Author: editor.udayarashmi@gmail.com

ಇಂಡಿ: ವಿಜಯಪುರ ಲೋಕಸಭಾ ಅಭ್ಯರ್ಥಿ ರಮೇಶ ಚಂ. ಜಿಗಜಿಣಗಿ ಅವರು ಗೆಲುವು ಸಾಧಿಸುತ್ತಿದ್ದಂತೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಮಂಗಳವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.ಬಿಜೆಪಿ ಮುಖಂಡ ಕಾಸುಗೌಡ ಬಿರಾದಾರ, ಸಂಜೀವ ಐಹೊಳೆ, ಅನೀಲ ಜಮಾದಾರ, ಅನೀಲಗೌಡ ಬಿರಾದಾರ, ದೇವೆಂದ್ರ ಕುಂಬಾರ, ಶೀಲವಂತ ಉಮರಾಣಿ ಮಾತನಾಡಿ ಕೇಂದ್ರ ಸರಕಾರದ ಸಾಧನೆಯನ್ನು ಹಾಗೂ ಸಂಸದ ಜಿಗಜಿಣಗಿ ಅವರು ಜಿಲ್ಲೆಗೆ ನೀಡಿದ ಅಭಿವೃಧ್ಧಿ ಯೋಜನೆಯನ್ನು ಗಮನಿಸಿ, ಜೊತೆರಗೆ ಜಿಗಜಿಣಗಿ ಅವರ ಸರಳತೆ ಕಂಡು ಜನತೆ ಬಿಜೆಪಿ ಸರಕಾರದ ಪರವಾಗಿ ಮತ ಚಲಾವಣೆ ಮಾಡಿ ಜಿಗಜಿಣಗಿ ಅವರನ್ನು ಗೆಲ್ಲಿಸಿದ್ದಾರೆ.ಮತದಾರರು ಜಿಗಜಿಣಗಿ ಅವರ ಮೇಲೆ ಇಟ್ಟ ನಂಬಿಕೆಯನ್ನು ಉಳಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಜಿಗಜಿಣಗಿ ಅವರಿಂದ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಮಲ್ಲಿಕಾರ್ಜುನ ಹಾವಿನಾಳಮಠ, ಬಾಳು ಮುಳಜಿ, ರಾಮಸಿಂಗ ಕನ್ನೊಳ್ಳಿ, ಸಂಜೀವ ದಶವಂತ, ಅಶೋಕ ಬಳಬಟ್ಟಿ, ಮಾಧವರಾವ ಪವಾರ, ಹಣಮಂತ್ರಾಯಗೌಡ ಪಾಟೀಲ, ಮಲ್ಲಿಕಾರ್ಜುನ ಕಿವುಡೆ, ಶಾಂತು ಕಂಬಾರ, ಮಹೇಶ ಹೂಗಾರ, ಮಲ್ಲು ವಾಲೀಕಾರ, ಸೋಮು…

Read More

ಬಸವನಬಾಗೇವಾಡಿ: ತಾಲೂಕಿನ ನಾಗೂರ ಗ್ರಾಮದ ಯಮನೂರೇಶ್ವರ ದೇವಸ್ಥಾನದ ಹತ್ತಿರ ಸಂಸದ ರಮೇಶ ಜಿಗಜಿಣಗಿ ಅವರು ಆಯ್ಕೆಯಾಗುವ ಸುದ್ದಿ ತಿಳಿಯುತ್ತಿದ್ದಂತೆ ಮಂಗಳವಾರ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಪಟಾಕ್ಷಿ ಸಿಡಿಸಿ ಸಿಹಿ ಹಂಚಿ ಪರಸ್ಪರ ಗುಲಾಲು ಎರಚಿಕೊಂಡು ವಿಜಯೋತ್ಸವ, ಸಂಭ್ರಮಾಚರಣೆ ಆಚರಿಸಿದರು.ವಿಜಯೋತ್ಸವದಲ್ಲಿ ಮುಖಂಡರಾದ ಬಂದೇನವಾಜ ವಾಲೀಕಾರ, ಬಸಯ್ಯ ಶೀಕಳವಾಡಿ, ಶ್ರೀಶೈಲ ತೆಲಗಿ, ರೇವಣಸಿದ್ದ ನಂದಿಹಾಳ, ಸಂಗಪ್ಪ ಮಾದರ, ಕರಬಸಪ್ಪ ಮಸೂತಿ, ಬಾಬು ಗೌರಾ, ಶರಣಪ್ಪ ನಾಲತವಾಡ, ಮಹಾಂತೇಶ ಆಲಕೊಪ್ಪರ, ಯಮನಪ್ಪ ಕ್ವಾಟಿ, ಮಹೇಶ ಡೋಣೂರ, ಬಾಬು ನಂದಿಹಾಳ, ರಫೀಕ ವಾಲೀಕಾರ, ಬಸಪ್ಪ ಆಲಕೊಪ್ಪರ, ಸಂಗಮೇಶ ಬಿಜ್ಜೂರ ಇತರರು ಭಾಗವಹಿಸಿದ್ದರು.

