Subscribe to Updates
Get the latest creative news from FooBar about art, design and business.
Author: editor.udayarashmi@gmail.com
ದೇಶದ ನಾನಾ ಭಾಗಗಳಿಂದ ಸಹಸ್ರಾರು ಶಿಕ್ಷಕರು ಪ್ರತಿಭಟನೆಯಲ್ಲಿ ಭಾಗಿ | ಟಿಇಟಿ ರದ್ದತಿಗೆ ಮೊಳಗಿದ ಒಕ್ಕೊರಲಿನ ಪ್ರತಿಧ್ವನಿ ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಸೋಮವಾರ (ನ,೨೪) ನವದೆಹಲಿಯ ಜಂತರ್ ಮಂತರ್ನಲ್ಲಿ ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಫೆಡರೇಶನ್ ಆಶ್ರಯದಲ್ಲಿ ಅಸಂಖ್ಯಾತ ಶಿಕ್ಷಕರು ಬೃಹತ್ ಪ್ರತಿಭಟನೆ ನಡೆಸಿದರು. ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಫೆಡರೇಷನ್ ವತಿಯಿಂದ ಹಮ್ಮಿಕೊಂಡಿದ್ದ ಈ ಪ್ರತಿಭಟನೆಯಲ್ಲಿ ಕರ್ನಾಟಕ ಸೇರಿದಂತೆ ದೇಶದ ನಾನಾ ಪ್ರದೇಶಗಳಿಂದ ಸಹಸ್ರಾರು ಶಿಕ್ಷಕರು ಪಾಲ್ಗೊಂಡಿದ್ದರು. ಸುಪ್ರೀಂ ಕೋರ್ಟ್ ಆದೇಶದಂತೆ ಕರ್ನಾಟಕದ ೨ ಲಕ್ಷ, ದೇಶದ ೩೦ ಲಕ್ಷ ಶಿಕ್ಷಕರು ಶಿಕ್ಷಕ ವೃತ್ತಿಯಲ್ಲಿ ಮುಂದುವರೆಯಬೇಕಾದರೇ ೨ ವರ್ಷದಲ್ಲಿ ಕಡ್ಡಾಯವಾಗಿ ಟಿಇಟಿ ಪಾಸಾಗಬೇಕಿದೆ. ಶಿಕ್ಷಕ ಸಮೂಹಕ್ಕೆ ಮಾರಕವಾಗಿರುವ ಈ ಟಿಇಟಿ ಕಡ್ಡಾಯ ನೀತಿಯನ್ನು ಕೂಡಲೇ ಕೈಬಿಡಬೇಕೆಂದು ಪ್ರತಿಭಟನಾಕಾರರು ಒಕ್ಕೊರಲಿನಿಂದ ಒತ್ತಾಯಿಸಿದರು.ದೇಶದ ೩೦ ಲಕ್ಷ ಪ್ರಾಥಮಿಕ ಶಾಲಾ ಶಿಕ್ಷಕರ ಸೇವೆಯ ಅಭದ್ರತೆಯ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆದರು. ಈ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ವಿಭಾಗೀಯ ಸಹ ನಿರ್ದೇಶಕಿ ಪುಷ್ಪಾ ಎಚ್.ಆರ್ ಸೋಮವಾರ ದಿಢೀರ್ ಭೇಟಿ ನೀಡಿ, ಆಸ್ಪತ್ರೆಯ ಮೂಲ ಸೌಕರ್ಯ ಹಾಗೂ ಕುಂದು ಕೊರತೆಗಳ ಬಗ್ಗೆ ಪರಿಶೀಲಿಸಿದರು.ದಿಢೀರ್ ಬೇಟಿ ನೀಡಿದ ತತ್ಕ್ಷಣ ಮೊದಲು ವಾರ್ಡ್ಗಳಿಗೆ ತೆರಳಿ ರೋಗಿಗಳ ಆರೋಗ್ಯ ವಿಚಾರಿಸಿದರು. ನಂತರ ಆಸ್ಪತ್ರೆಯ ಕುರಿತಾಗಿ ಸಾರ್ವಜನಿಕರಿಂದ ಅಭಿಪ್ರಾಯವನ್ನು ಸಂಗ್ರಹಿಸಿದರು.