Author: editor.udayarashmi@gmail.com

ಬಸವನಬಾಗೇವಾಡಿ: ಇಂದು ಮರಗಳ ಸಂಖ್ಯೆ ಕಡಿಮೆಯಾಗಿರುವದರಿಂದ ಉಷ್ಣತೆ ಪ್ರಮಾಣ ಹೆಚ್ಚಳವಾಗಿದೆ. ನಾವು ಪರಿಸರವನ್ನು ರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ. ಸುಂದರ ಪರಿಸರವನ್ನು ಮುಂದಿನ ಪೀಳಿಗೆಗೆ ನೀಡುವದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಸಿವ್ಹಿಲ್ ನ್ಯಾಯಾಧೀಶೆ ತೇಜಶ್ವಿನಿ ಸೊಗಲದ ಹೇಳಿದರು.ತಾಲೂಕಿನ ಇವಣಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಪಂಚಾಯತ, ಸಾಮಾಜಿಕ ಅರಣ್ಯ ಇಲಾಖೆಯ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಮರ-ಗಿಡಗಳನ್ನು ನಾಶ ಮಾಡುತ್ತಿರುವದರಿಂದ ಬಿಸಿಲಿನ ತೀವ್ರತೆ ಹೆಚ್ಚಳವಾಗುತ್ತಿದೆ. ಪ್ರತಿಯೊಬ್ಬರೂ ತಮ್ಮ ಜಮೀನಿನ ಬದುಗಳಲ್ಲಿ ಮರ-ಗಿಡಗಳನ್ನು ಬೆಳೆಸಬೇಕು. ಪ್ರತಿಯೊಬ್ಬರೂ ತಮ್ಮ ತಮ್ಮ ಮನೆಗಳ ಮುಂದೆಯೂ ಮರ-ಗಿಡಗಳನ್ನು ಬೆಳೆಸುವಂತಾಗಬೇಕು. ಮರಗಳನ್ನು ಬೆಳೆಸುವದರಿಂದ ಎಲ್ಲರಿಗೂ ಆಮ್ಲಜನಕ ಸಿಗುವ ಮೂಲಕ ಎಲ್ಲರೂ ಆರೋಗ್ಯವಂತರಾಗಿ ಇರಲು ಸಾಧ್ಯ.ದೇವರ ಸೇವೆಯ ಜೊತೆಗೆ ಸಮಾಜದಲ್ಲಿ ತೊಡಗಿ ಗಿಡಮರಗಳನ್ನು ಬೆಳೆಸಿದಾಗ ದೇವರಿಗೆ ಸಂತೋಷವಾಗುತ್ತದೆ. ಪ್ರತಿಯೊಬ್ಬರೂ ಆರೋಗ್ಯವಂತರಾಗಿ ನೆಮ್ಮದಿ ಜೀವನ ಮಾಡಲು ಸಾಧ್ಯ ಎಂದರು.ನ್ಯಾಯವಾದಿ ಸಂಘದ ಅಧ್ಯಕ್ಷ ಎಚ್.ಎಸ್.ಗುರಡ್ಡಿ ಮಾತನಾಡಿ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ.…