Read More

ಬಸವನಬಾಗೇವಾಡಿ: ಇಂದಿನ ಆಧುನಿಕ ಯುಗದಲ್ಲಿ ಶುದ್ಧವಾದ ಆಹಾರ ಸೇವನೆ, ಶುದ್ಧ ಜೀವನ ನಡೆಸದೇ ಇರುವದರಿಂದಾಗಿ ಶತಾಯುಷಿಗಳಾಗಿ ಬಾಳುವುದು ಅಪರೂಪವಾಗಿದೆ. ಡೋಣೂರು ಗ್ರಾಮದಲ್ಲಿ ಇಬ್ಬರು ಶುದ್ಧ ಜೀವನ, ಶುದ್ಧ ಆಹಾರ ಸೇವನೆಯಿಂದಾಗಿ ಶತಾಯುಷಿಗಳಿರುವುದು ವಿಶೇಷ. ಇವರನ್ನು ಗುರುತಿಸಿ ಡೋಣೂರ ಕಟ್ಟೀಮನಿ ಹಿರೇಮಠದಿಂದ ಶ್ರೀಗಳು ಸನ್ಮಾನಿಸುತ್ತಿರುವುದು ಯುವಜನಾಂಗಕ್ಕೆ ಉತ್ತಮ ಸಂದೇಶ ನೀಡುತ್ತದೆ ಎಂದು ಬೆಂಗಳೂರಿನ ವಿಭೂತಿಪುರಮಠ ಹಾಗೂ ಮನಗೂಳಿ ಪಟ್ಟೀಕಂಥಿ ಹಿರೇಮಠದ ಡಾ.ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ತಾಲೂಕಿನ ಡೋಣೂರು ಗ್ರಾಮದ ಕಟ್ಟೀಮನಿ ಹಿರೇಮಠದ ಗುರುಮರುಳಸಿದ್ದೇಶ್ವರ ಹಾಗೂ ಚೌಡಮ್ಮದೇವಿ ಜಾತ್ರಾಮಹೋತ್ಸವ ಹಾಗೂ ಹಜರತ್ ಸುಲೇಮಾನ್ ಉರುಸು ಅಂಗವಾಗಿ ಹಮ್ಮಿಕೊಂಡಿರುವ ಕಲಬುರಗಿ ಶರಣಬಸವೇಶ್ವರ ಪುರಾಣ ಕಾರ್ಯಕ್ರಮದಲ್ಲಿ ಸೋಮವಾರ ಸಂಜೆ ಶತಾಯುಷಿಗಳನ್ನು ಶ್ರೀಮಠದಿಂದ ಸನ್ಮಾನಿಸಿ ಮಾತನಾಡಿದ ಅವರು, ಇಂದಿನ ದಿನಗಳಲ್ಲಿ ಆಧುನಿಕತೆಯ ಬದುಕಿಗೆ ಮಾರುಹೋಗಿ ಉಡುಗೆ-ತೊಡುಗೆ ಆಟ-ಪಾಠ, ನಂಬಿಕೆ, ಶ್ರದ್ಧೆ, ಆಚಾರ-ವಿಚಾರ, ಸಂಸ್ಕ್ರತಿ, ಸಂಪ್ರದಾಯಗಳ ಬಹುದೊಡ್ಡ ಬದಲಾವಣೆ ಮತ್ತು ಅಂತರವನ್ನು ಕಾಣಲಾಗುತ್ತಿದೆ. ಜೀವನ ಶ್ರದ್ಧೆ ಶಿಥಿಲಗೊಳ್ಳುತ್ತಿರುವ ಬಗ್ಗೆ ಆತಂಕ ಪಡಿಸುತ್ತಾ ೪೬ ವರ್ಷಗಳಿಂದ ಪುರಾಣ ಪ್ರವಚನ, ಶತಾಯುಷಿಗಳಾಗಿರುವವರ ಸನ್ಮಾನ…