ಬಳಿಕ ಸಿಬ್ಬಂದಿಯ ಹಾಜರಾತಿ ಪುಸ್ತಕ ಸೇರಿದಂತೆ ಇನ್ನೀತರ ವಿಷಯಗಳನ್ನು ಚರ್ಚಿಸಿ ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಿರಬೇಕು ಎಂದು ಸೂಚಿಸಿದರು. ಆಸ್ಪತ್ರೆಯ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದರ ಜೊತೆಗೆ ಸೌಜನ್ಯವಾಗಿ ವರ್ತಿಸಬೇಕು ಎಂದು ತಿಳಿಸಿದರು.ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ನಾಲ್ಕು ತಿಂಗಳ ಹಿಂದೆ ಆಸ್ಪತ್ರೆಗೆ ಭೇಟಿ ನೀಡಿದ್ದು, ಆ ಸಮಯದಲ್ಲಿ ಆಸ್ಪತ್ರೆ ದುರಸ್ತಿ ಕಾರ್ಯ ನಡೆದಿತ್ತು. ಅಂದಿಗೂ ಇಂದಿಗೂ ಸ್ವಲ್ಪ ಪ್ರಮಾಣದಲ್ಲಿ ಆಸ್ಪತ್ರೆ ಸುಧಾರಣೆಯಾಗಿದೆ. ಸಿಂದಗಿ ಆಸ್ಪತ್ರೆಯ ವೈದ್ಯರ ವರ್ಗಾವಣೆ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಅವರು, ಈ ಕುರಿತಾಗಿ ನನಗೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದ್ರಾಕ್ಷಿ ಬೆಳೆ ವಿಮಾ ಮೊತ್ತ ಸಂದಾಯದಲ್ಲಿ ವಿಳಂಬವಾಗಿರುವ ಕುರಿತು ಸೋಮವಾರ ಜಿಲ್ಲಾಧಿಕಾರಿಗಳನ್ನು ಖುದ್ದಾಗಿ ದ್ರಾಕ್ಷಿ ಬೆಳೆಗಾರ ಸಂಘದ ವತಿಯಿಂದ ಭೇಟಿ ಮಾಡಿ ದ್ರಾಕ್ಷಿ ಬೆಳೆ ವಿಮೆ ಕುರಿತು ಚರ್ಚಿಸಲಾಯಿತು.ಜಿಲ್ಲಾಧಿಕಾರಿ ಆನಂದ ಕೆ. ಅವರು ಸ್ಪಂದಿಸಿದ್ದು ನವಂಬರ್ 25 ರಂದು ಬೆಳೆವಿಮೆ ಸಮೀಕ್ಷೆಯ ಎಲ್ಲ ವರದಿಯನ್ನು ವಿಮಾ ಕಂಪನಿಗೆ ಕಳುಹಿಸಲಾಗುತ್ತಿದ್ದು, ಆದಷ್ಟು ಬೇಗನೆ ಡಿಸೆಂಬರ್ 5 ರ ಒಳಗಾಗಿ ರೈತರ ಖಾತೆಗಳಿಗೆ ಬೆಳೆ ವಿಮೆ ಮೊತ್ತವನ್ನು ಸಂದಾಯ ಮಾಡುವುದಾಗಿ ಮಾನ್ಯ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಕಾರಣ ರೈತರು ಯಾವುದೇ ರೀತಿಯಲ್ಲಿ ಗೊಂದಲಕ್ಕೆ ಒಳಗಾಗಬಾರದು ಎಂದಿದ್ದಾರೆ.ಈ ಸಂದರ್ಭದಲ್ಲಿ ಕರ್ನಾಟಕ ದ್ರಾಕ್ಷಿ ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಅಭಯಕುಮಾರ ನಾಂದ್ರೇಕರ, ಪ್ರಾದೇಶಿಕ ಕಚೇರಿ ವಿಜಯಪುರದ ಅಧ್ಯಕ್ಷ ಎಂ. ಎಸ್. ಲೋಣಿ, ಪ್ರಧಾನ ಕಾರ್ಯದರ್ಶಿ ಸಿದಗೊಂಡ ರುದ್ರಗೌಡರ, ಉಪಾಧ್ಯಕ್ಷ ಭರತೇಶ ಜಮಖಂಡಿ, ನಿರ್ದೇಶಕ ಗುರು ಮಾಳಿ, ಬಿ. ಸಿ. ಮಸಳಿ, ರವಿಗೌಡ ಬಿರಾದಾರ, ಮಲಕನಗೌಡ ರುದ್ರಗೌಡರ, ವಿಶ್ವನಾಥ ಅವಟಿ, ಹಾಗೂ ಇನ್ನಿತರರು ಸದರಿ ಸಭೆಯಲ್ಲಿ ಉಪಸ್ಥಿತರಿದ್ದರೆಂದು…