Read More

ಮುದ್ದೇಬಿಹಾಳ: ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಖತರ್‌ನಾಕ್ ಖದೀಮೆಯೊಬ್ಬಳು ದಿನೇ ದಿನೇ ಮನೆಯಲ್ಲಿರುವ ಸಾಮನುಗಳನ್ನು ಕದ್ದ ಘಟನೆ ಪಟ್ಟಣದ ನೇತಾಜಿ ಗಲ್ಲಿಯಲ್ಲಿರುವ ಪರಶುರಾಮ ಗಜಾಕೋಶ ಎಂಬುವವರ ಮನೆಯಲ್ಲಿ ನಡೆದಿದೆ.ಚಿಂದಿ ಆಯುವ ಸೋಗಿನಲ್ಲಿ ಬಂದ ಕಳ್ಳಿ ಸುಮಾರು ವರ್ಷಗಳಿಂದ ಮನೆಯಲ್ಲಿ ವಾಸವಿರದಿದ್ದನ್ನು ಖಚಿತಪಡಿಸಿಕೊಂಡು ಹಿಂದಿನ ಬಾಗಿಲನ್ನು ಮುರಿದು ಮನೆಯಲ್ಲಿರುವ ಬೆಲೆ ಬಾಳುವ ವಸ್ತುಗಳನ್ನು ದಿನೇ ದಿನೇ ಕದ್ದಿದ್ದಾಳೆ. ಇದೇ ಮನೆಯ ಪಕ್ಕದಲ್ಲಿರುವ ಕಲಾಲ ಎನ್ನುವವರಿಗೆ ಸೇರಿದ್ದ ಮನೆಯಲ್ಲಿಯೂ ಕಿಟಕಿಯನ್ನು ಮುರಿದು ಒಳನುಗ್ಗಿ ಹಿತ್ತಾಳೆಯ ಕೊಡ ಮತ್ತು ಟಾಕಿಯನ್ನೂ ಕದ್ದಿದ್ದಾಳೆ. ಬುಧವಾರ ಎಂದಿನಂತೆ ಕದ್ದು ಹಿತ್ತಾಳೆ ಸಮಾನುಗಳು ಸೇರಿದಂತೆ ಬೆಲೆ ಬಾಳುವ ವಸ್ತುಗಳನ್ನು ಚೀಲದಲ್ಲಿ ತುಂಬಿಕೊಂಡು ಹೋಗುತ್ತಿರುವಾಗ ಸಾರ್ವಜನಿಕರ ಕೈಗೆ ಸಿಕ್ಕಿದ್ದು, ಆಕೆಯನ್ನು ಹಿಡಿದು ಥಳಿಸಿ ಸಾಮಾನುಗಳನ್ನು ಕಸಿದುಕೊಂಡಿದ್ದಾರೆ. ಪೊಲೀಸರಿಗೆ ಮಾಹಿತಿ ನೀಡಬೇಕು ಅನ್ನುವಷ್ಟರಲ್ಲಿ ಕುಸುರಿಕೊಂಡು ಓಡಿ ಹೋಗಿದ್ದಾಳೆ. ಆಕೆಯ ಬಳಿ ಇದ್ದ ಮೊಬೈಲ್ ಇಲ್ಲಿನ ನಿವಾಸಿಗಳಿಗೆ ಸಿಕ್ಕಿದ್ದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.ಈ ಬಗ್ಗೆ ಮಾಧ್ಯಮದವರಿಗೆ ಮಾಹಿತಿ ನೀಡಿದ ಇಲ್ಲಿನ ನಿವಾಸಿಗಳಾದ ಪರಶುರಾಮ ನಾಲತವಾಡ,…

Read More

ಆಲಮಟ್ಟಿ ಹಸರೀಕರಣಕ್ಕೆ ಶ್ಲಾಘನೆ | ೧೦ ಸಾವಿರ ಗಿಡಗಳನ್ನು ನೆಡುವ ಯೋಜನೆಗೆ ಚಾಲನೆ ಆಲಮಟ್ಟಿ: ಇಲ್ಲಿಯ ಕೆಬಿಜೆಎನ್ ಎಲ್ ಅರಣ್ಯ ಇಲಾಖೆಯ ವತಿಯಿಂದ ಈ ವರ್ಷ ನಾನಾ ಕಡೆ ಸುಮಾರು ೧೦ ಸಾವಿರ ಗಿಡಗಳನ್ನು ಹಚ್ಚಲು ಉದ್ದೇಶಿಸಲಾಗಿದೆ, ಅದಕ್ಕೆ ಪರಿಸರ ದಿನಾಚರಣೆಯ ದಿನದಂದು ಚಾಲನೆ ನೀಡಲಾಗುತ್ತಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಜಣ್ಣ ನಾಗಶೆಟ್ಟಿ ಹೇಳಿದರು.ಆಲಮಟ್ಟಿಯ ರಾಕ್ ಉದ್ಯಾನದಲ್ಲಿ ಬುಧವಾರ ವಿಶ್ವಪರಿಸರ ದಿನಾಚರಣೆ ಅಂಗವಾಗಿ ಸಸಿಗಳನ್ನು ನೆಟ್ಟು ಅವರು ಮಾತನಾಡಿದರು.ಕೃಷ್ಣಾ ಭಾಗ್ಯ ಜಲ ನಿಗಮ ಬೆಂಗಳೂರಿನ ಹಣಕಾಸು ವಿಭಾಗದ ಜನರಲ್ ಮ್ಯಾನೇಜರ್ ಬಿ. ಲಕ್ಷ್ಮೀಕಾಂತ ಮಾತನಾಡಿ,ಪರಿಸರ ಮಾಲಿನ್ಯ, ಪ್ಲ್ಯಾಸ್ಟಿಕ್ ಮತ್ತೀತರ ಹಾನಿಕಾರಕ ವಸ್ತುಗಳ ಹೆಚ್ಚು ಬಳಕೆಯಿಂದ ಧ್ರುವ ಪ್ರದೇಶದ ಮಂಜುಗಡ್ಡೆ ಕರಗಿ ಸಮುದ್ರದ ಮಟ್ಟ ಏರಿಕೆಯಾಗಿ ಪರಿಸರ ಅಸಮತೋಲನಕ್ಕೆ ಕಾರಣವಾಗುತ್ತಿದೆ. ಕೇವಲ ಸಸಿ ನೆಡುವುದು ಮುಖ್ಯವಲ್ಲ , ಆ ಸಸಿ ಮರವಾಗಲು ಶ್ರಮಿಸಬೇಕು ಎಂದರು.ಕೆಬಿಜೆಎನ್ ಎಲ್ ಹಣಕಾಸು ಸಲಹೆಗಾರ ಆರ್.ಎಸ್. ಪಶುಪತಿ ಮಾತನಾಡಿ, ಆಲಮಟ್ಟಿ ಭಾಗದಲ್ಲಿ ನಡೆದಿರುವ ಸಸಿಗಳ ಬೆಳೆಸುವಿಕೆಯಿಂದ ವಿಜಯಪುರ…

