಯಾವನದ ಆವರಣದಲ್ಲಿ ವಿವೇಕ ಬ್ರಿಗೇಡ್ ದಿಂದ ಸಸಿಗಳನ್ನು ನೆಡಲಾಯಿತು. ಈ ಸಂದರ್ಭದಲ್ಲಿ ಯಲ್ಲಾಲಿಂಗ ಮಠದ ಪೂಜ್ಯರು, ಮುಖಂಡರಾದ ರವಿಗೌಡ ಚಿಕ್ಕೊಂಡ, ವಿನುತ ಕಲ್ಲೂರ, ಮಲ್ಲಿಕಾರ್ಜುನ ಅವಟಿ, ಸಂಗಮೇಶ ಹುಜರತಿ, ಸಚಿನ್ ಕಲ್ಲೂರ, ಶ್ರೀಕಾಂತ್ ಕೊಟ್ರಶೆಟ್ಟಿ, ಕುಮಾರ್ ಕಲ್ಲೂರ, ಪ್ರಭಾಕರ ಖೇಡ, ಸಂಗಮೇಶ ಕುಂಬಾರ, ಶಿವಾನಂದ ತೋಳನೂರ, ಪೃಥ್ವಿರಾಜ ನಾಯ್ಕೋಡಿ, ಕುಶಾಲ ಕೊಟ್ರಶೆಟ್ಟಿ ಇದ್ದರು.
ಬಸವನಬಾಗೇವಾಡಿ: ತಾಲೂಕಿನ ಮುತ್ತಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುತ್ತಗಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನಿರ್ಮಾಣವಾದ ಅಮೃತ ಸರೋವರ ಕಾಮಗಾರಿ ಸ್ಥಳದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬುಧವಾರ ಸಸಿ ನೆಡುವ ಕಾರ್ಯಕ್ರಮಕ್ಕೆ ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ ದೇಸಾಯಿ ಮತ್ತು ಮುತ್ತಗಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೀಲಾ ಪಾಟೀಲ ಅವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ತಾಪಂ ಇಓ ಪ್ರಕಾಶ ದೇಸಾಯಿ ಮಾತನಾಡಿ, ಪರಿಸರ ದಿನಾಚರಣೆಯ ಮಹತ್ವ ಮತ್ತು ಗ್ರಾಮದಲ್ಲಿನ ಜನರು ತಮ್ಮ ಜಮೀನಿನಲ್ಲಿ ಸಸಿ ನೆಡುವದರಿಂದ ಆಗುವ ಪ್ರಯೋಜನಗಳ ಬಗ್ಗೆ ಪರಿಸರ ದಿನಾಚರಣೆಯ ಬಗ್ಗೆ ಸೂಕ್ತವಾದ ಮಾಹಿತಿಯನ್ನು ನೀಡಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಕವಿತಾ ಬಡಿಗೇರ, ಗ್ರಾಮ ಪಂಚಾಯಿತಿ ಸದಸ್ಯರಾದ ಕನಕಪ್ಪ ಬಂಡಿವಡ್ಡರ, ಮಹಿಬೂಬ ಚಪ್ಪರಬಂದ, ಕರಿಯಪ್ಪ ಗುಡಿಮನಿ, ಅರ್ಜುನ ಶಿಲ್ಪಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ. ಎಸ್. ಬಡಿಗೇರ, ಗ್ರಾಮ ಪಂಚಾಯತ ಎಲ್ಲ ಸಿಬ್ಬಂದಿ ವರ್ಗ ಇತರರು ಇದ್ದರು.
ಬಸವನಬಾಗೇವಾಡಿ: ನಮಗೆ ಇರುವುದೊಂದೇ ಭೂಮಿ. ಅದರ ರಕ್ಷಣೆಯು ನಮ್ಮೆಲ್ಲರ ಹೊಣೆಗಾರಿಕೆ ಎಂಬುದು ಸಾರ್ವತ್ರಿಕವಾದ ಆಶಯ ಎಂದು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದರು.ಪಟ್ಟಣದ ಬಸವೇಶ್ವರ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಆವರಣದಲ್ಲಿ ರಾಷ್ಟ್ರೀಯ ಬಸವ ಸೈನ್ಯ ಸಂಘಟನೆಯ ನೇತೃತ್ವದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿಗಳನ್ನು ನೆಟ್ಟು ಮಾತನಾಡಿದ ಅವರು, ಪರಿಸರ ಮಾಲಿನ್ಯ ಜಗತ್ತನ್ನು ಅತ್ಯಂತ ತೀವ್ರವಾಗಿ ಕಾಡುತ್ತಿರುವ ಈ ಸಂದರ್ಭದಲ್ಲಿ ಪ್ರಕೃತಿಯನ್ನು ಉಳಿಸಿಕೊಳ್ಳುವುದೇ ಮಹತ್ವದ ಕರ್ತವ್ಯವಾಗಿದೆ. ಈ ಆಶಯದೊಂದಿಗೆ ಜನಜಾಗೃತಿ ಅಭಿಯಾನಕ್ಕೆ ಪ್ರತಿವರ್ಷ ಜೂನ್ 5ರಂದು ಆಚರಣೆಯಾಗುವ ವಿಶ್ವ ಪರಿಸರ ದಿನವೂ ನಮ್ಮೆಲ್ಲರಿಗೂ ಸ್ಪೂರ್ತಿಯಾಗಿದೆ. ದಿನದಿಂದ ದಿನಕ್ಕೆ ಜಾಗತಿಕ ತಾಪಮಾನ ಹೆಚ್ಚುತ್ತಿರುವ ಸಂದರ್ಭದಲ್ಲಿ. ಗಿಡಮರಗಳನ್ನು ಬೆಳೆಸುವುದರ ಮೂಲಕ ಸುಂದರವಾದ ಪರಿಸರವನ್ನು ಬೆಳೆಸುವುದು ಹಾಗೂ ಉಳಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಪರಿಸರದ ಸಮೃದ್ಧಿ ಆರೋಗ್ಯಕರ ಜೀವನ ಮತ್ತು ಭೂಮಿ ಮೇಲಿನ ಪ್ರತಿಯೊಂದು ಜೀವಿಯ ಜೀವನದ ಅಸ್ತಿತ್ವಕ್ಕೆ ಕಾರಣವಾಗಿದೆ. ಮಾನವ ಸೇರಿದಂತೆ ಇತರೇ ಪ್ರಾಣಿ, ಪಕ್ಷಿಗಳು…