ಉದಯರಶ್ಮಿ ದಿನಪತ್ರಿಕೆ ಇಂಡಿ: ನಗರದಲ್ಲಿ ಬಡ ಮಕ್ಕಳಿಗಾಗಿ ನಿರ್ಮಾಣವಾಗುತ್ತಿರುವ ಉಚಿತ ಅನ್ನಪ್ರಸಾದ ಹಾಗೂ ವಸತಿ ನಿಲಯದ ಮಹಾದ್ವಾರದ ಪ್ರಥಮ ಹೊಸ್ತಿಲ ಪೂಜಾ ಕಾರ್ಯಕ್ರಮ ನಿಮಿತ್ಯ ಐದು ದಿನಗಳ ಕಾಲ ಹೆಸರಾಂತ ಪ್ರವಚನಕಾರರಿಂದ ಪ್ರವಚನ ಕಾರ್ಯಕ್ರಮ ಹಾಗೂ ೫೦೦೦ ಮುತ್ತೈದೆಯರಿಗೆ ಉಡಿ ತುಂಬುವ ಬೃಹತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಿರಶ್ಯಾಡ ಸಂಸ್ಥಾನ ಹಿರೇಮಠದ ಅಭಿನವ ಮುರುಘೇಂದ್ರ ಶಿವಾಚಾರ್ಯರು ತಿಳಿಸಿದರು.ಅವರು ಸೋಮವಾರ ಇಂಡಿ ಪಟ್ಟಣದ ಶ್ರೀಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಡಿಸೆಂಬರ್ ೫ ರಿಂದ ಹತ್ತರವರೆಗೆ ಸಾಯಂಕಾಲ ೬ ರಿಂದ ಪ್ರವಚನ ಕಾರ್ಯಕ್ರಮವಿದ್ದು, ಡಿಸೆಂಬರ್ ೫ರಂದು ಕಾತ್ರಾಳ-ಬಾಲಗಾಂವದ ಅಮೃತಾನಂದ ಮಹಾಸ್ವಾಮಿಗಳಿಂದ, ಡಿಸೆಂಬರ್ ೬ ರಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಸಿದ್ದಲಿಂಗ ದೇವರು ಅವರಿಂದ, ಡಿಸೆಂಬರ್ ೭ರಂದು ಕಡಕೋಳದ ಮಡಿವಾಳೇಶ್ವರ ಮಠದ ರುದ್ರಮನಿ ಶಿವಾಚಾರ್ಯರಿಂದ, ಡಿಸೆಂಬರ್ ೮ರಂದು ಚೌಡಾಪುರ ಚಿನ್ಮಯಗಿರಿ ಮಹಾಂತೇಶ್ವರ ಮಠದ ವೀರಮಹಾಂತ ಶಿವಾಚಾರ್ಯರಿಂದ, ಡಿಸೆಂಬರ್ ೯ ರಂದು ಸಿಂದಗಿ ಸಾರಂಗಮಠದ ಡಾ. ಪ್ರಭು ಸಾರಂಗ ಶಿವಾಚಾರ್ಯರಿಂದ ಪ್ರವಚನ ಹಮ್ಮಿಕೊಳ್ಳಲಾಗಿದೆ.ಡಿಸೆಂಬರ್ ೧೦ ರಂದು ಸಾಲಿಗ್ರಾಮದ…
ಉದಯರಶ್ಮಿ ದಿನಪತ್ರಿಕೆ ದೇವರ ಹಿಪ್ಪರಗಿ: ನರೇಗಾ ಯೋಜನೆಯು ೨೦೨೬–೨೭ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆ ಸಂಯೋಜನೆಗಾಗಿ ಪ್ರತಿ ಗ್ರಾಮ ಪಂಚಾಯಿತಿಯು ಗ್ರಾಮಸಭೆ ಮತ್ತು ವಾರ್ಡ್ ಸಭೆಗಳನ್ನು ನವೆಂಬರ್ ೩೦ರ ಒಳಗಾಗಿ ನಡೆಸುವುದು ಕಡ್ಡಾಯವಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭಾರತಿ ಚಲುವಯ್ಯ ತಿಳಿಸಿದರು.