Read More

ಮುದ್ದೇಬಿಹಾಳ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಸಾಮೂಹಿಕ ಜವಾಬ್ದಾರಿ. ಪ್ರತಿಯೊಬ್ಬರೂ ಗಿಡಗಳನ್ನು ನೆಡಲು ಮುಂದಾಗದೇ ಹೋದರೆ ಮುಂದೊಂದು ದಿನ ದೊಡ್ಡ ಸಂಕಷ್ಟವನ್ನು ಎದುರಿಸುವ ಪರಿಸ್ಥಿತಿ ಎದುರಾಗಬಹುದು ಎಂದು ಶಾಸಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ ಅಪ್ಪಾಜಿ ಹೇಳಿದರು.ಪಟ್ಟಣದ ಹುಡ್ಕೋದಲ್ಲಿರುವ ಉದ್ಯಾನವನದಲ್ಲಿ ಹಸಿರು ತೋರಣ ಗೆಳೆಯರ ಬಳಗ, ಪುರಸಭೆ ಮತ್ತು ಅರಣ್ಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಮಾನವ ಅಧುನಿಕ ಯುಗದ ಹಿಂದೆ ಬಿದ್ದು ಪರಿಸರವನ್ನು ಸಂಪೂರ್ಣ ನಾಶ ಮಾಡುತ್ತಿದ್ದಾನೆ. ತನ್ನ ಅನುಕೂಲಕ್ಕಾಗಿ ದೊಡ್ಡ ದೊಡ್ಡ ಮರಗಳನ್ನು ಕಡಿದು ಬಿಸಾಕುತಿದ್ದಾನೆ. ಇದರ ಪರಿಣಾಮಗಳಿಂದಾಗಿ ಮಳೆ ಇಲ್ಲದೆ ಬೆಳೆ ಬಾರದೆ ರೈತರು ಸಂಕಷ್ಟಕ್ಕೆ ಎದುರಾಗುತ್ತಿದ್ದಾರೆ. ಜನ ಜೀವನ ಸುಗಮವಾಗಿ ಸಾಗಬೇಕಾದರೆ ಪರಿಸರದ ಅವಶ್ಯಕತೆ ಸಾಕಷ್ಟಿದೆ ಎಂಬ ಬಗ್ಗೆ ಪ್ರಯೊಬ್ಬರೂ ಅರಿತುಕೊಂಡು ಅಲ್ಲಲ್ಲಿ ಗಿಡಗಳನ್ನು ನೆಡಲು ಮುಂದಾಗಬೇಕು ಎಂದರು.ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಬಿ.ಐ.ಬಿರಾದಾರ ಮಾತನಾಡಿ, ಜೀವ ವೈವಿಧ್ಯತೆ ಇದ್ದರೆ ಮಾತ್ರ ನಾವು ಉಳಿಯುತ್ತೇವೆ. ಹೆಚ್ಚು ಫಸಲು ಪಡೆಯುವ…