Read More

ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಮತ್ತೆ ಬಿಜೆಪಿ ವಿಜಯ ಪತಾಕೆ ವಿಜಯಪುರ: ತೀವ್ರ ಕುತೂಹಲ ಕೆರಳಿಸಿದ್ದ ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ರಮೇಶ ಜಿಗಜಿಣಗಿ ಭರ್ಜರಿ ಗೆಲುವಿನ ನಗೆ ಬೀರಿದ್ದು, ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಪ್ರೊ.ರಾಜು ಆಲಗೂರ ಅವರನ್ನು ೭೫೭೭೮ ಮತಗಳ ಅಂತರದಿಂದ ಸೋಲಿಸಿ ಮತ್ತೊಮ್ಮೆ ಗೆಲುವಿನ ನಗೆ ಬೀರಿದ್ದಾರೆ.ರಮೇಶ ಜಿಗಜಿಣಗಿ ಅವರಿಗೆ ೬೬೯೦೫೫ ಮತಗಳನ್ನು ಪಡೆದರೆ, ಕಾಂಗ್ರೆಸ್ ಪಕ್ಷದ ಪ್ರೊ.ರಾಜು ಆಲಗೂರ ಅವರಿಗೆ ೫೯೩೨೭೭ ಮತಗಳನ್ನು ಪಡೆದುಕೊಂಡರು. ಕೆಆರ್‌ಎಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದ ಗಣಪತಿ ರಾಠೋಡ ಹಂಜಗಿ ಅವರಿಗೆ ೭೬೫೨, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದಿಂದ ಸ್ಪರ್ಧೆ ಮಾಡಿದ ಜಿತೇಂದ್ರ ಕಾಂಬಳೆ ಅವರಿಗೆ ೧೬೦೫, ಎಸ್‌ಯುಸಿಐ ಪಕ್ಷದಿಂದ ಸ್ಪರ್ಧೆ ಮಾಡಿದ ನಾಗಜ್ಯೋತಿ ಡಿ.ಎಂ. ಅವರಿಗೆ ೨೩೭೫, ರಾಜಕುಮಾರ ಅಪ್ಪಾಸಾಹೇಬ ಹೊನಕಟ್ಟಿ ಅವರಿಗೆ ೧೭೮೪, ರಾಮಜಿ ಯಮನಪ್ಪ ಬುದ್ಧಪ್ರಿಯಾ ಅವರಿಗೆ ೨೪೦೮, ಭೋವಿ ತಾರಾಬಾಯಿ ಅವರಿಗೆ ೪೩೪೨ ಮತಗಳು ಪಡೆದುಕೊಂಡಿದ್ದಾರೆ.ಒಟ್ಟು ೨೨ ಸುತ್ತುಗಳಲ್ಲಿ ಮತ ಎಣಿಕೆ ನಡೆದಿದ್ದು,…