ಪಟ್ಟಣದಲ್ಲಿ ಸೋಮವಾರ ಮಾಹಿತಿ ನೀಡಿದ ಇಓ, ಗ್ರಾಮ ಪಂಚಾಯಿತಿಯು ಕ್ರಿಯಾ ಯೋಜನೆಯ ಹಣವನ್ನು ಸರಿಯಾಗಿ ಬಳಕೆಯಾಗುವಂತೆ ಆದ್ಯತೆ ನೀಡಬೇಕು. ಶುದ್ಧ ಕುಡಿಯುವ ನೀರು ಯೋಜನೆ, ಚೆಕ್ ಡ್ಯಾಂಗಳು, ನಾಳೆ ಕಾಮಗಾರಿಗಳು, ಗ್ರೀನ್ ವಾಲ್ ಯೋಜನೆ, ಬಂಡೆಗಳು, ನೀರು ಸಂಗ್ರಹಣೆ ಸೇರಿದಂತೆ ಪರಿಸರ ಸಂರಕ್ಷಣೆಯ ಯೋಜನೆಗಳಿಗೆ ಆದ್ಯತೆ ನೀಡಬೇಕು ಎಂದರು.ಗ್ರಾಮ ಪಂಚಾಯಿತಿಯ ವಿವಿಧ ನೀರು ಮೂಲಗಳ ಅಭಾವ ಇರುವ ಪ್ರದೇಶಗಳಲ್ಲಿ ಶಾಶ್ವತ ನೀರು ಮೂಲಗಳ ರಚನೆ, ಗ್ರೀನ್ ವಾಲ್ ರೂಪಿಸುವುದು, ಬಂಡೆಗಳು ನಿರ್ಮಾಣ ಮಾಡುವುದು ಹಾಗೂ ಹನಿಗವನಗಳ ರಕ್ಷಣೆ ಮಾಡುವುದು ಮುಖ್ಯ ಗುರಿಯಾಗಿರಬೇಕು. ೪೨ ದಿನಗಳೊಳಗೆ ೨೦೨೬–೨೭ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆ ಸಿದ್ಧಪಡಿಸಬೇಕು. ಗ್ರಾಮ ಸಭೆಯಲ್ಲಿ ಸಾರ್ವಜನಿಕರಿಂದ ಸಮಸ್ಯೆ,…
ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಗ್ರಾಮದಲ್ಲಿ ಕೊಪ್ಪಳದ ಗವಿಸಿದ್ದೇಶ್ವರ ಮಹಾಸ್ವಾಮಿಗಳಿಂದ ಸದ್ಭಾವನಾ ಪಾದಯಾತ್ರೆ ಹಾಗೂ ಒಂದು ದಿನದ ಪ್ರವಚನ ಕಾರ್ಯಕ್ರಮ ನ. ೨೬ಬುಧವಾರದಂದು ಜರುಗಲಿದೆ ಎಂದು ಸ್ಥಳಿಯ ವಿರಕ್ತಮಠದ ಶ್ರೀ ಪ್ರಭು ಮಹಾಸ್ವಾಮಿಗಳು ತಿಳಿಸಿದ್ದಾರೆ.ಸದ್ಭಾವನಾ ಪಾದಯಾತ್ರೆಯು ಬೆಳಿಗ್ಗೆ ೬ ಘಂಟೆಗೆ ಗ್ರಾಮದ ದುರ್ಗಾದೇವಿ ದೇವಸ್ಥಾನದಿಂದ ನೇತಾಜಿ ವೃತ್ತದ ಮಾರ್ಗವಾಗಿ ಭಜಂತ್ರಿ ಓಣಿ, ಕರಿಸಿದ್ದೇಶ್ವರ ದೇವಸ್ಥಾನ, ಯಲ್ಲಮ್ಮನ ಗುಡಿ, ಅಲ್ಲಿಂದ ಕನಕದಾಸ ವೃತ್ತದಿಂದ ಚನ್ನಮ್ಮ ವೃತ್ತ, ವಿರಕ್ತಮಠ, ದಾಸಿಮಯ್ಯ ವೃತ್ತದ ಮಾರ್ಗದಿಂದ ಬಸ್ ನಿಲ್ದಾನದ ವರೆಗೆ ಮಾದಯಾತ್ರೆ ಜರುಗಲಿದೆ ಅಲ್ಲಿಂದ ಸ್ಥಳಿಯ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ಬೆಳಿಗ್ಗೆ ೭ ಘಂ.ಗೆ ಗವಿಸಿದ್ದೇಶ್ವರ ಶ್ರೀಗಳಿಂದ ಪ್ರವಚನ ಕಾರ್ಯಕ್ರಮ ನಡೆಯಲಿದೆ, ಗ್ರಾಮಸ್ಥರು ಅಂದು ಬೆಳಿಗ್ಗೆ ಬೇಗನೆ ಕಸಗುಡಿಸಿ ಮನೆ ಹಾಗೂ ಬೀದಿಗಳಲ್ಲಿ ರಂಗೋಲಿಯನ್ನಿಟ್ಟು ಗ್ರಾಮವನ್ನು ವಿಶೇಷವಾಗಿ ಸಿಂಗರಿಸಿ ಶ್ರೀಗಳನ್ನು ಸ್ವಾಗತಿಸಬೇಕು ಹಾಗೂ ಪ್ರವಚನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರವಚನ ಕೇಳಿ ಪುನೀತರಾಗಬೇಕೆಂದು ಶ್ರೀ ಪ್ರಭುಲಿಂಗೇಶ್ವರ ದೇವಸ್ಥಾನ ಸೇವಾ ಸಮೀತಿಯ ಪ್ರಮುಖರು ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಪೊಲೀಸ್ ವತಿಯಿಂದ ನವೆಂಬರ್ ೨೮ರಿಂದ ೩೦ರವರೆಗೆ ನಗರದ ಸೋಲಾಪುರ ರಸ್ತೆಯ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ.ನ.೨೮ರಂದು ಬೆಳಿಗ್ಗೆ ೮ ಗಂಟೆಗೆ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಜರುಗಲಿದ್ದು, ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ಅವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಭಾಗವಹಿಸಲಿದ್ದಾರೆ.ನ.೩೦ರಂದು ಸಂಜೆ ೪ ಗಂಟೆಗೆ ನಡೆಯುವ ಮುಕ್ತಾಯ ಸಮಾರಂಭದಲ್ಲಿ ಬೆಳಗಾವಿ ಉತ್ತರ ವಲಯದ ಆರಕ್ಷಕ ಮಹಾನಿರೀಕ್ಷಕರಾದ ಚೇತನಸಿಂಗ್ ರಾಥೋರ ಅವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಇವರ ವತಿಯಿಂದ ಕಮಲಾದೇವಿ ಪಾಟೀಲ ಮೆಮೋರಿಯಲ್ ಎಜ್ಯುಕೇಶನಲ್ ಅಸೋಸಿಯೇಶನ್ ಹಾಗೂ ಚಾಣಕ್ಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಇವರ ಸಹಯೋಗದಲ್ಲಿ ವಿಜಯಪುರ ಜಿಲ್ಲೆ- ನಾಡು ನುಡಿ ಚಿಂತನ ಕುರಿತು ಒಂದು ದಿನದ ರಾಜ್ಯಮಟ್ಟದ ವಿಚಾರ ಕಮ್ಮಟ ನವೆಂಬರ್ ೨೭ರ ಬೆಳಿಗ್ಗೆ ೧೦ಗಂಟೆಗೆ ಸಾಯಿ ಪಾರ್ಕ್ ಕಾಲೇಜು ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ವಿಜಯಪುರದ ಚಾಣಕ್ಯ ಕರಿಯರ್ ಅಕ್ಯಾಡೆಮಿಯ ಸಂಸ್ಥಾಪಕರಾದ ಎನ್.ಎಂ.ಬಿರಾದಾರ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ನೇಗಿಲಯೋಗಿ ಟ್ರಸ್ಟಿನ ಅಧ್ಯಕ್ಷರಾದ ಡಾ.ಎಚ್.ಆರ್.ಸ್ವಾಮಿ ಭಾಗವಹಿಸಲಿದ್ದು,ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಸಂತೋಷ ಹಾನಗಲ್ಲ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಾಮ ನಿರ್ದೇಶಿತ ಸದಸ್ಯೆ ದಾಕ್ಷಾಯಿಣಿ ಹುಡೇದ ಉಪಸ್ಥಿತರಿರಲಿದ್ದಾರೆ. ಆದಿಲ್ ಶಾಹಿ ಸಾಹಿತ್ಯ – ಕನ್ನಡ ಅನುವಾದಗಳು ವಿಷಯವಾಗಿ ಕಲಬುರಗಿ ಸಾರಿಗೆ ಇಲಾಖೆಯ ವಿಶ್ರಾಂತ ಅಧೀಕ್ಷಕರಾದ ರಿಯಾಜ್ ಅಹ್ಮದ ಬೋಡೆ ಅವರು ವಿಶೇಷ ಉಪನ್ಯಾಸ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವ ವಿದ್ಯಾಲಯದ ಟರ್ಮ್ ಎಂಡ್ ಪರೀಕ್ಷೆಗಳನ್ನು ಡಿಸೆಂಬರ್ ೧ ರಿಂದ ಜನವರಿ ೧೪ ೨೦೨೬ರ ವರೆಗೆ ನಡೆಯಲಿದ್ದು, ವಿಜಯಪುರ ಪ್ರಾದೇಶಿಕ ಕೇಂದ್ರದ ವ್ಯಾಪ್ತಿಯ ಐದು ಇಗ್ನೋ ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆಗಳು ನಡೆಯಲಿವೆ. ನೋಂದಾಯಿಸಿಕೊAಡಿರುವವರು https://ignou.samarth.edu.inವೆಬ್ಸೈಟ್ ಮೂಲಕ ಪರೀಕ್ಷಾ ಪ್ರವೇಶ ಪತ್ರಗಳನ್ನು ಪಡೆದುಕೊಳ್ಳಬಹುದು.ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ೦೮೩೫೨-೨೫೨೦೦೬ ಅಥವಾ ಡಿಛಿbiರಿಚಿಠಿuಡಿ@igಟಿou.ಚಿಛಿ.iಟಿ ಸಂಪರ್ಕಿಸಬಹುದಾಗಿದೆ ಎಂದು ಇಗ್ನೋದ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ನಡೆಯುವ ಪ್ರತಿಯೊಂದು ಜನನ-ಮರಣ ಘಟನೆಗಳನ್ನು ನಿಗದಿತ ಕಾಲಾವಧಿಯೊಳಗಾಗಿ ನೋಂದಣಿಗೆ ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಸೂಚನೆ ನೀಡಿದರು.ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜನನ-ಮರಣ ನೋಂದಣಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ನಿಗದಿತ ೨೧ ದಿನಗಳೊಳಗಾಗಿ ಜನನ-ಮರಣ ನೋಂದಣಿಗೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು. ತಾಲೂಕಾ ಮಟ್ಟದಲ್ಲಿ ತರಬೇತಿಯನ್ನು ಆಯೋಜಿಸಿ,ನೋಂದಣಿ ಸಂದರ್ಭದಲ್ಲಿ ಉಂಟಾಗುವ ತೊಡಕುಗಳ ನಿವಾರಿಸಿಕೊಂಡು ನಿರ್ವಹಿಸುವ ಕುರಿತು ಸೂಕ್ತ ತಿಳುವಳಿಕೆ ಮೂಡಿಸಿ, ನಿಗದಿತ ಕಾಲಾವಧಿಯಲ್ಲಿ ಜನನ-ಮರಣ ನೋಂದಣಿಯಾಗುವಂತೆ ನೋಡಿಕೊಳ್ಳಬೇಕು. ಗ್ರಾಮೀಣ ಮಟ್ಟದ ಜನನ ಮರಣ ಘಟನೆಗಳನ್ನು ಎಲ್ಲಾ ಗ್ರಾಮ ಪಂಚಾಯತಿಯಲ್ಲೂ ನೋಂದಣಿಯಾಗುವಂತೆ ನೋಡಿಕೊಳ್ಳಬೇಕು.ಗ್ರಾಮೀಣ ಪ್ರದೇಶದಲ್ಲಿ ಖಾಸಗಿ ಆಸ್ಪತ್ರೆಯಲ್ಲಾದರೆ ಗ್ರಾಮ ಪಂಚಾಯತಿಯವರು ಪ್ರಮಾಣ ಪತ್ರ ನೀಡಬೇಕು. ದಾಖಲಿಸುವ ಅಧಿಕಾರಿ, ಸಿಬ್ಬಂದಿಗೆ ತರಬೇತಿ ಒದಗಿಸುವತ್ತ ಕ್ರಮವಹಿಸುವಂತೆ ಸೂಚಿಸಿದರು.ಮಾಹಿತಿದಾರರ ಕಾಲಂನಲ್ಲಿ ಜನನ ಹಾಗೂ ಮರಣ…