Read More

ಸಿಂದಗಿ: ಹಿಂದೂ ಮುಸ್ಲಿಂ ಬಾಂಧವರೆಲ್ಲರೂ ಒಟ್ಟಾಗಿ ಸೇರಿ ಬಕ್ರೀದ್ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಆಚರಿಸಬೇಕು ಎಂದು ಪಿಎಸ್‌ಐ ಭೀಮಪ್ಪ ರಬಕವಿ ಹೇಳಿದರು.ಪಟ್ಟಣದ ಪೊಲೀಸ್ ಠಾಣಾ ಆವರಣದಲ್ಲಿ ಬುಧವಾರ ಸಾಯಂಕಾಲ ಬಕ್ರೀದ್ ಹಬ್ಬದ ಪ್ರಯುಕ್ತವಾಗಿ ಹಮ್ಮಿಕೊಂಡ ಶಾಂತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾನೂನು ಎಲ್ಲರಿಗೂ ಒಂದೆ. ಪ್ರತಿಯೊಬ್ಬರಿಗೂ ಕಾನೂನಿನ ಭಯ ಇರಬೇಕು. ಯಾವುದೇ ಸಮುದಾಯದ ಹಬ್ಬವಿರಲಿ ಎಲ್ಲರೂ ಸಹಬಾಳ್ವೆಯಿಂದ ಆಚರಣೆ ಮಾಡಬೇಕು. ಸಾಮಾಜಿಕ ಜಾಳತಾಣದಲ್ಲಿ ಅಶಾಂತಿ ಸೃಷ್ಠಿಸುವ ಯಾವುದೇ ರೀತಿಯ ಸಂದೇಶಗಳನ್ನು ಪೋಸ್ಟ್ ಮಾಡುವುದು ಇನ್ನೊರ್ವರಿಗೆ ನೋವುಂಟು ಮಾಡುವುದು ಅಪರಾಧವಾಗಿದೆ ಅದರ ಕುರಿತಾಗಿ ಹಿರಿಯರು ಯುವಕರಿಗೆ ತಿಳುವಳಿಕೆ ಹೇಳಬೇಕು. ಓಂದು ವೇಳೆ ಕಾನೂನು ಉಲ್ಲಂಘನೆ ಮಾಡಿದ್ದೆಯಾದರೆ ಅಂತಹವರ ವಿರುದ್ದ ನಿರ್ಧಾಕ್ಷಿಣ್ಯವಾಗಿ ಸೂಕ್ತ ಕ್ರಮಕೈಗೊಳ್ಳಲಾಗುವುದು. ಅಶಾಂತಿ ತರುವವರ ವಿರುದ್ಧ ಪೊಲೀಸರು ನಿಗಾ ವಹಿಸಿದ್ದಾರೆ. ಹಾಗಾಗಿ ಎಲ್ಲರೂ ಪೊಲೀಸ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಅಪರಾಧ ವಿಭಾಗ ಪಿಎಸ್‌ಐ ಅರವಿಂದ್ ಅಂಗಡಿ ಮಾತನಾಡಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸದಾ…