Read More

ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ವಿಜಯಪುರ ಲೋಕಸಭೆ ಮೀಸಲು ಮತಕ್ಷೇತ್ರದಿಂದ ಸಂಸದ ರಮೇಶ ಜಿಗಜಿಣಗಿ ಅವರು ಪುನರಾಯ್ಕೆಯಾಗುತ್ತಿದ್ದಂತೆ ಜೆಡಿಎಸ್ ಪಕ್ಷದಿಂದ ಪಟಾಕ್ಷಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ, ಸಂಭ್ರಮಾಚರಣೆ ಮಾಡಲಾಯಿತು.ಬಸವೇಶ್ವರ ವೃತ್ತದಿಂದ ಬಸ್ ನಿಲ್ದಾಣದವರೆಗೆ ಎತ್ತಿನ ಚಕ್ಕಡಿಯಲ್ಲಿ ಮುಖಂಡರಾದ ಅಪ್ಪುಗೌಡ ಪಾಟೀಲ, ಜಗದೀಶ ಕೊಟ್ರಶೆಟ್ಟಿ , ಬಿ.ಕೆ.ಕಲ್ಲೂರ ಸೇರಿದಂತೆ ಇತರರನ್ನು ನಿಲ್ಲಿಸಿ ಕಾರ್ಯಕರ್ತರು ಜಯಘೋಷ ಹಾಕುತ್ತಾ ಮೆರವಣಿಗೆ ಮೂಲಕ ತೆರಳಿ ಪುನಃ ಬಸವೇಶ್ವರ ವೃತ್ತಕ್ಕೆ ಮೆರವಣಿಗೆ ಬಂದ ನಂತರ ಜರುಗಿದ ವಿಜಯೋತ್ಸವದಲ್ಲಿ ಜೆಡಿಎಸ್ ಮುಖಂಡ ಅಪ್ಪುಗೌಡ ಪಾಟೀಲ ಮನಗೂಳಿ, ಜೆಡಿಎಸ್ ತಾಲೂಕಾಧ್ಯಕ್ಷ ಜಗದೀಶ ಕೊಟ್ರಶೆಟ್ಟಿ ಮಾತನಾಡಿ, ಈ ಸಲ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದೊಂದಿಗೆ ಪಕ್ಷದ ವರಿಷ್ಠರು ಮೈತ್ರಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ನಮ್ಮ ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರು ವಿಜಯಪುರ ಲೋಕಸಭಾ ಮತಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರ ಗೆಲುವಿಗೆ ಬಿಜೆಪಿ ಪಕ್ಷದೊಂದಿಗೆ ನಿರಂತರವಾಗಿ ಶ್ರಮಿಸಿದ್ದಾರೆ. ಬಸವನಬಾಗೇವಾಡಿ ಮತಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಿಂದಾಗಿ ಅವರಿಗೆ ಹೆಚ್ಚಿನ…

Read More

ಮುದ್ದೇಬಿಹಾಳ: ತಾಲೂಕಿನ ಕುಂಚಗನೂರು ಗ್ರಾಮದ ಕೃಷ್ಣಾ ನದಿಯ ದಡದಲ್ಲಿ ಅಪರಿಚಿತ ಯುವತಿಯ ಶವವೊಂದು ಪತ್ತೆಯಾಗಿದೆ. ಕೆಂಪು ಬಣ್ಣದ ಉಡುಪು ಧರಸಿದ ಅಂದಾಜು ೫೮ ವಯಸ್ಕ ಯುವತಿ ಎಲ್ಲಿಂದಲೋ ತೇಲಿ ಬಂದಿರಬಹುದು ಎಂದು ಶಂಕಿಸಲಾಗಿದೆ.ಘಟನಾ ಸ್ಥಳಕ್ಕೆ ಪಿಎಸ್‌ಐ ಸಂಜೀವ ತಿಪರೆಡ್ಡಿ ಭೇಟಿ ನೀಡಿ ಪರಿಶೀಲಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮುದ್ದೇಬಿಹಾಳ: ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ರವಿವಾರ ರಾತ್ರಿ ಅಬ್ಬರದ ಗುಡುಗು ಸಿಡಿಲು ಸೇರಿದಂತೆ ಸುರಿದ ಭಾರೀ ಮಳೆ ಕೆಲ ರೈತರಲ್ಲಿ ಮಂದಹಾಸ ಮೂಡಿಸಿದರೆ ಇನ್ನೂ ಕೆಲವರಿಗೆ ಹಾನಿಯಾಗಿ ಬೇಸರವನ್ನುಂಟು ಮಾಡಿದೆ.ತಾಲೂಕಿನ ಕುಂಟೋಜಿ ಗ್ರಾಮದ ಮಲ್ಲನಗೌಡ ಬಿರದಾರ, ಢವಳಗಿ ಗ್ರಾಮದ ಭೀಮಪ್ಪ ಮಾದರ ಹಾಗೂ ಗುರುಲಿಂಗಪ್ಪ ಮೂಲಿಮನಿ ಮತ್ತು ಚೊಂಡಿ ಗ್ರಾಮದ ಯಂಕವ್ವ ಪಾಟೀಲ ಎಂಬುವವರಿಗೆ ಸೇರಿದ್ದ ಮನೆಗಳು ಕುಸಿದು ಬಿದ್ದು ಭಾಗಶಃ ಹಾನಿಯಾಗಿವೆ.ಅಡವಿ ಹುಳಗಬಾಲ ಗ್ರಾಮದ ಹಳ್ಳ ತುಂಬಿ ಹರಿಯುತ್ತಿದ್ದು ಅಡವಿ ಹುಲಗಬಾಳದಿಂದ ಹುಲಗಬಾಳ ತಾಂಡಾ ಮಧ್ಯೆ ಬರುವ ಸೇತುವೆ ಒಡೆದಿದೆ. ಸಧ್ಯ ತಾಂಡಾಗೆ ತೆರಳಲು ರಸ್ತೆ ಸಂಪರ್ಕ ಕಡಿತಗೊಂಡ ಬಗ್ಗೆ ಮೂಲಗಳಿಂದ ತಿಳಿದು ಬಂದಿದೆ.

Read More

ಸಿಂದಗಿ: ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಸಾಯನಶಾಸ್ತç ವಿಷಯದ ಬೋಧನಾ ಕಾರ್ಯಕ್ಕೆ ಎಂ.ಎಸ್‌ಸಿ, ಬಿ.ಇಡಿ ಪದವಿ ಪೂರ್ಣಗೊಳಿಸಿದ ರಾಸಾಯನಶಾಸ್ತ್ರ ವಿಷಯದ ಅತಿಥಿ ಉಪನ್ಯಾಸಕರ ಅರ್ಜಿ ಅಹ್ವಾನಿಸಲಾಗಿದೆ ಎಂದು ಪ್ರಾಚಾರ್ಯ ಎನ್.ಆರ್.ಗಂಗನಳ್ಳಿ ತಿಳಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ೮೮೬೭೭೦೮೨೬೭/೯೯೦೨೮೧೨೬೩೦/೯೭೩೧೩೨೫೦೦೬ ಗೆ ಸಂಪರ್ಕಿಸಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಸಿಂದಗಿ: ಮಕ್ಕಳ ಕಲಿಕೆಯಲ್ಲಿ ಶಿಕ್ಷಕರ ಪಾತ್ರ ಮುಖ್ಯ. ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಗುರುತಿಸಿ ಅಂತಹ ಮಕ್ಕಳಿಗೆ ಸಮಾಜದಲ್ಲಿ ಶಿಕ್ಷಣವಂತರನ್ನಾಗಿ ಮಾಡುವ ಜವಾಬ್ದಾರಿ ಶಿಕ್ಷಕರದ್ದು ಎಂದು ನಿವೃತ್ತ ಎಎಸ್‌ಐ ಎಂ.ಎಂ ಹಂಗರಗಿ ಹೇಳಿದರು.ಪಟ್ಟಣದ ಸದ್ಗುರು ಪತ್ತಿನ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಸಿಂದಗಿ ಗೆಳೆಯರ ಬಳಗದ ವತಿಯಿಂದ ಹಮ್ಮಿಕೊಂಡ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ಅಂತಹ ಪಾತ್ರ ನಿರ್ವಹಿಸುತ್ತಿರುವ ಈರ್ವರು ಶಿಕ್ಷಕರಿಗೆ ಅಭಿನಂದನೆಗಳು. ಇನ್ನೂ ಎತ್ತರೋತ್ತರವಾಗಿ ಪ್ರಶಸ್ತಿಗೆ ಭಾಜನರಾಗಲಿ ಎಂದು ಶುಭ ಹಾರೈಸಿದರು.ಸನ್ಮಾನ ಸ್ವೀಕರಿಸಿ ಮಾತನಾಡಿದ ನೂತನ ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ ಮಾತನಾಡಿ, ಪರಮಪೂಜ್ಯ ಚೆನ್ನವೀರ ಸ್ವಾಮೀಜಿಯರ ಕೃಪಾಶೀರ್ವಾದೊಂದಿಗೆ ಸಂಸ್ಥೆಯ ಚೇರಮನ್ನರಾದ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಆಶೀರ್ವಾದದೊಂದಿಗೆ ಈ ಹುದ್ದೆ ದೊರೆತಿದೆ. ಗೆಳೆಯರ ಸಹಕಾರದಿಂದ ಕಾಲೇಜಿನ ಸರ್ವಾಂಗೀಣ ಬೆಳವಣಿಗೆ ಮಾಡುವೆ ಎಂದರು.ಬಳಿಕ ಜ್ಯೋತಿ ಬಾಪುಲೆ ಪ್ರಶಸ್ತಿಗೆ ಭಾಜನರಾದ ಬಸವರಾಜ ಕುರನಳ್ಳಿ, ಸಂತೋಷ ಹಿರೇಮಠ ಬಿ.ಎ.ಪಾಟೀಲ ಮಾತನಾಡಿದರು.ಈ ಸಂದರ್ಭದಲ್ಲಿ ಶಿವಕುಮಾರ ಸಬರದ, ಚಂದ್ರಶೇಖರ ನಾಗರಬೆಟ್ಟ, ಬಸವರಾಜ ಜಮಾದಾರ,…