Read More

ಸಿಂದಗಿ: ಅತಿಯಾದ ಅನುಭೋಗ, ಒತ್ತಡ ಮತ್ತು ಜನಸಂಖ್ಯೆ ಬೆಳವಣಿಗೆ ಕಾರಣದಿಂದ ಜೈವಿಕ ಪರಿಸರ ಕುಸಿಯುತ್ತಿದೆ ಎಂದು ಹಾಸ್ಯ ಕಲಾವಿದೆ ಇಂದುಮತಿ ಸಾಲಿಮಠ ಹೇಳಿದರು.ತಾಲೂಕಿನ ಗಣಿಹಾರದ ಸರ್ಕಾರಿ ಶಾಲಾ ಆವರಣದಲ್ಲಿ ಬುಧುವಾರ ಹಮ್ಮಿಕೊಂಡ ವಿಶ್ವ ಪರಿಸರ ದಿನಾಚಾರಣೆಯ ನಿಮಿತ್ಯ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಸಸಿಗೆ ನೀರುಣಿಸಿ ಮಾತನಾಡಿದರು.ಕೈಗಾರಿಕಾ ಪ್ರಕ್ರೀಯೆ ಸೇರಿದಂತೆ ಎಲ್ಲ ರೀತಿಯ ಮಾನವನ ಚಟುವಟಿಕೆಯಿಂದ ಪರಿಸರದ ಸಮತೋಲನ ಹಾಳಾಗುತ್ತಿದೆ. ಇದರಿಂದ ಪರಿಸರ ವಿನಾಶದ ಅಂಚಿಗೆ ಸೇರುತ್ತಿದೆ. ಪ್ರಜ್ಞಾವಂತರಾದ ನಾವೇಲ್ಲ ಪರಿಸರದ ವಿಘಟನೆಗೆ ಕಾರಣವಾಗುವ ಚಟುವಟಿಕೆಗಳ ಮೇಲೆ ನಿಯಂತ್ರಣ ಹೇರಿ ಪರಿಸರದ ಬೆಳವಣಿಗೆಗೆ ನಾವೇಲ್ಲ ಮುಂದಾಗಬೇಕು ಎಂದರು.ಈ ವೇಳೆ ಗುಜರಾತನ ಬರೋಡಾದ ಕೆಪಿಜಿ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕಿ ಭಾರತಿ ಸಾಲಿಮಠ ಮಾತನಾಡಿ, ದಶಕದಿಂದ ಇತ್ತಿಚಿಗೆ ಹುಟ್ಟಿಕೊಂಡಿರುವ ಪರಿಸರ ಸಂರಕ್ಷಣಾ ಸಂಘಟನೆಗಳು ಪರಿಸರದ ಬಗ್ಗೆ ಹೆಚ್ಚು ಜಾಗೃತಿ ಮೂಡಿಸುತ್ತಿವೆ. ಪರಿಸರ ಉಳಿದರೆ ಮಾತ್ರ ಮಾನವನ ಬದುಕು ಹಸನವಾಗುತ್ತದೆ. ಪರಿಸರದ ಬಗ್ಗೆ ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿಯೇ ಜಾಗೃತಿ ಮೂಡಿಸುವ ಕಾರ್ಯವಾಗಬೇಕು ಎಂದರು.ಸಿಂದಗಿ ವಲಯ ಅರಣ್ಯ ವಲಯಾಧಿಕಾರಿ ರಾಜೀವ ಬಿರಾದಾರ…

Read More

ಸಿಂದಗಿಯ ವಿವಿಧೆಡೆ ವಿಶ್ವ ಪರಿಸರ ದಿನಾಚರಣೆ | ವಿದ್ಯಾರ್ಥಿಗಳಿಗೆ ಸಸಿ ವಿತರಣೆ ಸಿಂದಗಿ: ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸಂರಕ್ಷಿಸುವುದು ಎಲ್ಲರ ಕರ್ತವ್ಯವಾಗಿದೆ. ಪರಿಸರ ಉಳಿದರೆ ಮಾತ್ರ ನಮಗೆ ಆರೋಗ್ಯಕರವಾದ ಜೀವನವನ್ನು ನಡೆಸಲು ಸಾಧ್ಯ ಎಂದು ಪ್ರಾಚಾರ್ಯ ಎ.ಆರ್.ಹೆಗ್ಗಣದೊಡ್ಡಿ ಹೇಳಿದರು.ಪಟ್ಟಣದ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಎಚ್.ಜಿ. ಕಲಾ,ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಸ್ಕೌಟ್ಸ್ ಗೈಡ್ಸ್ ಘಟಕಗಳ ಸಹಯೋಗದಲ್ಲಿ ಬುಧವಾರ ವಿಶ್ವ ಪರಿಸರ ದಿನದಂದು ಸಸಿ ನೆಟ್ಟು ಮಾತನಾಡಿದ ಅವರು, ವಿದ್ಯಾರ್ಥಿ ಜೀವನದಿಂದಲೇ ಪರಿಸರ ಸಂರಕ್ಷಣೆ ಬಗ್ಗೆ ಕಾಳಜಿಯನ್ನು ವಹಿಸಬೇಕು. ನಶಿಸಿ ಹೋಗುತ್ತಿರುವ ನಮ್ಮ ಪರಿಸರವನ್ನು ಉಳಿಸಿ ಬೇಳೆಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.ಈ ಸಂಧರ್ಭದಲ್ಲಿ ಎನ್.ಎಸ್.ಎಸ್ ಘಟಕದ ಸಂಯೋಜಕ ಡಾ.ಶಾಂತುಲಾಲ ಚವ್ಹಾಣ ಮಾತನಾಡಿದರು.ಈ ವೇಳೆ ಪ್ರತಿಯೊಬ್ಬ ವಿದ್ಯಾರ್ಥಿಗೂ ಸಸಿಗಳನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಎಸ್.ಬಿ.ಕುಲಕರ್ಣಿ, ಉಪನ್ಯಾಸಕರಾದ ಬಿ.ಎಸ್.ಬಿರಾದಾರ, ಎಸ್.ಎ.ಪಾಟೀಲ, ಆರ್.ಬಿ.ಹೊಸಮನಿ, ಎಮ್.ಎನ್.ಅಜ್ಜಪ್ಪ, ಎಫ್.ಎ.ಹಾಲಪ್ಪನವರ, ಮುಕ್ತಾಯಕ್ಕ ಕತ್ತಿ, ಸಿದ್ದಲಿಂಗ ಕಿಣಗಿ, ಎ.ಬಿ.ಪಾಟೀಲ, ಎಸ್.ಎ.ಬಸರಕೋಡ,…