Read More

ವಿಜಯಪುರ: ನಗರದಲ್ಲಿ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಬಾಲ ಕಾರ್ಮಿಕ ಮತ್ತು ಕಿಶೋರ ಕಾಯ್ದೆಯಡಿ ಸೋಮವಾರ ಅನಿರೀಕ್ಷಿತ ಹಠಾತ್ ದಾಳಿ ಕೈಗೊಂಡು 4 ಮಕ್ಕಳ ರಕ್ಷಣೆಯನ್ನು ಮಾಡಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು ಪಡಿಸಲಾಗಿದೆ.ಅಲ್ಲದೆ ಬಾಲಕಾರ್ಮಿಕ ಪದ್ಧತಿಯ ಕುರಿತು ನಗರದಲ್ಲಿ ಪ್ರತಿಯೊಂದು ಸಂಸ್ಥೆಗಳಿಗೆ ಭೇಟಿ ನೀಡಿ ಅರಿವು ಮೂಡಿಸಲಾಯಿತು.ಕರಪತ್ರ ಹಾಗೂ ಸ್ಟೀಕರ್ ಮೂಲಕ ಸಾರ್ವಜನಿಕರಲ್ಲಿ ಹಾಗೂ ಅಂಗಡಿ, ವಿವಿಧ ಸಂಸ್ಥೆಗಳ ಮಾಲೀಕರಲ್ಲಿ ಜನಜಾಗೃತಿಯನ್ನು ಮೂಡಿಸಲಾಯಿತು.ದಾಳಿಯಲ್ಲಿ ಕಲಂ 17 ರಡಿ ನೇಮಕಗೊಂಡ ವಿವಿಧ ಇಲಾಖೆಯ ಅಧಿಕಾರಿಗಳಾದ S G ಖೈನೂರ, ಜಗದೇವಿ ಸಜ್ಜನ, ನೀಲಮ್ಮ ಖೇಡಗಿ, S S ಅಳ್ಳಗಿ, L S ಬಿರಾದಾರ, C M ಕೋರೆ, V K ಹೊಸಮನಿ, B P ಜಕ್ಕನಗೌಡರ, ಗಿರೀಶ, ಮಹೇಶ ಚವ್ಹಾಣ, ಸರಸ್ವತಿ ಔಟಿ ಹಾಗೂ ಸಚಿನ ಕಟ್ಟಿ ಈ ದಾಳಿಯಲ್ಲಿ ಹಾಜರಿದ್ದರು.

Read More