Read More

ಮುದ್ದೇಬಿಹಾಳದಲ್ಲಿ ಪರಿಸರ ದಿನಾಚರಣೆಗೆ ಗಿಡ ನೆಡುವ ಮೂಲಕ ಚಾಲನೆ ಮುದ್ದೇಬಿಹಾಳ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಪ್ರಾಣಿಗಳೂ ಸೇರಿದಂತೆ ಪ್ರತಿಯೊಂದು ಜೀವ ಸಂಕುಲ ಪರಿಸರದ ಮೇಲೆ ಅವಲಂಬಿತವಾಗಿರುವದರಿಂದ ಪ್ರತಿಯೊಬ್ಬರೂ ಗಿಡಗಳನ್ನು ನೆಡುವ ಮೂಲಕ ಪರಸರವನ್ನು ರಕ್ಷಿಸಬೇಕು ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ರವೀಂದ್ರಕುಮಾರ ಕಟ್ಟಿಮನಿ ಹೇಳಿದರು.ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಅರವಿಂದ ಬಡಾವಣೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಅರಣ್ಯ ಇಲಾಖೆ ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.ಈ ನೆಲ ಮತ್ತು ಜಲ ಕಾಪಾಡುವದು ನಮ್ಮೆಲ್ಲರ ಆದ್ಯ ಕರ್ತವ್ಯ. ಭೂಮಿಗೆ ಬೇಕಾಗುವಷ್ಟು ಗಿಡ ಮರಗಳಿಲ್ಲದೆ ಮಳೆಯ ಅಭಾವ ಉಂಟಾಗಿ ಬರಗಾಲಕ್ಕೆ ಸಿಕ್ಕು ಜನ ಜೀವನ ತತ್ತರಿಸಿ ಹೋಗುತ್ತಿದೆ. ಹಾಗಾಗಿ ಪ್ರತಿಯೊಬ್ಬರು ಸಸಿಗಳನ್ನು ನೆಡುವ ಕಾರ್ಯವನ್ನು ಕಾನೂನು ಬದ್ಧ ಹೊಣೆಗಾರಿಕೆ ಅಂತಾ ಭಾವಿಸಿ ಸಸಿಗಳನ್ನು ನೆಡಲು ಮುಂದಾಗಬೇಕು ಎಂದರು.ಕಿರಿಯ ಶ್ರೇಣಿ ಸಹಾಯಕ…

Read More

ತಿಕೋಟಾ ತಾಲೂಕಿನ ಬಾಬಾನಗರ ಗ್ರಾಮದಲ್ಲಿ ಪರಿಸರ ದಿನ ಆಚರಣೆ ತಿಕೋಟಾ: ತಾಲೂಕಿನ ಬಾಬಾನಗರ ಗ್ರಾಮದ ಶ್ರೀ ಬಸವೇಶ್ವರ ಅಮೃತ ಸರೋವರದ ಆವರಣದಲ್ಲಿ ಹಾಗೂ ಸರಕಾರಿ ಶಾಲೆ ಆವರಣದಲ್ಲಿ ಗ್ರಾಮ ಪಂಚಾಯತಿ ವತಿಯಿಂದ ಆಯೋಜಿಸಿದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕಿ ಶೋಭಕ್ಕ ಶಿಳೀನ ಅವರು ಮಾತನಾಡಿದರು.ನಮ್ಮ ತಿಕೋಟಾ ತಾಲೂಕಿನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಗ್ರಾಮ ಪಂಚಾಯತಿಗಳ ಮೂಲಕ ಒಟ್ಟು ೦೭ ಅಮೃತ ಸರೋವರಗಳನ್ನು ಸರ್ಕಾರದ ನಿಯಮಾನುಸಾರ ನಿರ್ಮಿಸಲಾಗಿದೆ. ಮಳೆಯ ನೀರನ್ನು ತಡೆಹಿಡಿದು ಇಂಗಿಸುವ ಮೂಲಕ ಅಂತರ್ಜಲ್ಲ ಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಈ ಸರೋವರಗಳನ್ನು ನಿರ್ಮಾಣ ಮಾಡಲಾಗಿದೆ ಮುಂದಿನ ದಿನಮಾನದಲ್ಲಿ ಲಭ್ಯ ಅನುದಾನದಲ್ಲಿ ಸರೋವರಗಳ ಸುತ್ತಲೂ ಉದ್ಯಾನವನಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ. ಅದಕ್ಕಾಗಿ ಇಂದು ಪರಿಸರ ದಿನಾಚರಣೆ ಪ್ರಯುಕ್ತ ಎಲ್ಲ ಅಮೃತ ಸರೋವರಗಳ ಆವರಣದಲ್ಲಿ ಸಸಿಗಳನ್ನು ನೇಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರೇಣುಕಾ ಸೋಲಾಪುರ ಅವರು ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವು…

Read More

ಚಡಚಣ: ಸಮೀಪದ ನಿವರಗಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ನಿವರಗಿ, ಇಂಗಳೆ ವಸ್ತಿ ಶಾಲೆ ಮತ್ತು ನಿವರಗಿ ಪರಿಸರ ಪ್ರೇಮಿಗಳಿಂದ ಶಾಲೆಯಲ್ಲಿ ಗಿಡ ನೆಡುವದರ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.ನಿವರಗಿಯ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಶಿವಾನಂದ ಶಿನಖೇಡ ಮಾತನಾಡಿ, ಜಾಗತಿಕ ತಾಪಮಾನ ಏರಿಕೆಯು ಒಂದು ದೊಡ್ಡ ಸವಾಲಾಗಿದ್ದು, ಆರೋಗ್ಯಕರ ಜೀವನ ನಡೆಸಲು ಮತ್ತು ಪ್ರಕೃತಿಯ ರಕ್ಷಣೆ ಮಾಡಲು ಹರಸಾಹಸ ಪಡಬೇಕಾಗಿದೆ. ಇವೆಲ್ಲ ಕಾರಣದಿಂದ ಜನರನ್ನು ಜಾಗೃತಗೊಳಿಸಲು ಜೂನ್ 5 ರಂದು ಗಿಡಗಳನ್ನು ನೆಡಸಿ, ಪರಿಸರ ದಿನವನ್ನಾಗಿ ಆಚರಿಸಲಾಗುತ್ತದೆ ಎಂದರು.ಟಿ.ಎನ್. ತಳವಾರ ಸಿ ಆರ್ ಪಿ ನಿವರಗಿ ಕ್ಲಸ್ಟರ್ ಮಾತನಾಡಿ, ಮರಗಳನ್ನು ಬೆಳೆಸುವಂತೆ ಜನರನ್ನು ಪ್ರೇರೆಪಿಸುವುದು, ಪರಿಸರವನ್ನು ನಾಶ ಮಾಡದಂತೆ ಜನರಲ್ಲಿ ಜಾಗೃತಿ ಮೂಡಿಸುವುದೇ ಪರಿಸರ ದಿನದ ಮುಖ್ಯ ಉದ್ದೇಶವಾಗಿದೆ ಎಂದರು.ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಯಶ್ರೀ ಚಂದ್ರಕಾಂತ ಹೂನ್ನೂರ, ಸದಸ್ಯರಾದ ಲಲೀತಾ ನಿಂಗಪ್ಪಾ ಇಂಗಳೆ, ಉಪಾಧ್ಯಕ್ಷ ತಮ್ಮಾರಾಯ ತೇಲಿ, ಇಂಗಳೆ ವಸ್ತಿ ಮುಖ್ಯ ಗುರು ಕೆ.ಜಿ.ಸಾವಳೆ, ಬಸವರಾಜ ನೀಲವಾಣಿ,…

Read More